Author: kannadanewsnow09

ಕೆಎನ್ಎನ್ ಡಿಜಿಟಲ್ ಡೆಸ್ಕ್: ಅನೇಕ ಜನರು ಅಧಿಕ ರಕ್ತದೊತ್ತಡ ಅಥವಾ ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿರುತ್ತಾರೆ. ಕೆಲವರಿಗೆ ಇದು ಗೊತ್ತಾಗಿದ್ದರೇ, ಮತ್ತೆ ಕೆಲವರಿಗೆ ಗೊತ್ತಾಗದೇ ಇದ್ದು, ಕೆಲವೊಮ್ಮೆ ದಿಢೀರ್ ಅನಾರೋಗ್ಯಕ್ಕೂ ಕಾರಣವಾಗಬಹುದು. ಹಾಗಾದ್ರೇ ನೀವು ಕಡಿಮೆ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರೇ, ಪ್ರತಿದಿನ ಬೆಳಿಗ್ಗೆ ಹೀಗೆ ಮಾಡಿದ್ರೆ ನಿಮ್ಮ ಸಮಸ್ಯೆ ಕಂಟ್ರೋಲಿಗೆ ಬರಲಿದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಏನು ಮಾಡಬೇಕು ಅಂತ ಮುಂದೆ ಓದಿ.  ಅಧಿಕ ರಕ್ತದೊತ್ತಡವು ನಿಮ್ಮ ಅಪಧಮನಿಗಳು, ಹೃದಯ, ಮೆದುಳು, ಮೂತ್ರಪಿಂಡಗಳು, ಕಣ್ಣುಗಳು ಮತ್ತು ಹೆಚ್ಚಿನವು ಸೇರಿದಂತೆ ನಿಮ್ಮ ದೇಹದ ವಿವಿಧ ಭಾಗಗಳನ್ನು ಹಾನಿಗೊಳಿಸುತ್ತದೆ ಎಂದು ಮಾಯೋ ಕ್ಲಿನಿಕ್ ತಿಳಿಸಿದೆ. ಅದೃಷ್ಟವಶಾತ್, ನಿಮ್ಮ ರಕ್ತದೊತ್ತಡವನ್ನು ನೈಸರ್ಗಿಕವಾಗಿ ಕಡಿಮೆ ಮಾಡಲು ಸಹಾಯ ಮಾಡಲು ನೀವು ಮಾಡಬಹುದಾದ ಜೀವನಶೈಲಿ ಬದಲಾವಣೆಗಳಿವೆ. ಪಾರ್ಶ್ವವಾಯು ಅಥವಾ ಹೃದಯಾಘಾತದಂತಹ ಹೃದಯದ ಘಟನೆಗಳು ಸಂಭವಿಸುವ ಸಮಯವೂ ಬೆಳಿಗ್ಗೆ ಎಂದು ಡಾ.ಹಿಗ್ಗಿನ್ಸ್ ಹೇಳುತ್ತಾರೆ. ಕೆಲವೊಮ್ಮೆ, ಈ ಹೃದಯ ಸಮಸ್ಯೆಗಳು ಭಾಗಶಃ, ಬೆಳಿಗ್ಗೆಯ ರಕ್ತದೊತ್ತಡದಿಂದ ಉಂಟಾಗಬಹುದು. ಇಲ್ಲಿ, ರಕ್ತದೊತ್ತಡವನ್ನು ಕಡಿಮೆ ಮಾಡಲು ಉತ್ತಮ ಬೆಳಿಗ್ಗೆ…

Read More

ನವದೆಹಲಿ: ಭಾರತದ ಆರ್ಥಿಕತೆ, ಪ್ರಜಾಪ್ರಭುತ್ವ, ಸಮಾಜವನ್ನು ದುರ್ಬಲಗೊಳಿಸಲು ಜಾಗತಿಕವಾಗಿ ಪಿತೂರಿಗಳು ನಡೆಯುತ್ತಿವೆ. ಕಾಂಗ್ರೆಸ್, ಅದರ ಆಪ್ತರು ಈ ಆಟದ ಭಾಗವಾಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಶ್ಲಾಘಿಸಿದ್ದಾರೆ. “ಜಹಾ ದೂಧ್-ದಹಿ ಕಾ ಖಾನಾ, ವೈಸಾ ಹೈ ಅಪ್ನಾ ಹರಿಯಾಣ”. ಹರಿಯಾಣದ ಜನರು ಅದ್ಭುತಗಳನ್ನು ಮಾಡಿದ್ದಾರೆ. ಇಂದು ನವರಾತ್ರಿಯ ಆರನೇ ದಿನ, ಮಾ ಕಾತ್ಯಾಯಿನಿ ದಿನ. ತಾಯಿ ಕಾತ್ಯಾಯಿನಿ ಕೈಯಲ್ಲಿ ಕಮಲವನ್ನು ಹಿಡಿದು ಸಿಂಹದ ಮೇಲೆ ಕುಳಿತಿದ್ದಾಳೆ. ಅವಳು ನಮ್ಮೆಲ್ಲರನ್ನೂ ಆಶೀರ್ವದಿಸುತ್ತಿದ್ದಾಳೆ. ಇಂತಹ ಪವಿತ್ರ ದಿನದಂದು, ಹರಿಯಾಣದಲ್ಲಿ ಮೂರನೇ ಬಾರಿಗೆ ಕಮಲ ಅರಳಿದೆ” ಎಂದು ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮೋದಿ ಹೇಳಿದರು. “ಹರಿಯಾಣದಲ್ಲಿ ಸುಳ್ಳುಗಳ ಸರಮಾಲೆಯ ಮೇಲೆ ‘ವಿಕಾಸ್’ ಖಾತರಿ ಮೇಲುಗೈ ಸಾಧಿಸಿದೆ, ರಾಜ್ಯದಲ್ಲಿ ಮೂರನೇ ಅವಧಿಗೆ ಸರ್ಕಾರ ಆಯ್ಕೆಯಾಗುತ್ತಿದ್ದಂತೆ ಜನರು ಹೊಸ ಇತಿಹಾಸವನ್ನು…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ ಎನ್ನುವಂತೆ, ಭಾರತೀಯ ರೈಲ್ವೆ 150 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ನವರಾತ್ರಿ ವಿಶೇಷ ಥಾಲಿ ಊಟ ಪ್ರಾರಂಭಿಸಿದೆ. ಭಾರತೀಯ ರೈಲ್ವೆ 150 ಕ್ಕೂ ಹೆಚ್ಚು ರೈಲ್ವೆ ನಿಲ್ದಾಣಗಳಲ್ಲಿ ನವರಾತ್ರಿ ವ್ರತ ವಿಶೇಷ ಥಾಲಿ ಊಟ ಪ್ರಾರಂಭಿಸಿದೆ, ಇದು ನವರಾತ್ರಿ ಹಬ್ಬದ ಋತುವಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರಾಮ ಮತ್ತು ಅನುಕೂಲವನ್ನು ಒದಗಿಸುತ್ತದೆ. ಪ್ರಯಾಣಿಕರು ಈ ರುಚಿಕರವಾದ ನವರಾತ್ರಿ ವ್ರತ ವಿಶೇಷ ಥಾಲಿಯನ್ನು ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್ಸೈಟ್ ಮೂಲಕ ಆನ್ ಲೈನ್ ಮೂಲಕ ಆರ್ಡರ್ ಮಾಡಬಹುದು. ಪ್ರಯಾಣಿಸುವಾಗ, ನವರಾತ್ರಿಯನ್ನು ಆಚರಿಸುವ ಪ್ರಯಾಣಿಕರು ಆಹಾರ ಮತ್ತು ಪಾನೀಯಗಳಿಗೆ ಸಂಬಂಧಿಸಿದಂತೆ ವಿವಿಧ ಸವಾಲುಗಳನ್ನು ಎದುರಿಸುತ್ತಾರೆ. ಈ ಸಮಸ್ಯೆಗಳನ್ನು ಪರಿಹರಿಸಲು, ಭಾರತೀಯ ರೈಲ್ವೆ ಮುಂಬೈ ಸೆಂಟ್ರಲ್, ದೆಹಲಿ ಜಂಕ್ಷನ್, ಸೂರತ್, ಜೈಪುರ, ಲಕ್ನೋ, ಪಾಟ್ನಾ ಜಂಕ್ಷನ್, ಲುಧಿಯಾನ, ದುರ್ಗ್, ಚೆನ್ನೈ ಸೆಂಟ್ರಲ್, ಸಿಕಂದರಾಬಾದ್, ಅಮರಾವತಿ, ಹೈದರಾಬಾದ್, ತಿರುಪತಿ, ಜಲಂಧರ್ ಸಿಟಿ, ಉದಯಪುರ ಸಿಟಿ, ಬೆಂಗಳೂರು ಕಂಟೋನ್ಮೆಂಟ್, ನವದೆಹಲಿ, ಥಾಣೆ, ಪುಣೆ, ಮಂಗಳೂರು ಸೆಂಟ್ರಲ್…

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜೀವನ ಪೂರ್ವ ಪಶ್ಚಿಮದ ತತ್ವಜ್ಞಾನದ ಸಂಗಮವಾಗಿದೆ. ಮೋದಿಯವರ ಆಡಳಿತದ ಕಾಲದಲ್ಲಿ ನಾವೆಲ್ಲ ಇರುವುದು ನಮ್ಮ ಸೌಭಾಗ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ರಾಜ್ಯ ಬಿಜೆಪಿಯ ಆರ್ಥಿಕ ಪ್ರಕೋಷ್ಠ ಏರ್ಪಡಿಸಿದ್ದ ಕೇಂದ್ರದ ಮಾನವ ಸಂಪನ್ಮೂಲ ಸಾಮರ್ಥ್ಯ ನಿರ್ಮಾಣ ಆಯೋಗದ ಸದಸ್ಯ ಆರ್. ಬಾಲಸುಬ್ರಮಣ್ಯಂ ಅವರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಕುರಿತು ಬರೆದಿರುವ ಪವರ್ ವಿಥಿನ್ ಪುಸ್ತಕ ಪರಿಚಯ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುಸ್ತಕ ಬಿಡುಗಡೆ ಮಾಡಿ, ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ವ್ಯಕ್ತಿ ಮನದಾಳದಲ್ಲಿ ಅವರ ಬಗ್ಗೆ ವಿಶೇಷ ಭಾವನೆ ಇಟ್ಟುಕೊಳ್ಳಲೇಬೇಕು. ಚರಿಸ್ಮಾ ಇಸ್ ನಾಟ ಎ ಕಾಜ್ ಇಟ್ಸ್ ಕಾನ್ಸಿಕ್ವೆನ್ಸ್ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರೆ ಅವರು ನಿಮ್ಮ ಜೀವನದ ಭಾಗವಾಗುತ್ತಾರೆ. ಬಾಲಸುಬ್ರಮಣ್ಯಂ ಅವರು ಮೋದಿಯವರನ್ನು ಪ್ರಧಾನಿಯಾಗಿ ಬರೆದಿಲ್ಲ. ಅವರನ್ನು ಒಬ್ಬ ವ್ಯಕ್ತಿಯಾಗಿ ಬರೆದಿದ್ದಾರೆ ಎಂದರು. ಯಾವುದೇ ವ್ಯಕ್ತಿ ಒಂದು…

Read More

ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಾವಲು ಚೌಡಮ್ಮ ದೇವಸ್ಥಾನದಲ್ಲಿ ರಂಗವ್ವನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಸೋಮಗುದ್ದು ಗ್ರಾಮದ ಎಂ.ಲಿಂಗರಾಜು ಎಂಬುವವರ ವಿರುದ್ದ ಬಾಲ್ಯ ವಿವಾಹ ಪ್ರಕರಣ ದಾಖಲಾಗಿದೆ. ಬಾಲ್ಯ ವಿವಾಹ ಕುರಿತು ಮಾಹಿತಿ ತಿಳಿದು ಬಂದ ಕೂಡಲೇ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಂ.ಲಿಂಗರಾಜು ವಿರುದ್ದ ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಅ.4 ರಂದು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ. ಅ.15 ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಆಚರಿಸುವ ಸಂಬಂಧ ಅ.15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳು ಸಭೆಯ ಅಧ್ಯಕ್ಷತೆ ವಹಿಸುವರು. ಸಮಾಜದ ಮುಖಂಡರು, ಸಾರ್ವಜನಿಕರು, ಜಿಲ್ಲಾ ಮಟ್ಟದ…

Read More

ದಾವಣಗೆರೆ : ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಾಫಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೊಲಿಗೆ ತರಬೇತಿಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿ 18 ರಿಂದ 40 ವರ್ಷದೊಳಗಿರಬೇಕು. ವಿಡಿಯೋಗ್ರಾಫಿ ತರಬೇತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣ, ಅನುತ್ತೀರ್ಣರಾಗಿದ್ದು 18 ರಿಂದ 40 ವರ್ಷ ವಯೋಮಾನದವರಾಗಿರಬೇಕು. ಅರ್ಜಿಯನ್ನು ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 25 ರೊಳಗೆ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08192-237480 ದೂರವಾಣಿಗೆ ಸಂಪರ್ಕಿಸಲು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್‍ಗಳನ್ನು ತೆಗೆದು ಉಚಿತವಾಗಿ ಹೊಸ ಡಿಜಿಟಲ್ ಮೀಟರ್‍ಗಳನ್ನು ಅಳವಡಿಸಲಾಗುತ್ತಿದ್ದು ಬೆಸ್ಕಾಂ ಗ್ರಾಹಕರ ಬಳಿ ಹಳೆ ಮಾಪಕ ಎಲೆಕ್ಟ್ರೋ ಮೆಕ್ಯಾನಿಲ್ ಬದಲಾಗಿ ಎಲೆಕ್ಟ್ರೋ ಸ್ಟ್ಯಾಟಿಕ್ ಡಿಜಿಟಲ್ ಮಾಪಕ ಅಳವಡಿಸಿಕೊಳ್ಳಲು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ. https://kannadanewsnow.com/kannada/breaking-haryana-assembly-election-congress-candidate-vinesh-pogat-wins-big-vinesh-phogat/ https://kannadanewsnow.com/kannada/dont-invite-such-illiterates-again-pakistanis-slam-govt-for-honouring-zakir-naik/

Read More

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜಾಗುವ ಕಾವೇರಿ ಐದನೇ ಹಂತದ ಯೋಜನೆ ಇದೇ ಅ.16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಂದ ಲೋಕಾರ್ಪಣೆಗೊಳ್ಳಲಿದೆ. ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರಿಗೆ ಹೊಸದಾಗಿ ಸೇರ್ಪಡೆಯಾದ ಹಳ್ಳಿಗಳಿಗೆ ಸಮರ್ಪಕ ನೀರನ್ನು ಒದಗಿಸುವ ಹಾಗೂ ಬೆಂಗಳೂರಿನ ದೂರದೃಷ್ಟಿಯನ್ನಿಟ್ಟುಕೊಂಡು ಮಹತ್ವದ ನಿರ್ಧಾರವನ್ನು 2014ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಈ ಯೋಜನೆ ರೂಪಿಸಿ ಚಾಲನೆ ನೀಡಿದ್ದನ್ನು ಸ್ಮರಿಸಬಹುದು. ಈ ಯೋಜನೆಯಿಂದ ಬೆಂಗಳೂರು ನಗರಕ್ಕೆ ಹೆಚ್ಚುವರಿಯಾಗಿ 775 ಎಂಎಲ್ಡಿ ನೀರು ಪೂರೈಕೆಯಾಗಲಿದ್ದು, ಮೂಲೆಮೂಲೆಗೂ ಕಾವೇರಿ ನೀರು ಸರಬರಾಜಾಗಲಿದೆ. ಇದರಿಂದ ಹೆಚ್ಚುವರಿಯಾಗಿ 50ಲಕ್ಷ ಜನರು ಇದರ ಸದುಪಯೋಗಪಡೆದುಕೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳು,ಜಲಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರಿಂದ ಕಾರ್ಯಕ್ರಮದ ಆಹ್ವಾನಪತ್ರಿಕೆಯನ್ನು ಇಂದು ಬೆಳಗ್ಗೆ…

Read More

ಬೆಂಗಳೂರು: ಸಿದ್ಧರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎನ್ನುತ್ತಲೇ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅವರು ಐದು ವರ್ಷ ಇರ್ತಾರೋ ಮೂರು ವರ್ಷ ಇರ್ತಾರೋ ಗೊತ್ತಿಲ್ಲ ಎಂಬುದಾಗಿ ಹೇಳಿರುವಂತ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನು ಸೃಷ್ಠಿಸಿದೆ. ಮುಡಾ ಕೇಸಲ್ಲಿ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಹಲವು ರಾಜಕೀಯ ನಾಯಕರು ಹೇಳುತ್ತಿದ್ದಾರೆ. ಈ ಬೆನ್ನಲ್ಲೇ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ನಿವಾಸ ಈಗ ಕೇಂದ್ರ ಬಿಂದುವಾಗಿದೆ. ಅವರನ್ನು ಕಾಂಗ್ರೆಸ್ ನ ಪ್ರಮುಖ ನಾಯಕರು ಭೇಟಿಯಾಗುತ್ತಿದ್ದಾರೆ. ಇಂದು ಮೈಸೂರಿನಲ್ಲಿ ಸಚಿವ ಮಹದೇವಪ್ಪ, ಶಾಸಕ ಹರೀಶ್ ಗೌಡ, ರವಿ ಶಂಕರ್ ಸೇರಿದಂತೆ ಹಲವರು ಭೇಟಿ ಮಾಡಿದ್ದು, ತೀವ್ರ ಕುತೂಹಲವನ್ನೇ ಉಂಟು ಮಾಡಿದೆ. ಸಚಿವ ಜಾರಕಿಹೊಳಿ ಸಿದ್ಧರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎಂದು ಹೇಳುತ್ತಲೇ, ಅವರು ಐದು ವರ್ಷ ಇರ್ತಾರೋ, ಮೂರು ವರ್ಷ ಇರ್ತಾರೋ ಗೊತ್ತಿಲ್ಲ ಎಂಬುದಾಗಿ ಹೇಳಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲ ಸೃಷ್ಠಿಸಿದೆ. ಅಲ್ಲದೇ ಸಿಎಂ ಸಿದ್ಧರಾಮಯ್ಯ ಮುಡಾ ಕೇಸಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಿದ್ದಾರಾ ಎಂಬ…

Read More

ಮಡಿಕೇರಿ :-ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್‍ನ ವಿದ್ಯುತ್ ಮಾರ್ಗದಲ್ಲಿ ಅಕ್ಟೋಬರ್, 09 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ತುಲಾ ಸಂಕ್ರಮಣ ಹಬ್ಬದ ಪ್ರಯುಕ್ತ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ತಾಳತ್ತ್ಮನೆ, ಬೆಟ್ಟಗೇರಿ, ಚೇರಂಬಾಣೆ, ಅಪ್ಪಂಗಳ, ಕೋಪಟ್ಟಿ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಚೇರಂಗಾಲ, ಕೋರಂಗಾಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. https://kannadanewsnow.com/kannada/farmers-note-applications-invited-for-availing-various-benefits-under-krishi-bhagya-scheme/ https://kannadanewsnow.com/kannada/breaking-haryana-assembly-election-congress-candidate-vinesh-pogat-wins-big-vinesh-phogat/ https://kannadanewsnow.com/kannada/dont-invite-such-illiterates-again-pakistanis-slam-govt-for-honouring-zakir-naik/

Read More

ಧಾರವಾಡ ; 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪಸೆಟ್ (ಗರಿಷ್ಠ 10 ಎಚ್‍ಪಿ), ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ಅರ್ಹ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 20, 2024 ರೊಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/bbmp-to-release-draft-selection-list-for-12692-pourakarmika-posts-tomorrow/ https://kannadanewsnow.com/kannada/dont-invite-such-illiterates-again-pakistanis-slam-govt-for-honouring-zakir-naik/

Read More