Subscribe to Updates
Get the latest creative news from FooBar about art, design and business.
Author: kannadanewsnow09
ಮಡಿಕೇರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆಸಕ್ತರು ಏಪ್ರಿಲ್, 02 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ. https://kannadanewsnow.com/kannada/minister-krishna-byre-gowda-fixes-deadline-for-disposal-of-pending-petitions-in-ac-courts-in-the-state/ https://kannadanewsnow.com/kannada/state-government-orders-closure-of-para-medical-institute-with-poor-infrastructure/
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ.20ಕ್ಕೆ ಎರಡು ವರ್ಷವಾಗಲಿದೆ. ಅಷ್ಟರೊಳಗೆ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯದಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದರು. ಗುರುವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ 32,787 ಪ್ರಕರಣಗಳು ಬಾಕಿ ಇದ್ದವು. ಈ ಪೈಕಿ ಶೇ.82 ರಷ್ಟು ಸರಾಸರಿಯಲ್ಲಿ 26,961 ಪ್ರಕರಣಗಳಿಗೆ ಇದೀಗ ಮುಕ್ತಿ ನೀಡಲಾಗಿದೆ. ಇದೇ ಸಮಯದಲ್ಲಿ ಒಂದು ವರ್ಷಕ್ಕೆ ಮೇಲ್ಪಟ್ಟ 59,339 ಪ್ರಕರಣಗಳ ಪೈಕಿ 40,394 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ” ಎಂದು ಅಧಿಕಾರಿಗಳ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದರು. ಮುಂದುವರೆದು, “ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದೀರಿ. ಎಸಿ ನ್ಯಾಯಾಲಯಗಳಲ್ಲಿನ ಪ್ರಕರಣಗಳ ವಿಲೇವಾರಿ ವೇಗ ಪಡೆಯುತ್ತಿದೆ. ಆದರೂ, ಎರಡು…
ಬೆಂಗಳೂರು : ಕಳಪೆ ಗುಣಮಟ್ಟದ ಪ್ಯಾರಾ-ಮೆಡಿಕಲ್ ಕಾಲೇಜುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳಪೆ ಮೂಲ ಸೌಕರ್ಯ ಹೊಂದಿರುವ ಸಂಸ್ಥೆಗಳು ಹಾಗೂ ಅಂಗಸಂಸ್ಥೆಗಳನ್ನು ಮುಚ್ಚಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ನಿರ್ದೇಶನ ನೀಡಿದ್ದಾರೆ. ಮೂಲಸೌಕರ್ಯ ಮತ್ತು ಬೋಧನಾ ಮಾನದಂಡಗಳನ್ನು ಪೂರೈಸಲು ವಿಫಲವಾದ ಸಂಸ್ಥೆಗಳನ್ನು ಕೂಡಲೇ ಮುಚ್ಚುವಂತೆ ಸೂಚನೆ ನೀಡಲಾಗಿದೆ. ಗುರುವಾರ ವಿಕಾಸಸೌಧದಲ್ಲಿ ನಡೆದ ರಾಜ್ಯ ಪ್ಯಾರಾ-ಮೆಡಿಕಲ್ ಮಂಡಳಿಯ ಪರಿಶೀಲನಾ ಸಭೆಯಲ್ಲಿ ಸಚಿವರು, ಹಲವಾರು ಖಾಸಗಿ ಕಾಲೇಜುಗಳಲ್ಲಿನ ನ್ಯೂನತೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಸಮರ್ಪಕ ಸೌಲಭ್ಯಗಳೊಂದಿಗೆ ಇಕ್ಕಟ್ಟಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲೇಜುಗಳಿವೆ. ಒಂದು ಸಂಸ್ಥೆಯು ನೂರಾರು ವಿದ್ಯಾರ್ಥಿಗಳಿಗೆ ಒಂದೇ ಸೂಕ್ಷ್ಮದರ್ಶಕವನ್ನು ನೀಡುತ್ತಿದೆ ಹಾಗೂ ಇನ್ನೊಂದು ಸರಿಯಾದ ಬೆಳಕಿಲ್ಲದೆ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ಸಚಿವರಿಗೆ ವರದಿ ನೀಡಿದ್ದಾರೆ. ಭಾರಿ ಶುಲ್ಕ ಪಡೆದರೂ ಕಳಪೆ ಬೋಧನೆ ಖಾಸಗಿ ಸಂಸ್ಥೆಗಳು ಅನುಮೋದನೆ ಪಡೆಯುವಾಗ ದಾರಿತಪ್ಪಿಸುವ ಮಾಹಿತಿ ನೀಡುತ್ತಿವೆ. ಭಾರಿ…
ಬೆಂಗಳೂರು: ಕರ್ನಾಟಕದಲ್ಲಿ ಒಟ್ಟು 393 ಹುಲಿಗಳಿದ್ದಾವೆ ಎಂಬುದಾಗಿ ಕರ್ನಾಟಕ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳ ಹುಲಿಗಳ ಸಮೀಕ್ಷೆ- 2024ರ ವರದಿಯಿಂದ ತಿಳಿದು ಬಂದಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಇವರ ಮಾರ್ಗಸೂಚಿಗಳ ಪ್ರಕಾರ, ಅಖಿಲ ಭಾರತ ಹುಲಿ ಗಣತಿಯ (AITE) ಭಾಗವಾಗಿ, ಎಲ್ಲಾ ರಾಜ್ಯಗಳ ಹುಲಿ ವಾಸಸ್ಥಾನ ಪ್ರದೇಶಗಳಲ್ಲಿ ಪ್ರತಿ 4 ವರ್ಷಗಳಿಗೊಮ್ಮೆ ಹುಲಿ, ಆನೆ, ಇತರೆ ಬೇಟೆ ಹಾಗೂ ಸಸ್ಯಾಹಾರಿ ಪ್ರಾಣಿಗಳ ಗಣತಿಯನ್ನು ನಡೆಸಲಾಗುತ್ತದೆ. ದೇಶದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿ ಮತ್ತು ಸಸ್ಯಾಹಾರಿ ಪ್ರಾಣಿಗಳ ವಾರ್ಷಿಕ ಮೇಲ್ವಿಚಾರಣೆಯ ಭಾಗವಾಗಿ, NTCA ಪ್ರತಿ ವರ್ಷ ಎಲ್ಲಾ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ Phase IV ಸಮೀಕ್ಷೆಗಳನ್ನು ನಡೆಸಲು ಸಲಹೆ ನೀಡಿದೆ. ಹುಲಿ ಸಂರಕ್ಷಣದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿರುವ ಕರ್ನಾಟಕ, ಮಾರ್ಗಸೂಚಿಗಳನ್ನು ನಿಷ್ಠೆಯಿಂದ ಅನುಸರಿಸಿ 2015ರಿಂದ ಈ ಸಮೀಕ್ಷೆಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿದೆ. 2023ರ ನವೆಂಬರ್ನಿಂದ 2024ರ ಫೆಬ್ರವರಿಯವರೆಗೆ ಕರ್ನಾಟಕ ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ – ನಾಗರಹೊಳೆ, ಬಂಡೀಪುರ, ಭದ್ರ, ಬಿಳಿಗಿರಿರಂಗನಾಥ…
ಬೆಂಗಳೂರು: ಸಹಕಾರ ಇಲಾಖೆಯು 2024-25ನೇ ಸಾಲಿಗೆ ಯಶಸ್ವಿನಿ ಯೋಜನೆಯಡಿ ಫಲಾನುಭವಿಗಳನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಿದ್ದು, ಮಾ.31 ಕೊನೆಯ ದಿನಾಂಕವಾಗಿದೆ. ಈ ಯೋಜನೆಯಡಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ ಖಾಯಿಲೆಗಳು, ಕಣ್ಣಿನ ಖಾಯಿಲೆಗಳು, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಒದಗಿಸಲಾಗುವುದು. ಈ ಯೋಜನೆಯಡಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ. 5.00 ಲಕ್ಷಕ್ಕೆ ನಿಗದಿಪಡಿಸಲಾಗಿದ್ದು, 1 ಏಪ್ರಿಲ್ 2025 ರಿಂದ 31 ಮಾರ್ಚ್ 2026ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ. ಜಿಲ್ಲೆಯ ಸಹಾಕರ ಸಂಘಗಳ ಸದಸ್ಯರುಗಳು ಯಶಸ್ವಿನ ಯೋಜನೆಯಡಿ ಮಾ.31 ರೊಳಗಾಗಿ ನೊಂದಾಯಿಸಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಸಹಕಾರ ಸಂಘಗಳ ಉಪನಿಬಂಧಕ ನಾಗಭೂಷಣ್ ಚಂದ್ರಶೇಖರ್ ಕಲ್ಮನೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸಹಕಾರ ಸಂಘಗಳನ್ನು ಹಾಗೂ ಯಶಸ್ವಿನಿ ಕೋ ಆರ್ಡಿನೇಟರ್ ಹರೀಶ್ –…
ಬೆಂಗಳೂರು: ಒಳಮೀಸಲಾತಿಗಾಗಿ ಮೂರು ದಶಕಗಳ ಹೋರಾಟ ನಡೆಸಿದ್ದ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯದ ಹರಿಕಾರ ಸಿದ್ದರಾಮಯ್ಯ ಸಂತಸದ ಸುದ್ದಿ ನೀಡಿದ್ದು, ಪರಿಶಿಷ್ಟ ಜಾತಿ ಸೀಮಿತಗೊಳಿಸಿ ಜಾತಿಗಣತಿಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿರುವುದು ಉತ್ತಮ ನಿರ್ಧಾರವಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ಪರಿಶಿಷ್ಟ ಜಾತಿಗಳಲ್ಲಿನ ಸಮುದಾಯಗಳ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಸರ್ಕಾರ ದಿಟ್ಟ ನಡೆ ಕೈಗೊಂಡಿದ್ದು, ಏಪ್ರಿಲ್, ಮೇ ಈ ಎರಡು ತಿಂಗಳಲ್ಲಿ ಜಾತಿಗಣತಿ ನಡೆಸಿ, ಜೂನ್ ಮೊದಲ ವಾರದಲ್ಲಿ ಒಳಮೀಸಲಾತಿ ಜಾರಿಗೊಳಿಸಲು ಕೈಗೊಂಡಿರುವ ನಿರ್ಧಾರ ಸ್ವಾಗತರ್ಹವಾಗಿದೆ ಎಂದಿದ್ದಾರೆ. 30 ವರ್ಷಗಳ ಹೋರಾಟದ ಫಲ, ಒಳಮೀಸಲು ಜಾರಿಗೊಳಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂಬ ಸುಪ್ರೀಂಕೋರ್ಟ್ ತೀರ್ಪು ಬಳಿಕ ಕಾನೂನು ತೊಡಕು ಆಗದ ರೀತಿ ಎಚ್ಚರಿಕೆ ಹೆಜ್ಜೆಯಿಟ್ಟಿದ್ದ ಸಿದ್ದರಾಮಯ್ಯ ಸರ್ಕಾರ, ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗವನ್ನು ರಚಿಸಿತ್ತು. ಆಯೋಗವೂ ಮಧ್ಯಂತರ ವರದಿ ಸಲ್ಲಿಸಿದ್ದು, ನಮ್ಮಗಳ ಕೂಗಿನಂತೆ ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ಜಾತಿಗಣತಿ ನಡೆಸಿ, ಎಂಪೋರಿಕಲ್ ದತ್ತಾಂಶ ಪಡೆದು…
ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ…
ಬೆಂಗಳೂರು: ರಾಜ್ಯ ಸರಕಾರವು ಚುನಾವಣೆ ಎದುರಿಸುವುದನ್ನು ತಪ್ಪಿಸಿಕೊಳ್ಳಲು ಮಸೂದೆಗಳನ್ನು ತರುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಒಂದು ಪ್ರಾಧಿಕಾರದ ಕೆಳಗೆ ಕೆಲಸ ಮಾಡಬೇಕೆಂದರೆ ಜನಪ್ರತಿನಿಧಿಗಳಾಗಿ ಒಂದು ಅಥಾರಿಟಿ ಕೆಳಗೆ ಹೇಗೆ ಕೆಲಸ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು. ಈ ಸರಕಾರ ಜನರ ರಕ್ತ ಹೀರುವ ಕೆಲಸ ಮಾಡುತ್ತಿದೆ. ಹಾಲಿನ ದರ ಏರಿಸುವ ವಿಷಯ ಕ್ಯಾಬಿನೆಟ್ ಮುಂದಿದೆ. ಹಾಲಿನ ದರ ಸಬ್ಸಿಡಿ ರೈತರಿಗೆ ಕೊಡಿ; ಆದರೆ ಜನರ ಮೇಲೆ ಯಾಕೆ ಹೊರೆ ಹಾಕುತ್ತೀರಿ? ನಿಮಗೆ ಯೋಗ್ಯತೆ ಇಲ್ಲದಿದ್ದರೆ ಬಿಟ್ಟು ಹೋಗಿ ಎಂದು ಒತ್ತಾಯಿಸಿದರು. ಗ್ಯಾರಂಟಿಗಳನ್ನು ಘೋಷಿಸಿದ್ದೀರಿ; ಎಲ್ಲದರ ಬೆಲೆಗಳನ್ನೂ ಹೆಚ್ಚಿಸಿದ್ದೀರಿ. ಕಾನೂನು, ಸಂವಿಧಾನದಲ್ಲಿ ಇಲ್ಲದ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡುವ ಮಸೂದೆ ಮಂಜೂರು ಮಾಡಿಕೊಂಡಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅದು ಊರ್ಜಿತ ಆಗುವುದಿಲ್ಲ ಎಂಬುದು ಅವರಿಗೂ ಗೊತ್ತಿದೆ.…
ಬೆಂಗಳೂರು: ನಗರದಲ್ಲಿ ಪತ್ನಿಯನ್ನು ಕೊಂದಿರುವಂತ ಪಾಪಿ ಪತಿಯೊಬ್ಬ, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸೂಕ್ ಕೇಸ್ ನಲ್ಲಿ ತುಂಬಿಟ್ಟಿರೋದಾಗಿ ತಿಳಿದು ಬಂದಿದೆ. ಮಹಾರಾಷ್ಟ್ರ ಮೂಲದ ವ್ಯಕ್ತಿಯೊಬ್ಬ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕನ್ನಹಳ್ಳಿಯಲ್ಲಿ ವಾಸವಿದ್ದನು. ಇಂತಹ ವ್ಯಕ್ತಿ ತನ್ನ ಪತ್ನಿಯನ್ನು ಕೊಂದು, ದೇಹವನ್ನು ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿಟ್ಟಿದ್ದಾಗೆ ಪತ್ನಿಯ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ವಿಷಯವನ್ನು ಮಹಾರಾಷ್ಟ್ರದಲ್ಲಿದ್ದಂತ ಪೋಷಕರು, ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಮಹಾರಾಷ್ಟ್ರದ ಪೊಲೀಸರು ಹುಳಿಮಾವು ಠಾಣೆಯ ಪೊಲೀಸರಿಗೆ ದೊಡ್ಡಕನ್ನಹಳ್ಳಿಗೆ ತೆರಳಿ ಶೋಧಿಸುವಂತೆ ಕೋರಿದ್ದಾರೆ. ಮಹಾರಾಷ್ಟ್ರ ಪೊಲೀಸರ ಕೋರಿಕೆಯ ಮೇರೆಗೆ ಬೆಂಗಳೂರಿನ ಹುಳಿಮಾವು ಠಾಣೆಯ ಪೊಲೀಸರು ದೊಡ್ಡಕನ್ನಹಳ್ಳಿಯ ಆರೋಪಿ ಮನೆಗೆ ತೆರಳಿ ಶೋಧಕಾರ್ಯ ನಡೆಸುತ್ತಿದ್ದಾರೆ. ಆರೋಪಿ ಪತ್ನಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ತುಂಬಿದ್ದಾನೋ ಅಥವಾ ಬೇರೆ ಏನಾದರೂ ಮಾಡಿದ್ದಾನೋ ಎಂಬುದಾಗಿ ತಿಳಿದು ಬರಬೇಕಿದೆ. https://kannadanewsnow.com/kannada/shimoga-dcc-bank-scam-court-dismisses-r-m-manjunatha-gowdas-plea-challenging-ed-summons/ https://kannadanewsnow.com/kannada/hpv-vaccine-to-prevent-cervical-cancer-in-women-minister-dinesh-gundu-rao/
ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಸಮನ್ಸ್ ಪ್ರಶ್ನಿಸಿ ಆರ್.ಎಂ ಮಂಜುನಾಥಗೌಡ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಆರ್.ಎಂ ಮಂಜುನಾಥಗೌಡಗೆ ಬಿಗ್ ಶಾಕ್ ನೀಡಿದೆ. ನಕಲಿ ಚಿನ್ನ ಅಡವಿಟ್ಟು ಸಾಲ ನೀಡಿದ ಆರೋಪದಡಿ 2014ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಸಂಬಂಧ ಪ್ರಕರಣ ದಾಖಲಾಗಿತ್ತು. 2021ರಲ್ಲಿ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಇಡಿ ಎಂಟ್ರಿಯಾಗಿತ್ತು. ಇಡಿಯಿಂದ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿನ 63 ಕೋಟಿ ಹಗರಣ ಸಂಬಂಧ ಆರ್.ಎಂ ಮಂಜುನಾಥಗೌಡಗೆ ಸಮನ್ಸ್ ಜಾರಿಗೊಳಿಸಿತ್ತು. ಇಡಿ ಜಾರಿಗೊಳಿಸಿದ್ದಂತ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಗೆ ಆರ್.ಎಂ ಮಂಜುನಾಥಗೌಡ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ವಿಭಾಗಿಯ ಪೀಠವು ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. https://kannadanewsnow.com/kannada/two-terrorists-killed-five-jawans-injured-in-encounter-in-jammu-and-kashmir/ https://kannadanewsnow.com/kannada/hpv-vaccine-to-prevent-cervical-cancer-in-women-minister-dinesh-gundu-rao/