Author: kannadanewsnow09

ದಾವಣಗೆರೆ ; ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ಮೇ.19 ರಂದು ನಡೆಸಲಾಗುವುದು. ವಿದ್ಯಾರ್ಥಿಗಳ ಪ್ರವೇಶ ಪತ್ರ (HALL TICKET) ವನ್ನು ಆಯಾ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಲ್ಲಿ ವಿತರಿಸಲಾಗುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕಾಗಿ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಪಡೆದುಕೊಳ್ಳುವಂತೆ ತಿಳಿಸಿದೆ. ಪ್ರವೇಶ ಪತ್ರ ಪಡೆಯಲು ಬರುವ ವಿದ್ಯಾರ್ಥಿ, ಪೋಷಕರು ವಿದ್ಯಾರ್ಥಿಯ ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ, ಆಧಾರಕಾರ್ಡ್, ಅರ್ಜಿ ಸಲ್ಲಿಸಿರುವ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. https://kannadanewsnow.com/kannada/bjp-jds-government-has-taken-away-teachers-pension-dr-k-k-manjunath-kumar/ https://kannadanewsnow.com/kannada/state-government-exempts-development-works-from-model-code-of-conduct/

Read More

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಅಷ್ಟೇ ಅಲ್ಲ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವಿನ ನಗೆ ಬೀರಲಿದೆ. ಶಿಕ್ಷಕರ ಸಮಸ್ಯೆ ನಿವಾರಣೆಗಾಗಿ ನಾನು ಶ್ರಮಿಸುತ್ತೇನೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರು ತಮಗೆ ಮತ ನೀಡುವಂತೆ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಕೋರಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಅವರು, 2018ರಲ್ಲೇ ಕಾಂಗ್ರೆಸ್ ಸರ್ಕಾರವು ಶೇ.30ರಷ್ಟು ಶಿಕ್ಷಕರ ವೇತನವನ್ನು ಹೆಚ್ಚಿಸಿದೆ ಎಂದರು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವು ಶಿಕ್ಷಕರ ಪಿಂಚಣಿಯನ್ನು ಕಿತ್ತುಕೊಂಡಿದೆ. ಇದರ ಪರಿಣಾಮ ಅನುದಾನಿತ ಶಿಕ್ಷಕರು ಬೀದಿ ಪಾಲು ಮಾಡಿದಂತೆ ಆಗಿದೆ. ಇದನ್ನು ಶಿಕ್ಷಕರು ಎಂದು ಮರೆಯಲಾರರು ಎಂದು ಹೇಳಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಡಿಸಿಸಿ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್ ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಾಗಿದ್ದರು. https://kannadanewsnow.com/kannada/state-government-exempts-development-works-from-model-code-of-conduct/ https://kannadanewsnow.com/kannada/the-sale-of-liquor-will-be-banned-from-6-am-on-may-22-to-6-pm-on-may-23-in-this-police-station-limits-in-bengaluru/

Read More

ದಿನದಿಂದ ದಿನಕ್ಕೆ ಪ್ರತಿಯೊಬ್ಬರ ಹಣದ ಅವಶ್ಯಕತೆ ಹೆಚ್ಚುತ್ತಿದೆ. ಆದರೆ ನಮ್ಮ ಆದಾಯ ಎಷ್ಟೇ ಹೆಚ್ಚಾದರೂ ನಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಲಾಗದ ಪರಿಸ್ಥಿತಿ ಇದೆ. ನಿಮಗೆ ಅಗತ್ಯಕ್ಕಿಂತ ಸ್ವಲ್ಪ ಹೆಚ್ಚು ಹಣವನ್ನು ಗಳಿಸಿ. ಅದನ್ನು ಶೇಖರಣೆಯಲ್ಲಿ ಇಡಬೇಕು. ನೀವು ಸಂಪತ್ತನ್ನು ಸೇರಿಸುವ ಬಯಕೆಯನ್ನು ಹೊಂದಿದ್ದರೆ, ಈ ಸರಳ ತಾಂತ್ರಿಕ ಪರಿಹಾರವು ನಿಮಗಾಗಿ ಆಗಿದೆ. ಈ ತಾಂತ್ರಿಕ ಪರಿಹಾರದಲ್ಲಿ ನಂಬಿಕೆ ಇರುವವರು ಮಾತ್ರ ಪೆರುಮಾಳ್ ಚಿಂತನೆಯ ಈ ಆಧ್ಯಾತ್ಮಿಕ ಪರಿಹಾರದಿಂದ ಪ್ರಯೋಜನ ಪಡೆಯಬಹುದು. ಪರಿಹಾರವಾಗಿ 5 ರೂ ಈ ಪರಿಹಾರಕ್ಕಾಗಿ ನಿಮಗೆ ಬೇಕಾಗಿರುವುದು 5 ತುಳಸಿ ಎಲೆಗಳು, 5 ರೂಪಾಯಿ ನಾಣ್ಯ ಮತ್ತು ಹಸಿರು ಬಣ್ಣದ ಪ್ಲಾಸ್ಟಿಕ್ ಪಾತ್ರೆ. ಅಷ್ಟೇ. ಡಬ್ಬವನ್ನು ಸ್ವಲ್ಪ ದೊಡ್ಡದಾಗಿ ಖರೀದಿಸಿ. ಕೇವಲ ಐದು ರೂಪಾಯಿಗಳು ಮತ್ತು ಐದು ತುಳಸಿ ಎಲೆಗಳನ್ನು ನಿಮ್ಮ ಅಂಗೈಯಲ್ಲಿ ಇಟ್ಟುಕೊಂಡು, ಪೆರುಮಾಳ್ಗೆ ಮನಃಪೂರ್ವಕವಾಗಿ ಪ್ರಾರ್ಥಿಸಿ. ಪೂಜಾ ಕೋಣೆಯಲ್ಲಿ ಪೆರುಮಾಳ್ ದೇವರ ಚಿತ್ರವನ್ನು ನೋಡಿ, ಪೆರುಮಾಳ್ಗೆ ದೀಪವನ್ನು ಬೆಳಗಿಸಿ ಮತ್ತು ಈ ಪ್ರಾರ್ಥನೆಯನ್ನು ಮಾಡಿ. ‘ನಮ್ಮ ಮನೆಯಲ್ಲಿ…

Read More

ಬೆಂಗಳೂರು: ನಗರದ ಪೂರ್ವ ವಿಭಾಗದ ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುವ ಶ್ರೀ ಮುತ್ಯಾಲಮ್ಮ ದೇವಾಲಯದ ರಥೋತ್ಸವ ಮತ್ತು ಹೂವಿನ ಪಲ್ಲಕ್ಕಿ ಉತ್ಸವದ ಪ್ರಯುಕ್ತ ಮೇ.22ರ ಬೆಳಿಗ್ಗೆ 6ರಿಂದ ಮೇ.23ರ ಸಂಜೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿದ್ದು, ಪ್ರಸ್ತಾವನೆಯಲ್ಲಿ ದಿನಾಂಕ: 21-05-2024 ರಿಂದ 23-05-2024 ರವರೆಗೆ ಬೆಂಗಳೂರು ನಗರ ಪೊಲೀಸ್‌ ಕಮೀಷನರೇಟ್ ವ್ಯಾಪ್ತಿಯ ಪೂರ್ವ ವಿಭಾಗದ ಭಾರತೀನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆಯಲಿರುವ ಶ್ರೀ ಮುತ್ಯಾಲಯಮ್ಮ ದೇವಿಯರ ಜಾತ್ರ ಮಹೋತ್ಸವ ಪ್ರಯುಕ್ತ ದಿನಾಂಕ: 21-05- 2024 ರಂದು ದೀಪೋತ್ಸವ, ದಿನಾಂಕ: 22-05-2024 ರ ಹಗಲಿನಲ್ಲಿ ರಥೋತ್ಸವ ಹಾಗೂ ರಾತ್ರಿಯಲ್ಲಿ ಹೂವಿನ ಪಲ್ಲಕ್ಕಿ ನಡೆಯಲಿವೆ ಎಂದಿದ್ದಾರೆ. ಈ ಉತ್ಸವದಲ್ಲಿ ಸುಮಾರು 60 ರಿಂದ 65 ವಿವಿಧ ದೇವರುಗಳ ಪಲ್ಲಕ್ಕಿಗಳು ಮತ್ತು ಲಕ್ಷಾಂತರ ಜನರು ಭಾಗವಹಿಸಲಿದ್ದು, ದೇವರುಗಳ ರಥೋತ್ಸವ ಮತ್ತು ಪಲ್ಲಕ್ಕಿ ಉತ್ಸವಗಳು ನಡೆಯುವ ಸಮಯದಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ…

Read More

ಶಿವಮೊಗ್ಗ : ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಚುನಾವಣಾ ಕ್ಷೇತ್ರಗಳಿಂದ ಕರ್ನಾಟಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಐ.ಎ.ಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕಮಾಡಿದೆ. ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಕೊಡಗು ಜಿಲ್ಲೆ, ಚಿಕ್ಕಮಗಳೂರು ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ, ಶಿವಮೊಗ್ಗ ಜಿಲ್ಲೆ, ದಾವಣಗೆರೆ ಜಿಲ್ಲೆ ಗಳಿಗೆ ಐ.ಎ.ಎಸ್ ಅಧಿಕಾರಿಯಾದ ಅನಿಲ್ ಕುಮಾರ್ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಸಹಾಯಕ ಅಧಿಕಾರಿಯಾಗಿ ಮೈಸೂರು ಜಿಲ್ಲೆಯ ತೋಟಗಾರಿಕ ಇಲಾಖೆಯ ಉಪ ನಿರ್ದೇಶಕರಾದ ರುದ್ರೇಶ್ . ಕೆ ನೇಮಕ ಮಾಡಲಾಗಿದೆ. 72044064565 ಮತ್ತು 9964174107 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.. ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರಗಳಾದ ಕೊಡಗು ಜಿಲ್ಲೆ, ಚಿಕ್ಕಮಗಳೂರು ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ, ಶಿವಮೊಗ್ಗ ಜಿಲ್ಲೆ, ದಾವಣಗೆರೆ ಜಿಲ್ಲೆ ಗಳಿಗೆ ಐ.ಎ.ಎಸ್ ಅಧಿಕಾರಿಯಾದ ಹರ್ಷ ಗುಪ್ತ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಸಹಾಯಕ ಅಧಿಕಾರಿಯಾಗಿ ಮೈಸೂರು ಕನ್ನಡ…

Read More

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಅಕ್ರಮಕ್ಕೆ ಬ್ರೇಕ್ ಹಾಕೋದಕ್ಕೆ ಆಯೋಗ ಹದ್ದಿನ ಕಣ್ಣು ನೆಟ್ಟಿತ್ತು. ಈ ನಡುವೆ ದೇಶಾದ್ಯಂತ ಚುನಾವಣಾ ಅಕ್ರಮ ಸಂಬಂಧ ಬರೋಬ್ಬರಿ 9,000 ಕೋಟಿಯನ್ನು ಚುನಾವಣಾ ಆಯೋಗ ಜಪ್ತಿ ಮಾಡಿದೆ. ಹಾಗಾದ್ರೇ ಕರ್ನಾಟಕದಲ್ಲಿ ಜಪ್ತಿಯಾದ ಹಣ, ವಸ್ತು, ಮದ್ಯ ಎಷ್ಟು ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಮಾಹಿತಿ ನೀಡಿದ್ದು, ಹಣದ ಶಕ್ತಿಯ ಮೇಲೆ ಚುನಾವಣಾ ಆಯೋಗದ ದೃಢ ಮತ್ತು ಸಂಘಟಿತ ದಾಳಿ ನಡೆಸಿದೆ. ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿನ ಪ್ರಚೋದನೆಗಳ ಪರಿಣಾಮವಾಗಿ ಏಜೆನ್ಸಿಗಳು 8889 ಕೋಟಿ ರೂ.ಗಳ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿವೆ. ಮಾದಕವಸ್ತುಗಳು ಮತ್ತು ಸೈಕೋಟ್ರೋಪಿಕ್ ವಸ್ತುಗಳು ಸೇರಿದಂತೆ ಪ್ರಚೋದನೆಗಳ ವಿರುದ್ಧ ವರ್ಧಿತ ಜಾಗರೂಕತೆಯು ದೊಡ್ಡ ಸೆಳೆತದ ಕ್ರಮಗಳು ಮತ್ತು ನಿರಂತರ ಉಲ್ಬಣಕ್ಕೆ ಕಾರಣವಾಗಿದೆ ಎಂದಿದೆ. ಮಾದಕವಸ್ತು ವಶಪಡಿಸಿಕೊಳ್ಳುವಿಕೆ ಗರಿಷ್ಠವಾಗಿದೆ. ವೆಚ್ಚದ ಮೇಲ್ವಿಚಾರಣೆ, ನಿಖರವಾದ ದತ್ತಾಂಶ ವ್ಯಾಖ್ಯಾನ ಮತ್ತು ಜಾರಿ ಸಂಸ್ಥೆಗಳ ಸಕ್ರಿಯ ಭಾಗವಹಿಸುವಿಕೆಯ ಕ್ಷೇತ್ರಗಳಲ್ಲಿ ಜಿಲ್ಲೆಗಳು ಮತ್ತು ಏಜೆನ್ಸಿಗಳ ನಿಯಮಿತ…

Read More

ನವದೆಹಲಿ: ತಮ್ಮ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ ಅವರ ನಿವಾಸದ ಒಳಗೆ ತಮ್ಮ ಮಾಜಿ ಕಾರ್ಯದರ್ಶಿ ಬಿಭವ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತೀವ್ರ ವಿವಾದದ ಮಧ್ಯೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಎಎಪಿ ನಾಯಕರ ‘ಜೈಲ್ ಭರೋ’ ಕಾರ್ಯಕ್ರಮವನ್ನು ಘೋಷಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಎಲ್ಲಾ ನಾಯಕರು ನಾಳೆ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ಪ್ರಧಾನ ಕಚೇರಿಗೆ ತೆರಳಿ ಬಂಧನಕ್ಕೆ ಒತ್ತಾಯಿಸಲಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದರು. ಸ್ವಾತಿ ಮಲಿವಾಲ್ ಮೇಲೆ ಹಲ್ಲಿ ಪ್ರಕರಣ: ಬಿಭವ್ ಕುಮಾರ್ ಜಾಮೀನು ಅರ್ಜಿ ವಜಾ ನವದೆಹಲಿ: ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಮಾಜಿ ಸಹಾಯಕ ಬಿಭವ್ ಕುಮಾರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ. ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯವು ತಿರಸ್ಕೃತಗೊಳಿಸಿದೆ. ವಾದಗಳು ಮುಗಿದ ನಂತರ, ಬಿಭವ್ ಕುಮಾರ್ ಅವರನ್ನು ಸಂಜೆ…

Read More

ನವದೆಹಲಿ: ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಮಾಜಿ ಸಹಾಯಕ ಬಿಭವ್ ಕುಮಾರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ. ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯವು ತಿರಸ್ಕೃತಗೊಳಿಸಿದೆ. ವಾದಗಳು ಮುಗಿದ ನಂತರ, ಬಿಭವ್ ಕುಮಾರ್ ಅವರನ್ನು ಸಂಜೆ 4.15ಕ್ಕೆ ಬಂಧಿಸಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಈ ಮೊದಲು ಆದೇಶವನ್ನು ಕಾಯ್ದಿರಿಸಲಾಗಿತ್ತು. ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ವೈಯಕ್ತಿಕ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಮಲಿವಾಲ್ ನೀಡಿದ ದೂರಿನ ನಂತರ ದೆಹಲಿ ಪೊಲೀಸರು ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಮೇ 13 ರಂದು ಮುಖ್ಯಮಂತ್ರಿ ನಿವಾಸಕ್ಕೆ ಹೋದಾಗ ಬಿಭವ್ ಕುಮಾರ್ ತನ್ನನ್ನು 7-8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ ಮತ್ತು ಎದೆ ಮತ್ತು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರದ ವಿವಿಧ ನಿಗಮ-ಮಂಡಳಿಗಳು, ಸಮಿತಿಗಳು ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ಇತರೆ ಶಾಸನಾತ್ಮಕ ಸಂಸ್ಥೆಗಳಲ್ಲಿ ಶಾಸನಾತ್ಮಕ ಸಭೆಗಳನ್ನು ನಡೆಸಲು ಮಾದರಿ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಿ ಆದೇಶಿಸಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಈ ಸಂಬಂಧ ಸಿಎಂ ಅಪರ ಮುಖ್ಯಕಾರ್ಯದರ್ಶಿ, ಡಿಸಿಎಂ ಆಪ್ತ ಕಾರ್ಯದರ್ಶಿ, ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಸಿಎಸ್ ಬರೆದಿರುವಂತ ಪತ್ರದಲ್ಲಿ ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಸರ್ಕಾರದ ವಿವಿಧ ನಿಗಮಗಳು, ಮಂಡಳಿಗಳು, ಸಮಿತಿಗಳು ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ಇತರೆ ಶಾಸನಾತ್ಮಕ ಸಂಸ್ಥೆಗಳಲ್ಲಿ ಶಾಸನಾತ್ಮಕ ಸಭೆಗಳನ್ನು ನಡೆಸುವ ಬಗ್ಗೆ ಸಕ್ಷಮ ಪ್ರಾಧಿಕಾರಗಳು ಚುನಾವಣಾ ಆಯೋಗದ ನಿರ್ಣಯದಲ್ಲಿನ ಷರತ್ತುಗಳಿಗೆ ಒಳಪಟ್ಟು, ಸೂಕ್ತ ನಿರ್ಣಯ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ. https://kannadanewsnow.com/kannada/karnataka-sslc-exam-2-revised-schedule-released/ https://kannadanewsnow.com/kannada/state-government-exempts-development-works-from-model-code-of-conduct/

Read More

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಜೂನ್.14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಪ್ರಾರಂಭಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಎನ್ ಮಂಜುಶ್ರೀ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ದಿನಾಂಕ:07-06-2024 ರಿಂದ 14-06-2024 ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು, ಸದರಿ ಪರೀಕ್ಷೆ-2ನ್ನು ಮುಂದೂಡಿ ದಿನಾಂಕ14-06-2024 ರಿಂದ 22-06-2024ರವರೆಗೆ ನಡೆಸಲು ತೀರ್ಮಾನಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ. ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್.ಎಸ್.ಎಲ್.ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ www.kseab.karnataka.gov.in ದಿಂದ ಪಡೆದುಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಕ್ರಮವಹಿಸಲು ತಿಳಿಸಿದ್ದಾರೆ. ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರಿಷ್ಕೃತ…

Read More