Author: kannadanewsnow09

ಶಿವಮೊಗ್ಗ: ನಾವು ವಿದ್ಯುತ್ ದರವನ್ನು 36 ಪೈಸೆ ಹೆಚ್ಚಿಸಿದ್ದಕ್ಕೆ ಅಬ್ಬಬ್ಬಾ ಬಾಯಿ ಬಡಿದುಕೊಳ್ಳೋ ಬಿಜೆಪಿಗರು, ಮೋದಿ ಅವರು ಟೋಲ್ ದರವನ್ನು ಶೇ.35ರಷ್ಟು ಹೆಚ್ಚಳ ಮಾಡಿದ್ದಾರೆ. ಅದರ ಬಗ್ಗೆ ಒಬ್ಬರೇ ಒಬ್ಬರು ಮಾತನಾಡೋದಿಲ್ವಲ್ಲ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಬಿಜೆಪಿಗರ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಇಂದು ಸಾಗರದ ನೆಹರೂ ಮೈದಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದಂತ ಅವರು, ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆ ಬರುತ್ತಿದೆ. ಅದಕ್ಕೆ ಪಕ್ಷವನ್ನು ತಯಾರು ಮಾಡುವ ನಿಟ್ಟಿನಲ್ಲಿ ಕಾರ್ಯಕರ್ತರ ಸಭೆ ಮಾಡಲಾಗುತ್ತಿದೆ. ಗ್ರಾಮ ಪಂಚಾಯ್ತಿ ಚುನಾವಣೆ ಕೂಡ ಬರುತ್ತಿದೆ. ಪಕ್ಷದ ಅಡಿಯಲ್ಲಿ ಚಿನ್ಹೆ ಇರಲಿದೆ. ಆಗ ನಾವೇ ಬಂದು ಕ್ಯಾನ್ವಾಸ್ ಮಾಡುತ್ತೇವೆ. ನಮ್ಮ ಪಕ್ಷದಿಂದಲೇ ಟಿಕೆಟ್ ಕೊಡುತ್ತೇವೆ ಎಂದರು. https://youtu.be/qfe-ezOeKRs?si=FqEMyeZT0wIYFv0F ತುಮುರಿ ಭಾಗದಲ್ಲಿ ಇಷ್ಟು ವರ್ಷ ಆದರೂ ಟವರ್ ಹಾಕೋದಕ್ಕೆ ಸಾಧ್ಯವಾಗಲಿಲ್ಲ. ಹಲೋ ಅಂದ್ರೆ ಕೇಳಿಸೋದಿಲ್ಲ. ರಸ್ತೆ ಮಾಡಿಸಿಲ್ಲ. ಅಟಲ್ ಬಿಹಾರಿ ವಾಜಪೇಯಿ ಮಾಡಿಸಿದ್ದು ಅಷ್ಟೇ. ಈ ಪಾವಿಗಳು ಎರಡು ವರ್ಷ ಆಯ್ತು ನಮ್ಮ ರಾಜ್ಯಕ್ಕೆ ಒಂದೇ ಒಂದು…

Read More

ಬ್ಯಾಂಕಾಕ್: ಶುಕ್ರವಾರ ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪವು ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟನ್ನು ನಾಶಪಡಿಸಿತು. ಮ್ಯಾನ್ಮಾರ್‌ನಲ್ಲಿ ಕನಿಷ್ಠ 144 ಜನರು ಸಾವನ್ನಪ್ಪಿದ್ದಾರೆ. 730 ಜನರು ಗಾಯಗೊಂಡಿದ್ದಾರೆ. ಅಲ್ಲಿ ಎರಡು ತೀವ್ರ ಹಾನಿಗೊಳಗಾದ ನಗರಗಳ ಫೋಟೋಗಳು ಮತ್ತು ವೀಡಿಯೊಗಳು ವ್ಯಾಪಕ ಹಾನಿಯನ್ನು ತೋರಿಸಿದವು. ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರವಾದ ಮಂಡಲೇ ಬಳಿ ಕೇಂದ್ರಬಿಂದುವಾಗಿರುವ 7.7 ತೀವ್ರತೆಯ ಭೂಕಂಪವು ಮಧ್ಯಾಹ್ನ ಸಂಭವಿಸಿತು ಮತ್ತು ನಂತರ 6.4 ತೀವ್ರತೆಯ ಪ್ರಬಲವಾದ ನಂತರದ ಕಂಪನ ಸಂಭವಿಸಿತು. ಸಾವು, ಗಾಯ ಮತ್ತು ವಿನಾಶದ ಸಂಪೂರ್ಣ ಪ್ರಮಾಣವು ತಕ್ಷಣವೇ ಸ್ಪಷ್ಟವಾಗಿಲ್ಲ – ವಿಶೇಷವಾಗಿ ವಿಶ್ವದ ಅತ್ಯಂತ ಬಡ ದೇಶಗಳಲ್ಲಿ ಒಂದಾದ ಮ್ಯಾನ್ಮಾರ್‌ನಲ್ಲಿ. ಇದು ಅಂತರ್ಯುದ್ಧದಲ್ಲಿ ಸಿಲುಕಿಕೊಂಡಿದೆ ಮತ್ತು ಮಾಹಿತಿಯನ್ನು ಬಿಗಿಯಾಗಿ ನಿಯಂತ್ರಿಸಲಾಗುತ್ತದೆ. ಮ್ಯಾನ್ಮಾರ್‌ನ ಮಿಲಿಟರಿ ಸರ್ಕಾರದ ಮುಖ್ಯಸ್ಥರು ಶುಕ್ರವಾರ ಸಂಜೆ ದೂರದರ್ಶನದ ಭಾಷಣದಲ್ಲಿ ಕನಿಷ್ಠ 144 ಜನರು ಸಾವನ್ನಪ್ಪಿದ್ದಾರೆ ಮತ್ತು 730 ಇತರರು ಗಾಯಗೊಂಡಿದ್ದಾರೆ ಎಂದು ಹೇಳಿದರು. “ಸಾವಿನ ಸಂಖ್ಯೆ ಮತ್ತು ಗಾಯಗಳ ಸಂಖ್ಯೆ ಹೆಚ್ಚಾಗುವ…

Read More

ಚಿತ್ರದುರ್ಗ: ಕುಡಿದ ಮತ್ತಿನಲ್ಲಿ ತಾಯಿಯೊಂದಿಗೆ ಜಗಳಕ್ಕೆ ಇಳಿದಂತ ಮಗನೊಬ್ಬ, ಅದೇ ಮತ್ತಿನಲ್ಲಿ ಹೆತ್ತಮ್ಮನನ್ನೇ ಹತ್ಯೆಗೈದ ಬೆಚ್ಚಿ ಬೀಳಿಸೋ ಘಟನೆ ಚಿತ್ರದುರ್ಗದ ಹಿರಿಯೂರಿನ ಹುಲಗಲಕುಂಟೆ ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹುಲಗಲಕುಂಟೆ ಗ್ರಾಮದ ಆರೋಪಿ ಚಿತ್ರಲಿಂಗ(40) ಎಂಬಾತ ತನ್ನ ತಾಯಿ ಮೃತ ಮಹಿಳೆ ಗಂಗಮ್ಮ(65) ಎಂಬುವರ ಜೊತೆಗೆ ಕುಡಿದು ಜಗಳಕ್ಕೆ ಇಳಿದಿದ್ದಾನೆ. ಜಗಳ ತಾರಕಕ್ಕೆ ಏರಿದಂತ ಸಂದರ್ಭದಲ್ಲಿ ತಾಯಿಯನ್ನೇ ಹೊಡೆದು ಕೊಲೆಗೈದಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಪೊಲೀಸರು ಆರೋಪಿ ಚಿತ್ರಲಿಂಗನನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಈ ಬಗ್ಗೆ ಹಿರಿಯೂರು ತಾಲ್ಲೂಕು ಘಟಕದ ಕರ್ನಾಟಕ ರಾಜ್ಯ ಕಾರ್ಮಿಕರ ಪರಿಷತ್ ಅಧ್ಯಕ್ಷ ಪರಮೇಶ್ವರ್ ಮಾತನಾಡಿ, ಹಿರಿಯೂರು ತಾಲ್ಲೂಕಿನ ಹುಲಗಲಕುಂಟೆಯಲ್ಲಿ ನಡೆದಿರುವಂತ ಇಂತಹ ದುಷ್ಕೃತ್ಯವು ಬೆಚ್ಚಿ ಬೀಳಿಸುವಂತೆ ಮಾಡಿದೆ. ಇದಕ್ಕೆ ಅಬಕಾರಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಅಕ್ರಮವಾಗಿ ಹಳ್ಳಿಯಲ್ಲಿ ಮದ್ಯ ಮಾರಾಟ ನಿಲ್ಲಿಸಬೇಕು. ಇಲ್ಲವಾದಲ್ಲಿ ಅಬಕಾರಿ ಇಲಾಖೆಯ ಮುಂದೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ…

Read More

ಮ್ಯಾನ್ಮಾರ್: ಮ್ಯಾನ್ಮಾರ್ನಲ್ಲಿ ಶುಕ್ರವಾರ ಮಧ್ಯಾಹ್ನ 7.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಥೈಲ್ಯಾಂಡ್ನಾದ್ಯಂತ ನಡುಕ ಉಂಟಾಗಿದ್ದು, ಕನಿಷ್ಠ 144 ಜನರು ಸಾವನ್ನಪ್ಪಿದ್ದಾರೆ ಮತ್ತು 732 ಜನರು ಗಾಯಗೊಂಡಿದ್ದಾರೆ ಎಂಬುದಾಗಿ ಮ್ಯಾನ್ಮಾರ್ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ. https://twitter.com/ANI/status/1905566897812505083 ಮ್ಯಾನ್ಮಾರ್ ಮಿಲಿಟರಿ ನೇತೃತ್ವದ ಸರ್ಕಾರವು ನೈಪಿಟಾವ್ ಮತ್ತು ಮಾಂಡಲೆ ಸೇರಿದಂತೆ ಆರು ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಏಕೆಂದರೆ ದೇಶದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ ರಕ್ಷಣಾ ಪ್ರಯತ್ನಗಳು ಸವಾಲುಗಳನ್ನು ಎದುರಿಸುತ್ತಿವೆ. 144 ಜನರು ಸಾವನ್ನಪ್ಪಿದ್ದಾರೆ ಮತ್ತು 732 ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಜುಂಟಾ ಮುಖ್ಯಸ್ಥರು ಸುದ್ದಿ ಸಂಸ್ಥೆ ಎಎಫ್ಪಿಗೆ ತಿಳಿಸಿದ್ದಾರೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ಮತ್ತು ಜರ್ಮನಿಯ ಜಿಎಫ್ಜೆಡ್ ಸೆಂಟರ್ ಫಾರ್ ಜಿಯೋಸೈನ್ಸ್ ವರದಿ ಮಾಡಿದಂತೆ, ಭೂಕಂಪದ ಕೇಂದ್ರಬಿಂದು ಮ್ಯಾನ್ಮಾರ್ನ ಎರಡನೇ ಅತಿದೊಡ್ಡ ನಗರವಾದ ಮಾಂಡಲೆ ಬಳಿ 10 ಕಿಲೋಮೀಟರ್ (6.2 ಮೈಲಿ) ಆಳದಲ್ಲಿದೆ. ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದೆ. ಮ್ಯಾನ್ಮಾರ್ನ ಆಡಳಿತಾರೂಢ…

Read More

ತುಮಕೂರು: ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅವರ ಕೊಲೆಗೆ ಸಂಚು ರೂಪಿಸಿದ್ದ ಸಂಬಂಧ ಐವರ ವಿರುದ್ಧ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅವರು ತಮ್ಮ ಕೊಲೆಗೆ ಸಂಚು ರೂಪಿಸಿದ್ದ ಬಗ್ಗೆ ಡಿಜಿ ಮತ್ತು ಐಜಿಪಿ ಭೇಟಿಯಾಗಿ ದೂರು ನೀಡಿದ್ದರು. ಆ ನಂತ್ರ ತುಮಕೂರು ಎಸ್ಪಿಗೂ ದೂರು ನೀಡಿದ್ದರು. ಈ ದೂರು ಆಧರಿಸಿ ಐವರ ವಿರುದ್ಧ ಕ್ಯಾತ್ಸಂದ್ರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಎ1 ಆರೋಪಿಯಾಗಿಸಿ ಸೋಮು, ಎ2 ಭರತ್, ಎ3 ಅಮಿತ್, ಎ4 ಗುಂಡ ಹಾಗೂ ಎ5 ಯತೀಶ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅನಾಮಧೇಯ ಮೂಲಗಳಿಂದ ಆಡಿಯೋ ಸಿಕ್ಕ, ಎಂಎಲ್ಸಿ ರಾಜೇಂದ್ರ ಹತ್ಯೆ ಪ್ರಕರಣ ಬಹಿರಂಗಗೊಂಡಿತ್ತು. ಆರೋಪಿಗಳು ರಾಜೇಂದ್ರ ಸುಫಾರಿಯ ಬಗ್ಗೆ ಆಡಿಯೋದಲ್ಲಿ ಮಾತುಕತೆ ನಡೆಸಿದ್ದರು. ಆರೋಪಿಗಳಾದಂತ ಸೋಮು, ಭರತ್, ಅಮಿತ್, ಗುಂಡ ಹಾಗೂ ಯತೀಶ್ ಮಾತನಾಡಿದ್ದಂತ ಆಡಿಯೋದಲ್ಲಿ ಎಂಎಲ್ಸಿ ರಾಜೇಂದ್ರ ಹತ್ಯೆಗೆ ಸಂಚು ರೂಪಿಸಿದ್ದು ಬಹಿರಂಗವಾಗಿತ್ತು. 70 ಲಕ್ಷಕ್ಕೆ ಡೀಲ್ ಮಾಡಿದ್ದಂತ…

Read More

ಶಿವಮೊಗ್ಗ: ದಿನಾಂಕ 31-03-2025ರಂದು ಸಾಗರ ತಾಲ್ಲೂಕು ಆರ್ಯ ಈಡಿಗರ ಸಂಘಕ್ಕೆ ಬೆಳ್ಳಿ ಹಬ್ಬ. ಈ ಹಬ್ಬದ ಆಚರಣೆಯ ಹಿನ್ನಲೆಯಲ್ಲಿ ನೂತನ ಈಡಿಗರ ಸಮುದಾಯ ಭವನ, ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅಧ್ಯಕ್ಷ ಬಿ.ಎಂ ಮಂಜಪ್ಪ ಮರಸ ಅವರು, ಸಾಗರ ಪ್ರಾಂತ ಆರ್ಯ ಈಡಿಗರ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ನೂತನ ಸಮುದಾಯ ಭವನ, ವಾಣಿಜ್ಯ ಮಳಿಗೆ ಶಂಕುಸ್ಥಾಪನೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಮಾರ್ಚ್.31ರಂದು ಹಮ್ಮಿಕೊಳ್ಳಲಾಗಿದೆ ಎಂದರು. ಮಾರ್ಚ್.31ರಂದು ಬೆಳಿಗ್ಗೆ 10.30ಕ್ಕೆ ವರದಹಳ್ಳಿ ರಸ್ತೆಯಲ್ಲಿ ಈಡಿಗರ ಸಮುದಾಯ ಭವನ ನಿರ್ಮಾಣದ ಶಂಕುಸ್ಥಾಪನ ಕಾರ್ಯವನ್ನು ಸಚಿವ ಮಧು ಬಂಗಾರಪ್ಪ ನೆರವೇರಿಸಲಿದ್ದಾರೆ. ವಾಣಿಜ್ಯ ಮಳಿಗೆ ಶಂಕುಸ್ಥಾಪನೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ನೆರವೇರಿಸಲಿದ್ದಾರೆ. ಆ ಬಳಿಕ ಸಭಾ ಕಾರ್ಯಕ್ರಮ ನೆಡೆಯಲಿದೆ ಎಂದು ಹೇಳಿದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ಬಿವೈ ರಾಘವೇಂದ್ರ ನೆರವೇರಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಶಿರಸಿ-ಸಿದ್ಧಾಪುರ ಶಾಸಕ…

Read More

ಬೆಂಗಳೂರು: ರಾಜ್ಯಾದ್ಯಂತ ಪೋಡಿ ದುರಸ್ಥಿ ಅಭಿಯಾನಕ್ಕೆ ಚಾಲನೆ ನೀಡಿದ್ದರೂ ಈ ಕೆಲಸ ನಿರೀಕ್ಷಿತ ವೇಗ ಪಡೆದಿಲ್ಲ ಎಂದು ತಹಶೀಲ್ದಾರರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು. ದಶಕಗಳ ಹಿಂದೆಯೇ ಸರ್ಕಾರ ಬಡ ರೈತರಿಗೆ ಜಮೀನು ಮಂಜೂರು ಮಾಡಿದೆ. ಆದರೆ, ನಾನಾ ಕಾರಣಗಳಿಂದ ಜಮೀನು ದುರಸ್ಥಿಯಾಗದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಬೇಕಾದ ಸ್ಥಿತಿ ಇದೆ. ರೈತರು ತಮ್ಮ ಪಾಲಿನ ಜಮೀನು ಇದ್ದರೂ ಸಹ ಅದರ ಪೋಡಿಯಾಗದೆ ಸರ್ಕಾರಿ ಕಚೇರಿಗಳಿಗೆ ಸುತ್ತುವುದು ಪರಿಪಾಟವಾಗಿದೆ. ಹೀಗಾಗಿಯೇ ಪೋಡಿ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ನಮೂನೆ 1-5 ಹಾಗೂ 6-10 ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗಿತ್ತು. https://youtu.be/IDxtmYXWGZM ನಿಯಮದಂತೆ ತಹಶೀಲ್ದಾರರು ನಿಗದಿತ ಜಮೀನಿಗೆ ಸಂಬಂಧಿಸಿದ ನಮೂನೆ 1-5 ದಾಖಲೆಯನ್ನು ಸಿದ್ದಪಡಿಸಿ ಮುಂದಿನ ಹಂತಕ್ಕೆ ನಮೂನೆ 6-10 ಕೆಲಸಕ್ಕಾಗಿ ಭೂ ಮಾಪನ ಇಲಾಖೆಗೆ ಕಡತ ಕಳುಹಿಸಬೇಕು. ಆದರೆ, ಬಹುತೇಕ ಜಿಲ್ಲೆಗಳಲ್ಲಿ ಈ ಸಂಖ್ಯೆ ಸಮಾಧಾನಕರವಾಗಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು. ಇದೇ ಸಂದರ್ಭದಲ್ಲಿ…

Read More

ಬೆಂಗಳೂರು: ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಶುಕ್ರವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರುಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ನಿಗದಿತ ಸಮಯದೊಳಗೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿರುವ ಪ್ರಕರಣಗಳನ್ನು ಇತ್ಯರ್ಥಗೊಳಿ ಪ್ರಗತಿಯನ್ನು ಕಾಯ್ದುಕೊಳ್ಳಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. https://youtu.be/IDxtmYXWGZM ಈ ಸಭೆಯಲ್ಲಿ ಈ ಬಗ್ಗೆ ಗಮನ ಸೆಳೆದ ಅವರು “ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ. ಈ ಹಿಂದೆ ಪ್ರತಿ ಪ್ರಕರಣಗಳ ಇತ್ಯರ್ಥಕ್ಕೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಸರಾಸರಿ 7 ತಿಂಗಳಿಗಿಂತ ಹೆಚ್ಚು…

Read More

ಬೆಂಗಳೂರು: ಕೆಲ ದಿನಗಳ ಹಿಂದೆ ಕೋಠಿಮಠದ ಶ್ರೀಗಳು ಪ್ರಪಂಚದಲ್ಲಿ ಭೂಕಂಪನ ಉಂಟಾಗಲಿದೆ. ಸಾವು ನೋವು ಹೆಚ್ಚಾಗಲಿದೆ ಎಂಬುದಾಗಿ ಹೇಳಿದ್ದರು. ಈ ಭವಿಷ್ಯ ಇಂದು ನಿಜವಾಗಿದೆ. ಮ್ಯಾನ್ಮಾರ್ ಹಾಗೂ ಬ್ಯಾಂಕಾಕ್ ನಲ್ಲಿ 7.7 ತೀವ್ರತೆಯಲ್ಲಿ ಪ್ರಬಲ ಭೂಕಂಪನ ಉಂಟಾಗಿದೆ. ಇದರಿಂದಾಗಿ ಹಲವರು ಸಾವನ್ನುಪ್ಪಿದ್ದಾರೆ. ಮಾರ್ಚ್.2, 2025ರಂದು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯವರು ಭವಿಷ್ಯ ನುಡಿದಿದ್ದರು. ಮುಂದಿನ ಸಿಎಂ ಯಾರಾಗ್ತಾರೆ, ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಯ ನಡುವೆ, ಈ ಭವಿಷ್ಯವಾಣಿ ಹೊರಬಿದ್ದಿದೆ. ಅಲ್ಲದೇ ಕೋಡಿಮಠ ಶ್ರೀ ಭವಿಷ್ಯವಾಣಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಭದ್ರ ಎಂಬುದಾಗಿಯೇ ತಿಳಿಸಿದ್ದರು. ಹಾಲು ಮತ ಸಮಾಜವು ಪ್ರಾಚೀನ ಕಾಲದಿಂದ ದೈವಾರಾಧನೆ ಮಾಡುವ ಸಮಾಜವಾಗಿದೆ. ಹಾಲು ಕೆಟ್ಟರೂ ಹಾಲು ಸಮಾಜ ಕೆಡದು. ಹಕ್ಕ ಬುಕ್ಕರು ವಿಜಯನಗರ ಸಾಮ್ರಾಜ್ಯ ಕಟ್ಟಿದರು. ಹಾಲು ಮತ ಸಮಾಜದವರಲ್ಲಿ ರಾಜ್ಯದ ಅಧಿಕಾರವಿದೆ. ಸಿಎಂ ಕುರ್ಚಿಯಿಂದ ಬಿಡಿಸುವುದು ಕಷ್ಟ. ಅದು ಸುಲಭವೂ ಅಲ್ಲ. ಸಿಎಂ ಸಿದ್ಧರಾಮಯ್ಯ ಅವರು ಅವರಾಗೇ ಸಿಎಂ ಸ್ಥಾನ…

Read More

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಸಂಭವವಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಮಧ್ಯ ರೈಲ್ವೆಯು ಗುಂಟೂರು ಮತ್ತು ಎಸ್.ಎಸ್.ಎಸ್. ಹುಬ್ಬಳ್ಳಿ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲಿನ ವಿವರ ಈ ಕೆಳಗಿನಂತಿವೆ: ರೈಲು ಸಂಖ್ಯೆ 07271 ಗುಂಟೂರು-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ರೈಲು ಮಾರ್ಚ್ 31, 2025 ರಂದು ರಾತ್ರಿ 8:00 ಗಂಟೆಗೆ ಗುಂಟೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 9:20ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿಗೆ ಆಗಮಿಸಲಿದೆ. ರೈಲು ಸಂಖ್ಯೆ 07272 ಎಸ್ಎಸ್ಎಸ್ ಹುಬ್ಬಳ್ಳಿ-ಗುಂಟೂರು ವಿಶೇಷ ರೈಲು ಏಪ್ರಿಲ್ 1, 2025 ರಂದು ಬೆಳಿಗ್ಗೆ 11:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಗಿನ ಜಾವ 3:00 ಗಂಟೆಗೆ ಗುಂಟೂರು ತಲುಪಲಿದೆ. ಈ ವಿಶೇಷ ರೈಲುಗಳು ಎರಡೂ ಮಾರ್ಗಗಳಲ್ಲಿ ನರಸರಾವ್ ಪೇಟೆ, ವಿನುಕೊಂಡ, ಮಾರ್ಕಾಪುರ ರೋಡ್, ಕುಂಬಂ, ಗಿಡ್ಡಲೂರು, ನಂದ್ಯಾಳ, ಧೋಣೆ, ಗುಂತಕಲ್, ಬಳ್ಳಾರಿ, ತೋರಣಗಲ್ಲು, ಹೊಸಪೇಟೆ, ಮುನಿರಾಬಾದ್, ಕೊಪ್ಪಳ, ಭಾನಾಪುರ, ಬನ್ನಿ ಕೊಪ್ಪ, ಗದಗ ಮತ್ತು ಅಣ್ಣಿಗೇರಿ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ.…

Read More