Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ನವದೆಹಲಿ: 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರವು ಪ್ರಕಟಿಸಿದೆ. ಈ ಬಾರಿ ಕರ್ನಾಟಕದ ಅಂಕೇಗೌಡರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿನಕುರಳಿ ಗ್ರಾಮದ ಅಂಕೇಗೌಡಗೆ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಸಂದಿದೆ. ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾಗುತ್ತದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ಪದ್ಮವಿಭೂಷಣ; ಉನ್ನತ ಶ್ರೇಣಿಯ ವಿಶಿಷ್ಟ ಸೇವೆಗಾಗಿ ಪದ್ಮಭೂಷಣ ಮತ್ತು ಯಾವುದೇ ಚಟುವಟಿಕೆಯ ಕ್ಷೇತ್ರದಲ್ಲಿ ವಿಶಿಷ್ಟ ಸೇವೆಗಾಗಿ ಪದ್ಮಶ್ರೀ. 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯು ಕರ್ನಾಟಕದ ಅಂಕೆ ಗೌಡ ಮತ್ತು ಮಹಾರಾಷ್ಟ್ರದ ಅರ್ಮಿದಾ ಫೆರ್ನಾಂಡಿಸ್ ಅವರಿಗೆ ‘ಪ್ರಶಸ್ತಿಸದ ವೀರರು’ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.
ನವದೆಹಲಿ: ಜನವರಿ 25 ರಂದು ಗಣರಾಜ್ಯೋತ್ಸವದ ಮುನ್ನಾದಿನದಂದು ಭಾರತ ಸರ್ಕಾರವು ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ 2026 ರ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ಘೋಷಿಸಿತು. ಸಾರ್ವಜನಿಕ ಸೇವೆ, ಕಲೆ, ಸಾಹಿತ್ಯ, ವಿಜ್ಞಾನ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಾಮಾಜಿಕ ಕಾರ್ಯ ಮತ್ತು ಇನ್ನೂ ಹೆಚ್ಚಿನವುಗಳನ್ನು ಒಳಗೊಂಡಂತೆ ವ್ಯಾಪಕ ಶ್ರೇಣಿಯ ಕ್ಷೇತ್ರಗಳಲ್ಲಿ ಅಸಾಧಾರಣ ಮತ್ತು ವಿಶಿಷ್ಟ ಕೊಡುಗೆಗಳನ್ನು ಗುರುತಿಸುವ ಪ್ರಶಸ್ತಿಗಳು. ಈ ಘೋಷಣೆಯು ಸಂಪ್ರದಾಯವನ್ನು ಅನುಸರಿಸುತ್ತದೆ, ಈ ವರ್ಷದ ಕೊನೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪದಕಗಳನ್ನು ಪ್ರದಾನ ಮಾಡಲಾಗುವುದು. ಈ ವರ್ಷದ ಗೌರವಗಳಲ್ಲಿ, ಹಲವಾರು ವ್ಯಕ್ತಿಗಳನ್ನು ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀಗೆ ಆಯ್ಕೆ ಮಾಡಲಾಗಿದೆ, ಇದು ಉನ್ನತ ಶ್ರೇಣಿಯ ವಿಶಿಷ್ಟ ಸೇವೆಯನ್ನು ಗುರುತಿಸುತ್ತದೆ. 2026 ರ ಪಟ್ಟಿಯಲ್ಲಿ ಸ್ಥಳೀಯ ಸಮುದಾಯಗಳ ಮೇಲೆ ಆಳವಾದ ಪ್ರಭಾವ ಬೀರಿದ ತಳಮಟ್ಟದ ಪ್ರಯತ್ನಗಳು ಮತ್ತು ದೀರ್ಘಕಾಲೀನ ಕೊಡುಗೆಗಳನ್ನು ಹೊಂದಿರುವ ಪ್ರಸಿದ್ಧ ವೀರರ ಹೆಸರುಗಳಿವೆ. ಈ ವರ್ಗದ ಅಡಿಯಲ್ಲಿ ಸುಮಾರು 45 ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲಾಗಿದೆ…
ಮೈಸೂರು : ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ, ಮಾಧ್ಯಮದವರ ಜೊತೆ ಮಾತನಾಡಿದರು. ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ. ಕೌಶಲ್ಯವಿರುವ ಮಾನವ ಸಂಪನ್ಮೂಲ ಲಭ್ಯತೆಯಿದೆ. ಇದಕ್ಕೆ ತರಬೇತಿಯೂ ನೀಡಲಾಗುತ್ತಿದೆ, ತರಬೇತಿ ಪಡೆವರಿಗೆ ನೂರರಷ್ಟು ಕೆಲಸ ದೊರೆಯುತ್ತದೆ ಎಂದರು. ಸರ್ಕಾರ ಕೊಟ್ಟಿರುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ ಇದೆ ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ವರದಿ ನೀಡಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಿದ್ಯಮಾನಗಳ ಬಗ್ಗೆ ತಿಳಿಸಿದ್ದಾರೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕೆಂದು ಸಂವಿಧಾನದ 176 ಮತ್ತು 163 ಪರಿಚ್ಛೇದದಲ್ಲಿ ಸ್ಪಷ್ಟವಾಗಿ ಹೇಳಿದೆ. ಸರ್ಕಾರ ಕೊಟ್ಟಿರುವ ಭಾಷಣವನ್ನು ಅವರು ಓದಲೇಬೇಕು. ನಾವು ಬರೆದುಕೊಟ್ಟಿರುವುದನ್ನು ಅವರು ಬದಲಾಯಿಸುವ ಸಾಧ್ಯತೆ ಇರುತ್ತದೆ ಎಂದರು.…
ಬೆಂಗಳೂರು: ಇಡೀ ದೇಶವೇ ಬೆಚ್ಚಿ ಬೀಳುವ ಈ ರಾಬರಿ ಪ್ರಕರಣ ಕಾಂಗ್ರೆಸ್ ಸರ್ಕಾರದಲ್ಲಿ ಗೃಹ ಇಲಾಖೆಯ ವೈಫಲ್ಯ ಹಾಗೂ ಕುಸಿದಿರುವ ಕಾನೂನು ಸುವ್ಯವಸ್ಥೆಗೆ ಸಾಕ್ಷಿಯಾಗಿದೆ ಎಂಬುದಾಗಿ ಜೆಡಿಎಸ್ ವಾಗ್ಧಾಳಿ ನಡೆಸಿದೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್, ದರೋಡೆಕೋರ ಕಾಂಗ್ರೆಸ್ ಸರ್ಕಾರದಲ್ಲಿ ದರೋಡೆ ಪ್ರಕರಣಗಳು ಪ್ರತಿ ನಿತ್ಯ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯ ಖಾನಾಪುರದ ಛೋರ್ಲಾ ಘಾಟ್’ನಲ್ಲಿ ಬರೋಬ್ಬರಿ 400 ಕೋಟಿಗೂ ಹೆಚ್ಚು ಹಣ ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಲಾಗಿದೆ ಎಂಬುದಾಗಿ ಗುಡುಗಿದೆ. ಇಡೀ ದೇಶವೇ ಬೆಚ್ಚಿ ಬೀಳುವ ಈ ರಾಬರಿ ಪ್ರಕರಣ ಕಾಂಗ್ರೆಸ್ ಸರ್ಕಾರದಲ್ಲಿ ಗೃಹ ಇಲಾಖೆಯ ವೈಫಲ್ಯ ಹಾಗೂ ಕುಸಿದಿರುವ ಕಾನೂನು ಸುವ್ಯವಸ್ಥೆಗೆ ಸಾಕ್ಷಿ ಎಂಬುದಾಗಿ ಕಿಡಿಕಾರಿದೆ. https://twitter.com/JanataDal_S/status/2015328585033318524 https://kannadanewsnow.com/kannada/another-hindu-youth-murdered-in-bangladesh-burned-alive-after-setting-fire-to-garage/ https://kannadanewsnow.com/kannada/breaking-rs-400-crore-robbery-case-in-belgaum-another-accused-arrested/
ಬಾಂಗ್ಲಾ: ಬಾಂಗ್ಲಾದೇಶದ ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ವ್ಯಕ್ತಿಯೊಬ್ಬ ಗ್ಯಾರೇಜ್ ಒಳಗೆ ಸುಟ್ಟು ಕರಕಲಾಗಿದ್ದು, ಇದು ಪೂರ್ವನಿಯೋಜಿತ ಹತ್ಯೆಯ ಆರೋಪಗಳನ್ನು ಮತ್ತು ದೇಶದಲ್ಲಿ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಹೊಸ ಕಳವಳಗಳನ್ನು ಹುಟ್ಟುಹಾಕಿದೆ. ಚಂಚಲ್ ಚಂದ್ರ ಭೌಮಿಕ್ ಎಂದು ಗುರುತಿಸಲ್ಪಟ್ಟ ಬಲಿಪಶು ಹಲವಾರು ವರ್ಷಗಳಿಂದ ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮೂಲತಃ ಕುಮಿಲ್ಲಾ ಜಿಲ್ಲೆಯ ಲಕ್ಷ್ಮಿಪುರ ಗ್ರಾಮದವರಾಗಿದ್ದು, ಕೆಲಸಕ್ಕಾಗಿ ನರಸಿಂಗ್ಡಿಯಲ್ಲಿ ವಾಸಿಸುತ್ತಿದ್ದರು. ಚಂಚಲ್ ಅವರ ಕುಟುಂಬದ ಮಧ್ಯಮ ಮಗ ಮತ್ತು ಅದರ ಏಕೈಕ ಜೀವನಾಧಾರ. ನರಸಿಂಗ್ಡಿ ಪೊಲೀಸ್ ಲೈನ್ಸ್ ಪಕ್ಕದಲ್ಲಿರುವ ಮಸೀದಿ ಮಾರುಕಟ್ಟೆ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳು ಮತ್ತು ಸ್ಥಳೀಯ ಮೂಲಗಳ ಪ್ರಕಾರ, ಶುಕ್ರವಾರ ತಡರಾತ್ರಿ ಚಂಚಲ್ ಗ್ಯಾರೇಜ್ ಒಳಗೆ ಮಲಗಿದ್ದಾಗ ದಾಳಿ ನಡೆದಿದೆ. ದುಷ್ಕರ್ಮಿಗಳು ಅಂಗಡಿಯ ಶಟರ್ ಮೇಲೆ ಹೊರಗಿನಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ, ಇದರಿಂದಾಗಿ ಬೆಂಕಿ ವೇಗವಾಗಿ ಒಳಗೆ ಹರಡಿತು. ಘಟನೆಗೆ ಸಂಬಂಧಿಸಿದ ವೀಡಿಯೊದಲ್ಲಿ ಅಂಗಡಿಯ ಹೊರಗೆ ವ್ಯಕ್ತಿಯೊಬ್ಬರು ಬೆಂಕಿ ಹಚ್ಚುವುದನ್ನು ತೋರಿಸಲಾಗಿದೆ,…
ಬೆಂಗಳೂರು: ಬಿಜೆಪಿ ಮುಖಂಡ ವಿಕಾಸ್ ಪುತ್ತೂರುಗೆ ದ್ವೇಷ ಭಾಷಣ ಮಸೂದೆಯ ಅಡಿಯಲ್ಲಿ ಪೊಲೀಸರು ನೋಟಿಸ್ ನೀಡಿದ್ದು ತಪ್ಪು ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಮುಖಂಡ ವಿಕಾಸ್ ಪುತ್ತೂರುಗೆ ದ್ವೇಷ ಭಾಷಣ ಮಸೂದೆಯಡಿ ಪೊಲೀಸರು ನೋಟಿಸ್ ನೀಡಿದ ಬಗ್ಗೆ ಮಾಹಿತಿ ತರಿಸಿಕೊಳ್ಳುತ್ತೇನೆ ಎಂದರು. ರಾಜ್ಯಪಾಲರು ಇನ್ನೂ ಮಸೂದೆಗೆ ಸಹಿಯನ್ನೇ ಹಾಕಿಲ್ಲ. ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿನ ವಿವಿಧ ಸೆಕ್ಷನ್ ಗಳಡಿ ನೋಟಿಸ್ ನೀಡಬಹುದು. ದ್ವೇಷ ಭಾಷಣದ ಮಸೂದೆ ಕಾನೂನು ಆಗದೇ ಇರುವ ಕಾರಣ ಆ ಮಸೂದೆಯ ಅಡಿಯಲ್ಲಿ ಪೊಲೀಸರು ನೋಟಿಸ್ ನೀಡಿದ್ದು ತಪ್ಪು. ಯಾಕೆ ಆ ರೀತಿಯಾಗಿ ಮಾಡಿದ್ದಾರೆ ಎನ್ನುವುದು ನೋಡಬೇಕೆಂದರು. https://kannadanewsnow.com/kannada/investors-are-ready-to-invest-about-rs-11-lakh-crore-in-the-state-dcm-d-k-shivakumar/
ದಾವೂಸ್: ರಾಜ್ಯದಲ್ಲಿ ಸುಮಾರು 11 ಲಕ್ಷ ಕೋಟಿ ರೂ. ಹೂಡಿಕೆಗೆ ಹೂಡಿಕೆದಾರರು ಸಿದ್ಧರಾಗಿದ್ದಾರೆ. ಈ ಎಲ್ಲಾ ಪ್ರಯತ್ನಗಳ ಮೂಲಕ ರಾಜ್ಯಕ್ಕೆ ಹೊಸ ರೂಪ ನೀಡುವುದು ನಮ್ಮ ಉದ್ದೇಶವಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ದಾವೋಸ್ನ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಚರ್ಚೆಯಾದ ಹೂಡಿಕೆ, ವ್ಯವಹಾರ, ಆಡಳಿತ ನೀತಿ ಸೇರಿದಂತೆ ಹಲವು ವಿಷಯಗಳ ಕುರಿತು, ಬಿಡಿಎ ಅಧ್ಯಕ್ಷರಾದ ಹ್ಯಾರಿಸ್ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾಧ್ಯಮದವರಿಗೆ ಮಾಹಿತಿ ನೀಡಿದೆ ಎಂದಿದ್ದಾರೆ. ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗವಹಿಸಿದ್ದು ನನಗೆ ಹೊಸ ಹಾಗೂ ಮಹತ್ವದ ಅನುಭವವಾಗಿತ್ತು. ದೇಶ–ರಾಜ್ಯಗಳನ್ನು ಪ್ರತಿನಿಧಿಸುವ ಈ ವೇದಿಕೆಯಲ್ಲಿ ಕರ್ನಾಟಕಕ್ಕೂ ಸ್ಥಾನ ದೊರೆತಿತ್ತು. ಭಾರತದಿಂದ 10 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ 65ಕ್ಕೂ ಹೆಚ್ಚು ದೇಶಗಳ ಮುಖ್ಯಸ್ಥರು, ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಸೇರಿದಂತೆ ಅನೇಕ ಉದ್ಯಮಿಗಳು ಭಾಗವಹಿಸಿದ್ದರು ಎಂದರು. ಸಮ್ಮೇಳನದಲ್ಲಿ 100ಕ್ಕೂ ಹೆಚ್ಚು ಸಭೆಗಳು, ಚರ್ಚೆಗಳು ನಡೆದಿದ್ದು, ರಾಷ್ಟ್ರೀಯ…
ಬೆಂಗಳೂರು: ಕೇವಲ ರಾಜಕಾರಣಕ್ಕಾಗಿ ಮತ್ತು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ಕೇಂದ್ರ ಸರಕಾರದ ವಿರುದ್ದ ಆರೋಪ ಮಾಡುತ್ತಿರುವುದು ರಾಜ್ಯಪಾಲರಿಗೆ ತೋರಿರುವ ಅಗೌರವ. ಅದು ಸಂವಿಧಾನಕ್ಕೆ ಮಾಡಿರುವ ಅಪಚಾರ ಎಂಬುದಾಗಿ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಹಿಂದಿನ ರಾಜ್ಯಪಾಲರು ಮೊದಲ ಪುಟ ಕೊನೆ ಪುಟ ಓದದೆ ಇರುವ ಅನೇಕ ಉದಾಹರಣೆಗಳಿವೆ. ರಾಜ್ಯಪಾಲರ ವಿರುದ್ದ ಅವಾಚ್ಯ ಶಬ್ದ ಬಳಕೆ ಮಾಡಿರುವುದು ಸಂವಿಧಾನಕ್ಕೆ ಹಾಗೂ ಸಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರಿಗೆ ಮಾಡಿರುವ ಅವಮಾನ. ಅವರ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಿರುವುದು ಅತ್ಯಂತ ಖಂಡನೀಯ ಎಂದಿದ್ದಾರೆ. ಅತ್ಯಂತ ಹಿರಿಯ ಶಾಸಕರಾದ ಬಿ.ಕೆ. ಹರಿಪ್ರಸಾದ ಅವರ ವರ್ತನೆ. ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ತೋರಿಸುತ್ತದೆ. ಅವರ ವಿರುದ್ದ ಕ್ರಮ ಜರುಗಿರಸುವುದು ಅತ್ಯಂತ ಅವಶ್ಯಕತೆ ಇದೆ. ಈ ಹಿಂದೆ ಹಂಸರಾಜ ಭಾರದ್ವಾಜ್ ಅವರು ರಾಜ್ಯಪಾಲರಾಗಿದ್ದಾಗ ಹಲವಾರು ವಿಚಾರಗಳಲ್ಲಿ ತಮ್ಮ ಮಿತಿ ಮೀರಿ, ಕಾನೂನು ಮೀರಿ ವರ್ತನೆ ಮಾಡಿರುವ ಉದಾಹರಣೆ ಸಾಕಷ್ಟು ಇವೆ.…
ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದಂತ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಕೇಸ್, ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದಿಂದ ಬರೋಬ್ಬರಿ 21 ಕೋಟಿ ಮೌಲ್ಯದ ಆಸ್ತಿ ಪಾಸ್ತಿಯನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಇಡಿ ಅಧಿಕಾರಿಗಳು ನೀಡಿದ್ದು, ಅಮೃತ್ ಪಾಲ್ ಮತ್ತು ಇತರರ (ಪಿಎಸ್ಐ ನೇಮಕಾತಿ ಹಗರಣ) ಪ್ರಕರಣದಲ್ಲಿ 2002 ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ, ಬೆಂಗಳೂರು ವಲಯ ಕಚೇರಿಯ ಜಾರಿ ನಿರ್ದೇಶನಾಲಯ (ಇಡಿ) 23.01.2026 ರಂದು ರೂ. 1.53 ಕೋಟಿ ಮೌಲ್ಯದ ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಮೃತ್ ಪಾಲ್ (ಎಡಿಜಿಪಿ) ಮತ್ತು ಶ್ರೀಧರ್ ಎಚ್ (ಹೆಡ್ ಕಾನ್ಸ್ಟೇಬಲ್) ಅವರಿಗೆ ಸೇರಿದ ವಸತಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳಲ್ಲಿ ಸೇರಿವೆ ಎಂದಿದೆ. 2021-22 ರಲ್ಲಿ ಕರ್ನಾಟಕದಲ್ಲಿ ಪೊಲೀಸ್ ಸಬ್-ಇನ್ಸ್ಪೆಕ್ಟರ್ಗಳ ನೇಮಕಾತಿಯಲ್ಲಿ ಅಕ್ರಮಗಳಿಗಾಗಿ ವಿವಿಧ ಪೊಲೀಸ್ ಅಧಿಕಾರಿಗಳು ಮತ್ತು ಅಭ್ಯರ್ಥಿಗಳ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಸಿಐಡಿ, ದಾಖಲಿಸಿದ ಎಫ್ಐಆರ್ ಆಧಾರದ…
ರಾಮನಗರ: ಜಿಲ್ಲೆಯಲ್ಲಿ ಈಜುಕೊಳದಲ್ಲೇ ಮಹಿಳೆಯೊಬ್ಬರು ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಹಿಳೆಯನ್ನು ಪತಿಯೇ ಕೊಲೆ ಮಾಡಿರುವಂತ ಆರೋಪ ಕೇಳಿ ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಬಚ್ಚೇಗೌಡಪಾಳ್ಯದಲ್ಲಿ ಸ್ವಿಮ್ಮಿಗ್ ಪೂಲ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪ್ರತಿಭಾ(29) ಎನ್ನುವಂತ ಮಹಿಳೆಯ ಶವ ಪತ್ತೆಯಾಗಿದೆ. ಪ್ರತಿಮಾ ಹಾಗೂ ಪತಿ ಬಾಬು ಇಬ್ಬರು ಬಚ್ಚೇಗೌಡನಪಾಳ್ಯದ ಹೊರವಲಯದ ತೋಟದಲ್ಲಿ ವಾಸವಾಗಿದ್ದರು. ಮೃತ ಪತ್ನಿ ಪ್ರತಿಮಾ ಬಾಬು ಅವರಿಗೆ ಎರಡನೇ ಪತ್ನಿಯಾಗಿದ್ದರು. ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ಕಲಹದಿಂದ ಜಗಳ ಉಂಟಾಗಿ, ಪತಿ ಬಾಬುವೇ ಪತ್ನಿ ಪ್ರತಿಮಾ ಕೊಲೆ ಮಾಡಿ ಈಜುಕೊಳದಲ್ಲಿ ಶವ ಎಸೆದಿರೋದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಕೋಡಿಹಳ್ಳಿ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ, ಪ್ರತಿಭಾ ಅವರ ಪತಿ ಬಾಬು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರತಿಭಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. https://kannadanewsnow.com/kannada/shock-for-motorists-travelling-on-one-way-road-in-bengaluru-11498-cases-registered/














