Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಮೂಲತಭೂತ ಸೌಲಭ್ಯ ಕಾಮಗಾರಿಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಸರಕು-ಸೇವೆಗಳ ಖರೀದಿಗೆ ಸಂಬಂಧಿಸಿದಂತೆ ಟೆಂಡರ್ ಗಳನ್ನು ಆಹ್ವಾನಿಸುವುದು, ಟೆಂಡರ್ ಗಳನ್ನು ಅಂತಿಮಗೊಳಿಸುವುದು ಹಾಗೂ ಕಾರ್ಯಾದೇಶಗಳನ್ನು ನೀಡುವ ಕುರಿತ ಪ್ರಸ್ತಾವನೆಗಳಿಗೆ ಮಾದರಿ ನೀತಿ ಸಂಹಿತೆಯಿಂದ ಸಾಮಾನ್ಯ ವಿನಾಯಿತಿ ನೀಡಿ ಆದೇಶಿಸಿದೆ. ಈ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಅವರು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ, ಡಿಸಿಎಂ ಆಪ್ತ ಕಾರ್ಯದರ್ಶಿ, ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಭಾರತ ಚುನಾವಣಾ ಆಯೋಗದ ಷರತ್ತುಗಳಿಗೆ ಒಳಪಟ್ಟು ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಮೂಲಭೂತ ಸೌಲಭ್ಯ ಕಾಮಗಾರಿಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಸರಕು ಮತ್ತು ಸೇವೆಗಳ ಖರೀದಿಗೆ ಸಂಬಂಧಿಸಿದಂತೆ ಟೆಂಡರ್ ಗಳನ್ನು ಆಹ್ವಾನಿಸೋದಕ್ಕೆ, ಟೆಂಡರ್ ಗಳನ್ನು ಅಂತಿಮಗೊಳಿಸೋದಕ್ಕೆ ಹಾಗೂ ಕಾರ್ಯಾದೇಶಗಳನ್ನು ನೀಡುವ ಕುರಿತ ಪ್ರಸ್ತಾವನೆಗಳಿಗೆ ಸಕ್ಷಮ ಪ್ರಾಧಿಕಾರಗಳು ಆಯೋಗದ ನಿರ್ಣಯದಲ್ಲಿನ ಷರತ್ತುಗಳಿಗೆ ಒಳಪಟ್ಟು ಸೂಕ್ತ ನಿರ್ಣಯ ತೆಗೆದುಕೊಳ್ಳುವಂತೆ…

Read More

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ನಿರ್ದೇಶನದಡಿ ಕೆಲಸ ಮಾಡುತ್ತಿದೆ ಎಂಬ ಭಾವನೆ ಸಾಮಾನ್ಯ ಜನರಲ್ಲಿ ಬಂದಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಆಕ್ಷೇಪ ವ್ಯಕ್ತಪಡಿಸಿದರು. ನಗರದ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಇಂದು ಭೇಟಿ ನೀಡಿ ದೂರು ನೀಡುವ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಇವತ್ತು ಮಹಿಳೆಯರು ವಾಕಿಂಗ್ ಹೋಗಲೂ ಭಯಪಡುವ ಪರಿಸ್ಥಿತಿ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಕ್ರಿಮಿನಲ್‍ಗಳು ಹತ್ಯೆ ಮಾಡಿ ಬೇರೆಡೆ ಓಡಿ ಹೋಗಿ ಇನ್ನೊಬ್ಬರ ಮೇಲೆ ಹಲ್ಲೆ ನಡೆಸಿ ಸಾರ್ವಜನಿಕರು ಹಿಡಿದು ಕೊಡುವಂಥ ಪರಿಸ್ಥಿತಿ ಬಂದಿದೆ. ಕಾನೂನು- ಸುವ್ಯವಸ್ಥೆ ಹದಗೆಟ್ಟ ಕುರಿತು ಪೊಲೀಸ್ ವರಿಷ್ಠರಿಗೆ ತಿಳಿಸಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಭಯಾನಕ ಅಪರಾಧಗಳ ಹೆಚ್ಚಳದ ಕುರಿತು ಗಮನ ಸೆಳೆಯಲಾಗಿದೆ. ಪೊಲೀಸ್ ಇಲಾಖೆಯು ಆಡಳಿತ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿರುವ ಆರೋಪಗಳಿದ್ದು, ಇದನ್ನು ತಪ್ಪಿಸಿ ಸ್ವತಂತ್ರವಾಗಿ ಕೆಲಸ ಮಾಡಲು ಕೋರಲಾಗಿದೆ ಎಂದು ವಿವರಿಸಿದರು. ಡಿ.ವಿ. ಸದಾನಂದಗೌಡ, ಬಿಜೆಪಿ ರಾಜ್ಯ…

Read More

ಮೈಸೂರು: ಮನೆಯೊಂದರಲ್ಲಿ ಅನುಮಾನಸ್ಪದವಾಗಿ ದಂಪತಿಗಳಿಬ್ಬರು ಶವವಾಗಿ ಪತ್ತೆಯಾಗಿರುವಂತ ಘಟನೆ ಮೈಸೂರಿನ ಗೊಲ್ಲರ ಬೀದಿಯಲ್ಲಿ ನಡೆದಿದೆ. ಮೈಸೂರಿನ ಗೊಲ್ಲರ ಬೀದಿಯಲ್ಲಿನ ಪ್ರಕಾಶ್ ಹಾಗೂ ಯಶೋಧ ಎನ್ನುವಂತ ಇಬ್ಬರು ದಂಪತಿಗಳು ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪ್ರಕಾಶ್, ಯಶೋಧ ಸಾವಿಗೆ ನಿಖರವಾದಂತ ಕಾರಣ ತಿಳಿದು ಬಂದಿಲ್ಲ. ಅಲ್ಲದೇ ಅವರ ಮೃತ ದೇಹದ ಮೇಲೆ ಯಾವುದೇ ಗಾಯದ ಗುರುತು ಕೂಡ ಪತ್ತೆಯಾಗಿಲ್ಲ. ಮೈಸೂರಲ್ಲಿ ರಸ್ತೆ ಬದಿಯಲ್ಲಿ ಕ್ಯಾಂಟೀನ್ ಅನ್ನು ಪ್ರಕಾಶ್ ನಡೆಸುತ್ತಿದ್ದರು. ಇತ್ತ ಪತ್ನಿ ಯಶೋಧ ಪ್ಲೋರ್ ಮಿಲ್ ನಡೆಸುತ್ತಿದ್ದರು. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/sinful-brother-kills-brother-by-hitting-him-with-hammer-for-not-giving-him-mobile-phone/ https://kannadanewsnow.com/kannada/one-in-four-people-in-india-attacked-by-cyber-attacks-report/

Read More

ಬೆಂಗಳೂರು: ಆನ್ ಲೈನ್ ಗೇಮ್ ಆಡಲು ಮೊಬೈಲ್ ಕೊಡದ ಕಾರಣಕ್ಕೆ ಅಣ್ಣನೇ ತಮ್ಮನನ್ನು ಹತ್ಯೆಗೈದಿರುವಂತ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ. ಬೆಂಗಳೂರಿನ ಹೊರ ವಲಯದ ಸರ್ಜಾಪುರದ ನೆರಿಗಾ ಗ್ರಾಮದ ಶಿವಕುಮಾರ್ (18) ಆನ್ ಲೈನ್ ಗೇಮಿನ ಹುಚ್ಚಿಗೆ ಬಿದ್ದಿದ್ದನು. ಈ ಗೇಮ್ ಆಡೋದಕ್ಕೆ ತಮ್ಮನಾದಂತ ಪ್ರಾಣೇಶ್(15) ಮೊಬೈಲ್ ಕೇಳಿದ್ದಾನೆ. ಆದ್ರೇ ತಮ್ಮ ಪ್ರಾಣೇಶ್ ಮೊಬೈಲ್ ಕೊಟ್ಟಿಲ್ಲ. ಈ ವಿಚಾರವಾಗಿ ತಮ್ಮನ ಮೇಲೆ ಶಿವಕುಮಾರ್ ಸಿಟ್ಟುಗೊಂಡಿದ್ದನು. ತಮ್ಮ ಪ್ರಾಣೇಶ್ ಕೊಲೆ ಮಾಡೋ ಪ್ಲಾನ್ ಮಾಡಿದಂತ ಶಿವಕುಮಾರ್, ನಿರ್ಮಾಣ ಹಂತದ ಕಟ್ಟಡದಿಂದ ಸುತ್ತಿಗೆ ತೆಗೆದುಕೊಂಡು ಹೋಗಿದ್ದಾನೆ. ಪ್ರಾಣೇಶ್ ಬಹಿರ್ದೆಸೆಗೆ ಹೋಗಿದ್ದಾಗ ಆತನ ಮೇಲೆ ದಾಳಿ ಮಾಡಿ ಶಿವಕುಮಾರ್ ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿದ್ದಾನೆ. ಪ್ರಾಣೇಶ್ ಕಾಣದೇ ಇದ್ದ ಬಗ್ಗೆ ಪೋಷಕರು ಹುಡುಕಾಡಿದ್ದಾರೆ. ಆ ಬಗ್ಗೆ ಶಿವಕುಮಾರ್ ನನ್ನು ಕೇಳಿದ್ದಾರೆ. ಆದ್ರೇ ನನಗೇನು ಗೊತ್ತೇ ಇಲ್ಲ ಅನ್ನೋ ಹಾಗೆ ನಟನೆ ಮಾಡಿದ್ದಾನೆ. ಸರ್ಜಾಪುರ ಠಾಣೆಗೆ ದೂರು ನೀಡಿದಾಗ, ನರಿಗಾ ಗ್ರಾಮದ ಹೊರ ವಲಯದಲ್ಲಿ ಪ್ರಾಣೇಶ್ ಶವ ಪತ್ತೆಯಾಗಿದೆ.…

Read More

ಶಿವಮೊಗ್ಗ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2024-25 ನೇ ಸಾಲಿಗೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಪ್ರಥಮ ಸೆಮಿಷ್ಟರ್ ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಪ್ರಾಂಶುಪಾಲರ ಹಂತದಲ್ಲಿಯೇ ಮೇರಿಟ್ ಹಾಗೂ ರೋಸ್ಟರ್‍ಗನುಗುಣವಾಗಿ ಮೇ 17 ರಿಂದ 30ರವರೆಗೆ ಅರ್ಜಿ ಸಲ್ಲಿಸುವುದು. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.35 ಅಂಕಗಳೊಂದಿಗೆ ಉತ್ತೀರ್ಣರಾದವರಿಗೆ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್-60 ಸೀಟುಗಳು, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್-63 ಸೀಟುಗಳು, ಕಮರ್ಷಿಯಲ್ ಪ್ರಾಕ್ಟಿಸ್ ಕನ್ನಡ (31ಸೀಟುಗಳು) ಮತ್ತು ಇಂಗ್ಲೀಷ್ (32 ಸೀಟುಗಳು), ಅಪರೇಲ್ ಡಿಸೈನ್ & ಫ್ಯಾಬ್ರಿಕೇಷನ್ ಟೆಕ್ನಾಲಜಿ (63 ಸೀಟುಗಳು) ಕೋರ್ಸ್‍ಗಳಿಗೆ ಸೀಟು ಹಂಚಿಕೆ ಮಾಡಲಾಗುವುದು. ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ/ಎನ್‍ಓಸಿ, 05 ವರ್ಷದ ವ್ಯಾಸಂಗ ಪ್ರಮಾಣ ಪತ್ರ ಕ್ಷೇತ್ರ ಶಿಕ್ಷಣಾಧಿಕಾರಿಗಳವರ ದೃಢೀಕರಿಸಿದ ಸಹಿಯೊಂದಿಗೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, 04 ಭಾವಚಿತ್ರವನ್ನು ಸಲ್ಲಿಸಬೇಕು. ದಿನಾಂಕ: 30-05-2024 ರೊಳಗಾಗಿ…

Read More

ಬೆಂಗಳೂರು: ಇಂದು ಮೆ ಅಶೋಕ್ ಲೇಲ್ಯಾಂಡ್ ರವರು ನಿರ್ಮಾಣ ಮಾಡಿರುವ 13.5 ಮೀ ಹವಾ ನಿಯಂತ್ರಿತ ಸ್ಲೀಪರ್ ಬಸ್ಸುಗಳನ್ನು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ವೀಕ್ಷಣ ಮಾಡಿದರು. ಈ ವಾಹನದ ಬಗ್ಗೆ ಸಾರಿಗೆ ಸಚಿವರು ಬಸ್ಸಿನ ಒಳಾಂಗಣ ಹಾಗೂ ಹೊರಾಂಗಣವನ್ನು  ವೀಕ್ಷಿಸಿ, ಪರಿಶೀಲಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಬಳಿಕ ಮಾತನಾಡಿದಂತ ಅವರು ಈಗಾಗಲೇ ಕೆ ಎಸ್ ಆರ್ ಟಿ ಸಿ ಯಲ್ಲಿ ಇದೇ ಮಾದರಿಯ ನಾನ್ ಎಸಿ ಸ್ಲೀಪರ್ ಬಸ್ಸುಗಳನ್ನು ಪಲ್ಲಕ್ಕಿ ಎಂಬ ಹೆಸರಿನೊಂದಿಗೆ ಪ್ರಾರಂಭಿಸಲಾಗಿದೆ. ಇನ್ನೂ 40 ಬಸ್ಸುಗಳ ಖರೀದಿಗೆ ಈಗಾಗಲೇ ಆದೇಶ ನೀಡಲಾಗಿದೆ. ಈ ಮಾದರಿಯ ಬಸ್ಸುಗಳು ಖಾಸಗಿಯವರೊಂದಿಗೆ ಪೈಪೋಟಿ ‌ನೀಡಲು ಸಾರಿಗೆ ಸಂಸ್ಥೆಗೆ ಅವಶ್ಯಕತೆಯಿದೆ ಎಂದು ಮಾನ್ಯ ಸಚಿವರು ಅಭಿಪ್ರಾಯಿಸಿದರು. ಇತ್ತಿಚಿನ ದಿನಗಳಲ್ಲಿ ಪ್ರಯಾಣಿಕರು ಉತ್ತಮ ದರ್ಜೆಯ ಸೇವೆಯನ್ನು ನಿರೀಕ್ಷಿಸುತ್ತಾರೆ ಎಂದು ತಿಳಿಸಿದರು. ಹೀಗಿದೆ 13.5 ಮೀಟರ್ ಹವಾ ನಿಯಂತ್ರಿತ ಸ್ಲೀಪರ್ ಬಸ್ಸುಗಳ ವಿಶೇಷತೆ ಅಶೋಕ್ ಲೇಲ್ಯಾಂಡ್ ಕಂಪನಿಯು 13.5 ಮೀ ಉದ್ದದ 36 ಬರ್ತ್ ಸಾರ್ಮಥ್ಯವುಳ್ಳ ಹವಾ ನಿಯಂತ್ರಿತ…

Read More

ಚಿಕ್ಕಮಗಳೂರು: ನಾನು ಶಿಕ್ಷಕರ ಸಮಸ್ಯೆ ನಿವಾರಣೆಗೆ ಶಿಕ್ಷಕನಾಗಿ ಸದಾ ನಿಮ್ಮೊಂದಿಗೆ ಇರುತ್ತೇನೆ. ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ತಮ್ಮನ್ನು ಗೆಲ್ಲಿಸುವಂತೆ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಕುಮಾರ್ ಮನವಿ ಮಾಡಿದರು. ಇಂದು ಚಿಕ್ಕಮಗಳೂರಿಗೆ ಭೇಟಿ ನೀಡಿ, ಮತಬೇಟೆಯಲ್ಲಿ ತೊಡಗಿ ಟಿಎಂಎಸ್ ಕಾಲೇಜಿನಲ್ಲಿ ಮಾತನಾಡಿದಂತ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರು, ಶಿಕ್ಷಕನಾಗಿ ನಾನು ಎಂದಿಗೂ ಇರುತ್ತೇನೆ. ನಿಮ್ಮ ಬೆಂಬಲದಿಂದ ನನಗೆ ಇಂದು ಮನತುಂಬಿ ಬಂದಿದೆ ಜೂನ್.3ರಂದು ನಡೆಯುವ ಚುನಾವಣೆಯಲ್ಲಿ ಮತ ನೀಡುವ ಮೂಲಕ ನನ್ನನ್ನು ಜಯಶಾಲೆಯನ್ನಾಗಿ ಮಾಡಬೇಕೆಂದು ಕೇಳಿಕೊಂಡರು. ಈ ಬಳಿಕ ಮಾತನಾಡಿದಂತ  ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು, ನಮ್ಮ ಕಾಂಗ್ರೆಸ್ ಸರ್ಕಾರವು ಶಿಕ್ಷಕರ ಒಳಿತಿಗಾಗಿ ಸದಾ ಚಿಂತಿಸತ್ತದೆ. ನೀವು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಕಣಕ್ಕೆ ಇಳಿದಿರುವಂತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಕೆ ಮಂಜುನಾಥ್ ಕುಮಾರ್ ಅವರಿಗೆ ಮತನೀಡಿ ಗೆಲ್ಲಿಸಿ ಕೊಡಬೇಕೆಂದು ಹೇಳಿದರು. ನಿಮ್ಮ ಬೆಂಬಲದಿಂದ  ಈಗಾಗಲೇ  ಇವರು…

Read More

ಬೆಂಗಳೂರು: ಕರ್ನಾಟಕ ರಾಜ್ಯ ಈ ವರ್ಷ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು ಕುಡಿಯುವ ನೀರಿನ ಪರಿಸ್ಥಿತಿಯ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆಯು ಪ್ರತಿನಿತ್ಯ ಸಮಸ್ಯೆಯ ಬಗ್ಗೆ ನಿಗಾ ವಹಿಸುತ್ತಿದ್ದು, ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಆದ್ಯತೆ ಮೇಲೆ ಕ್ರಮ ಕೈಗೊಂಡಿದ್ದು, ಅವಶ್ಯವಿರುವ ಕಡೆ ಕುಡಿಯುವ ನೀರಿನ ಕಾಮಗಾರಿ ನಡೆಸಲು ಕ್ರಮಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಬರ ಪರಿಸ್ಥಿತಿಯ ಪರಿಣಾಮ 158 ತಾಲೂಕುಗಳಿಗೆ ಸಂಬಂಧಿಸಿದ 26106 ಗ್ರಾಮಗಳ ಪೈಕಿ 2207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, ಅದರಲ್ಲಿ 548 ಗ್ರಾಮಗಳಿಗೆ 846 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಒದಗಿಸಲಾಗುತ್ತಿದೆ ಮತ್ತು 1659 ಗ್ರಾಮಗಳಿಗೆ ನೀರು ಸರಬರಾಜು ಕಲ್ಪಿಸಲು 2098 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆಯಲಾಗಿದೆ…

Read More

ಚಿಕ್ಕಮಗಳೂರು: ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವಂತ ಡಾ.ಕೆ ಕೆ ಮಂಜುನಾಥ್ ಕುಮಾರ್ ಅವರು ನಾಳೆ ಚಿಕ್ಕಮಗಳೂರಿಗೆ ಭೇಟಿ ನೀಡುತ್ತಿದ್ದಾರೆ. ನಾಳೆ ಕಾಫಿನಾಡಿನಲ್ಲಿ ಮತಬೇಟೆಯಲ್ಲಿ ತೊಡಗಲಿದ್ದಾರೆ. ನಾಳೆ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ. ಕೆ ಕೆ ಮಂಜುನಾಥ್ ಕುಮಾರ್ ರವರ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಲಿರುವಂತ ಅವರು, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾ ಘೋಷ್ಠಿಯನ್ನು ನೆಡೆಸಲಿದ್ದಾರೆ. ನಾಳೆ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಚಿಕ್ಕಮಗಳೂರಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ.ಕೆ ಕೆ ಮಂಜುನಾಥ್ ಕುಮಾರ್ ಮತಯಾಚನೆಯ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ. ಚಿಕ್ಕಮಗಳೂರಿನ ನಾಳೆಯ ಪ್ರಚಾರ ಸಭೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಇಂಧನ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದಂತ ಕೆ.ಜೆ ಜಾರ್ಜ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷರು, ಶಾಸಕರು, ಜಿಲ್ಲಾ ಪದಾಧಿಕಾರಿಗಳು ಸೇರಿದಂತೆ ಇತರರು ಭಾಗಿಯಾಗಲಿದ್ದಾರೆ.

Read More

ಬೆಂಗಳೂರು: ರಾಜ್ಯದಲ್ಲಿ ನಡೆದಿರೋ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ರಾಜಕೀಯ ಮಾಡಬೇಡಿ. ನಾವು ಈ ಕೇಸಲ್ಲಿ ಕಠಿಣ ನಿಲುವು ತೆಗೆದುಕೊಂಡಿದ್ದೇವೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿಗರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವಂತ ಅವರು,ವಿಪಕ್ಷ ನಾಯಕರಾದ ಆರ್.ಅಶೋಕ್ ಅವರೇ.. ಹೆಣ್ಣು ಭ್ರೂಣ ಹತ್ಯೆ ವಿಚಾರದಲ್ಲಿ ರಾಜಕೀಯ ಬೇಡ ಎಂದು ನಾನು ಲೇಖನದ ರೂಪದಲ್ಲಿ ನಿಮ್ಮ ಅಂಕಣಕ್ಕೆ ಉತ್ತರಿಸಿದ್ದೇನೆ. ಆದರೂ, ನೀವು ಮತ್ತೆ ಇದರಲ್ಲಿ ರಾಜಕಾರಣದ ಮಾತನ್ನಾಡಿದ್ದೀರಿ. ಸರ್ಕಾರವಾಗಿ ನಾವು ಭ್ರೂಣ ಹತ್ಯೆ ವಿಚಾರದಲ್ಲಿ ಎಷ್ಟು ಕಠಿಣ ನಿಲುವನ್ನು ತೆಗೆದುಕೊಳ್ಳುತ್ತಿದ್ದೇವೆ ಎಂಬುದು ನಮ್ಮ ಕಾರ್ಯಾಚರಣೆಗಳೇ ಸ್ಪಷ್ಟಪಡಿಸುತ್ತವೆ. ನಾವು ಹೆಚ್ಚು ಕಾರ್ಯಚರಣೆ ಮಾಡುತ್ತಿರುವುದರಿಂದಲೇ ಇಂದು ಹೆಚ್ಚು ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ ಎಂಬ ವಾಸ್ತವ ಸಂಗತಿ ತಮಗೆ ಅರಿವಿರಲಿ ಎಂಬುದಾಗಿ ತಿಳಿಸಿದ್ದಾರೆ. ಈ ಜಾಲವನ್ನ ಗೃಹ ಸಚಿವರಾಗಿದ್ದ ತಾವು ಎಷ್ಟರ ಮಟ್ಟಿಗೆ ಭೇಧಿಸಿದ್ದಿರಿ ಎಂಬುದಕ್ಕೆ ನಿಮ್ಮ ಬಳಿ ಉತ್ತರವಿಲ್ಲ. ನಿಮ್ಮ ಕಾಲದಲ್ಲಿ…

Read More