Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಲೋಕಸಭಾ ಹಾಗೂ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು. ಅಲ್ಲದೇ ಅವರು ಕರೆ ಮಾಡಿದಾಗ ಕಡ್ಡಾಯವಾಗಿ ಸ್ವೀಕರಿಸುವಂತೆ ರಾಜ್ಯ ಸರ್ಕಾರವು ಖಡಕ್ ಆದೇಶ ಮಾಡಿದೆ. ಸರ್ಕಾರದ ಆದೇಶದಲ್ಲಿ ಏನಿದೆ? ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಯವರ ದಿನಾಂಕ:16.12.2025ರ ಪತ್ರದಲ್ಲಿ ತಿಳಿಸಿದಂತೆ, ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆಗಳನ್ನು ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ಮಾನ್ಯ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರುಗಳಿಗೆ ವಿನಂತಿಸಿಕೊಂಡಾಗ ಅನಿವಾರ್ಯವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಬೇಕಾಗಿರುತ್ತದೆ. ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ಬೇರೆ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದೆ ಇರುವುದು ನನ್ನ ಗಮನಕ್ಕೆ ಬಂದಿದೆ ಎಂದಿದ್ದಾರೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ…
ತುಮಕೂರು: ಜಿಲ್ಲೆಯಲ್ಲಿ ಚಲಿಸುತ್ತಿದ್ದಂತ ಸಾರಿಗೆ ಬಸ್ಸಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ತುಮಕೂರಿನ ಕುಣಿಗಲ್ ಪಟ್ಟಣದ ಅಗ್ರಹಾರದ ಬಳಿಯಲ್ಲಿ ಚಲಿಸುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ಸಿಗೆ ತಲೆಕೊಟ್ಟು ಕುಣಿಗಲ್ ಪಟ್ಟಣದ ನಿವಾಸಿ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ನಿನ್ನೆಯ ಶುಕ್ರವಾರ ರಾತ್ರಿ 12.40ರ ಸುಮಾರಿಗೆ ಈ ಘಟನೆ ನಡೆದಿದೆ. ಕೆ ಎಸ್ ಆರ್ ಟಿ ಸಿ ಬಸ್ ಚಲಿಸುತ್ತಿದ್ದಂತ ವೇಳೆ ಯುವಕ ಏಕಾಏಕಿ ನುಗ್ಗಿ ಬಸ್ ಚಕ್ರಕ್ಕೆ ತಲೆಕೊಟ್ಟಿದ್ದಾನೆ. ಹೀಗಾಗಿ ಬಸ್ಸಿನ ಚಕ್ರ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕುಣಿಗಲ್ ಪಟ್ಟಣದ ನಿವಾಸಿ ತಿಮ್ಮೇಗೌಡ ಆತ್ಮಹತ್ಯೆ ಮಾಡಿಕೊಂಡ ವೀಡಿಯೋ ಸಮೀಪದ ಅಂಗಡಿಯೊಂದರಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/do-you-know-which-place-is-the-most-booked-this-long-weekend-read-the-interesting-make-my-trip-report-here/ https://kannadanewsnow.com/kannada/friend-kills-siblings-over-financial-issues-three-arrested-by-honnavar-police/
ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ಸಿಕ್ಕಿರುವ ಲಾಂಗ್ ವೀಕೆಂಡ್ನಲ್ಲಿ ಜನರು ಯಾವೆಲ್ಲಾ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ ಎಂಬ ಕುತೂಹಲವೇ? ಮೇಕ್ ಮೈ ಟ್ರೀ ಈ ಬಗ್ಗೆ ವರದಿ ಬಹಿರಂಗ ಪಡಿಸಿದೆ. ಹೌದು, ಈ ಮೂರು ದಿನಗಳ ಲಾಂಗ್ ವೀಕೆಂಡ್ಗಾಗಿ ಜನರು ದೇಶೀಯವಾಗಿ ಗೋವಾ ಆಯ್ದುಕೊಂಡರೆ, ಅಂತರಾಷ್ಟ್ರೀಯ ಟ್ರಿಪ್ನಲ್ಲಿ ಥೈಲ್ಯಾಂಡ್ಗೆ ಹೆಚ್ಚು ಬುಕ್ಕಿಂಗ್ ಮಾಡಿಕೊಂಡಿದ್ದಾರೆ. ಸಾಮಾನ್ಯವಾಗಿ ಲಾಂಗ್ ವೀಕೆಂಡ್ ದೊರೆತರೆ ವಿಶ್ರಾಂತಿಗಾಗಿ ಜನ ಪ್ರಯಾಣ ಬೆಳೆಸುವುದು ಸಾಮಾನ್ಯ. ಆದರೆ, ಎಲ್ಲಿ ತೆರಳಬೇಕು? ಯಾವ ಪ್ರದೇಶ ಉತ್ತಮ ಎಂದು ಹುಡುಕುವುದೇ ಕಷ್ಟ. ಜನರ ಎಲ್ಲಿಗೆ ಹೆಚ್ಚಾಗಿ ಭೇಟಿ ನೀಡುತ್ತಾರೆ ಎಂಬುದನ್ನು ಸಹ ಇತರರು ಆಸಕ್ತಿ ವಹಿಸುತ್ತಾರೆ. ಇದಕ್ಕಾಗಿಯೇ, ಹೆಚ್ಚಾಗಿ ಎಲ್ಲೆಲ್ಲಿ ಪ್ರಯಾಣ ಬೆಳೆಸುತ್ತಿದ್ದಾರೆ ಎಂಬುದರ ಬಗ್ಗೆ ಮೇಕ್ ಮೈ ಟ್ರಿಪ್ ಆಸಕ್ತಿದಾಯಕ ಮಾಹಿತಿ ಹಂಚಿಕೊಂಡಿದೆ. ಜನವರಿ 24 ರಿಂದ ೨೬ರವರೆಗೆ, ಲಾಂಗ್ ವೀಕೆಂಡ್ ದೊರೆತಿರುವ ಹಿನ್ನೆಲೆಯಲ್ಲಿ, ಜನರು ಹೆಚ್ಚಾಗಿ ಗೋವಾ ಬುಕ್ಕಿಂಗ್ ಮಾಡಿದ್ದಾರೆ. ಇದಲ್ಲದೆ, ಇತರ ಜನಪ್ರಿಯ ದೇಶೀಯ ತಾಣಗಳಾದ ಜೈಪುರ, ಉದಯಪುರ, ಮನಾಲಿ, ಪಾಂಡಿಚೇರಿ…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಕಾರ್ಯಕ್ರಮಗಳು ಸೇರಿದಂತೆ ರಾಷ್ಟ್ರೀಯ ಹಬ್ಬಗಳು ಹಾಗೂ ಶಾಲಾ-ಕಾಲೇಜುಗಳ ಇತರೆ ಸಾಂಸ್ಕೃತಿಕ ಮತ್ತು ಆಡಳಿತಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭಗಳಲ್ಲಿ ಅಪಘಾತಗಳು ಸಂಭವಿಸದಂತೆ ಮಕ್ಕಳ ಮತ್ತು ಸಾರ್ವಜನಿಕರ ರಕ್ಷಣೆಗೆ ಈ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅಳಡಿಸಿಕೊಳ್ಳುವಂತೆ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಶಾಲಾ ಕಾಲೇಜುಗಳಲ್ಲಿ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಮಕ್ಕಳ ರಕ್ಷಣಾ ನೀತಿ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾರ್ಗಸೂಚಿಯನ್ವಯ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸುರಕ್ಷತೆಗೆ ಬಗ್ಗೆ ಅಗತ್ಯ ಕ್ರಮವಹಿಸಲು ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರಿಗೆ ಸೂಚನೆಗಳನ್ನು ನೀಡಲಾಗಿರುತ್ತದೆ ಎಂದಿದೆ. ಮುಂದುವರೆದು ಶಾಲಾ ಕಾಲೇಜುಗಳಲ್ಲಿ ಸರ್ಕಾರಿ ಕಾರ್ಯಕ್ರಮಗಳು ಸೇರಿದಂತೆ ರಾಷ್ಟ್ರೀಯ ಹಬ್ಬಗಳು ಹಾಗೂ ಇತರ ಸಾಂಸ್ಕೃತಿಕ ಮತ್ತು ಆಡಳಿತಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭಗಳಲ್ಲಿ ಸಂಭವಿಸಬಹುದಾದ ಅನಿರೀಕ್ಷಿತ ಅವಘಡಗಳ ಸಾಧ್ಯತೆಗಳನ್ನು ಗಮನದಲ್ಲಿರಿಸಿಕೊಂಡು, ಯಾವುದೇ ರೀತಿಯ ಅವಘಡಗಳಾಗದಂತೆ ತಡೆಗಟ್ಟುವ, ನಿವಾರಿಸುವ…
ಕಾರವಾರ: ಸಾಮಾಜಿಕ, ವೈದ್ಯಕೀಯ ರಂಗದಲ್ಲಿ ಹೆಸರು ಮಾಡಿದ್ದಂತ ಕುಟುಂಬಕ್ಕೆ ಸೇರಿದ್ದಂತ ರಾಜೀವ್ ಪಿಕಳೆ ಅವರನ್ನು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ತನ್ನನ್ನು ತೇಜೋವಧೆ ಮಾಡಿದ ಕಾರಣಕ್ಕಾಗಿ ರಾಜೀವ್ ಪಿಕಳೆ ಎನ್ನುವಂತ ವೈದ್ಯರೊಬ್ಬರು ತಮ್ಮ ಡಬ್ಬಲ್ ಬ್ಯಾರಲ್ ಗನ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಮಾಡಿದಂತ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಸುಭಾಷ್, ಹರಿಶ್ಚಂದ್ರ ಎಂಬುದಾಗಿ ತಿಳಿದು ಬಂದಿದೆ. ಅಂಕೋಲಾ ಠಾಣೆಯ ಪೊಲೀಸರು ವೀಡಿಯೋ ವೈರಲ್ ಮಾಡಿ, ರಾಜೀವ್ ಪಿಕಳೆ ಸಾವಿಗೆ ಕಾರಣವಾದ ಹಿನ್ನಲೆಯಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. https://kannadanewsnow.com/kannada/karnataka-sslc-preparatory-exam-2-schedule-announced/ https://kannadanewsnow.com/kannada/friend-kills-siblings-over-financial-issues-three-arrested-by-honnavar-police/
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ಕರ್ನಾಟಕ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಜನವರಿ.27ರಿಂದ ಫೆಬ್ರವರಿ.2ರವರೆಗೆ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ-2 ನಡೆಲಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜನವರಿ.27ರಿಂದ ಫೆಬ್ರವರಿ.2ರವರೆಗೆ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ಪರೀಕ್ಷೆಗಳು ನಡೆಯಲಿವೆ. ಜನವರಿ.27ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪ್ರಥಮ ಭಾಷೆ ವಿಷಯಗಳಾಗಿರುವಂತ ಕನ್ನಡ, ಹಿಂದಿ, ತೆಲುಗು, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಎನ್ ಸಿ ಇ ಆರ್ ಟಿ ಇಂಗ್ಲೀಷ್ ಹಾಗೂ ಸಂಸ್ಕೃತ ಭಾಷೆಯ ಪರೀಕ್ಷೆ ನಡೆಯಲಿದೆ ಎಂದಿದೆ. ಇನ್ನೂ ಜನವರಿ 28ರಂದು ಗಣಿತ ವಿಷಯದ ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿದೆ. ಜನವರಿ.29ರಂದು ದ್ವಿತೀಯ ಭಾಷೆಯ ವಿಷಯವಾಗಿರುವಂತ ಕನ್ನಡ, ಇಂಗ್ಲೀಷ್ ಪರೀಕ್ಷೆ ನಡೆಯಲಿದೆ. ಜನವರಿ.30ರಂದು ತೃತೀಯ ಭಾಷೆಯ ವಿಷಯವಾದಂತ ಹಿಂದಿ, ಎನ್ ಸಿ ಆರ್ ಟಿ ಹಿಂದಿ, ಕನ್ನಡ, ಇಂಗ್ಲೀಷ್,…
ಉತ್ತರಕನ್ನಡ: ಹಣಕಾಸಿನ ವಿಚಾರಕ್ಕಾಗಿ ಸ್ನೇಹಿತರೇ ಇಬ್ಬರು ಅಣ್ಣ-ತಮ್ಮಂದಿರನ್ನು ಧಾರುಣವಾಗಿ ಹತ್ಯೆ ಮಾಡಿದಂತ ಘಟನೆ ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಣದ ವಿಚಾರಕ್ಕಾಗಿ ಇಬ್ಬರು ಅಣ್ಣ-ತಮ್ಮಂದಿರಿಗೆ ಮದ್ಯದ ಜೊತೆಗೆ ವಿಷ ಬೆರೆಸಿ ಕುಡಿಸಿ, ಹತ್ಯೆ ಮಾಡಿ, ಕಾರು ಸಹಿತ ಸುಟ್ಟು ಹಾಕಿದಂತ ಮೂವರನ್ನು ಹೊನ್ನಾವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಳೆದ ಜನವರಿ.6, 7ರಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯ ಸುರಳಿ ಮುರ್ಕಿ ಬಳಿಯಲ್ಲಿ ಮಾರುತಿ ಜೆನ್ ಕಾರೊಂದು ಅಪಘಾತಗೊಂಡು, ಅದರಲ್ಲಿ ಸುಟ್ಟ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಹೊನ್ನಾವರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಸಿದ್ದರಾಮೇಶ್ವರ ಅಂಡ್ ಟೀಂ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಆರಂಭದಲ್ಲಿ ಅಪಘಾತ ಪ್ರಕರಣ ದಾಖಲಿಸಿಕೊಂಡಿತ್ತು. ಅಪಘಾತದ ಬಳಿಕ ಕಾರು ಸುಟ್ಟ ಸ್ಥಿತಿಯ ಬಗ್ಗೆ, ಅದರಲ್ಲಿ ಇಬ್ಬರ ಮೃತದೇಹ ಇರೋ ಬಗ್ಗೆ ಅನುಮಾನಗೊಂಡ ಪಿಐ ಸಿದ್ಧರಾಮೇಶ್ವರ ಸಾಹೇಬ್ರು, ಇದು ಅಪಘಾತವಲ್ಲ. ಬದಲಾಗಿ ಕೊಲೆ ಎಂಬುದಾಗಿ ಅನುಮಾನಿಸಿ ತನಿಖೆಗೆ ಇಳಿಯುತ್ತಾರೆ. ಆಗ ಮೃತರನ್ನು…
ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸೋ ವಿದ್ಯಾರ್ಥಿಗಳಿಗೆ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಅದೇನೆಂದ್ರೆ ಇನ್ಮುಂದೆ ಲ್ಯಾಪ್ ಟಾಪ್ ಬದಲಾಗಿ ರೂ.50,000 ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2025-26ನೇ ಸಾಲಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ರಾಜ್ಯ ವಲಯದ ಆಯವ್ಯಯದಲ್ಲಿ “ಗುಣಮಟ್ಟ ಭರವಸೆ ಮತ್ತು ವಿದ್ಯಾರ್ಥಿ ಪ್ರೇರಣಾ ಉಪಕ್ರಮ” ಲೆಕ್ಕಶೀರ್ಷಿಕ 2202-01-109-0-10 ರ ಉಪ ಲೆಕ್ಕಶೀರ್ಷಿಕೆ 015 ರಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲಾ / ತಾಲ್ಲೂಕು ಹಂತದಲ್ಲಿ ಅತೀ ಹೆಚ್ಚು ಅಂಕ ಪಡೆದ 3 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆಗಾಗಿ ರೂ.325.00 ಅನುಷ್ಠಾನಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ. ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು, ಇವರ…
ಬೆಂಗಳೂರು: ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವಂತ 6 ರಿಂದ 12ನೇ ತರಗತಿ ವರೆಗಿನ ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ ಮಾಡಲಾಗುತ್ತದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶುಚಿ ಕಾರ್ಯಕ್ರಮದಡಿಯಲ್ಲಿ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ-ಕಾಲೇಜುಗಳಲ್ಲಿನ 6 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣುಮಕ್ಕಳಿಗೆ ಹಾಗೂ ವಸತಿ ನಿಲಯಗಳಲ್ಲಿನ (ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, KREIS, ಪರಿಶಿಷ್ಟ ಪಂಗಡ ಇಲಾಖೆ) ಒಟ್ಟು 19,64,507 ಹೆಣ್ಣುಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ಗಳನ್ನು ಒದಗಿಸಿದ್ದೇವೆ. ಮುಟ್ಟಿನ ಕಪ್ʼ ಯೋಜನೆಯಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಟ್ಟು 9,44,466 ಹೆಣ್ಣುಮಕ್ಕಳಿಗೆ ಮುಟ್ಟಿನ ಕಪ್ ಅನ್ನು ಒದಗಿಸಲು ಇಲಾಖೆ ಸಜ್ಜಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. https://twitter.com/KarnatakaVarthe/status/2014679394934259929 ಗರ್ಭಕಂಠದ ಕಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದು, ಕಲ್ಯಾಣ ಕರ್ನಾಟಕ ಮತ್ತು…
ಬೆಂಗಳೂರು: ರಾಜ್ಯ ಸರ್ಕಾರ ಸರ್ಕಾರಿ ಕಚೇರಿಯಲ್ಲಿ ವೀಡಿಯೋ ಚಿತ್ರೀಕರಣ ಮಾಡದಂತೆ, ತಪ್ಪು ಪ್ರಶ್ನಿಸುವ, ಭ್ರಷ್ಟಾಚಾರವನ್ನು ಸಾರ್ವಜನಿಕರವಾಗಿ ಖಂಡಿಸುವ ನಮ್ಮ ಪಕ್ಷದ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಎಲ್ಲಿಯೂ ಹೇಳಿಲ್ಲ. ವೈರಲ್ ಆಗಿರುವಂತ ಆದೇಶದಲ್ಲಿ ಅಂತಹ ಯಾವುದೇ ಸೂಚನೆಗಳಿಲ್ಲ ಎಂಬುದಾಗಿ ಕೆ ಆರ್ ಎಸ್ ಪಕ್ಷದ ರವಿಕೃಷ್ಣಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು, ಪೊಲೀಸ್ ಇಲಾಖೆ ಹೊರಡಿಸಿದೆ ಎನ್ನಲಾಗಿರುವಂತ ಆದೇಶವನ್ನು ಸರಿಯಾಗಿ ಓದಿಲ್ಲ. ಅದೊಂದು ಆದೇಶವೂ ಅಲ್ಲ. ಹಿರಿಯ ಅಧಿಕಾರಿಗಳಿಗೆ ಸಲ್ಲಿಕೆಯಾಗುವಂತ ಮನವಿಗಳನ್ನು ಕೆಳ ಹಂತದ ಅಧಿಕಾರಿಗಳಿಗೆ ಸೂಕ್ತ ಕ್ರಮವಹಿಸುವಂತೆ ವರ್ಗಾವಣೆ ಮಾಡುವಂತ ಆದೇಶದ ಪ್ರತಿ ಅದಾಗಿದೆ ಎಂಬುದಾಗಿ ತಿಳಿಸಿದ್ದಾರೆ. ನಮ್ಮ ಕೆ ಆರ್ ಎಸ್ ಪಕ್ಷದಿಂದ ಭ್ರಷ್ಟಾಚಾರದ ವಿರುದ್ಧದ ಹೋರಾಟ ಮುಂದುವರೆಯಲಿದೆ. ಅದನ್ನು ಯಾರಿಂದಲೂ ತಡೆಯುವುದಕ್ಕೆ ಆಗುವುದಿಲ್ಲ. ತಡೆಯುವಂತೆ, ಎಫ್ಐಆರ್ ದಾಖಲಿಸುವಂತೆ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಆದೇಶಗಳನ್ನು ಹೊರಡಿಸಿದರೂ ನಾವು ಜಗ್ಗುವುದೂ ಇಲ್ಲ, ಬಗ್ಗುವುದು ಇಲ್ಲ. ನಮ್ಮ ಹೋರಾಟ…














