Author: kannadanewsnow09

ಬೆಂಗಳೂರು: ರಾಜ್ಯದ ಅನೇಕ ಜನರ ಕನಸು ನಗರದಲ್ಲಿ ಒಂದು ಸೈಟು ಖರೀದಿ ಮಾಡಬೇಕು. ಆ ಬಳಿಕ ಮನೆ ಕಟ್ಟಬೇಕು ಅನ್ನೋದು. ಈ ನಿಮ್ಮ ಕನಸಿಗೆ ರಾಜ್ಯ ಸರ್ಕಾರ ನನಸು ಮಾಡೋದಕ್ಕೆ ಮುಂದಾಗಿದೆ.  ರಾಜ್ಯ ಸರ್ಕಾರದಿಂದ ಜಮೀನು ಖರೀದಿಸಿ, ಲೇಔಟ್ ಮಾಡಿ, ಅವುಗಳನ್ನು ಮಾರಾಟಕ್ಕೆ ಮುಂದಾಗೋ ಸುಳಿವನ್ನು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ನಡೆದಿರುವ ಕಾಮಗಾರಿಗಳು, ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಈ ವೇಳೆ ಮಾತನಾಡಿದಂತ ಅವರು, ಖಾಸಗಿ ಲೇಔಟ್ ನಿರ್ಮಾಣ ಮಾಡಿರುವವರಿಗೆ ನಕ್ಷೆ ಮತ್ತು ಲೇಔಟ್ ಅನುಮೋದನೆ ನೀಡುವ ಬದಲು ಆಯ ಪ್ರಾಧಿಕಾರಗಳ ವತಿಯಿಂದ ನೀವೆ ಜಮೀನನ್ನು ಗುರುತಿಸಿ ಖರೀದಿ ಮಾಡಿ ಅಭಿವೃದ್ಧಿ ಪಡಿಸಿ ಜನ ಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ನೀಡಲು ಮುಂದಾಗಬೇಕೆಂದು ತಾಕೀತು ಮಾಡಿದರು. ಸಾಧ್ಯವಾದ ಮಟ್ಟಿಗೆ ಸರ್ಕಾರಿ ಜಮೀನುಗಳನ್ನು ಗುರುತಿಸಲು ಪ್ರಾಧಿಕಾರಗಳ ಆಯುಕ್ತರು ಮುಂದಾಗಬೇಕು. ಒಂದು…

Read More

ಬೆಂಗಳೂರು: ಫೋನ್‌ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಬಿಜೆಪಿ ಪ್ರಮುಖರೊಂದಿಗೆ ಸಭೆಯಲ್ಲಿ ಅವರು ಪಾಲ್ಗೊಂಡರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಫೋನ್‌ ಟ್ಯಾಪಿಂಗ್‌ ಬಗ್ಗೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಪೊಲೀಸ್‌ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರಿಂದ ತಿಳಿದುಕೊಂಡು ಹೇಳಿರಬಹುದು. ಫೋನ್‌ ಟ್ಯಾಪ್‌ ಮಾಡುವುದು ಅಕ್ರಮವಾಗಿದ್ದು, ಹಣ ಕೊಟ್ಟರೆ ಚೀನಾದಿಂದ ಉಪಕರಣ ಸಿಗುತ್ತದೆ. ರಾಜ್ಯಕ್ಕೆ ಇಂತಹ ಉಪಕರಣ ಎಷ್ಟು ಬಂದಿದೆ, ಎಲ್ಲೆಲ್ಲಿದೆ ಎಂದು ಪತ್ತೆ ಮಾಡಬೇಕು. ವಿರೋಧ ಪಕ್ಷಗಳ ನಾಯಕರ ಫೋನ್‌ ಟ್ಯಾಪ್‌ ಮಾಡಲಾಗುತ್ತಿದೆ ಎಂದು ನನಗೂ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆ ಮಾಡಿಸಲಿ ಎಂದು ಆಗ್ರಹಿಸಿದರು. ಫೋನ್‌ ಟ್ಯಾಪ್‌ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಪೊಲೀಸ್‌…

Read More

ನಿಮ್ಮ ಗಂಡನ ಜೀವನದಲ್ಲಿ ಏನಾದರೂ ಪರಿಹರಿಸಲಾಗದ ಸಮಸ್ಯೆ ಇದೆಯೇ? ಕೆಲಸದಲ್ಲಿ ಸಮಸ್ಯೆಗಳಿದ್ದರೆ, ವ್ಯವಹಾರದಲ್ಲಿ ಸಮಸ್ಯೆಗಳಿದ್ದರೆ, ಆರ್ಥಿಕ ಸಮಸ್ಯೆಗಳಿದ್ದರೆ, ಸಾಲದ ಸಮಸ್ಯೆಗಳಿದ್ದರೆ, ಶಾಂತಿಯುತವಾಗಿ ಬದುಕಲು ಸಾಧ್ಯವಾಗದಿದ್ದರೆ, ಅವರಿಗೆ ಈ ಪೂಜೆಯನ್ನು ಮಾಡಿ. ನಿಮ್ಮ ಪತಿಗೆ ಇರುವ ಒಂದು ದೊಡ್ಡ ಸಮಸ್ಯೆ ಕನಿಷ್ಠ 11 ದಿನಗಳಲ್ಲಿ ಗುಣವಾಗುತ್ತದೆ. ಅದು ಕಾರ್ಯರೂಪಕ್ಕೆ ಬರದಿದ್ದರೆ, ಸಮಸ್ಯೆಯನ್ನು ಪರಿಹರಿಸಲು ದೇವರು ನಿಮಗೆ ಕೆಲವು ರೀತಿಯ ಉಚಿತ ಸಮಯವನ್ನು ತೋರಿಸುತ್ತಾನೆ. ಗಂಡನ ಶ್ರೇಯೋಭಿವೃದ್ಧಿಗಾಗಿ ಹೆಂಡತಿ ಮಾಡಬೇಕಾದ ಆಧ್ಯಾತ್ಮಿಕ ಪೂಜೆ ಯಾವುದು? ಕಂಡುಹಿಡಿಯಲು ಪೋಸ್ಟ್ ಅನ್ನು ಓದುತ್ತಲೇ ಇರೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…

Read More

ಧಾರವಾಡ :  ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02 ನೇ ವರ್ಷದ ಡಿಪ್ಲೋಮಾ ಡಿ.ಹೆಚ್.ಟಿ.ಟಿ ಕೋರ್ಸ ಪ್ರವೇಶಕ್ಕಾಗಿ 2024-25 ನೇ ಸಾಲಿನ ಶೈಕ್ಷಣಿಕ ಅವಧಿಗೆ 32 ಪುರುಷ ಮತ್ತು ಮಹಿಳಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಮೇ 31, 2024 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ, ಆಯಾ ಜಿಲ್ಲೆಯ ಜಂಟಿ ನಿರ್ದೇಶಕರು, ಉಪನಿರ್ದೇಶಕರು, ಅಥವಾ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಅಥವಾ ಆನ್‍ಲೈನ್ ವೈಬ್‍ಸೈಟ್ https://khtigadag.ac.in/Lateralentryadmissionform.pdf ನಲ್ಲಿ ಹಾಗೂ ದೂರವಾಣಿ ಸಂ:08372-297221 ಮೊಬೈಲ್ ಸಂಖ್ಯೆ: 9449162822 ನ್ನು ಸಂಪರ್ಕಿಸಬಹುದು ಎಂದು ಧಾರವಾಡ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/delhi-high-court-denies-bail-to-manish-sisodia/ https://kannadanewsnow.com/kannada/cwma-directs-karnataka-to-release-2-5-tmc-of-water-to-tamil-nadu/

Read More

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣಗಳಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನಿರಾಕರಿಸಿದೆ. ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್ಎ) ಸೆಕ್ಷನ್ 3 ರ ಅಡಿಯಲ್ಲಿ ಪ್ರಾಸಿಕ್ಯೂಷನ್ ಅಕ್ರಮ ಹಣ ವರ್ಗಾವಣೆಯ ಪ್ರಕರಣವನ್ನು ಮೇಲ್ನೋಟಕ್ಕೆ ಮಾಡಿದೆ ಎಂದು ಗಮನಿಸಿದ ನ್ಯಾಯಮೂರ್ತಿ ಸ್ವರಣ ಕಾಂತಾ ಶರ್ಮಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು. ಸಿಸೋಡಿಯಾ ಅವರ ನಡವಳಿಕೆಯು “ಪ್ರಜಾಪ್ರಭುತ್ವದ ತತ್ವಗಳಿಗೆ ದೊಡ್ಡ ದ್ರೋಹವಾಗಿದೆ” ಎಂದು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ ಹೇಳಿದೆ. ಎಲೆಕ್ಟ್ರಾನಿಕ್ ಪುರಾವೆಗಳು ಸೇರಿದಂತೆ ನಿರ್ಣಾಯಕ ಪುರಾವೆಗಳನ್ನು ನಾಶಪಡಿಸುವ ಕೃತ್ಯಗಳಲ್ಲಿ ಸಿಸೋಡಿಯಾ ಭಾಗಿಯಾಗಿದ್ದಾರೆ ಎಂದು ನ್ಯಾಯಾಲಯ ಗಮನಿಸಿದೆ. ಈ ನಿಟ್ಟಿನಲ್ಲಿ, ಏಕಸದಸ್ಯ ಪೀಠವು ಹಾನಿಯಾಗಿದೆ ಎಂದು ಹೇಳಲಾದ ಎರಡು ಮೊಬೈಲ್ ಫೋನ್ ಗಳನ್ನು ಉಲ್ಲೇಖಿಸಿದೆ. ಸಿಸೋಡಿಯಾ ದೆಹಲಿ ಸರ್ಕಾರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದಾರೆ. ಅನೇಕ ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ.…

Read More

ಧಾರವಾಡ: ಬೆಳೆ ಹಾನಿ, ಬೆಳೆ ಪರಿಹಾರ ಜಮೆ ಅಗದೆ ಇರುವ ರೈತರು ತಾವು ಖಾತೆ ಹೊಂದಿರುವ ಬ್ಯಾಂಕಗೆ ಭೇಟಿ ನೀಡಿ, ಖಾತೆ ಚಾಲ್ತಿ ಇರುವ ಬಗ್ಗೆ, ಕೆವೈಸಿ ಅಪಡೆಟ್ ಆಗಿರುವ ಬಗ್ಗೆ ಮತ್ತು ಪ್ರೂಟ್ಸ್ ಸಂಖ್ಯೆ ಹೊಂದಿರುವ ಬಗ್ಗೆ ಪರಿಶೀಲಿಸಿ, ಖಾತರಿ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಕೌಂಟ್‍ಗಳನ್ನು ನಿಬರ್ಂಧಿಸಿರುವುದು ಅಥವಾ ಫ್ರೀಜ್ ಮಾಡಿರುವುದು ಹಾಗೂ ಯಾವ ರೈತರ ಖಾತೆಯನ್ನು ಮುಚ್ಚಲಾಗಿದೆಯೋ ಅಂತಹ ಫಲಾನುಭವಿಗಳು ಬ್ಯಾಂಕ್‍ಗೆ ಹೋಗಿ ಅಕೌಂಟ್ ರಿ ಓಪನ್ ಮಾಡಿಸಬೇಕು. ಫ್ರೂಟ್ಸ್ ಅಪ್‍ಡೇಟ್‍ನಲ್ಲಿ ಆಧಾರ್ ಹೆಸರು ಹೊಂದಿಕೆಯಾಗುತ್ತಿಲ್ಲ ಆ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ಅಪ್ಡೇಟ ಮಾಡಿಸಬೇಕು. ಆಧಾರ್ ಅನ್ನು ಬ್ಯಾಂಕ್‍ನೊಂದಿಗೆ ಸೀಡ್, ಖಾತೆಗೆ ಆಧಾರ್ ಮ್ಯಾಪ್, ಕುಸಿದ ಪಾವತಿ ಹಾಗೂ ಎನ್.ಪಿ.ಸಿ.ಐ ಸೀಡಿಂಗ್ ಸಮಸ್ಯೆ ಇರುವಂತ ಫಲಾನುಭವಿಗಳು ಬ್ಯಾಂಕ್‍ಗೆ ಹೋಗಿ ಎನ್.ಪಿ.ಸಿ.ಐ (ಓPಅI) ಮಾಡಿಸಬೇಕು ಎಂದು ಅವರು ತಿಳಿಸಿದ್ದಾರೆ. ಅಮಾನ್ಯ ಸ್ವೀಕೃತ ಐ.ಎಫ್.ಎಸ್.ಸಿ ಕೋಡ್ ಹೊಂದಿರುವ ಫಲಾನುಭವಿಗಳು…

Read More

ಬಳ್ಳಾರಿ: ಪ್ರಸಕ್ತ ಸಾಲಿನ ಸರ್ಕಾರಿ ಹಾಗೂ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ವಿವಿಧ ವೃತ್ತಿಗಳಿಗೆ ಪ್ರವೇಶಕ್ಕಾಗಿ ಮೆರಿಟ್-ಕಮ್-ರಿಸರ್ವೇಶನ್ ಆಧಾರದ ಮೇಲೆ ಬಳ್ಳಾರಿ ಜಿಲ್ಲೆಯಲ್ಲಿ ಬರುವ ಸಂಸ್ಥೆಗಳಲ್ಲಿ ಆನ್‍ಲೈನ್ ಮೂಲಕ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ. ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಹೈಕ(371ಜೆ) ಪ್ರಮಾಣಪತ್ರ ಮತ್ತು ಟಿಸಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಕನ್ನಡ ಹಾಗೂ ಗ್ರಾಮೀಣ ಪ್ರಮಾಣ ಪತ್ರಗಳು ಹಾಗೂ ಇನ್ನೀತರ ದಾಖಲೆಗಳೊಂದಿಗೆ ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ಅರ್ಹ ಆಸಕ್ತ ಅಭ್ಯರ್ಥಿಗಳು ಬಳ್ಳಾರಿಯ ಕಂಟೋನ್ಮೆಂಟ್ ಪ್ರದೇಶದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜೂ.03 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಟಾಟಾ ಉದ್ಯೋಗ ಯೋಜನೆಯಡಿ ಅನುಷ್ಠಾನಗೊಳಿಸಿರುವ 03 ಮತ್ತು 10 ದೀರ್ಘಾವಧಿಯ ವೃತ್ತಿಗಳಿಗೆ ಆನ್‍ಲೈನ್‍ನಲ್ಲ್ಲಿ ಮೊದಲ ಆದ್ಯತೆ ಮೇರೆಗೆ ನೇರವಾಗಿ ಪ್ರವೇಶ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬಳ್ಳಾರಿ ಹಾಗೂ ಹತ್ತಿರದ ಸರ್ಕಾರಿ ಐಟಿಐ ಗೆ ಭೇಟಿ ನೀಡಿ…

Read More

ಬಳ್ಳಾರಿ: ಸಿದ್ಧ ಉಡುಪು ಸಂಶೋಧನೆ ತರಬೇತಿ ವಿನ್ಯಾಸ ಮತ್ತು ಅಭಿವೃದ್ಧಿ ಕೇಂದ್ರ ಸಂಸ್ಥೆಯು 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಬಿಎಸ್ಸಿ (ಗಾರ್ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ) ವೃತ್ತಿಪರ ಪದವಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ. ವೃತ್ತಿಪರ ಪದವಿ ಕೋರ್ಸ್ ಪ್ರವೇಶಾತಿಗೆ ಯಾವುದೇ ದ್ವಿತೀಯ ಪಿಯುಸಿ (ಕಲೆ, ವಾಣಿಜ್ಯ, ವಿಜ್ಞಾನ, ಶಿಕ್ಷಣ ಹಾಗೂ ಯಾವುದೇ ಡಿಪ್ಲೋಮಾ) ವಿಭಾಗದಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಅರ್ಹರಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೆರುವು ಮೊದಲನೇಯ ರೈಲ್ವೇ ಗೇಟ್ ಹತ್ತಿರ, ಜಿಲ್ಲಾ ಕ್ರೀಡಾಂಗಣ ಮೈದಾನ ರಸ್ತೆಯ ಜಿಆರ್‍ಟಿಡಿಸಿ ಕಾಲೇಜಿನ ಪ್ರಾಂಶುಪಾಲರ ಕಚೇರಿ ಹಾಗೂ ಬೋಧಕ ಸಿಬ್ಬಂದಿಗಳ ಮೊ.9741264655, 9844862576, 9844474235, 8123126127 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೀಜ ಮತ್ತು ಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬೀಜ ಮತ್ತು ಗೊಬ್ಬರಕ್ಕಾಗಿ ಹಾವೇರಿಯಲ್ಲಿ ರೈತರು ಸಾಲುಗಟ್ಟಿ ನಿಂತಿದ್ದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿಗಳು ಕೃಷಿ ಸಚಿವ ಚೆಲುವರಾಯಸ್ವಾಮಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಆದ್ದರಿಂದ ರೈತರು ಬೀಜ, ಗೊಬ್ಬರಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಹೇಳಿದರು. ತಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಬೀಜ, ಗೊಬ್ಬರದ ದಾಸ್ತಾನು ಕುರಿತು ಮಾಹಿತಿ ಪಡೆದುಕೊಳ್ಳಿ ಎಂದು ಸಿಎಂ ತಿಳಿಸಿದರು. https://kannadanewsnow.com/kannada/get-ready-for-local-body-polls-kpcc-president-dk-shivakumar-to-party-workers-shivakumars-call/ https://kannadanewsnow.com/kannada/cwma-directs-karnataka-to-release-2-5-tmc-of-water-to-tamil-nadu/

Read More

ಬೆಂಗಳೂರು : “ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು, ಜನರ ಕೈಗೆ ಅಧಿಕಾರ ಹೋಗಲಿದೆ. ಹೀಗಾಗಿ ಪಕ್ಷದ ನಾಯಕರು, ಕಾರ್ಯಕರ್ತರು ಈ ಚುನಾವಣೆಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು” ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ವೇಳೆ ಅವರು ಹೇಳಿದ್ದಿಷ್ಟು: “ಪಂಡಿತ್ ನೆಹರು, ರಾಜಗೋಪಾಲಾಚಾರಿ, ಕೆಂಗಲ್ ಹನುಮಂತಯ್ಯ, ಬಿ.ಡಿ.ಜತ್ತಿ, ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಅನೇಕ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆ ಮೂಲಕ ರಾಷ್ಟ್ರಮಟ್ಟಕ್ಕೆ ಬೆಳೆದವರು. ಸಂಘಟನೆ ಬಲಗೊಳಿಸಬೇಕು. ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜಿಸಿ ಹೊಸದಾಗಿ ರಚಿಸುವ ಸಮಯ ಬಂದಿದೆ. ಮೊದಲು ಪಕ್ಷದ ಕೆಲಸ ಮಾಡಬೇಕು. ಕೇವಲ ಗುರುತಿನ ಚೀಟಿಗೋಸ್ಕರ ಬರುವವರು ಮನೆಯಲ್ಲಿಯೇ ಇರಿ. ಖಾದಿ ಬಟ್ಟೆ ಹಾಕಿಕೊಂಡು, ಕಾರು ಇಟ್ಟುಕೊಂಡು ಎಂಎಲ್ ಸಿ ಮಾಡಿ, ಅಧ್ಯಕ್ಷನನ್ನಾಗಿ ಮಾಡಿ ಎಂದರೆ ಅದು ಇಲ್ಲಿ ನಡೆಯುವುದಿಲ್ಲ. ಕೆಲಸ ಮಾಡುವವರಿಗೆ ಆದ್ಯತೆ. ನಿಮ್ಮ…

Read More