Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಟಿಇಟಿ ಪರೀಕ್ಷೆ ಪಾಸು ಮಾಡಿದಂತ ಪ್ರಾಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು ಎಂಬುದಾಗಿ ಸರ್ಕಾರ ರಾಜ್ಯ ಪತ್ರದಲ್ಲಿ ಅಧಿಕೃತ ಆದೇಶ ಮಾಡಿತ್ತು. ಈ ಬೆನ್ನಲ್ಲೇ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಟಿಇಟಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್.9 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಬೆಳಕಿನ ಹಬ್ಬ ದೀಪಾವಳಿಯ ಮುನ್ನ, ಬಹು ದಿನಗಳಿಂದ ನಿರೀಕ್ಷೆಯಲ್ಲಿದ್ದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಇದೀಗ ಚಾಲನೆ ದೊರಕಿರುವುದನ್ನು ತಿಳಿಸಲು ನನಗೆ ಅತೀವ ಸಂತೋಷವಾಗುತ್ತಿದೆ ಎಂದಿದ್ದಾರೆ. ಈ ಪ್ರಕ್ರಿಯೆಯ ಭಾಗವಾಗಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕುರಿತ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಆನ್ ಲೈನ್ ನಲ್ಲಿ 23.10.2025 ರಿಂದ 09.11.2025 ರವರೆಗೆ ಸಲ್ಲಿಸಬಹುದು. ಪರೀಕ್ಷೆಯನ್ನು 07.12.2025 ರಂದು ನಡೆಸಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ 31.12.2025 ರಂದು ಫಲಿತಾಂಶ ಪ್ರಕಟಿಸುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ…
ಬೆಂಗಳೂರು: ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಅಪಘಾತ ವಿಮಾ ಪರಿಹಾರ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ರಾಜ್ಯ ಸೇವೆಗಳು ಪೊಲೀಸ್ ಮಹಾ ನಿರ್ದೇಶಕರು ಹಾಗೂ ಮಹಾ ನಿರ್ದೇಶಕರು ಅಧಿಕೃತ ಆದೇಶ ಹೊರಡಿಸಿದ್ದು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಗ್ನಿಶಾಮಕ ಹುದ್ದೆಯಿಂದ ನಿರ್ದೇಶಕರ ಹುದ್ದೆಯವರೆಗೆ ಮಾತ್ರ ಕರ್ತವ್ಯದ ಮೇಲಿರುವಾಗ ಮೃತಪಟ್ಟಲ್ಲಿ ಗುಂಪು ವಿಮಾ ಮೊತ್ತವನ್ನು ರೂ, 20.00 ಲಕ್ಷಗಳಿಂದ ರೂ. 50,00 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಈ ಯೋಜನೆಯನ್ನು ವಿಮಾ ಕಂಪನಿಗೆ ವಹಿಸದೇ ಆಕಸ್ಮಿಕ ಅಪಘಾತದಲ್ಲಿ ಮೃತಪಟ್ಟ ಕರ್ತವ್ಯ ನಿರತ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನೌಕರರ ಕುಟುಂಬಗಳಿಗೆ ನೀಡುವ ವಿಶೇಷ ಗುಂಪು ವಿಮಾ ಮೊತ್ತವನ್ನು ನೇರವಾಗಿ ಇಲಾಖೆಯ ಸಂಬಂಧಪಟ್ಟ ಲೆಕ್ಕಶೀರ್ಷಿಕೆಯಡಿ ಪಾವತಿ ಮಾಡಲು ಸೂಚಿಸಿ ಆದೇಶಿಸಲಾಗಿದೆ. ಆದ್ದರಿಂದ ಸದರಿ ಸುತ್ತೋಲೆಯಲ್ಲಿ ನಮೂದಿರುವ ಸೇವಾ ಸೌಲಭ್ಯವನ್ನು…
ಶಿವಮೊಗ್ಗ: ಹೋಟೆಲ್ ಗೆ ಊಟ ಮಾಡೋದಕ್ಕೆ ತೆರಳಿ, ಊಟ ಮಾಡಿ, ಹೊರಡುವ ಸಂದರ್ಭದಲ್ಲಿ ಇನ್ನೂ ಬಾರದ ಗೆಳೆಯನೊಬ್ಬನನ್ನು ಏ ಬಾರ ಎಂದು ಕರೆದಿದ್ದಕ್ಕೆ, ಆತನ ಮುಂದೆ ನಿಂತಿದ್ದಂತ ಪುಂಡರು ಹಿಗ್ಗಾಮುಗ್ಗ ಥಳಿಸಿ, ಓರ್ವನ ತಲೆಗೆ ಗಾಯಗೊಳಿಸಿದ್ದರೇ, ಮತ್ತೋರ್ವನ ಕಾಲು ಮುರಿದಿರುವಂತ ಘಟನೆ ಸಾಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವಂತ ಸಾಗರ್ ಹೋಟೆಲ್ ಗೆ ಶಿವಮೊಗ್ಗದ ಮಹೇಶ್, ಹೊಸನಗರದ ಮಂಜುನಾಥ್ ಸ್ನೇಹಿತರಿಬ್ಬರು ಊಟಕ್ಕೆ ತೆರಳಿದ್ದರು. ಕೆಲಸದ ನಿಮಿತ್ತ ಬಂದಿದ್ದಂತ ಇಬ್ಬರು ಸ್ನೇಹಿತರು ಸಾಗರ್ ಹೋಟೆಲ್ ನಲ್ಲಿ ಊಟ ಮುಗಿಸಿ, ಕೈತೊಳೆಯಲು ಸಿಂಕ್ ಬಳಿಗೆ ತೆರಳಿದ್ದಾರೆ. ಮುಂದೆ ಸಾಗಿದ್ದಂತ ಮಹೇಶ್, ಮಂಜುನಾಥ್ ಊಟ ಮುಗಿದ ಬಳಿಕ ತಡ ಮಾಡಿದ್ದಕ್ಕೆ ಏ ಬಾರ ಎಂಬುದಾಗಿ ಕರೆದಿದ್ದಾನೆ. ಈ ಮಾತಿನಿಂದ ಸಿಟ್ಟಾದಂತ ಸೋಮಶೇಖರ್ ಕುಗ್ವೆ, ಶಿವಾನಂದ, ಅವಿನಾಶ್ ಸಿಟ್ಟುಗೊಂಡು ಮಹೇಶ್ ಗೆ ಥಳಿಸಿದ್ದಾರೆ. ಇದನ್ನು ಬಿಡಿಸಲು ಹೋದಂತ ಮಂಜುನಾಥ್ ಮೇಲೆಯೂ ಹಲ್ಲೆ ಮಾಡಿದ್ದಾರೆ. ಅಲ್ಲದೇ ನೀರಿನ ಡ್ರಂ ಎತ್ತಿ…
ಶಿವಮೊಗ್ಗ : ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯವೇ ಭಾಗ್ಯ ಚಿಕ್ಕಂದಿನಿಂದ ಅದನ್ನು ಚೆನ್ನಾಗಿ ಕಾಪಾಡಿಕೊಳ್ಳಬೇಕು ಪ್ರಸ್ತುತ ದಿನಮಾನದಲ್ಲಿ ಯುವ ಸಮೂಹ ಒತ್ತಡದಿಂದ ಹೊರಗೆ ಬರಬೇಕು. ದೈನಂದಿನ ಚಟುವಟಿಕೆ ಜೊತೆಗೆ ಜಿಮ್, ಯೋಗ, ಧ್ಯಾನ, ವಾಕಿಂಗ್ನoತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸಲಹೆ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಒಕ್ಕಲಿಗರ ಸಭಾಭವನದಲ್ಲಿ ಶನಿವಾರ ಮಂಗಳೂರಿನ ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಶಿಯೇಷನ್, ಶಿವಮೊಗ್ಗ ಜಿಲ್ಲಾ ಪವರ್ ಲಿಫ್ಟಿಂಗ್ ಅಸೋಶಿಯೇಶನ್, ಸಾಧನಾ ಮಲ್ಟಿಜಿಮ್ ವತಿಯಿಂದ ದಿ. ರುಕ್ಮಿಣಿ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಶಿವಮೊಗ್ಗ ಜಿಲ್ಲಾಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ದಿನನಿತ್ಯ ಸೇವಿಸುವ ಆಹಾರ ಮನುಷ್ಯ ದೇಹದ ಮೇಲೆ ದುಷ್ಟರಿಣಾಮ ಬೀರುತ್ತಿದೆ. ಉತ್ತಮ ಫಸಲಿಗಾಗಿ ರಾಸಾಯನಿಕವನ್ನು ಹೆಚ್ಚು ಬಳಕೆ ಮಾಡಲಾಗುತ್ತಿದೆ. ಇದು ಪರೋಕ್ಷವಾಗಿ ನಮ್ಮ ದೇಹವನ್ನು ಸೇರುತ್ತಿದೆ. ಇದರ ಜೊತೆಗೆ ಜಂಕ್ಫುಡ್ ಸೇವನೆ ಆರೋಗ್ಯದ ಮೇಲೆ…
ಶಿವಮೊಗ್ಗ : ಸಹಕಾರಿ ಕ್ಷೇತ್ರದಲ್ಲಿ ಸೇವೆಯೇ ಜೀವಾಳ, ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಇರಬಾರದು. ಈ ಹಿನ್ನೆಲೆಯಲ್ಲಿ ತಾಲ್ಲೂಕಿನ ವಿವಿಧ ಸಹಕಾರಿ ಸಂಸ್ಥೆಗಳಿಗೆ ಉತ್ತಮ ಕೆಲಸ ಮಾಡುವವರಿಗೆ ಪಕ್ಷಪಾರ್ಟಿ ಮೀರಿ ಅವಕಾಶ ಕಲ್ಪಿಸಲಾಗುತ್ತಿದೆ. ನಂಬಿಕೆ ವಿಶ್ವಾಸದಿಂದ ಕಾರ್ಯನಿರ್ವಹಿಸಿ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಎಪಿಎಂಸಿ ಪ್ರಾಂಗಣದಲ್ಲಿ ಶನಿವಾರ ಟಿಎಪಿಎಂಸಿಎಸ್ಗೆ ಅಧ್ಯಕ್ಷರಾಗಿ ಲೋಕನಾಥ್ ಬಿಳಿಸಿರಿ, ಉಪಾಧ್ಯಕ್ಷರಾಗಿ ಮಂಜಪ್ಪ ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಿ ಮಾತನಾಡಿದಂತ ಅವರು, ಲೋಕನಾಥ್ ಬಿಳಿಸಿರಿ ಕಳೆದ ಬಾರಿ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ತಾಲ್ಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಮಿತಿ ಅಭಿವೃದ್ದಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತದೆ. ಸಹಕಾರಿ ಸಂಸ್ಥೆಗಳು ಸಾಗರ ತಾಲ್ಲೂಕಿನಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು, ಡಿಸಿಸಿ ಬ್ಯಾಂಕ್ ಮೂಲಕ ಸಹ ಸಹಕಾರಿ ಬೆಳೆವಣಿಗೆಗೆ ಪೂರಕ ಬೆಂಬಲ ನೀಡಲಾಗುತ್ತಿದೆ. ಸಹಕಾರಿಗಳು ಉತ್ತಮವಾಗಿ ಕೆಲಸ ಮಾಡುವ ಮೂಲಕ ಸಾಗರದಲ್ಲಿ ಸಹಕಾರಿ ಸಂಘಗಳ ಸದೃಢತೆಗೆ…
ದೀಪಾವಳಿ ಧನತ್ರಯೋದಶಿಯಂದು ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ.. ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ. ಯಾವುದೇ ಹಣಕ್ಕೆ ಸಂಬಂಧಿಸಿದ ಸಮಸ್ಯೆಯಿದ್ದರೂ ಕೂಡ ಬಹುಬೇಗ ಬಗೆ ಹರಿಯುತ್ತದೆ. ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ…
ಬೆಂಗಳೂರು: ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಯಂತ್ರಿಸುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಕೋರಿದ್ದರು. ಅದು ವಿವಾದಕ್ಕೂ ಕಾರಣವಾಗಿತ್ತು. ಈ ಬೆನ್ನಲ್ಲೇ ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಬ್ರೇಕ್ ಎನ್ನುವಂತೆ ಖಾಸಗಿ ಸಂಘ-ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವನಜಿಕ ಆಸ್ತಿಗಳನ್ನು ಬಳಸುವುದನ್ನು ನಿಯಂತ್ರಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಇನ್ಮುಂದೆ ಸರ್ಕಾರಿ ಜಾಗಗಳಲ್ಲಿ ಸಂಘಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಟಿಪ್ಪಣಿ ಹೊರಡಿಸಿದ್ದು, ಅದರಲ್ಲಿ ದಿನಾಂಕ:16-10-2025ರ ಸಚಿವ ಸಂಪುಟದಲ್ಲಿ ಕೆಳಕಂಡಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದಿದ್ದಾರೆ. 1) ಸರ್ಕಾರದ / ಸರ್ಕಾರಿ ಸಾಮ್ಯದ / ನಿಗಮ/ಮಂಡಳಿಗಳ ಶಾಲಾ-ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು, ತೆರೆದ ಸ್ಥಳಗಳು ಮತ್ತು ಇತರ ಆಸ್ತಿ / ಜಾಗಗಳು ನಾಗರೀಕರ…
ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಸಂಘ-ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿ ಆಸ್ತಿಗಳನ್ನು ಬಳಸಿಕೊಳ್ಳುವುದನ್ನು ನಿಯಂತ್ರಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಟಿಪ್ಪಣಿ ಹೊರಡಿಸಿದ್ದು, ಅದರಲ್ಲಿ ದಿನಾಂಕ:16-10-2025ರ ಸಚಿವ ಸಂಪುಟದಲ್ಲಿ ಕೆಳಕಂಡಂತೆ ನಿರ್ಣಯ ಕೈಗೊಳ್ಳಲಾಗಿದೆ. 1) ಸರ್ಕಾರದ / ಸರ್ಕಾರಿ ಸಾಮ್ಯದ / ನಿಗಮ/ಮಂಡಳಿಗಳ ಶಾಲಾ-ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು, ತೆರೆದ ಸ್ಥಳಗಳು ಮತ್ತು ಇತರ ಆಸ್ತಿ / ಜಾಗಗಳು ನಾಗರೀಕರ ಸದ್ಬಳಕೆಗೆ ನಿರ್ಧಿಷ್ಟಪಡಿಸಲಾಗಿರುತ್ತದೆ. ಇವುಗಳನ್ನು ಸಾರ್ವಜನಿಕರು ಬಳಸಲು ಯಾವುದೇ ಅಡಚಣೆಗಳು, ಬೆದರಿಕೆಗಳು ಉದ್ಭವಿಸದಂತೆ ಕ್ರಮವಹಿಸುವುದು ಅತ್ಯಗತ್ಯವಾಗಿರುತ್ತದೆ. ಹಾಗೆಯೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು, ಸಾರ್ವಜನಿಕರ ಸಾರ್ವತ್ರಿಕ ಅಸಮಾಧಾನಗಳನ್ನು ನಿವಾರಿಸುವುದು ಸಹ ಅವಶ್ಯವಾಗಿರುತ್ತದೆ. 2) ರಾಜ್ಯದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು, ಸಂಘಗಳು ತಮ್ಮ ಚಟುವಟಿಕೆಗಳು, ಪುಚಾರ, ತರಬೇತಿ, ಉತ್ಸವಗಳು ಹಾಗೂ ಸದಸ್ಯರ ಮತ್ತು ಬೆಂಬಲಿಗರ ಸಭೆಗಳು ನಡೆಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳು…
ಬೆಂಗಳೂರು : ‘ವೋಟ್ ಚೋರಿ’ ಮೂಲಕ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿಯ ಅಧಿಕಾರ ದುರುಪಯೋಗದ ಬಗ್ಗೆ ಮನೆ ಮನೆಗೆ ತೆರಳಿ ಜನರಿಗೆ ಮನವರಿಕೆ ಮಾಡಿಕೊಡುವುದಾಗಿ ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಬಾಣಸವಾಡಿಯಲ್ಲಿ ಪ್ರದೇಶ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ‘ವೋಟ್ ಚೋರಿ’ ವಿರುದ್ಧದ ಸಹಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ” ನಮ್ಮ ನಾಯಕ ರಾಹುಲ್ ಗಾಂಧಿ ಅವರು ‘ವೋಟ್ ಚೋರಿ’ ಬಗ್ಗೆ ಸಾಕ್ಷಿ ಸಮೇತ ಬಹಿರಂಗಗೊಳಿಸಿದ್ದಾರೆ. ರಾಹುಲ್ ಗಾಂಧಿ ಅವರು ನೀಡಿರುವ ದಾಖಲೆಗಳಿಗೆ ಇದುವರೆಗೂ ಚುನಾವಣಾ ಆಯೋಗ ಗಂಭೀರವಾದ ಮತ್ತು ಸಮರ್ಪಕ ಉತ್ತರ ನೀಡಿಲ್ಲ,” ಎಂದು ಆರೋಪಿಸಿದರು. “ಚುನಾವಣಾ ಆಯೋಗ ಮತ್ತು ಬಿಜೆಪಿಯ ಈ ಮತಗಳ್ಳತನದ ವಿರುದ್ಧ ನಮ್ಮ ಹೋರಾಟ ನಿಲ್ಲುವುದಿಲ್ಲ. ಸಹಿ ಸಂಗ್ರಹ ಅಭಿಯಾನ ಮುಂದುವರಿಯಲಿದೆ. ಮನೆ ಮನೆಗೆ ಹೋಗಿ ಬಿಜೆಪಿಯ ಅಧಿಕಾರ ದುರುಪಯೋಗದ ಬಗ್ಗೆ ಜನರಿಗೆ ತಿಳಿಸುತ್ತೇವೆ,” ಎಂದರು. “ಕಳೆದ ಲೋಕಸಭೆ ಚುನಾವಣೆ ವೇಳೆ ಮಹದೇವಪುರ ವಿಧಾನಸಭಾ…
ಹಾವೇರಿ: ಜಿಲ್ಲೆಯ ಹಾನಗಲ್ ತಹಶೀಲ್ದಾರ್ ಕಚೇರಿಯಲ್ಲಿ 12,000 ಲಂಚದ ಹಣವನ್ನು ಪಡೆಯುತ್ತಿದ್ದಂತ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಮೂಲಕ ಶಿರಸ್ತೇದಾರ ಹಾಗೂ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಬಂಧಿಸಿದ್ದಾರೆ. ಹಾವೇರಿ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ನವೀನ ಬಸವನಗೌಡ ಪಾಟೀಲ್ ಎಂಬುವರು ಪಹಣಿ ಪತ್ರ ಅಂದರೆ ಆರ್ ಟಿ ಸಿ ತಿದ್ದುಪಡಿ ಮಾಡಲು ಹಾನಗಲ್ ತಹಶೀಲ್ದಾರರ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ತಿದ್ದುಪಡಿ ಮಾಡಲು ಹಾನಗಲ್ ತಹಶೀಲ್ದಾರ್ ಕಚೇರಿಯ ಶಿರಸ್ತೆದಾರರು, ಇಬ್ಬರು ಎಸ್ ಡಿ ಎ 12,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆಯಲ್ಲಿ ನವೀನ ಬಸವನಗೌಡ ಪಾಟೀಲ್ ಎಂಬುವರು ಹಾವೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಇಂದು 12,000 ಲಂಚದ ಹಣ ಸ್ವೀಕರಿಸುತ್ತಿದ್ದಾಗ ಹಾವೇರಿ ತಹಶೀಲ್ದಾರರ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಈ ದೇಳಿಯ ಸಂದರ್ಭದಲ್ಲಿ 12,000 ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಹಾನಗಲ್ ತಹಶೀಲ್ದಾರರ ಕಚೇರಿಯಲ್ಲಿ ಶಿರಸ್ತೆದಾರ ತಮ್ಮಣ್ಣ ಕಾಂಬಳೆ, ಎಸ್ ಡಿಎ…














