Author: kannadanewsnow09

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ವೇಳೆಯಲ್ಲಿ ನಡೆದಂತ ಗಲಭೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬುದಾಗಿ ಬಿಜೆಪಿ ಗಂಭೀರ ಆರೋಪ ಮಾಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಬಿಜೆಪಿಯು, ಕಾಂಗ್ರೆಸ್ ಸರ್ಕಾರದ ತುಷ್ಠೀಕರಣದ ನೀತಿಯಿಂದಾಗಿಯೇ ನಾಗಮಂಗಲದಲ್ಲಿ ಗಲಭೆಯಾಗಿದೆ ಎಂದು ಬಿಜೆಪಿಯ ಸತ್ಯಶೋಧನಾ ಸಮಿತಿ ವರದಿ ನೀಡಿದೆ ಎಂದಿದೆ. ಈ ಗಲಭೆ ಪೂರ್ವನಿಯೋಜಿತವಾಗಿದ್ದು, ಹಿಂದೂ ಸಮುದಾಯದ ಅಂಗಡಿಗಳಿಗೆ ಮಾತ್ರ ಬೆಂಕಿ ‌ಹಚ್ಚಲಾಗಿದೆ. ಕಳೆದ ವರ್ಷವೂ ಇದೇ ರೀತಿ ಗಲಭೆ ನಡೆದಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿ, ಗಣೇಶ ಮೂರ್ತಿಯ ವಿಸರ್ಜನೆಗೆ ವಿಘ್ನ ತರಲು ಮುಂದೆ ನಿಂತು ಸಹಕಾರ ನೀಡಿದೆ ಎಂಬುದಾಗಿ ಆರೋಪಿಸಿದೆ. ಹಿಂದೂ ಸಮುದಾಯ ಅಭದ್ರವಾಗಿದ್ದಷ್ಟೂ ತನಗೆ ಲಾಭ ಎಂದು ಅರಿತುಕೊಂಡಿರುವ ಕಾಂಗ್ರೆಸ್ ಸರ್ಕಾರ ಪದೇ ಪದೇ ಹಿಂದೂ ಸಮುದಾಯವನ್ನು ಅವಮಾನಿಸುತ್ತಿದೆ ಎಂಬುದಾಗಿ ಕಿಡಿಕಾರಿದೆ. https://twitter.com/BJP4Karnataka/status/1837379965106409835 https://kannadanewsnow.com/kannada/decision-to-conduct-prasadam-testing-in-all-temples-in-the-state-minister-ramalinga-reddy/ https://kannadanewsnow.com/kannada/nipah-scare-rises-in-bengaluru-one-person-diagnosed-with-symptoms-41-under-home-quarantine/

Read More

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ಬೆನ್ನಲ್ಲೇ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಮುಜರಾಯಿ ಇಲಾಖೆಯ ದೇವಾಲಯಗಳ ಪ್ರಸಾದ ವಿವಾದಕ್ಕೆ ಕಾರಣವಾಗುವ ಮುನ್ನವೇ ಎಲ್ಲಾ ದೇವಾಲಗಳ ಪ್ರಸಾದವನ್ನು ಪರೀಕ್ಷೆ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡಂತ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದವನ್ನು ಟೆಸ್ಟ್ ಮಾಡಿಸುತ್ತೇನೆ. ನಮ್ಮ ರಾಜ್ಯದಲ್ಲಿ ಶೇ.99%ನಷ್ಟು ದೇವಾಲಯಗಳು ನಂದಿನಿ ತುಪ್ಪವನ್ನೇ ಬಳಸಿಕೊಳ್ಳುತ್ತಾ ಇದ್ದಾರೆ ಎಂದರು. ತಿರುಪತಿ ಲಡ್ಡು ವಿವಾದದಂತೆ ನಮ್ಮಲ್ಲೂ ಆಗುವುದಕ್ಕಿಂತ ಮುಂಚೆಯೇ ಜನರಿಗೆ ಸಂಶಯ ಬೇಡ ಅಂತ ನಂದಿನಿ ತುಪ್ಪ ಬಳಕೆ ಮಾಡಬೇಕು ಎಂಬುದಾಗಿ ಆದೇಶ ಮಾಡಲಾಗಿದೆ. ಕೇಂದ್ರ ಸಚಿವರೊಬ್ಬರು ರಾಜ್ಯದ ದೇವಾಲಯಗಳ ಪ್ರಸಾದ ಪರೀಕ್ಷೆ ಮಾಡಬೇಕು ಎಂದಿದ್ದಾರೆ. ನನ್ನ ಅಭಿಪ್ರಾಯ ಅಂದ್ರೆ ದೇಶದ ಎಲ್ಲಾ ದೇವಸ್ಥಾನಗಳ ಪ್ರಸಾದ ಟೆಸ್ಟ್ ಮಾಡಲಿ ಎಂಬುದಾಗಿದೆ ಎಂದರು. ನಮ್ಮ ರಾಜ್ಯದ ಯಾವುದೇ ದೇವಾಲಯಗಳಲ್ಲಿ ಅಂತಹ ಘಟನೆ ನಡೆದಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ರಾಜ್ಯದ…

Read More

ಬೆಂಗಳೂರು : “ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯ ಗುಣಮಟ್ಟ ವೀಕ್ಷಣೆ ಮಾಡಲು ರಾತ್ರಿ ಸಂಚಾರ ನಡೆಸುತ್ತೇನೆ. ಎರಡು ಮೂರು ದಿನಗಳಲ್ಲಿ ದಿನಾಂಕ ತಿಳಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಎಷ್ಟು ರಸ್ತೆಗುಂಡಿಗಳಿವೆ ಎಂಬುದರ ಬಗ್ಗೆ ನನ್ನ ಬಳಿ ಲೆಕ್ಕವಿದೆ. ಅಭಿಯಾನದ ರೀತಿ ಕೆಲಸ ಮಾಡಿದ್ದೇವೆ. ಇದು ಸಾಧನೆಯಲ್ಲ ಜವಾಬ್ದಾರಿ. ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಆದೇಶ ಕೊಟ್ಟ ಮೇಲೆ ಅಧಿಕಾರಿಗಳು ಇಷ್ಟು ತ್ವರಿತವಾಗಿ ಕೆಲಸ ಮಾಡಿದ್ದನ್ನು ನಾನು ನೋಡಿರಲಿಲ್ಲ” ಎಂದು ಹೇಳಿದರು. “ರಸ್ತೆಗುಂಡಿಗಳನ್ನು ಮುಚ್ಚಿಸುವ ವಿಚಾರದಲ್ಲಿ ಬಿಬಿಎಂಪಿ ಅಧಿಕಾರಿಗಳು ಹಗಲು- ರಾತ್ರಿ ಕೆಲಸ ಮಾಡುತ್ತಿದ್ದಾರೆ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಮಧ್ಯೆ ಮಳೆ ಬಂದಿದೆ. ನೀವು (ಮಾಧ್ಯಮ)ಗಳು ಅಷ್ಟೋ, ಇಷ್ಟೊ ಕೆಲಸ ಮಾಡಿದ್ದಾರೆ ಎಂದು ವರದಿ ಮಾಡಿದ್ದೀರಿ. ನಾವು ಬದ್ಧತೆಯಿಂದ ನಾಗರೀಕರಿಗೆ ಅನುಕೂಲ ಮಾಡುವ ಕೆಲಸ ಮಾಡಿದ್ದೇವೆ” ಎಂದು ಹೇಳಿದರು. ಬೇರೆ ರಾಜ್ಯಗಳಿಗೆ ಅವಮಾನ ಮಾಡಲು ಇಷ್ಟವಿಲ್ಲ “ನಾನು ಬೇರೆ ರಾಜ್ಯಗಳಿಗೆಲ್ಲಾ…

Read More

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ನಿಗಮವು ಬಿಗ್ ಶಾಕ್ ನೀಡಿದೆ. 3,851 ಮಂದಿಯಿಂದ ಬರೋಬ್ಬರಿ 6.21 ಲಕ್ಷ ದಂಡವನ್ನು ವಸೂಲಿ ಮಾಡಿದೆ. ಈ ಕುರಿತು ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಆಗಸ್ಟ್ -2024 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43781 ವಾಹನಗಳನ್ನು ತನಿಖೆಗೊಳಪಡಿಸಿ 3692 ಪ್ರಕರಣಗಳನ್ನು ಪತ್ತೆಹಚ್ಚಿ, 3851 ಟಿಕೇಟ್ ರಹಿತ ಪ್ರಯಾಣಿಕರಿಂದ 6,21,383/- ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ ಎಂದಿದೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 80,059/-ರೂ ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದು ತಿಳಿಸಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ,…

Read More

ಮೈಸೂರು : ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು. ವಾಕ್ ಸ್ವಾತಂತ್ರ್ಯ ನಮಗೆ ನಮ್ಮ‌ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ. ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿರ್ಬಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಬಹಳ ಒತ್ತಿ ಹೇಳಿದ್ದರು ಎಂದು ವಿವರಿಸಿದರು. ಸುಳ್ಳು ಸುದ್ದಿಗಳ ಅನಾಹುತಗಳಿಗೆ ಉದಾಹರಣೆ ನೀಡಿದ ಮುಖ್ಯಮಂತ್ರಿಗಳಯ, “ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. ” ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ…

Read More

ಬೆಂಗಳೂರು: ಯುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವೂ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದು, ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಸಂದರ್ಭದಲ್ಲಿ ಆಮಿಷ ಒಡ್ಡಲಾಗುತ್ತಿದೆ. ಬೆಳ್ಳಿ ಗಣೇಶನನ್ನು ನೀಡಿ ಸದಸ್ಯತ್ವ ಮಾಡಿಸಲಾಗುತ್ತಿದೆ ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂರಾರು ವರ್ಷಗಳ ಇತಿಹಾಸ ಹೊಂದಿದ ಕಾಂಗ್ರೆಸ್ ಪಕ್ಷವು ಸಂಪೂರ್ಣ ದಿವಾಳಿಯಾಗಿದೆ. ಮುಂದಿನ ಪ್ರಜೆಗಳಿಗೆ ಆಮಿಷವೊಡ್ಡಿ ಅವರನ್ನು ಹಾಳು ಮಾಡಿ ಸದಸ್ಯತ್ವ ನೀಡುತ್ತಿದ್ದಾರೆ ಎಂದು ದೂರಿದರು. ಈಚೆಗೆ ಡಿ.ಕೆ.ಶಿವಕುಮಾರ್ ಅವರು ಅಮೆರಿಕದಲ್ಲಿ ಕಮಲಾ ಹ್ಯಾರಿಸ್ ಅವರ ಜೊತೆ ಇದ್ದುದನ್ನು ನೋಡಿದ್ದೇನೆ. ಡಿ.ಕೆ.ಶಿವಕುಮಾರ್ ಅವರು ಆಮಿಷವೊಡ್ಡಿ ಸದಸ್ಯತ್ವ ಮಾಡಿದ್ದನ್ನು ತಿಳಿಸಿ ಮತಗಳಿಕೆ ಕುರಿತು ತಮ್ಮ ಸಲಹೆ ನೀಡಲು ಅಮೆರಿಕಕ್ಕೆ ಹೋಗಿರಬಹುದೆಂಬ ಅನುಮಾನ ಮೂಡುತ್ತಿದೆ ಎಂದು ತಿಳಿಸಿದರು. ಗಣಪತಿ ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ ಇವರ ‘ಬ್ರದರ್ಸ್’ ಬಿಟ್ಟು ಚಪ್ಪಲಿಯಲ್ಲಿ ಹೊಡೆಸುತ್ತಿದ್ದಾರೆ. ಕಲ್ಲು ಎಸೆಯುತ್ತಿದ್ದು, ಪೆಟ್ರೋಲ್ ಬಾಂಬ್ ಹಾಕುತ್ತಿದ್ದಾರೆ. ಇನ್ನೊಂದೆಡೆ…

Read More

ಬೆಂಗಳೂರು: ಈಗಾಗಲೇ ಪೋಕ್ಸೋ ಕೇಸಲ್ಲಿ ಸಂಕಷ್ಟ ಎದುರಿಸುತ್ತಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಶಾಕ್ ನೀಡಲಾಗಿದೆ. ಅದೇ ಅಕ್ರಮ ಡಿನೋಟಿಫಿಕೇಷನ್ ಕೇಸಲ್ಲಿ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸೇರಿದಂತೆ ವಿವಿಧ ಸಚಿವರು ಅಕ್ರಮ ಡಿನೋಟಿಫಿಕೇಷನ್ ಆರೋಪ ಮಾಡಿದ್ದರು. ಅಲ್ಲದೇ ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಈ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಅಂದಹಾಗೇ ಅಕ್ರಮ ಡಿನೋಟಿಫಿಕೇಷ್ ಆರೋಪದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಎ.1 ಆರೋಪಿಯಾಗಿ ಮಾಡಲಾಗಿದೆ. ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆಗೂ ಹೆಚ್ಚು ಭೂಮಿಯನ್ನು ಸತ್ತವರ ಹೆಸರಿನಲ್ಲಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಿಎಸ್ ಯಡಿಯೂರಪ್ಪ ಅವರು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದಂತ ಆರೋಪ ಎದುರಿಸುತ್ತಿದ್ದಾರೆ. https://kannadanewsnow.com/kannada/bbmp-installs-microchip-for-stray-dogs-in-bengaluru/ https://kannadanewsnow.com/kannada/nipah-scare-rises-in-bengaluru-one-person-diagnosed-with-symptoms-41-under-home-quarantine/

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು. ನಗರದ ಪಶ್ಚಿಮ ವಲಯದ ಮತ್ತಿಕೆರೆ ಹಾಗೂ ಮಲ್ಲೇಶ್ವರಂ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅನ್ನು ಪ್ರಾಯೋಗಿಕವಾಗಿ ಅಳವಡಿಸಲಾಗುತ್ತಿದ್ದು, ಮೈಕ್ರೋ ಚಿಪ್ ತಂತ್ರಜ್ಞಾನದಿಂದ ನಾಯಿಯ ವಾಸಸ್ಥಳ, ಲಸಿಕೆ ನೀಡಿದ ದಿನಾಂಕ, ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ ದಿನಾಂಕ ಹಾಗೂ ಇನ್ನಿತರ ಅಂಶಗಳನ್ನು ಶಾಶ್ವತವಾಗಿ ಅದರಲ್ಲಿ ಶೇಖರಿಸಿ ಇಡಬಹುದಾಗಿರುತ್ತದೆ. ಮೈಕ್ರೋ ಚಿಪ್ ತಂತ್ರಜ್ಞಾನವನ್ನು ಈಗಾಗಲೇ ಹಲವಾರು ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳಿಗೆ ಅಳವಡಿಸಿಕೊಂಡಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ BIZ ORBIT ಎಂಬ ಸಂಸ್ಥೆಯ ಸಹಯೋಗದೊಂದಿಗೆ ಪ್ರಾಯೋಗಿಕವಾಗಿ ಬೀದಿ ನಾಯಿಗಳಿಗೆ ಅಳವಡಿಕೆ ಮಾಡಲಾಗುತ್ತಿದೆ. ಅಕ್ಕಿಕಾಳು ಗಾತ್ರದ ಮೈಕ್ರೋ ಚಿಪ್ ಅಳವಡಿಕೆ: ಮೈಕ್ರೋಚಿಪ್ ಒಂದು ಅಕ್ಕಿಕಾಳು ಗಾತ್ರದ ಸಾಧನವಾಗಿದ್ದು, ಪ್ರಾಣಿಗಳಲ್ಲಿ ಶಾಶ್ವತ ಗುರುತಿನ ವಿಧಾನವಾಗಿರುತ್ತದೆ.…

Read More

ಶನಿವಾರ 21/09/2024 ಯಮದೀಪಂ ಆರಾಧನೆ ಮಾಡುವ ವಿಧಾನ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಈ ವರ್ಷ ಇಂದು ಮಹಾಭರಣಿ ನಕ್ಷತ್ರ ಬರಲಿರುವುದರಿಂದ ಮನೆಯಲ್ಲಿ ಈ ದೀಪವನ್ನು ಹಚ್ಚುವುದರಿಂದ ಸಕಲ ಲಾಭಗಳು ಲಭಿಸುತ್ತದೆ ಎಂಬ ನಂಬಿಕೆ ಇದೆ. ಮಹಾಭರಣಿ ನಕ್ಷತ್ರವು ಯಮಧರ್ಮನಿಗೆ ಸೇರಿದ ನಕ್ಷತ್ರ. ಮಹಾಲಯ ಪಕ್ಷ ಅಥವಾ ಭಾದ್ರಪದ ಮಾಸದಲ್ಲಿ ಬರುವ ಈ ಭರಣಿ ನಕ್ಷತ್ರವನ್ನು ಮಾತ್ರ ಮಹಾಭರಣಿ ಎಂದು ಆಚರಿಸಲಾಗುತ್ತದೆ. ಈ ನಕ್ಷತ್ರದಲ್ಲಿ ಯಾವ ಪೂಜೆ ಮಾಡಬೇಕು? ಅದರ ಸಂಕಲನವನ್ನು ಈ ಆಧ್ಯಾತ್ಮಿಕ ಲೇಖನದ ಮೂಲಕ ತಿಳಿಯುತ್ತಲೇ ಇರುತ್ತೇವೆ . ಮಹಾಭರಣಿ…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್, ಇದೀಗ ಪ್ರಕರಣದಲ್ಲಿ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯದಿಂದಾಗಿ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ ಮಾಡಲಾಗಿದೆ. ಇಂತಹ ಕೊಲೆ ಆರೋಪಿ ನಟ ದರ್ಶನ್ ಇಂದು ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಅರ್ಜಿಯನ್ನು ತಮ್ಮ ಪರ ವಕೀಲರ ಮೂಲಕ ಸಲ್ಲಿಸಿದ್ದಾರೆ.

Read More