Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಟಾಟಾ ಗ್ರೂಪ್ನ ಲೋಕೋಪಕಾರಿ ಅಂಗವಾದ ಟಾಟಾ ಟ್ರಸ್ಟ್ಸ್ನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಅವರನ್ನು ಅಕ್ಟೋಬರ್ 11 ರಂದು ನೇಮಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸಿಎನ್ಬಿಸಿ ಟಿವಿ 18 ಚಾನೆಲ್ ವರದಿ ಮಾಡಿದೆ. ಅಕ್ಟೋಬರ್ 11 ರಂದು ಮುಂಬೈನಲ್ಲಿ ನಡೆದ ಸಭೆಯಲ್ಲಿ ಇದು ಸರ್ವಾನುಮತದ ನಿರ್ಧಾರ ಎಂದು ಚಾನೆಲ್ ವರದಿ ಮಾಡಿದೆ. ರತನ್ ಟಾಟಾ ಎಂದಿಗೂ ಮದುವೆಯಾಗಲಿಲ್ಲ, ಮಕ್ಕಳಿರಲಿಲ್ಲ ಮತ್ತು ಟಾಟಾ ಟ್ರಸ್ಟ್ಗಳಲ್ಲಿ ಉತ್ತರಾಧಿಕಾರಿಯನ್ನು ಹೆಸರಿಸಲಿಲ್ಲ. 150 ವರ್ಷಗಳಿಗಿಂತಲೂ ಹಳೆಯದಾದ ಟಾಟಾ ಬ್ರಾಂಡ್ ಅಡಿಯಲ್ಲಿ ವಿವಿಧ ಸಂಸ್ಥೆಗಳ ಹೋಲ್ಡಿಂಗ್ ಕಂಪನಿಯಾದ ಟಾಟಾ ಸನ್ಸ್ನಲ್ಲಿ ಟಾಟಾ ಟ್ರಸ್ಟ್ಸ್ 66% ಅನ್ನು ಹೊಂದಿರುವುದರಿಂದ ನೋಯೆಲ್ ಅವರ ನೇಮಕಾತಿ ಮಹತ್ವದ್ದಾಗಿದೆ. ರತನ್ ಟಾಟಾ ಅವರ ‘ಮುಂದುವರಿಯುವ’ ವಿಧಾನವನ್ನು ಗಮನದಲ್ಲಿಟ್ಟುಕೊಂಡು ನೋಯೆಲ್ ಟಾಟಾ ಅವರನ್ನು ಇಂದು ಅಧ್ಯಕ್ಷರನ್ನಾಗಿ ನೇಮಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಚಾನೆಲ್ ವರದಿ ಮಾಡಿದೆ. ಕಾರ್ಪೊರೇಟ್ ವಕೀಲ ಎಚ್ ಪಿ ರಾನಿನಾ ಅವರು ಟಾಟಾ ಟ್ರಸ್ಟ್ ಗಳು ನೋಯೆಲ್ ಟಾಟಾದಲ್ಲಿ ಸರಿಯಾದ ಆಯ್ಕೆಯನ್ನು ಮಾಡಿದೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ರಾಜ್ಯ ಸರ್ಕಾರದಿಂದ 2 ಜೊತೆ ಸಮವಸ್ತ್ರವನ್ನು ವಿತರಿಸೋದಕ್ಕೆ ನಿರ್ಧಾರವನ್ನು ಕೈಗೊಂಡಿದೆ. ಗುರುವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರತಿ ವರ್ಷ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿಯೊಬ್ಬ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಪ್ರತಿ ವರ್ಷ 02 ಸೀರೆಗಳನ್ನು ವಿತರಿಸಲಾಗುತ್ತದೆ. ಕರ್ನಾಟಕ ಕೈಮಗ್ಗ ನಿಗಮ ನಿಯಮಿತದಿಂದಲೇ ಖರೀದಿಸಬೇಕೆಂಬ ಷರತ್ತು ವಿಧಿಸಿ ಈ ಹಿಂದೆ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಕೇಂದ್ರ ಸರ್ಕಾರದ ಅನುದಾನ ಇರುವುದರಿಂದ ಇ-ಟೆಂಡರ್ ಅಥವಾ ಜೆಮ್ ಪೋರ್ಟಲ್ ಮುಖಾಂತರ ಖರೀದಿಸುವುದು ಸೂಕ್ತವಾಗಿದೆ ಎಂದು ಪರಿಗಣಿಸಿ ಟೆಂಡರ್ ಮುಖಾಂತರ ಖರೀದಿಸಲು ಸಚಿವ ಸಂಪುಟ ನಿರ್ಣಯಿಸಿದೆ. 69,919 ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 1,37,509 ಅಂಗನವಾಡಿ ಕಾರ್ಯಕರ್ತ ಮತ್ತು ಸಹಾಯಕಿಯರಿಗೆ ಐ.ಸಿ.ಡಿ.ಎಸ್ ಯೋಜನೆಯ ನಿಯಮಾನುಸಾರ ತಲಾ ಎರಡು ಸೀರೆಗಳಂತೆ ಒಟ್ಟು 2,75,018 ಸೀರೆಗಳನ್ನು ಕಟಿಪಿಪಿ ಪೋರ್ಟಲ್…
ಗೋಕಾಕ್: ಗೃಹ ಲಕ್ಷ್ಮೀ ಯೋಜನೆ ಜಾರಿಗೊಂಡ ನಂತ್ರ ಸರ್ಕಾರದಿಂದ ದೊರೆತಂತ ಹಣದಿಂದ ಯಜಮಾನಿಯರು ಫ್ರಿಡ್ಜ್, ಟಿವಿಗಳನ್ನು ಕೂಡಿಟ್ಟ ಹಣದಲ್ಲಿ ಖರೀದಿಸಿದ್ದರು. ಈಗ ಯಜಮಾನಿಯೊಬ್ಬಳು ತನ್ನ ಮಗನಿಗೆ ಗೃಹ ಲಕ್ಷ್ಮೀ ಯೋಜನೆಯ ಹಣದಿಂದ ಮಗನಿಗೆ ಹೊಸ ಬೈಕ್ ಒಂದನ್ನು ಕೊಡಿಸಿದ್ದಾರೆ. ಹೌದು.. ಈ ಮಾಹಿತಿಯನ್ನು ಸ್ವತಹ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹಂಚಿಕೊಂಡಿದ್ದಾರೆ. ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಹಣ ಕೂಡಿಟ್ಟು, ತನ್ನ ಮಗ ರಮೇಶ ನೀಲಪ್ಪ ಸಣ್ಣಕ್ಕಿಗೆ ದ್ವಿಚಕ್ರ ವಾಹನ ಕೊಡಿಸುತ್ತಿದ್ದಾರೆ. ಶುಕ್ರವಾರ ಬೈಕ್ ಖರೀದಿಸಲು ಮುಂಗಡ ಹಣ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ‘ಗೃಹಲಕ್ಷಿ’ ಯೋಜನೆಯ ಹಣ ಇಂದು ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಬದುಕು ಕಟ್ಟಿಕೊಳ್ಳಲು ನೆರವಾಗಿದೆ ಎಂದು ಹೇಳಿದ್ದಾರೆ. ಮಹಾನವಮಿ (11/10/2024) ಹಬ್ಬದಂದು ದ್ವಿಚಕ್ರ ವಾಹನ ಕೊಳ್ಳಲು ಮುಂದಾಗಿರುವ ಮಗನಿಗೆ ತಾಯಿ ಗೃಹಲಕ್ಷ್ಮೀ ಹಣ ನೀಡಿರುವ ವಿಷಯ ಕೇಳಿ ಖುಷಿಯಾಗಿದೆ. ತಾಯಿ -ಮಗನಿಗೆ ಮನಃಪೂರ್ವಕವಾಗಿ…
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಗೆ ದಿನಾಂಕ 08-10-2024ರಿಂದ ದಿನಾಂಕ 04-12-2024ರವರೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಭಾಗವಹಿಸಿ, ಮತವನ್ನು ಚಲಾಯಿಸುವ ನೌಕರರಿಗೆ ರಾಜ್ಯ ಸರ್ಕಾರದಿಂದ ವಿಶೇಷ ಅನುಮತಿ ನೀಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಗೆ ದಿನಾಂಕ: 08.10.2024 ರಿಂದ 04.12.2024 ರವರೆಗೆ ನಡೆಯಲಿರುವ ಚುನಾವಣೆಯಲ್ಲಿ ಭಾಗವಹಿಸಿ ಮತ ಚಲಾಯಿಸುವ ಸರ್ಕಾರಿ ನೌಕರರಿಗೆ ಕಛೇರಿ ವೇಳೆಯಲ್ಲಿ ತೆರಳಿ ಮತದಾನ ಮಾಡಲು ವಿಶೇಷ ಅನುಮತಿ ನೀಡುವಂತೆ ಕೋರಲಾಗಿದೆ ಎಂದಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ತಾಲ್ಲೂಕು ಹಾಗೂ ಯೋಜನಾ ಶಾಖೆಗಳ ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನದ ಚುನಾವಣೆಗಳು, ಜಿಲ್ಲೆಗಳ ಕಾರ್ಯಕಾರಿ ಸಮಿತಿ ನಿರ್ದೇಶಕ ಸ್ಥಾನದ ಚುನಾವಣೆಗಳು ಮತ್ತು ಬೆಂಗಳೂರು ನಗರ ಜಿಲ್ಲೆಯ ವಿವಿಧ ಇಲಾಖೆಗಳ ರಾಜ್ಯ ಪರಿಷತ್ ಸದಸ್ಯ ಸ್ಥಾನದ ಚುನಾವಣೆಗಳು ದಿನಾಂಕ:…
ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಿಜೆಪಿ ಅವಧಿಯ ಕೋವಿಡ್ ಹಗರಣ ಸಂಬಂಧ ಎಸ್ಐಟಿ ತನಿಖಾ ತಂಡ ರಚನೆ ಬಗ್ಗೆ ನಿರ್ಧರಿಸಲಾಗಿತ್ತು. ಅಲ್ಲದೇ ಸಂಪುಟ ಉಪ ಸಮಿತಿಯನ್ನು ರಚಿಸುವಂತ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಅದರಂತೆ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಿ ಆದೇಶಿಸಿದ್ದಾರೆ. ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸಿದ್ಧರಾಮಯ್ಯ ಅವರು ಟಿಪ್ಪಣಿ ಹೊರಡಿಸಿದ್ದು, ಅದರಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧ ನಡೆದಿರುವ ತನಿಖೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ನಾ ರವರ ನೇತೃತ್ವದ ವಿಚಾರಣಾ ಆಯೋಗವು ತನ್ನ ಮೊದಲ ವರದಿಯನ್ನು ನೀಡಿದೆ. ಸದರಿ ವರದಿಯಲ್ಲಿ ಬೃಹತ್ ಪ್ರಮಾಣದ ಹಗರಣ ನಡೆದಿರುವುದಾಗಿ ಉಲ್ಲೇಖಿಸಲಾಗಿದ್ದು, ಅದರ ಕುರಿತು ಕ್ರಮ ಕೈಗೊಳ್ಳಬಹುದೆಂದು ತಿಳಿಸಲಾಗಿದೆ ಎಂದಿದ್ದಾರೆ. ಈ ನಿಟ್ಟಿನಲ್ಲಿ ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಮಾನ್ಯ ಉಪ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಈ ಕೆಳಗಿನಂತೆ…
ನವದೆಹಲಿ: ನರೇಂದ್ರ ಮೋದಿ ಸರ್ಕಾರ ಗುರುವಾರ ‘ಹಿಜ್ಬ್-ಉತ್-ತಹ್ರಿರ್’ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. “ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯ ಪ್ರಧಾನಿ ನರೇಂದ್ರ ಮೋದಿ ಜಿ ಅವರ ನೀತಿಯನ್ನು ಅನುಸರಿಸಿ, ಗೃಹ ಸಚಿವಾಲಯವು ಇಂದು ‘ಹಿಜ್ಬ್-ಉತ್-ತಹ್ರಿರ್’ ಅನ್ನು ‘ಭಯೋತ್ಪಾದಕ ಸಂಘಟನೆ’ ಎಂದು ಘೋಷಿಸಿದೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಮಾಜಿಕ ವೇದಿಕೆ ಎಕ್ಸ್ನಲ್ಲಿ ಪ್ರಕಟಿಸಿದ್ದಾರೆ. “ಈ ಸಂಘಟನೆಯು ವಂಚಕ ಯುವಕರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಲು ತೀವ್ರಗಾಮಿಗಳನ್ನಾಗಿ ಮಾಡುವುದು ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಹಣವನ್ನು ಸಂಗ್ರಹಿಸುವುದು. ರಾಷ್ಟ್ರೀಯ ಭದ್ರತೆ ಮತ್ತು ಭಾರತದ ಸಾರ್ವಭೌಮತ್ವಕ್ಕೆ ಗಂಭೀರ ಬೆದರಿಕೆಯನ್ನುಂಟು ಮಾಡುವುದು ಸೇರಿದಂತೆ ವಿವಿಧ ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದೆ. ಭಯೋತ್ಪಾದನೆಯ ಶಕ್ತಿಗಳನ್ನು ಉಕ್ಕಿನ ಮುಷ್ಟಿಯಿಂದ ಎದುರಿಸುವ ಮೂಲಕ ಭಾರತವನ್ನು ಭದ್ರಪಡಿಸಲು ಮೋದಿ ಸರ್ಕಾರ ಬದ್ಧವಾಗಿದೆ” ಎಂದು ಸಚಿವರು ಹೇಳಿದರು. ಗೆಜೆಟ್ ಅಧಿಸೂಚನೆಯಲ್ಲಿ, ಗೃಹ ಸಚಿವಾಲಯ (ಎಂಎಚ್ಎ) ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳು, ಸುರಕ್ಷಿತ ಅಪ್ಲಿಕೇಶನ್ಗಳನ್ನು ಬಳಸುವ ಮೂಲಕ ಮತ್ತು ಮೋಸಗಾರ ಯುವಕರನ್ನು ಭಯೋತ್ಪಾದಕ ಕೃತ್ಯಗಳಲ್ಲಿ…
ರಾಮನಗರ/ಚನ್ನಪಟ್ಟಣ: ಲೋಕಸಭೆ ಚುನಾವಣೆಯಲ್ಲಿ ಸಮಯದಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ ಗುರುವಾರ ಕಾರ್ಯಕರ್ತರ ಸಭೆಗೆ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ಯೋಗೇಶ್ವರ್ ಅವರಿಗೆ ಅಥವಾ ಇನ್ನಾರಿಗೆ ಆಗಲಿ ಕ್ಷೇತ್ರವನ್ನು ಬಿಟ್ಟುಕೊಡಬೇಕೆಂದು ಬಿಜೆಪಿ ವರಿಷ್ಠರ ಜತೆ ಒಪ್ಪಂದವಾಗಿರಲಿಲ್ಲ ಎಂಬ ಅಂಶವನ್ನು ಇಟ್ಟಿ ಹೇಳಿದರು. ಚುನಾವಣೆ ಸಮೀಪಿಸುತ್ತಿದೆ. ಆವತ್ತು ಏನೇನು ನಡೆಯಿತು ಎಂದು ಹೇಳಲೇಬೇಕು. ಜನರಿಗೆ ಸತ್ಯ ಗೊತ್ತಾಗಬೇಕು ಎಂಬುದು ನನ್ನ ಉದ್ದೇಶ ಎಂದು ಸಚಿವರು ಹೇಳಿದರು. ಬೆಂಗಳೂರು ಗ್ರಾಮಾಂತರ ಲೋಕಾಸಭೆ ಕ್ಷೇತ್ರದಿಂದ ಡಾ ಸಿಎನ್ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಲು ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರೇ ಮೂಲ ಕಾರಣ. ಅವರ ಒತ್ತಾಯಕ್ಕೆ ಗೌರವ ಕೊಟ್ಟು, ಅವರ ಮಾತಿಗೆ ತಲೆಬಾಗಿ ಅವರನ್ನು ಅಭ್ಯರ್ಥಿ ಮಾಡಲಾಯಿತು. ಅದಕ್ಕೂ ಮೊದಲು ನಾನು ಸಿ.ಪಿ.ಯೋಗೇಶ್ವರ್ ಅವರೇ ಗ್ರಾಮಾಂತರ ಕ್ಷೇತ್ರಕ್ಕೆ ಅಭ್ಯರ್ಥಿ ಆಗಬೇಕು…
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಹಗರಣಗಳಲ್ಲಿ ಕ್ಲೀನ್ ಚಿಟ್ ಪಡೆಯಲು ಎಸ್ಐಟಿ, ಸಿಐಡಿಯನ್ನು ನೇಮಿಸುತ್ತದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇ.ಡಿ. ಬರದೆ ಇದ್ದಲ್ಲಿ ವಾಲ್ಮೀಕಿ ನಿಗಮದ ಹಗರಣ ಮುಚ್ಚಿ ಹೋಗುತ್ತಿತ್ತು. ಸಿಬಿಐಗೆ ಹೋದಾಗ, ಅದರಲ್ಲಿ ಹಣಕಾಸು ಅವ್ಯವಹಾರ (ಮನಿ ಲಾಂಡರಿಂಗ್) ಇದೆ ಎಂದು ಗೊತ್ತಾದಾಗ ಇ.ಡಿ. ತನಿಖೆ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದರು. 187 ಕೋಟಿ ಅವ್ಯವಹಾರ ನಡೆದುದು ನಿಜ. ಆದರೆ, ಕೇವಲ 87 ಕೋಟಿ ಅವ್ಯವಹಾರ ಆಗಿದೆ ಎಂದು ಮುಖ್ಯಮಂತ್ರಿಯವರು ಅವತ್ತೇ ಹೇಳಿದ್ದರು. ಸತ್ಯ ಒಪ್ಪಿಕೊಂಡ ಮೇಲೆ ಕ್ರಮ ಆಗಿರಲಿಲ್ಲ. ಕದ್ದ ಮಾಲು ವಾಪಸ್ ಕೊಟ್ಟರೆ ಕೇಸ್ ಖುಲಾಸೆ ಆಗುತ್ತದೆಯೇ ಎಂದು ಪ್ರಶ್ನಿಸಿದರು. ಇದರಲ್ಲಿ 20 ಕೋಟಿ ಹಣವನ್ನು ತುಕಾರಾಂ ಅವರ ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ನಾಗೇಂದ್ರರ ವೈಯಕ್ತಿಕ ವೆಚ್ಚವಾಗಿ ಹಣ ಖರ್ಚಾದುದರ ಕುರಿತು ಇ.ಡಿ. ವರದಿಯಲ್ಲಿ ಉಲ್ಲೇಖವಿದೆ…
ಬೆಂಗಳೂರು: ಬರುವ ಕೆಲವು ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನ ನಡೆಯುವ ಒಳಗೆ ನೂತನ ಮುಖ್ಯಮಂತ್ರಿ ಬರಲಿದ್ದಾರೆ ಎಂದು ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿ ಉದ್ದೇಸಿಸಿ ಮಾತನಾಡಿದ ಅವರು, ಮೊನ್ನೆ ನಡೆದ ಹರಿಯಾಣ ರಾಜ್ಯದ ಚುನಾವಣೆ ಬಿಜೆಪಿ ಜಯದಿಂದ ಹೊಸ ಹುರುಪು ಬಂದಿದೆ. ಜಮ್ಮು ಕಾಶ್ಮೀರ ರಾಜ್ಯದಲ್ಲಿ 29 ಸ್ಥಾನಗಳನ್ನು ಗೆಲುವು ಸಾಧಿಸುವ ಮೂಲಕ ಮುಂಬರುವ ಮಹಾರಾಷ್ಟ್ರ ರಾಜ್ಯ ವಿಧಾನಸಭೆ ಚುನಾವಣೆಯ ಗೆಲುವಿನ ಮುನ್ಸೂಚನೆ ಇದು ಎಂದು ವಿಶ್ಲೇಷಿಸಿದರು. ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣದಲ್ಲಿ ಸಿಲುಕಿರುವ ಕಾಂಗ್ರೆಸ್ ಸರ್ಕಾರ ಕೋಮಾದಲ್ಲಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಗುದ್ದಲಿ ಪೂಜೆ ನೆರವೇರುತ್ತಿಲ್ಲ. ಭ್ರಷ್ಟಾಚಾರ ಸಾಬೀತಾಗಿ ನಿವೇಶನ ಮರಳಿ ಕೊಟ್ಟು ತಪ್ಪು ಒಪ್ಪಿಕೊಂಡು ಹಾಗೇ ಮುಖ್ಯಮಂತ್ರಿಯವರು ರಾಜೀನಾಮೆ ಕೊಡುತ್ತಾರೆ ಎಂದು ತಿಳಿಸಿದರು. ಸರ್ಕಾರದ ಜಿಲ್ಲಾ ಸಚಿವರು ಬೆಂಗಳೂರು, ಸ್ವಗೃಹ ಎಂದು ಆರಾಮವಾಗಿ ಅಡ್ಡಾಡುತ್ತಿದ್ದಾರೆ, ಜಿಲ್ಲಾವಾರು…
ಬೆಂಗಳೂರು: ಕೆ.ಆರ್.ಡಿ.ಎಲ್ ಕಾಮಗಾರಿಯಲ್ಲಿ ಭಾರಿ ಅವ್ಯವಹಾರ ಆಗಿದ್ದು, ತೆಲಂಗಾಣ ಚುನಾವಣೆಗೆ ಆ ಹಣವನ್ನು ಬಳಸಿಕೊಂಡ ಆರೋಪವಿದೆ. ಇದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಮತ್ತು ಅಜಯ್ ಸಿಂಗ್ ಇದನ್ನು ಮಾಡುತ್ತಿದ್ದು, ನನಗೆ ಬಂದ ಮಾಹಿತಿ ಪ್ರಕಾರ ಇವರಿಬ್ಬರು ಸೇರಿ ಬಿಡುಗಡೆಯಾದ ಹಣದಲ್ಲಿ ಶೇ 40 ಕಮಿಷನ್ ತೆಗೆದುಕೊಂಡಿದ್ದಾರೆ. ತೆಲಂಗಾಣ ಚುನಾವಣೆಗೆ ಸುಮಾರು 500 ಕೋಟಿ ಕೊಟ್ಟ ಆಪಾದನೆ ಕೇಳಿಬಂದಿದೆ ಎಂದು ಆರೋಪಿಸಿದರು. ಅಲ್ಲಿರುವ ಎಸ್ಇಪಿ, ಟಿಎಸ್ಪಿ ಹಣ ಕೂಡ ಇದೇರೀತಿ ನುಂಗಲಾಗಿದೆ. ರಸ್ತೆ, ಅಭಿವೃದ್ಧಿ ಆಗದೆ ಇದ್ದರೂ ಹಣ ಖರ್ಚಾಗಿದೆ ಎಂದು ಟೀಕಿಸಿದರು. ಒತ್ತಡ ಹಾಕಿ ಕೆಲಸ ಆಗಿದೆ ಎಂದು ತಿಳಿಸಿ ಹಣ ಪಡೆದಿದ್ದಾರೆ. ಕೆ.ಆರ್.ಡಿ.ಎಲ್ಗೆ ಕೇಳಿದರೆ ಅವರ ಬಳಿ ಹಣ ಇಲ್ಲ; ಎಂಎಲ್ಎಗಳು ಕ್ರಿಯಾ ಯೋಜನೆ ಇಲ್ಲದೆ ಬಿಲ್ ಮಾಡಿಕೊಂಡು ಹೋದುದಾಗಿ ತಿಳಿಸುತ್ತಾರೆ…