Author: kannadanewsnow09

ಬೆಂಗಳೂರು: ಮರು ಜಾತಿ ಗಣತಿ ಮಾಡಲು ಮುಂದಾಗಿರುವ ಸರ್ಕಾರದ ನಿರ್ಣಯವನ್ನು ಸ್ವಾಗತಿಸುತ್ತೇನೆ ಎಂದು ವಿಧಾನ ಪರಿಷತ್‌ ಶಾಸಕ ದಿನೇಶ ಗೂಳಿಗೌಡ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮರು ಜಾತಿ ಗಣತಿ ನಿರ್ಣಯಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗ ಈ ಹಿಂದೆ ನಡೆಸಿದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ)ಯನ್ನು ಸರ್ಕಾರ ತಾತ್ವಿಕವಾಗಿ ಒಪ್ಪುತ್ತದೆ ಎಂದು ಹೇಳಿತ್ತು. ಆದರೆ, ಆ ಗಣತಿಯ ಬಗ್ಗೆ ಮಠಾಧೀಶರು, ಧಾರ್ಮಿಕ ಮುಖಂಡರು, ವಿವಿಧ ಸಂಘಟನೆಗಳು, ಪ್ರಮುಖ ಜಾತಿ ಸಂಘಟನೆಗಳು ಮರು ಗಣತಿಗೆ ಒತ್ತಾಯಿಸಿದ್ದರು. ಈ ಹಿಂದೆ ಮಾಡಿದ ಜಾತಿ ಗಣತಿಯಲ್ಲಿ ಹಲವು ಗೊಂದಲಗಳಿವೆ ಎಂದು ಆಕ್ಷೇಪಿಸಿದ್ದವು. ಸರ್ಕಾರಕ್ಕೆ ಮನವಿ ಸಲ್ಲಿಸಿ ಮರು ಸಮೀಕ್ಷೆಗೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕಮಾಂಡ್‌ ಸೂಚನೆಯಂತೆ ಸರ್ಕಾರ ಮರು ಸಮೀಕ್ಷೆ ನಿರ್ಣಯ ಪ್ರಕಟಿಸಿರುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇನೆ. ಈ ಸಮೀಕ್ಷೆ ನಿಗದಿತ ಕಾಲಾವಧಿಯಲ್ಲಿ ಮುಗಿಯಬೇಕು, ಗೊಂದಲಗಳು ಬಗೆಹರಿಯಬೇಕು…

Read More

ಬೆಂಗಳೂರು: ನಗರದಲ್ಲಿ ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತ, 11 ಜನ ಅಮಾಯಕರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರ ತಲೆದಂಡ ಆಗದೆ ನಾವು ವಿರಮಿಸುವುದಿಲ್ಲ ಎಂದು ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಎಚ್ಚರಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕ ಆರ್.ಅಶೋಕ್, ನಮ್ಮ ಶಾಸಕರು ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ನುಡಿದರು. ಈ ರಾಜ್ಯದ ಗೌರವ ಎತ್ತಿ ಹಿಡಿಯುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದು ತಿಳಿಸಿದರು. ವಿಧಾನಸೌಧದಲ್ಲಿ ಆದ ಕಾರ್ಯಕ್ರಮ ನಾನು ನೋಡಿಕೊಂಡೆ. ನನಗೆ ಬೇರೆ ಯಾವುದೂ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಗಮನ ಸೆಳೆದರು. ಹಾಗಿದ್ದರೆ ನೀವು ವಿಧಾನಸೌಧಕ್ಕೆ ಮಾತ್ರ ಮುಖ್ಯಮಂತ್ರಿಗಳೇ? ಈ ರಾಜ್ಯಕ್ಕೆ ಮುಖ್ಯಮಂತ್ರಿ ಯಾರು? ಡಿ.ಕೆ.ಶಿವಕುಮಾರ್? ಪರಮೇಶ್ವರ್ ಅವರೇ? ಅಥವಾ ಮುಖ್ಯ ಕಾರ್ಯದರ್ಶಿಗಳೇ? ಎಂದು ಕೇಳಿದರು. ನೀವು ಯಾವ ಯೋಗ್ಯತೆ ಇಟ್ಟುಕೊಂಡು ಮುಖ್ಯಮಂತ್ರಿ ಎಂದು ಕರೆಸಿಕೊಳ್ಳುತ್ತೀರಿ ಎಂದು ಪ್ರಶ್ನಿಸಿದರು. ‘ಯು ಮಸ್ಟ್ ರಿಸೈನ್’…

Read More

ಬೆಂಗಳೂರು: ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬಂಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೆಲವು ದಶಕಗಳಿಂದ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಪುಸ್ತಕಗಳ ಮೇಲೆ ಶೇ. 20 ರ ವರೆಗೆ ರಿಯಾಯಿತಿಯೂ ನೀಡಲಾಗುತ್ತಿದೆ. ಆಸಕ್ತರು ಪುಸ್ತಕಗಳ ಕುರಿತ ಮಾಹಿತಿಯನ್ನು X, instagram ಮತ್ತು ಫೇಸ್ಬುಕ್ ಗಳಲ್ಲಿನ ಅಕಾಡೆಮಿಯ ಖಾತೆ @karmediaacademy/ Karnataka Media Academy ಗಳಲ್ಲಿ ಪಡೆಯಬಹುದಾಗಿದೆ. Shall I add ಆಸಕ್ತರು, ಪತ್ರಿಕೋದ್ಯಮ ಬೋಧಿಸುವ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳಿಗೆ ಸಗಟು ಖರೀದಿ ಮಾಡಲು ಬಯಸುವವರು ಅಕಾಡೆಮಿಯ ಕಚೇರಿಯನ್ನು ದೂರವಾಣಿ ಸಂಖ್ಯೆ 080 22860264…

Read More

ಬೆಂಗಳೂರು : ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ (55) ಮೃತಪಟ್ಟಿರುವ ಬಗ್ಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿ ಇದೇ ಹಾಡಿಯಲ್ಲಿ ರವಿ ಎಂಬುವವರ ಮೇಲೆ ಹುಲಿ ದಾಳಿ ಮಾಡಿತ್ತು, ರವಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಇಂದು ಬೆಳಗ್ಗೆ ಮಹಿಳೆ ರಂಗಮ್ಮ ಬಹಿರ್ದೆಸೆಗೆ ಹೋಗಿದ್ದಾಗ ಹುಲಿ ದಾಳಿ ಮಾಡಿದ್ದು ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಮನುಷ್ಯರ ರಕ್ತದ ರುಚಿ ಕಂಡ ಹುಲಿ ಅಪಾಯಕಾರಿ, ಹೀಗಾಗಿ ಕೂಡಲೇ ಹುಲಿಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸುವಂತೆ ಸೂಚಿಸಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಹುಲಿಯನ್ನು ಸೆರೆ ಹಿಡಿದಿದ್ದಾರೆ ಎಂದು ತಿಳಿಸಿದ್ದಾರೆ. ಹುಲಿ ದಾಳಿಯಿಂದ ಗಾಯಗೊಂಡಿರುವ ರವಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿರುವ ಸಚಿವರು, ಮೃತ ರಂಗಮ್ಮ ಅವರ ಕುಟುಂಬದ ಸದಸ್ಯರಿಗೆ ನೋವು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ, ಮೃತರ…

Read More

ನವದೆಹಲಿ: “ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಸಮುದಾಯಗಳ ಅಂಕಿಅಂಶಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ತೀರ್ಮಾನಿಸಲಾಗಿದೆ. ಮನೆ ಮನೆ ಸಮೀಕ್ಷೆ ಹಾಗೂ ಆನ್ಲೈನ್ ಮೂಲಕ ಎಲ್ಲರೂ ತಮ್ಮ ಮಾಹಿತಿಯನ್ನು ಮತ್ತೊಮ್ಮೆ ಸಲ್ಲಿಸಲು ಅವಕಾಶ ನೀಡಲಾಗುವುದು. ಈ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನವದೆಹಲಿಯಲ್ಲಿ ಎಐಸಿಸಿ ನಾಯಕರ ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಂಗಳವಾರ ಮಾತನಾಡಿದರು. “ಮಂಗಳವಾರದಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರು ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆಸಿ ಪಕ್ಷ ಸಂಘಟನೆ ವಿಚಾರವಾಗಿ, ರಾಜ್ಯ ರಾಜಕಾರಣ ಹಾಗೂ ಇತ್ತೀಚಿನ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚೆ ಮಾಡಲಾಯಿತು” ಎಂದು ಹೇಳಿದರು. “ಜಾತಿ ಗಣತಿ ವಿಚಾರವಾಗಿ ಇದೇ ತಿಂಗಳ 12ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಮಾಡಲು ನಿರ್ಧರಿಸಿದ್ದೆವು. ಈ ವಿಚಾರವಾಗಿ ಸಂಸದರು,…

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ದಿನಾಂಕ 11-06-2025ರಂದು ಮಾವಲಿ ವ್ಯಾಪ್ತಿಯ ಹಳ್ಳಿಗಳಲ್ಲಿ ಹಾಗೂ ದಿನಾಂಕ 13-06-2025ರಂದು ಚಂದ್ರಗುತ್ತಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಕರೆಂಟ್ ಕಟ್ ಆಗಲಿದೆ. ಈ ಬಗ್ಗೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 11-06-2025ರ ನಾಳೆ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮಾವಲಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವಂತ ಹರೂರು, ಕೋಲ್ಗುಣಸಿ, ಮನ್ಮನೆ, ಗೇರುಕೊಪ್ಪ, ಮಾವಲಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ. ಇನ್ನೂ ದಿನಾಂಕ 13-06-2025ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಚಂದ್ರಗುತ್ತಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವಂತ ಬಾಡದಬೈಲು, ಅಂದವಳ್ಳಿ, ಕತವಾಯಿ, ಚಂದ್ರಗುತ್ತಿ ಟೌನ್, ಕಲಗೋಡು, ಚನ್ನಪಟ್ಟಣ, ಹುಲ್ತಿಕೊಪ್ಪ, ಹರೀಶಿ ಹಾಗೂ ಕೋಡಂಬಿ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ. https://kannadanewsnow.com/kannada/big-news-in-raichur-an-attack-by-street-dogs-on-15-people-including-a-boy-8-people-hospitalized/

Read More

ರಾಜನಿಗೆ ಕಿರೀಟ ಹೇಗೆ ಮುಖ್ಯವೋ ಹಾಗೆಯೇ, ನಮ್ಮ ತಲೆಯ ಮೇಲಿನ ಕೂದಲು ನಮ್ಮಲ್ಲಿ ಪ್ರತಿಯೊಬ್ಬರಿಗೂ ಬಹಳ ಮುಖ್ಯ. ಕೂದಲು ಉದುರುವ ಬಗ್ಗೆ ಚಿಂತಿತರಾಗಿರುವ ಅನೇಕ ಜನರಿದ್ದಾರೆ. ಈ ಬ್ಯೂಟಿ ಟಿಪ್ಸ್ ವಿಭಾಗದಲ್ಲಿ, ಕೂದಲು ಉದುರುವಿಕೆಯಿಂದ ವಿವಿಧ ಮುಜುಗರಗಳನ್ನು ಎದುರಿಸುವ ಜನರು ಆ ಮುಜುಗರದಿಂದ ಹೊರಬರಲು ಮತ್ತು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಸಹಾಯ ಮಾಡುವ ಪೌಡರ್ ಅನ್ನು ನಾವು ನೋಡಲಿದ್ದೇವೆ. ಕೂದಲು ವೇಗವಾಗಿ ಬೆಳೆಯುತ್ತದೆ ಕೂದಲು ಉದುರುವುದು ತುಂಬಾ ಸಾಮಾನ್ಯ ಪ್ರಕ್ರಿಯೆ. ಒಂದು ದಿನದಲ್ಲಿ ನಿರ್ದಿಷ್ಟ ಪ್ರಮಾಣದ ಕೂದಲು ಉದುರುವುದು ಅನಿವಾರ್ಯ. https://youtu.be/5NzsEehoEi4 ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ…

Read More

ಕಲಬುರ್ಗಿ: ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತ ಘಟನೆ ಎನ್ನುವಂತೆ ಕಲಬುರ್ಗಿಯಲ್ಲಿ ನಡು ರಸ್ತೆಯಲ್ಲೇ ಪತ್ನಿಯ ಶೀಲ ಶಂಕಿಸಿ ಪತಿಯೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಕಲಬುರ್ಗಿಯ ಶಹಾಬಜಾರ್ ಬಡಾವಣೆಯಲ್ಲಿ ಪತ್ನಿಯ ಶೀಲ ಶಂಕಿಸಿದಂತ ಪತಿಯೊಬ್ಬ, ಆಕೆಯನ್ನು ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೊಲೆಯಾದ ಮಹಿಳೆಯನ್ನು ಕಲಬುರ್ಗಿ ತಾಲ್ಲೂಕಿನ ಕಲ್ಲಹಂಗರಗಾ ಗ್ರಾಮದ ರೂಪ (32) ಎಂದು ಗುರುತಿಸಲಾಗಿದೆ. ಪತಿ ವೆಂಕಟೇಶ್ ಪತ್ನಿ ರೂಪ ಶೀಲ ಶಂಕಿಸಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. ಕಳೆದ 10 ವರ್ಷದ ಹಿಂದೆ ವೆಂಕಟೇಶ್ ರೂಪಳನ್ನು ಮದುವೆಯಾಗಿದ್ದನು. ಮೂರು ತಿಂಗಳಿನಿಂದ ಪತ್ನಿ ರೂಪ ಶೀಲ ಶಂಕಿಸಿ ಪತಿ ವೆಂಕಟೇಶ್ ಜಗಳಕ್ಕಿಳಿದ್ದನು. ಈ ಕಾರಣಕ್ಕೆ ಬೇಸತ್ತಿದ್ದಂತ ರೂಪ, ಪತಿ ವೆಂಕಟೇಶ್ ಮನೆ ಬಿಟ್ಟು, ತನ್ನ ಮಕ್ಕಳೊಂದಿಗೆ ಶಹಾಬಜಾರ್ ಬಡವಾಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಜೀವನ ಮಾಡೋದಕ್ಕಾಗಿ ಹೋಟೆಲ್ ಒಂದರಲ್ಲಿ ಕೆಲಸವನ್ನು ರೂಪ ಮಾಡುತ್ತಿದ್ದಳು. ಕೆಲಸ ಮುಗಿಸಿ ಇಂದು ಬೆಳಗ್ಗೆ 8.30ರ ಹಾಗೆ…

Read More

ಆಸ್ಟ್ರಿಯಾ: ಇಲ್ಲಿನ ಗ್ರಾಜ್ ಶಾಲೆಯ ಎರಡು ಕೊಠಡಿಗಳಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆಸಲಾಗಿದೆ. ಈ ಗುಂಡಿನ ದಾಳಿಯಲ್ಲಿ 11 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಆಸ್ಟ್ರಿಯಾದ ಗ್ರಾಜ್ ನಗರದ ಶಾಲೆಯೊಂದರಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ವಿದ್ಯಾರ್ಥಿ ಎಂದು ಹೇಳಲಾದ ಶಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆಸ್ಟ್ರಿಯನ್ ರಾಜ್ಯ ಮಾಧ್ಯಮ ORF ಅನ್ನು ಉಲ್ಲೇಖಿಸಿ UK ಮೂಲದ ಇಂಡಿಪೆಂಡೆಂಟ್ ವರದಿ ಮಾಡಿದೆ. ಶಾಲೆಯೊಳಗೆ ಗುಂಡಿನ ಸದ್ದು ಕೇಳಿದ ನಂತರ ಬೆಳಿಗ್ಗೆ 10 ಗಂಟೆಯಿಂದ ನಗರದಲ್ಲಿ ಪ್ರಮುಖ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡವರಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿದ್ದಾರೆ ಎಂದು ORF ವರದಿ ಮಾಡಿದೆ. ಜೂನ್ 20, 2015 ರಂದು ಗ್ರಾಜ್ ಗುಂಡಿನ ದಾಳಿಯ ಹತ್ತನೇ ವಾರ್ಷಿಕೋತ್ಸವಕ್ಕೆ ಮುಂಚಿತವಾಗಿ ಈ ಗುಂಡಿನ ದಾಳಿ ನಡೆದಿದ್ದು, ಈ ಘಟನೆಯಲ್ಲಿ…

Read More

ನವದೆಹಲಿ: ಜಾತಿಗಣತಿ ಸಮೀಕ್ಷೆ ನಡೆದು 9, 10 ವರ್ಷವಾಗಿದೆ. ಹೀಗಾಗಿ ಕೆಲವರು ಅಪಸ್ವರ ಎತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿನ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಜೊತೆಗೆ ಚರ್ಚೆ ಮಾಡಲಾಯಿತು. ಮುಖ್ಯವಾಗಿ ಜಾತಿಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು ಎಂದರು. ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆಯಾಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಮಾಡಲು ರಾಹುಲ್ ಗಾಂಧಿ ಹೇಳಿದ್ದಾರೆ. ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದರು. https://kannadanewsnow.com/kannada/former-chairman-of-the-karnataka-legislative-council-david-simeon-passes-away/ https://kannadanewsnow.com/kannada/big-news-in-raichur-an-attack-by-street-dogs-on-15-people-including-a-boy-8-people-hospitalized/

Read More