Author: kannadanewsnow09

ನವದೆಹಲಿ: ಆಧಾರ್ ಕಾರ್ಡ್ ( Aadhaar Card ) ಹೊಂದಿರುವವರು ಜೂನ್ 14, 2025 ರವರೆಗೆ ತಮ್ಮ ವಿವರಗಳನ್ನು ಉಚಿತವಾಗಿ ನವೀಕರಿಸಲು ಅವಕಾಶವಿದೆ ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (Unique Identification Authority of India – UIDAI)  ಘೋಷಿಸಿದೆ. ಕೇವಲ ಐದು ದಿನಗಳು ಉಳಿದಿರುವಾಗ, ಈ ಸೌಲಭ್ಯವನ್ನು ಇನ್ನೂ ಪಡೆಯದ ನಿವಾಸಿಗಳು ತ್ವರಿತವಾಗಿ ಕಾರ್ಯನಿರ್ವಹಿಸಬೇಕು. ಗಡುವಿನ ನಂತರ, ಬಳಕೆದಾರರು ನವೀಕರಣಗಳಿಗಾಗಿ 50 ರೂ. ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಉಚಿತ ನವೀಕರಣ ಆಯ್ಕೆಯು myAadhaar ಪೋರ್ಟಲ್ ಮೂಲಕ ಮಾತ್ರ ಅನ್ವಯಿಸುತ್ತದೆ. ಬಳಕೆದಾರರು ತಮ್ಮ ದಾಖಲೆಗಳು ಮತ್ತು ಹೆಸರು, ವಿಳಾಸ ಮತ್ತು ಜನ್ಮ ದಿನಾಂಕದಂತಹ ಜನಸಂಖ್ಯಾ ವಿವರಗಳನ್ನು ನವೀಕರಿಸಲು ಆನ್‌ಲೈನ್‌ನಲ್ಲಿ ಲಾಗಿನ್ ಮಾಡಬಹುದು. ಆದಾಗ್ಯೂ, ಫಿಂಗರ್‌ಪ್ರಿಂಟ್‌ಗಳು ಅಥವಾ ಐರಿಸ್ ಸ್ಕ್ಯಾನ್‌ಗಳಂತಹ ಬಯೋಮೆಟ್ರಿಕ್ ಮಾಹಿತಿಯನ್ನು ಒಳಗೊಂಡ ನವೀಕರಣಗಳನ್ನು ಆಧಾರ್ ಸೇವಾ ಕೇಂದ್ರದಲ್ಲಿ ಮಾಡಬೇಕು ಮತ್ತು ಉಚಿತ ಸೇವೆಯ ಅಡಿಯಲ್ಲಿ ಒಳಗೊಳ್ಳುವುದಿಲ್ಲ. ಗಡುವು ಒಮ್ಮೆ ವಿಸ್ತರಿಸಲಾಗಿದೆ, ಮತ್ತೆ ವಿಸ್ತರಿಸೋದು ಡೌಟ್ ಯುಐಡಿಎಐ ನೀಡಿದ ಮೊದಲ ವಿಸ್ತರಣೆ…

Read More

ಬೆಂಗಳೂರು: ಬೆಂಗಳೂರಿನ ಶ್ರೀ ಚಾಮರಾಜೇಂದ್ರ ಕಬ್ಬನ್ ಉದ್ಯಾನವನದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಹಾಗೂ ಉದ್ಯಾನವನದ ಸಂರಕ್ಷಣಾ ಹಿತದೃಷ್ಟಿಯಿಂದ ಉದ್ಯಾನವನದ ಆವರಣದಲ್ಲಿ ಅನುಮತಿಸಬಹುದಾದ ಚಟುವಟಿಕೆಗಳು, ನಿಷೇಧಿಸಿದ ಚಟುವಟಿಕೆಗಳು ಹಾಗೂ ಪಾಲಿಸಬೇಕಾದ ಇತರೆ ಅವಶ್ಯಕ ನಿಯಮಗಳನ್ನು ಸರ್ಕಾರವು 2025ನೇ ಏಪ್ರಿಲ್ 23 ರಂದು ಜಾರಿ ಮಾಡಿ ಆದೇಶಿಸಿದೆ. ಕಬ್ಬನ್ ಉದ್ಯಾನವನದ ಸಂರಕ್ಷಣಾ ಹಿತದೃಷ್ಟಿಯಿಂದ ರಚಿಸಲಾಗಿರುವ ನಿಯಮಗಳನ್ನು ಉಲ್ಲಂಘಿಸಿದ ಪ್ರತಿ ಒಬ್ಬರಿಗೆ ಗರಿಷ್ಠ ರೂ.500/- ಗಳವರೆಗೆ ದಂಡ ವಿಧಿಸಲು ಹಾಗೂ ಪದೇ ಪದೇ ಉಲ್ಲಂಘಿಸಿದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲು ತೋಟಗಾರಿಕೆ ನಿರ್ದೇಶಕರು, ಬೆಂಗಳೂರು ಇವರು ತೋಟಗಾರಿಕೆ ಉಪ ನಿರ್ದೇಶಕರು, ಶ್ರೀ ಚಾಮರಾಜೇಂದ್ರ (ಕಬ್ಬನ್) ಉದ್ಯಾನವನ, ಬೆಂಗಳೂರು ರವರಿಗೆ ಅಥವಾ ಸಂಬಂಧಿಸಿದ ಸೂಕ್ತ ಅಧಿಕಾರಿಗೆ ಅವಕಾಶ ಕಲ್ಪಿಸಿಕೊಡುವಂತೆ ಆದೇಶಿಸಿದೆ. ಉಲ್ಲಂಘಿಸಿದ ದಂಡದ ಮೊತ್ತ ಹಾಗೂ ಷರತ್ತಿಗೊಳಪಟ್ಟು ಅನುಮತಿಸಲು ವಿಧಿಸಿರುವ ಮೊತ್ತವನ್ನು ಸುವರ್ಣ ಕರ್ನಾಟಕ ಉದ್ಯಾನವನ ಪ್ರತಿಷ್ಠಾನನದ ಖಾತೆಗೆ ಜಮೆ ಮಾಡುವುದು. ಅನುಮತಿಸಬಹುದಾದ ಚಟುವಟಿಕೆಗಳು, ನಿಷೇಧಿಸಿದ ಚಟುವಟಿಕೆಗಳು ಹಾಗೂ ಪಾಲಿಸಬೇಕಾದ ಇತರೆ ಅವಶ್ಯಕ ನಿಯಮಗಳನ್ನು ವ್ಯಾಪಕ ಪ್ರಚಾರ ಪಡಿಸಲು…

Read More

ನವದೆಹಲಿ: 2025 ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಮುಂಚಿತವಾಗಿ ನಡೆದ ಮಹತ್ವದ ಆಚರಣೆಯಲ್ಲಿ, ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಜೂನ್ 9 ರಂದು ಏಳು ದಂತಕಥೆ ಆಟಗಾರರನ್ನು ಐಸಿಸಿ ಹಾಲ್ ಆಫ್ ಫೇಮ್‌ಗೆ ಸೇರಿಸಿತು. ಈ ವರ್ಷದ ವರ್ಗವು ಐದು ಪುರುಷ ಮತ್ತು ಇಬ್ಬರು ಮಹಿಳಾ ಕ್ರಿಕೆಟಿಗರನ್ನು ಒಳಗೊಂಡಿದೆ, ಅವರೆಲ್ಲರೂ ಆಟದಲ್ಲಿ ಶಾಶ್ವತ ಪರಂಪರೆಯನ್ನು ಬಿಟ್ಟಿದ್ದಾರೆ. ಆಟಗಾರರಲ್ಲಿ ಎಂಎಸ್ ಧೋನಿ, ಮ್ಯಾಥ್ಯೂ ಹೇಡನ್, ಗ್ರೇಮ್ ಸ್ಮಿತ್, ಹಾಶಿಮ್ ಆಮ್ಲಾ ಮತ್ತು ಸನಾ ಮಿರ್ ಸೇರಿದ್ದಾರೆ. ‘ಎ ಡೇ ವಿಥ್ ದಿ ಲೆಜೆಂಡ್ಸ್’ ಎಂಬ ವಿಶೇಷ ಉಪಕ್ರಮದ ಭಾಗವಾಗಿ ಈ ಸೇರ್ಪಡೆ ಸಮಾರಂಭವನ್ನು ಐಸಿಸಿಯ ಅಧಿಕೃತ ಮಾಧ್ಯಮ ಪಾಲುದಾರರಲ್ಲಿ ನೇರ ಪ್ರಸಾರ ಮಾಡಲಾಯಿತು, ಇದು ವಿಶ್ವಾದ್ಯಂತ ಕ್ರಿಕೆಟ್ ಅಭಿಮಾನಿಗಳಿಗೆ ಈ ಸಂದರ್ಭವನ್ನು ವೀಕ್ಷಿಸಲು ಮತ್ತು ಕ್ರೀಡೆಯ ವೀರರನ್ನು ಗೌರವಿಸಲು ಅವಕಾಶ ಮಾಡಿಕೊಟ್ಟಿತು. “ಒತ್ತಡದ ನಡುವೆಯೂ ಶಾಂತಚಿತ್ತತೆ, ಅಸಮಾನವಾದ ಯುದ್ಧತಂತ್ರದ ನಡೆ, ಆದರೆ ಕಡಿಮೆ ಮಾದರಿಯ ಕ್ರಿಕೆಟ್‌ನಲ್ಲಿ ಹೊಸ ಪ್ರತಿಭೆ ತೋರಿದ್ದಕ್ಕಾಗಿ…

Read More

ಮೈಸೂರು: ರೈಲ್ವೆ ಕಾಮಗಾರಿ ಸೇರಿದಂತೆ ವಿವಿಧ ಕಾರಣದಿಂದಾಗಿ ಸ್ಥಗಿತಗೊಂಡಿದ್ದಂತ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭಿಸುತ್ತಿರುವುದಾಗಿ ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ತಿಳಿಸಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ಅವರು, ಹಬ್ಬನಗಟ್ಟ ಮತ್ತು ಅರಸೀಕೆರೆ ನಡುವಿನ ಲೈನ್ ಬ್ಲಾಕ್ ವ್ಯವಸ್ಥೆಗಳ ಹಿನ್ನೆಲೆಯಲ್ಲಿ ಮೊದಲು ರದ್ದುಪಡಿಸಲಾದ, ಭಾಗಶಃ ರದ್ದುಪಡಿಸಲಾದ ಹಾಗೂ ನಿಯಂತ್ರಿಸಲಾದ ಕೆಳಕಂಡ ರೈಲುಗಳು ಈಗ ನಿಗದಿತ ವೇಳಾಪಟ್ಟಿ ಹಾಗೂ ಮಾರ್ಗದಂತೆ ಪುನಃ ಚಾಲನೆಗೊಳ್ಳಲಿವೆ ಎಂದು ತಿಳಿಸಿದ್ದಾರೆ. 1.ರೈಲು ಸಂಖ್ಯೆ 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್, 10.05.2025 ರಂದು ಆರಂಭವಾಗುವ ಪ್ರಯಾಣ, ಮೊದಲು ರದ್ದುಪಡಿಸಲಾಗಿದ್ದು, ಇದೀಗ ನಿಯಮಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸುತ್ತದೆ. 2.ರೈಲು ಸಂಖ್ಯೆ 16206 ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್, 10.05.2025 ರಂದು ಆರಂಭವಾಗುವ ಪ್ರಯಾಣ, ಮೊದಲು ರದ್ದುಪಡಿಸಲಾಗಿದ್ದು, ಇದೀಗ ನಿಯಮಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸುತ್ತದೆ. 3.ರೈಲು ಸಂಖ್ಯೆ 16205 ತಾಳಗುಪ್ಪ – ಮೈಸೂರು…

Read More

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಡಾ.ಕವಿತಾ ಯೋಗಪ್ಪನವರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದಂತ ಡಾ.ಕವಿತಾ ಯೋಗಪ್ಪನವರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಗೆ ಕೆ.ಮಾಯಣ್ಣಗೌಡ ಅವರನ್ನು ನೇಮಕ ಮಾಡಿರುವುದಾಗಿ ತಿಳಿಸಿದ್ದಾರೆ. ಅಂದಹಾಗೆ ನೂತನ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ ಅವರು ಈ ಹಿಂದೆಯೂ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ ಜೂನ್.8, 2024ರಂದು ವರ್ಗಾವಣೆ ಮಾಡಲಾಗಿತ್ತು. ಇದೀಗ ಒಂದು ವರ್ಷದ ಬಳಿಕ ಮತ್ತೆ ಕೆ.ಮಾಯಣ್ಣಗೌಡ ಅವರನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿದೆ. https://kannadanewsnow.com/kannada/final-e-account-distribution-to-5-lakh-citizens-by-bbmp/ https://kannadanewsnow.com/kannada/explosion-reported-aboard-singapore-flagged-container-ship-off-kerala-coast/

Read More

ಬೆಂಗಳೂರು: ನಗರದಲ್ಲಿ ನಕ್ಷೆ ಮಂಜೂರಾತಿ ಸೇರಿದಂತೆ ವಿವಿಧ ಕಾರ್ಯಗಳಿಗೆ ಇ-ಖಾತಾ ಕಡ್ಡಾಗೊಳಿಸಲಾಗಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 5 ಲಕ್ಷ ನಾಗರೀಕರಿಗೆ ಅಂತಿಮ ಇ-ಖಾತಾ ವಿತರಣೆ ಮಾಡಿರುವುದಾಗಿ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಬೆಂಗಳೂರಲ್ಲಿ ಈವರೆಗೆ 5 ಲಕ್ಷ ನಾಗರಿಕರು ಅಂತಿಮ ಇ-ಖಾತಾ ಪಡೆದಿದ್ದಾರೆ. 25 ಲಕ್ಷಕ್ಕಿಂತ ಹೆಚ್ಚು ಡ್ರಾಫ್ಟ್ ಇ-ಖಾತಾ ಆನ್‌ಲೈನ್‌ನಲ್ಲಿ ಲಭ್ಯವಿದೆ. ನಾಗರಿಕರು ತಮ್ಮ ಆಧಾರ್ ಸಂಖ್ಯೆ, ಮಾರಾಟ ದಸ್ತಾವೇಜಿನ ಸಂಖ್ಯೆ, ಆಸ್ತಿಯ ತೆರಿಗೆ ಐ.ಡಿ, ಬೆಸ್ಕಾಂ ಸಂಖ್ಯೆ (ಖಾಲಿ ಜಾಗಕ್ಕೆ ಐಚ್ಛಿಕ), ಮತ್ತು ಆಸ್ತಿಯ ಫೋಟೋ ಹಾಕಬೇಕು. ಈ ಮಾಹಿತಿಗಳನ್ನು ನೀಡಿದ ನಂತರ ನಾಗರಿಕರಿಗೆ ಅಂತಿಮ ಇ-ಖಾತಾ 1 ರಿಂದ 2 ದಿನಗಳಲ್ಲಿ ಸಿಗುತ್ತದೆ ಎಂದು ತಿಳಿಸಿದ್ದಾರೆ. ಬೆಂಗಳೂರಲ್ಲಿ ಈವರೆಗೆ ಸುಮಾರು 5 ಲಕ್ಷ ನಾಗರಿಕರಿಂದ ತಮ್ಮ ಇ-ಖಾತಾ ಪಡೆಯಲಾಗಿದೆ. ಪ್ರತಿದಿನ ಸುಮಾರು 3,000 ಜನರು ಈ ಪ್ರಕ್ರಿಯೆ ಮಾಡುತ್ತಿದ್ದಾರೆ ಮತ್ತು ಇಷ್ಟೇ ಸಂಖ್ಯೆಯವರಿಗೆ ಇ-ಖಾತಾ ಅನುಮೋದನೆ…

Read More

ನವದೆಹಲಿ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (International Space Station- ISS) ಪ್ರಯಾಣಿಸಿದ ಮೊದಲ ಭಾರತೀಯ ಮೂಲದ ಮಹಿಳೆಯನ್ನು ಹೊತ್ತ ಬಹು ನಿರೀಕ್ಷಿತ ಆಕ್ಸಿಯಮ್ -4 ಮಿಷನ್‌ನ ಉಡಾವಣೆಯು ಪ್ರತಿಕೂಲ ಹವಾಮಾನದಿಂದಾಗಿ ಒಂದು ದಿನ ವಿಳಂಬವಾಗಿದೆ. ಉಡಾವಣೆಯನ್ನು ಈಗ ಜೂನ್ 11 ರ ಬುಧವಾರಕ್ಕೆ ಮರು ನಿಗದಿಪಡಿಸಲಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (Indian Space Research Organisation – ISRO) ಅಧ್ಯಕ್ಷ ಡಾ. ವಿ. ನಾರಾಯಣನ್ ಅವರ ಅಧಿಕೃತ ಹೇಳಿಕೆಯ ಪ್ರಕಾರ, ಮೂಲತಃ ಜೂನ್ 10 ರಂದು ಯೋಜಿಸಲಾಗಿದ್ದ ಈ ಮಿಷನ್ ಈಗ ಜೂನ್ 11, 2025 ರಂದು ಭಾರತೀಯ ಕಾಲಮಾನ ಸಂಜೆ 5:30 ಕ್ಕೆ ಉಡಾವಣೆಯಾಗಲಿದೆ. ಹವಾಮಾನ ವೈಪರಿತ್ಯದ ಕಾರಣದಿಂದ ಜೂನ್.10ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಬೇಕಿದ್ದಂತ ಪ್ರವಾಸವನ್ನು ಜೂನ್.11ಕ್ಕೆ ಮುಂದೂಡಿಕೆ ಮಾಡಿರುವುದಾಗಿ ಅಧಿಕೃತ ಮಾಹಿತಿ ಹೊರ ಬಿದ್ದಿದೆ. https://kannadanewsnow.com/kannada/bcci-likely-to-sack-rohit-sharma-as-odi-captain-reports/ https://kannadanewsnow.com/kannada/explosion-reported-aboard-singapore-flagged-container-ship-off-kerala-coast/

Read More

ಕೆಎನ್ಎನ್ ಸ್ಪೋಟ್ಸ್ ಡೆಸ್ಕ್: ಭಾರತೀಯ ಕ್ರಿಕೆಟ್ ತಂಡವು ಪರಿವರ್ತನೆಯ ಅವಧಿಯನ್ನು ಪ್ರವೇಶಿಸಿದೆ. ಮುಂದಿನ ದಿನಗಳಲ್ಲಿ ಕೆಲವು ದಿಟ್ಟ ನಿರ್ಧಾರಗಳೊಂದಿಗೆ ತಂಡವು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ನಿವೃತ್ತಿಯ ನಂತರ, ಆಯ್ಕೆಯಲ್ಲಿ ದೊಡ್ಡ ನಿರ್ವಾತ ಉಂಟಾಗಲಿದ್ದು, ಅದನ್ನು ಅತ್ಯಂತ ಎಚ್ಚರಿಕೆಯಿಂದ ಪರಿಹರಿಸಬೇಕಾಗಿದೆ. 2027 ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಭಾರತವನ್ನು ಮುನ್ನಡೆಸುತ್ತಾರೆಯೇ? ಮೊದಲ ಬಾರಿಗೆ, ಮೂರು ಸ್ವರೂಪಗಳು ಟೀಮ್ ಇಂಡಿಯಾಕ್ಕೆ ವಿಭಿನ್ನ ನಾಯಕರನ್ನು ಹೊಂದಿವೆ. ಶುಭಮನ್ ಗಿಲ್ ಅವರಿಗೆ ಕೆಂಪು ಚೆಂಡಿನ ಸ್ವರೂಪದ ಜವಾಬ್ದಾರಿಯನ್ನು ವಹಿಸಲಾಗಿದೆ. ಆದರೆ ಸೂರ್ಯಕುಮಾರ್ ಯಾದವ್ ಟಿ 20 ಐ ತಂಡವನ್ನು ಮುನ್ನಡೆಸುತ್ತಿದ್ದಾರೆ. ರೋಹಿತ್ ಶರ್ಮಾ ಪ್ರಸ್ತುತ ಏಕದಿನ ತಂಡದ ಚುಕ್ಕಾಣಿ ಹಿಡಿದಿದ್ದಾರೆ. 2027 ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ತಂಡವನ್ನು ಮುನ್ನಡೆಸುವ ನಿರೀಕ್ಷೆಯಿದೆ. ಆದರೆ ಬಿಸಿಸಿಐ ಏಕದಿನ ನಾಯಕನಾಗಿ ತಮ್ಮ ಸ್ಥಾನವನ್ನು ಮರುಪರಿಶೀಲಿಸಬಹುದು ಎಂಬ ವರದಿಗಳಿವೆ. 38 ವರ್ಷದ ಅವರು ಭಾರತವನ್ನು ತವರು ನೆಲದಲ್ಲಿ 2023 ರ ವಿಶ್ವಕಪ್…

Read More

ಮೈಸೂರು: ಮುಡಾದಲ್ಲಿ ಅಕ್ರಮವಾಗಿ ಸೈಟ್ ಮಂಜೂರಾತಿ ಪ್ರಕರಣ ಸಂಬಂಧ ಸರಿಯಾಗಿ ತನಿಖೆ ನಡೆಸದೇ ಹಿರಿಯ ಅಧಿಕಾರಿಗಳು ವರದಿ ನೀಡುತ್ತಿರುವುದಾಗಿ ಆರೋಪಿಸಿ ಸ್ನೇಹಮಯಿ ಕೃಷ್ಣ ಕೇಂದ್ರ ಜಾಗೃತಿ ಆಯೋಗಕ್ಕೆ ದೂರು ನೀಡಿದ್ದರು. ಈ ದೂರನ್ನು ಕೇಂದ್ರ ಜಾಗೃತಿ ಆಯೋಗವು ಸ್ವೀಕರಿಸಿದೆ. ಈ ಮಾಹಿತಿಯನ್ನು ಮುಡಾ ಕೇಸ್ ದೂರುದಾರ ಸ್ನೇಹಮಯಿ ಕೃಷ್ಣ ಹಂಚಿಕೊಂಡಿದ್ದು, ಮುಡಾ ಪ್ರಕರಣದಲ್ಲಿ 1ನೇ ಆರೋಪಿ ಸಿದ್ದರಾಮಯ್ಯ ಸೇರಿದಂತೆ ಆರೋಪಿಗಳನ್ನು ರಕ್ಷಣೆ ಮಾಡುವ ಸಲುವಾಗಿ ಕರ್ತವ್ಯಕ್ಕೆ ವಿರುದ್ದವಾಗಿ ನಡೆದುಕೊಂಡು ಸುಳ್ಳು ವರದಿ ಸಲ್ಲಿಸಿರುವ ತನಿಖಾಧಿಕಾರಿ ಮತ್ತು ಹಿರಿಯ ಅಧಿಕಾರಿಯ ವಿರುದ್ದ ಕ್ರಮ ತೆಗೆದುಕೊಳ್ಳಲು ನಾನು ನೀಡಿದ ದೂರರ್ಜಿಯನ್ನು ಸ್ವೀಕರಿಸಿದ ಕೇಂದ್ರ ಜಾಗೃತಿ ಆಯೋಗದವರು, ನನ್ನ ದೂರನ್ನು ನೊಂದಾಯಿಸಿಕೊಂಡು ಪರಿಶೀಲನೆ ನಡೆಸುತ್ತಿರುವುದಾಗಿ ಸಂದೇಶ ಕಳುಹಿಸಿರುವುದಾಗಿ ಹೇಳಿದ್ದಾರೆ. ಐ.ಪಿ.ಎಸ್ ಅಧಿಕಾರಿಗಳು ಅಂದ ಮಾತ್ರಕ್ಕೆ ಸರ್ವಾಧಿಕಾರಿಗಳಂತೆ ನಡೆದುಕೊಳ್ಳಲು ಸಾಧ್ಯವಿಲ್ಲ. ಕರ್ತವ್ಯಕ್ಕೆ ವಿರುದ್ದವಾಗಿ ನಡೆದುಕೊಂಡರೆ, ಅಪರಾಧ ಕೃತ್ಯಗಳನ್ನು ಎಸಗಿದರೆ ಶಿಕ್ಷೆಗೆ ಒಳಗಾಗಲೇ ಬೇಕು ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/covid-19-outbreak-in-the-state-265-people-tested-positive-in-a-single-day/ https://kannadanewsnow.com/kannada/second-puc-exam-3-starts-from-june-9-free-travel-allowed-on-bmtc-buses/

Read More

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವೇ ಉಂಟಾಗಿದೆ. ಇಂದು ಹೊಸದಾಗಿ ಬರೋಬ್ಬರಿ 265 ಜನರಿಗೆ ಕೊರೋನಾ ಪಾಸಿಟಿವ್ ಅಂತ ವರದಿಯಿಂದ ತಿಳಿದು ಬಂದಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ರಿಪೋರ್ಟ್ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 650 ಜನರನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 265 ಜನರಿಗೆ ಪಾಸಿಟಿವ್ ಅಂತ ವರದಿಯಿಂದ ತಿಳಿದು ಬಂದಿದೆ ಎಂದಿದೆ. ಕಳೆದ 24 ಗಂಟೆಯಲ್ಲಿ 265 ಜನರಿಗೆ ಕೊರೋನಾ ಪಾಸಿಟಿವ್ ಬಂದಿದ್ದರೇ, 126 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 559 ಸಕ್ರೀಯ ಸೋಂಕಿತರು ರಾಜ್ಯದಲ್ಲಿದ್ದಾರೆ. ಇವರಲ್ಲಿ 7 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, 552 ಜನರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆಯಲ್ಲಿದ್ದಾರೆ ಎಂದು ಮಾಹಿತಿ ನೀಡಿದೆ. https://kannadanewsnow.com/kannada/explosion-reported-aboard-singapore-flagged-container-ship-off-kerala-coast/ https://kannadanewsnow.com/kannada/second-puc-exam-3-starts-from-june-9-free-travel-allowed-on-bmtc-buses/

Read More