Subscribe to Updates
Get the latest creative news from FooBar about art, design and business.
Author: kannadanewsnow09
ಬ್ಯಾಂಕಾಕ್: ಇಂದು ಮ್ಯಾನ್ಮಾರ್ ನಲ್ಲಿ ಭಾರೀ ಭೂಕಂಪನವೇ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದ್ದು, ಇದರಿಂದ 43 ಕಾರ್ಮಿಕರು ನಾಪತ್ತೆಯಾಗಿದ್ದರೇ, ಹಲವೆಡೆ ಗಗನಚುಂಬಿ ಕಟ್ಟಡಗಳು ನೆಲಸಮಗೊಂಡಿದ್ದಾವೆ. ಇಂದು ಬೆಳಗ್ಗೆ 11.50ರ ಸುಮಾರಿಗೆ ಮ್ಯಾನ್ಮಾರ್ ನಲ್ಲಿ 7.7 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದೆ. ಅಲ್ಲದೇ ಮತ್ತೊಂದು ಬಾರಿ ಮಧ್ಯಾಹ್ನ 12.50ರ ಸುಮಾರಿಗೆ 6.8 ತೀವ್ರತೆಯಲ್ಲಿ ಭೂಕಂಪನ ಉಂಟಾದ ಪರಿಣಾಮ ಹಲವು ಕಟ್ಟಡಗಳು ನೆಲಸಮಗೊಂಡಿದ್ದಾವೆ. https://twitter.com/Amazing_Yunnan/status/1905533040560112031 ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರದ ಮಾಹಿತಿಯಂತೆ ಸಾಗಯಿಂಗ್ ನಗರದ ವಾಯುವ್ಯದ ಭೂಮಿಯ 10 ಕಿಲೋಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ. ಈ ಸದ್ಯಕ್ಕೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಭೂಕಂಪನದ ತೀವ್ರತೆಯಿಂದ ಕಟ್ಟಡಗಳು ಅಲುಗಾಡಿದ್ದರೇ, ಕೆಲವೆಡೆ ಮುಗಿಲೆತ್ತರದ ಕಟ್ಟಡಗಳು ಕ್ಷಣ ಮಾತ್ರದಲ್ಲಿ ನೆಲಕ್ಕೆ ಕುಸಿತಗೊಂಡಿದ್ದಾವೆ. ಈ ಎಲ್ಲಾ ದೃಶ್ಯಗಳು ಈಗ ವೈರಲ್ ಆಗಿದ್ದಾವೆ. https://twitter.com/pulse_bangla/status/1905522625243467828 https://kannadanewsnow.com/kannada/breaking-violation-of-public-property-act-fir-registered-against-former-delhi-cm-arvind-kejriwal/ https://kannadanewsnow.com/kannada/breaking-setback-for-h-d-kumaraswamy-in-the-supreme-court-petition-filed-to-stay-kethamaranhalli-encroachment-eviction-dismissed/
ಬೆಂಗಳೂರು: ಇಂದು ಮಾಜಿ ಶಾಸಕ ಐವಾನ್ ನಿಗ್ಲಿ ಕತೆ, ನಿರ್ಮಾಣದ ಸೆಪ್ಟೆಂಬರ್ 13 ಚಿತ್ರವು ಬೆಂಗಳೂರಲ್ಲಿ ತೆರೆ ಕಾಣಲಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಸಪ್ನ ಚಿತ್ರಮಂದಿರಲ್ಲಿ ಪ್ರದರ್ಶನವಾಗಲಿದೆ. ಡಾ.ರಾಜ ಬಾಲಕೃಷ್ಣ ಅವರ ನಿರ್ದೇಶನ, ಡಿಓಪಿ, ಸಂಕಲನ ಹೊಂದಿರುವಂತ ಸೆಪ್ಟೆಂಬರ್ 13 ಚಿತ್ರ ಬೆಂಗಳೂರಿನ ಸಪ್ನ ಚಿತ್ರಮಂದಿರಲ್ಲಿ ಪ್ರದರ್ಶನ ಕಾಣಲಿದೆ. ಸೆಪ್ಟೆಂಬರ್ 13 ಚಿತ್ರವು ದಾದಿಯರ ಕೆಲಸದ ಮಹತ್ವವನ್ನು ಎತ್ತಿ ತೋರುವಂತ ಮೊದಲ ಚಿತ್ರವಾಗಿದೆ. ಈ ಚಿತ್ರದ ಕತೆ, ನಿರ್ಮಾಣವು ಮಾಜಿ ಶಾಸಕ ಐವಾನ್ ನಿಗ್ಲಿ ಅವರದ್ದಾಗಿದೆ. ತಾರಾಗಣದಲ್ಲಿ ಜೈ ಜಗದೀಶ್, ವಿನಯ ಪ್ರಸಾದ್, ಸ್ಪಂದಿಗಂ ಜಾರ್ಜ್, ಯಮುನ ಶ್ರೀನಿಧಿ, ಸತ್ಯಾರಾಂ ದಾಸ್, ನಗೇಶ್ ಮೈಯ ಅವರನ್ನು ಒಳಗೊಂಡಿದೆ. ವಿಶೇಷ ಪಾತ್ರದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಕೂಡ ನಟಿಸಿದ್ದಾರೆ. ಸುಮಾರು 2 ಗಂಟೆ 20 ನಿಮಿಷ ಹೊಂದಿರುವಂತ ಈ ಚಿತ್ರವು ಯು ಪ್ರಮಾಣಪತ್ರವನ್ನು ಸೆನ್ಸಾರ್ ಬೋರ್ಡ್ ನಿಂದ ಪಡೆದಿದೆ. ಇಂದಿನಿಂದ ಸೆಪ್ಟೆಂಬರ್ 13 ಚಿತ್ರವು ಬೆಂಗಳೂರಿನ ಸಪ್ನ ಚಿತ್ರಮಂದಿರಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಹೈನೋದ್ಯಮಕ್ಕೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ರೈತರ ಆರ್ಥಿಕ ಸದೃಢತೆಗಾಗಿ ಹಾಲು ಉತ್ಪಾದನೆ ಮತ್ತು ಸಂಸ್ಕರಣಾ ವೆಚ್ಚಗಳನ್ನು ಪರಿಗಣಿಸಿ ನಂದಿನಿ ಹಾಲು ಮತ್ತು ಮೊಸರಿನ ದರ ಪರಿಷ್ಕರಣೆ ಮಾಡಲಾಗಿದೆ ಎಂಬುದಾಗಿ ಸರ್ಕಾರ ಸ್ಪಷ್ಟ ಪಡಿಸಿದೆ. ಮುಂಬರುವ ಏಪ್ರಿಲ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರವು ₹4 ಹೆಚ್ಚಳವಾಗಲಿದ್ದು, ಇಲ್ಲಿ ಏರಿಕೆಯಾಗುವ ದರದ ಲಾಭವು ರೈತರನ್ನು ತಲುಪಲಿದೆ. ದರ ಏರಿಕೆಯ ನಂತರವೂ ಒಂದು ಲೀಟರ್ ಹಾಲಿನ ಬೆಲೆ ₹46 ಆಗಲಿದ್ದು, ಇದು ಬೇರೆಲ್ಲಾ ರಾಜ್ಯಗಳಿಗಿಂತಲೂ ಕಡಿಮೆಯಿರಲಿದೆ ಎಂದಿದೆ. ನಾಡಿನ ಲಕ್ಷಾಂತರ ಹಾಲು ಉತ್ಪಾದಕರ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಬಲ ತುಂಬುವ ಏಕೈಕ ಉದ್ದೇಶದ ಈ ಪ್ರಯತ್ನಕ್ಕೆ ಸಾರ್ವಜನಿಕರು ಬೆಂಬಲವಾಗಿ ನಿಲ್ಲುತ್ತೀರೆಂಬ ವಿಶ್ವಾಸ ನಮಗಿದೆ ಎಂದು ತಿಳಿಸಿದೆ. https://twitter.com/KarnatakaVarthe/status/1905271186583691733 ಕರ್ನಾಟಕ ಹಾಲು ಮಹಾಮಂಡಳ (ಕೆ.ಎಂ.ಎಫ್) ಕಳೆದ ಐದು ದಶಕಗಳಿಂದ ರಾಜ್ಯದ ಹಾಲು ಉತ್ಪಾದಕರ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ರೈತರ…
ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ರಾಷ್ಟ್ರಮಟ್ಟಕ್ಕೆ ಹೋಲಿಸಿದರೇ, ಅತ್ಯಂತ ಕಡಿಮೆ ಇದೆ ಎಂಬುದಾಗಿ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಮೂಲಕ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಹೆಚ್ಚಿಸಿರುವಂತ ಪ್ರತಿ ಲೀಟರ್ ನಂದಿನಿ ಹಾಲಿನ ದರ ರೂ.4 ಅನ್ನು ಸಮರ್ಥಿಸಿಕೊಂಡಿದೆ. ಈ ಬಗ್ಗೆ ಕರ್ನಾಟಕ ಹಾಲು ಮಹಾಮಂಡಲ(KMF) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಹಾಲು ಮಹಾಮಂಡಳ (ಕೆ.ಎಂ.ಎಫ್) ಕಳೆದ ಐದು ದಶಕಗಳಿಂದ ರಾಜ್ಯದ ಹಾಲು ಉತ್ಪಾದಕರ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ರೈತರ ಆರ್ಥಿಕ ಸದೃಡತೆಗಾಗಿ ಕೆಲಸ ಮಾಡುತ್ತಿದೆ. ಕೆ.ಎಂ.ಎಫ್ನ ಸದಸ್ಯ ಒಕ್ಕೂಟಗಳು ಹಾಲು ಉತ್ಪಾದಕರಿಂದ ಹಾಲು ಖರೀದಿಸಿ, ಸಂಸ್ಕರಿಸಿ, ನಂದಿನಿ ಬ್ರಾಂಡ್ ಅಡಿಯಲ್ಲಿ ವಿವಿಧ ಬಗೆಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಒದಗಿಸುತ್ತಿದೆ ಎಂದಿದೆ. ಪ್ರಸ್ತುತ, ರಾಜ್ಯದ 26.84 ಲಕ್ಷ ಹೈನುಗಾರ ರೈತರ ಪೈಕಿ ಸರಾಸರಿ 8.90 ಲಕ್ಷ ರೈತರು – ಪ್ರತಿ ದಿನ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಪೂರೈಸುತ್ತಿದ್ದಾರೆ. ದೇಶದ…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಈದ್ ಕಿಟ್ ನೀಡುತ್ತಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆ. ಆದರೇ ಕಾಂಗ್ರೆಸ್ ಕೊಟ್ಟಿದ್ದರೇ ಬಿಜೆಪಿಗರು ಇದು ತುಷ್ಠೀಕರಣ ರಾಜಕಾರಣ ಹಾಗೆ ಹೀಗೆ ಅಂತ ಹೇಳ್ತಿದ್ದರು. ಬಿಜೆಪಿಗರೇ ಇದು ಓಲೈಕೆ ಅಲ್ಲವೇ? ಬೇರೆ ಏನಾದರೂ ಹೆಸರಿದ್ಯಾ ಅಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮೋದಿ ಜಿ ಅವರು 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಈದ್ ಕಿಟ್ ನೀಡಲು ಘೋಷಿಸಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆ. ಪವಿತ್ರ ರಂಜಾನ್ ಸಮಯದಲ್ಲಿ ಮುಸ್ಲಿಮರಿಗೆ ಈದ್ ಕಿಟ್ ಕೊಡುತ್ತಿರುವುದಕ್ಕೆ ನಮ್ಮ ಆಕ್ಷೇಪವಿಲ್ಲ, ಆದರೆ ಕಾಂಗ್ರೆಸ್ ನವರು ಇದನ್ನು ಮಾಡಿದ್ದರೆ, ತುಷ್ಠೀಕರಣ ರಾಜಕಾರಣ, ಒಂದು ಸಮುದಾಯವನ್ನು ಮಾತ್ರ ಓಲೈಸುವ ರಾಜಕಾರಣವೆಂದು ಹೀಗೆಳೆಯುವ ಬಿ.ಜೆ.ಪಿ ಅವರನ್ನು ಕೇಳುತ್ತಿದ್ದೇವೆ, ಇದು ಓಲೈಕೆ ಅಲ್ಲವೇ ?? ಇದಕ್ಕೆ ಬೇರೆ ಏನಾದರೂ ಹೆಸರಿದೆಯೇ?? ಎಂದು ಕೇಳಿದ್ದಾರೆ. ದೇಶದ್ಯಾಂತ ಉಗಾದಿ ಹಬ್ಬವನ್ನು ರಂಜಾನ್ ಗೆ ಒಂದು…
ನವದೆಹಲಿ: ರಾಜ್ಯ ಸರ್ಕಾರ ರೈತರ ಹೆಸರಿನಲ್ಲಿ ವರ್ಷದಲ್ಲಿ ಮೂರು ಬಾರಿ ಹಾಲಿನ ದರ ಹೆಚ್ಚಳ ಮಾಡಿ ಗ್ರಾಹಕರ ಮೇಲೆ ಬರೆ ಎಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿವಾಳಿಯಾಗಿದೆ ಎನ್ನುವುದು ಎಲ್ಲಿರಿಗೂ ಗೊತ್ತಿರುವ ವಿಚಾರ ಇಂದು ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಒಂದೇ ವರ್ಷದಲ್ಲಿ ಮೂರು ಬಾರಿ ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಒಂದು ವರ್ಷದಲ್ಲಿ ಎರಡು ಬಾರಿ ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ಈಗ ಕೆಇಆರ್ಸಿ ಮೇಲೆ ಒತ್ತಡ ಹೇರುತ್ತಿದ್ದಾರೆ. ಇನ್ನೊಂದು ಡಿಜಿಟಲ್ ಮೀಟರ್ ಅಳವಡಿಕೆಯ ಹಗರಣ ಮಾಡಿದ್ದಾರೆ. ಪ್ರತಿ ಮೀಟರ್ ನಿರ್ವಹಣೆಗೆ 5 ಸಾವಿರಕ್ಕಿಂತಲೂ ಹೆಚ್ಚಳ ಹೊರೆ ಹಾಕಿದ್ದಾರೆ. ಇದರಿಂದ ಪ್ರತಿಯೊಂದು ಕುಟುಂಬದ ನಿರ್ವಹಣಾ ವೆಚ್ಚ ಹೆಚ್ಚಾಗಿದೆ ಎಂದರು. ಕಳೆದ ವರ್ಷ ಬಜೆಟ್ ಹೊರತಾಗಿಯೂ ಸುಮಾರು 40 ಸಾವಿರ ಕೋಟಿ ರೂ. ಹೆಚ್ಚಿಗೆ ತೆರಿಗೆ ಹಾಕಿದ್ದರು. ತಮ್ಮ ಸರ್ಕಾರದ ಆರ್ಥಿಕ ದಿವಾಳಿತನ ಮರೆಮಾಚಲು…
ಬೆಂಗಳೂರು: ನಾಳೆ ಮಾಜಿ ಶಾಸಕ ಐವಾನ್ ನಿಗ್ಲಿ ಕತೆ, ನಿರ್ಮಾಣದ ಸೆಪ್ಟೆಂಬರ್ 13 ಚಿತ್ರವು ಬೆಂಗಳೂರಲ್ಲಿ ತೆರೆ ಕಾಣಲಿದೆ. ನಾಳೆ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಸಪ್ನ ಚಿತ್ರಮಂದಿರಲ್ಲಿ ಪ್ರದರ್ಶನವಾಗಲಿದೆ. ಡಾ.ರಾಜ ಬಾಲಕೃಷ್ಣ ಅವರ ನಿರ್ದೇಶನ, ಡಿಓಪಿ, ಸಂಕಲನ ಹೊಂದಿರುವಂತ ಸೆಪ್ಟೆಂಬರ್ 13 ಚಿತ್ರ ಬೆಂಗಳೂರಿನ ಸಪ್ನ ಚಿತ್ರಮಂದಿರಲ್ಲಿ ಪ್ರದರ್ಶನ ಕಾಣಲಿದೆ. ಸೆಪ್ಟೆಂಬರ್ 13 ಚಿತ್ರವು ದಾದಿಯರ ಕೆಲಸದ ಮಹತ್ವವನ್ನು ಎತ್ತಿ ತೋರುವಂತ ಮೊದಲ ಚಿತ್ರವಾಗಿದೆ. ಈ ಚಿತ್ರದ ಕತೆ, ನಿರ್ಮಾಣವು ಮಾಜಿ ಶಾಸಕ ಐವಾನ್ ನಿಗ್ಲಿ ಅವರದ್ದಾಗಿದೆ. ತಾರಾಗಣದಲ್ಲಿ ಜೈ ಜಗದೀಶ್, ವಿನಯ ಪ್ರಸಾದ್, ಸ್ಪಂದಿಗಂ ಜಾರ್ಜ್, ಯಮುನ ಶ್ರೀನಿಧಿ, ಸತ್ಯಾರಾಂ ದಾಸ್, ನಗೇಶ್ ಮೈಯ ಅವರನ್ನು ಒಳಗೊಂಡಿದೆ. ವಿಶೇಷ ಪಾತ್ರದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಕೂಡ ನಟಿಸಿದ್ದಾರೆ. ಸುಮಾರು 2 ಗಂಟೆ 20 ನಿಮಿಷ ಹೊಂದಿರುವಂತ ಈ ಚಿತ್ರವು ಯು ಪ್ರಮಾಣಪತ್ರವನ್ನು ಸೆನ್ಸಾರ್ ಬೋರ್ಡ್ ನಿಂದ ಪಡೆದಿದೆ. ನಾಳೆಯಿಂದ ಸೆಪ್ಟೆಂಬರ್ 13 ಬೆಂಗಳೂರಿನ ಸಪ್ನ ಚಿತ್ರಮಂದಿರಲ್ಲಿ ಮಧ್ಯಾಹ್ನ…
ಬೆಂಗಳೂರು: ಭಾರತೀಯ ಸೇನೆ ವತಿಯಿಂದ ಅಗ್ನಿವೀರ್ ಯೋಜನೆಯಡಿ ಭಾರತೀಯ ಸೇನೆಯಲ್ಲಿ ಸೇರಲು ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, 17 ವರ್ಷ 6 ತಿಂಗಳು ತುಂಬಿದ ಹಾಗೂ 21 ವರ್ಷದೊಳಗಿನ ವಯೋಮಿತಿಯ ಅಭ್ಯರ್ಥಿಗಳು ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದು. 8ನೇ ತರಗತಿಯಿಂದ ದ್ವಿತೀಯ ಪಿಯುಸಿ, ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದ್ದು, ನೇಮಕಾತಿ ರ್ಯಾಲಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ಹುದ್ದೆ ವಿವರ: ಅಗ್ನಿವೀರ್ (ಸಾಮಾನ್ಯ ಕರ್ತವ್ಯ) ಎಲ್ಲಾ ಶಸ್ತಾçಸ್ತçಗಳು, ಅಗ್ನಿವೀರ್ (ಸಾಮಾನ್ಯ ಕರ್ತವ್ಯ) (ಮಹಿಳಾ ಮಿಲಿಟರಿ ಪೊಲೀಸ್), ಅಗ್ನಿವೀರ್ (ತಾಂತ್ರಿಕ) (ಎಲ್ಲಾ ಶಸ್ತಾçಸ್ತçಗಳು), ಅಗ್ನಿವೀರ್ ಆಫೀಸ್ ಅಸಿಸ್ಟೆಂಟ್ (ಗುಮಾಸ್ತ)/ಸ್ಟೋರ್ ಕೀಪರ್ ಟೆಕ್ನಿಕಲ್ (ಎಲ್ಲಾ ಆರ್ಮ್ಸ್), ಅಗ್ನಿವೀರ್ ಟ್ರೇಡ್ಸ್ಮ್ಯಾನ್ 10 ನೇ ಪಾಸ್(ಎಲ್ಲಾ ಆರ್ಮ್ಸ್), ಅಗ್ನಿವೀರ್ ಟ್ರೇಡ್ಸ್ಮ್ಯಾನ್ 8 ನೇ ಪಾಸ್(ಎಲ್ಲಾ ಆರ್ಮ್ಸ್). ಮಹಿಳಾ ಸಂಸದರಿಗೆ ಮಾತ್ರ: ಸರಂಜಾಮುಗಳಲ್ಲಿ ಮರಣ ಹೊಂದಿದ ರಕ್ಷಣಾ ಸಿಬ್ಬಂದಿಯ ವಿಧವೆಯರಿಗೆ ಸಂಬಂಧಿಸಿದಂತೆ ಗರಿಷ್ಠ ವಯಸ್ಸಿನ ಮಿತಿಯನ್ನು 30 ವರ್ಷಗಳವರೆಗೆ ಸಡಿಲಗೊಳಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.08392-294230 ಅಥವಾ ಜಿಲ್ಲಾ…
ಮಡಿಕೇರಿ: 2024-25 ನೇ ಸಾಲಿಗೆ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾ|., ಕೊಡಗು ಜಿಲ್ಲೆ, ಇಲ್ಲಿಗೆ ಸ್ಟಾಫ್ ನರ್ಸ್(01 ಹುದ್ದೆ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. (ವಸತಿ ಸೌಲಭ್ಯ ಒದಗಿಸಲಾಗುವುದು). ವೇತನ ಶ್ರೇಣಿ ರೂ.22,662, ವಿದ್ಯಾರ್ಹತೆ ಜಿ.ಎನ್.ಎಂ(ಜೆಎನ್ಎಂ), ಬಿ.ಎಸ್ಸಿ (ನರ್ಸಿಂಗ್) ಆಗಿರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂರವಾಣಿ ಸಂಖ್ಯೆ: 08272–225528, 9686138688, 9632404314(ವಾಟ್ಸ್ಆಫ್) ಹಾಗೂ ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ,ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ದೂರವಾಣಿ ಸಂಖ್ಯೆ: 7676473767 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ. https://kannadanewsnow.com/kannada/illegal-felling-of-trees-in-the-state-will-attract-penalties-punishment-increased/ https://kannadanewsnow.com/kannada/applications-invited-for-free-coaching-for-ias-and-kas-exams/
ಬೆಂಗಳೂರು : ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, “ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ” ಎಂದು ಘನ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿರುವುದನ್ನು ಉಲ್ಲೇಖಿಸಿದ್ದಾರೆ. ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿರುವುದನ್ನೂ ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿರುವ ಸಚಿವರು, ಅಕ್ರಮ ಮರಗಳ ಕಡಿತಲೆಗೆ ವಿಧಿಸುವ ದಂಡದ ಪ್ರಮಾಣ ಹೆಚ್ಚಳದ ಅಗತ್ಯ ಪ್ರತಿಪಾದಿಸಿದ್ದಾರೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ,…