Subscribe to Updates
Get the latest creative news from FooBar about art, design and business.
Author: kannadanewsnow09
ಮೈಸೂರು : ಸರಗೂರು ತಾಲೂಕು ಬೆಣ್ಣೆಗೆರೆ (ಮುಳ್ಳೂರು) ಬಳಿ ನಿನ್ನೆ ನಡೆದ ಹುಲಿ ದಾಳಿ ತೀವ್ರ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಅವರು ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ, ನಿನ್ನೆ ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರ್ ಮೃತದೇಹಕ್ಕೆ ಅಂತಿಮ ನಮನ ಸಲ್ಲಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಲಿ ದೂರು ಬಂದಿದ್ದರೂ ಬೋನು ಇಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರೆ, ಎಚ್.ಡಿ. ಕೋಟೆ, ಸರಗೂರಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಲು ಅವಕಾಶ ಇದ್ದರೂ, ಮೈಸೂರಿಗೆ ಏಕೆ ತಂದರು ಎಂಬ ಬಗ್ಗೆ ತನಿಖೆ ಮಾಡಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು. ಮಾನವ ವನ್ಯಜೀವಿ ಸಂಘರ್ಷ ಇಂದು ನಿನ್ನೆಯದಲ್ಲ ಹಿಂದಿನಿಂದಲೂ ಇದೆ. ಅರಣ್ಯ ದಂಚಿನ ಗ್ರಾಮದ…
ಬೆಂಗಳೂರು: ರಾಜ್ಯದಲ್ಲಿನ ಮಕ್ಕಳ ಶಾಲಾ ಸಮಯದಲ್ಲಿ ಆಟದ ಅವಧಿಯನ್ನು ಕಡಿತಗೊಳಿಸದಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಡಾ.ಕೆ.ಟಿ ತಿಪ್ಪೇಸ್ವಾಮಿ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ರಾಜ್ಯದ ವಿವಿಧ ಭಾಗಗಳಲ್ಲಿ ನಡೆಸಿದ ಮಕ್ಕಳೊಂದಿಗೆ ಸಂವಾದ, ಶಾಲಾ ಭೇಟಿಯ ಸಮಯದಲ್ಲಿ 10ನೇ ತರಗತಿಯ ಮಕ್ಕಳು ವೇಳಾಪಟ್ಟಿಯಲ್ಲಿ ನಿಗದಿಗೊಳಿಸಿದ ಆಟದ ಅವಧಿಗಳನ್ನು ನಡೆಸದೆ ಇರುವ ಬಗ್ಗೆ ಆಯೋಗದ ಗಮನಕ್ಕೆ ತಂದಿರುತ್ತಾರೆ ಎಂದಿದ್ದಾರೆ. ಸ್ವತಃ ನಾನು ಹಲವು ಪ್ರೌಢಶಾಲೆಯ ಮಕ್ಕಳ ಜೊತೆಗೆ ಮಾತನಾಡಿದಾಗ ಇದನ್ನು ಗಮನಿಸಿರುತ್ತೇನೆ. ಆಟ, ಕಲೆ, ಸಂಗೀತದಂತಹ ಪತ್ಯೇತರ ಚಟುವಟಿಕೆಗಳು ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಾಸದ ಅವಿಭಾಜ್ಯ ಅಂಗ. ಇದನ್ನು ಮನಗಂಡು ವಿಶ್ವಸಂಸ್ಥೆಯು ಜೂನ್ 11 ಅನ್ನು ಪ್ರತೀ ವರ್ಷ ಅಂತರಾಷ್ಟ್ರೀಯ ಆಟದ ದಿನವೆಂದು ಗುರುತಿಸಿದೆ. 10ನೇ ತರಗತಿಯ…
ಧಾರವಾಡ: ರಾಜ್ಯದಲ್ಲಿ ಹತ್ತಿ ಪ್ರಮುಖ ಬೆಳೆಯಾಗಿದ್ದು, ಹತ್ತಿ ಕೃಷಿ ಉತ್ಪನ್ನಕ್ಕೆ ಪ್ರಸ್ತುತ ಮಾರುಕಟ್ಟೆ ದರವು ಕಡಿಮೆಯಾಗಿರುವುದರಿಂದ ಕೇಂದ್ರ ಸರ್ಕಾರವು 2025-26 ನೇ ಸಾಲಿಗೆ ಹತ್ತಿ ಕೃಷಿ ಉತ್ಪನ್ನಕ್ಕೆ ಬೆಂಬಲ ಬೆಲೆ ಯೋಜನೆಯಡಿ ಮಧ್ಯಮ ಎಳೆ ಹತ್ತಿಗೆ ರೂ.7,710 ಮತ್ತು ಉದ್ದನೆಯ ಎಳೆ ಹತ್ತಿಗೆ ರೂ.8,110 ದರವನ್ನು ಘೊಷಿಸಿದೆ. ರೈತರು ಇದರ ಪ್ರಯೋಜನ ಪಡೆಯಬೇಕೆಂದು ಜಿಲ್ಲಾ ಟಾಸ್ಕ್ ಪೋರ್ಸ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ರೈತರ ಆರ್ಥಿಕ ಹಿತದೃಷ್ಟಿಯಿಂದ ಭಾರತೀಯ ಹತ್ತಿ ನಿಗಮದಿಂದ ಬೆಂಬಲ ಬೆಲೆ ಯೋಜನೆಯಡಿ ಸುಗಮವಾಗಿ ರೈತರ ನೋಂದಣಿಯನ್ನು ಡಿಜಿಟಲ್ ಮೂಲಕ ಕೈಗೊಳ್ಳುವ ಹಾಗೂ ನಿಗದಿತ ಸಮಯಕ್ಕೆ ಮಾರಾಟ ಮಾಡಿದ ಹತ್ತಿಯ ಪ್ರಮಾಣಕ್ಕನುಗುಣವಾಗಿ ಡಿ.ಬಿ.ಟಿ ಮೂಲಕ ರೈತರಿಗೆ ಹಣ ಪಾವತಿಯಾಗಲು ಅನುಕೂಲವಾಗುವಂತೆ, ಕಪಾಸ್ ಕಿಸಾನ್ ಎಂಬ ಮೊಬೈಲ್ ಆ್ಯಪ್ ಸಿದ್ದಪಡಿಸಲಾಗಿದೆ. ಈ ಮೊಬೈಲ್ ಆ್ಯಪ್ ಮೂಲಕ ರೈತರು ಅಕ್ಟೋಬರ್ 31, 2025 ವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಧಾರವಾಡ…
ಸಾಮಾನ್ಯ ವ್ಯಕ್ತಿಯಾಗಿದ್ದ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದು ಬಂಗಾರಪ್ಪಾಜಿ: ಶಾಸಕ ಗೋಪಾಲಕೃಷ್ಣ ಬೇಳೂರು ಭಾವುಕ ನುಡಿ
ಶಿವಮೊಗ್ಗ: ಸಾಮಾನ್ಯ ವ್ಯಕ್ತಿಯಾಗಿದ್ದ ನನ್ನನ್ನು ನೀನು ಬೆಳೆಯಬೇಕು. ರಾಜಕೀಯಕ್ಕೆ ಬರಬೇಕು ಎಂಬುದಾಗಿ ಕರೆದು, ಸ್ಪೂರ್ತಿ ತುಂಬಿ, ಶಾಸಕನನ್ನಾಗಿ ಮಾಡೇ ಬಿಟ್ಟಿದ್ದು ಎಸ್.ಬಂಗಾರಪ್ಪನವರು. ನಾನೊಬ್ಬ ಅವರ ಶಿಷ್ಯನೆಂಬ ಹೆಮ್ಮೆ ನನಗಿದೆ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಭಾವುಕರಾಗಿ ನುಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಬಂಗಾರ ಧಾಮದಲ್ಲಿ ದಿವಂಗತ ಎಸ್.ಬಂಗಾರಪ್ಪ ಅವರ 93ನೇ ಹುಟ್ಟು ಹಬ್ಬದ ನಿಮಿತ್ತ ಆಯೋಜಿಸಿದ್ದಂತ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಂಗಾರಪ್ಪ ಅವರಿಂದ ಸ್ವಾಗತ ಕಂಡು ಅವರಿಗೆ ಕೈಮುಗಿಯುವಂತೆ ಮನಸ್ಸಾಯಿತು. ಇಂದು 93ನೇ ವರ್ಷದ ದಿವಂಗತ ಎಸ್.ಬಂಗಾರಪ್ಪ ಅವರ ಹುಟ್ಟಿದ ಹಬ್ಬ ಆಚರಿಸಲಾಗುತ್ತಿದೆ. ಬಂಗಾರ ಧಾಮವನ್ನು ಪ್ರವಾಸಿ ತಾಣವಾಗಿ ಘೋಷಿಸಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಧನ್ಯವಾದ ತಿಳಿಸಿದರು. 1 ಕೋಟಿಗೂ ಹೆಚ್ಚು ಜನರಿಗೆ ಪಂಪ್ ಸೆಟ್ ಬಳಕೆ ಮಾಡಿ, ಬೆಳಕು, ಬದುಕು ಕಂಡಿದ್ದಾರೆ ಎಂದರೇ ಅದು ಬಂಗಾರಪ್ಪನವರ ಕೊಡುಗೆ. ಶಿಕ್ಷಕರು ಹಳ್ಳಿಗರು ಪಟ್ಟಣದ ವ್ಯತ್ಯಾಸ ಕಂಡಿದ್ದು ಬಂಗಾರಪ್ಪ ಅವರ ಚಿಂತನೆಯಾಗಿದೆ. ಆ ಕಾಲದಲ್ಲೇ ಗ್ರಾಮೀಣ ಕೃಪಾಂಕದಲ್ಲಿ ಲಕ್ಷಾಂತರ…
ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಮತ್ತೆ ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದ ವಿವಿಧೆಡೆ ನಾಳೆ ಮತ್ತು ನಾಡಿದ್ದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಎಂದು ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸೋಮವಾರ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡದಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಗದಗ, ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲೂ ಭಾರೀ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಜಲಾಶಯವು ಸತತ ನಾಲ್ಕನೇ ಬಾರಿಗೆ ಕೋಡಿ ಬಿದ್ದಿದೆ. ಡ್ಯಾಂ ಭರ್ತಿಯಾಗಿ ಕೋಡಿಯಲ್ಲಿ ನೀರು ಹರಿದು ಹೋಗುತ್ತಿರುವುದನ್ನು ನೋಡುವುದಕ್ಕೆ ಜನರ ದಂಡೇ ಹರಿದು ಬರುತ್ತಿದೆ. ಆದರೇ ಹೀಗೆ ಕೋಡಿ ನೀರಿನಲ್ಲಿ ಆಡುತ್ತಿದ್ದಂತ ವೇಳೆಯಲ್ಲೇ ವ್ಯಕ್ತಿಯೊಬ್ಬ ಕೊಚ್ಚಿ ಹೋದ ಬಳಿಕ, ಪೊಲೀಸರು ರಕ್ಷಣೆ ಮಾಡಿರುವಂತ ಆಘಾತಕಾರಿ ಘಟನೆ ನಡೆದಿದೆ. ಇಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಿವಿ ಸಾಗರ ಜಲಾಶಯ ನಾಲ್ಕನೇ ಬಾರಿಗೆ ಕೋಡಿಬಿದ್ದಿದ್ದು, ಕೋಡಿ ವೀಕ್ಷಣೆಗೆ ಪ್ರವಾಸಿಗರು ಮುಗಿಬಿದ್ದಿದ್ದಾರೆ. ಭಾನುವಾರದ ಇಂದು ಕೋಡಿ ಜಾಗದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡುತ್ತಿರುವ ಸಂದರ್ಭದಲ್ಲಿ ಪ್ರವಾಸಿಗನೊಬ್ಬ ನೀರಿನಲ್ಲಿ ಇಳಿದು ಉಚ್ಛಾಟ ಮೆರೆದ ಹಿನ್ನೆಲೆಯಲ್ಲಿ ಹೊರಹರಿವಿನ ಕೊಡೆತಕ್ಕೆ ಕೊಚ್ಚಿ ಹೋಗಿರುವಂತ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಕೊಡಿ ಜಾಗದಲ್ಲಿ ಸಾರ್ವಜನಿಕ ಹೋಗದಂತೆ ಇದೀಗ ಸಮಾನ ಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಎಚ್ಚರ ವಹಿಸಿದ್ದಾರೆ. ಅಲ್ಲದೆ…
ಬೆಂಗಳೂರು: ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಇಂದು ಸನ್ ರೈಸ್ ಸರ್ಕಲ್ ನಲ್ಲಿ ಮತಗಳ್ಳತನ “ವೋಟ್ ಚೋರಿ” ವಿರುದ್ಧ ನಡೆಯುತ್ತಿರುವ “ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನ” ಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಕಲಿ ಮತದಾರರ ಲಿಸ್ಟ್ ಅನ್ನು ದಾಖಲೆ ಸಮೇತ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರೂ, ಇನ್ನು ಕ್ರಮ ಆಗಿಲ್ಲ. ನಕಲಿ ಮತಗಳ ಡಿಲೀಟ್ ಮಾಡುವ ಪ್ರಕ್ರಿಯೆಗೆ ಚುನಾವಣಾ ಆಯೋಗ ಮೀನ ಮೇಷ ಎಣಿಸುತ್ತಿರುವುದು ಏಕೆ ಎಂದು ಸಚಿವ ದಿನೇಶ್ ಗುಂಡೂರಾವ್ ಪ್ತಶ್ನಿಸಿದರು. ದೇಶದಲ್ಲಿ ಈಗಾಗಲೇ ಮತಗಳ್ಳತನ ವಿರುದ್ಧ ನಮ್ಮ ನಾಯಕರಾದ ರಾಹುಲ್ ಗಾಂಧಿರವರು ಸವಿಸ್ತಾರವಾಗಿ ದೇಶದ ಜನತೆಗೆ ದಾಖಲೆಯ ಸಮೇತವಾಗಿ ನಿರೂಪಿಸಿದ್ದಾರೆ. ಇದು ಇಡೀ ದೇಶವೇ ಆಂತಕಪಡುವ ಸ್ಥಿತಿಯಲ್ಲಿದೆ. ಸಂವಿಧಾನಿಕ ಪೀಠಗಳನ್ನು ಬಿಜೆಪಿ ತಮ್ಮ ವೋಟ್ ಬ್ಯಾಂಕ್ ಮಾಡಿಕೊಂಡಿರುವುದು ಅತ್ಯಂತ ಖಂಡನೀಯ. ಕರ್ನಾಟಕ ರಾಜ್ಯದ ಮಹದೇವಪುರ ಕ್ಷೇತ್ರದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ಸೃಷ್ಟಿಸಿ, ಅವರಿಂದ ಮತದಾನ ಪಡೆದುಕೊಂಡು ಅಧಿಕಾರಕ್ಕೆ ಬಂದ…
ನೆಲಮಂಗಲ: ಗ್ರಾಮ ಪಂಚಾಯ್ತಿ ಸದಸ್ಯನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿರುವಂತ ಘಟನೆ ನೆಲಮಂಗಲದ ಇಸ್ಲಾಂಪುರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಇಸ್ಲಾಂಪುರದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಸಲೀಂ ಮೇಲೆ ಗುಂಡಿನ ದಾಳಿಯನ್ನು ಅಪರಿಚಿತರು ನಡೆಸಿದ್ದಾರೆ. ಗ್ರಾಮ ಪಂಚಾಯ್ತಿ ಸದಸ್ಯ ಸಲೀಂ ಮನೆಯ ಬಳಿಯಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಂತ ಸಂದರ್ಭದಲ್ಲಿ ದಿಢೀರ್ ಅಪರಿಚಿತರು ಫೈರಿಂಗ್ ಮಾಡಿದ್ದಾರೆ. ಗುಂಡಿನ ದಾಳಿಯ ಬಳಿಕ ಅಪರಿಚಿತರು ಅಲ್ಲಿಂದ ಪರಾರಿಯಾಗಿದ್ದಾರೆ. ಅಪರಿಚಿತರ ಗುಂಡಿನ ದಾಳಿಯಿಂದಾಗಿ ಗ್ರಾಮ ಪಂಚಾಯ್ತಿ ಸದಸ್ಯ ಸಲೀಂ ಕೈ, ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾತ್ ಸಲೀಂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/two-arrested-for-murdering-woman-in-bengaluru-and-dumping-her-body-in-auto/ https://kannadanewsnow.com/kannada/big-news-big-shock-from-the-government-for-those-who-illegally-obtained-bpl-ration-cards/
ಬೆಂಗಳೂರು: ನಗರದಲ್ಲಿ ಮಹಿಳೆಯೊಬ್ಬರನ್ನು ಹತ್ಯೆಗೈದು ಆಟೋದಲ್ಲಿ ಶವ ಇರಿಸಿದ್ದಂತ ಘಟನೆ ನಿನ್ನೆ ನಡೆದಿತ್ತು. ಈ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದು, ನಿನ್ನೆ ತಿಲಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆ ಹತ್ಯೆಗೈದು ಶವವನ್ನು ಆಟೋದಲ್ಲಿ ಎಸೆದು ಹೋಗಿದ್ದಂತ ಘಟನೆ ಬೆಳಕಿಗೆ ಬಂದಿತ್ತು. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದಾಗ ಕೊಲೆ ಮಾಡಿದ್ದು ಗೊತ್ತಾಗಿತ್ತು ಎಂದರು. ಈ ಪ್ರಕರಣ ಸಂಬಂಧ ಕೇಸ್ ದಾಖಲಾದ ಬಳಿಕ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೊಲೆಗೈದು ಬೇರೆ ಜಿಲ್ಲೆಗೆ ಆರೋಪಿಗಳು ಹೋಗಿ ತಲೆ ಮರೆಸಿಕೊಂಡಿದ್ದರು. ಆರೋಪಿಗಳಲ್ಲಿ ಓರ್ವ ಕಾರ್ಪೆಂಟರ್, ಮತ್ತೋರ್ವ ಪ್ಲಂಬರ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದಾಗಿ ಮಾಹಿತಿ ನೀಡಿದ್ದಾರೆ. ಕೊಲೆಯಾದ ಮಹಿಳೆ ಬೇರೆಯೊಬ್ಬನ ಜೊತೆ ಪೋನ್ ನಲ್ಲಿ ಮಾತನಾಡುತ್ತಿದ್ದಳು. ಬೇರೆಯವರ ಜೊತೆಗೆ ಅಕ್ರಮ ಸಂಬಂಧ ಇರಬಹುದೆಂದು ಶಂಕಿಸಿ ಹತ್ಯೆ ಮಾಡಲಾಗಿದೆ. ತನಿಖೆಯಿಂದ ಮಹಿಳೆಯ ಕೊಲೆಗೆ…
ಬೆಂಗಳೂರು: “ಟನಲ್ ರಸ್ತೆ ಯೋಜನೆ ಅತ್ಯುತ್ತಮ ಆಲೋಚನೆ, ನಾವು ನಿಮ್ಮ ಬೆಂಬಲಿಕ್ಕಿದ್ದೇವೆ, ನೀವು ಮುಂದುವರೆಯಿರಿ”, “ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ…” ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿ, ದೂರದೃಷ್ಟಿ ಯೋಜನೆಗಳಿಗೆ ಸಾರ್ವಜನಿಕರು ಮುಕ್ತ ಕಂಠದಿಂದ ಹೊಗಳಿದ ಪರಿ ಇದು. ಬೆಂಗಳೂರು ನಡಿಗೆ ಅಂಗವಾಗಿ ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದದ ವೇಳೆ ಹಲವಾರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕಾರ್ಯವೈಖರಿಯನ್ನು ಕೊಂಡಾಡಿದರು. ನಾಗರಿಕರೊಬ್ಬರು, “ಸಾರ್, ನೀವು ಕೈಗೆತ್ತಿಕೊಂಡಿರುವ ಟನಲ್ ರಸ್ತೆ ಯೋಜನೆ ಚೆನ್ನಾಗಿದೆ. ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೊಸ ರಸ್ತೆಗಳು ಬೇಕು. ಟನಲ್ ಯೋಜನೆ ಸಾಕಾರಗೊಳಿಸಿ. ಇದೊಂದು ಅತ್ಯುತ್ತಮ ಯೋಜನೆ” ಎಂದು ಬೆಂಬಲ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಡಿಸಿಎಂ ಶಿವಕುಮಾರ್ ಅವರು, “ನಾನು ಸಹ ಸಾಕಷ್ಟು ಆಲೋಚನೆ ಮಾಡಿದೆ. ರಸ್ತೆ ಅಗಲೀಕರಣಕ್ಕಾಗಿ ಮನೆಗಳನ್ನು ಒಡೆಯಲು ಆಗುವುದಿಲ್ಲ. ಇದಕ್ಕೆ ದುಪ್ಪಟ್ಟು ಪರಿಹಾರ ನೀಡಬೇಕು. ಅದರ ಬದಲು ಸುರಂಗ…














