Author: kannadanewsnow09

ಮಗ ಮಾತ್ರ ಮಾತು ಕೇಳುವುದಿಲ್ಲವೇ? ಮಾತು ಕೇಳದ ಹೆಣ್ಣು ಮಕ್ಕಳೂ ಇದ್ದಾರೆ. ಏನ್ ಮಾಡೋದು. ಈಗಿನ ಕಾಲದಲ್ಲಿ ಮಕ್ಕಳಿರುವವರ ವಿರುದ್ಧ ಮಾತನಾಡುವುದು ಫ್ಯಾಶನ್ ಆಗಿಬಿಟ್ಟಿದೆ. ನಿಮ್ಮ ಮನೆಯಲ್ಲಿ ನಿಮ್ಮ ಮಗ ಅಥವಾ ಮಗಳು ಯಾರೇ ಇರಲಿ, ನೀವು ಈ ಪರಿಹಾರವನ್ನು ಮಾಡಬಹುದು. ನೀವು ಈ ದೇವಾಲಯಕ್ಕೆ ಭೇಟಿ ನೀಡಬಹುದು. ಇದೇ ವೇಳೆ ನನ್ನ ಮಗು ದಾರಿ ತಪ್ಪುತ್ತದೆ. ಅಡ್ಮಿಷನ್ ಚೆನ್ನಾಗಿಲ್ಲ, ಅಭ್ಯಾಸ ಚೆನ್ನಾಗಿಲ್ಲ, ಓದುವುದರಲ್ಲಿ ಆಸಕ್ತಿ ಇಲ್ಲ, ಅಪ್ಪ-ಅಮ್ಮ ಹೇಳುವ ಒಳ್ಳೆ ಮಾತು ಕೇಳೋಕೆ ಮನಸ್ಸಿಲ್ಲ, ಈ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಹೊಂದಲು ಇಲ್ಲಿದೆ ಸರಳ ಆಧ್ಯಾತ್ಮಿಕ ಉಪಾಸನೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…

Read More

ಬೆಂಗಳೂರು: ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ, ಆರೋಗ್ಯ ಇಲಾಖೆಯಿಂದ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದಿಸಿದೆ. ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ವಿಶ್ವಾಸವಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿಯಷ್ಟು ಉಳಿತಾಯವಾಗಲಿದೆ. 108 ಅಧೀನದಲ್ಲಿರುವ ಒಟ್ಟು 715 ಅಂಬ್ಯುಲೆನ್ಸ್ ನಿರ್ವಹಣೆಗಾಗಿ ರಾಜ್ಯ ಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲಾಗುವುದು. ಇದಕ್ಕಾಗಿ 112 NG -ERSS ತಂತ್ರಾಂಶ ಬಳಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಪ್ರತಿ ಜಿಲ್ಲೆಗಳಲ್ಲಿಯೂ 108 ಕಂಟ್ರೋಲ್ ಸೆಂಟರ್ ಗಳು ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಿರ್ವಹಣೆಯ ಜವಾಬ್ದಾರಿ ವಹಿಸಲಾಗಿದೆ. ಅಂಬ್ಯುಲೆನ್ಸ್ ಗಳಿಗೆ ಚಾಲಕರು ಹಾಗೂ ನರ್ಸ್ ಸಿಬ್ಬಂದಿಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಹೊರಗುತ್ತಿಗೆಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಆರಂಭದಲ್ಲಿ ಚಾಮರಾಜ ನಗರ ಜಿಲ್ಲೆಯಲ್ಲಿ ನಿರ್ವಹಣೆ ಪ್ರಾರಂಭಿಸಲಾಗುತ್ತಿದೆ. ನಂತರದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರ್ವಹಣೆ ಕಾರ್ಯ ಆರಂಭವಾಗಲಿದೆ. ಅಲ್ಲದೇ 108 ಹೊರತಾಗಿ ರಾಜ್ಯದಲ್ಲಿರುವ 1000 ಕ್ಕೂ ಹೆಚ್ಚು ಸ್ಟೇಟ್ ಅಂಬ್ಯುಲೆನ್ಸ್ ಗಳನ್ನು ಕೂಡಾ…

Read More

ಬೆಂಗಳೂರು: ರಾಜ್ಯದ ಯಜಮಾನಿ ಮಹಿಳೆಯರಿಗೆ ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ( Gruhalakshmi Scheme ) ಜಾರಿಗೊಳಿಸಿದೆ. ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು 2000 ಹಣವನ್ನು ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಒಂದು ವೇಳೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೆಂದರೇ ಇದೇ ಕಾರಣವಂತೆ. ಅದಕ್ಕಾಗಿ ನೀವು ಈ ಕೆಲಸ ಮಾಡಿ, ತಪ್ಪದೇ ಬರುತ್ತೆ ಎಂಬುದು ಇಲಾಖೆಯ ಮಾಹಿತಿಯಾಗಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ ಎಂದು ತಿಳಿಸಿದೆ. ರಾಜ್ಯದ ಕೆಲ ಜಿಲ್ಲೆಯ ಯಜಮಾನಿ ಮಹಿಳೆಯರಿಗೆ NPCI Failure/ E-KYC Failure ಕಾರಣದಿಂದ…

Read More

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ NHM ಅಡಿಯಲ್ಲಿ ನೇಮಕಗೊಂಡ ಆಶಾ ಮೆಂಟರ್ಸ್ ಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2007-08ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ತರಬೇತಿಗಾಗಿ ನೇಮಕಗೊಂಡಂತ ಆಶಾ ಮೆಂಟರ್ಸ್ ಗಳನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನರವರ ಕಡತದಲ್ಲಿ 2007-08ನೇ ಸಾಲಿನಲ್ಲಿ NHM ಅಡಿಯಲ್ಲಿ ನೇಮಕಗೊಂಡ ಗುತ್ತಿಗೆ ನರ್ಸಿಂಗ್ ಸಿಬ್ಬಂದಿಯನ್ನು ಹೊಸದಾಗಿ ಸೇರ್ಪಡೆಗೊಂಡ ಆಶಾಕಾರ್ಯಕರ್ತೆಯರಿಗೆ ತರಬೇತಿ ನೀಡಲು TOT ಆಗಿ ನಿಯೋಜನೆ ಮಾಡಲಾಗಿದ್ದು, ಅನಂತರದಲ್ಲಿ ಅವರುಗಳನ್ನು District Community Mobilizer / Block Community Mobilizer (ASHA Mentor) ಎಂದು ಮರುನಾಮಕರಣ ಮಾಡಲಾಗಿರುತ್ತದೆ. ಸದರಿಯವರು ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡುವುದು, ಅವರುಗಳ ಮೇಲ್ವಿಚಾರಣೆ ಮಾಡುವುದು, ಆಶಾ ನಿಧಿ ಪೋರ್ಟಲ್ ಅನ್ನು ನಿರ್ವಹಿಸುವುದು ಹಾಗೂ ಪ್ರೋತ್ಸಾಹಧನದ ಪಾವತಿ ಪ್ರಕ್ರಿಯೆಯಂತಹ ಸಕಾಲಿಕ ನಿರ್ವಹಣೆ ಕಾರ್ಯಗಳನ್ನು ನಿರ್ವಹಿಸುತ್ತಿರುತ್ತಾರೆ ಎಂದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 195…

Read More

ಬಳ್ಳಾರಿ: ಜಿಲ್ಲೆಯಲ್ಲಿ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಖರೀದಿ ಮಾಡಲು ಖರೀದಿ ಕೇಂದ್ರಗಳನ್ನು ಪ್ರಾರಂಭ ಮಾಡಲಾಗಿದ್ದು, ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈಗಾಗಲೇ ನೋಂದಣಿ ಮಾಡಿದ ರೈತರು ನೋಂದಾಯಿತ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಜೂ.30 ರೊಳಗಾಗಿ ಜೋಳ ಮಾರಾಟ ಮಾಡಬೇಕು. ಜೋಳದ ಖರೀದಿ ಅವಧಿಯು ಜೂ.30 ಕ್ಕೆ ಕೊನೆ ದಿನವಾಗಿದ್ದು, ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಜೋಳ ಮಾರಾಟ ಮಾಡಲು ನೋಂದಣಿ ಮಾಡಿದ ರೈತರು ಸಂಬAಧಪಟ್ಟ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಗ್ರೇನ್ ವೋಚರ್ ಪಡೆದುಕೊಳ್ಳಬೇಕು. ಖರೀದಿಯಾದ ಜೋಳವನ್ನು ಜೋಳ ಉಪಯೋಗಿಸುವ ಜಿಲ್ಲೆಗಳಿಗೆ ಪಡಿತರ ವಿತರಣೆಗೆ ಹಂಚಿಕೆ ನೀಡಲಾಗುವುದು. ಈ ನಿಟ್ಟಿನಲ್ಲಿ ಶೀಘ್ರವಾಗಿ ನೋಂದಾಯಿತ ರೈತರು ಜೋಳವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಸರ್ಕಾರದ ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ನಂತರ ಖರೀದಿ ಅವಧಿಗೆ ಅವಕಾಶವಿರುವುದಿಲ್ಲ. ಬೆಂಬಲ ಬೆಲೆ ಯೋಜನೆ ಬಗ್ಗೆ ರೈತರಿಗೆ ಯಾವುದೇ ಸಮಸ್ಯೆಗಳಿದ್ದರೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬಳ್ಳಾರಿಯ ಶಾಖಾ…

Read More

ಬೆಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆಗಳ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಮುಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ಹೋಬಳಿ ಮಟ್ಟದ ಮುಂಗಾರು ಹಂಗಾಮಿನ ಬೆಳೆಗಳಾದ ಜೋಳ, ರಾಗಿ, ಸಜ್ಜೆ, ನವಣೆ, ತೊಗರಿ, ಹುರುಳಿ, ಸೂರ್ಯಕಾಂತಿ, ಎಳ್ಳು, ಹತ್ತಿ, ನೆಲಗಡಲೆ, ಈರುಳ್ಳಿ, ಭತ್ತ, ಕೆಂಪು ಮೆಣಸಿನಕಾಯಿ ಜಿಲ್ಲೆಯ ಬೆಳೆಗಳಾಗಿವೆ. ವಿವಿಧ ಬೆಳೆಗಳ ಬೆಳೆ ವಿಮೆಗೆ ಕೊನೆಯ ದಿನ: ಎಳ್ಳು-ಜುಲೈ 15 ಕೊನೆಯ ದಿನ. ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನಕಾಯಿ, ಈರುಳ್ಳಿ ಬೆಳೆಗಳಿಗೆ ಜುಲೈ 31 ಕೊನೆಯ ದಿನ. ಭತ್ತ, ತೊಗರಿ, ರಾಗಿ, ನವಣೆ, ಹುರುಳಿ, ನೆಲಗಡಲೆ, ಸಜ್ಜೆ ಬೆಳೆಗಳಿಗೆ ಆಗಸ್ಟ್ 16…

Read More

ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ತೀರ್ಮಾನ ಮೂಲಕ ದೇಶದ ಗಮನ ಸೆಳೆದಿರುವ ಕೇಂದ್ರ ಸರ್ಕಾರ ಇದೀಗ ‘ಒಂದು ದೇಶ ಏಕರೂಪದ ಶಿಕ್ಷಣ ವ್ಯವಸ್ಥೆ’ ಜಾರಿ ಬಗ್ಗೆ ಚಿಂತನೆ ನಡೆಸಿದೆ. ಈ ಸಂಬಂಧ ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ (Department of Higher Education) ಇಂದು (13.062025 ಶುಕ್ರವಾರ) ಯುಜಿಸಿ ಗೆ ಮಹತ್ವದ ನಿರ್ದೇಶನ ನೀಡಿದೆ. ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಹದೆಗೆಟ್ಟಿದ್ದು ಕಾರ್ಪೊರೇಟ್ ಲಾಭಿಯಿಂದಾಗಿ ಶಾಲೆಗಳಲ್ಲಿ ದುಬಾರಿ ಶುಲ್ಕ ವಿಧಿಸಲಾಗುತ್ತಿದೆ. ಏಕರೂಪ ಶಿಕ್ಷಣ ಹಾಗೂ ಅಗತ್ಯ ಶಿಕ್ಷಣದ ಸಾಂವಿಧಾನಿಕ ಆಶಯಗಳಿಗೆ ಶಿಕ್ಷಣ ಸಂಸ್ಥೆಗಳು ಅಡ್ಡಿಯಾಗುತ್ತಿದ್ದು, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ನಿಯಂತ್ರಣ ಪ್ರಾಧಿಕಾರ ಸ್ಥಾಪಿಸಬೇಕೆಂದು ಕೋರಿ ‘ಸಿಟಿಜನ್ ರೈಟ್ಸ್ ಫೌಂಡೇಷನ್ (CRF)’ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಕೇಂದ್ರ ಶಿಕ್ಷಣ ಶುಲ್ಕ ನಿಯಂತ್ರಣ ಪ್ರಾಧಿಕಾರ (CEFRA) ರಚನೆಯ ಪ್ರಕ್ರಿಯೆಗೆ ಚಾಲನೆ ನೀಡಿದೆ. ಕೇಂದ್ರ…

Read More

ಮೈಸೂರು: ನಿವೃತ್ತಿ ಹೊಂದಿದ ಎನ್‌ಪಿಎಸ್ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಗೆ ಆಯ್ಕೆ ಮಾಡಲು ದಿನಾಂಕ 30-06-2025 ಕೊನೆಯ ದಿನವಾಗಿದೆ. ನೈಋತ್ಯ ರೈಲ್ವೆ, ನಿವೃತ್ತಿ ಹೊಂದಿದ ಎನ್‌ಪಿಎಸ್ ನೌಕರರಿಗೆ ಸೂಚನೆ: ಪಿ ಏಪ್ ಆರ್ ಡಿಎ ಗೆಜೆಟ್ ಅಧಿಸೂಚನೆ ದಿನಾಂಕ 19.03.2025 ಹಾಗೂ ರೈಲ್ವೆ ಬೋರ್ಡ್ ಸರ್ಕ್ಯುಲರ್‌ಗಳಾದ (ಆರ್ ಬಿ ಇ ಸಂಖ್ಯೆ 25/2025 ಮತ್ತು ಆರ್ ಬಿ ಎ ಸಂಖ್ಯೆ 10/2025) ಪ್ರಕಾರ, ಎನ್‌ಪಿಎಸ್ ಅಡಿಯಲ್ಲಿ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಅನ್ನು 01.04.2025 ರಿಂದ ಅನುಷ್ಠಾನಗೊಳಿಸಲಾಗಿದೆ. ಎನ್‌ಪಿಎಸ್ ಅಡಿಯಲ್ಲಿ ಸೇವೆ ಸಲ್ಲಿಸಿ 31.03.2025ರೊಳಗೆ ನಿವೃತ್ತರಾದ ಹಾಗೂ ಅಗತ್ಯ ಅರ್ಹ ಸೇವಾ ಅವಧಿ ಹೊಂದಿರುವ ನೌಕರರು, ಸಿ ಆರ್ ಎ ಪೋರ್ಟಲ್ ಮೂಲಕ ಅಥವಾ ತಮ್ಮ ವಿಭಾಗೀಯ ಕಛೇರಿಗೆ ಫಾರ್ಮ್-ಬಿ2 ಸಲ್ಲಿಸುವ ಮೂಲಕ ಯುಪಿಎಸ್ ಆಯ್ಕೆ ಮಾಡಿಕೊಳ್ಳಬಹುದು. ಅರ್ಹರಾಗಿರುವ, ನಿವೃತ್ತಿಯ ನಂತರ ಮೃತರಾದ ಎನ್‌ಪಿಎಸ್ ನೌಕರರ ಪತ್ನಿ/ಕಾನೂನು ವಾರಸುದಾರರು ಸಂಬಂಧಿತ ಫಾರ್ಮ್‌ಗಳು (ಬಿ3, ಬಿ4, ಬಿ5 ಅಥವಾ ಬಿ6)…

Read More

ಮಂಗಳೂರು: ಕಳೆದ ಶುಕ್ರವಾರದಂದು ಮಂಗಳೂರಿನ ಯೆಯ್ಯಾಡಿಯಲ್ಲಿ ಚಾಕು ಇರಿತಕ್ಕೆ ಕೌಶಿಕ್ ಎಂಬಾತ ಒಳಗಾಗಿ ಗಾಯಗೊಂಡಿದ್ದನು. ಇಂತಹ ಕೌಶಿಕ್ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾನೆ. ಮಂಗಳೂರಿನ ಯೆಯ್ಯಾಡಿಯಲ್ಲಿ ಶುಕ್ರವಾರ ಮಧ್ಯಾಹ್ನದಂದು ಕೌಶಿಕ್ ಹಾಗೂ ಇತರರ ನಡುವೆ ಗಲಾಟೆಯಾಗಿತ್ತು. ಗಲಾಟೆಯ ಸಂದರ್ಭದಲ್ಲಿ ಬ್ರಿಜೇಶ್ ಶೆಟ್ಟಿ, ಗಣೇಶ್ ಬಿಜೈ ಎಂಬುವರು ಚಾಕುವಿನಿಂದ ಕೌಶಿಕ್ ಹೊಟ್ಟೆಗೆ ಇರಿದಿದ್ದರು. ತೀವ್ರ ರಕ್ತಸ್ತ್ರಾವದಿಂದ ಗಾಯಗೊಂಡಿದ್ದಂತ ಕೌಶಿಕ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಕೌಶಿಕ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಹೀಗಾಗಿ ಕೊಲೆ ಯತ್ನ ಪ್ರಕರಣ, ಈಗ ಕೊಲೆ ಪ್ರಕರಣವಾಗಿ ಬದಲಾದಂತೆ ಆಗಿದೆ. https://kannadanewsnow.com/kannada/did-you-get-the-grihalakshmi-yojana-money-this-is-the-reason-do-this-work-you-will-get-the-guarantee/ https://kannadanewsnow.com/kannada/breaking-a-horrific-accident-in-belagavi-three-dead-including-a-person-who-was-trying-to-rescue-the-injured/

Read More

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ ನೀಡಲು ಉದ್ದೇಶಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊçÃಫಿ, ಪಾರ್ಕಿನ್ ಸನ್ಸ್, ಮಲ್ಟಿಪಲ್ ಸ್ಕೊ÷್ಲÃರೋಸಿಸ್, ಆಟಿಸಂ, ಬೌದ್ದಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ದೋಷ ಹೊಂದಿದ ದೃಷ್ಠಿ ದೋಷವುಳ್ಳ) ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ 1,000 ರೂ. ಪ್ರೋತ್ಸಾಹಧನ ನೀಡಲಾಗುತ್ತದೆ. ಜಿಲ್ಲೆಯ ಅರ್ಹ ವಿಕಲಚೇತನರು ಅರ್ಜಿ ಸಲ್ಲಿಸಬಹುದು. ಇದರ ಪ್ರಯೋಜನ ಪಡೆಯಲು 07 ವಿಧಗಳ ವಿಕಲಚೇತನರು ಕಡ್ಡಾಯವಾಗಿ ವೈದ್ಯಕೀಯ ಪ್ರಮಾಣ ಪತ್ರ, ವಿಕಲಚೇತನರ ವಿಶಿಷ್ಠ ಗುರುತಿನ ಚೀಟಿ(ಯು.ಡಿ.ಐ.ಡಿ) ಆರೈಕೆದಾರರ ಬ್ಯಾಂಕ್ ಖಾತೆ ಪುಸ್ತಕದ ಪ್ರತಿ ಹಾಗೂ ಇತ್ತೀಚಿನ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ, ನಿವಾಸಿ ದೃಢೀಕರಣ ಪತ್ರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಗಳನ್ನು www.dwdsc.kar.nic.in ವೆಬ್‌ಸೈಟ್‌ನಿಂದ ನೇರವಾಗಿ ಡೌನ್‌ಲೋಡ್…

Read More