Subscribe to Updates
Get the latest creative news from FooBar about art, design and business.
Author: kannadanewsnow09
ಆಂಜನೇಯ ಶಾಶ್ವತ ಜೀವಿಯಾಗಬಲ್ಲವನು ಎಂದು ನಮಗೆಲ್ಲರಿಗೂ ತಿಳಿದಿದೆ. ಇಂದಿಗೂ ಈ ಜಗತ್ತಿನಲ್ಲಿ, ಆಂಜನೇಯನು ನಮಗೆ ಸಹಾಯ ಮಾಡಲು ಮತ್ತು ನಾವು ಬಯಸಿದಾಗಲೆಲ್ಲಾ ನಮ್ಮನ್ನು ರಕ್ಷಿಸಬಲ್ಲ ಅದ್ಭುತ ದೇವತೆ. ನಾವು ವಿವಿಧ ವಿನಂತಿಗಳಿಗಾಗಿ ಆಂಜನೇಯನನ್ನು ಹಲವು ವಿಧಗಳಲ್ಲಿ ಪೂಜಿಸುವ ಅಭ್ಯಾಸವನ್ನು ಹೊಂದಿದ್ದೇವೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ನಾವು ಬಯಸಿದ್ದನ್ನು ನನಸಾಗಿಸಲು, ನಾವು ಕೇಳಿದ್ದನ್ನು ನನಸಾಗಿಸಲು ಮತ್ತು ಕಳೆದುಹೋದ ಎಲ್ಲಾ ಸಂಪತ್ತನ್ನು ಮರಳಿ ಪಡೆಯಲು ಆಂಜನೇಯನನ್ನು 48 ದಿನಗಳ ಕಾಲ ಪೂಜಿಸುವ ವಿಧಾನವನ್ನು ನಾವು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ,…
ಬೆಂಗಳೂರು: ಭಾರತದ ಸ್ವದೇಶಿ ಇ-ಕಾಮರ್ಸ್ ಕಂಪನಿಯಾಗಿರುವ ಫ್ಲಿಪ್ ಕಾರ್ಟ್ ತನ್ನ ಗ್ರಾಹಕರಿಗೆ ಗುಣಮಟ್ಟದ ಮತ್ತು ತಾಜಾತನದ ಕೃಷಿ ಉತ್ಪನ್ನಗಳನ್ನು ಒದಗಿಸುತ್ತಿರುವ ರೈತರು ಸೇರಿದಂತೆ ತನ್ನೆಲ್ಲಾ ಪಾಲುದಾರರ ಬೆಳವಣಿಗೆಗೆ ಆದ್ಯತೆ ನೀಡುತ್ತಿರುವ ಕಂಪನಿಯಾಗಿದೆ. ಇತ್ತೀಚೆಗೆ ಫ್ಲಿಪ್ ಕಾರ್ಟ್ ಗ್ರೂಪ್ ನ ಸಿಇಒ ಕಲ್ಯಾಣ್ ಕೃಷ್ಣಮೂರ್ತಿ ಮತ್ತು ಫ್ಲಿಪ್ ಕಾರ್ಟ್ ಮಿನಿಟ್ಸ್ ನ ಉಪಾಧ್ಯಕ್ಷ ಕಬೀರ್ ಬಿಸ್ವಾಸ್ ಅವರು ಕರ್ನಾಟಕದ ಮಾಲೂರಿನ ರೈತರನ್ನು ನೇರವಾಗಿ ಭೇಟಿ ಮಾಡಿ ಅವರೊಂದಿಗೆ ಸಂವಾದ ನಡೆಸಿದರು. ಈ ರೈತರು ಪ್ರತಿದಿನ ಬೆಳಗ್ಗೆ ಫ್ಲಿಪ್ ಕಾರ್ಟ್ ಮಿನಿಟ್ಸ್ ಫುಲ್ ಫಿಲ್ಮೆಂಟ್ ಸ್ಟೋರ್ ಗಳಿಗೆ ತಾಜಾತನದ ಹಣ್ಣು ತರಕಾರಿಗಳನ್ನು ಪೂರೈಸುವಲ್ಲಿ ನಿರತರಾಗಿದ್ದು, ಈ ಪ್ರಕ್ರಿಯೆ ಬಗ್ಗೆ ಈ ಅಧಿಕಾರಿಗಳು ಮಾಹಿತಿ ಪಡೆದುಕೊಂಡರು. ಕೃಷಿಯಲ್ಲಿ 17 ವರ್ಷ ಅನುಭವ ಹೊಂದಿರುವ ಕೃಷ್ಣಪ್ಪ ಕ್ಯಾಪ್ಸಿಕಂ, ಸೌತೆಕಾಯಿ ಮತ್ತು ಮೆಣಸಿನಕಾಯಿಯನ್ನು ತಮ್ಮ 4 ಎಕರೆ ಪ್ರದೇಶದಲ್ಲಿ ಬೆಳೆಯುತ್ತಿದ್ದಾರೆ. ಅದೇ ರೀತಿ ಕೃಷಿಕ ಮಹಿಳೆ ಪದ್ಮ ಅವರು ಕೊತ್ತಂಬರಿ, ಮೆಂತ್ಯ ಮತ್ತು ಪಾಲಕ್ ಸೊಪ್ಪನ್ನು ತಮ್ಮ 3…
ಬೆಂಗಳೂರು: ಜಿಲ್ಲಾ ಆರೋಗ್ಯ ಮಂಡಳಿ ನೀಡುವ ಪ್ರಮಾಣ ಪತ್ರ ಪರಿಶೀಲಿಸಲು ರಾಜ್ಯ ಆರೋಗ್ಯ ಮಂಡಳಿಯನ್ನು ರಚಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಜಿಲ್ಲಾ ಆರೋಗ್ಯ ಮಂಡಳಿಯಿಂದ ಬೇಕಾಬಿಟ್ಟಿ ಪ್ರಮಾಣಪತ್ರ ನೀಡುವುದಕ್ಕೆ ಬ್ರೇಕ್ ಹಾಕಲಾಗಿದೆ. ಇಂದು ಈ ಸಂಬಂಧ ಆದೇಶ ಹೊರಡಿಸಿರುವಂತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರು, ಸರ್ಕಾರದ ಅಧಿಸೂಚನೆ ಸಂಖ್ಯೆ:ಆಕುಕ 220 ಹೆಚ್ಎಸ್ಎಹೆಚ್2025, ದಿನಾಂಕ:27/05/2025, ಮೇಲ್ಕಾಣಿಸಿದ ವಿಷಯ ಮತ್ತು ಉಲ್ಲೇಖ(2) ಕ್ಕೆ ಸಂಬಂಧಿಸಿದಂತೆ, 6(3) ಪ್ರಕರಣದಲ್ಲಿ ವರ್ಗಾವಣೆ ಕೋರಿಕೆಗಾಗಿ ಜಿಲ್ಲಾ ಆರೋಗ್ಯ ಮಂಡಳಿಯಿಂದ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸಲು ಹಾಗೂ ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗದವರು ನೇರವಾಗಿ ಜಿಲ್ಲಾ ಆರೋಗ್ಯ ಮಂಡಳಿಗೆ ಕೋರಿಕೆ ನೀಡಿ ಜಿಲ್ಲಾ ಆರೋಗ್ಯ ಮಂಡಳಿ ನೀಡಿದ ವರದಿಯನ್ನು ಲಗತ್ತಿಸಲು ಸೂಚಿಸಿದೆ ಎಂದಿದ್ದಾರೆ. ಮುಂದುವರೆದು, “ಗಂಭೀರ ಕಾಯಿಲೆ ಅಥವಾ ಮಾರಣಾಂತಿಕ ಕಾಯಿಲೆ ಹೊಂದಿರುವ ವೈದ್ಯಾಧಿಕಾರಿ ಅಥವಾ ಸಿಬ್ಬಂದಿಗೆ ಅಥವಾ ಅವರ ಸಂಗಾತಿ ಅಥವಾ ಮಗು ಅಥವಾ ಕರ್ನಾಟಕ ಸಿವಿಲ್ ಸೇವೆ(ವೈದ್ಯಕೀಯ ಹಾಜರಾತಿ ನಿಯಮಗಳು) ಅಡಿಯಲ್ಲಿ…
ನವದೆಹಲಿ: ಜುಲೈ1ರಿಂದ ತತ್ಕಾಲ್ ರೈಲು ಟಿಕೆಟ್ ಬುಕ್ಕಿಂಗ್ ನಲ್ಲಿ ಮಹತ್ವದ ಬದಲಾವಣೆ ಮಾಡಲಾಗುತ್ತಿದೆ. ಹಾಗಾದ್ರೆ ಏನೆಲ್ಲಾ ಹೊಸ ನಿಯಮಗಳು ಜಾರಿ ಎನ್ನುವ ಬಗ್ಗೆ ಮುಂದೆ ಓದಿ. ಜುಲೈ.1, 2025ರಿಂದ ಆಧಾರ್ ದೃಢೀಕೃತ ಬಳಕೆದಾರರು ತತ್ಕಾಲ್ ಯೋಜನೆಯಡಿಯಲ್ಲಿ ತಮ್ಮ ರೈಲು ಟಿಕೆಟ್ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ಜೂನ್ 10, 2025 ರಂದು ಹೊರಡಿಸಲಾದ ಸುತ್ತೋಲೆಯಲ್ಲಿ, ತತ್ಕಾಲ್ ಯೋಜನೆಯ ಪ್ರಯೋಜನಗಳನ್ನು ಸಾಮಾನ್ಯ ಬಳಕೆದಾರರು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರೈಲ್ವೆ ಸಚಿವಾಲಯ ಎಲ್ಲಾ ವಲಯಗಳಿಗೆ ತಿಳಿಸಿದೆ. 01-07-2025 ರಿಂದ ಜಾರಿಗೆ ಬರುವಂತೆ, ತತ್ಕಾಲ್ ಯೋಜನೆಯಡಿಯಲ್ಲಿ ಟಿಕೆಟ್ಗಳನ್ನು ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ವೆಬ್ಸೈಟ್ / ಅದರ ಅಪ್ಲಿಕೇಶನ್ ಮೂಲಕ ಆಧಾರ್ ದೃಢೀಕೃತ ಬಳಕೆದಾರರು ಮಾತ್ರ ಬುಕ್ ಮಾಡಬಹುದು ಎಂದು ಸಚಿವಾಲಯ ತಿಳಿಸಿದೆ. ಜುಲೈ 15 ರಿಂದ OTP ದೃಢೀಕರಣ ಕಡ್ಡಾಯ ತರುವಾಯ, ಜುಲೈ 15, 2025 ರಿಂದ ತತ್ಕಾಲ್ ಬುಕಿಂಗ್ಗಳಿಗೆ ಆಧಾರ್…
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಕೋವಿಡ್ ಸೋಂಕು ಹತೋಟಿಯಲ್ಲಿದ್ದು ಜನರು ಆತಂಕಕ್ಕೆ ಒಳಗಾಗುವ ಸ್ಥಿತಿ ಇಲ್ಲ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಬಂದವರಲ್ಲಿ ಸಾವಿಗೀಡಾಗಿರುವ 11 ಜನರಲ್ಲಿ 10 ಜನರ ಡೆತ್ ಆಡಿಟ್ ರಿಪೋರ್ಟ್ ಬಂದಿದೆ. ಡೆತ್ ಆಡಿಟ್ ರಿಪೋರ್ಟ್ ಪ್ರಕಾರ 10 ಜನರು ಇತರ ಮಾರಕ ಕಾಯಿಲೆಗಳಾದ ಹೃದಯಸಂಬಂಧಿ, ಕಿಡ್ನಿ, ಅಂಗಾಂಗ ವೈಫಲ್ಯದಂತಹ ಕಾರಣಗಳಿಂದ ಸಾವನ್ನಪ್ಪಿದ್ದು, ಕೋವಿಡ್ ಕಾರಣವಲ್ಲ ಎಂಬುದು ಸ್ಪಷ್ಟವಾಗಿದೆ. ಇನ್ನು ಒಬ್ಬರ ಡೆತ್ ಆಡಿಟ್ ರಿಪೋರ್ಟ್ ಬರುವುದು ಬಾಕಿ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ಡೆತ್ ಆಡಿಟ್ ರಿಪೋರ್ಟ್ ಬಳಿಕವೇ ಕೋವಿಡ್ ಡೆತ್ ರಿಪೋರ್ಟ್ ಘೋಷಿಸುವಂತೆ ಇಂದು ನಡೆದ ಸಿಎಂ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೋವಿಡ್ ಡೆತ್ ಎಂದಾಕ್ಷಣ ಅನಗತ್ಯವಾಗಿ ಜನರು ಆತಂಕಕ್ಕೆ ಒಳಗಾಗುವುದು ಸಹಜ..…
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯ ಮೇಜರ್ ಸರ್ಜರಿ ಮಾಡಲಾಗಿದೆ. 10 ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ 2024-25ರ ಸಂಘಟನಾ ಪರ್ವದ ರಾಜ್ಯ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ದೇಶಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದೆ. ಇದರ ಅಂಗವಾಗಿ ರಾಜ್ಯದಲ್ಲಿ 2ನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ ಎಂದಿದ್ದಾರೆ. ರಾಜ್ಯ ಚುನಾವಣಾಧಿಕಾರಿಯಾದ ನಾನು ಈ ಕೆಳಕಂಡ ಜಿಲ್ಲಾಧ್ಯಕ್ಷರನ್ನು ಅಭಿನಂದಿಸುತ್ತಾ, ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಂತೆ ಸೂಚಿಸಿದ್ದಾರೆ. ಹೀಗಿದೆ 10 ಜಿಲ್ಲೆಯ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ಲೀಸ್ಟ್ ಮೈಸೂರು ಗ್ರಾಮಾಂತರ – ಕೆಎನ್ ಸುಬ್ಬಣ್ಣ ಹಾಸನ- ಸಿದ್ದೇಶ್ ನಾಗೇಂದ್ರ ಕೊಡಗು- ರವಿ ಕಾಳಪ್ಪ ಉಡುಪಿ – ಕುತ್ಯಾರು ನವೀನ್ ಶೆಟ್ಟಿ ಹಾವೇರಿ –…
ಬೆಂಗಳೂರು: ರಾಜ್ಯದಲ್ಲಿ ಬುಧವಾರ 28 ಮಂದಿಗೆ ಕೊರೋನಾ ಪಾಸಿಟಿವ್ ಅಂತ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 20 ಮಂದಿ ಗುಣಮುಖರಾಗಿದ್ದಾರೆ. ಆದರೇ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಯಾವುದೇ ವ್ಯಕ್ತಿ ಸಾವನ್ನಪ್ಪಿಲ್ಲ ಎಂಬುದಾಗಿ ಆರೋಗ್ಯ ಇಲಾಖೆಯ ಆಡಿಟ್ ರಿಪೋರ್ಟ್ ನಲ್ಲಿ ತಿಳಿಸಲಾಗಿದೆ. ಬುಧವಾರ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಿರುವಂತ ಆರೋಗ್ಯ ಇಲಾಖೆಯು ಕಳೆದ 24 ಗಂಟೆಯಲ್ಲಿ 619 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 28 ಮಂದಿಗೆ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದ್ದಾಗಿ ಹೇಳಿದೆ. ಬುಧವಾರ 28 ಮಂದಿಗೆ ಕೊರೋನಾ ಸೋಂಕು ದೃಢಪಟ್ಟ ಕಾರಣ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 467ಕ್ಕೆ ಏರಿಕೆಯಾಗಿದೆ. 463 ಮಂದಿ ಹೋಂ ಐಸೋಲೇಷನ್ ನಲ್ಲಿದ್ದರೇ, ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ. ಇನ್ನೂ ಕೊರೋನಾ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ ಎನ್ನಲಾದಂತ 11 ಮಂದಿಯು ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ಈ ಬಗ್ಗೆ ಕೋವಿಡ್-19 ರಾಜ್ಯ ಮಟ್ಟದ ಡೆತ್ ಆಡಿಟ್ ನಡೆಸಿ ಖಚಿತ ವರದಿಯನ್ನು ಪಡೆಯಲಾಗಿದೆ. ಈ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 8 ಡಿವೈಎಸ್ಪಿ, 28 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಆದೇಶ ಮಾಡಿದ್ದು, ಡಿವೈಎಸ್ಪಿ ಕವಿತಾ ಎಂ.ಸಿ ಅವರನ್ನು ಬೆಂಗಳೂರಿನ ಸಂಚಾರ ಉತ್ತರ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಪುನೀತ್ ಕುಮಾರ್.ಆರ್ ಅವರನ್ನು ಸಿಐಡಿಯಿಂದ ಬೆಂಗಳೂರಿನ ಈಶಾನ್ಯ ವಿಭಾಗದ ಸಿಇಎನ್ ಗೆ ವರ್ಗಾವಣೆಗೊಳಿಸಿದ್ದರೇ, ವೆಂಕಟೇಶ್.ಆರ್ ಅವರನ್ನು ಎಸ್ ಟಿ ಎಫ್ ಬೆಂಗಳೂರು ಇಲ್ಲಿಗೆ ಟ್ರಾನ್ಸ್ ಫರ್ ಮಾಡಲಾಗಿದೆ. ಇನ್ನೂ ಪೊಲೀಸ್ ಇನ್ಸ್ ಪೆಕ್ಟರ್ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿರುವಂತ ರಾಮಚಂದ್ರಪ್ಪ.ಎಸ್ ಚೌಧರಿ ಅವರನ್ನು ಬೆಂಗಳೂರಿನ ತಲಘಟ್ಟಪುರ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಮೋದ್ ಕುಮಾರ್.ಪಿ ಅವರನ್ನು ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣೆಗೆ, ಗವಿರಾಜು ಆರ್.ಪಿ ಅವರನ್ನು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಹೀಗಿದೆ 8 ಡಿವೈಎಸ್ಪಿಗಳ ವರ್ಗಾವಣೆ ಪಟ್ಟಿ ಇಲ್ಲಿದೆ 28 ಪಿಐ ವರ್ಗಾವಣೆಯ ಪಟ್ಟಿ…
ಚಿಕ್ಕಬಳ್ಳಾಪುರ: ರಾಜ್ಯದ ಜನರಿಗೆ ಗುಡ್ ನ್ಯೂಸ್ ಎನ್ನುವಂತೆ ಪಿಎಂ ಕುಸುಮ್-ಸಿ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಹಗಲಿನಲ್ಲೂ ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ಕೃಷಿ ಫೀಡರ್ ಗಳ ಸೌರೀಕರಣದ ಮೂಲಕ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್- ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು. ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿ ಮತ್ತು ಚರಕಮಟ್ಟೇನಹಳ್ಳಿ ಗ್ರಾಮದ ಸುಮಾರು 60 ಎಕರೆ ಪ್ರದೇಶದಲ್ಲಿ 20 ಮೆ.ವ್ಯಾ. ಸಾಮರ್ಥ್ಯದಲ್ಲಿ ಸೋಲಾರ್ ಘಟಕ ಸ್ಥಾಪಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕುಸುಮ್- ಸಿ ಯೋಜನೆಯಡಿ ಸ್ಥಾಪಿಸಲಾಗಿರುವ ಅತಿ ದೊಡ್ಡ ಘಟಕವಿದು. ಹೀಗಾಗಿ ಗೌರಿಬಿದನೂರಿನಲ್ಲಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಇಂಧನ ಸಚಿವ ಕೆಜೆ ಜಾರ್ಜ್ ಉದ್ಘಾಟಿಸಿದರು. ಈ ಮೂಲಕ ರಾಜ್ಯ ಮಟ್ಟದ ಬೃಹತ್ ಯೋಜನೆಯೊಂದ್ನು ಉದ್ಘಾಟನೆಯಾದಂತೆ ಆಗಿದೆ. ಏನಿದು ಕುಸುಮ್-ಸಿ ಯೋಜನೆ? “ಕುಸುಮ್ – ಸಿ ಯೋಜನೆ ನಾಲ್ಕೈದು…
ಬೆಂಗಳೂರು: ನಾನು ಇಡಿ ದಾಳಿ ರಾಜಕೀಯ ಪ್ರೇರಿತ ಅಂತ ಹೇಳಲ್ಲ. ಅವರು ಕೇಳಿದ ಮಾಹಿತಿಯನ್ನು ನೀಡಿದ್ದೇನೆ ಎಂಬುದಾಗಿ ಬಳ್ಳಾರಿ ಜಿಲ್ಲೆಯ ಸಂಡೂರಿನ ಸಂಸದ ತುಕಾರಾಂ ತಿಳಿಸಿದ್ದಾರೆ. ಇಡಿ ದಾಳಿಯ ನಂತ್ರ ಮೊದಲ ಬಾರಿಗೆ ಪ್ರತಿಕ್ರಿಯಿಸಿದಂತ ಅವರು, ಇಡಿಯವರಿಗೆ ಏನು ಮಾಹಿತಿ ಬೇಕು ಅದನ್ನು ಕೊಟ್ಟಿದ್ದೇನೆ. ಇಡಿಯವರ ಜೊತೆಗೆ ಗೌರವಯುತವಾಗಿ ನಡೆದುಕೊಂಡಿದ್ದೇನೆ. ಇಡಿಯವರು ಮುಂದೆ ಏನು ಕೇಳಿದ್ರೂ ಮಾಹಿತಿ ಕೊಡುತ್ತೇನೆ ಎಂದರು. ಇಡಿಯವರು ಕೆಲ ಮಾಹಿತಿ ಕೇಳಿದ್ರು, ಅದಕ್ಕೂ ನನಗೂ ಸಂಬಂಧವಿಲ್ಲ. ವಾಲ್ಮೀಕಿ ನಿಗಮದ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ ಎಂಬುದಾಗಿ ತಿಳಿಸಿದರು. https://kannadanewsnow.com/kannada/no-patient-has-died-from-corona-in-the-state-health-department-audit-report/ https://kannadanewsnow.com/kannada/rt-pcr-test-made-mandatory-for-ministers-before-meeting-pm-modi-amid-covid-19-surge-report/