Author: kannadanewsnow09

ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳ 5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ತೇರ್ಗಡೆ ಮಾಡಿ, ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಮೂಲಕ ರಾಜ್ಯದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಆದೇಶಿಸಿದ್ದು, ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನಡೆದಿರುವ ಪರೀಕ್ಷೆಗಳ ಮೌಲ್ಯಾಂಕನ ಆಧರಿಸಿ ಮುಂದಿನ ತರಗತಿಗೆ ದಾಖಲಾತಿಗೆ ಅನುಕೂಲ ಮಾಡಿಕೊಡುವಂತೆ ಸೂಚಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಆದೇಶದಲ್ಲಿ ಏನಿದೆ..? 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯ ಕ್ರಮದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿಗೆ ಶೈಕ್ಷಣಿಕ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ದಿನಾಂಕ:11.04.2024 ರಿಂದ 28.05.2024ರವರೆಗೆ ಬೇಸಿಗೆ ರಜೆ ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಆದರೆ ಉಲ್ಲೇಖ-2ರನ್ನಯ ರಾಜ್ಯದಲ್ಲಿನ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆಯನ್ನು ಕಡಿತಗೊಳಿಸಿ ತರಗತಿಗಳನ್ನು ಪ್ರಾರಂಭಿಸಿದ್ದು, ಈ ಕುರಿತಂತೆ ಕರ್ನಾಟಕ ರಾಜ್ಯ…

Read More

ಬೆಂಗಳೂರು: ನನ್ನ ಸುತ್ತಮುತ್ತಲಿನ 40 ಜನರ ಫೋನ್ʼಗಳನ್ನು ರಾಜ್ಯ ಸರಕಾರ ಟ್ಯಾಪ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ರೇವಣ್ಣ ಅವರ ಫೋನ್ ಸೇರಿದಂತೆ ನನ್ನ ಸುತ್ತಮುತ್ತ ಇರುವ ಎಲ್ಲರ ಫೋನ್ ಗಳನ್ನೂ ಸರಕಾರ ಟ್ಯಾಪ್ ಮಾಡಿಸುತ್ತಿದೆ. ನನ್ನ ಫೋನ್ ಕೂಡ ಟ್ಯಾಪ್ ಆಗುತ್ತಿದೆ ಎಂದು ದೂರಿದರು. ರಾಜಕೀಯವಾಗಿ ನಮ್ಮ ಕುಟುಂಬವನ್ನು ಮುಗಿಸಲೇಬೇಕು ಎಂದು ಈ ಸರಕಾರ ತೀರ್ಮಾನಕ್ಕೆ ಬಂದಿದೆ. ಅದು ಆಡಿಯೋ ಟೇಪುಗಳಲ್ಲಿಯೇ ಬಯಲಾಗಿದೆ. ಹೀಗಾಗಿ ನಮ್ಮ ಕುಟುಂಬದ ಎಲ್ಲರ ಮೊಬೈಲ್ ಫೋನ್ ಗಳನ್ನು ಸರಕಾರ ಕದ್ದಾಲಿಕೆ ಮಾಡಿಸುತ್ತಿದೆ. ಯಾರನ್ನೂ ಇವರು ಬಿಟ್ಟಿಲ್ಲ, ಎಲ್ಲರ ಫೋನ್ ಟ್ಯಾಪ್ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು. ಫೋನ್ ಟ್ಯಾಪ್ ಮಾಡುವಂಥ ಮುಟ್ಟಾಳ ಕೆಲಸವನ್ನು ನಮ್ಮ ಸರಕಾರ ಮಾಡುತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರಲ್ಲ ಎಂದು ಮಾಧ್ಯಮಗಳು ಗಮನ ಸೆಳೆದಾಗ; ಭೂತದ ಬಾಯಲ್ಲಿ ಭಗವದ್ಗೀತೆ ಬಂದ ಹಾಗಿದೆ ಡಿಕೆಶಿ ಹೇಳೋದು ಎಂದರು ಅವರು.…

Read More

ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಿರುದ್ಧ ಜಾತ್ಯತೀತ ಜನತಾದಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ನಗರದ ಪ್ರೀಢಂ ಪಾರ್ಕ್ʼನಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಅವರಿಬ್ಬರ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ; ಡಿಕೆಶಿ ಮತ್ತು ಶಿವರಾಮೇಗೌಡ ವಿರುದ್ಧ ಕೂಡಲೇ ಎಸ್ ಐಟಿ ಕೇಸ್ ದಾಖಲಿಸಿ ವಿಚಾರಣೆ ನಡೆಸಬೇಕು, ಉಪ ಮುಖ್ಯಮಂತ್ರಿ ಹುದ್ದೆಯಿಂದ ಡಿಕೆಶಿಯನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡರು; ಡಿ.ಕೆ.ಶಿವಕುಮಾರ್ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಕನ್ನಡನಾಡಿನ ಏಕೈಕ ಮಾಜಿ ಪ್ರಧಾನಿಗಳಾದ ದೇವೇಗೌಡರ ಕುಟುಂಬದ ವಿರುದ್ಧ ಹಗೆತನ ಸಾಧಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸೋಲಿನ ಭಯದಿಂದ ಅವರು ಇದನ್ನೆಲ್ಲಾ ಮಾಡುತ್ತಿದ್ದಾರೆ, ತಮ್ಮ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಅವರನ್ನು ಮುಖ್ಯಮಂತ್ರಿಗಳು ತಕ್ಷಣವೇ ಸಂಪುಟದಿಂದ ವಜಾ ಮಾಡಬೇಕು ಎಂದು…

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ನಂತ್ರ, ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಶಾಲಾ ಪರೀಕ್ಷೆಗಳ ಇಲಾಖೆ ನಡೆಸಿತ್ತು. ಈ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸುವುದಾಗಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಾಲಾ ಪರೀಕ್ಷೆಗಳ ಇಲಾಖೆಯು ತಿಳಿಸಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು ಎಂದು ಹೇಳಿದೆ. ಈ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ದಿನಾಂಕ:21-05-2024ರ ಮಧ್ಯಾಹ್ನ: 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in ನಲ್ಲಿ ರ್ಪಕಟಿಸಲಾಗುವುದು ಎಂದು ಮಾಹಿತಿ ನೀಡಿದೆ. ಇನ್ನೂ ವಿದ್ಯಾರ್ಥಿಗಳು ನಾಳೆ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡ ನಂತ್ರ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧಿಕೃತ ಜಾಲತಾಣ https://karresults.nic.in ಗೆ ಭೇಟಿ ನೀಡಿ ನಿಮ್ಮ ನೋಂದಣಿ ಸಂಖ್ಯೆಯನ್ನು ನೀಡುವ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/school-education-department-issues-order-to-conduct-classes-during-summer-vacation/…

Read More

ಬೆಂಗಳೂರು: ಪ್ರಜ್ವಲ್‌, ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್‌ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್‌ ರೇವಣ್ಣ ಅವರಿಗೆ ಸಂದೇಶ ನೀಡಿದರು.  ಈ ಸರಕಾರಕ್ಕೆ ಪ್ರಜ್ವಲ್ ಕರೆಸುವ ಶಕ್ತಿ ಇದ್ದಂತಿಲ್ಲ. ಅದಕ್ಕೆ ನಾನೇ ಕರೆ ಕೊಡುತ್ತಿದ್ದೇನೆ. ಮಾಧ್ಯಮಗಳ ಮೂಲಕ ಹೇಳುತ್ತಿದ್ದೇನೆ. ಕೂಡಲೇ ವಾಪಸ್‌ ಬಾ.. ದೊಡ್ಡವರು (ದೇವೇಗೌಡರು) ಮತ್ತು ಪಕ್ಷದ ಕಾರ್ಯಕರ್ತರಿಗೆ ಗೌರವ ಕೊಟ್ಟು ತಕ್ಷಣ ವಾಪಸ್‌ ಬಾ.. ತನಿಖಾ ತಂಡಕ್ಕೆ ಸಹಕರಿಸು. ಕಾನೂನು ಪ್ರಕಾರ ಪ್ರಕರಣವನ್ನು ಎದುರಿಸು ಎಂದು ಹೇಳಿದರು ಮಾಜಿ ಮುಖ್ಯಮಂತ್ರಿಗಳು. ನಮ್ಮ ತಂದೆಯವರ ನೋವು ನೋಡಲಾಗದೆ ಈ ಮಾತನ್ನು ಹೇಳುತ್ತಿದ್ದೇನೆ. ಇತರೆ ಯಾರೂ ನಮ್ಮಿಂದ ನೋವಿಗೆ ತುತ್ತಾಗಬಾರದು. ನಾನೇ ಮಾಧ್ಯಮಗಳ ಮೂಲಕ ಮನವಿ ಮಾಡುತ್ತೇನೆ ಎಂದು ತಂದೆಯವರು ಹೇಳಿದರು. ನಾನೇ ವಾಪಸ್‌ ಬರುವಂತೆ ಸಂದೇಶ ಕೊಡುತ್ತೇನೆ ಎಂದು ನಿಮ್ಮಗಳ (ಮಾಧ್ಯಮಗಳು) ಮೂಲಕ ಬಹಿರಂಗವಾಗಿ ಹೇಳುತ್ತದ್ದೇನೆ ಎಂದರು ಕುಮಾರಸ್ವಾಮಿ ಅವರು. ನಾನು ದಿನವೂ ಪದ್ಮನಾಭ ನಗರಕ್ಕೆ ಹೋಗುತ್ತೇನೆ.…

Read More

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಎದುರು ನೋಡುತ್ತಿರುವಂತ ಪರೀಕ್ಷೆ-2ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ ಪ್ರಕಟವಾಗಲಿದೆ. ಆ ಬಳಿಕ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ನೋಡಬಹುದಾಗಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು,  2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು, ಇದರ ಫಲಿತಾಂಶವನ್ನು ದಿನಾಂಕ:21-05-2024ರ ಮಧ್ಯಾಹ್ನ: 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in ನಲ್ಲಿ ರ್ಪಕಟಿಸಲಾಗುವುದು ಎಂದು ತಿಳಿಸಿದೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/former-cm-hd-kumaraswamy-calls-dk-shivakumar-cd-shivu/ https://kannadanewsnow.com/kannada/reservation-in-outsourced-recruitment-will-now-be-applicable-state-govt/

Read More

ಬೆಂಗಳೂರು: ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ನಾಶ ಮಾಡುವುದಕ್ಕೆ ಈ ಸರಕಾರದಲ್ಲಿರುವ ʼಸೀಡಿ ಶಿವುʼ ಸಂಚು ರೂಪಿಸಿರುವುದು ದೃಢಪಟ್ಟಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಇಡೀ ಸಂಚಿನ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಾಯಿತಲ್ಲ, ಮೊಬೈಲ್‌ ಸಂಭಾಷಣೆಯಲ್ಲಿ ಎಲ್ಲವೂ ಬಯಲಾಗಿದೆ ಡಿ.ಕೆ.ಶಿವಕುಮಾರ್, ಎಲ್.ಆರ್.‌ಶಿವರಾಮೇಗೌಡ, ದೇವರಾಜೇಗೌಡ ನಡಿವಿನ ಸಂಭಾಷಣೆ ಆಡಿಯೋ ಲೀಕ್ ಆಗಿದೆ. ಸಂಚು ರೂಪಿಸಿರುವ ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ಮೇಲೆ ಕೂಡಲೇ ಪ್ರಕರಣ ದಾಖಲಿಸಿ, ವಿಚಾರಣೆಗೆ ಒಳಪಡಿಸಿ ಎಂದು ಗೃಹ ಡಾ.ಜಿ.ಪರಮೇಶ್ವರ್‌ ಅವರನ್ನು ಅವರು ಒತ್ತಾಯ ಮಾಡಿದರು ಸೀಡಿ ಶಿವು ಅವರು ಪೆನ್ʼಡ್ರೈವುಗಳನ್ನು ಸೃಷ್ಟಿ ಮಾಡುವುದರಲ್ಲಿ ಇವರು ಎಕ್ಸ್ʼಪರ್ಟ್. ನಾನು ಬರೀ ಸಿನಿಮಾ ಹಂಚಿಕೆದಾರ. ಆದರೆ ಇವರ ಹಂಚಿಕೆಯೇ ಬೇರೆ‌. ಮೊದಲಿನಿಂದಲೂ ಅವರು ಅದನ್ನೇ ಮಾಡಿಕೊಂಡು ಬಂದರು. ಅವರ ಪಕ್ಷದ ಶಾಸಕನೊಬ್ಬ, ಪೆನ್ ಡ್ರೈವುಗಳ ಹಿಂದೆ ದೊಡ್ಡ ತಿಮಿಂಗಿಲ ಇದೆ ಎಂದು ಹೇಳಿದ್ದರಲ್ಲವೇ? ನಾನೆಲ್ಲಿ ಹೇಳಿದ್ದೆ ಪರಮೇಶ್ವರ್‌ ಅವರೇ. SIT…

Read More

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ಬೇಸಿಗೆ ರಜಾ ಅವಧಿಯಲ್ಲೂ ತರಗತಿ ನಡೆಸುತ್ತಿರೋ ಬಗ್ಗೆ ಮಹತ್ವದ ಆದೇಶವನ್ನು ಹೊರಡಿಸಿದೆ. ಅದೇನು ಅಂತ ಮುಂದೆ ಓದಿ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು,  2023-24ನೇ ಸಾಲಿನಲ್ಲಿ ರಾಜ್ಯ ಪಠ್ಯ ಕ್ರಮದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿಗೆ ಶೈಕ್ಷಣಿಕ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ದಿನಾಂಕ:11.04.2024 ರಿಂದ 28.05.2024ರವರೆಗೆ ಬೇಸಿಗೆ ರಜೆ ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಆದರೆ ಉಲ್ಲೇಖ-2ರನ್ನಯ ರಾಜ್ಯದಲ್ಲಿನ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆಯನ್ನು ಕಡಿತಗೊಳಿಸಿ ತರಗತಿಗಳನ್ನು ಪ್ರಾರಂಭಿಸಿದ್ದು, ಈ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈಗಾಗಲೇ ನಿಗಧಿಯಾದಂತೆ ಶೈಕ್ಷಣಿಕ ರಜೆಯನ್ನು ಮುಂದುವರಿಸುವಂತೆ ಕ್ರಮ ಕೈಗೊಳ್ಳುವಂತೆ ಕೋರಿರುತ್ತಾರೆ ಎಂದು ಹೇಳಿದ್ದಾರೆ. ಪರಿಶೀಲಿಸಲಾಗಿ, ಮಕ್ಕಳಿಗೆ ಶೈಕ್ಷಣಿಕ ವರ್ಷದಲ್ಲಿ ಶಾಲಾ ಚಟುವಟಿಕೆಗಳನ್ನು ಸೇರಿದಂತೆ ಶೈಕ್ಷಣಿಕ ಮಾರ್ಗಸೂಚಿ ಮತ್ತು ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದ ಅದರಂತೆ ಶಾಲೆಗಳನ್ನು ಪ್ರಾರಂಭಿಸಿ ಮುಂದುವರೆಸಲು ಕ್ರಮವಹಿಸುವಂತೆ…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಂದಿಗೆ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದೆ. ಇದೇ ಸಂದರ್ಭದಲ್ಲಿ ಜನರಿಗಾಗಿ ಜಾರಿಗೊಳಿಸಿದಂತ ಪಂಚ ಗ್ಯಾರಂಟಿ ಯೋಜನೆಗಳಿಗೆ ಖರ್ಚಾದ ಹಣದ ವಿವರವನ್ನು ಹಂಚಿಕೊಂಡಿದೆ. ಹಾಗಾದ್ರೇ ಗ್ಯಾರಂಟಿ ಯೋಜನೆಗಳಿಗೆ ಖರ್ಚಾದ ಹಣ ಎಷ್ಟು ಅಂತ ಮುಂದೆ ಓದಿ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಗೃಹ ಲಕ್ಷ್ಮೀ ಯೋಜನೆಗೆ ದಿನಾಂಕ 19-05-2024ರವರೆಗೆ ರೂ.23,098 ಕೋಟಿ ವೆಚ್ಚವಾಗಿದೆ ಎಂದು ತಿಳಿಸಿದೆ. ಇನ್ನೂ ಗೃಹ ಜ್ಯೋತಿ ಯೋಜನೆಗೆ ರೂ.10,207 ಕೋಟಿ, ಶಕ್ತಿ ಯೋಜನೆ ರೂ.4,054 ಕೋಟಿ, ಅನ್ನಭಾಗ್ಯ ಯೋಜನೆಗೆ ರೂ.7,364 ಕೋಟಿ ಹಾಗೂ ಯುವನಿಧಿಗೆ 93 ಕೋಟಿ ಹಣವನ್ನು ವೆಚ್ಚ ಮಾಡಿರುವುದಾಗಿ ತಿಳಿಸಿದೆ. ಶಕ್ತಿ ಯೋಜನೆಗೆ 211.5 ಕೋಟಿ ಟ್ರಿಪ್ಪುಗಳಲ್ಲಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣಿಸಿದ್ದಾರೆ ಎಂಬುದಾಗಿ ಮಾಹಿತಿ ನೀಡಿದೆ. ಒಟ್ಟಾರೆಯಾಗಿ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳಿಗೆ ಬರೋಬ್ಬರಿ ರೂ.44,816 ಕೋಟಿ ದಿನಾಂಕ 19-05-2024ರವರೆಗೆ ವೆಚ್ಚವಾಗಿದೆಯಂತೆ. https://kannadanewsnow.com/kannada/beware-of-smoke-pan-lovers-12-year-old-girl-undergoes-surgery-after-eating-paan/…

Read More

ನಮ್ಮ ಸುತ್ತ ಹೆಚ್ಚು ಧನಾತ್ಮಕ ಶಕ್ತಿಯಿದ್ದರೆ, ಹೆಚ್ಚಿನ ಪ್ರಯೋಜನಗಳು ನಮಗೆ ಬರುತ್ತವೆ. ನಮ್ಮ ಸುತ್ತ ತುಂಬಾ ನಕಾರಾತ್ಮಕ ಶಕ್ತಿ ಇದ್ದರೆ, ನಕಾರಾತ್ಮಕ ಘಟನೆಗಳು ಸಂಭವಿಸುತ್ತವೆ. ಹಲವಾರು ನಕಾರಾತ್ಮಕ ಕಂಪನಗಳು ಇದ್ದರೆ, ನಾವು ಯಾವುದೇ ಪ್ರಗತಿಯನ್ನು ಸಾಧಿಸುವುದಿಲ್ಲ. ಯಾವುದೇ ಪ್ರಗತಿ ಇಲ್ಲದಿದ್ದರೆ, ಹಣದ ಹರಿವು ಇರುವುದಿಲ್ಲ. ಇದರಿಂದ ಅನೇಕ ಸಂಕಷ್ಟಗಳು ಎದುರಾಗಲಿವೆ. ಹಾಗಾಗಿ ನಮ್ಮ ಸುತ್ತ ಇರಬಹುದಾದ ಋಣಾತ್ಮಕ ಶಕ್ತಿಗಳನ್ನು ತೊಡೆದುಹಾಕಿದರೆ ಮಾತ್ರ ನಮಗೆ ಆದಾಯವನ್ನು ಗಳಿಸಲು ಅವಕಾಶಗಳಿವೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ನಾವು ಋಣಾತ್ಮಕ ಶಕ್ತಿಗಳನ್ನು ದೂರವಿಡಲು ಮತ್ತು ಹಣದ ಹರಿವನ್ನು ಹೆಚ್ಚಿಸಲು ಲವಂಗ ಪರಿಹಾರವನ್ನು ನೋಡಲಿದ್ದೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…

Read More