Author: kannadanewsnow09

ಬೆಂಗಳೂರು: ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಮಹಿಳೆಯರೊಬ್ಬರು ಲೈಂಗಿಕ ದೌರ್ಜನ್ಯ ಪ್ರಕರಮ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮೇ.16ರಂದು ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ  ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಒಂದು ದಿನದ ಮಟ್ಟಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಮೇ.17ರಂದು ಜಾಮೀನು ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ನ್ಯಾಯಪೀಠವು, ಅರ್ಜಿಯ ವಿಚಾರಣೆ ನಡೆಸಿತು. ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಪೀಠದ ಮುಂದೆ ಎಸ್ಐಟಿ ಪರ ಎಸ್ ಪಿಪಿ ಜಾಯ್ನಾ ಕೊಥಾರಿ ಅವರು ಆರಂಭದಲ್ಲಿ ವಾದ ಮಂಡಿಸಿದರು. ಅವರು ಐಪಿಸಿ ಸೆಕ್ಷನ್ 436ರಡಿ ದಾಖಲಾಗಿರುವಂತ ಪ್ರಕರಣದಲ್ಲಿ ಜಾಮೀನು ಅರ್ಜಿ ಊರ್ಜಿತವಲ್ಲ. ಈಗಾಗಲೇ ಈ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣ ಅವರು ಕೋರ್ಟ್ ಮುಂದೆ ಶರಣಾಗಿದ್ದಾರೆ. ಐಪಿಸಿ ಸೆಕ್ಷನ್ 376ರಡಿ ಜೀವಾವಧಿ ಶಿಕ್ಷೆ ಇದೆ. ಇದು ಜಾಮೀನು…

Read More

ಬೆಂಗಳೂರು : ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ವಿವರಿಸಿದರು. ಸರ್ಕಾರಕ್ಕೆ ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಮೀಟ್ ದ ಪ್ರೆಸ್ ನಲ್ಲಿ ಮಾತನಾಡಿದರು. ವಿಜಯೇಂದ್ರ, ಆರ್.ಅಶೋಕ್ ಗೆ ಆರ್ಥಿಕತೆ ಅರ್ಥ ಆಗಲ್ಲ. ಹೀಗಾಗಿ ಖಜಾನೆ ಖಾಲಿ ಆಗಿದೆ ಎಂದು ಪರಮ ಸುಳ್ಳು ಹೇಳುತ್ತಿದ್ದಾರೆ. ನಾವು ಗ್ಯಾರಂಟಿಯೇತರ ಅಭಿವೃದ್ಧಿ ಕಾರ್ಯಗಳಿಗೆ 54374 ಕೋಟಿ ಖರ್ಚು ಮಾಡುವುದಾಗಿ ಬಜೆಟ್ ನಲ್ಲಿ ಹೇಳಿದ್ದೆವು. ಆದರೆ 56274 ಕೋಟಿ ಖರ್ಚು ಮಾಡಿದೆವು. ಅಂದರೆ ಬಜೆಟ್ ನಲ್ಲಿ ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು. ನೀರಾವರಿಗೆ 16360 ಕೋಟಿ ಖರ್ಚು ಮಾಡುವುದಾಗಿ ಬಜೆಟ್ ನಲ್ಲಿ ಹೇಳಿದ್ದೆವು. ಆದರೆ 18198 ಕೋಟಿ ಖರ್ಚು ಮಾಡಿದೆವು. ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ. ಲೋಕೋಪಯೋಗಿ ಇಲಾಖೆಗೂ 9661…

Read More

ಇರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದ ಹಿನ್ನೆಲೆಯಲ್ಲಿ ಅವರ ನಿಧನಕ್ಕೆ ಐದು ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಇರಾನ್ನ ಸರ್ವೋಚ್ಚ ನಾಯಕ ಅಲಿ ಖಮೇನಿ ಘೋಷಿಸಿದ್ದಾರೆ. ಮೊದಲ ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರನ್ನು ದೇಶದ ಕಾರ್ಯನಿರ್ವಾಹಕ ಶಾಖೆಯ ಮಧ್ಯಂತರ ಮುಖ್ಯಸ್ಥರಾಗಿ ನೇಮಕ ಮಾಡಿರುವುದನ್ನು ದೃಢಪಡಿಸಿದ್ದಾರೆ. ರೈಸಿ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಅಧ್ಯಕ್ಷೀಯ ಚುನಾವಣೆ ನಡೆಸಲು ಇರಾನ್ ಈಗ ಗರಿಷ್ಠ 50 ದಿನಗಳ ಅವಧಿಯನ್ನು ಹೊಂದಿದೆ. “ನಾನು ಐದು ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಘೋಷಿಸುತ್ತೇನೆ ಮತ್ತು ಇರಾನ್ನ ಪ್ರೀತಿಯ ಜನರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ” ಎಂದು ಖಮೇನಿ ಅಧಿಕೃತ ಸುದ್ದಿ ಸಂಸ್ಥೆ ಐಆರ್ಎನ್ಎ ನಡೆಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಮೊಖ್ಬರ್ ಕಾರ್ಯನಿರ್ವಾಹಕ ಶಾಖೆಯನ್ನು ನಿರ್ವಹಿಸುತ್ತಾರೆ ಮತ್ತು ಗರಿಷ್ಠ 50 ದಿನಗಳಲ್ಲಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಶಾಸಕಾಂಗ ಮತ್ತು ನ್ಯಾಯಾಂಗ ಶಾಖೆಗಳ ಮುಖ್ಯಸ್ಥರೊಂದಿಗೆ ವ್ಯವಸ್ಥೆ ಮಾಡಲು ಬದ್ಧರಾಗಿದ್ದಾರೆ” ಎಂದು ಅವರು ಹೇಳಿದರು. https://kannadanewsnow.com/kannada/note-date-for-registration-of-students-for-sslc-exam-ii-extended/ https://kannadanewsnow.com/kannada/breaking-sc-refuses-to-entertain-plea-against-new-criminal-laws/

Read More

ಬೆಂಗಳೂರು: 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ನೋಂದಣಿ ದಿನಾಂಕವನ್ನು ವಿಸ್ತರಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಪರೀಕ್ಷೆಗೆ ಗೈರು ಹಾಜರಾದ, ಪೂರ್ಣಗೊಳಿಸಲಾಗಿಲ್ಲದ, ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳಿಗೆ 2024ರ ಜೂನ್ ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷ-2 ಅನ್ನು ನಡೆಸಲಾಗುತ್ತಿದೆ ಎಂದಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ನೋಂದಣಿ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಣೆ ಮಾಡಲಾಗಿದೆ. ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್ ಲೋಡ್ ಮಾಡಲು ದಿನಾಂಕ 21-05-2024ರ ಮಧ್ಯರಾತ್ರಿ 12 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದೆ. ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ದಿನಾಂಕ…

Read More

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದಂತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಗೆಲುವಿನ ನಗೆ ಬೀರಲಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆಲುವು ಸಾಧಿಸಲಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರು, ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಶಿಕ್ಷಕರ ನೋವಿಗೆ ಸ್ಪಂದಿಸುವ ರೀತಿಯಲ್ಲಿ ಕೆಲಸ ಮಾಡಲಿದ್ದಾರೆ. ಅವರಿಗೆ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವಿನ ಎಲ್ಲಾ ಲಕ್ಷಣಗಳಿದ್ದಾವೆ ಎಂದರು. ಶಿಕ್ಷಕರ ಕ್ಷೇತ್ರದ ಸಮಸ್ಯೆ ನಿವಾರಿಸೋ ನಿಟ್ಟಿನಲ್ಲಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಒಲವು ಇರುವಂತವರು ಆಗಿದ್ದಾರೆ. ನಮ್ಮ ಸರ್ಕಾರವು ಶಿಕ್ಷಕರ ಪರವಾಗಿ ನಿಲ್ಲುತ್ತಿದೆ. ಶಿಕ್ಷಕರು ನಮ್ಮ ಪರವಾಗಿ ನಿಂತು, ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ…

Read More

ಬೆಂಗಳೂರು: ವಿವಿಧ ಕಾರಣಗಳಿಂದಾಗಿ  ಉದ್ಯಾನ್ ಎಕ್ಸ್‌ಪ್ರೆಸ್‌ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ಜೂನ್ 21, 2024 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 11302 ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು- ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ಮುಂಬೈ ಉದ್ಯಾನ್ ಡೈಲಿ ಎಕ್ಸ್‌ಪ್ರೆಸ್‌ ರೈಲು ಯಾದಗಿರಿ ನಿಲ್ದಾಣದ ಆಗಮನ/ನಿರ್ಗಮನದ ಸಮಯವನ್ನು ಪರಿಷ್ಕರಿಸಲು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಈ ರೈಲು ಯಾದಗಿರಿ ನಿಲ್ದಾಣಕ್ಕೆ ಬೆಳಿಗ್ಗೆ 05:49/05:50ರ ಬದಲು 05:29/05:30 ಗಂಟೆಗೆ ಆಗಮಿಸಿ / ನಿರ್ಗಮಿಸಲಿದೆ. https://kannadanewsnow.com/kannada/housewife-commits-suicide-after-being-criticised-on-social-media/ https://kannadanewsnow.com/kannada/breaking-sc-refuses-to-entertain-plea-against-new-criminal-laws/

Read More

ತಮಿಳುನಾಡು: ಇಲ್ಲಿನ ಕೊಯಮತ್ತೂರಿನಲ್ಲಿ ಅಪರ್ಮೆಂಟ್ ಒಂದರ 4ನೇ ಮಹಡಿಯಿಂದ ಬಿದ್ದಿದ್ದಂತ ಮಗುವನ್ನು ಸ್ಥಳೀಯ ನಿವಾಸಿಗಳೇ ರಕ್ಷಣೆ ಮಾಡಿದ್ದರು. ಈ ರಕ್ಷಣೆಯ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಂದ ಟೀಕೆಯಿಂದ ಮನನೊಂದು ಮಗುವಿನ ತಾಯಿ ನೇಣಿಗೆ ಶರಣಾಗಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನಲ್ಲಿರುವಂತ ಅಪಾರ್ಮೆಂಟ್ ಒಂದರ 4ನೇ ಮಹಡಿಯಿಂದ ದಿನಾಂಕ 28-04-2024ರಂದು ಮಗು ಕೆಳಗೆ ಬಿದ್ದಿತ್ತು. ಕಿಟಕಿಯ ಮೇಲೆ ಬಿದ್ದಿದ್ದಂತ ಮಗುವನ್ನು ರಕ್ಷಣೆ ಮಾಡಲಾಗಿತ್ತು. ಹೀಗೆ ಅಪಾರ್ಮೆಂಟ್ ನಿವಾಸಿಗಳು ಮಗುವನ್ನು ರಕ್ಷಣೆ ಮಾಡುತ್ತಿದ್ದಂತ ವೀಡಿಯೋ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ನೋಡಿದಂತ ನೆಟ್ಟಿಗರು ಮಗುವ ಹೀಗೆ ಕೆಳಗೆ ಬೀಳೋದಕ್ಕೆ ತಾಯಿಯ ನಿರ್ಲಕ್ಷ್ಯವೇ ಕಾರಣ. ತಾಯಿ ಅಜಾಗರೂಕತೆಯನ್ನು ಮಗುವಿನ ಬಗ್ಗೆ ತೋರಿದ್ದಾಳೆ. ಮಗುವಿನ ಬಗ್ಗೆ ಕಣ್ಣಿಟ್ಟಿದ್ದರೇ ಇಂತಹ ಅನಾಹುತ ನಡೆಯುತ್ತಿರಲಿಲ್ಲ. ಹಾಗೆ ಹೀಗೆ ಅಂತ ಟೀಕೆ ಮಾಡಿದ್ದರು. ವೈರಲ್ ವೀಡಿಯೋಗಳಿಗೆ ಬಂದಂತ ಟೀಕೆಗಳನ್ನು ಗಮನಿಸಿದಂತ ಮಗುವಿನ ತಾಯಿ ರಮ್ಯಾ ಇಂದು ತಮಿಳುನಾಡಿ ಕೊಯಮತ್ತೂರಲ್ಲಿ ತಮ್ಮ ನಿವಾಸದಲ್ಲಿ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.…

Read More

ನವದೆಹಲಿ: ಕ್ಯಾಪ್ಟನ್ ಗೋಪಿಚಂದ್ ತೋಟಕುರಾ ಅವರು ಬ್ಲೂ ಒರಿಜಿನ್ ನ ಸಿಬ್ಬಂದಿ ವಿಮಾನ ಕಾರ್ಯಾಚರಣೆಯಲ್ಲಿ ಬಾಹ್ಯಾಕಾಶದ ಅಂಚಿನಲ್ಲಿ ಸುತ್ತಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 1984 ರಲ್ಲಿ ರಷ್ಯಾದ ಸೊಯುಜ್ ಟಿ -11 ಬಾಹ್ಯಾಕಾಶ ನೌಕೆಯಲ್ಲಿ ರಾಕೇಶ್ ಶರ್ಮಾ ಐತಿಹಾಸಿಕ ಹಾರಾಟ ನಡೆಸಿದ ನಂತರ ವಿಜಯವಾಡ ಮೂಲದ ಪೈಲಟ್ ತೋಟಕುರಾ ಬಾಹ್ಯಾಕಾಶಕ್ಕೆ ಭೇಟಿ ನೀಡಿದ ಎರಡನೇ ಭಾರತೀಯರಾಗಿದ್ದಾರೆ. ಶರ್ಮಾ ನಂತರ, ಕಲ್ಪನಾ ಚಾವ್ಲಾ (1997), ಸುನೀತಾ ವಿಲಿಯಮ್ಸ್ (2006) ಮತ್ತು ರಾಜಾ ಚಾರಿ (2021) ನಾಸಾ ಗಗನಯಾತ್ರಿಗಳಾಗಿ ಬಾಹ್ಯಾಕಾಶವನ್ನು ತಲುಪಿದ್ದಾರೆ. “ಕ್ಯಾಪ್ಸೂಲ್ ಟಚ್ಡೌನ್. ಮರಳಿ ಸ್ವಾಗತ, #NS25 ಸಿಬ್ಬಂದಿ!” ಬ್ಲೂ ಒರಿಜಿನ್ ಎಕ್ಸ್ ನಲ್ಲಿ ಪೋಸ್ಟ್ ನಲ್ಲಿ ತಿಳಿಸಿದೆ. ಜೆಫ್ ಬೆಜೋಸ್ ಒಡೆತನದ ಕಂಪನಿಯ ಏಳನೇ ಮಾನವ ಹಾರಾಟ ಕಾರ್ಯಾಚರಣೆಗಳಲ್ಲಿ 90 ವರ್ಷದ ಎಡ್ ಡ್ವೈಟ್, ಮೇಸನ್ ಏಂಜೆಲ್, ಸಿಲ್ವೈನ್ ಚಿರಾನ್, ಕೆನ್ನೆತ್ ಎಲ್. ಪಶ್ಚಿಮ ಟೆಕ್ಸಾಸ್ನಲ್ಲಿರುವ ಕಂಪನಿಯ ಉಡಾವಣಾ ತಾಣ ಒಂದರಿಂದ ಭಾರತೀಯ ಕಾಲಮಾನ ರಾತ್ರಿ 8.06 ಕ್ಕೆ…

Read More

ಬೆಂಗಳೂರು: ಹಾಸನ ಪೆನ್ ಡ್ರೈವ್ ವೈರಲ್ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಸಿಡಿದೆದ್ದಿದೆ. ನಾಳೆ ಡಿಸಿಎಂ ಡಿ.ಕೆ ಶಿವಕುಮಾರ್ ಪಿತೂರಿ ಖಂಡಿಸಿ ಪ್ರತಿಭಟನೆಗೆ ಕರೆ ನೀಡಿದೆ. ಇಂದು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಮಾಜಿ ಪರಿಷತ್ ಸದಸ್ಯ ಹಾಗೂ ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ ರಮೇಶ್ ಗೌಡ ಅವರು, ಜೆಡಿಎಸ್ ಪಕ್ಷವು, ರಾಜ್ಯ ಕಾಂಗ್ರೆಸ್ ದುರಾಡಳಿತ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪಿತೂರಿ ಹಾಗೂ ಕುಮ್ಮಕ್ಕಿನಿಂದ ಎಲ್ ಆರ್ ಶಿವರಾಮೇಗೌಡ ರವರು ಮಾಜಿ ಪ್ರಧಾನ ಮಂತ್ರಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್ ಡಿ ದೇವೇಗೌಡ ರವರ ವಿರುದ್ಧವಾಗಿ ವೈಯಕ್ತಿಕವಾಗಿ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ, ಡಿಕೆ ಶಿವಕುಮಾರ್ ಮತ್ತು ಎಲ್ ಆರ್ ಶಿವರಾಮೇಗೌಡ ರವರ ವಿರುದ್ಧ ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ 20.05.2024 ಸೋಮವಾರ ಬೆಳಗ್ಗೆ 11:00 ಗಂಟೆಗೆ ಫ್ರೀಡಂ ಪಾರ್ಕ್…

Read More

ಬೆಂಗಳೂರು: ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಕೆ ಕೆ ಮಂಜುನಾಥ್ ಕಣಕ್ಕೆ ಇಳಿದಿದ್ದಾರೆ. ಅವರು ಹಳೆ ಪಿಂಚಣಿ ಯೋಜನೆ, 7ನೇ ವೇತನ ಆಯೋಗದಂತೆ ವೇತನ ಜಾರಿಗೊಳಿಸೋದಾಗಿ ಭರವಸೆ ನೀಡಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆಗಾಗಿ ಚುನಾವಣಾ ಪ್ರಣಾಳಿಕೆಯ ಆಶಯ ಬಿಡುಗಡೆ ಮಾಡಿರುವಂತ ಅವರು, ಅದರಲ್ಲಿ ಶಿಕ್ಷಕರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಮಾಡಲಾಗುವುದು. 7ನೇ ವೇತನ ಆಯೋಗದಂತೆ ವೇತನವನ್ನು ಜಾರಿಗೊಳಿಸೋದಾಗಿ ಘೋಷಿಸಿದ್ದಾರೆ. ಅತಿಥಿ ಶಿಕ್ಷಕರ ಸೇವಾ ಭದ್ರತೆ, ಸೇವೆಯನ್ನು ಖಾಯಂಗೊಳಿಸೋದಕ್ಕೆ ಪ್ರಯತ್ನಿಸುತ್ತೇನೆ. ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಸಂಸ್ಥೆಗಳ ನವೀಕರಣಕ್ಕೆ ತಾವು ಗೆಲುವು ಸಾಧಿಸಿದ್ರೇ ಕ್ರಮವಹಿಸೋದಾಗಿ ತಿಳಿಸಿದ್ದಾರೆ. ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಿಕ್ಷಕರಿಗೆ ಜ್ಯೋತಿ ಸಂಜೀವಿನಿ ಸೌಲಭ್ಯ ಜಾರಿಗೊಳಿಸೋ ಭರವಸೆಯನ್ನು ನೀಡಿದ್ದಾರೆ. ಜೊತೆಗೆ ಪದವಿ ಪೂರ್ವದಲ್ಲಿ ಜಾರಿಯಲ್ಲಿರುವ 3 ವಾರ್ಷಿಕ ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದಾರೆ. 8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸುತ್ತೇನೆ. 1995ರ ನಂತ್ರದಲ್ಲಿ ಸ್ಥಾಪನೆಯಾಗಿರುವ ಖಾಸಗಿ ಶಾಲಾ-ಕಾಲೇಜಗಳನ್ನು ವೇತನ…

Read More