Author: kannadanewsnow09

ಬೀದರ್: ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಿದ್ದಂತ ಆರ್ ಎಸ್ ಎಸ್ ಪಥಸಂಚಲನದಲ್ಲಿ ಜಿಎಸ್ ಟಿ ಅಧಿಕಾರಿ ಭಾಗಿಯಾಗಿರುವಂತ ಪೋಟೋ, ವೀಡಿಯೋ ವೈರಲ್ ಆಗಿವೆ. ಕಲಬುರ್ಗಿ ಜಿಲ್ಲೆಯ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವಂತ ಮಹೇಶ್ ಪಾಟೀಲ್ ಎಂಬುವರೇ ಆರ್ ಎಸ್ ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದಂತ ಅಧಿಕಾರಿಯಾಗಿದ್ದಾರೆ. ಅಕ್ಟೋಬರ್.14ರಂದು ಬಸವಕಲ್ಯಾಣದಲ್ಲಿ ನಡೆದಿದ್ದಂತ ಆರ್ ಎಸ್ ಎಸ್ ಪಥಸಂಚಲನದಲ್ಲಿ ಜಿಎಸ್ಟಿ ಅಧಿಕಾರಿ ಮಹೇಶ್ ಪಾಟೀಲ್ ಭಾಗಿಯಾಗಿದ್ದಂತ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಿಎಸ್ಟಿ ಅಧಿಕಾರಿ ಮಹೇಶ್ ಪಾಟೀಲ್ ಅಲ್ಲದೇ ಈ ಪಥ ಸಂಚಲನದಲ್ಲಿ ಸರ್ಕಾರಿ ಶಾಲೆ ಶಿಕ್ಷಕರು ಹಾಗೂ ಪಿಡಿಓಗಳು ಕೂಡ ಭಾಗಿಯಾಗಿದ್ದರು ಎನ್ನಲಾಗುತ್ತಿದೆ. ಅದು ಖಚಿತವಾಗಬೇಕಿದೆ. https://kannadanewsnow.com/kannada/we-have-not-banned-rss-we-have-issued-the-order-that-was-issued-during-shettars-tenure-cm-siddaramaiah/ https://kannadanewsnow.com/kannada/good-news-for-the-states-farmers-this-time-there-is-a-possibility-of-good-monsoon-rains/

Read More

ದಕ್ಷಿಣ ಕನ್ನಡ: ರಾಜ್ಯ ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಪುತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದೇಶದಲ್ಲಿ ಯಾವುದೇ ಸಂಘ ಅಥವಾ ಸಂಸ್ಥೆ ಎಂದಿದೆ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು , ನಾವು ಮಾಡಬಾರದೇ ಎಂದು ಪ್ರಶ್ನಿಸಿದರು. 2013 ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೇಶ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಮಾಡಿರುವುದು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು. ಅನುಮತಿ ನೀಡುವುದು ಕಡ್ಡಾಯವಲ್ಲ ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದರು. https://kannadanewsnow.com/kannada/good-news-for-the-states-farmers-this-time-there-is-a-possibility-of-good-monsoon-rains/ https://kannadanewsnow.com/kannada/problems-have-increased-after-bjp-miscreants-started-harassing-congress-mla/

Read More

ಬೆಂಗಳೂರು: ರಾಜ್ಯದ ರೈತರಿಗೆ ಸಂತಸದ ಸುದ್ದಿ ಎನ್ನುವಂತೆ ಈ ಬಾರಿ ಹಿಂಗಾರು ಮಳೆಯೂ ಉತ್ತಮವಾಗಿ ಆಗುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ಬೆಂಗಳೂರು ಕೇಂದ್ರ ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ವಾಯುಭಾರ ಕುಸಿತದ ಪರಿಣಾವಾಗಿ ರಾಜ್ಯದಲ್ಲಿ ಹಿಂಗಾರು ಕ್ರಿಯಾಶೀಲವಾಗಿದ್ದು, ಈ ವಾರಾಂತ್ಯದವರೆಗೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆಯ ಪ್ರಕಾರ ಇನ್ನೂ ಒಂದು ವಾರ ಮುಂದುವರೆಯಲಿದೆ. ಈಶಾನ್ಯ ಹಿಂಗಾರು ಮಳೆ ಅಕ್ಟೋಬರ್.16ರಂದು ಪ್ರಾರಂಭವಾಗಿದ್ದು, ಡಿಸೆಂಬರ್ ವರೆಗೂ ಮುಂದುವರೆಯಲಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವಂತ ವಾಯುಭಾರ ಕುಸಿತದ ಪರಿಣಾಮವಾಗಿ ಹಿಂಗಾರು ಚೇತರಿಕೆಯನ್ನು ಕಾಣಲಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಈ ವಾಯುಭಾರ ಕುಸಿತದ ಜೊತೆಗೆ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಅಲ್ಲದೇ ಬಂಗಾಳ ಕೊಲ್ಲಿಯ ದಕ್ಷಿಮ ಭಾಗದಲ್ಲಿ ಮತ್ತೊಂದು ವಾಯುಭಾರ ಕುಸಿತವಾಗಲಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಅಕ್ಟೋಬರ್.26ರವರೆಗೂ ಉತ್ತಮ ಮಳೆಯ ನಿರೀಕ್ಷೆಯಿದೆ…

Read More

ಬೆಂಗಳೂರು: ಆರ್ ಎಸ್ ಎಸ್ ತನ್ನ ಪಾಡಿಗೆ ತಾನು ಕೆಲಸ ಮಾಡಿಕೊಂಡು ಹೋಗುತ್ತಿದ್ದರು. ಅದರಿಂದ ಯಾವುದೇ ಸಮಸ್ಯೆಗಳು ಆಗುತ್ತಿರಲಿಲ್ಲ. ಆದರೇ ಬಿಜೆಪಿ ಪುಡಾರಿಗಳು ಚೆಡ್ಡಿ ಹಾಕಲು ಶುರುವಾದ ಮೇಲೆ ಸಮಸ್ಯೆಗಳು ಹೆಚ್ಚಾಗಿವೆ. ಈ ವಿಷಯವಾಗಿ ಆರ್ ಎಸ್ ಎಸ್ ನವರೇ ಬಿಜೆಪಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾಗಿ ಸಾಗರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ, ದೀಪಾವಳಿ ಹಬ್ಬದ ಶುಭಾಶಯ ಕೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆರ್ ಎಸ್ ಎಸ್ ನಿಂದ ಯಾವುದೇ ಸಮಸ್ಯೆಗಳಾಗುತ್ತಿರಲಿಲ್ಲ. ಬಿಜೆಪಿ ಪುಡಾರಿಗಳು ಗಣವೇಷ ಹಾಕಿದ ಬಳಿಕ ಸಂಘಕ್ಕೆ ಕೆಟ್ಟ ಹೆಸರು ಬಂದಿದೆ ಎಂದರು. ಆರ್ ಎಸ್ ಎಸ್ ಪಥ ಸಂಚಲನ ನಮ್ಮ ಸಾಗರ ತಾಲ್ಲೂಕಿನಲ್ಲೂ ನಡೆಯಿತು. ಅದಕ್ಕೆ ಅನುಮತಿಯನ್ನು ನೀಡಲಾಗಿತ್ತು. ಮಸೀದಿ ಬಳಿ ಮೆರವಣಿಗೆ ಹೋಗಬೇಕು ಎಂದಿದ್ದರು. ಅದಕ್ಕೂ ಅವಕಾಶ ಮಾಡಿಕೊಡಲಾಗಿತ್ತು ಎಂದು ಹೇಳಿದರು. ಸಂಘ ಪರಿವಾರ ಇರಲಿ ಅಥವಾ ಯಾವುದೇ ಸಂಘಟನೆ ಇರಲಿ ಅನುಮತಿ…

Read More

ಮಂಗಳೂರು: ನಗರದಲ್ಲಿ ನಡೆಯುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರ ಅಶೋಕ ಜನಮನ-2026ರ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ, ಉಸಿರುಗಟ್ಟಿ 11 ಜನರು ಅಸ್ವಸ್ಥರಾಗಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿರುವಂತ ಘಟನೆ ಪುತ್ತೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರು ತಾಲ್ಲೂಕಿನ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಶೋಕ ಜನಮನ-2025 ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಭಾರೀ ಸಂಖ್ಯೆಯ ಜನರು ಸೇರಿದ್ದರು. ಹೀಗಾಗಿ ನೂಕು ನುಗ್ಗಲು ಉಂಟಾಗಿ, ಈ ಘಟನೆ ನಡೆದಿದೆ. ಕಿಕ್ಕಿರಿದು ತುಂಬಿದ್ದಂತ ಜನಸ್ತೋಮದ ಕಾರಣದಿಂದಾಗಿ ಮಕ್ಕಳು, ಮಹಿಳೆಯರು ಸೇರಿದಂತೆ 11 ಮಂದಿ ಅಸ್ವಸ್ಥರಾಗಿದ್ದಾರೆ. ಅವರನ್ನು ಪುತ್ತೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಹಾಸನ: ಅಕ್ಟೋಬರ್.22ರ ಬುಧವಾರ ಸಂಜೆ 7 ಗಂಟೆಯವರೆಗೆ ಮಾತ್ರವೇ ಹಾಸನಾಂಬೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಆ ಬಳಿಕ ಅವಕಾಶ ಇರುವುದಿಲ್ಲ ಎಂಬುದಾಗಿ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದೀಪಾವಳಿ ವಿಶೇಷ ಪೂಜೆ ನೈವೇದ್ಯಗಳು ಹಾಗೂ ಇತರ ಅಲಂಕಾರಗಳ ಕಾರಣಕ್ಕಾಗಿ ಕೆಲವು ಸಂದರ್ಭಗಳಲ್ಲಿ ಹಾಸನಾಂಬೆ ದೇಗುಲದ ಬಾಗಿಲನ್ನು ಮುಚ್ಚಲಾಗಿದೆ ಎಂಬುದಾಗಿ ಹೇಳಿದರು. ಇಂದು ಕೂಡ ಹಾಸನಾಂಬ ದರ್ಶನ ಸುಗಮವಾಗಿ ನಡೆಯುತ್ತಿದೆ. ಪೂಜಾ ಕಾರ್ಯಕ್ರಮದ ಕಾರಣ ಸೋಮವಾರ ಹಾಗೂ ಮಂಗಳವಾರ ಮಧ್ಯಾಹ್ನ 2ರಿಂದ 3.30 ಗಂಟೆಯ ನಡುವೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ನಾಳೆಯ ಮಂಗಳವಾರದಂದು ದೀಪಾವಳಿ ವಿಶೇಷ ಪೂಜೆಯ ಕಾರಣಕ್ಕೆ ರಾತ್ರಿ 9 ಗಂಟೆಗೆ ಸಾರ್ವಜನಿಕ ದರ್ಶನದ ಬಾಗಿಲುಗಳನ್ನು ಮುಚ್ಚಲಾಗುತ್ತದೆ. ಬುಧವಾರ ಬೆಳಗಿನ ಜಾವ 5.30ಕ್ಕೆ ಪೂಜೆ ಮುಗಿಸಿ ಮತ್ತೆ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದರು. ಅ.22ರ ಬುಧವಾರದ ಸಂಜೆ 7 ಗಂಟೆಯವರೆಗೆ ಮಾತ್ರವೇ ಹಾಸನಾಂಬೆ ದೇವಿಯ ದರ್ಶನಕ್ಕೆ…

Read More

ಶಿವಮೊಗ್ಗ : ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಣ ಇಲಾಖೆಯು ರೂಪಿಸಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ವಿವಿಧ ಯೋಜನೆಗಳ ಉದ್ಘಾಟನೆಗೆ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್‌ ಮಾಹೆಯಲ್ಲಿ ಆಗಮಿಸಲಿದ್ದಾರೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ಮಾಹಿತಿ ನೀಡಿ ಮಾತನಾಡುತ್ತಿದ್ದರು. 3000ಕೋಟಿ ರೂ.ಗಳ ಅಂದಾಜು ವೆಚ್ಚದ ಕರ್ನಾಟಕ ಪಬ್ಲಿಕ್‌ ಶಾಲೆ ಮಹತ್ವದ ಯೋಜನೆಗೆ ಶಿವಮೊಗ್ಗದಲ್ಲಿಯೇ ಚಾಲನೆ ದೊರೆಯಲಿರುವುದು ವಿಶೇಷವಾಗಿದೆ. ಈ ಹಿಂದೆ ಯುವನಿಧಿ ಯೋಜನೆಯನ್ನೂ ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಉದ್ಘಾಟಿಸಿದ್ದರು ಎಂದವರು ನುಡಿದರು. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಗೊಂಡ ಶಿಕ್ಷಕರ ಸಂಖ್ಯೆ ಅತ್ಯಲ್ಪ. ಆದರೆ, ಅಧಿಕವಾಗಿರುವ ಶಿಕ್ಷಕರ ಕೊರತೆಯನ್ನು ನೀಗಿಸಲು ಸರ್ಕಾರವು ದಿಟ್ಟ ಹೆಜ್ಜೆ ಇರಿಸಿದೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸುವ ಸಂಬಂಧ ಖಾಲಿ ಇರುವ 13,000…

Read More

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲೇ ಈಗ ಮರಣ ನೋಂದಣಿಗೆ ಅವಕಾಶ ನೀಡಲಾಗಿದೆ. ಜನನ-ಮರಣ ನೋಂದಣಿಗೆ ಅವಕಾಶ ನೀಡಲಾಗಿದ್ದು, ಅಲ್ಲಿಯೇ ಪ್ರಮಾಣಪತ್ರಗಳನ್ನು ಪಡೆಯಬಹುದಾಗಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಹಿತಿ ಹಂಚಿಕೊಂಡಿದ್ದು, ನಿಮ್ಮ ಗ್ರಾಮ ಪಂಚಾಯ್ತಿಯಲ್ಲೇ ಈಗ ಮರಣ ನೋಂದಣಿ ಸಾಧ್ಯವಿದೆ. ಮೊದಲ ಪ್ರಮಾಣ ಪತ್ರ ಉಚಿತವಾಗಿರುತ್ತದೆ ಎಂದಿದೆ. ನಿಮಗಿದು ತಿಳಿದಿರಲಿ ಜನನ, ಮರಣ, ನಿರ್ಜೀವ ಜನನಗಳನ್ನು ನಿಮ್ಮ ಗ್ರಾಮ ಪಂಚಾಯ್ತಿಯಲ್ಲೇ ನೋಂದಣಿ ಮಾಡಿಸಿ, ಮೊದಲ ಪ್ರಮಾಣ ಪತ್ರವನ್ನು ಇಚಿತವಾಗಿ ಪಡೆಯಬಹುದಾಗಿದೆ. ಈ ಮೂಲಕ ಪ್ರತಿಯೊಂದು ಜನನ, ಮರಣ ನೋಂದಣಿಯನ್ನು ಖಚಿತಪಡಿಸಿಕೊಳ್ಳಿ ಅಂತ ತಿಳಿಸಿದೆ. ಈ ದಾಖಲೆಗಳು ಕಡ್ಡಾಯ ಆಧಾರ್ ಕಾರ್ಡ್ ಪಡಿತರ ಚೀಟಿ ವಾಹನ ಚಾಲನಾ ಪರವಾನಗಿ ಚುನಾವಣಾ ಗುರುತಿನ ಚೀಟಿ ಪಾಸ್ ಪೋರ್ಟ್ ಜನನ ಪ್ರಮಾಣ ಪತ್ರ SSLC, PUC ಅಂಕಪಟ್ಟಿ ವಿದ್ಯಾರ್ಥಿ ಗುರುತಿನ ಚೀಟಿ https://kannadanewsnow.com/kannada/amazon-prime-video-snapchat-perplexity-venmo-down-worldwide-users-frustrated/ https://kannadanewsnow.com/kannada/now-gram-panchayat-property-tax-payment-is-even-simpler-pay-through-the-upi-app-while-sitting-like-this/

Read More

ನವದೆಹಲಿ:  ಸೋಮವಾರದಂದು ಪ್ರಮುಖ ಆನ್‌ಲೈನ್ ಸ್ಥಗಿತವು ಅಮೆಜಾನ್ ವೆಬ್ ಸರ್ವೀಸಸ್ (AWS), Amazon.com, ಪ್ರೈಮ್ ವಿಡಿಯೋ, ಅಲೆಕ್ಸಾ, ಸ್ನ್ಯಾಪ್‌ಚಾಟ್, ರಾಬಿನ್‌ಹುಡ್, ಪರ್ಪ್ಲೆಕ್ಸಿಟಿ ಮತ್ತು ಪೇಪಾಲ್‌ನ ವೆನ್ಮೋ ಸೇರಿದಂತೆ ಹಲವಾರು ಪ್ರಮುಖ ಪ್ಲಾಟ್‌ಫಾರ್ಮ್‌ಗಳನ್ನು ಅಡ್ಡಿಪಡಿಸಿತು ಎಂದು ಔಟೇಜ್ ಟ್ರ್ಯಾಕರ್ ಡೌನ್‌ಡೆಕ್ಟರ್‌ನ ಡೇಟಾ ತಿಳಿಸಿದೆ. ಜಾಗತಿಕ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರಮುಖ ಸ್ಥಗಿತ ವ್ಯಾಪಕ ಅಡಚಣೆಯು ಬಳಕೆದಾರರಿಗೆ ಬಹು ಪ್ರದೇಶಗಳಲ್ಲಿ ಪ್ರಮುಖ ಸೇವೆಗಳನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ, ಆರಂಭಿಕ ಸೂಚನೆಗಳು AWS ನಿಂದ ಹುಟ್ಟಿಕೊಂಡ ಸಮಸ್ಯೆಯನ್ನು ಸೂಚಿಸುತ್ತವೆ. ಪರ್ಪ್ಲೆಕ್ಸಿಟಿಯ ಮುಖ್ಯ ಕಾರ್ಯನಿರ್ವಾಹಕರು ಅಮೆಜಾನ್‌ನ ಕ್ಲೌಡ್ ಮೂಲಸೌಕರ್ಯದಲ್ಲಿನ ಸಮಸ್ಯೆಗಳಿಂದ ಸ್ಥಗಿತ ಉಂಟಾಗಿದೆ ಎಂದು ದೃಢಪಡಿಸಿದರು. ವಿಶ್ವದ ಅತಿದೊಡ್ಡ ಕ್ಲೌಡ್ ಕಂಪ್ಯೂಟಿಂಗ್ ಪೂರೈಕೆದಾರರಲ್ಲಿ ಒಬ್ಬರಾಗಿ, AWS ಅಪಾರ ಸಂಖ್ಯೆಯ ಡಿಜಿಟಲ್ ಸೇವೆಗಳನ್ನು ಬೆಂಬಲಿಸುತ್ತದೆ, ಅಂದರೆ ಒಂದೇ ತಾಂತ್ರಿಕ ವೈಫಲ್ಯವು ದೂರಗಾಮಿ ಪರಿಣಾಮಗಳನ್ನು ಬೀರಬಹುದು. “ಪರ್ಪೆಕ್ಸಿಟಿ ಇದೀಗ ಕಡಿಮೆಯಾಗಿದೆ. ಮೂಲ ಕಾರಣ ಎಡಬ್ಲ್ಯೂಎಸ್ ಸಮಸ್ಯೆ. ನಾವು ಅದನ್ನು ಪರಿಹರಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ಪರ್ಪೆಕ್ಸಿಟಿಯ ಮುಖ್ಯ ಕಾರ್ಯನಿರ್ವಾಹಕ ಅರವಿಂದ್ ಶ್ರೀನಿವಾಸ್ ಅವರು ಎಕ್ಸ್‌ನಲ್ಲಿ…

Read More

ಬೆಂಗಳೂರು: ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಸ್ತಿ ತೆರಿಗೆ ಪಾವತಿಗಾಗಿ ಈ ಮೊದಲು ಬಾಪೂಜಿ ಸೇವಾ ಕೇಂದ್ರಗಳಿಗೆ ತೆರಳಿ ಕ್ಯೂ ನಿಂತು ಪೇ ಮಾಡಬೇಕಿತ್ತು. ಆದರೇ ಈಗ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿ ಮತ್ತಷ್ಟು ಸರಳವಾಗಿದೆ. ನೀವು ಕುಳಿತಲ್ಲೇ ಆನ್ ಲೈನ್ ಮೂಲಕ ಪಾವತಿಸಬಹುದಾಗಿದೆ. ಹೌದು.. ಸಾರ್ವಜನಿಕರು ಇನ್ಮುಂದೆ ತಮ್ಮ ಮೊಬೈಲ್ ನಲ್ಲೇ ಪೋನ್ ಪೇ, ಗೂಗಲ್ ಪೇ, ಬೀಮ್ ಅಪ್ಲಿಕೇಷನ್, ಪೇಟಿಎಂ ಸೇರಿದಂತೆ ಇತರೆ ಮೊಬೈಲ್ ಅಪ್ಲಿಕೇಷನ್ ಮೂಲಕ ಆಸ್ತಿ ತೆರಿಗೆಯನ್ನು ಪಾವತಿಸಬಹುದಾಗಿದೆ. ಬಹುತೇಕರು ಯುಪಿಐ ಪಾವತಿ ಬಳಕೆಯನ್ನು ಮಾಡುತ್ತಲೇ ಇರ್ತೀರಿ. ನೀವು ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿಗಾಗಿ ಈಗ ಕಷ್ಟ ಪಡುವ ಅಗತ್ಯವಿಲ್ಲ. ಕ್ಯೂ ನಿಂತು ಆಸ್ತಿ ತೆರಿಗೆ ಪಾವತಿಸೋ ಅಗತ್ಯನೂ ಇಲ್ಲ. ಕೇವಲ ಆನ್ ಲೈನ್ ನಲ್ಲೇ ನಿಮ್ಮ ಆಸ್ತಿ ತೆರಿಗೆಯ ನಂಬರ್ ದಾಖಲಿಸಿ, ಎಲೆಕ್ಟ್ರಿಕ್ ಸಿಟಿ ಬಿಲ್ ಪಾವತಿ ಮಾಡಿದಂತೆಯೇ ಮಾಡಬಹುದಾಗಿದೆ. ಈ ವಿಧಾನ ಅನುಸರಿಸಿ, ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿಸಿ ನೀವು ಇದಕ್ಕಾಗಿ…

Read More