Subscribe to Updates
Get the latest creative news from FooBar about art, design and business.
Author: kannadanewsnow09
ಆಪಲ್ನ ಉತ್ಪಾದನಾ ಕಾರ್ಯತಂತ್ರವು ಮತ್ತೊಂದು ಮಹತ್ವದ ಬದಲಾವಣೆಯ ಅಂಚಿನಲ್ಲಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರೋಧ ಮತ್ತು ಭಾರತೀಯ ಆಮದುಗಳ ಮೇಲೆ 50% ಸುಂಕವನ್ನು ಕಠಿಣವಾಗಿ ವಿಧಿಸುವ ಮಾತುಕತೆಗಳ ಹೊರತಾಗಿಯೂ ಆಪಲ್ ಐಫೋನ್ 17 ರ ಎಲ್ಲಾ ಭವಿಷ್ಯದ ಮಾದರಿಗಳನ್ನು ಭಾರತದಲ್ಲಿ ಉತ್ಪಾದಿಸಲು ಮತ್ತು ಅವುಗಳನ್ನು ಅಮೆರಿಕಕ್ಕೆ ರಫ್ತು ಮಾಡಲು ಮುಂದಾಗಿದೆ. ಜಾಗತಿಕ ಮಟ್ಟದಲ್ಲಿ ಪೂರೈಕೆ ಸರಪಳಿಯನ್ನು ವೈವಿಧ್ಯಗೊಳಿಸಲು ಆಪಲ್ ತೆಗೆದುಕೊಂಡ ಅತ್ಯಂತ ನಿರ್ಣಾಯಕ ಕ್ರಮಗಳಲ್ಲಿ ಈ ಕಠಿಣ ಕ್ರಮ ಒಂದಾಗಿದೆ. ಭಾರತದಿಂದ ಬಿಡುಗಡೆಯಾಗಲಿರುವ ಐಫೋನ್ 17 ಲೈನ್ಅಪ್ ಬ್ಲೂಮ್ಬರ್ಗ್ ವರದಿ ಪ್ರಕಾರ ಇತ್ತೀಚಿನ ಐಫೋನ್ 17, ಐಫೋನ್ 17 ಪ್ರೊ, ಐಫೋನ್ 17 ಪ್ರೊ ಮ್ಯಾಕ್ಸ್, ಹಾಗೆಯೇ ಹೊಸ ಮಾದರಿ ಐಫೋನ್ 17 ಏರ್ ಎಲ್ಲವನ್ನೂ ಮುಂದಿನ ತಿಂಗಳು ಭಾರತದಲ್ಲಿ ತಯಾರಿಸಲಾಗುವುದು. ನಂತರ ಈ ಘಟಕಗಳನ್ನು ಅಮೇರಿಕನ್ ಗ್ರಾಹಕರಿಗೆ ರಫ್ತು ಮಾಡಲಾಗುತ್ತದೆ, ಇದು ಭಾರತದಲ್ಲಿ ಉತ್ಪಾದನಾ ವೇದಿಕೆಯಾಗಿ ಆಪಲ್ನ ಬೆಳೆಯುತ್ತಿರುವ ನಂಬಿಕೆಯನ್ನು ಪ್ರದರ್ಶಿಸುತ್ತದೆ. ಆಪಲ್ ಭಾರತವನ್ನು ಅವಲಂಬಿಸಿರುವುದೇ ಇದೇ ಮೊದಲಲ್ಲ,…
ಹುಬ್ಬಳ್ಳಿ: ಗಣೇಶ ಚತುರ್ಥಿಯ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆಯನ್ನು ನಡೆಸಲಿದೆ. ರೈಲು ಸಂಖ್ಯೆ 07341 ಎಸ್ಎಸ್ಎಸ್ ಹುಬ್ಬಳ್ಳಿ-ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ವಿಶೇಷ ರೈಲು ಆಗಸ್ಟ್ 26, 2025 ರಂದು (ಮಂಗಳವಾರ) ಸಂಜೆ 4:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬೆಳಿಗ್ಗೆ 11:45 ಕ್ಕೆ ಮಂಗಳೂರು ಸೆಂಟ್ರಲ್ ತಲುಪುತ್ತದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 07342 ಆಗಸ್ಟ್ 27, 2025 ರಂದು (ಬುಧವಾರ) ಮಧ್ಯಾಹ್ನ 2:15 ಕ್ಕೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಮರುದಿನ ಬೆಳಿಗ್ಗೆ 09:45 ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿಗೆ ಆಗಮಿಸುತ್ತದೆ. ಮಾರ್ಗಮಧ್ಯೆ, ರೈಲು SMM ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು ಮತ್ತು ಬಂಟವಾಲ ನಿಲ್ದಾಣಗಳಲ್ಲಿ ಎರಡೂ ದಿಕ್ಕುಗಳಲ್ಲಿ ನಿಲ್ಲುತ್ತದೆ. ಈ ರೈಲು 17 ಬೋಗಿಗಳೊಂದಿಗೆ ಚಲಿಸಲಿದ್ದು, 01…
ಆಪಲ್ನ ಉತ್ಪಾದನಾ ಕಾರ್ಯತಂತ್ರವು ಮತ್ತೊಂದು ಮಹತ್ವದ ಬದಲಾವಣೆಯ ಅಂಚಿನಲ್ಲಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರೋಧ ಮತ್ತು ಭಾರತೀಯ ಆಮದುಗಳ ಮೇಲೆ 50% ಸುಂಕವನ್ನು ಕಠಿಣವಾಗಿ ವಿಧಿಸುವ ಮಾತುಕತೆಗಳ ಹೊರತಾಗಿಯೂ ಆಪಲ್ ಐಫೋನ್ 17 ರ ಎಲ್ಲಾ ಭವಿಷ್ಯದ ಮಾದರಿಗಳನ್ನು ಭಾರತದಲ್ಲಿ ಉತ್ಪಾದಿಸಲು ಮತ್ತು ಅವುಗಳನ್ನು ಅಮೆರಿಕಕ್ಕೆ ರಫ್ತು ಮಾಡಲು ಮುಂದಾಗಿದೆ. ಜಾಗತಿಕ ಮಟ್ಟದಲ್ಲಿ ಪೂರೈಕೆ ಸರಪಳಿಯನ್ನು ವೈವಿಧ್ಯಗೊಳಿಸಲು ಆಪಲ್ ತೆಗೆದುಕೊಂಡ ಅತ್ಯಂತ ನಿರ್ಣಾಯಕ ಕ್ರಮಗಳಲ್ಲಿ ಈ ಕಠಿಣ ಕ್ರಮ ಒಂದಾಗಿದೆ. ಭಾರತದಿಂದ ಬಿಡುಗಡೆಯಾಗಲಿರುವ ಐಫೋನ್ 17 ಲೈನ್ಅಪ್ ಬ್ಲೂಮ್ಬರ್ಗ್ ವರದಿ ಪ್ರಕಾರ ಇತ್ತೀಚಿನ ಐಫೋನ್ 17, ಐಫೋನ್ 17 ಪ್ರೊ, ಐಫೋನ್ 17 ಪ್ರೊ ಮ್ಯಾಕ್ಸ್, ಹಾಗೆಯೇ ಹೊಸ ಮಾದರಿ ಐಫೋನ್ 17 ಏರ್ ಎಲ್ಲವನ್ನೂ ಮುಂದಿನ ತಿಂಗಳು ಭಾರತದಲ್ಲಿ ತಯಾರಿಸಲಾಗುವುದು. ನಂತರ ಈ ಘಟಕಗಳನ್ನು ಅಮೇರಿಕನ್ ಗ್ರಾಹಕರಿಗೆ ರಫ್ತು ಮಾಡಲಾಗುತ್ತದೆ, ಇದು ಭಾರತದಲ್ಲಿ ಉತ್ಪಾದನಾ ವೇದಿಕೆಯಾಗಿ ಆಪಲ್ನ ಬೆಳೆಯುತ್ತಿರುವ ನಂಬಿಕೆಯನ್ನು ಪ್ರದರ್ಶಿಸುತ್ತದೆ. ಆಪಲ್ ಭಾರತವನ್ನು ಅವಲಂಬಿಸಿರುವುದೇ ಇದೇ ಮೊದಲಲ್ಲ,…
ಮಂಡ್ಯ : ಉಳುವವನೇ ಭೂ ಒಡೆಯ ಎಂಬ ಯೋಜನೆಯನ್ನು ಜಾರಿಗೆ ತಂದು ರಾಜ್ಯದಲ್ಲಿ 21 ಲಕ್ಷ ಎಕರೆ ಭೂಮಿಯನ್ನು ನಿರ್ಗತಿಕರಿಗೆ ನೀಡುವ ಮೂಲಕ ಸಾಮಾಜಿಕ ನ್ಯಾಯ ನೀಡಿದವರು ಡಿ.ದೇವರಾಜ ಅರಸು ಅವರು ಎಂದು ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಬುಧವಾರ ಹೇಳಿದರು. ಮದ್ದೂರು ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110 ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉಳುವವನೇ ಭೂ ಒಡೆಯ ಎಂಬ ಯೋಜನೆಯನ್ನು ಜಾರಿಗೆ ತಂದು ರಾಜ್ಯದಲ್ಲಿ 21 ಲಕ್ಷ ಎಕರೆ ಭೂಮಿಯನ್ನು ನಿರ್ಗತಿಕರಿಗೆ ನೀಡುವ ಮೂಲಕ ಸಾಮಾಜಿಕ ನ್ಯಾಯ ನೀಡಿದರು. ಈ ಕಾಯ್ದೆ ಲಕ್ಷಾಂತರ ಜನರಿಗೆ ಭೂ ಒಡೆತನದ ಹಕ್ಕನ್ನು ನೀಡಿತು. ಅರಸು ಅವರು ಸರ್ವ ಜನಾಂಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾನೂನುಗಳನ್ನು ಜಾರಿಗೊಳಿಸಿದ ಪರಿಣಾಮ ಅವರನ್ನು ಸದಾ ನೆನೆಯುವಂತಾಗಿದೆ ಎಂದರು. ಮೀಸಲಾತಿ ಸೌಲಭ್ಯ ಕಲ್ಪಿಸಿ ಶೋಷಿತ ಸಮುದಾಯಗಳಿಗೆ ಅಸ್ಮಿತೆಯನ್ನು ತಂದು ಕೊಟ್ಟು.…
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಹೊಸದಾಗಿ ಚಿಮಣಿ ಹಾಗೂ ಇತರೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮುಂದುವರಿದು, ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಹೊಸದಾಗಿ ಚಿಮಣಿ ಅಳವಡಿಕೆ ಹಾಗೂ ಇತರೆ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಚಿತಾಗಾರದ ಫರ್ನೇಸ್ ಅನ್ನು ದಿನಾಂಕ: 22-08-2025 ರಿಂದ 28-08-2025 ರವರೆಗೆ 7 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದೆ. ಈ ಸಂಬಂಧ ಸಾರ್ವಜನಿಕರು ಸಹಕರಿಸಬೇಕೆಂದು ದಕ್ಷಿಣ ವಲಯ ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿರುತ್ತಾರೆ. https://kannadanewsnow.com/kannada/bbmp-issued-guidelines-for-the-celebration-of-ganesh-festival-in-bangalore-compliance-with-these-rules-is-mandatory/ https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/
ಬೆಂಗಳೂರು: 2025ನೇ ಸಾಲಿನ ಗೌರಿ-ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ ವಿಲೇವಾರಿ ಮಾಡುವ ಕುರಿತು ಹಾಗೂ ಹಬ್ಬಗಳ ಆಚರಣೆಯಿಂದ ಬರುವ ಹಸಿ ತ್ಯಾಜ್ಯವನ್ನು ಪಾಲಿಕೆಯ ಸಂಸ್ಕರಣಾ ಘಟಕಗಳಿಗೆ ಸಂಸ್ಕರಣೆಗಾಗಿ ಕಳುಹಿಸುವ ನಿಮಿತ್ತ ಮಾನ್ಯ ಮುಖ್ಯ ಆಯುಕ್ತರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಗಿರುತ್ತದೆ. ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಿದ್ದಲ್ಲಿ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕಾಗಿ ತೀರ್ಮಾನವಾಗಿರುತ್ತದೆ. ಅದರಂತೆ, ದಿನಾಂಕ: 05-08-2025 ರಂದು ಮುಖ್ಯ ಆಯುಕ್ತರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಹಾಗೂ ತೀರ್ಮಾನಗಳಂತೆ ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ…
ಬೆಂಗಳೂರು: ಒಳ ಮೀಸಲಾತಿ ಸಂಬಂಧ ರಾಜ್ಯದ ಕಾಂಗ್ರೆಸ್ ಸರಕಾರವು ಕೇವಲ ರಾಜಕೀಯ ತೀರ್ಮಾನ ವ್ಯಕ್ತಪಡಿಸಿದೆ ಎಂಬುದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂಥ ತೀರ್ಮಾನವನ್ನು ಸರಕಾರವು ಯಾವತ್ತೋ ಕೊಡಬಹುದಾಗಿತ್ತು. ಇಷ್ಟು ಕಾಯಬೇಕಿರಲಿಲ್ಲ ಎಂದು ಅವರು ಟೀಕಿಸಿದರು. ಸರಕಾರ ಸಾಮಾಜಿಕ ನ್ಯಾಯದ ಪರವಾಗಿ ಇದೆಯೇ ಎಂಬುದು ರಾಜ್ಯದ ಜನರಿಗೆ ಪ್ರಶ್ನಾರ್ಥಕ ಚಿಹ್ನೆಯಾಗಿದೆ ಎಂದು ವಿಶ್ಲೇಷಿಸಿದರು. ರಾಜ್ಯದ ಕಾಂಗ್ರೆಸ್ ಸರಕಾರವು ಒಳ ಮೀಸಲಾತಿ ವಿಷಯದಲ್ಲಿ ಒಂದು ತೀರ್ಮಾನಕ್ಕೆ ಬಂದ ವಿಚಾರ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ತೀರ್ಮಾನವು ಸುಪ್ರೀಂ ಕೋರ್ಟ್ ಆದೇಶದ ಪರವಾಗಿ ಅಥವಾ ಸದಾಶಿವ ಆಯೋಗದ ಪರವಾಗಿಯೂ ಇಲ್ಲ; ನಾಗಮೋಹನ್ ದಾಸ್ ಆಯೋಗದ ವಿಚಾರಗಳೂ ಇದರಲ್ಲಿ ಇಲ್ಲ ಎಂದು ಆಕ್ಷೇಪಿಸಿದರು. ನ್ಯಾ.ನಾಗಮೋಹನ್ ದಾಸ್ ಅವರು 5 ಗುಂಪುಗಳಾಗಿ ವಿಂಗಡಿಸಿದ್ದರು. ನೀವು ಅದನ್ನು ತಿರಸ್ಕಾರ ಮಾಡಿ, 3 ಗುಂಪಾಗಿ ಸೀಮಿತಗೊಳಿಸಿದ್ದೀರಿ. ಎಡ, ಬಲ ಮತ್ತು ಸ್ಪøಶ್ಯ ಸಮುದಾಯವಾಗಿ ಮಾಡಿದ ಮಾಹಿತಿ ಇದೆ. ಹಾಗಾದಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸಭೆಯಲ್ಲಿ ಮಂಡಿಸಿದ್ದಂತ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಜನಸಂದಣಿ ನಿಯಂತ್ರಣ ವಿಧೇಯಕ ಮಂಡಿಸಿದ್ದರು. 2025ನೇ ಸಾಲಿನ ಜನಸಂದಣಿ ನಿಯಂತ್ರಣ ವಿಧೇಯಕವನ್ನು ಮಂಡಿಸಲಾಗಿತ್ತು. ಜನಸಂದಣಿ ನಿಯಂತ್ರಣ ಮಾಡಲು ಸರ್ಕಾರದಿಂದ ಕಾನೂನು ರೂಪಿಸಲು ಈ ಮಸೂಧೆಯನ್ನು ಮಂಡಿಸಲಾಗಿತ್ತು. ಆರ್ ಸಿ ಬಿ ಘಟನೆ ಬಳಿಕ ಸರ್ಕಾರ ಎಚ್ಚೆತ್ತು ಈ ಕಾನೂನು ರೂಪಿಸಲಾಗಿತ್ತು. ರಾಜ್ಯ ಸರ್ಕಾರದಿಂದ ಜನಸಂದಣಿ ನಿಯಂತ್ರಣಕ್ಕೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ತಿದ್ದುಪಡಿ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. https://kannadanewsnow.com/kannada/high-court-directs-the-state-government-to-clarify-its-position-on-formulating-rules-for-bike-taxis/ https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/
ಬೆಂಗಳೂರು: ಬೈಕ್ ಟ್ಯಾಕ್ಸಿಗೆ ನಿಯಮ ರೂಪಿಸುವ ಬಗ್ಗೆ 1 ತಿಂಗಳಲ್ಲಿ ನಿಲುವು ತಿಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಇಂದು ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ಪ್ರಶ್ನಿಸಿ ಆಪರೇಟರ್ ಗಳು ಸಲ್ಲಿಸಲಾಗಿದ್ದಂತ ಮೇಲ್ಮನವಿಯ ಅರ್ಜಿಯ ವಿಚಾರಣೆಯನ್ನು ನಡೆಸಿತು. ಸಿಜೆ ವಿಭು ಬಕ್ರು, ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದಂತ ನ್ಯಾಯಪೀಠವು ವಿಚಾರಣೆ ಕೈಗೊಂಡಿತು. ಈ ವೇಳೆ ಎಲ್ಲರಿಗೂ ನ್ಯಾಯಯುತ ವ್ಯವಹಾರ ನಡೆಸುವ ಸಂವಿಧಾನಬದ್ಧ ಹಕ್ಕಿದೆ. ಬೈಕ್ ಟ್ಯಾಕ್ಸಿ ನಡೆಸುತ್ತೇವೆಂದರೆ ಸರ್ಕಾರ ನಿಯಮ ರೂಪಿಸಬಹುದು. 13 ರಾಜ್ಯಗಳು ನಿಯಮ ರೂಪಿಸಿವೆ. ನೀವು ನಿಷೇಧಿಸಿದ್ದೀರಿ. ಈ ರೀತಿ ನಿಷೇಧ ಸರಿಯೇ ಎಂಬುದನ್ನು ಹೈಕೋರ್ಟ್ ಪರಿಶೀಲಿಸಿದೆ ಎಂದಿತು. ಬೈಕ್ ನಿಂದ ಸಂಚಾರದಟ್ಟಣೆಯೂ ಉಂಟಾಗುವುದಿಲ್ಲ. ಕಾರು, ಆಟೋ ಸಂಚರಿಸದ ಕಡೆಯೂ ಬೈಕ್ ಸಂಚರಿಸಬಹುದು. ಸರ್ಕಾರ ನೀತಿ ರೂಪಿಸುವುದಿದ್ದರೇ ಸಮಯ ನೀಡುತ್ತೇವೆ. ಜೀವನೋಪಾಯದ ಅಂಶವೂ ಇರುವುದರಿಂದ ನಿಲುವು ತಿಳಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿತು. ಹೈಕೋರ್ಟ್ ಸಲಹೆಗೆ ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ಪ್ರತಿಕ್ರಿಯಿಸಿ, ನಾಲ್ಕು ವಾರದಲ್ಲಿ…
ನವದೆಹಲಿ: ಎನ್.ಡಿ.ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ರಾಧಾಕೃಷ್ಣನ್ ಅವರನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗೌರವಪೂರ್ವಕವಾಗಿ ಬರಮಾಡಿಕೊಂಡರು. ತಮ್ಮ ಹಾಗೂ ಪ್ರಧಾನಿಗಳ ನಡುವಿನ ಬಾಂಧವ್ಯವನ್ನು ಸ್ಮರಿಸಿದ ರಾಧಾಕೃಷ್ಣನ್ ಅವರು, ಎನ್ ಡಿಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಆಗಿರುವ ತಮಗೆ ಬೆಂಬಲ ನೀಡಿದ್ದಾಗಿ ಅಭ್ಯರ್ಥಿಯಾಗಿ ಧನ್ಯವಾದ ತಿಳಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ಮಲ್ಲೇಶ್ ಬಾಬು ಮತ್ತು ಡಾ. ಸಿ.ಎನ್. ಮಂಜುನಾಥ್, ಜೆಡಿಎಸ್ ಪಕ್ಷದ ಹಿರಿಯ ನಾಯಕ ವೆಂಕಟರಾವ್ ನಾಡಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿನೋದ್ ತಾವಡೆ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳು ಹಾಗೂ ಕೇಂದ್ರ ಸಚಿವರು ಸಿ.ಪಿ. ರಾಧಾಕೃಷ್ಣನ್ ಅವರಿಗೆ ಶುಭ ಹಾರೈಸಿದರು. https://kannadanewsnow.com/kannada/false-propaganda-against-dharmasthala-complaint-to-dg-ig-against-youtuber-sameer-m-d/ https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/














