Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಕನ್ನಡದ ಕಿರುತೆರೆಯ ಜನಪ್ರಿಯ ರಿಯಾಲಿಟ ಶೋ ಬಿಗ್ ಬಾಸ್ ಸೀಸನ್ 12 ಗ್ರ್ಯಾಂಡ್ ಫಿನಾಲೆಯಲ್ಲಿ ಗಿಲ್ಲಿ ನಟ ವಿನ್ನರ್ ಆಗಿದ್ದಾರೆ. ಕೋಟ್ಯಂತ ಅಭಿಮಾನಿಗಳ ನಿರೀಕ್ಷೆಯಂತೆ ಕೊನೆಗೊ ಗಿಲ್ಲಿ ನಟ ಟ್ರೋಫಿಯನ್ನ ತನ್ನದಾಗಿಸಿಕೊಂಡಿದ್ದಾನೆ. ತನ್ನ ಜಯವನ್ನು ಅಭಿಮಾನಿಗಳಿಗೆ ಅರ್ಪಿಸಿದ ಗಿಲ್ಲಿ ನಟ ನನ್ನ ಮೇಲೆ ನಂಬಿಕೆ ಇಟ್ಟು ಬೆಂಬಲಿಸಿದ ಎಲ್ಲರಿಗೂ ಈ ಟ್ರೋಫಿ ಅರ್ಪಣೆ ಎಂದಿದ್ದಾರೆ. ಈ ಮೂಲಕ ಬಿಗ್ ಬಾಸ್ ಇತಿಹಾಸದಲ್ಲಿ ತನ್ನ ಹೆಸರನ್ನು ಚಿನ್ನದ ಅಕ್ಷರದಲ್ಲಿ ಬರೆಯಿಸಿಕೊಂಡಿದ್ದಾರೆ.
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ Grow Care India Environment Excellence Award -2025 ರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿದೆ. ಕೆ ಎಸ್ ಆರ್ ಟಿ ಸಿ ನಿಗಮದಲ್ಲಿ ಅನುಷ್ಠಾನಗೊಳಿಸಿರುವ ಪರಿಸರ ಸ್ನೇಹಿ ಉಪಕ್ರಮಗಳ ಯಶಸ್ವಿ ನಿರ್ವಹಣೆಗೆ ಸಾರಿಗೆ ಕ್ಷೇತ್ರದಲ್ಲಿ Grow Care India Environment Management ಪ್ರಶಸ್ತಿಯು Gold Category ಯಲ್ಲಿ ಲಭಿಸಿದೆ. ಪ್ರಶಸ್ತಿಯನ್ನು ದಿನಾಂಕ: 17-01-2026 ರಂದು ನವದೆಹಲಿಯ ಏರೋಸಿಟಿಯಲ್ಲಿ ನಡೆದ ಸಮಾರಂಭದಲ್ಲಿ ಭಾರತ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (NDMA)ನಿರ್ದೇಶಕಿ ಹಾಗೂ ಜಂಟಿ ಕಾರ್ಯದರ್ಶಿಯವರಾದ ಮೃಣಾಲಿನಿ ಶ್ರೀವಾಸ್ತವ, ಭಾಪೊಸೇ, ಮತ್ತು ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ದೆಹಲಿ ಕ್ಯಾಂಟೋನ್ಮೆಂಟ್ ಬೋರ್ಡ್ನ ಸದಸ್ಯರಾದ ರಾಜೇಶ್ ಗೋಯಲ್ ಅವರು ಕೆ. ವೆಂಕಟೇಶ್ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಚಿತ್ರದುರ್ಗ ವಿಭಾಗರವರಿಗೆ ಪ್ರದಾನ ಮಾಡಿದರು.
BBK Season 12: ಟೈಟಲ್ ಸನಿಹದಲ್ಲಿ ಕಾವ್ಯ ಶೈವಗೆ ತಪ್ಪಿದ ಲಕ್: ಬಿಗ್ ಬಾಸ್ ಮನೆಯಿಂದ 3ನೇ ರನ್ನರ್ಅಪ್ ಆಗಿ ಔಟ್!
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್-12ರಲ್ಲಿ ಟೈಟಲ್ ಸನಿಹದಲ್ಲೇ ಕಾವ್ಯ ಶೈವ್ ಅವರಿಗೆ ಲಕ್ ತಪ್ಪಿದೆ. 3ನೇ ರನ್ನರ್ ಅಪ್ ಆಗಿ ಕಾವ್ಯ ಶೈವ ಬಿಗ್ ಬಾಸ್ ಮನೆಯಿಂದ ಹೊರ ಬಿದ್ದಿದ್ದಾರೆ. ಹೌದು.. ರಗಡ್ ರಘು ಬೆನ್ನಲ್ಲೇ ಬಿಗ್ ಬಾಸ್ ಕನ್ನಡ-12 ರಿಯಾಲಿಟಿ ಶೋ ಕಾರ್ಯಕ್ರಮದಿಂದ ಕಾವ್ಯ ಶೈವ ಔಟ್ ಆಗಿದ್ದಾರೆ. ಬಿಗ್ ಬಾಸ್ ಕಾರ್ಯಕ್ರಮದ ಆರಂಭದಿಂದಲೂ ಗಿಲ್ಲಿ ನಟನ ಬೆಸ್ಟ್ ಫ್ರೆಂಡ್ ಆಗಿದ್ದಂತ ಕಾವ್ಯ ಶೈವ, ಇದೀಗ ಟೈಟಲ್ ವಿನ್ನಿಂಗ್ ಸನಿಹದಲ್ಲೇ ಮನೆಯಿಂದ ಹೊಬಂದಿದ್ದಾರೆ. https://kannadanewsnow.com/kannada/i-will-give-20-lakhs-if-the-ghilli-actor-wins-bigg-boss-season-12-jds-mlc-t-a-sharavana-announces/
ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್-12 ಗ್ರ್ಯಾಂಡ್ ಫಿನಾಲೆ ಆರಂಭಗೊಂಡಿದೆ. ಈ ಬಾರಿ ಗಿಲ್ಲಿ ನಟ ಗೆಲ್ಲಲಿದ್ದಾನೆ ಎನ್ನಲಾಗುತ್ತಿದೆ. ಇಂತಹ ಗಿಲ್ಲಿ ನಟ ಕನ್ನಡ ಬಿಗ್ ಬಾಸ್ ಸೀಸನ್-12 ಗೆದ್ದರೇ 20 ಲಕ್ಷ ನೀಡುವುದಾಗಿ ಎಂಎಲ್ಸಿ ಟಿ.ಎ ಶರವಣ ಘೋಷಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಗ್ ಬಾಸ್ ಸೀಸನ್-12ರಲ್ಲಿ ಭಾಗಿಯಾಗಿರುವಂತ ಗಿಲ್ಲಿ ನಟ ರೈತನ ಮಗನಾಗಿದ್ದಾನೆ. ರೈತನ ಮಗನೊಬ್ಬ ಗೆಲ್ಲ ಬೇಕು. ನನಗೆ ಗಿಲ್ಲಿ ನಟ ವಿನ್ನರ್ ಆಗುತ್ತಾನೆ ಎನ್ನುವಂತ ವಿಶ್ವಾಸವಿದೆ. ನಾನು ಕೂಡ ಪ್ರತಿ ದಿನ ಬಿಗ್ ಬಾಸ್ ಶೋ ನೋಡುವುದಾಗಿ ತಿಳಿಸಿದರು. ಬಿಗ್ ಬಾಸ್ ಸೀಸನ್-12 ಗ್ರ್ಯಾಂಡ್ ಫಿನಾಲೆ ಆರಂಭಗೊಂಡಿದೆ. ಈಗಾಗಲೇ ಟಾಪ್ 6 ಸ್ಪರ್ಧಿಗಳಲ್ಲಿ ಧನುಷ್ ಹೊರ ಬಂದಿದ್ದಾರೆ. ರಕ್ಷಿತಾ ಅಥವಾ ಅಶ್ವಿನಿ ರನ್ನರ್ ಆಗುವ ಸಾಧ್ಯತೆ ಇದೆ. ಈ ಎಲ್ಲದರ ನಡುವೆ ವಿನ್ನರ್ ಯಾರು ಆಗಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. https://kannadanewsnow.com/kannada/cm-siddaramaiah-calls-for-struggle-until-mnrega-is-reinstated-appeal-for-everyones-cooperation/
ಮೈಸೂರು :ವಿಬಿಜಿ ಗ್ರಾಮ್ ಜಿ ಕಾಯ್ದೆ ರದ್ದಾಗಿ MNREGA ಪುನ: ಸ್ಥಾಪನೆಯಾಗುವವರೆಗೆ ಮಾಡುವ ಹೋರಾಟಕ್ಕೆ ಎಲ್ಲರೂ ಸಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ ಟಿ. ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು. 2005 ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಗಳಾಗಿದ್ದಾಗ ಈ ಕಾನೂನು ಜಾರಿ ಮಾಡಿದರು. ಕೆಲಸದ ಹಕ್ಕು ಕೊಟ್ಟರು.ಅದನ್ನು ಕಿತ್ತುಹಾಕುತ್ತಿದ್ದಾರೆ. ಬಿಜೆಪಿಯವರು ಬಡವರು, ಹೆಣ್ಣುಮಕ್ಕಳು, ಕಾರ್ಮಿಕರಿಗೆ ಕೆಲಸ ಕೊಡಲು ಬಿಡುತ್ತಿಲ್ಲ. ನೀವು ಯಾವಾಗ ಕೇಳಿದರೂ ಉದ್ಯೋಗ ಕೊಡುವ ಕಾಯಿದೆಯನ್ನು ಜಾರಿ ಮಾಡಲಾಗಿತ್ತು. ಈಗ ಕೇಂದ್ರ ಸರ್ಕಾರ ಅದನ್ನು ತೀರ್ಮಾನಿಸಲಿ ದೆ. ವಿಬಿಜಿ ಗ್ರಾಮ್ ಜಿ ರದ್ದಾಗಬೇಕು. ಜನರನ್ನು ತಪ್ಪು ದಾರಿ ಎಳೆಯಲು ರಾಮ್ ಜಿ ಸೇರಿಸಿದ್ದಾರೆ. ಎಲ್ಲರೂ ಚಳುವಳಿಗೆ ತಯಾರಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು. ಕೇಂದ್ರ ಸರ್ಕಾರ ಇತೀಚೆಗೆ…
ನವದೆಹಲಿ: “ಕಾಲವೇ ಉತ್ತರ ನೀಡುತ್ತದೆ. ಒಂದೇ ವಾಕ್ಯದಲ್ಲಿ ಹೇಳುವುದಾದರೆ ಸಮಯವೇ ಪ್ರತಿಯೊಂದಕ್ಕೂ ಉತ್ತರಿಸುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಉತ್ತರಿಸಿದರು. ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೀರಿ ಎಂದು ಕೇಳಿದಾಗ, “ನಾನು ಅದನ್ನು ಏಕೆ ಬಹಿರಂಗಗೊಳಿಸಬೇಕು. ನಾವು ಇಲ್ಲಿಗೆ ಬರುವುದೇ ಸರ್ಕಾರದ ಕೆಲಸಕ್ಕೆ ಪಕ್ಷದ ಕೆಲಸಕ್ಕೆ, ನಮ್ಮ ರಾಜಕೀಯಕ್ಕೆ” ಎಂದು ಹೇಳಿದರು. ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಇದ್ದಾರೆ ಎಂದರೆ ಹೈಕಮಾಂಡ್ ಭೇಟಿ ಚರ್ಚೆ ರಾಜ್ಯದಲ್ಲಿ ನಡೆಯುತ್ತಿದೆ ಎನ್ನುವ ಬಗ್ಗೆ ಕೇಳಿದಾಗ, “ನಾವು ರಾಜಕಾರಣಿಗಳು. ರಾಜಕಾರಣಿಗಳು ಏನು ರಾಜಕಾರಣ ಮಾಡಬೇಕೋ ಅದನ್ನು ಎಲ್ಲಾ ರಾಜಕಾರಣಿಗಳು ಮಾಡುತ್ತಾರೆ. ಇದರಲ್ಲಿ ಏನೂ ತಪ್ಪಿಲ್ಲ. ನಾವುಗಳು ನಮ್ಮ ಅನುಕೂಲಕ್ಕೆ ಯಾರನ್ನು ಭೇಟಿ ಮಾಡುಬೇಕೋ ಅವರನ್ನು ಕೇಳಿರುತ್ತೇವೆ, ಭೇಟಿ ಮಾಡುತ್ತೇವೆ. ನೀವು (ಮಾಧ್ಯಮಗಳು) ಏಕೆ ಇದನ್ನು ದೊಡ್ಡದು ಮಾಡುತ್ತೀರಿ” ಎಂದರು. ನರೇಗಾ ಹೆಸರು ಬದಲಾವಣೆ ವಿರೋಧಿಸಿ ಪ್ರತಿ ಕ್ಷೇತ್ರದಲ್ಲಿ ಐದು ಕಿ.ಮೀ. ಪಾದಯಾತ್ರೆ ನರೇಗಾ…
ಬೆಂಗಳೂರು: ಬಿಗ್ ಬಾಸ್ ಸೀಸನ್-12ರ ಗ್ರ್ಯಾಂಡ್ ಫಿನಾಲೆ ಆರಂಭಗೊಂಡಿದೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಂತ ರಘು ಕೊನೆಯ ಕ್ಷಣದಲ್ಲಿ ಮನೆಯಿಂದ ಹೊರಬಂದಿದ್ದಾರೆ. ಈ ಮೂಲಕ ಗ್ರ್ಯಾಂಡ್ ಫಿನಾಲೆಯಿಂದ ರಗಡ್ ರಘು ಔಟ್ ಆಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಬಳಿಯಲ್ಲಿರುವಂತ ಬಿಗ್ ಬಾಸ್ ಮನೆಯಲ್ಲಿ ಸೀಸನ್-12ರ ಗ್ರ್ಯಾಂಡ್ ಫಿನಾಲೆ ಆರಂಭಗೊಂಡಿದೆ. ಗೆಲುವಿನ ಮೆಟ್ಟಿಲೇರಲು ಕಾತುರದಿಂದಲೇ ಕಾಯುತ್ತಿದ್ದಂತ ಟಾಪ್ 5 ಪೈಕಿ ರಗಡ್ ರಘು ಮನೆಯಿಂದ ಹೊರ ಬಂದಿದ್ದಾರೆ. ಬಿಗ್ ಬಾಸ್ ಸೀಸನ್-12ರ ಗ್ರ್ಯಾಂಡ್ ಫಿನಾಲೆಯ ಟೈಟಲ್ ವಿನ್ನಿಂಗ್ ಸನಿಹದಲ್ಲೇ ರಘು ಹೊರ ಬಂದಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ, ಅಶ್ವಿನಿ ಗೌಡ, ಕಾವ್ಯಾ ಹಾಗೂ ಗಿಲ್ಲಿ ನಟ ಉಳಿದುಕೊಂಡಿದ್ದಾರೆ. ಕೊನೆಯ ಕ್ಷಣದಲ್ಲಿ ಬಿಗ್ ಬಾಸ್ ಸೀಸನ್-12 ಕನ್ನಡದ ಗ್ರ್ಯಾಂಡ್ ಫೀನಾಲೆಯಿಂದ ಹೊರ ಬಂದಿರುವಂತ ರಗಡ್ ರಘು ಅವರು 4ನೇ ರನ್ನರ್ ಅಪ್ ಆಗಿದ್ದಾರೆ. ಹೀಗಾಗಿ ರಘುಗೆ 3.50 ಲಕ್ಷ ಬಹುಮಾನ ಸಿಕ್ಕಿದೆ. https://kannadanewsnow.com/kannada/crowd-gathers-in-front-of-bigg-boss-house-in-bidadi-police-resort-to-lathi-charge/
ಬೆಂಗಳೂರು ದಕ್ಷಿಣ: ಇಂದು ಬಿಗ್ ಬಾಸ್ ಸೀಸನ್-12 ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬಿಡದಿ ಬಳಿಯಲ್ಲಿರುವಂತ ಬಿಗ್ ಬಾಸ್ ಮನೆಯ ಮುಂದೆ ಜನಜಂಗುಳಿಯೇ ಏರ್ಪಟ್ಟಿದೆ. ಜನರನ್ನು ನಿಯಂತ್ರಿಸೋದಕ್ಕೆ ಪೊಲೀಸರಿಂದ ಲಾಠಿ ಚಾರ್ಜ್ ಕೂಡ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಬಳಿಯ ಇನೋವೇಟಿವ್ ಫಿಲಂ ಸಿಟಿಯಲ್ಲಿ ಬಿಗ್ ಬಾಸ್ ಮನೆಯ ಮುಂದೆ ನೂರಾರು ಜನರು ಸೇರಿದ್ದಾರೆ. ಗ್ರ್ಯಾಂಡ್ ಫಿನಾಲೆಯ ವಿನ್ನರ್, ರನ್ನರ್ ಘೋಷಣೆಯ ಕಾರಣದಿಂದ ಸಂಭ್ರಮಾಚರಣೆಗೆ ಭಾರೀ ಜನಸ್ತೋಮವೇ ಸೇರಿದೆ. ಬಿಡದಿಯ ಬಿಗ್ ಬಾಸ್ ಮನೆಯ ಮುಂದೆ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿರುವ ಕಾರಣ, ಅಭಿಮಾನಿಗಳ ಮಧ್ಯದಲ್ಲಿ ಗಲಾಟೆಯಾಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗಾಗಿ ಪರಿಸ್ಥಿತಿಯನ್ನು ನಿಯಂತ್ರಿಸೋದಕ್ಕೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. https://kannadanewsnow.com/kannada/state-archaeological-department-declares-13-temples-and-3-wells-in-lakkundi-as-protected-monuments/
ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿರುವಂತ 13 ದೇವಸ್ಥಾನ, ಮೂರು ಬಾವಿಗಳನ್ನು ಸಂರಕ್ಷಿತ ಸ್ಮಾರಕಗಳಾಗಿ ಪುರಾತತ್ವ ಇಲಾಖೆಯು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇಂದು ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ, ಉತ್ಖನನ ಪ್ರಗತಿ ಬಗ್ಗೆ ಸಚಿವ ಹೆಚ್.ಕೆ ಪಾಟೀಲ್ ಅವರು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಭೆಯಲ್ಲಿ ಪ್ರಜ್ವಲ್ ರಿತ್ತಿಗೆ ಸಿಕ್ಕ ನಿಧಿ ಬಗ್ಗೆಯೂ ವಿಶೇಷವಾಗಿ ಚರ್ಚೆ ನಡೆಸಲಾಯಿತು. ಆ ಕುಟುಂಬಕ್ಕೆ ಏನೆಲ್ಲಾ ಸಹಾಯ ಮಾಡಬೇಕೆಂದು ಚರ್ಚೆ ನಡೆಸಲಾಗಿದೆ. ಲಕ್ಕುಂಡಿಯಲ್ಲಿನ ಬಯಲು ವಸ್ತು ಸಂಗ್ರಹಾಲಯ ಅಭಿವೃದ್ಧಿಗೆ 165 ಲಕ್ಷ ಬಿಡುಗಡೆ ಮಾಡಲಾಗಿದೆ. ಮೂರು ಎಕರೆ ಭೂಮಿ ಪಡೆದುಕೊಳ್ಳಲು ನಿರ್ಧಾರ ಮಾಡಲಾಗಿದೆ ಎಂಬುದಾಗಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು. 13 ದೇವಸ್ಥಾನ, 3 ಬಾವಿ ಸಂರಕ್ಷಿತ ಸ್ಮಾರಕಗಳಾಗಿ ರಾಜ್ಯ ಪುರಾತತ್ವ ಇಲಾಖೆ ಘೋಷಿಸಿದೆ. ಇದೇ ಮೊದಲ ಬಾರಿಗೆ ರಾಜ್ಯ ಪುರಾತತ್ವ ಇಲಾಖೆಯಿಂದ ಮೊದಲ ಬಾರಿಗೆ ಘೋಷಣೆ ಮಾಡಿದೆ. ಈಗ ಲಕ್ಕುಂಡಿಯ 8 ದೇವಾಲಯಗಳು ಸಂರಕ್ಷಿತ ದೇಗುಲ ಎಂಬುದಾಗಿ ಘೋಷಿಸಲು ಮನವಿ ಮಾಡಲಾಗಿದೆ. ಈ ಬಗ್ಗೆ ರಾಜ್ಯ…
ಬೆಂಗಳೂರು: ನಿನ್ನೆ 25 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಅಬಕಾರಿ ಡಿಸಿ ಜಗದೀಶ್ ಬಿದ್ದಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರವು ಆಂತರಿಕ ತನಿಖೆಗೆ ಆದೇಶಿಸಿದೆ. ಹೌದು.. ಅಬಕಾರಿ ಇಲಾಖೆಯ ವೆಂಕಟೇಶ್ ಅವರು ಆಂತರೀಕ ತನಿಖೆಗೆ ಅಬಕಾರಿ ಡಿಸಿ ಜಗದೀಶ್ ಲಂಚ ಸ್ವೀಕಾರದ ವೇಳೆಯಲ್ಲೇ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣವನ್ನು ವಹಿಸಿದ್ದಾರೆ. ತನಿಖೆಯ ನಂತ್ರ ಇಲಾಖೆಗೆ ವರದಿಯನ್ನು ನೀಡಲು ಸೂಚಿಸಿದ್ದಾರೆ. ವಿಪಕ್ಷಗಳು ಅಬಕಾರಿ ಸಚಿವರ ಮೇಲೆ ಮುಗಿಬೀಳುತ್ತಿರುವ ಹಿನ್ನೆಲೆ ಆಂತರಿಕ ತನಿಖೆಗೆ ಸೂಚಿಸಿದ್ದು, ಆಂತರಿಕ ತನಿಖೆ ಮಾಡಿ ಸಚಿವರಿಗೆ ವರದಿ ಸಲ್ಲಿಕೆ ಮಾಡಲಿದ್ದಾರೆ. ಪರವಾನಗಿಯನ್ನ ಆನ್ಲೈನಲ್ಲಿ ಅಪ್ಲೈ ಮಾಡೋದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಯಾರನ್ನು ಭೇಟಿ ಮಾಡುವ ಅಗತ್ಯ ಇಲ್ಲ ಅಂತಾ ಅಬಕಾರಿ ಇಲಾಖೆಯ ವಾದವಾಗಿದೆ.. ಹಾಗಾಗಿ ಲೋಕಾಯುಕ್ತ ದಾಳಿ ಪ್ರಕರಣದ ದಾಳಿ ಬಳಿಕ ಸಂಪೂರ್ಣ ಮಾಹಿತಿ ಪಡೆಯಲು ಆಂತರಿಕ ತನಿಖೆ ಮಾಡುತ್ತಿದ್ದಾರೆ. https://kannadanewsnow.com/kannada/i-will-serve-the-state-until-my-last-breath-chief-minister-siddaramaiah/














