Author: kannadanewsnow09

ಮೈಸೂರು: ಜಿಲ್ಲೆಯ ಹೊರ ವಲಯದಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದಂತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದು, ಅವರ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಮೈಸೂರು ಹೊರ ವಲಯದಲ್ಲಿ ನಿನ್ನೆ ತಡರಾತ್ರಿ ರೇವ್ ಪಾರ್ಟಿ ನಡೆಸಲಾಗಿದೆ. ಈ ವಿಷಯ ತಿಳಿದಂತ ಮೈಸೂರು ಜಿಲ್ಲಾ ಪೊಲೀಸರು ಅಲರ್ಟ್ ಆಗಿ ಪಾರ್ಟಿಯ ಮೇಲೆ ದಾಳಿಯನ್ನು ನಡೆಸಿದ್ದಾರೆ. ಮೈಸೂರು ಹೆಚ್ಚುವರಿ ಎಸ್ಪಿ ನಾಗೇಶ್, ಡಿವೈಎಸ್ಪಿ ಕರೀಮ್ ನೇತೃತ್ವದಲ್ಲಿ ರೇವ್ ಪಾರ್ಟಿಯ ಮೇಲೆ ದಾಳಿ ನಡೆಸಲಾಗಿದೆ. ತಡರಾತ್ರಿ ನಡೆಯುತ್ತಿದ್ದ ಪಾರ್ಟಿಯಲ್ಲಿ ನೂರಾರು ಜನರು ಭಾಗಿಯಾಗಿದ್ದರು ಎನ್ನಲಾಗಿದೆ. ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಂತ 150ಕ್ಕೂ ಹೆಚ್ಚು ಯುವತಿ, ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆಯನ್ನು ನಡೆಸಿದಂತ ಆರೋಪ ಕೂಡ ಕೇಳಿ ಬಂದಿದೆ. ಮೈಸೂರು ಹೊರ ವಲಯದ ರೇವ್ ಪಾರ್ಟಿಯಲ್ಲಿ ಭಾಗಿಯಾದವರಿಂದ ತಲಾ 2000 ಹಣವನ್ನು ವಸೂಲಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.…

Read More

ಬೆಂಗಳೂರು: ರಾಜ್ಯದ ಶೈಕ್ಷಣಿಕ ಚಟುವಟಿಕೆಯ ಮಾದರಿಯಿಂದಾಗಿ ಪ್ರೌಢ ಶಾಲಾ ಶಿಕ್ಷಕರ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ. ವರ್ಷಕ್ಕೆ ಮೂರು ಬಾರಿ ಪರೀಕ್ಷೆ ಸೇರಿದಂತೆ ಹಲವು ಅವೈಜ್ಞಾನಿಕ ಶೈಕ್ಷಣಿಕ ವೇಳಾಪಟ್ಟಿಯಿಂದಾಗಿ ಶಿಕ್ಷಕರು ಒತ್ತಡದಲ್ಲೇ ಬೋಧನಾ ವೃತ್ತಿಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆ ಗಮನಿಸಿ ಸಮಸ್ಯೆ ನಿವಾರಿಸುತ್ತಾ ಎನ್ನುವ ಬಗ್ಗೆ ಮುಂದೆ ಓದಿ. ಕನಿಷ್ಠ ಕಲಿಕಾಂಶಗಳ ಕಲಿಕೆ ಇಲ್ಲದೆ   ಸ್ಪಷ್ಟವಾಗಿ ಓದಲು, ಶುದ್ಧವಾಗಿ ಬರೆಯಲು ಗಣಿತದ ಮೂಲ ಕಲಿಕಾಂಶಗಳು ಬಾರದ, ಮೂಲ ಸಾಮರ್ಥ್ಯಗಳ ಜ್ಞಾನವಿಲ್ಲದ ವಿದ್ಯಾರ್ಥಿಗಳು ಪ್ರೌಢ ಶಾಲೆಗೆ ದಾಖಲಾಗುತ್ತಿದ್ದಾರೆ.  ಪ್ರೌಢಶಾಲೆಗಳಲ್ಲಿ ಸೇತುಬಂಧದ ಪೂರ್ವ ಪರೀಕ್ಷೆಯ ವಿಶ್ಲೇಷಣೆ ಗಮನಿಸಿದರೆ ಇದು ತಿಳಿಯುತ್ತದೆ. ಇಂಥ ವಿದ್ಯಾರ್ಥಿಗಳಿಗೆ 8 9ನೇ ತರಗತಿಯ ಪಠ್ಯ ವಸ್ತು ಬೋಧಿಸಬೇಕೋ ಅಥವಾ ವರ್ಣಮಾಲೆ, ಕಾಗುಣಿತ, ಒತ್ತಕ್ಷರಗಳು, ಓದುವುದು, ಬರೆಯುವುದು ಕಲಿಸಬೇಕೋ ಗೊತ್ತಾಗುತ್ತಿಲ್ಲ. ಒಂದರಿಂದ ಎಂಟನೇ ತರಗತಿಯವರೆಗೆ ಕಲಿಯಬೇಕಾದ ಮೂಲ ಕಲಿಕಾಂಶಗಳನ್ನು ಸೇತುಬಂಧದ 15 ದಿನಗಳಲ್ಲಿ ಕಲಿಸಬೇಕು. ಈ 15 ದಿನಗಳಲ್ಲಿ  ಕಲಿಯಲು ವಿಫಲನಾದರೆ ಅವರನ್ನು ಪರಿಹಾರ ಬೋಧನೆಗೆ ಒಳಪಡುವ ವಿಶೇಷ ಅಗತ್ಯವುಳ್ಳ ಮಕ್ಕಳು…

Read More

ಮೈಸೂರು: ಇಂದು ಚಾಮುಂಡಿ ಚಲೋ ಹಮ್ಮಿಕೊಳ್ಳಲಾಗಿತ್ತು. ಆದರೇ ಜಿಲ್ಲಾಡಳಿತ ಇದಕ್ಕೆ ಅವಕಾಶ ನೀಡದೇ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಚಲೋ ರದ್ದುಗೊಳಿಸಲಾಗಿದೆ. ಇದರ ನಡುವೆ ಚಾಮುಂಡಿ ತಾಯಿ ದರ್ಶನಕ್ಕೆ ಇಂದು ಭಕ್ತರಿಗೆ ನಿರ್ಬಂಧ ಕೂಡ ವಿಧಿಸಲಾಗಿದೆ. ಹೌದು ಸಾರ್ವಜನಿಕರಿಗೆ ಯಾರಿಗೂ ಇಂದು ಚಾಮುಂಡಿ ತಾಯಿ ದರ್ಶನ ಪಡೆಯಲು ಅವಕಾಶವಿಲ್ಲ. ಅಲ್ಲದೇ ಚಾಮುಂಡಿ ತಪ್ಪಲಿನಲ್ಲಿ ನಿಷೇಧಾಜ್ಞೆ ಜಾರಿಗೊಂಡಿರುವ ಕಾರಣ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇಂದು ಮಹಿಷಾ ದಸರಾ ಆಚರಣಾ ಸಮಿತಿಯು ಮಹಿಷ ದರಸ ಆಚರಣೆಗೆ ಕರೆ ನೀಡಿತ್ತು. ಇಂದು ಬೆಳಿಗ್ಗೆ 10.30ಕ್ಕೆ ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರ ಪ್ರತಿಮೆಗೆ ಪುಷ್ಪಾರ್ಚನೆ, ಪುರಭವನದ ಹೊರಾಂಗಣದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮ ಕೂಡ ಹಮ್ಮಿಕೊಳ್ಳಲಾಗಿತ್ತು. ಆದರೇ ಇದಕ್ಕೆ ಜಿಲ್ಲಾಡಳಿತ ಅವಕಾಶ ನೀಡಿರಲಿಲ್ಲ. ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿಗಳು ಹೊರಡಿಸಿದ್ದಾರೆ. ಹೀಗಾಗಿ ಐವರು ಜನರಿಗಿಂತ ಹೆಚ್ಚು ಮಂದಿ ಗುಂಪು ಗೂಡುವುದು, ಸಭೆ, ಸಮಾರಂಭ ನಡೆಸುವುದು ನಿಷೇಧಿಸಲಾಗಿದೆ. https://kannadanewsnow.com/kannada/5-year-old-boy-dies-of-suspected-dengue-fever-in-ballari/…

Read More

ಬಳ್ಳಾರಿ: ಜಿಲ್ಲೆಯಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಶಂಕಿತ ಡೆಂಗ್ಯೂ ಜ್ವರಕ್ಕೆ 5 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವಂತ ಘಟನೆ ಕುರುಗೋಡು ತಾಲ್ಲೂಕಿನಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಸಿದ್ದಮ್ಮನಹಳ್ಳಿಯ 5 ವರ್ಷದ ಬಾಲಕ ಪ್ರದೀಪ್ ಆಚಾರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗೂ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಪುಟಾಣಿ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಸಿದ್ದಮ್ಮನಹಳ್ಳಿ ಗ್ರಾಮದ 20ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಬಳ್ಳಾರಿಯ ವಿಮ್ಸ್, ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಜನರು ಪಡೆದಿದ್ದರೇ, ಕೆಲವರು ಚಿಕಿತ್ಸೆಯ ನಂತ್ರ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇನ್ನೂ ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಆರೋಗ್ಯ ಇಲಾಖೆಯಿಂದ ಸಿದ್ದಮ್ಮನಹಳ್ಳಿ ಗ್ರಾಮದಲ್ಲಿನ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ. ಸೊಳ್ಳೆನಿಯಂತ್ರಣಕ ಔಷಧ ಸೇರಿದಂತೆ ಡೆಂಗ್ಯೂ ನಿಯಂತ್ರಣ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/technical-snag-at-whitefield-metro-station-in-bengaluru-traffic-on-purple-line-suspended/ https://kannadanewsnow.com/kannada/rape-case-sit-raids-11-locations-belonging-to-munirathna-seizes-crucial-documents/

Read More

ಬೆಂಗಳೂರು: ನಗರದ ವೈಟ್ ಫೀಲ್ಡ್ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷ ಉಂಟಾಗಿದ್ದೂ, ಈ ಕಾರಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಂಡಿರುವುದಾಗಿ ಬಿಎಂಆರ್ ಸಿಎಲ್ ತಿಳಿಸಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದಾಗಿ ನೇರಳೆ ಮಾರ್ಗದ ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಐಟಿಪಿಎಲ್ ನಡುವೆ 08.25 ಗಂಟೆಯಿಂದ 8.55 ಗಂಟೆಯವರೆಗೆ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು ಎಂದಿದೆ. ನೇರಳೆ ಮಾರ್ಗದಲ್ಲಿ ಈ ಸಮಯದಲ್ಲಿ ಚಲ್ಲಘಟ್ಟದಿಂದ ಐಟಿಪಿಎಲ್ ಮೆಟ್ರೋ ನಿಲ್ದಾಣಗಳ ನಡುವೆ ಶಾರ್ಟ್ ಲೂಪ್ ರೈಲು ಸೇವೆಗಳು ನಡೆಸಲಾಯಿತು. ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದಿದೆ. 8.55 ಗಂಟೆಯಿಂದ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆ ಎಂದಿನಂತೆ ನಡೆಯುತ್ತಿವೆ. ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ಯಾವುದೇ ವ್ಯತ್ಯಾಯವಾಗಿಲ್ಲ ಎಂಬುದಾಗಿ ಹೇಳಿದೆ. https://kannadanewsnow.com/kannada/another-good-news-for-the-people-of-the-state-eye-treatment-vaccination-for-children-in-our-clinic/ https://kannadanewsnow.com/kannada/rape-case-sit-raids-11-locations-belonging-to-munirathna-seizes-crucial-documents/

Read More

ಬೆಂಗಳೂರು: ರಾಜ್ಯದ ಜಿಲ್ಲಾ ಕೇಂದ್ರ ಸೇರಿದಂತೆ ತಾಲ್ಲೂಕು ಕೇಂದ್ರಗಳಲ್ಲಿಯೂ ನಮ್ಮ ಕ್ಲಿನಿಕ್ ತೆರೆಯಲಾಗಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯ ವಾರ್ಡ್ ಮಟ್ಟದಲ್ಲಿಯೂ ನಮ್ಮ ಕ್ಲಿನಿಕ್ ಓಪನ್ ಮಾಡಲಾಗಿದೆ. ಈ ನಮ್ಮ ಕ್ಲಿನಿಕ್ ನಲ್ಲಿ ಇನ್ಮುಂದೆ ನೇತ್ರ ಚಿಕಿತ್ಸೆ, ಮಕ್ಕಳಿಗೆ ವಿವಿಧ ಲಸಿಕೆ ಹಾಕುವಂತ ನಿರ್ಧಾರಕ್ಕೂ ಸರ್ಕಾರ ಮುಂದಾಗಿದೆ. ಪ್ರಾಯೋಗಿಕ ಎನ್ನುವಂತೆ ರಾಜ್ಯದ ರಾಜಧಾನಿ ಬೆಂಗಳೂರಿನ ನಮ್ಮ ಕ್ಲಿನಿಕ್ ನಲ್ಲಿ ಶೀಘ್ರದಲ್ಲೇ ಕಣ್ಣಿನ ಪರೀಕ್ಷೆ ಹಾಗೂ ಅದಕ್ಕೆ ಚಿಕಿತ್ಸೆಯಂತ ಸೌಲಭ್ಯಗಳು ದೊರೆಯಲಿದ್ದಾವೆ. ಅಲ್ಲದೇ ಮಕ್ಕಳಿಗೆ ವಿವಿಧ ಲಸಿಕಾಕರಣ ಕೂಡ ನಡೆಯಲು ತಯಾರಿ ನಡೆಸಲಾಗಿದೆ. ಇನ್ನೂ ನಾಯಿ ಕಡಿತಕ್ಕೆ ಚುಚ್ಚುಮದ್ದು ಸೇರಿದಂತೆ ಇನ್ನೂ ಕೆಲವು ಸೇವೆಗಳನ್ನು ಆರಂಭಿಸುವ ಮೂಲಕ ನಮ್ಮ ಕ್ಲಿನಿಕ್ ಗಳನ್ನು ಮೇಲ್ದರ್ಜೆಗೆ ಏರಿಸೋದಕ್ಕೆ ಬಿಬಿಎಂಪಿ ಮುಂದಾಗಿದೆ. ಈ ಸೇವೆಯನ್ನು ರಾಜ್ಯಾಧ್ಯಾಂತ ಇರುವಂತ ನಮ್ಮ ಕ್ಲಿನಿಕ್ ಗಳಲ್ಲಿಯೂ ಪ್ರಾರಂಭಿಸುವಂತ ಆಲೋಚನೆ ಇದೆ. ಅಂದಹಾಗೇ ಕಳೆದ ಎರಡು ವರ್ಷಗಳ ಹಿಂದೆ ನಗರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ದೆಹಲಿಯ ಮೊಹಲ್ಲಾ ಕ್ಲಿನಿಕ್ ಮಾದರಿಯಲ್ಲೇ ಕರ್ನಾಟಕದಲ್ಲೂ…

Read More

ಪೂರ್ವಜರ ಆರಾಧನೆಯನ್ನು ಅತ್ಯಂತ ವಿಶೇಷವಾದ ಆರಾಧನೆ ಎಂದು ಪರಿಗಣಿಸಲಾಗಿದೆ. ಕುಲದೇವತೆಯ ಕೃಪೆಯಿಂದಲೇ ನಮ್ಮ ಜೀವನದಲ್ಲಿ ಪ್ರತಿಯೊಂದು ಶುಭ ಕಾರ್ಯಗಳು ನಡೆಯುತ್ತವೆ ಎಂಬುದು ಹಲವರ ಅನುಭವಕ್ಕೆ ಬಂದಿರುವ ಸತ್ಯ. ಆದುದರಿಂದಲೇ ಇಂದಿನ ಕಾಲದಲ್ಲಿ ಕುಲದೇವತಾ ಆರಾಧನೆಯು ಬಹಳ ವಿಶೇಷವಾಗಿದೆ. ಅಂತಹ ಕುಲದೇವತೆಗೆ ನಾವು ಮಾಡುವ ಪ್ರತಿಯೊಂದು ರೀತಿಯ ಪೂಜೆಯು ವಿಭಿನ್ನ ಪ್ರಯೋಜನಗಳನ್ನು ಹೊಂದಿದೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಯಶಸ್ಸನ್ನು ಸಾಧಿಸಲು ಮತ್ತು ಅಡೆತಡೆಗಳನ್ನು ಕಡಿಮೆ ಮಾಡಲು ಕುಲದೈವವನ್ನು ಯೋಚಿಸಿ ಬೆಳಗಬೇಕಾದ ದೀಪದ ಬಗ್ಗೆ ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಅಡೆತಡೆಗಳನ್ನು…

Read More

ಬೆಂಗಳೂರು: 402 ಪೊಲೀಸ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷೆಯು ಕೆಲ ದಿನಗಳ ಹಿಂದೆಯೇ ನಡೆಯಬೇಕಿತ್ತು. ಆದರೇ ಎರಡು ಪರೀಕ್ಷೆಗಳು ಒಂದೇ ದಿನ ನಿಗದಿಯಾಗಿದ್ದರಿಂದ ಮುಂದೂಡಿಕೆ ಮಾಡಲಾಗಿತ್ತು. ಈ ಪರೀಕ್ಷೆ ಅಕ್ಟೋಬರ್.3ರಂದು ನಡೆಯಲಿದೆ. ಇಂತಹ ಪರೀಕ್ಷೆಗೆ ಕೆಇಎಯಿಂದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಅಕ್ಟೋಬರ್ 3ರಂದು ನಡೆಯುವ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ (PSI) ಪರೀಕ್ಷೆ ಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗಿದೆ. ಅರ್ಹರು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು KEA ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ. https://twitter.com/KEA_karnataka/status/1839675174016229835 ಪ್ರವೇಶ ಪತ್ರವನ್ನು ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ 402 ಪಿಎಸ್‌ಐ ಹುದ್ದೆ ಪರೀಕ್ಷೆ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು https://cetonline.karnataka.gov.in/hallticket_va/forms/HALLTICKET.aspx ಕ್ಕೆ ಭೇಟಿ ನೀಡಿ. ತೆರೆದ ವೆಬ್‌ಪೇಜ್‌ನಲ್ಲಿ ಪಿಎಸ್‌ಐ ಪರೀಕ್ಷೆ ಆಯ್ಕೆ ಮಾಡಿ. ನಿಮ್ಮ ಅಪ್ಲಿಕೇಶನ್‌…

Read More

ಬೆಂಗಳೂರು: ಇದೇ ಮೊದಲ ಬಾರಿಗೆ ಈ ವರ್ಷ ಮೂರು ಬಾರಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ನಡೆಸಲಾಗಿತ್ತು. ಎರಡು ಬಾರಿ ಅನುತ್ತೀರ್ಣರಾದವರಿಗೆ ಮೂರನೇ ಬಾರಿಯೂ ಅವಕಾಶ ನೀಡಲಾಗಿತ್ತು. ಅಲ್ಲದೇ ಎರಡೂ ಬಾರಿ ಉತ್ತೀರ್ಣರಾದವರೂ ಮೂರನೇ ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಹೀಗೆ ಪರೀಕ್ಷೆ ಬರೆದಂತ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯನ್ನು ಕೆಇಎ ಬಿಡುಗಡೆ ಮಾಡಿದೆ. ಹೌದು ಪಿಯುಸಿ 3ನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ Options ದಾಖಲಿಸಲು ಶನಿವಾರವೇ ಲಿಂಕ್ ಬಿಡುಗಡೆ ಮಾಡಲಾಗಿದೆ ಎಂಬುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ನೀಡಿದೆ. ಅ.4ರವರೆಗೆ ತಮಗೆ ಇಷ್ಟ ಇರುವ ಕಾಲೇಜು ಮತ್ತು ಕೋರ್ಸ್ ಗಳನ್ನು ದಾಖಲಿಸಿಕೊಳ್ಳಬಹುದು. ಈ ಸುತ್ತಿನಲ್ಲಿ ಸೀಟು ಸಿಕ್ಕಿದ‌ ನಂತರ ಕಡ್ಡಾಯವಾಗಿ ಪ್ರವೇಶ ಪಡೆಯಬೇಕು. ಇಲ್ಲದಿದ್ದರೆ ಶುಲ್ಕದ ಐದು ಪಟ್ಟು ದಂಡ ಕಟ್ಟಬೇಕಾಗುತ್ತದೆ ಎಂದು ತಿಳಿಸಿದೆ. https://twitter.com/KEA_karnataka/status/1840008068819513466 #UGCET ಎಂಜಿನಿಯರಿಂಗ್ ಇತ್ಯಾದಿ ಕೋರ್ಸ್ ಗಳ ಪ್ರವೇಶಕ್ಕೆ ಇದುವರೆಗೂ ಸೀಟು ಸಿಗದೇ ಇರುವವರು, ಮೊದಲ ಸುತ್ತಿನಲ್ಲಿ Choice & Options ದಾಖಲು ಮಾಡದವರಿಗೆ 2nd…

Read More

ಕಲಬುರ್ಗಿ: ಕೌಟುಂಬಿಕ ಕಲಹಕ್ಕೆ ಬೇಸತ್ತಂತ ಪತಿಯೊಬ್ಬ, ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೈದು, ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವಂತ ಘಟನೆ ಕಲಬುರ್ಗಿಯ ಸೇಡಂನ ಬೇಟಗೇರ(ಬಿ) ಗ್ರಾಮದಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಬೇಡಗೇರ(ಬಿ) ಗ್ರಾಮದ ನಾಗಮ್ಮ ಹಾಗೂ ಶೇಖರಪ್ಪ ನಡುವೆ ಕೌಟುಂಬಿಕ ಕಲಹ ಉಂಟಾಗಿತ್ತು. ದಿನೇ ದಿನೇ ಹೆಚ್ಚಾಗಿ ಇದರಿಂದ ಬೇಸತ್ತು ಕೂಡ ಹೋಗಲಾಗಿತ್ತು ಎನ್ನಲಾಗಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತಿದ್ದಂತ ಶೇಖರಪ್ಪ ತನ್ನ ಪತ್ನಿ ನಾಗಮ್ಮ(42) ಎಂಬುವರನ್ನು ಕುಡುಗೋಲಿನಿಂದ ಕೊಚ್ಚಿ ಕೊಲೆ ಗೈದಿದ್ದಾರೆ. ಆ ಬಳಿಕ ಸೇಡಂ ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಸೇಡಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/nepal-floods-death-toll-rises-to-112/ https://kannadanewsnow.com/kannada/rape-case-sit-raids-11-locations-belonging-to-munirathna-seizes-crucial-documents/

Read More