Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ಇಂದು ಜೂನ್ 11 ರಂದು 2025 ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್ಸೈಟ್ upsc.gov.in ನಲ್ಲಿ ಪರಿಶೀಲಿಸಬಹುದು ಮತ್ತು ಡೌನ್ಲೋಡ್ ಮಾಡಬಹುದು. ಫಲಿತಾಂಶದ PDF ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮತ್ತು ಈಗ ಮುಖ್ಯ ಪರೀಕ್ಷೆಗೆ ಹಾಜರಾಗಬಹುದಾದ ಅಭ್ಯರ್ಥಿಗಳ ರೋಲ್ ಸಂಖ್ಯೆಗಳನ್ನು ಒಳಗೊಂಡಿದೆ. ಪಟ್ಟಿಯಲ್ಲಿ ತಮ್ಮ ರೋಲ್ ಸಂಖ್ಯೆಯನ್ನು ತ್ವರಿತವಾಗಿ ಕಂಡುಹಿಡಿಯಲು ತಮ್ಮ ಕೀಬೋರ್ಡ್ನಲ್ಲಿ Ctrl+F ಅನ್ನು ಬಳಸಬಹುದು. UPSC CSE ಪ್ರಿಲಿಮ್ಸ್ 2025 ಫಲಿತಾಂಶವನ್ನು ಈ ಹಂತ ಅನುಸರಿಸಿ ಪರಿಶೀಲಿಸಿ UPSC ವೆಬ್ಸೈಟ್ಗೆ ಹೋಗಬೇಕು: upsc.gov.in ಮುಖಪುಟದಲ್ಲಿ, “ಹೊಸತೇನಿದೆ” ಅಥವಾ “ಪರೀಕ್ಷೆಗಳು” ಕ್ಲಿಕ್ ಮಾಡಿ “UPSC CSE ಪ್ರಿಲಿಮ್ಸ್ 2025 ಫಲಿತಾಂಶ” ಎಂದು ಓದುವ ಲಿಂಕ್ಗಾಗಿ ನೋಡಿ PDF ಫೈಲ್ ತೆರೆಯಿರಿ ಅಥವಾ ಡೌನ್ಲೋಡ್ ಮಾಡಿ ಪಟ್ಟಿಯಲ್ಲಿ ನಿಮ್ಮ ರೋಲ್ ಸಂಖ್ಯೆಯನ್ನು ನೋಡಿ ಈ ವರ್ಷ ಹೊಸ OTR ವ್ಯವಸ್ಥೆಯನ್ನು…
ಬೆಂಗಳೂರು: ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿ, ಸಚಿವರನ್ನೊಳಗೊಂಡು ಸಭೆಯನ್ನು ನಡೆಸಿದರು. ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ. ಕಳೆದ 10 ದಿನಗಳಲ್ಲಿ 5ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು…
ನವದೆಹಲಿ: ಮಂಗಳವಾರ ದೆಹಲಿಯ ಫರಿದಾಬಾದ್ ಪ್ರದೇಶದಲ್ಲಿ ಅಮನ್ ತನ್ನ ನಾಲ್ವರು ಮಕ್ಕಳೊಂದಿಗೆ ಚಲಿಸುತ್ತಿರುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳದಿಂದ ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಮೃತರನ್ನು ಬಿಹಾರ ನಿವಾಸಿ ಮನೋಜ್ ಮಹಾತೋ ಎಂದು ಗುರುತಿಸಲಾಗಿದೆ. ಪೊಲೀಸರು ಅವರ ಪತ್ನಿಯ ಫೋನ್ ಸಂಖ್ಯೆಯನ್ನು ಪತ್ತೆ ಹಚ್ಚಿ, ನಂತರ ಅವರ ಕುಟುಂಬಕ್ಕೆ ಘಟನೆಯ ಬಗ್ಗೆ ತಿಳಿಸಲಾಗಿದ್ದು, ಅವರು ಸ್ಥಳಕ್ಕೆ ಬಂದು ಶವಗಳನ್ನು ಗುರುತಿಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಾದ್ಶಾ ಖಾನ್ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಗೋಲ್ಡನ್ ಟೆಂಪಲ್ ಎಕ್ಸ್ಪ್ರೆಸ್ನ ಚಾಲಕ ಘಟನೆಯ ಬಗ್ಗೆ ಸ್ಟೇಷನ್ ಮಾಸ್ಟರ್ಗೆ ಮಾಹಿತಿ ನೀಡಿದ್ದಾನೆ. ಅವರು ನಮಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತಲುಪಿದ ನಂತರ, ಅವರ ಹೆಸರು ಮತ್ತು ಅವರ ಪತ್ನಿಗೆ ಸೇರಿದ ಫೋನ್ ಸಂಖ್ಯೆಯನ್ನು ಒಳಗೊಂಡ ಆಧಾರ್ ಕಾರ್ಡ್ ನಮಗೆ ಸಿಕ್ಕಿತು. ಘಟನೆಯ ಬಗ್ಗೆ ಅವರಿಗೆ ತಿಳಿಸಲಾಯಿತು ಮತ್ತು ಶವಗಳನ್ನು ಅವರು ಗುರುತಿಸಿದ್ದಾರೆ ಎಂದು ಜಿಆರ್ಪಿ ಎಸ್ಎಚ್ಒ ರಾಜ್ ಪಾಲ್ ಹೇಳಿದರು. ಪೊಲೀಸರ…
ಬೆಂಗಳೂರು: ಕರ್ನಾಟಕ ರಾಜ್ಯ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಯ ನಿದ್ದೆ ಕೆಡಿಸಿದ್ಯಾ? ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಒಬಿಸಿ ನಾಯಕರ ಮೇಲಿನ ಬಿಜೆಪಿ ದ್ವೇಷವು ಎಷ್ಟು ಕ್ರೂರವಾಗಿದೆ ಎಂದರೆ, ನ್ಯಾಯದ ಪ್ರಜ್ಞೆಯೇ ಅವರಿಗೆ ಕಳೆದು ಹೋಗಿದೆ ಅನ್ನಿಸುತ್ತೆ ಎಂಬುದಾಗಿ ಕಾಂಗ್ರೆಸ್ ನ ಸುರ್ಜೇವಾಲಾ ಪ್ರಶ್ನಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಡವರು, ರೈತರು, ಮಧ್ಯಮವರ್ಗದವರೂ ಸೇರಿದಂತೆ ಎಲ್ಲಾ ವರ್ಗದ ಏಳಿಗೆಗಾಗಿ ದುಡಿಯುತ್ತಿರುವ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತಕ್ಕೆ ಮಸಿ ಬಳಿಯಲು ಬಿಜೆಪಿ ವಾಮ ಮಾರ್ಗಗಳನ್ನು ಅನುಸರಿಸುವ ದುಷ್ಟ ಪ್ರಯತ್ನಕ್ಕೆ ಕೈ ಹಾಕಿದೆ. ಇದಕ್ಕಾಗಿ ಕಾಂಗ್ರೆಸ್ನ ಪರಿಶಿಷ್ಟ ಪಂಗಡದ ಸಂಸದ ತುಕಾರಾಂ, ಪರಿಶಿಷ್ಟ ಪಂಗಡದ ಶಾಸಕರಾದ ನಾಗೇಂದ್ರ, ಕಂಪ್ಲಿ ಗಣೇಶ್ ಮತ್ತು ಶ್ರೀನಿವಾಸ್, ಜೊತೆಗೆ ಶಾಸಕ ಭರತ್ ರೆಡ್ಡಿ ಅವರ ಮೇಲೆ ಇಡಿ ದಾಳಿ ನಡೆಸಿದೆ ಎಂದಿದ್ದಾರೆ. ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ, ಬಿಜೆಪಿಯ ಕೈಗೊಂಬೆ ED, ಈಗ ಕಾಂಗ್ರೆಸ್ ಶಾಸಕರ ಮನೆಗಳು ಮತ್ತು ಕಚೇರಿಗಳ ಮೇಲೆ…
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (Union Public Service Commission -UPSC) ಇಂದು ನಾಗರಿಕ ಸೇವಾ ಪರೀಕ್ಷೆ (Civil Services Examination – CSE) ಪೂರ್ವಭಾವಿ ಪರೀಕ್ಷೆಯ ಫಲಿತಾಂಶದ ಸ್ಥಿತಿಯನ್ನು ಬಿಡುಗಡೆ ಮಾಡಿದೆ. UPSC CSE 2025 ರ ಪೂರ್ವಭಾವಿ ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ಈಗ upsc.gov.in ಮತ್ತು upsconline.gov.in ನಿಂದ ತಮ್ಮ ಫಲಿತಾಂಶದ ಸ್ಥಿತಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಮತ್ತು ಪರಿಶೀಲಿಸಬಹುದು. ಮೇ 25, 2025 ರಂದು ಪತ್ರಿಕೆ 1 ಮತ್ತು ಪತ್ರಿಕೆ 2 ಕ್ಕೆ ಪರೀಕ್ಷೆ ನಡೆದಿತ್ತು. ಸಾಮಾನ್ಯ ಅಧ್ಯಯನ ಪತ್ರಿಕೆಗಾಗಿ UPSC CSE ಪೂರ್ವಭಾವಿ ಪತ್ರಿಕೆ 1 ಬೆಳಿಗ್ಗೆ 9.30 ಕ್ಕೆ ಪ್ರಾರಂಭವಾದರೆ, ನಾಗರಿಕ ಸೇವೆಗಳ ಯೋಗ್ಯತಾ ಪರೀಕ್ಷೆ (CSAT) ಗಾಗಿ ಪತ್ರಿಕೆ 2 ಪರೀಕ್ಷೆ ಮಧ್ಯಾಹ್ನ 2:30 ಕ್ಕೆ ಪ್ರಾರಂಭವಾಯಿತು. ವಿದ್ಯಾರ್ಥಿಗಳು ಮತ್ತು ಮಾರ್ಗದರ್ಶಕರ ಪ್ರಕಾರ UPSC ಪೂರ್ವಭಾವಿ ಪರೀಕ್ಷೆ 2025 ಪರೀಕ್ಷೆಯು ಒಟ್ಟಾರೆಯಾಗಿ ದೀರ್ಘ ಪತ್ರಿಕೆಯಾಗಿತ್ತು. ಈ ವರ್ಷ, ನೇಮಕಾತಿ ಪ್ರಕ್ರಿಯೆಯ ಭಾಗವಾಗಿ 979 ಹುದ್ದೆಗಳನ್ನು…
ನಮ್ಮ ಪೂರ್ವಜರ ಕಾಲದಲ್ಲಿ, 60 ಅಥವಾ 70 ವರ್ಷ ವಯಸ್ಸಾದಾಗ ಮಾತ್ರ ಅವರ ಮುಖದಲ್ಲಿ ಸ್ವಲ್ಪ ಸುಕ್ಕುಗಳು ಕಾಣುತ್ತಿದ್ದವು. ಆದರೆ ಇಂದಿನ ಕಾಲದಲ್ಲಿ, ಅನೇಕ ಜನರು ಚಿಕ್ಕ ವಯಸ್ಸಿನಲ್ಲಿಯೇ ಸುಕ್ಕುಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತಾರೆ ಮತ್ತು ವಯಸ್ಸಾದವರಂತೆ ಕಾಣುತ್ತಾರೆ. ಇದು ಅವರ ಜೀವನಶೈಲಿಯಿಂದಾಗಿ, ಈ ಸುಕ್ಕುಗಳನ್ನು ತೆಗೆದುಹಾಕಲು ಮತ್ತು ಕಿರಿಯ ನೋಟವನ್ನು ಪಡೆಯಲು, ಸೌತೆಕಾಯಿಯೊಂದಿಗೆ ಕ್ರೀಮ್ ತಯಾರಿಸಿ ಅದನ್ನು ಬಳಸಿದರೆ ಸಾಕು. ನೀವು ಸುಕ್ಕುಗಳಿಲ್ಲದ, ಯೌವ್ವನದ ನೋಟವನ್ನು ಪಡೆಯಬಹುದು. ಈ ಸೌಂದರ್ಯ ಸಲಹೆ ವಿಭಾಗದಲ್ಲಿ, ಆ ಕ್ರೀಮ್ ಅನ್ನು ಹೇಗೆ ತಯಾರಿಸಬೇಕೆಂದು ನಾವು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ…
ಬೆಂಗಳೂರು: ಜೈನ್ ಸಮುದಾಯ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವಧನ ಪಡೆಯಲಿಚ್ಚಿಸುವ ಅರ್ಹ ಫಲಾನುಭವಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಫಲಾನುಭವಿಗಳು ಜಿಲ್ಲೆಯ ಜೈನ್ ಬಸದಿಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಸಂಘಗಳ ನೊಂದಣಿ ಕಾಯ್ದೆ ಅಥವಾ ಇತರೆ ಸಂಬಂಧಪಟ್ಟ ಕಾಯ್ದೆ ಅನ್ವಯ ನೊಂದಣಿಯಾದ ಪ್ರಧಾನ ಅರ್ಚಕ, ಗ್ರಂಥಿಗೆ ಮಾಸಿಕ ರೂ.6000/, ಸಹಾಯಕ ಗ್ರಂಥಿ, ಅರ್ಚಕರಿಗೆ ಮಾಸಿಕ ರೂ.5000/ ಗೌರವಧನ ನೀಡಲಾಗುವುದು. ಅರ್ಹ ಫಲಾನುಭವಿಗಳು ನಿಗದಿತ ಅರ್ಜಿಯೊಂದಿಗೆ ಅರ್ಚಕ, ಗ್ರಂಥಿಗಳ ಭಾವಚಿತ್ರ, ಬ್ಯಾಂಕ್ ಖಾತೆ ಮತ್ತು ಆಧಾರ್ ಪ್ರತಿ, ಹುದ್ದೆಗೆ ಸಂಬಂಧಪಟ್ಟ ಧಾರ್ಮಿಕ ವಿದ್ಯಾರ್ಹತೆ ಕುರಿತು ದಾಖಲೆ, ಕಳೆದ ಮೂರು ವರ್ಷಗಳಲ್ಲಿ ವಾಸವಿರುವ ಬಗ್ಗೆ ಸ್ಥಳೀಯ ತಹಶೀಲ್ದಾರ್ ಅವರಿಂದ ವಾಸಸ್ಥಳ ದೃಢೀಕರಣ ಹಾಗೂ ಸಂಸ್ಥೆಯವರು ಅರ್ಚಕರ ಮಾಹೆವಾರು ಕರ್ತವ್ಯದ ಹಾಜರಾತಿ, ಸೇವಾ ಪ್ರಮಾಣ ಪತ್ರ ನಿಗದಿತ ನಮೂನೆಯಲ್ಲಿ ಜಿಲ್ಲಾಡಳಿತ ಭವನದಲ್ಲಿನ ಅಲ್ಪಸಂಖ್ಯಾತರ…
ಬೆಂಗಳೂರು: ನಗರದಲ್ಲಿ ಆರ್ ಸಿ ಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಘಟನೆಯ ನಂತ್ರ ಸರ್ಕಾರ ಸಿಐಡಿ ತನಿಖೆಗೆ ಪ್ರಕರಣ ವರ್ಗಾಯಿಸಿತ್ತು. ಹೀಗಾಗಿ ಸಿಐಡಿ ಅಧಿಕಾರಿಗಳ ಮುಂದೆ ಕೆ ಎಸ್ ಸಿ ಎಯ ಮಾಜಿ ಕಾರ್ಯದರ್ಶಿ, ಖಜಾಂಚಿ ಅವರು ವಿಚಾರಣೆಗೆ ಹಾಜರಾದರು. ಬೆಂಗಳೂರು ಕಾಲ್ತುಳಿತ ದುರಂತದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೆ ಎಸ್ ಸಿ ಎ ಮಾಜಿ ಕಾರ್ಯದರ್ಶಿ ಶಂಕರ್ ಹಾಗೂ ಖಜಾಂಚಿ ಜಯರಾಮ್ ಗೆ ಸಿಐಡಿ ನೋಟಿಸ್ ನೀಡಿತ್ತು. ಈ ಹಿನ್ನಲೆಯಲ್ಲಿ ಇಂದು ಸಿಐಡಿ ಕಚೇರಿಗೆ ಶಂಕರ್ ಮತ್ತು ಜಯರಾಮ್ ಹಾಜರಾದರು. ಸಿಐಡಿಯ ಡಿವೈಎಸ್ಪಿ ಪುರುಷೋತ್ತಮ್ ಅವರು ಕೆ ಎಸ್ ಸಿ ಎ ಮಾಜಿ ಕಾರ್ಯದರ್ಶಿ ಶಂಕರ್ ಹಾಗೂ ಖಜಾಂಚಿ ಜಯರಾಮ್ ಅವರನ್ನು ವಿಚಾರಣೆಗೆ ಒಳಪಡಿಸಿದರು. https://kannadanewsnow.com/kannada/ips-officer-hemant-nimbalkar-has-received-permission-from-the-state-government-to-go-abroad-right-after-the-disaster-of-the-riot/ https://kannadanewsnow.com/kannada/rt-pcr-test-made-mandatory-for-ministers-before-meeting-pm-modi-amid-covid-19-surge-report/
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಆರ್ ಸಿ ಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರಂತದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿದೇಶಕ್ಕೆ ತೆರಳೋದಕ್ಕೆ ರಾಜ್ಯ ಸರ್ಕಾರ ಅನುಮತಿಸಿದೆ. ಇಂದು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಮತ್ತು ವಾರ್ತಾ-ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದಂತ ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್ ಅವರು ದಿನಾಂಕ 12-06-2025ರಿಂದ 27-06-2025ರವರೆಗೆ ವಿದೇಶ ಪ್ರವಾಸ ಕೈಗೊಳ್ಳಲು 16 ದಿನಗಳ ಗಳಿಕೆ ರಜೆಯನ್ನು ಮಂಜೂರು ಮಾಡಲಾಗಿದೆ. ದಿನಾಂಕ 28-06-2025 ಮತ್ತು 29-06-2025ರ ಎರಡು ದಿನಗಳ ಸಾರ್ವತ್ರಿಕ ರಜೆಯನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದಿದ್ದಾರೆ. ಇನ್ನೂ ಹೇಮಂತ್ ಎಂ ನಿಂಬಾಳ್ಕರ್ ಅವರ ರಜಾ ಅವಧಿಯಲ್ಲಿ ಕರ್ನಾಟಕ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯದ ನಿರ್ದೇಶಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ…
ಬೆಂಗಳೂರು: ದಿನೇ ದಿನೇ ಹದಿ ಹರೆಯದವರು ಸೇರಿದಂತೆ ಮಕ್ಕಳಲ್ಲಿ ಹೃದಯಾಘಾತದ ಸಂಖ್ಯೆ ಏರಿಕೆಯಾಗುತ್ತಿವೆ. ಇಂದು ಬೆಂಗಳೂರಲ್ಲಿ ಹೃದಯಾಘಾತದಿಂದ 19 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಜೆಪಿ ನಗರದಲ್ಲಿನ ನಿಶಾಂತ್(19) ಎನ್ನುವಂತ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ನಿವಾಸಿ ನಿಶಾಂತ್ ಆಗಿದ್ದರು. ಬೆಂಗಳೂರಿಗೆ ಕೈಗಾರಿಕಾ ತರಬೇತಿಗೆಂದು ನಿಶಾಂತ್ ಆಗಮಿಸಿದ್ದರು. ರೂಮಿನಲ್ಲಿ ಇರುವಾಗ ಹೃದಯಾಘಾತದಿಂದ ನಿಶಾಂತ್ ಸಾವನ್ನಪ್ಪಿದ್ದಾನೆ. ಒಂದು ತಿಂಗಳ ಅಂತರದಲ್ಲಿ ಹಾಸನ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಈವರೆಗೆ ನಾಲ್ವರು ಬಲಿಯಾದಂತೆ ಆಗಿದೆ. https://kannadanewsnow.com/kannada/aicc-has-put-a-caste-census-cross-instead-of-a-headstone-in-the-stampede-tragedy-dishonest-narayanaswamy/ https://kannadanewsnow.com/kannada/rt-pcr-test-made-mandatory-for-ministers-before-meeting-pm-modi-amid-covid-19-surge-report/