Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹಠಾತ್ ಹೃದಯಾಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಇಂದು ಪರಿಷತ್ ಸದಸ್ಯ ಧನಂಜಯ್ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆಯಿಂದಾಗಿ ಜನರಿಗೆ ಸ್ಥಳೀಯ ಮಟ್ಟದಲ್ಲಿ ತಪಾಸಣೆಗೆ ಅನುಕೂಲವಾಗಲಿದೆ ಎಂದರು. ಟೆಲಿ ಇ.ಸಿ.ಜಿ ಮೂಲಕ ತಜ್ಞವೈದ್ಯರಿಂದ ಅಗತ್ಯ ಮಾರ್ಗದರ್ಶನ ದೊರೆಯಲಿದೆ. ಹಠಾತ್ ಹೃದಯಘಾತಗಳನ್ನ ಪ್ರಿವೆಂಟ್ ಮಾಡಲು ಅವಕಾಶವಿದ್ದು, ಆರಂಭದಲ್ಲೇ ಪತ್ತೆ ಹಚ್ಚುವತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಟೆಲಿ ಇಸಿಜಿ ಸಹಕಾರಿಯಾಗಲಿದೆ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ರಾಜ್ಯದ 86 ಸರ್ಕಾರಿ ಆಸ್ಪತ್ರೆಗಳಲ್ಲಿ ಹಠಾತ್ ಹೃದಯಾಘಾತಗಳನ್ನು ತಡೆಯಲು ಹಬ್ ಮತ್ರು ಸ್ಪೋಕ್ ಮಾದರಿಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಹೃದಯ ಜ್ಯೋತಿ ಯೋಜನೆ ಇಂದು ಸಾವಿರಾರು ಜನರ ಜೀವ ಉಳಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಭಾರೀ ಮಳೆಯ ಕಾರಣದಿಂದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ನಾಳೆ ಕೂಡ ವರುಣನ ಆರ್ಭಟ ಮುಂದುವರೆಯುವ ಕಾರಣ ರಾಜ್ಯದ ಕೆಲ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ 11 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಾಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮುಂಡಗೋಡು ಹೊರತುಪಡಿಸಿ ಜಿಲ್ಲೆಯ 11 ತಾಲ್ಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ನಾಳೆ ರಜೆಯನ್ನು ಘೋಷಿಸಲಾಗಿದೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದು, ನಾಳೆ ಕಾರವಾರ, ಅಂಕೋಲಾ, ಕುಮಟಾ, ಶಿರಸಿ, ಹೊನ್ನಾವರ, ಯಲ್ಲಾಪುರ, ಜೋಯಿಡಾ, ಹಳಿಯಾಳ, ಸಿದ್ದಾಪುರ, ಭಟ್ಕಳ, ದಾಂಡೇಲಿ ತಾಲ್ಲೂಕಿನ ಶಾಲಾ-ಕಾಲೇಜಿಗೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ. ನಾಳೆ ಬೆಳಗಾವಿ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ರಜೆ ಬೆಳಗಾವಿ ಜಿಲ್ಲೆಯ 7 ತಾಲ್ಲೂಕಿನ ಅಂಗನವಾಡಿ,…
ಬೆಂಗಳೂರು: ಕರ್ನಾಟಕ ಸರ್ಕಾರ ಕೊಡಮಾಡುವ ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆಯಾಗಿರುವ ತೋಂಬತ್ತೈದು ವರ್ಷದ ಹಿರಿಯ ಪತ್ರಕರ್ತ ಕಲ್ಲೇಶಿವೋತ್ತಮರಾವ್ ಅವರಿಗೆ ಅಭಿನಂದನೆಗಳು. ಸುವರ್ಣ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರಸಂಘ (ಕೆಯುಡಬ್ಲ್ಯೂಜೆ) ಅವರ ಮನೆಗೆ ತೆರಳಿ ಮನೆಯಂಗಳದಲ್ಲಿ ಅವರನ್ನು ಗೌರವಿಸಿದ್ದು ಅಭಿಮಾನದ ಸಂಗತಿಯಾಗಿತ್ತು. ಮನೆಯಂಗಳದಲ್ಲಿ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ನಮನ ಕಾರ್ಯಕ್ರಮವನ್ನು ಕಲ್ಲೇ ಅವರ ಮನೆಯಿಂದಲೇ ಪ್ರಾರಂಭಿಸಲಾಗಿತ್ತು. ಅಷ್ಟೂ ಪತ್ರಕರ್ತರ ಅನುಭವವನ್ನು ಅಮೃತಬೀಜ ಕೃತಿ ಮೂಲಕ ಕೆಯುಡಬ್ಲ್ಯೂಜೆ ದಾಖಲೀಕರಣ ಮಾಡಿದ್ದು ಈ ಕೃತಿಯನ್ನು ಬಹುರೂಪಿ ಸಂಸ್ಥೆ ಹೊರತಂದಿದೆ. ಹಿರಿಯ ಪತ್ರಕರ್ತರಾದ ಕಲ್ಲೇ ಶಿವೋತ್ತಮರಾವ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಭಿನಂದಿಸಿದ್ದಾರೆ. https://kannadanewsnow.com/kannada/a-passenger-died-on-the-spot-when-a-ksrtc-bus-collided-with-a-bike-near-the-maddur-bus-station/ https://kannadanewsnow.com/kannada/lalbagh-flower-show-opens-viewed-by-580000-people-so-far/
ಮಂಡ್ಯ : ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಮೃತ ಪಟ್ಟು ಮತ್ತೋಬ್ಬ ಗಾಯಗೊಂಡಿರುವ ಘಟನೆ ಮದ್ದೂರು ಪಟ್ಟಣದ ಬಸ್ ನಿಲ್ದಾಣದ ಬಳಿ ನಡೆದಿದೆ. ಚನ್ನಪಟ್ಟಣದ ಜೀವನ್ ಪುರ್ ನಗರದ ಮೆಹರಾನ್ ಖಾನ್ (20) ಮೃತ ಪಟ್ಟ ಯುವಕನಾಗಿದ್ದಾನೆ. ಚನ್ನಪಟ್ಟಣದಿಂದ ಮೆಹರಾನ್ ಖಾನ್ ಮತ್ತು ಆತನ ಸ್ನೇಹಿತ ಮಹಮದ್ ಖಾಸಿಂ ಇಬ್ಬರು ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ನಲ್ಲಿ ( KA-02-EU-9389 ) ಟಿ.ನರಸೀಪುರದ ಕುರಿ ಸಂತೆಗೆ ಹೋಗುತ್ತಿದ್ದ ವೇಳೆ ಮದ್ದೂರು ಸರ್ಕಾರಿ ಬಸ್ ನಿಲ್ದಾಣದ ಬಳಿ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ (KA-09-F-5060) ಸಾರಿಗೆ ಬಸ್ (ಮೈಸೂರು ಡಿಪೋ) ಮದ್ದೂರು ಬಸ್ ನಿಲ್ದಾಣಕ್ಕೆ ಹೋಗುವ ವೇಳೆ ತಿರುವುನಲ್ಲಿ ಬಂದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೆಹರಾನ್ ಖಾನ್ ಸ್ಥಳದಲ್ಲೆ ಸಾವಿಗೀಡಾಗಿದ್ದಾನೆ. ಪ್ರಯಾಣಿಕರು ಹಾಗೂ ಸಾರ್ವಜನಿಕರು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಅಷ್ಟರಲ್ಲಿ ಮಹರಾನ್ ಖಾನ್ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ…
ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದ್ದನು. ಇಂದು ಗಾಯಗೊಂಡಿದ್ದಂತ ಮತ್ತೋರ್ವ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿ ನಿಗೂಢ ಸ್ಪೋಟ ಘಟನೆ ನಡೆದಿತ್ತು. ಆ ಬಳಿಕ ಪರಿಶೀಲಿಸಿದಾಗ ಸಿಲಿಂಡರ್ ಸ್ಪೋಟಗೊಂಡಿರುವುದಾಗಿ ತಿಳಿದು ಬಂದಿತ್ತು. ಈ ಘಟನೆಯಲ್ಲಿ ಬಾಲಕನೊಬ್ಬ ಸಾವನ್ನಪ್ಪಿದ್ದನು. ಇನ್ನೂ ಈ ದುರಂತದಲ್ಲಿ ಗಾಯಗೊಂಡಿದ್ದಂತ 8 ವರ್ಷದ ಬಾಲಕಿ ಖಯಾಲಾಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಬಾಲಕಿ ಖಯಾಲಾ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ಸಿಲಿಂಡರ್ ಸ್ಪೋಟ ಘಟನೆಯಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. https://kannadanewsnow.com/kannada/benefit-from-the-e-pathi-account-movement-maddur-tahsildar-parashuram-sattigeri/ https://kannadanewsnow.com/kannada/lalbagh-flower-show-opens-viewed-by-580000-people-so-far/
ಪೂರ್ವಜರ ಆರಾಧನೆಯನ್ನು ಅತ್ಯಂತ ವಿಶೇಷವಾದ ಆರಾಧನೆ ಎಂದು ಪರಿಗಣಿಸಲಾಗಿದೆ. ಕುಲದೇವತೆಯ ಕೃಪೆಯಿಂದಲೇ ನಮ್ಮ ಜೀವನದಲ್ಲಿ ಪ್ರತಿಯೊಂದು ಶುಭ ಕಾರ್ಯಗಳು ನಡೆಯುತ್ತವೆ ಎಂಬುದು ಹಲವರ ಅನುಭವಕ್ಕೆ ಬಂದಿರುವ ಸತ್ಯ. ಆದುದರಿಂದಲೇ ಇಂದಿನ ಕಾಲದಲ್ಲಿ ಕುಲದೇವತಾ ಆರಾಧನೆಯು ಬಹಳ ವಿಶೇಷವಾಗಿದೆ. ಅಂತಹ ಕುಲದೇವತೆಗೆ ನಾವು ಮಾಡುವ ಪ್ರತಿಯೊಂದು ರೀತಿಯ ಪೂಜೆಯು ವಿಭಿನ್ನ ಪ್ರಯೋಜನಗಳನ್ನು ಹೊಂದಿದೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಯಶಸ್ಸನ್ನು ಸಾಧಿಸಲು ಮತ್ತು ಅಡೆತಡೆಗಳನ್ನು ಕಡಿಮೆ ಮಾಡಲು ಕುಲದೈವವನ್ನು ಯೋಚಿಸಿ ಬೆಳಗಬೇಕಾದ ದೀಪದ ಬಗ್ಗೆ ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಅಡೆತಡೆಗಳನ್ನು…
ಬೆಂಗಳೂರು: 218ನೇ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಇಂದು ತೆರೆ ಬಿದ್ದಿದೆ. ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋಗೆ ಭರ್ಜರಿ ರೆಸ್ಪಾನ್ ದೊರೆತಿದೆ. ಈವರೆಗೆ ಬರೋಬ್ಬರಿ 5.80 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ಈ ಕುರಿತಂತೆ ಲಾಲ್ ಬಾಗ್ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ.ಎಂ.ಜಗದೀಶ್ ಮಾಹಿತಿ ಹಂಚಿಕೊಂಡಿದ್ದು, 218ನೇ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್.7ರಿಂದ 18ರ ಇಂದಿನವರೆಗೆ ಆಯೋಜಿಸಲಾಗಿತ್ತು ಎಂದಿದ್ದಾರೆ. ಕೊನೆಯ ದಿನವಾದಂತ ಇಂದು ಪ್ಲವರ್ ಶೋವನ್ನುವಯಸ್ಕರು— 7960, ಮಕ್ಕಳು — 2400, ಶಾಲಾ ಮಕ್ಕಳು 16,950 ಸೇರಿದಂತೆ ಒಟ್ಟು — 27,310 ಮಂದಿ ವೀಕ್ಷಣೆ ಮಾಡಿದ್ದಾರೆ. ಇದರ ಒಟ್ಟು ಮೊತ್ತ ರೂ 3,45,000 ಆಗಿರುತ್ತದೆ ಎಂದು ಹೇಳಿದ್ದಾರೆ. ಕಳೆದ 12 ದಿವಸಗಳ ಫಲಪುಷ್ಪ ಪ್ರದರ್ಶನಕ್ಕೆ ಆಗಮಿಸಿದ ವೀಕ್ಷರ ಸಂಖ್ಯೆ ಒಟ್ಟು 6.24 ಲಕ್ಷಗಳ ಮಂದಿಯಾಗಿದ್ದಾರೆ. ಇದರಿಂದ ಸಂಗ್ರಹವಾದ ಒಟ್ಟು ಮೊತ್ತ ರೂ 2,78,45,560 ಅಂದರೇ ಪ್ರವೇಶ ಶುಲ್ಕ ರೂ 2,4732 ಕೋಟಿಗಳು ,ಪ್ರಾದರ್ಶಿಕೆಗಳ ಶುಲ್ಕ ರೂ…
ಮಂಡ್ಯ : ಸಾರ್ವಜನಿಕರು ಆಸ್ತಿಗಳ ಪೌತಿ ಖಾತೆಗಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಇ- ಪೌತಿ ಖಾತಾ ಆಂದೋಲನ ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ಮನವಿ ಮಾಡಿದರು. ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯಿತಿಗೆ ಸೋಮವಾರ ಭೇಟಿ ನೀಡಿ ಇ- ಪೌತಿ ಖಾತಾ ಆಂದೋಲನದ ಬಗ್ಗೆ ಗ್ರಾಮಸ್ಥರಿಗೆ ಅರಿವು ಮೂಡಿಸಲಾಯಿತು. ಇದೇ ವೇಳೆ ಮಾತನಾಡಿದ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಕೃಷಿ ಜಮೀನಿನ ಇಡುವಳಿದಾರರು/ ಖಾತೆದಾರರು ಮೃತಗೊಂಡ ನಂತರ ಹಲವಾರು ವರ್ಷಗಳಿಂದ ವಾರಸುದಾರರು ತಮ್ಮ ಹೆಸರಿಗೆ ಖಾತೆಯನ್ನು ವರ್ಗಾವಣೆ ಮಾಡಿಕೊಂಡಿಲ್ಲ. ಆದ್ದರಿಂದ ಪಹಣಿಗಳಲ್ಲಿ ಮೃತ ಖಾತೆದಾರರ ಹೆಸರು ಮುಂದುವರೆಯುತ್ತಿದೆ. ಇದನ್ನು ಸರಿಪಡಿಸಿಲು ಕಂದಾಯ ಇಲಾಖೆ ಸ್ವಯಂ ಪ್ರೇರಿತವಾಗಿ ಇ-ಪೌತಿ ಖಾತಾ ಆಂದೋಲನವನ್ನು ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಮೃತ ಖಾತೆದಾರರ ಮರಣ ಪ್ರಮಾಣ ಪತ್ರ, ವಂಶವೃಕ್ಷ, ಆಧಾರ್ ವಿವರವನ್ನು ಗ್ರಾಮ ಆಡಳಿತಾಧಿಕಾರಿಗಳಿಗೆ ನೀಡಿ ಸಹಕರಿಸಬೇಕೆಂದರು. ಈಗಾಗಲೇ ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿ ಗ್ರಾಮ ಪಂಚಾಯಿತಿಗಳಲ್ಲೇ…
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶ ಸಂಬಂಧ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವವರಿಗೆ ಛಾಯ್ಸ್ ದಾಖಲಿಸಲು ಮತ್ತು ಶುಲ್ಕ ಪಾವತಿಸಲು ಆ.19ರಂದು ಮಧ್ಯಾಹ್ನ 3ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ತಿಳಿಸಿದ್ದಾರೆ. ಶುಲ್ಕ ಪಾವತಿ ನಂತರ ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಂಡು ಮಂಗಳವಾರ ಸಂಜೆ 5.30ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದುವರೆಗೂ ಯಾವುದೇ ಛಾಯ್ಸ್ ಆಯ್ಕೆ ಮಾಡದವರು ಹಾಗೂ ಶುಲ್ಕ ಪಾವತಿಸದಿರುವವರಿಗೆ ನೀಡಿರುವ ಕೊನೆ ಅವಕಾಶವಾಗಿದ್ದು, ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕೋರಿದ್ದಾರೆ. ಈ ಅವಕಾಶದ ನಂತರವೂ ಯಾವುದೇ ಛಾಯ್ಸ್ ಆಯ್ಕೆ ಮಾಡದ ಹಾಗೂ ಶುಲ್ಕ ಪಾವತಿ ಮಾಡದಿರುವವರ ಸೀಟುಗಳನ್ನು ರದ್ದುಪಡಿಸಿ, ಆ ಸೀಟುಗಳನ್ನು 2ನೇ ಸುತ್ತಿನ ಸೀಟು ಮ್ಯಾಟ್ರಿಕ್ಸ್ ಗೆ ಸೇರಿಸಿಕೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. https://kannadanewsnow.com/kannada/the-government-has-ordered-to-give-mlc-dinesh-gooligowda-the-position-of-state-minister/ https://kannadanewsnow.com/kannada/actor-darshans-wife-vijayalakshmi-met-him-in-jail-gave-him-fruits-and-inquired-about-his-well-being/
ಬೆಂಗಳೂರು: ಕರ್ನಾಟಕ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರನ್ನಾಗಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಕೆಲ ದಿನಗಳ ಹಿಂದೆ ಆದೇಶಿಸಿತ್ತು. ಇಂದು ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಆದೇಶ ಮಾಡಿದೆ. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ದಿನೇಶ್ ಗೂಳಿಗೌಡ, ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಇವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಜ್ಯ ಸಚಿವರ ಸ್ಥಾನಮಾನದೊಂದಿಗೆ ರಾಜ್ಯ ಸಚಿವ ಸ್ಥಾನಮಾನಕ್ಕೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಿದ್ದಾರೆ. https://kannadanewsnow.com/kannada/after-airtel-jio-and-vodafone-networks-are-down-across-the-country-users-are-complaining/ https://kannadanewsnow.com/kannada/actor-darshans-wife-vijayalakshmi-met-him-in-jail-gave-him-fruits-and-inquired-about-his-well-being/














