Subscribe to Updates
Get the latest creative news from FooBar about art, design and business.
Author: kannadanewsnow09
ಬಾಗಲಕೋಟೆ: ಜಿಲ್ಲೆಯಲ್ಲಿ ಗಣೇಶ ಮೆರವಣಿಗೆಯ ವೇಳೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಧೋಳ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಿನ್ನೆ ಮುಧೋಳ ಪಟ್ಟಣದ ಜನ್ನತ್ ನಗರದ ಗಣೇಶ ಮೂರ್ತಿ ವಿಸರ್ಜನೆ ವೇಳೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಟಿಪ್ಪು ಸುಲ್ತಾನ್, ಔರಂಗಾಜೇಬ್ ಕುರಿತಂತೆ ಅಶ್ಲೀಲ ಪದ ಬಳಕೆ ಮಾಡಿ, ಪ್ರಚೋದನಕಾರಿ ಭಾಷಣ ಮಾಡಿದ್ದರು. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ವಿರುದ್ಧ ಬಾಗಲಕೋಟೆ ಜಿಲ್ಲೆಯ ಮುಧೋಳ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಈಗ ಪ್ರಚೋದನಕಾರಿ ಭಾಷಣೆ ಮಾಡಿದ್ದಂತ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. https://kannadanewsnow.com/kannada/atishi-to-take-oath-as-delhi-chief-minister-at-430-pm-tomorrow/ https://kannadanewsnow.com/kannada/state-government-orders-muzrai-department-to-use-nandini-ghee-for-preparing-prasadam-in-temples/ https://kannadanewsnow.com/kannada/bengaluru-power-outages-in-these-areas-of-the-city-on-september-21-and-september-22/
ನವದೆಹಲಿ: ಎಎಪಿ ನಾಯಕಿ ಮತ್ತು ನಿಯೋಜಿತ ಸಿಎಂ ಅತಿಶಿ ಸೆಪ್ಟೆಂಬರ್ 21 ರ ಶನಿವಾರ ಸಂಜೆ 4: 30 ಕ್ಕೆ ರಾಜ್ ನಿವಾಸದಲ್ಲಿ ದೆಹಲಿ ಮುಖ್ಯಮಂತ್ರಿ ಕಚೇರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂತ್ರಿಗಳು ಸಹ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಅಂದಹಾಗೇ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ್ದರು. ಆ ಬಳಿಕ ನೂತನ ಮುಖ್ಯಮಂತ್ರಿಯಾಗಿ ಎಎಪಿಯ ಶಾಸಕಾಂಗ ಪಕ್ಷದ ಸಭೆಯಲ್ಲಿ ಅತಿಶಿ ಆಯ್ಕೆ ಮಾಡಲಾಗಿತ್ತು. https://twitter.com/shemin_joy/status/1837148701313089701 https://kannadanewsnow.com/kannada/davanagere-the-sale-of-liquor-will-be-banned-in-these-areas-of-nadadu-district-tomorrow/ https://kannadanewsnow.com/kannada/state-government-orders-muzrai-department-to-use-nandini-ghee-for-preparing-prasadam-in-temples/
ದಾವಣಗೆರೆ : ಜಿಲ್ಲೆಯಲ್ಲಿ ಗಣೇಶ ವಿಸರ್ಜನೆಯ ಮುಂಜಾಗ್ರತಾ ಕ್ರಮವಾಗಿ ನಾಳೆ, ನಾಡಿದ್ದು ಕೆಲ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪಟ್ಟಣದಲ್ಲಿ ಸೆಪ್ಟೆಂಬರ್ 21 ರಂದು ಮತ್ತು ಸೆಪ್ಟೆಂಬರ್ 22 ರಂದು ಚನ್ನಗಿರಿ ಹಾಗೂ ಹೊನ್ನಾಳಿ ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನೆ ಮಾಡಲಾಗುತ್ತದೆ. ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡಲು ಸೆ.21 ರಂದು ಮಲೇಬೆನ್ನೂರು ವ್ಯಾಪ್ತಿ ಮತ್ತು ಸೆ.22 ರಂದು ಚನ್ನಗಿರಿ ತಾಲ್ಲೂಕಿನಾದ್ಯಂತ ಹಾಗೂ ಹೊನ್ನಾಳಿ ಪಟ್ಟಣ ವ್ಯಾಪ್ತಿಯಲ್ಲಿ ಅಂದು ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ, ಮದ್ಯದಂಗಡಿ ಗಳನ್ನು ಮುಚ್ಚಲು ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ. https://kannadanewsnow.com/kannada/palestinian-flag-hoisted-during-eid-milad-procession-in-chikkodi-four-detained/ https://kannadanewsnow.com/kannada/state-government-orders-muzrai-department-to-use-nandini-ghee-for-preparing-prasadam-in-temples/ https://kannadanewsnow.com/kannada/bengaluru-power-outages-in-these-areas-of-the-city-on-september-21-and-september-22/
ಬೆಳಗಾವಿ: ಜಿಲ್ಲೆಯಲ್ಲಿ ಇಂದು ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಾಡಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಇಂದು ಪ್ಯಾಲೆಸ್ತೀನ್ ಧ್ವಜ ಹಾರಾಡಿರುವುದಾಗಿ ಹೇಳಲಾಗುತ್ತಿದೆ. ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜವನ್ನು ಹಾರಿಸಲಾಗಿದೆ. ಕೂಡಲೇ ಅಲರ್ಟ್ ಆದಂತ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಂದಹಾಗೇ ಗಣೇಶ ಮೂರ್ತಿ ವಿಸರ್ಜನೆಯ ಹಿನ್ನಲೆಯಲ್ಲಿ ಇಂದಿಗೆ ಈದ್ ಮಿಲಾದ್ ಮೆರವಣಿಗೆಯನ್ನು ಮುಂದೂಡಲಾಗಿತ್ತು. ಇಂದು ಈದ್ ಮಿಲಾದ್ ಮೆರವಣಿಗೆಯ ವೇಳೆಯಲ್ಲೇ ಚಿಕ್ಕೋಡಿ ಪಟ್ಟಣದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಲಾಗಿದೆ. https://kannadanewsnow.com/kannada/state-government-orders-muzrai-department-to-use-nandini-ghee-for-preparing-prasadam-in-temples/ https://kannadanewsnow.com/kannada/bengaluru-power-outages-in-these-areas-of-the-city-on-september-21-and-september-22/
ಬೆಂಗಳೂರು: ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಧಾರ್ಮಿಕ ಪರಿಷತ್ತು ಹಾಗೂ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸದಸ್ಯ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಉಡುಪಿ ಜಿಲ್ಲೆ, ಬೈಂದೂರು ತಾಲ್ಲೂಕು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯವು ಧಾರ್ಮಿಕ ದತ್ತಿ ಇಲಾಖೆಯ ಪವರ್ಗ ‘ಎ’ ಅಧಿಸೂಚಿತ ಸಂಸ್ಥೆಯಾಗಿರುತ್ತದೆ. ಈ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಆಸಕ್ತ ಭಕ್ತಾಧಿಗಳಿಂದ/ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಿ ಉಲ್ಲೇಖ(1)ರಲ್ಲಿ ಹೊರಡಿಸಿದ ಪುಕಟಣೆಗೆ ಸ್ಪಂದಿಸಿ ನಿಗಧಿತ ಅವಧಿಯೊಳಗೆ 66 ಅರ್ಜಿಗಳು ಸ್ವೀಕೃತವಾಗಿರುತ್ತವೆ ಎಂದಿದ್ದಾರೆ. ದಿನಾಂಕ:03.01.2024ರಂದು ನಡೆದ 4ನೇ ರಾಜ್ಯ ಧಾರ್ಮಿಕ ಪರಿಷತ್ತಿನ 2ನೇ ಸಭೆಯ ನಿರ್ಣಯದ ವಿಷಯ ಸೂಚಿ ಸಂಖ್ಯೆ (5)ರಲ್ಲಿ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೊಳಪಡುವ ಪುವರ್ಗ ‘ಎ’ ಅಧಿಸೂಚಿತ ಸಂಸ್ಥೆಗಳಿಗೆ ವ್ಯವಸ್ಥಾಪನಾ ಸಮಿತಿಗಳನ್ನು ರಚಿಸುವ ಅಧಿಕಾರವನ್ನು ಅಧ್ಯಕ್ಷರಿಗೆ ನೀಡಲು ಸರ್ವಾನುಮತದಿಂದ ತೀರ್ಮಾನಿಸಲಾಗಿರುತ್ತದೆ ಎಂದು ಹೇಳಿದ್ದಾರೆ. ವ್ಯವಸ್ಥಾಪನ ಸಮಿತಿಗೆ ಸದಸ್ಯತ್ವವನ್ನು ಕೋರಿ…
ಬೆಂಗಳೂರು: ಇನ್ಮುಂದೆ ಸಾರ್ವಜನಿಕರನ್ನು ಭೇಟಿ ಮಾಡಲು, ಅವರ ಕುಂದುಕೊರತೆಯನ್ನು ನಿವಾರಿಸುವುದು ಕಡ್ಡಾಯವಾಗಿದೆ. ಈ ಸಮಯಲ್ಲಿ ಯಾವುದೇ ಸಭೆಗಳನ್ನು ನಡೆಸದಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಅವರು,ಜನಸ್ಪಂದನ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ನಾಗರೀಕರು ಅವರ ಅಹವಾಲುಗಳೊಂದಿಗೆ ಬರುತ್ತಿರುವುದರಿಂದ ಹಿರಿಯ ಅಧಿಕಾರಿಗಳು ಎಲ್ಲಾ ಹಂತಗಳಲ್ಲಿ ಅರ್ಜಿದಾರರಿಗೆ ನಿಯಮಿತವಾಗಿ ಆಲಿಸಿದರ ಮಾತ್ರ ಕುಂದುಕೊರತೆಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯವಾಗುವುದು ಎಂದಿದ್ದಾರೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಹಾಗೂ ಇತರ ಕ್ಷೇತ್ರ ಅಧಿಕಾರಿಗಳು ಮಧ್ಯಾಹ್ನ 3.30 ಘಂಟೆಯಿಂದ 5.30 ಘಂಟೆಯವರೆಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳನ್ನು ಭೇಟಿ ಮಾಡಲು ಸಮಯವನ್ನು ಕಲ್ಪಿಸುವ ಬಗ್ಗೆ ನಿರ್ದೇಶನ ನೀಡಲಾಗಿದೆ. ಆದಾಗ್ಯೂ, ಈ ಸಮಯದಲ್ಲಿ ಸಾರ್ವಜನಿಕರಿಗೆ ಸಮಯಾವಕಾಶ ಕಲ್ಪಿಸದ ಇಲಾಖೆಗಳ ಸಭೆಗಳನ್ನು/ಕಛೇರಿಯ ಹೊರಗೆ ಹೋಗುವ ಪ್ರಕರಣಗಳನ್ನು ಗಮನಿಸಲಾಗಿದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ, ಇನ್ನು ಮುಂದ ಎಲ್ಲಾ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು…
ಬೆಂಗಳೂರು: ರಾಜ್ಯ ಸರ್ಕಾರದಿಂದ ದಿನಗೂಲಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಕನಿಷ್ಠ ವೇತನ ನಿಗದಿಗೊಳಿಸಿ ಆದೇಶಿಸಿದೆ. ಅಲ್ಲದೇ ಅರ್ಹ ದಿನಗೂಲಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳನ್ವಯ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡಿ ಆದೇಶಿಸಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಾಳಿಯನ್ನು ಹೊರಡಿಸಿದ್ದು, ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ. ದಿನಾಂಕ: 19.09.2014ರ ಸರ್ಕಾರದ ಆದೇಶದಲ್ಲಿ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರಡಿ ಸೇವಾ ಮುಂದುವರಿಕೆಗೆ ಅರ್ಹರಾದ ದಿನಗೂಲಿ ನೌಕರರಿಗೆ ಇವರುಗಳನ್ನು ಅಧಿಸೂಚಿಸಿದ ದಿನಾಂಕದಿಂದ ಅವರನ್ನು ಮುಂದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನ, ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ತುಟ್ಟಿಭತ್ಯೆಯ ಶೇಕಡ 75ರಷ್ಟು ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ಅವರುಗಳು ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯವಾಗುವ ಮನೆ ಬಾಡಿಗೆ ಭತ್ಯೆಯ ಸಾಮಾನ್ಯ ದರಗಳ ಶೇಕಡ 75ರಷ್ಟನ್ನು ಅರ್ಹ ದಿನಗೂಲಿ ನೌಕರರಿಗೆ,…
ಕೇರಳ: ಮಲಯಾಳಂನ ಹಿರಿಯ ನಟಿ ಕವಿಯೂರ್ ಪೊನ್ನಮ್ಮ ( Veteran Malayalam actor Kaviyoor Ponnamma ) ನಿಧನರಾಗಿದ್ದಾರೆ. ಹಿರಿಯ ನಟ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು ಎಂದು ವರದಿಗಳು ತಿಳಿಸಿವೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಕವಿಯೂರ್ ಪೊನ್ನಮ್ಮ ಕೇರಳದ ಕೊಚ್ಚಿಯಲ್ಲಿ ಕೊನೆಯುಸಿರೆಳೆದರು. ಮಲಯಾಳಂ ನಟ ಮತ್ತು ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ದಿವಂಗತ ಕಲಾವಿದೆಯ ಫೋಟೋವನ್ನು ಹಂಚಿಕೊಂಡಿದ್ದಾರೆ ಮತ್ತು ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ನೆನಪಿಸಿಕೊಂಡಿದ್ದಾರೆ. ಕವಿಯೂರ್ ರಂಗಭೂಮಿಯಲ್ಲಿ ನಟಿಸುವ ಮೂಲಕ ತಮ್ಮ ನಟನಾ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. ವರ್ಷಗಳಲ್ಲಿ, ಅವರು 1000 ಚಿತ್ರಗಳಲ್ಲಿ ಕಾಣಿಸಿಕೊಂಡರು. ಮೋಹನ್ ಲಾಲ್, ನಸೀರ್ ಮತ್ತು ಮಮ್ಮುಟ್ಟಿ ಅವರಂತಹ ನಟರಿಗೆ ತಾಯಿ ಪಾತ್ರದಲ್ಲಿ ನಟಿಸಿದ್ದಕ್ಕಾಗಿ ಅವರು ಅನೇಕ ಮಲಯಾಳಂ ಚಿತ್ರಗಳಲ್ಲಿ ಹೆಸರುವಾಸಿಯಾಗಿದ್ದರು. ಕವಿಯೂರ್ ಪೊನ್ನಮ್ಮ ಅವರು ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಒಮ್ಮೆಯಲ್ಲ, ನಾಲ್ಕು ಬಾರಿ ಕೇರಳ ರಾಜ್ಯ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಅವರು ಥನಿಯಾವರ್ತನಂ, ಭಾರತಂ ಮತ್ತು ಸುಕೃತಂ ಮುಂತಾದ ಯೋಜನೆಗಳಲ್ಲಿ ಕಾಣಿಸಿಕೊಂಡರು. ನಟ…
ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಸಾವಿರಾರು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂತಹ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ ನಿಮಗೆ ಸಿಗುವಂತ ರಜಾ ಸೌಲಭ್ಯಗಳು ಯಾವುವು ಅನ್ನುವ ಬಗ್ಗೆ ಮುಂದೆ ಸಂಪೂರ್ಣ ಮಾಹಿತಿ ಇದೆ ಓದಿ. ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಮುಖ್ಯ ಆಡಳಿತಾಧಿಕಾರಿಗಳು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಕೀಯ, ಅರೆ ವೈದ್ಯಕೀಯ, ಸಮಾಲೋಚಕರು, ವ್ಯವಸ್ಥಾಪಕರು ಮತ್ತು ಇತರ ಎಲ್ಲಾ ಸಿಬ್ಬಂದಿಗಳಿಗೆ ಈ ಕೆಳಕಂಡಂತೆ ರಜಾ ಸೌಲಭ್ಯವನ್ನು ನೀಡಲಾಗುತ್ತಿರುತ್ತದೆ ಎಂದಿದ್ದಾರೆ. 1. ನೇರಗುತ್ತಿಗೆ ಹಾಗೂ ಮಾನವ ಸಂಪನ್ಮೂಲ ಸಂಸ್ಥೆಯಿಂದ ಒದಗಿಸುವ ಸಿಬ್ಬಂದಿಗಳಿಗೆ ವಾರ್ಷಿಕ 10 ದಿನಗಳ ಸಾಂದರ್ಭಿಕ ರಜಾ ಸೌಲಭ್ಯ ಒದಗಿಸಲಾಗಿದೆ. 2. ನೇರಗುತ್ತಿಗೆ ಹಾಗೂ ಮಾನವ ಸಂಪನ್ಮೂಲ ಸಂಸ್ಥೆಯಿಂದ ಒದಗಿಸುವ ಸಿಬ್ಬಂದಿಗಳಿಗೆ ವಾರ್ಷಿಕ 10 ದಿನಗಳ ವೈದ್ಯಕೀಯ ರಜಾ ಸೌಲಭ್ಯ ಒದಗಿಸಲಾಗಿದೆ (ನೋಂದಣಿ ಹೊಂದಿರುವ ವೈದ್ಯರಿಂದ ವೈದ್ಯಕೀಯ ದೃಢೀಕರಣ…
ಮೈಸೂರು: ನನ್ನ ವಿರುದ್ಧ ಡಿನೋಟಿ ಫಿಕೇಶನ್ ಆರೋಪ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ಮೂವರು ಸಚಿವರ ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಅದೊಂದು ಸ್ಕ್ರಿಪ್ಟೆಡ್ಡ್ ಮಾದ್ಯಮಗೋಷ್ಠಿ ಎಂದು ಲೇವಡಿ ಮಾಡಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಯಾರೂ ಬರೆದುಕೊಟ್ಟ ಸ್ಕ್ರಿಪ್ಟ್ ಅನ್ನು ಮೂವರು ಸಚಿವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಅಲ್ಲಿ ಅಂದು ಮುಖ್ಯಮಂತ್ರಿ ಆಗಿದ್ದ ನಾನೇನು ಬರೆದಿದ್ದೇನೆ, ನಾನೇನು ಆದೇಶ ಮಾಡಿದ್ದೇನೆ ಎಂಬುದು ಅವರಿಗೆ ಗೊತ್ತಿಲ್ಲವೇ? ಎಂದು ಕುಟುಕಿದರು. ಈ ಸಂದರ್ಭದಲ್ಲಿ ಸಚಿವರು, ತಮ್ಮ ಹಾಗೂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ಮಾಡಲು ಸಚಿವರಿಗೆ ಬರೆದುಕೊಡಲಾಗಿದ್ದ ಟೂಲ್ ಕಿಟ್ ಪ್ರತಿಯನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದರು. ನಾನು ಕೇಂದ್ರ ಸಚಿವನಾಗಿದ್ದು ಇವರಿಗೆ ತಡೆಯಲು ಆಗುತ್ತಿಲ್ಲ. ಹೇಗಾದರೂ ನನ್ನನ್ನು ಕಟ್ಟಿ ಹಾಕಲು ಇವರು ಹಣಿಸುತ್ತಲೇ ಇದ್ದಾರೆ. ನನ್ನ ವಿರುದ್ಧ ಒಂದು ವ್ಯವಸ್ಥಿತ ಟೂಲ್ ಕಿಟ್ ರೆಡಿ ಮಾಡಿದ್ದಾರೆ. ಅದನ್ನೇ ಸಇವರಿಗಳು ಬಾಯಿಪಾಠ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಅವರು…