Subscribe to Updates
Get the latest creative news from FooBar about art, design and business.
Author: kannadanewsnow09
ಜೀವನದಲ್ಲಿ ಎಲ್ಲ ರೀತಿಯ ಸವಲತ್ತುಗಳನ್ನು ಪಡೆದು ಮಾನಸಿಕ ಸಂತೋಷದಿಂದ ಬದುಕುವವನು ಸಕಲ ಸಂಪತ್ತಿನಿಂದ ಬಾಳುತ್ತಾನೆ ಎಂದು ಹೇಳಲಾಗುತ್ತದೆ. ಯಶಸ್ಸಿನ ನಂತರ ನಾವು ಎಲ್ಲಾ ಸಂಪತ್ತು ಮತ್ತು ಯಶಸ್ಸನ್ನು ಪಡೆಯಲು ವಿವಿಧ ರೀತಿಯ ಪೂಜೆಗಳಿವೆ. ಅದರಲ್ಲಿ ಡಂಬಳ ದೀಪಾರಾಧನೆಯೂ ಒಂದು. ಈ ಪೂಜೆಯನ್ನು ಸರಿಯಾಗಿ ನಡೆಸುವುದು ಹೇಗೆ ಎಂದು ನೋಡೋಣ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಐಶ್ವರ್ಯಮ್…
ಮ್ಯಾನ್ಮಾರ್: ಮ್ಯಾನ್ಮಾರ್ನಲ್ಲಿ ಬುಧವಾರ ಮಧ್ಯಾಹ್ನ 4.3 ತೀವ್ರತೆಯ ಹೊಸ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ಮ್ಯಾನ್ಮಾರ್ನಲ್ಲಿ ಕೇವಲ ಒಂದು ವಾರದಲ್ಲಿ ಇದು ಮೂರನೇ ಭೂಕಂಪವಾಗಿದೆ. ಭಾರತೀಯ ಕಾಲಮಾನ 16:15 ಕ್ಕೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಅದರ ಕೇಂದ್ರಬಿಂದು 20.70 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 96.06 ಡಿಗ್ರಿ ಪೂರ್ವ ರೇಖಾಂಶದಲ್ಲಿದೆ. ಮಾರ್ಚ್ 29 ರ ಶನಿವಾರ, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆಯ ಭೂಕಂಪವು ಮ್ಯಾನ್ಮಾರ್ ಅನ್ನು ಮತ್ತೆ ನಡುಗಿಸಿತು – ಮಾರ್ಚ್ 28 ರಂದು ಈ ಪ್ರದೇಶ ಮತ್ತು ನೆರೆಯ ಥೈಲ್ಯಾಂಡ್ ಮತ್ತು ಬ್ಯಾಂಕಾಕ್ನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪವು ವ್ಯಾಪಕ ಹಾನಿಯನ್ನುಂಟು ಮಾಡಿದ ಒಂದು ದಿನದ ನಂತರ.
ನವದೆಹಲಿ: ಭಾರತದಲ್ಲಿ ವಿದೇಶಿಯರ ವಲಸೆ, ಪ್ರವೇಶ ಮತ್ತು ವಾಸ್ತವ್ಯವನ್ನು ನಿಯಂತ್ರಿಸುವ ಮಸೂದೆಗೆ ಸಂಸತ್ತು ಬುಧವಾರ ಅನುಮೋದನೆ ನೀಡಿದೆ. ವಲಸೆ ಮತ್ತು ವಿದೇಶಿಯರ ಮಸೂದೆ, 2025 ಅನ್ನು ಮಾರ್ಚ್ 27, 2025 ರಂದು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ರಾಜ್ಯಸಭೆ ಬುಧವಾರ ಧ್ವನಿ ಮತದಿಂದ ಮಸೂದೆಯನ್ನು ಅಂಗೀಕರಿಸಿತು. ಮಸೂದೆಯ ಮೇಲಿನ ಚರ್ಚೆಗೆ ಉತ್ತರಿಸಿದ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ, ಅಕ್ರಮ ವಲಸಿಗರು ದೇಶಕ್ಕೆ ಪ್ರವೇಶಿಸಲು ಸಹಾಯ ಮಾಡಿದ್ದಕ್ಕಾಗಿ ಮತ್ತು ಮತದಾರರ ಪಟ್ಟಿ ಮತ್ತು ಪಡಿತರ ಚೀಟಿಗಳಲ್ಲಿ ಅವರ ಹೆಸರನ್ನು ಸೇರಿಸುವ ಮೂಲಕ ಅವರ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಟ್ಟಿದ್ದಕ್ಕಾಗಿ ಹಿಂದಿನ ಕಾಂಗ್ರೆಸ್ ಸರ್ಕಾರ ಮತ್ತು ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನು ಕಾಂಗ್ರೆಸ್ ಮತ್ತು ಟಿಎಂಸಿ ಸದಸ್ಯರು ತೀವ್ರವಾಗಿ ಆಕ್ಷೇಪಿಸಿದರು, ಅವರು ಇತರ ವಿರೋಧ ಪಕ್ಷಗಳೊಂದಿಗೆ ಮೇಲ್ಮನೆಯಿಂದ ಹೊರನಡೆದರು. ಮಸೂದೆಯ ಬಗ್ಗೆ 26 ಸದಸ್ಯರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ವಿಶ್ವವಿದ್ಯಾಲಯಗಳು, ಶಿಕ್ಷಣ ವ್ಯವಸ್ಥೆ ಮತ್ತು ಆರ್ಥಿಕತೆಯನ್ನು ವಿಶ್ವದರ್ಜೆಗೆ ಏರಿಸಲು…
ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. ಪತ್ರದ ವಿವರ: ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಕರ್ನಾಟಕ ರಾಜ್ಯದ ಪರವಾಗಿ ಅಭಿನಂದಿಸುತ್ತೇನೆ. ಕೇಂದ್ರದಿಂದ ರಾಜ್ಯಕ್ಕೆ ಮಂಜೂರಾಗಿರುವ ಕೆಳಕಂಡ ಪ್ರಮುಖ ಯೋಜನೆಗಳ ವಿವರ ಇಂತಿದೆ. 1. ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಮಣಿಪಾಲ್ ಆಸ್ಪತ್ರೆ ಜಂಕ್ಷನ್ (ಮೈಸೂರು ನಗರ)ದಲ್ಲಿ ಫ್ಲೈಓವರ್ ನಿರ್ಮಾಣ. 2. 30.35 ಕಿ.ಮೀ. ಉದ್ದದ ಹುಬ್ಬಳ್ಳಿ ಧಾರವಾಡ ಷ್ಟಪಥ ಬೈಪಾಸ್ ನಿರ್ಮಾಣ 3. ರಾ.ಹೆ 369 ಇ( ಸಿಗಂದೂರು ಸೇತುವೆ) ರಲ್ಲಿ ಶರಾವತಿ ಹಿನ್ನೀರಿನ ಮೇಲೆ ಪ್ರಮುಖ ಸೇತುವೆ ನಿರ್ಮಾಣ. 4. ರಾ.ಹೆ.167 ಹಗರಿ-ಜೆಡ್ಚೆರ್ಲಾ ಸೆಕ್ಷನ್ ನಲ್ಲಿ ಕೃಷ್ಣಾ ನದಿ ಮೇಲೆ 180.865 ಕಿ.ಮೀ.ನಲ್ಲಿ ಪ್ರಮುಖ ಸೇತುವೆ ನಿರ್ಮಾಣ. 5. ಹೊಸಪೇಟೆ ಯಿಂದ ಬಳ್ಳಾರಿ…
ಬೆಂಗಳೂರು: ನಗರದ ಶಕ್ತಿ ಸೌಧ ವಿಧಾನಸೌಧದ ಮುಂದೆಯೇ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಯುವಕನನ್ನು ವಶಕ್ಕೆ ಪಡೆದಿರುವಂತ ಪೊಲೀಸರು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಬೆಂಗಳೂರಿನ ವಿಧಾನಸೌಧದ ಮುಂದೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಸಂಜಯ್ ಎಂಬಾತ ವಿಷ ಸೇವಿಸಲು ಯತ್ನಿಸಿದ್ದಾನೆ. ಕೂಡಲೇ ಮಫ್ತಿಯಲ್ಲಿದ್ದಂತ ವಿಧಾನಸೌಧ ಠಾಣೆಯ ಪೊಲೀಸರು ಸಂಜಯ್ ನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪ್ಲಾಸ್ಟಿಕ್ ಕವರ್ ನಲ್ಲಿ ವಿಷ ಹಾಗೂ ಕೆಲವು ದಾಖಲೆಗಳನ್ನು ಸಂಜಯ್ ತಂದಿದ್ದನು. ಚನ್ನರಾಯಪಟ್ಟಣ ಠಾಣೆಯ ಪೊಲೀಸರು ನನಗೆ ಹೊಡೆದಿದ್ದಾರೆ. ನನಗೆ ನ್ಯಾಯಕೊಡಿಸಬೇಕು ಎಂಬುದಾಗಿ ವಿಷ ಸೇವಿಸಲು ಮುಂದಾಗಿದ್ದ ಸಂಜಯ್ ವಶಕ್ಕೆ ಪಡೆದಿದ್ದಾರೆ. ವಿಷ ಸೇವಿಸಿದ್ದೇನೆ ಎಂಬುದಾಗಿ ಸಂಜಯ್ ಹೇಳಿದ ಕಾರಣ, ಆತನನ್ನು ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ಹುಚ್ಚಾಟವಾಡುತ್ತಿದ್ದಂತ ಸಂಜಯ್ ನನ್ನು ಪೊಲೀಸರು ಆಸ್ಪತ್ರಗೆ ಕರೆದೊಯ್ದು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/hc-orders-suspension-of-uber-rapido-bike-taxi-operations-within-6-weeks/ https://kannadanewsnow.com/kannada/state-government-orders-change-working-hours-of-government-offices-in-the-wake-of-scorching-heat/
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಉಬರ್ ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿಗಳು ಕಾರ್ಯಾಚರಣೆ ನಡೆಸುತ್ತಿವೆ. ಇಂತಹ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಆರು ವಾರಗಳಲ್ಲಿ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ. ಇಂದು ಉಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸಂಬಂಧ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಶ್ಯಾಮ್ ಪ್ರಸಾದ್ ಅವರನ್ನು ಒಳಗೊಂಡಂತ ನ್ಯಾಯಪೀಠವು ವಿಚಾರಣೆ ನಡೆಸಿತು. ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ನಿಯಮ ರೂಪಿಸಿಲ್ಲದ ಕಾರಣ ನಿಯಮಗಳಲ್ಲಿದೇ ಬೈಕ್ ಟ್ಯಾಕ್ಸ್ ಕಾರ್ಯಾಚರಣೆ ಮಾಡುವಂತಿಲ್ಲ ಎಂಬುದಾಗಿ ತಿಳಿಸಿತು. ಮೂರು ತಿಂಗಳಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು. ಅಲ್ಲದೇ ಆರು ವಾರಗಳಲ್ಲಿ ಉಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಹೈಕೋರ್ಟ್ ನ್ಯಾಯಪೀಠವು ಆದೇಶಿಸಿದೆ. ಈ ಮೂಲಕ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯಲ್ಲಿ ತೊಡಗಿದ್ದಂತ ಉಬರ್, ರ್ಯಾಪಿಡೋ ಗಳಿಗೆ ಬಿಗ್ ಶಾಕ್ ಅನ್ನು ಹೈಕೋರ್ಟ್ ನೀಡಿದೆ. https://kannadanewsnow.com/kannada/opposition-leader-r-ashoka-demands-withdrawal-of-suspension-order-of-mlas-or-else-there-will-be-a-strong-agitation/ https://kannadanewsnow.com/kannada/state-government-orders-change-working-hours-of-government-offices-in-the-wake-of-scorching-heat/
ಬೆಂಗಳೂರು: 18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯದೇ ಹೋದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ನೀಡಿದ ಮೀಸಲಾತಿಯನ್ನು ವಿರೋಧಿಸಿ ಹಾಗೂ ಹನಿಟ್ರ್ಯಾಪ್ ಪ್ರಕರಣ ಖಂಡಿಸಿ 18 ಶಾಸಕರು ಪ್ರತಿಭಟನೆ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಸಿಬಿಐ, ಎಸ್ಐಟಿ ಅಥವಾ ಯಾವುದೇ ತನಿಖೆ ಮಾಡುವುದಾಗಿ ಹೇಳಿದ್ದರೆ ಅಥವಾ ಸ್ಪಷ್ಟತೆ ನೀಡಿದ್ದರೆ ಪ್ರತಿಭಟನೆ ಕೈ ಬಿಡಬಹುದಿತ್ತು. ಅಮಾನತು ಸಮಯದಲ್ಲಿ ಸ್ಪೀಕರ್ ಯು.ಟಿ.ಖಾದರ್ ಸೌಜನ್ಯಕ್ಕೂ ಶಾಸಕರನ್ನು ಕರೆದು ಮಾತಾಡಿಲ್ಲ ಎಂದು ದೂರಿದರು. ಸ್ಪೀಕರ್ ಕಾಂಗ್ರೆಸ್ ಸರ್ಕಾರದ ಪರವಾಗಿ ನಿಂತಿದ್ದಾರೆ. ಈಗ ಸಚಿವ ಸಂಪುಟ ಪುನರ್ ರಚನೆಯಾಗಲು ಸಿದ್ಧತೆ ನಡೆದಿದೆ. ಇಂತಹ ಸಮಯದಲ್ಲಿ ವಿರೋಧ ಪಕ್ಷದ ಸದಸ್ಯರ ವಿರುದ್ಧ ಕ್ರಮ ಕೈಗೊಂಡರೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಸ್ಪೀಕರ್ ಯು.ಟಿ.ಖಾದರ್ ಅವರಿಗಿದೆ. ಸಭಾಧ್ಯಕ್ಷರ ಪೀಠ ಬಹಳ ಪವಿತ್ರವಾದುದು. ಸ್ಪೀಕರ್ ಯಾರು ಯಾರನ್ನೋ ಕರೆದುಕೊಂಡು ಬಂದು ಫೋಟೋ ತೆಗೆಸಿಕೊಳ್ಳುತ್ತಾರೆ. ಆದರೆ ಶಾಸಕರು…
ಬೆಂಗಳೂರು: ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದರು. https://twitter.com/siddaramaiah/status/1907373145008328929 ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು. ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಅಭಿನಂದಿಸಿದರು. ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದು ಕರೆ ನೀಡಿದರು. ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಕರೆ ನೀಡಿದರು. ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ…
ಬೆಂಗಳೂರು: ಕರ್ನಾಟಕ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಪೊಲೀಸ್ ಇಲಾಖೆ ಮಹತ್ತರವಾದ ಪಾತ್ರ ವಹಿಸುತ್ತದೆ. ಪೊಲೀಸ್ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಪ್ರಾಮಾಣಿಕತೆ, ದಕ್ಷತೆಯಿಂದ ಕೆಲಸ ಮಾಡಿದರೆ ಅಪರಾಧಗಳು ಕಡಿಮೆಯಾಗುತ್ತದೆ. ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು. https://twitter.com/siddaramaiah/status/1907359146967703722 ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಅಭಿನಂದಿಸಿದರು. ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ…
ಬೆಂಗಳೂರು: ಮುಡಾ ಹಗರಣ ಸಂಬಂಧ ಇಡಿ ಕೂಡ ಎಂಟ್ರಿಯಾಗಿತ್ತು. ಇದೀಗ ಇಡಿಯಿಂದ ಮುಡಾ ಪ್ರಕರಣದ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಮುಡಾ ಹಗರಣದ ಇತರೆ ಆರೋಪಿಗಳಿಗೂ ನಡುಕ ಶುರುವಾದಂತೆ ಆಗಿದೆ. ಈ ಸಂಬಂಧ ಹೈಕೋರ್ಟ್ ನ್ಯಾಯಪೀಠದಲ್ಲಿ ಇಂದು ಅರ್ಜಿಯ ವಿಚಾರಣೆ ನಡೆಸಲಾಯಿತು. ಡಿ.ಬಿ ನಟೇಶ್ ಅವರ ಹೇಳಿಕೆಯನ್ನು ಆಧರಿಸಿ ಹೈಕೋರ್ಟ್ ನ್ಯಾಯಪೀಠವು ಮುಡಾ ಹಗರಣ ಸಂಬಂಧ ಇಡಿ ತನಿಖೆಗೆ ಅನುಮತಿ ನೀಡಿದೆ. ಮುಡಾ ಪ್ರಕರಣದಲ್ಲಿ ಇಡಿ ತನಿಖೆಗೆ ಹೈಕೋರ್ಟ್ ಇತರೆ ಆರೋಪಿಗಳ ವಿರುದ್ಧದ ತನಿಖೆಗೆ ವಿಭಾಗೀಯ ಪೀಠವು ಅನುಮತಿ ನೀಡಿದೆ. ಹೀಗಾಗಿ ಮುಡಾ ಪ್ರಕರಣ ಈಗ ಮತ್ತೊಂದು ತಿರುವು ಪಡೆದಂತೆ ಆಗಿದೆ. ಇನ್ನೂ ಡಾ.ಡಿಬಿ ನಟೇಶ್ ವಿರುದ್ಧದ ಸಮನ್ಸ್ ರದ್ದು ಆದೇಶಕ್ಕೆ ತಡೆ ನೀಡಿಲ್ಲ. ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಕಾರ ವ್ಯಕ್ತಪಡಿಸಿದೆ. ಆದರೇ ಡಿ.ಬಿ ನಟೇಶ್ ಹೇಳಿಕೆ ಆಧರಿಸಿ ಇಡಿ ತನಿಖೆ ಮುದುವರೆಸಬಹುದು ಎಂಬುದಾಗಿ ಸಿಜೆ ಅಂಜಾರಿಯಾ, ನ್ಯಾಯಮೂರ್ತಿ ಅರವಿಂದ್ ಅವರಿದ್ದಂತ…