Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದಾಗಿ ಆರೋಪಿಸಿ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಕರ್ನಾಟಕದ ಡಿಜಿ-ಐಜಿಪಿಯವರಿಗೆ ದೂರು ನೀಡಲಾಗಿದೆ. ಈ ಕುರಿತಂತೆ ಬಜರಂಗದಳದ ತೇಜಸ್ ಎ ಗೌಡ ಎಂಬುವರು ದೂರು ನೀಡಿದ್ದು, ಧರ್ಮಸ್ಥಳದಲ್ಲಿ ಅಸಹಜ ಸಾವುಗಳು, ಇತ್ಯಾದಿಗಳ ಬಗ್ಗೆ ಅಸತ್ಯ ಮಾಹಿತಿ ಮತ್ತು ಸುಳ್ಳು ವೀಡಿಯೋಗಳನ್ನು ಪ್ರಕಟಿಸಿರುವುದು ಕೋಟ್ಯಾಂತರ ಹಿಂದೂ ಭಕ್ತರ ಧಾರ್ಮಿಕ ಭಾವನೆಗಳಿಗೆ ಗಂಭೀರವಾಗಿ ಹಾನಿಗೊಳಿಸಲಾಗಿದೆ ಎಂದಿದ್ದಾರೆ. ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ನೋವು ಪಡಿಸಿ, ಧರ್ಮ ಮತ್ತು ಧರ್ಮಗಳ ನಡುವೆ ದ್ವೇಷಗಳನ್ನು ಭಿತ್ತಲು ಪ್ರಯತ್ನಿಸುತ್ತಿದ್ದಾರೆ. ಈ ವೀಡಿಯೋಗಳು ವ್ಯವಸ್ಥಿತವಾಗಿ ದುರುದ್ದೇಶದಿಂದ ಮತ್ತು ಸಂಚು ರೂಪಿಸಿ ಪವಿತ್ರ ಕ್ಷೇತ್ರವನ್ನು ಕೆಡಿಸುವ ಪ್ರಯತ್ನವಾಗಿದೆ. ಅದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆ, ಧಾರ್ಮಿಕ ಸಂಘರ್ಷ ಸೃಷ್ಟಿಸುವ ಸಾಧ್ಯತೆ ಉಂಟಾಗಿದೆ. ಈ ಕೂಡಲೇ ಈತನನ್ನು ಬಂಧಿಸಿ ಕಟ್ಟು ನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಕಾನೂನಿನಡಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹ ಭಾರತೀಯ ನ್ಯಾಯ ಸಂಹಿತೆ 2023 ಸುಳ್ಳು ಮಾಹಿತಿ ನೀಡುವುದು -…
ನವದೆಹಲಿ: ಆನ್ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಅನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಅವರು ಮಸೂದೆಯನ್ನು ಮಂಡಿಸಿದರು, ಇದನ್ನು ಮಂಗಳವಾರ ಕೇಂದ್ರ ಸಚಿವ ಸಂಪುಟವು ಅಂಗೀಕರಿಸಿತು. ವೈಷ್ಣವ್ ಅವರು ಮಸೂದೆಯ ಅಂಗೀಕಾರಕ್ಕಾಗಿ ಮುಂದಾದ ಮೊದಲು, ಸ್ಪೀಕರ್ ಓಂ ಬಿರ್ಲಾ ಅವರು ಸದನದಲ್ಲಿ ಮಸೂದೆಯ ಮೇಲಿನ ಚರ್ಚೆಗೆ ಪರವಾಗಿ/ವಿರುದ್ಧವಾಗಿ ಮತ ಚಲಾಯಿಸಲು ಬಯಸುತ್ತೀರಾ ಎಂದು ಸದನವನ್ನು ಕೇಳಿದರು. ಆನ್ಲೈನ್ ಹಣದ ಗೇಮಿಂಗ್ ಪ್ಲಾಟ್ಫಾರ್ಮ್ಗಳನ್ನು ನಿಷೇಧಿಸುವ ಪ್ರಸ್ತಾಪವನ್ನು ಹೊಂದಿರುವ ಮಸೂದೆಯು, ಅಧಿಕಾರಿಗಳಿಗೆ ವಾರಂಟ್ ಇಲ್ಲದೆ ಶೋಧ ಮತ್ತು ಬಂಧಿಸಲು ಅಧಿಕಾರ ನೀಡುತ್ತದೆ. ಕಂಪ್ಯೂಟರ್ ವ್ಯವಸ್ಥೆಗಳು, ಸರ್ವರ್ಗಳು ಮತ್ತು ಸಂವಹನ ಸಾಧನಗಳು ಸೇರಿದಂತೆ ಆನ್ಲೈನ್ ಗೇಮಿಂಗ್ನ ತನಿಖೆಯ ವ್ಯಾಪ್ತಿಯನ್ನು “ಯಾವುದೇ ಸ್ಥಳಕ್ಕೆ” ವಿಸ್ತರಿಸುವ ಅಧಿಕಾರವನ್ನು ಇದು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಈ ಮಸೂದೆಯು ವ್ಯಕ್ತಿಗಳನ್ನು, ವಿಶೇಷವಾಗಿ ಯುವಕರು ಮತ್ತು ದುರ್ಬಲ ಜನಸಂಖ್ಯೆಯನ್ನು, ಅಂತಹ ಆಟಗಳ ಪ್ರತಿಕೂಲ ಸಾಮಾಜಿಕ, ಆರ್ಥಿಕ, ಮಾನಸಿಕ ಮತ್ತು ಗೌಪ್ಯತೆಗೆ ಸಂಬಂಧಿಸಿದ ಪರಿಣಾಮಗಳಿಂದ ರಕ್ಷಿಸಲು ಪ್ರಯತ್ನಿಸುತ್ತದೆ.…
ಬೆಂಗಳೂರು: ಇಂದು ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಮಂಡಿಸಲಾಗಿತ್ತು. ಈ ಬಿಲ್ ಅನ್ನು ಮತಕ್ಕೆ ಹಾಕಲಾಗಿದ್ದು, ಅತಿ ಹೆಚ್ಚು ಮತಗಳು ಬಿಲ್ ವಿರೋಧಿಸಿ ವ್ಯಕ್ತವಾಗಿದ್ದಾವೆ. ಈ ಮೂಲಕ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್ತಿನಲ್ಲಿ ತಿರಸ್ಕಾರಗೊಂಡು ಸರ್ಕಾರಕ್ಕೆ ಭಾರೀ ಮುಖಭಂಗವಾದಂತೆ ಆಗಿದೆ. ವಿಧಾನ ಪರಿಷತ್ತಿನಲ್ಲಿ ರಾಜ್ಯ ಸರ್ಕಾರದಿಂದ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲಾಗಿತ್ತು. ಇದಕ್ಕೆ ವಿಪಕ್ಷಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ಮತಕ್ಕೆ ಹಾಕುವಂತೆ ಒತ್ತಾಯ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಬಿಲ್ ಅನ್ನು ಮತಕ್ಕೆ ಹಾಕಲಾಯಿತು. ಈ ವೇಳೆ ಬಿಲ್ ಪರವಾಗಿ 24 ಮತಗಳು ಬಿದ್ದರೇ, ಬಿಲ್ ವಿರೋಧಿಸಿ 26 ಮತಗಳನ್ನು ಚಲಾಯಿಸಲಾಗಿದೆ. ಹೀಗಾಗಿ ಬಿಲ್ ವಿರೋಧಿಸಿ ಅತಿ ಹೆಚ್ಚು ಮತಗಳು ಬಿದ್ದ ಪರಿಣಾಮ, ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ತಿರಸ್ಕಾರಗೊಂಡಂತೆ…
ಬೆಂಗಳೂರು: ಧರ್ಮಸ್ಥಳದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ ಎಂಬುದಾಗಿ ಯೂಟ್ಯೂಬರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಡಿಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂಬುದಾಗಿ ಆರೋಪಿಸಿ ಯೂಟ್ಯೂಬರ್ ವಿರುದ್ಧ ಇಡಿಗೆ ಹಿಂದೂ ಮುಖಂಡ ತೇಜಸ್ ಗೌಡ ಎಂಬುವರು ದೂರು ನೀಡಿದ್ದಾರೆ. ಮುಸ್ಲೀಂ ಯೂಟ್ಯೂಬರ್ ಮತ್ತು ಅಸೋಸಿಯೇಟ್ಸ್ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಿಂದೂಗಳ ಧಾರ್ಮಿಕ ನಂಬಿಕೆಗಳಿಗೆ ಹಾನಿ ಮಾಡುತ್ತಿದ್ದಾನೆ. ಧರ್ಮಸ್ಥಳ ಮಂದಿರದ ಹೆಸರು ಕೆಡಿಸಲು ಪ್ರಯತ್ನ ನಡೆಯುತ್ತಿದೆ ಎಂಬುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕಾಗಿ ಇವರಿಗೆಲ್ಲ ಹೊರದೇಶದಿಂದ ಹಣ ಬರುತ್ತಿದೆ. ಹೀಗಾಗಿ ಈ ಪ್ರಕರಣ ಗಂಭೀರವಾಗಿ ಪರಿಗಣಿಸಬೇಕು ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಹಿಂದೆ ದೊಡ್ಡ ಗುಂಪಿದೆ. ಅವರ ಕೈವಾಡದಿಂದ ಅಪಪ್ರಚಾರ ಸೇರಿದಂತೆ ಎಲ್ಲವೂ ನಡೆಯುತ್ತಿದೆ ಎಂಬುದಾಗಿ ಹೇಳಲಾಗಿದೆ. https://kannadanewsnow.com/kannada/6-reservation-for-left-handers-6-for-the-right-community-and-5-for-the-touchable-community-cm-siddaramaiahs-announcement/ https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/ https://kannadanewsnow.com/kannada/good-news-for-the-people-of-the-state-applications-invited-for-various-schemes-including-ganga-kalyana-swavalambi-sarathi/
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಗಳ ಎಡಗೈ ಸಮುದಾಯಕ್ಕೆ ಶೇ.6ರಷ್ಟು, ಬಲ ಸಮುದಾಯಕ್ಕೆ ಶೇ.6ರಷಅಟು ಸ್ಪೃಶ್ಯ ಸಮುದಾಯಕ್ಕೆ ಶೇ.5ರಷ್ಟು ಒಳ ಮೀಸಲಾತಿ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲೇ ಘೋಷಿಸಿದ್ದಾರೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸಭೆಯಲ್ಲಿ ಮಾತನಾಡಿದರು. 1. ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ದಿನಾಂಕ:01.08.2024 ರಂದು ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ “ The provision provides the State with the power to make “any” special provisions for the Schedules castes and the Scheduled Tribes. Thereby, it recognizes the wide power of the State to employ a range of means to secure substantive equality. This would include sub-classification within the Scheduled…
ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ಮಾತನಾಡಿದರು. ಅವರ ಮಾತಿನ ಪ್ರಮುಖ ಹೈಲೈಟ್ಸ್ ಮುಂದೆ ಓದಿ. 1. ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ದಿನಾಂಕ:01.08.2024 ರಂದು ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ “ The provision provides the State with the power to make “any” special provisions for the Schedules castes and the Scheduled Tribes. Thereby, it recognizes the wide power of the State to employ a range of means to secure substantive equality. This would include sub-classification within the Scheduled Castes.” ಎಂದು ತೀರ್ಪು ನೀಡಿದೆ. ಅಂದರೆ, ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಸಾಂವಿಧಾನಿಕವಾಗಿ ದತ್ತವಾಗಿದೆ ಎಂದು…
ಬೆಂಗಳೂರು: ಒಳ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ದಾಖಲಾಗಿರುವಂತ ಮೊಕದ್ದಮೆಗಳನ್ನು ಸರ್ಕಾರ ಹಿಂಪಡೆಯಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ವಿಪಕ್ಷಗಳ ನಾಯಕರ ಪ್ರಶ್ನೆಗೆ ಉತ್ತರಿಸಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಏನಾದರೂ ಬದಲಾವಣೆ ಮಾಡಬೇಕಾದ್ರೆ ಮುಂದಿನ ಹಂತದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು. ಇದಕ್ಕೆ ಮೇಜು ತಟ್ಟಿ ಆಡಳಿತ ಪಕ್ಷದ ಸದಸ್ಯರು ಸ್ವಾಗತಿಸಿದರು. ನಿಮ್ಮ ಕೈಯಲ್ಲಿ ಮಾಡಲು ಆಗಲಿಲ್ಲ ಅಂತಾನೇ ನಾವು ಮಾಡಿದ್ದೇವೆ. ನಿಮ್ಮನ್ನು ಕಂಡರೆ ಭಯ ಇಲ್ಲ ಎಂಬುದಾಗಿ ಹೇಳುವ ಮೂಲಕ ಬಿಜೆಪಿಯವರಿಗೆ ಸಿಎಂ ಸಿದ್ಧರಾಮಯ್ಯ ಕೌಂಟರ್ ನೀಡಿದರು. https://kannadanewsnow.com/kannada/approval-of-the-karnataka-state-civil-services-amendment-bill-in-the-legislative-council/ https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/
ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಹೀಗಾಗಿ ಇನ್ಮುಂದೆ ಆರೋಗ್ಯ ಇಲಾಖೆಯ ವೈದ್ಯರು, ನರ್ಸ್ ಸೇರಿದಂತೆ ಇತರೆ ಸಿಬ್ಬಂದಿಗಳಿಗೆ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವುದು ಕಡ್ಡಾಯಗೊಂಡಂತೆ ಆಗಿದೆ. ರಾಜ್ಯದ ನಗರ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವಂತ ವೈದ್ಯರು, ನರ್ಸ್ ಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಇನ್ಮುಂದೆ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ. ಇದರ ಸಂಬಂಧ ವಿಧಾನಪರಿಷತ್ತಿನಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಕಾಯ್ದೆ ವಿಧಾನ ಪರಿಷತ್ ನಲ್ಲಿ ಅಂಗೀಕಾರಗೊಂಡಿದೆ. ಇಂದು ವಿಧಾನ ಪರಿಷತ್ತಿನಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ನಗರ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ವೈದ್ಯರು, ನರ್ಸ್ ಗಳು, ಡಿ ಗ್ರೂಪ್ ಸಿಬ್ಬಂದಿಗಳು ದೀರ್ಘಕಾಲದಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಕೆಲಸದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಇವರನ್ನು ವರ್ಗಾವಣೆ ಮಾಡಿದರೇ…
ಶಿವಮೊಗ್ಗ: ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ:27-08-2025 ರಿಂದ 15-09-2025 ರವರೆಗೆ ಜಿಲ್ಲೆಯಾದ್ಯಂತ ಕಲರ್ ಪೇಪರ್ ಬ್ಲಾಸ್ಟಿಂಗ್. ಸಿಡಿಮದ್ದು ಸಿಡಿಸುವುದನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಆದೇಶಿಸಿದ್ದಾರೆ. ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು 2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬAಧ ಈ ಕೆಳಕಂಡAತೆ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ /ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ…
ನವದೆಹಲಿ: ತ್ರಿಶೂರ್ ಜಿಲ್ಲೆಯ ಪಲಿಯೆಕ್ಕರ ಪ್ಲಾಜಾದಲ್ಲಿ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸುವ ಕೇರಳ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್, ಅಪೂರ್ಣ, ಹೊಂಡಗಳಿಂದ ಕೂಡಿದ ಅಥವಾ ಸಂಚಾರ ದಟ್ಟಣೆಯಿಂದ ಸಂಚಾರಕ್ಕೆ ಯೋಗ್ಯವಲ್ಲದ ಹೆದ್ದಾರಿಗಳಲ್ಲಿ ಪ್ರಯಾಣಿಕರನ್ನು ಟೋಲ್ ಪಾವತಿಸಲು ಒತ್ತಾಯಿಸಲಾಗುವುದಿಲ್ಲ ಎಂದು ತೀರ್ಪು ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ಆರ್ ಗವಾಯಿ ನೇತೃತ್ವದ ನ್ಯಾಯಮೂರ್ತಿಗಳಾದ ಕೆ ವಿನೋದ್ ಚಂದ್ರನ್ ಮತ್ತು ಎನ್ ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಅಮಾನತುಗೊಂಡ ಟೋಲ್ ಸಂಗ್ರಹದಿಂದ ಉಂಟಾಗುವ ಆರ್ಥಿಕ ನಷ್ಟಕ್ಕಿಂತ ನಾಗರಿಕರ ಕಲ್ಯಾಣಕ್ಕೆ ಆದ್ಯತೆ ನೀಡಿ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಮತ್ತು ರಿಯಾಯಿತಿದಾರರು ಸಲ್ಲಿಸಿದ ಮೇಲ್ಮನವಿಗಳನ್ನು ವಜಾಗೊಳಿಸಿತು. “ಈ ಮಧ್ಯೆ, ನಾಗರಿಕರು ಈಗಾಗಲೇ ತೆರಿಗೆ ಪಾವತಿಸಿರುವ ರಸ್ತೆಗಳಲ್ಲಿ ಚಲಿಸಲು ಮುಕ್ತರಾಗಿರಲಿ, ಇದು ಅಸಮರ್ಥತೆಯ ಸಂಕೇತವಾಗಿದೆ” ಎಂದು ಪೀಠವು ಆಗಸ್ಟ್ 6 ರ ಹೈಕೋರ್ಟ್ನ ಆದೇಶವನ್ನು ಅನುಮೋದಿಸಿತು. ಕೇರಳ ಹೈಕೋರ್ಟ್, NHAI ಅಥವಾ ಅದರ ಏಜೆಂಟರು ಅಡೆತಡೆಯಿಲ್ಲದ, ಸುರಕ್ಷಿತ ಮತ್ತು ನಿಯಂತ್ರಿತ ರಸ್ತೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವಲ್ಲಿ…










