Subscribe to Updates
Get the latest creative news from FooBar about art, design and business.
Author: kannadanewsnow09
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. 90 ಎಸೆತಗಳಲ್ಲಿ 53ನೇ ಶತಕ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಬುಧವಾರ ರಾಯ್ಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಎರಡನೇ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ತಮ್ಮ 53 ನೇ ಏಕದಿನ ಶತಕವನ್ನು ಗಳಿಸಿದರು – ಈ ಸ್ವರೂಪದಲ್ಲಿ ಯಾವುದೇ ಬ್ಯಾಟ್ಸ್ಮನ್ನಿಂದ ಗಳಿಸಿದ ಅತಿ ಹೆಚ್ಚು. ರಾಂಚಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯವನ್ನು ಗೆದ್ದುಕೊಂಡ ನಂತರ ಇತ್ತೀಚಿನ ಐಸಿಸಿ ಶ್ರೇಯಾಂಕದಲ್ಲಿ 4 ನೇ ಸ್ಥಾನಕ್ಕೆ ಏರಿದ 37 ವರ್ಷದ ಆಟಗಾರ, ರಾಯ್ಪುರದಲ್ಲಿ ಮತ್ತೊಂದು ಅದ್ಭುತ ಶತಕದೊಂದಿಗೆ ಅವರು ನಿಲ್ಲಿಸಿದ್ದ ಸ್ಥಳದಿಂದ ಮುಂದುವರೆದರು. ಭಾರತೀಯ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ 49 ಏಕದಿನ ಶತಕಗಳೊಂದಿಗೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ, ನಂತರ ಕೊಹ್ಲಿಯ ಸಹ ಆಟಗಾರ ರೋಹಿತ್ ಶರ್ಮಾ (33). 2027 ರ ಏಕದಿನ…
ಬೆಂಗಳೂರು: ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆ ನಿವಾರಣೆಗೆ ಸರ್ಕಾರ ಮಹತ್ವದ ಕ್ರಮವಹಿಸಿದೆ. ಇದಕ್ಕಾಗಿ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಿದೆ. ಆ ಮೂಲಕ ಸಮಸ್ಯೆ ಪರಿಹರಿಸುವಂತ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉಪಕ್ರಮವನ್ನು ಸರ್ಕಾರದ ವತಿಯಿಂದ ಮಾಡಲಾಗಿದೆ. ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಗ್ರಾಮಠಾಣಗಳ ಹೊರಗೆ ಭೂಪರಿವರ್ತನೆ ಮಾಡಿಸದೆ, ಮನೆ ನಿರ್ಮಿಸಿಕೊಂಡು ವಾಸಿಸುವ ಜನರಿಗೆ ಕುಡಿಯುವ ನೀರು, ಬೀದಿ ದೀಪ, ರಸ್ತೆ, ಚರಂಡಿ ಇತ್ಯಾದಿ ನಾಗರಿಕ ಸೌಲಭ್ಯಗಳನ್ನೆಲ್ಲಾ ನೀಡಲಾಗುತ್ತಿದೆ. ಗ್ರಾಮ ಪಂಚಾಯತಿಗಳಿಗೆ ಇದು ಆರ್ಥಿಕವಾಗಿ ಹೊರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ದೃಢ ನಿರ್ಧಾರ ತೆಗೆದುಕೊಂಡು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993 ಪ್ರಕರಣ 199ಕ್ಕೆ ತಿದ್ದುಪಡಿ ತಂದು ಪ್ರಕರಣ 199ಬಿ ಹಾಗೂ 199ಸಿ ಸೇರಿಸಲಾಗಿರುತ್ತದೆ. ತಿದ್ದುಪಡಿಯನ್ನು ದಿನಾಂಕ: 07.04.2025 ರಂದು ಅಧಿಸೂಚಿಸಲಾಗಿರುತ್ತದೆ. ಅದರನ್ವಯ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು- 2025ನ್ನು ರೂಪಿಸಲಾಗಿದೆ. ಈ ನಿಯಮಗಳು ದಿನಾಂಕ:17.10.2025ರಿಂದ…
ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ಇಂದು ಇಂದು ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವ ವಿದ್ಯಾಲಯ ಆಶ್ರಯದಲ್ಲಿ ಮಂಗಳೂರಿನ ಕೊಣಾಜೆ ಯ ಮಂಗಳ ಗಂಗೋತ್ರಿ ಯಲ್ಲಿ ಆಯೋಜಿಸಲಾಗಿದ್ದ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧೀ ಐತಿಹಾಸಿಕ ಸಂವಾದ ಶತಮಾನೋತ್ಸವ. ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ. ಯತಿ ಪೂಜೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಇದೇ ವೇಳೆ ಅವರು ವೇಣುಗೋಪಾಲ್ ಅವರೊಂದಿಗೆ ಕಾಣಿಸಿಕೊಂಡ ಬಗ್ಗೆ ಮಾಧ್ಯಮಗಳ ವರದಿಗಳ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದರು, ಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರೆದರೆ ಮಾತ್ರ ದೆಹಲಿಗೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು…
ಮಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕರೆದರೆ ಮಾತ್ರ ದೆಹಲಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು, ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನ್ನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು. https://kannadanewsnow.com/kannada/breaking-central-government-cancels-mandatory-order-to-pre-install-sanchar-sathi-app/ https://kannadanewsnow.com/kannada/breaking-massive-operation-by-ccb-police-in-bengaluru-drugs-worth-28-crore-seized-two-foreign-nationals-arrested/
ಕೊಳ್ಳೆಗಾಲ : ಇತ್ತೀಚೆಗೆ ಶಿವನಸಮುದ್ರದ ಜಲವಿದ್ಯುತ್ ಗಾರದ ಜಲಾಶಯದ ಬಳಿಯ ನಾಲೆಯಲ್ಲಿ ಸಿಲುಕಿದ್ದ ಸಲಗವನ್ನು ಯಶಸ್ವಿಯಾಗಿ ರಕ್ಷಿಸಿದ ಅರಣ್ಯ ಸಿಬ್ಬಂದಿ ಮತ್ತು ಪಶುವೈದ್ಯರನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಇಂದು ಸನ್ಮಾನಿಸಿದರು. ಕೊಳ್ಳೆಗಾಲದಲ್ಲಿಂದು ಕಮಾಂಡ್ ಸೆಂಟರ್ ಉದ್ಘಾಟಿಸಿದ ತರುವಾಯ ನಡೆದ ಅಧಿಕಾರಿಗಳ ಸಭೆಗೂ ಮುನ್ನ 40 ಅಡಿ ಆಳದಿಂದ ಆನೆಯನ್ನು ರಕ್ಷಿಸಿದ ತಂಡದಲ್ಲಿದ್ದ ಮಂಡ್ಯ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರಘು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವಸ್ವಾಮಿ, ವಲಯ ಅರಣ್ಯಾಧಿಕಾರಿ ಗವಿಯಪ್ಪ, ಪಶುವೈದ್ಯ ಆದರ್ಶ್ ಹಾಗೂ ಶಾರ್ಪ್ ಶೂಟರ್ ಅಕ್ರಮ್ ಅವರನ್ನು ಈಶ್ವರ ಖಂಡ್ರೆ ಸನ್ಮಾನಿಸಿದರು. ಉತ್ತಮ ಕಾರ್ಯ ಮಾಡಿದ ಸಿಬ್ಬಂದಿ ಪ್ರಶಂಸೆಗೆ ಮತ್ತು ಸನ್ಮಾನಕ್ಕೆ ಅರ್ಹರಾಗುತ್ತಾರೆ. ಅದೇ ರೀತಿ ತಪ್ಪು ಮಾಡುವ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಯನ್ನೂ ನೀಡಿದರು. https://kannadanewsnow.com/kannada/breaking-central-government-cancels-mandatory-order-to-pre-install-sanchar-sathi-app/ http://kannadanewsnow.com/kannada/breaking-massive-operation-by-ccb-police-in-bengaluru-drugs-worth-28-crore-seized-two-foreign-nationals-arrested/
ಮಂಡ್ಯ: ಜಿಲ್ಲೆಯಲ್ಲಿ ಹನುಮ ಮಾಲಾಧಾರಿಗಳಿಂದ ಜಾಮಿಯಾ ಮಸೀದಿಗೆ ನುಗ್ಗೋದಕ್ಕೆ ಯತ್ನಿಸಿರುವಂತ ಘಟನೆ ನಡೆದಿದೆ. ಈ ವೇಳೆ ತಳ್ಳಾಟ ನೂಕಾಟ ಕೂಡ ಉಂಟಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣದಿಂದ ಪರಿಸ್ಥಿತಿ ಕೂಡಿದೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ನಡೆಸಲಾಗುತ್ತಿದೆ. ಈ ವೇಳೆಯಲ್ಲೇ ಜಾಮೀಯಾ ಮಸೀದಿ ಕಡೆಗೆ ನುಗ್ಗೋದಕ್ಕೆ ಹನುಮ ಮಾಲಾಧಾರಿಗಳು ಯತ್ನಿಸಿರುವಂತ ಘಟನೆ ನಡೆದಿದೆ. ಜಾಮೀಯಾ ಮಸೀದಿಗೆ ನುಗ್ಗೋದಕ್ಕೆ ಯತ್ನಿಸಿದಂತ ಹನುಮ ಮಾಲಾಧಾರಿಗಳನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆಯಲ್ಲಿ ಹನುಮ ಮಾಲಾಧಾರಿಗಳು, ಪೊಲೀಸರ ನಡುವೆ ತಳ್ಳಾಟ, ನೂಕಾಟ ಕೂಡ ಉಂಟಾಗಿದೆ. ಇದೀಗ ಶ್ರೀರಂಗ ಪಟ್ಟಣದ ಜಾಮಿಯಾ ಮಸೀದಿ ವೃತ್ತದಲ್ಲಿ ಹನುಮ ಮಾಲಾಧಾರಿಗಳು ಜಮಾವಣೆಗೊಂಡಿದ್ದಾರೆ. ಕೇಸರಿ ಧ್ವಜ ತಿರುಗಿಸಿ ಮಸೀದಿ ಜಾಗ ನಮ್ಮದು ಎಂಬುದಾಗಿ ಘೋಷಣೆ ಕೂಗುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಜಾಮಿಯಾ ಮಸೀದಿ ಬಳಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. https://kannadanewsnow.com/kannada/menstrual-leave-for-female-government-employees-in-the-state-government-issues-important-order/ https://kannadanewsnow.com/kannada/shocking-sslc-student-commits-suicide-after-bearing-theft-charges/
ಬೆಂಗಳೂರು: ರಾಜ್ಯಸರ್ಕಾರದ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಈ ಸೌಲಭ್ಯ ತಕ್ಷಣದಿಂದಲೇ ಜಾರಿ ಮಾಡಲಾಗಿದೆ. ಋತುಚಕ್ರ ಹೊಂದಿರುವ 18 ವರ್ಷದಿಂದ 52 ವರ್ಷ ವಯಸ್ಸಿನ ಮಹಿಳಾ ಸರ್ಕಾರಿ ನೌಕರರಿಗೆ ಈ ರಜೆ ಅನ್ವಯವಾಗಲಿದೆ. ತಿಂಗಳಿಗೆ ಒಂದರಂತೆ ವರ್ಷಕ್ಕೆ ಒಟ್ಟು 12 ಋತುಚಕ್ರ ರಜೆಯನ್ನು ಪಡೆಯಬಹುದು. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಸಕ್ಷಮ ಪ್ರಾಧಿಕಾರವೇ ಈ ರಜೆಯನ್ನೂ ಮಂಜೂರು ಮಾಡಬಹುದಾಗಿದೆ. ಈ ರಜೆ ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ನೀಡಬೇಕಿಲ್ಲ. ಈ ರಜೆಯನ್ನು ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ. ಕಾರ್ಮಿಕ ಇಲಾಖೆಯ ಮತ್ತೊಂದು ಮಹತ್ವದ ಕ್ರಮ ಜಾರಿ ರಾಜ್ಯದ ಸರ್ಕಾರಿ ಮಹಿಳಾ ಉದ್ಯೋಗಿಗಳ ಮನೋಸ್ಥೈರ್ಯ ಹೆಚ್ಚಿಸುವ ಉದ್ದೇಶದಿಂದ ಜಾರಿ ಮಾಡಲಾದ ಋತುಚಕ್ರ ರಜೆಯು ಕಾರ್ಮಿಕ ಇಲಾಖೆಯ ಮಹತ್ವದ ಕ್ರಮಗಳಲ್ಲಿ ಒಂದಾಗಿದೆ. ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಈ ಸೌಲಭ್ಯ ಜಾರಿಯಾಗುವಲ್ಲಿ ಪ್ರಮುಖ ಪಾತ್ರ…
ನವದೆಹಲಿ: ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕಿಂಗ್ಗಾಗಿ ಹೊಸ ಭದ್ರತಾ ವೈಶಿಷ್ಟ್ಯವನ್ನು ಪರಿಚಯಿಸಿದೆ. ಪ್ರಯಾಣಿಕರ ಮೊಬೈಲ್ ಸಂಖ್ಯೆಗೆ ಕಳುಹಿಸಲಾದ ಒನ್-ಟೈಮ್ ಪಾಸ್ವರ್ಡ್ (OTP) ಪರಿಶೀಲನೆಯ ನಂತರವೇ ಪ್ರಯಾಣಿಕರಿಗೆ ಈಗ ಟಿಕೆಟ್ಗಳನ್ನು ನೀಡಲಾಗುತ್ತದೆ. ಈ OTP ಪರಿಶೀಲನಾ ವ್ಯವಸ್ಥೆಯು ಡಿಸೆಂಬರ್ 1 ರಿಂದ ಜಾರಿಗೆ ಬರಲಿದೆ. ರೈಲ್ವೆ ಮಂಡಳಿ ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ ತತ್ಕಾಲ್ ಬುಕಿಂಗ್ ವ್ಯವಸ್ಥೆಯಲ್ಲಿ ಪ್ರಮುಖ ಮಾರ್ಪಾಡು ಇದೆ. ಸಿಸ್ಟಮ್-ರಚಿತ ಒನ್-ಟೈಮ್ ಪಾಸ್ವರ್ಡ್ (OTP) ದೃಢೀಕರಣದ ನಂತರವೇ ತತ್ಕಾಲ್ ಟಿಕೆಟ್ಗಳನ್ನು ಈಗ ನೀಡಲಾಗುತ್ತದೆ. ಈ OTP ಅನ್ನು ಬುಕಿಂಗ್ ಸಮಯದಲ್ಲಿ ಪ್ರಯಾಣಿಕರು ಒದಗಿಸಿದ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ ಮತ್ತು OTP ಯ ಯಶಸ್ವಿ ಮೌಲ್ಯೀಕರಣದ ನಂತರವೇ ಟಿಕೆಟ್ ನೀಡಲಾಗುತ್ತದೆ ಎಂದು ಪಶ್ಚಿಮ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ. ಮೊದಲ ಹಂತದಲ್ಲಿ, OTP ಆಧಾರಿತ ತತ್ಕಾಲ್ ದೃಢೀಕರಣ ವ್ಯವಸ್ಥೆಯನ್ನು ರೈಲು ಸಂಖ್ಯೆ 12009/12010, ಮುಂಬೈ ಸೆಂಟ್ರಲ್-ಅಹಮದಾಬಾದ್ ಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಅಳವಡಿಸಲಾಗುವುದು. ನಂತರ ಇದನ್ನು ನೆಟ್ವರ್ಕ್ನಾದ್ಯಂತ ಇತರ ರೈಲುಗಳಿಗೆ ವಿಸ್ತರಿಸಲಾಗುವುದು. ಈ ಹೊಸ ವ್ಯವಸ್ಥೆಯು…
ಶಿವಮೊಗ್ಗ: ರಾಜ್ಯದಲ್ಲೊಂದು ಮನಕಲಕುವ ಘಟನೆ ಎನ್ನುವಂತ ಮದುವೆಯಾದ ಮರುದಿನವೇ ಹೃದಯಾಘಾತದಿಂದ ನವವಿವಾಹಿತ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಈ ಘಟನೆ ನಡೆದಿದೆ. ಮದುವೆಯಾದ ಮರು ದಿನವೇ ನವವಿವಾಹಿತ ರಮೇಶ್(30) ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ನವೆಂಬರ್.30ರಂದು ಹರಪ್ಪನಹಳ್ಳಿ ಸಮೀಪದ ಬಂಡ್ರಿಯ ಮಧುವನ್ನು ರಮೇಶ್ ಅವರು ಮದುವೆಯಾಗಿದ್ದರು. ಆದರೇ ಮನಕಲಕುವ ಘಟನೆ ಎನ್ನುವಂತೆ ಡಿಸೆಂಬರ್.1ರಂದು ರಮೇಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮದುವೆಯಾದ ಬಳಿಕ ರಮೇಶ್ ವಧುವಿನ ಮನೆಗೆ ತೆರಳಿದ್ದರು. ಅಲ್ಲಿ ದೇವಸ್ಥಾನದಿಂದ ಮೆರವಣಿಗೆ ಮೂಲಕ ವಧು ಮನೆಗೆ ಕರೆದುಕೊಂಡು ಹೋಗಲಾಗಿತ್ತು. ವಧುವಿನ ಮನೆಗೆ ತಲುಪಿದ ನಂತ್ರ ರಮೇಶ್ ದಂಪತಿಗಳು ದೇವರಿಗೆ ಕೈ ಮುಗಿಯುಲು ತೆರಳಿದ ವೇಳೆಯಲ್ಲೇ ಕುಸಿದು ಬಿದ್ದಿದ್ದರು, ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವ ವೇಳೆಯಲ್ಲೇ ಮಾರ್ಗ ಮಧ್ಯೆ ಕೊನೆಯುಸಿರು ಎಳೆದಿದ್ದಾರೆ. ರಮೇಶ್ ಅಂತ್ಯಕ್ರಿಯೆಯನ್ನು ಮಂಗಳವಾರದಂದು ನೆರವೇರಿಸಲಾಗಿದೆ. https://kannadanewsnow.com/kannada/conference-to-be-organized-in-delhi-against-vote-rigging-on-december-14-dcm-d-k-shivakumar/ https://kannadanewsnow.com/kannada/shocking-sslc-student-commits-suicide-after-bearing-theft-charges/
ಬೆಂಗಳೂರು: ಮತಗಳ್ಳತನದ ವಿರುದ್ಧ ದೆಹಲಿಯಲ್ಲಿ ಡಿಸೆಂಬರ್.14ರಂದು ಸಮಾವೇಶ ನಡೆಸಲಾಗುತ್ತದೆ. ರಾಜ್ಯದಿಂದ ಪ್ರತಿ ಜಿಲ್ಲೆಯಿಂದ 300 ಜನರನ್ನು ರೈಲು ಮೂಲಕ ಜನರನ್ನು ಕರೆದೊಯ್ಯಲು ಸೂಚಿಸಲಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಸೆಂಬರ್.14ರಂದು ಮತಗಳ್ಳತನದ ವಿರುದ್ಧ ದೆಹಲಿ ರಾಮಲೀಲಾ ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದಿಂದ ಹೆಚ್ಚಿನ ಜನರನ್ನು ಸಭೆಗೆ ಕರೆತರಲು ಸೂಚಿಸಿದ್ದೇನೆ ಎಂದರು. ಡಿಸೆಂಬರ್.14ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುವಂತ ಮತಗಳ್ಳತನದ ವಿರುದ್ಧದ ಸಮಾವೇಶದಲ್ಲಿ ಭಾಗಿಯಾಗಲು ಎಲ್ಲಾ ಸಚಿವರು, ಶಾಸಕರಿಗೆ ಹೇಳಿದ್ದೇನೆ. ಪ್ರತಿ ಜಿಲ್ಲೆಯಿಂದ 300 ಜನರನ್ನು ಕರೆದೊಯ್ಯಲು ಸೂಚಿಸಿದ್ದೇನೆ. ಬೆಂಗಳೂರಿನಿಂದಲೇ ಹೆಚ್ಚು ಜನರನ್ನು ಕರೆದುಕೊಂಡು ಹೋಗಬೇಕಿದೆ ಎಂದು ಹೇಳಿದರು. ಜನರನ್ನು ರೈಲುಗಳಲ್ಲಿ ದೆಹಲಿಗೆ ಕರೆದೊಯ್ಯಲು ನಿರ್ಧಾರ ಮಾಡಿದ್ದೇವೆ. ಸಚಿವರು, ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಸೂಚಿಸಿದ್ದೇನೆ. ನಿಮ್ಮ ಜವಾಬ್ದಾರಿ ಇದೆ. ನೀವೇ ಮಾಡಬೇಕು ಎಂಬುದಾಗಿ ಹೇಳಿದ್ದೇನೆ ಎಂದರು. https://kannadanewsnow.com/kannada/bjp-files-complaint-against-metro-officials-to-lokayukta-do-you-know-the-reason/ https://kannadanewsnow.com/kannada/shocking-sslc-student-commits-suicide-after-bearing-theft-charges/














