Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬನಶಂಕರಿ ವಿದ್ಯುತ್ ಚಿತಾಗಾರದ ಫರ್ನೆಸ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಫರ್ನೇಸ್ ಗಳ ಬಾಡಿ ಬ್ರಿಕ್ ಹಾಗೂ ಕಾಯಿಲ್ ಗಳನ್ನು ಬದಲಿಸಿ ದುರಸ್ಥಿಪಡಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮುಂದುವರಿದು, ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಫರ್ನೇಸ್ ಗಳ ಬಾಡಿ ಬ್ರಿಕ್ ಹಾಗೂ ಕಾಯಿಲ್ ಗಳನ್ನು ಬದಲಿಸಿ ದುರಸ್ಥಿಪಡಿಸುವ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಚಿತಾಗಾರದ 2 ಫರ್ನೇಸ್ ಗಳನ್ನು ದಿನಾಂಕ: 23-10-2025 ರಿಂದ 31-10-2025 ರವರೆಗೆ 7 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದೆ. ಈ ಸಂಬಂಧ ಸಾರ್ವಜನಿಕರು ಸಹಕರಿಸಬೇಕೆಂದು ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿದ್ದಾರೆ. https://kannadanewsnow.com/kannada/challenging-narayanaswamy-protests-the-denial-of-permission-for-chittapurs-procession/ https://kannadanewsnow.com/kannada/another-good-news-for-the-rural-people-of-the-state-from-now-on-e-property-will-be-available-within-the-gram-panchayat-limits/
ಬೆಂಗಳೂರು: ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥ ಸಂಚಲನಕ್ಕೆ ಮತ್ತು ಬಂಟಿಂಗ್, ಬ್ಯಾನರ್ ಹಾಕಲು ಹಾಗೂ ಅನುಮತಿಗೆ ಸಂಬಂಧಿಸಿ ಸುಮಾರು 6 ಸಾವಿರ ಹಣ ಕಟ್ಟಿಸಿಕೊಂಡ ಬಳಿಕ ಅನುಮತಿ ನಿರಾಕರಿಸಿದ್ದು ಮತ್ತು ಬ್ಯಾನರ್, ಬಂಟಿಂಗ್ ತೆರವು ಮಾಡಿದ್ದು ಸರಿಯಲ್ಲ; ಇದು ಸ್ಥಳೀಯ ಆಡಳಿತದ ದುಂಡಾವರ್ತಿ ಕ್ರಮ ಮತ್ತು ಪ್ರಿಯಾಂಕ್ ಖರ್ಗೆಯವರ ದುರ್ನಡತೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರಶ್ನೆಗಳಿಗೆ ಉತ್ತರಿಸಿದರು. ಆರೆಸ್ಸೆಸ್ ಪಥ ಸಂಚಲನಕ್ಕೆ ಸಂಬಂಧಿಸಿ ಪಿಡಿಒ ಒಬ್ಬರ ಅಮಾನತಿನ ಕುರಿತು ಪ್ರಶ್ನಿಸಿದಾಗ, ಆರೆಸ್ಸೆಸ್ ಎಂಬುದು ಒಂದು ರಾಜಕೀಯ ಪಕ್ಷವಲ್ಲ; ಎಲ್ಲ ಸಾರ್ವಜನಿಕ ಸಂಘಟನೆಯಂತೆ ಆರೆಸ್ಸೆಸ್ ಒಂದು ಸಂಘಟನೆ. ಇದರಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು. ಕೇಂದ್ರ ಸರಕಾರದ ಆದೇಶವೂ ಇದೆ ಎಂದು ನುಡಿದರು. ಇಷ್ಟೆಲ್ಲ ಮಾತನಾಡುವ ಪ್ರಿಯಾಂಕ್ ಖರ್ಗೆ, ಬಿ.ಕೆ.ಹರಿಪ್ರಸಾದ್ ಅವರೇ, ಎಐಸಿಸಿಯಲ್ಲಿ ಅಲೆಮಾರಿ ಸಮುದಾಯಗಳ ಒಂದು ಘಟಕ ಇದೆ. ಈ ಘಟಕಕ್ಕೆ ಕರ್ನಾಟಕದಿಂದ ಡಾ.ಎ.ಎಸ್.…
ನವದೆಹಲಿ: 2025-26ನೇ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದ ಫಲಿತಾಂಶವನ್ನು ಪ್ರಕಟಿಸಲಾಗಿದೆ. ತೆರಿಗೆ ನಂತರದ ಏಕೀಕೃತ ಲಾಭದಲ್ಲಿ ವರ್ಷದಿಂದ ವರ್ಷಕ್ಕೆ ಶೇ 15.9ರಷ್ಟು ಜಿಗಿತವನ್ನು ಕಂಡು, 22,146 ಕೋಟಿಗೆ ತಲುಪಿದೆ. ಕಾರ್ಯಾಚರಣೆಗಳಿಂದ ಬರುವ ಆದಾಯವು ₹283,548 ಕೋಟಿಗಳಷ್ಟಿದ್ದು, ವರ್ಷದ ಹಿಂದೆ ಇದೇ ಅವಧಿಯಲ್ಲಿ ದಾಖಲಾಗಿದ್ದ ರೂ. 258,027 ಕೋಟಿಗಿಂತ ಶೇ 9.9 ರಷ್ಟು ಹೆಚ್ಚಾಗಿದೆ. 2025ರ ಜೂನ್ ತ್ರೈಮಾಸಿಕದಲ್ಲಿ 273,252 ಕೋಟಿಗಳಷ್ಟು ಇದ್ದದ್ದು ತ್ರೈಮಾಸಿಕದಿಂದ ತ್ರೈಮಾಸಿಕದ ಆಧಾರದಲ್ಲೂ ಹೆಚ್ಚಾಗಿದೆ. ಜಿಯೋ ಪ್ಲಾಟ್ಫಾರ್ಮ್ಗಳು ರಿಲಯನ್ಸ್ ಜಿಯೋ ಆದಾಯವು ವರ್ಷದಿಂದ ವರ್ಷಕ್ಕೆ ಶೇ 14.6 ರಷ್ಟು ಹೆಚ್ಚಾಗಿ ರೂ. 36,332 ಕೋಟಿಗಳಿಗೆ ತಲುಪಿದೆ. ಇನ್ನು ತೆರಿಗೆ ನಂತರದ ಲಾಭ ವರ್ಷದಿಂದ ವರ್ಷಕ್ಕೆ ಶೇ 12.8ರಷ್ಟು ಏರಿಕೆಯಾಗಿ, ರೂ. 7,379 ಕೋಟಿಗಳಿಗೆ ತಲುಪಿದೆ. ಕಂಪನಿಯ ಬಹುನಿರೀಕ್ಷಿತ ಐಪಿಒಗಿಂತ ಮುಂಚಿತವಾಗಿ ಜಿಯೋದ ಎರಡನೇ ತ್ರೈಮಾಸಿಕದ ಎಆರ್ ಪಿಯು ರೂ. 211.4ಕ್ಕೆ ಏರಿದೆ, ಗ್ರಾಹಕರ ತೊಡಗಿಸಿಕೊಳ್ಳುವಿಕೆ ಹೆಚ್ಚಿದೆ, ಇದು ಸದ್ಯಕ್ಕೆ 5ಜಿ ಆಫರ್ ಗಳಿಂದ ಪ್ರಭಾವಿತವಾಗಿದೆ. ರಿಲಯನ್ಸ್ ರೀಟೇಲ್ ರಿಟೇಲ್…
ಕಾಶ್ಮೀರ : ಕಾಶ್ಮೀರದ ಬಂಡಿಪೋರಾದಲ್ಲಿ ಇರುವಂಥ ಗುರೆಜ್(Gurez) ದೂರದ ಪ್ರದೇಶದಲ್ಲಿ ರಿಲಯನ್ಸ್ ಜಿಯೋ ತನ್ನ ಸೇವೆ ಪ್ರಾರಂಭಿಸಿದೆ. ರಿಲಯನ್ಸ್ ಜಿಯೋ ಮತ್ತು ಭಾರತೀಯ ಸೇನೆ ಜಂಟಿಯಾಗಿ ಐದು ಹೊಸ ಟವರ್ ಗಳನ್ನು ಸ್ಥಾಪಿಸಲಾಗಿದೆ. ಕುಪ್ವಾರ ಸೆಂಟಿನೆಲ್ಸ್ ಸಾಮಾಜಿಕ ಮಾಧ್ಯಮ ವೇದಿಕೆಯು “X”ನಲ್ಲಿ ಮಾಡಿರುವ ಪೋಸ್ಟ್ನಲ್ಲಿ ಇದನ್ನು ಘೋಷಿಸಿದೆ. ಈ ಟವರ್ ಗಳು ಸರಾಸರಿ 13,000 ಅಡಿ ಎತ್ತರದಲ್ಲಿರುವ ಕಾರ್ಯತಂತ್ರದ ಪ್ರಮುಖ ಫಾರ್ವರ್ಡ್ ಪೋಸ್ಟ್ಗಳಿಗೆ ಸಂಪರ್ಕವನ್ನು ಒದಗಿಸುತ್ತವೆ. ಇದನ್ನು ಮಹತ್ವದ ಸಾಧನೆ ಎಂದು ಕರೆದ ಕುಪ್ವಾರ ಸೆಂಟಿನಲ್ಸ್, “ಭಾರತೀಯ ಸೇನೆ ಮತ್ತು ರಿಲಯನ್ಸ್ ಜಿಯೋ ಗುರೆಜ್ ಪ್ರದೇಶದಲ್ಲಿ ಐದು ಹೊಸ ಮೊಬೈಲ್ ಟವರ್ಗಳನ್ನು ಸ್ಥಾಪಿಸಿವೆ – ಸಂವಹನ ಮೂಲಸೌಕರ್ಯವನ್ನು ಸುಧಾರಿಸುವ ಮತ್ತು ಈ ಪ್ರದೇಶದಲ್ಲಿ ಡಿಜಿಟಲ್ ಸಂಪರ್ಕವನ್ನು ಹೆಚ್ಚಿಸುವತ್ತ ಒಂದು ಮಹತ್ವದ ಹೆಜ್ಜೆ,” ಎಂದು ತನ್ನ ಪೋಸ್ಟ್ನಲ್ಲಿ ಹೇಳಿದೆ. ಈ ಹಿಂದೆ ಜಿಯೋ 16,000 ಅಡಿ ಎತ್ತರದಲ್ಲಿರುವ ಸಿಯಾಚಿನ್ ಗ್ಲೇಸಿಯರ್ನಲ್ಲಿ ಸೇವೆಯನ್ನು ಒದಗಿಸುವ ಮೂಲಕ ಹೀಗೆ ಸೇವೆ ಒದಗಿಸಿದ ಮೊದಲ ಆಪರೇಟರ್ ಆಯಿತು.…
ಬೆಂಗಳೂರು: ರಾಜ್ಯಾಧ್ಯಂತ ದೀಪಾವಳಿ ಹಬ್ಬದ ಪ್ರಯುಕ್ತ ತೆರೆಯುವ ಪಟಾಕಿ ಮಾರಾಟ ಮಳಿಗೆಗಳು, ಪಟಾಕಿ ತಯಾರಿಕೆ ಸೇರಿದಂತೆ ಇತರೆ ಪ್ರಕ್ರಿಯೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ನಿಷೇಧಿಸಿ ಕಾರ್ಮಿಕ ಇಲಾಖೆ ಆದೇಶಿಸಿದೆ. ಒಂದು ವೇಳೆ ಕಾನೂನು ಮೀರಿದ್ರೇ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯದ ಆಯಾ ಜಿಲ್ಲೆಯ ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತಪ್ಪಿದಲ್ಲಿ ಕಾಯ್ದೆಯಡಿ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ ಎಂಬುದಾಗಿ ಎಚ್ಚರಿಸಿದ್ದಾರೆ. https://kannadanewsnow.com/kannada/open-rice-and-ragi-purchase-centers-throughout-the-year-maddur-farmers-association-urges-mandya-district-administration/ https://kannadanewsnow.com/kannada/2588-64-crore-expenditure-for-panch-guarantees-in-chitradurga-district-state-vice-president-dinesh-gooligowda/
ಚಿತ್ರದುರ್ಗ : ರಾಜ್ಯದ ಮಹತ್ವಕಾಂಕ್ಷಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳಿಂದ ಕರ್ನಾಟಕ ರಾಜ್ಯದ ತಲಾ ಆದಾಯ ಹೆಚ್ಚಳವಾಗಿದೆ ಎಂಬುದನ್ನು ಕೇಂದ್ರ ಸರ್ಕಾರ ನೀಡಿರುವ ವರದಿಗಳಿಂದಲೇ ತಿಳಿದುಬಂದಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ಹೇಳಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾದ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ನಾಡಿನ ಜನರಿಗೆ ನೀಡಿದ್ದ ಭರವಸೆಯಂತೆ, ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಕೂಡಲೆ ಜಾರಿಗೊಳಿಸಿ, ನುಡಿದಂತೆ ನಡೆದಿದೆ. ನಮ್ಮ ಸರ್ಕಾರ ಜಾರಿಗೊಳಿಸಿರುವ ಪ್ರತಿಯೊಂದು ಗ್ಯಾರಂಟಿ ಯೋಜನೆಗಳು ರಾಜ್ಯದ ಬಡ ಹಾಗೂ ಮಧ್ಯಮ ವರ್ಗದ ಜನರ ಆರ್ಥಿಕ ಸಬಲೀಕರಣ ದೃಷ್ಟಿಯಿಂದ ಮಹತ್ವದ್ದಾಗಿವೆ. ಯೋಜನೆಗಳ ಸವಲತ್ತು ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿವೆ ಎಂದರು. ಪಂಚಗ್ಯಾರಂಟಿ ಯೋಜನೆಗಳಿಂದ ದೇಶಕ್ಕೆ ಕರ್ನಾಟಕ ಮಾದರಿಯಾಗಿದೆ.…
ಮಂಡ್ಯ : ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ವತಿಯಿಂದ ಮದ್ದೂರು ನಗರದ ತಾಲೂಕು ಕಚೇರಿ ಆವರಣದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ತಾಲೂಕು ಹಾಗೂ ಜಿಲ್ಲಾಡಳಿತ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಶಂಕರೇಗೌಡ ಮಾತನಾಡಿ, 2022-23 ನೇ ಸಾಲಿನಲ್ಲಿ ಕಬ್ಬು ಅರೆದಿರುವ ಹಂಗಾಮಿನಲ್ಲಿ ಅಂದಿನ ರಾಜ್ಯ ಸರ್ಕಾರ ಟನ್ ಕಬ್ಬಿಗೆ 150 ರೂ.ಗಳನ್ನು ಕಬ್ಬು ಬೆಳೆಗಳಿಗೆ ಪಾವತಿಸಲಾಗುವುದು ಎಂದು ಘೋಷಣೆ ಮಾಡಿತ್ತು. ಆದರೆ, ಇಲ್ಲಿಯವರೆಗೂ ಬಿಡುಗಡೆ ಮಾಡಿಲ್ಲ. ಈ ಕೂಡಲೇ ರಾಜ್ಯ ಸರ್ಕಾರ ಅದರ ಹಣವನ್ನು ಪಾವತಿ ಮಾಡಬೇಕು ಎಂದು ಆಗ್ರಹಿಸಿದರು. ಇನ್ನೊಂದು ತಿಂಗಳಲ್ಲಿ ಭತ್ತದ ಬೆಳೆ ಕಟಾವಿಗೆ ಬರುತ್ತಿದ್ದು, ಭತ್ತಕ್ಕೆ ಕ್ವಿಂಟಾಲ್ಗೆ ಕನಿಷ್ಟ 3500 ರೂ. ಬೆಲೆ ನಿಗದಿಗೊಳಿಸಬೇಕು ಹಾಗೂ ನವಂಬರ್ ತಿಂಗಳಲ್ಲೇ ಖರೀದಿ ಕೇಂದ್ರ ತೆರೆದು ರಾಗಿ, ಭತ್ತ ಖರೀಸಬೇಕು ಮತ್ತು ಶಾಶ್ವತವಾಗಿ ಖರೀದಿ ಕೇಂದ್ರಗಳನ್ನು ವರ್ಷ ಪೂರ್ತಿ ತೆರೆಯಬೇಕು. ಕೇಂದ್ರ ಸರ್ಕಾರ ಡಾ.ಸ್ವಾಮಿನಾಥನ್ ವರದಿಯನ್ನು…
ಢಾಕಾದ ಹಜರತ್ ಶಹಜಲಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸರಕು ಸಾಗಣೆ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಧಿಕಾರಿಗಳು ಎಲ್ಲಾ ವಿಮಾನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಬೇಕಾಯಿತು. ಮಧ್ಯಾಹ್ನ 2:30 ರ ಸುಮಾರಿಗೆ ಪ್ರಾರಂಭವಾದ ಬೆಂಕಿಯು ಆಮದು ಮಾಡಿದ ಸರಕುಗಳನ್ನು ಸಂಗ್ರಹಿಸಲು ಬಳಸಲಾಗುತ್ತಿದ್ದ ಪ್ರದೇಶವನ್ನು ಆವರಿಸಿತು, ವಿಮಾನ ನಿಲ್ದಾಣದ ಆವರಣದಾದ್ಯಂತ ದಟ್ಟವಾದ ಹೊಗೆಯನ್ನು ಹೊರಹಾಕಿತು ಎಂದು ಪ್ರೋಥೋಮ್ ಅಲೋ ವರದಿ ಮಾಡಿದೆ. ವಿಮಾನ ನಿಲ್ದಾಣದ ಕಾರ್ಯನಿರ್ವಾಹಕ ನಿರ್ದೇಶಕ ಎಂಡಿ ಮಸೂದುಲ್ ಹಸನ್ ಮಸೂದ್ ಅವರನ್ನು ಉಲ್ಲೇಖಿಸಿ ವರದಿಯು, ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಹೋರಾಡುತ್ತಿರುವುದರಿಂದ ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಎರಡನ್ನೂ ನಿಲ್ಲಿಸಲಾಗಿದೆ ಎಂದು ಹೇಳಿದೆ. https://twitter.com/PTI_News/status/1979501934768800160 ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಪ್ರಕಾರ, ಬಾಂಗ್ಲಾದೇಶ ನಾಗರಿಕ ವಿಮಾನಯಾನ ಪ್ರಾಧಿಕಾರ, ಅಗ್ನಿಶಾಮಕ ಸೇವೆ ಮತ್ತು ಎರಡು ವಾಯುಪಡೆಯ ಅಗ್ನಿಶಾಮಕ ಘಟಕಗಳು ಬೆಂಕಿಯನ್ನು ನಂದಿಸಲು ಜಂಟಿಯಾಗಿ ಕೆಲಸ ಮಾಡುತ್ತಿವೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ನೌಕಾಪಡೆಯೂ ಸಹ ಕಾರ್ಯಾಚರಣೆಯಲ್ಲಿ ಸೇರಿಕೊಂಡಿದೆ. ಹಾನಿಯ ಪ್ರಮಾಣ ಮತ್ತು ಬೆಂಕಿಯ…
ಬೆಂಗಳೂರು: ಸರಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆಗಳು ಚಟುವಟಿಕೆ ನಡೆಸಬೇಕಾದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕು ಎಂಬ ಸಚಿವ ಸಂಪುಟದ ತೀರ್ಮಾನ ಸಮರ್ಥನೀಯ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ವಿದ್ಯಮಾನಗಳ ಕುರಿತಾಗಿಯೂ ಸಚಿವರು ಪ್ರತಿಕ್ರಿಯೆ ನೀಡಿದರು. ನಮ್ಮ ಸರ್ಕಾರ ಜಾರಿಗೆ ಈ ನಿಷೇಧ ಹೇರಿಲ್ಲ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಗಿತ್ತು. ಇದನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡಿದೆಯಷ್ಟೇ. ಮಾಡಲು ಕೆಲಸವಿಲ್ಲದ ಬಿಜೆಪಿಯವರು ಜನರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು. ನಿಷೇಧದ ಬಗ್ಗೆ ಎಲ್ಲಿಯೂ ಹೇಳಿಲ್ಲ ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ನಿಷೇಧ ಮಾಡಬೇಕು ಎಂದು ಎಲ್ಲಿಯೂ ಹೇಳಿಲ್ಲ.ಎಲ್ಲರೂ ಅವರ ಮಾತನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಸರ್ಕಾರಿ ಅಧೀನದ ಸ್ಥಳಗಳಲ್ಲಿ, ಶಾಲಾ-ಕಾಲೇಜು ಆವರಣದಲ್ಲಿ ಅನುಮತಿ ಪಡೆಯಬೇಕು ಎಂದು…
ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳಿಗೆ ಬೋಧಿಸುತ್ತಿರುವಂತ ಪ್ರಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಟಿಇಟಿ ಪರೀಕ್ಷೆ ಪಾಸ್ ಮಾಡಿದ್ದರೇ ಅರ್ಹರಾಗಿರುತ್ತಾರೆ ಎಂಬುದಾಗಿ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯಪತ್ರವನ್ನು ಹೊರಡಿಸಿರುವಂತ ಸರ್ಕಾರವು, 1 ರಿಂದ 5ನೇ ತರಗತಿಗೆ ಬೋಧಿಸುವ ಪ್ರಾಥಮಿಕ ಶಾಲಾ ಶಿಕ್ಷಕರು NCTE ಮಾರ್ಗಸೂಚಿಗಳಲ್ಲಿ ನಿರ್ಧಿಷ್ಟಪಡಿಸಿದಂತೆ ಮತ್ತು ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಜಾರಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿರುವಂತೆ ಅಗತ್ಯ ವಿಷಯಗಳಲ್ಲಿ ಪದವಿಯನ್ನು ಹಾಗೂ TET ಪ್ರಮಾಣ ಪತ್ರವನ್ನು ಹೊಂದಿದ್ದಲ್ಲಿ 6 ಮತ್ತು 7 ನೇ ತರಗತಿಗೆ ಬೋಧಿಸಲು ಅರ್ಹರಾಗತಕ್ಕದ್ದು ಎಂದಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) ನಿಯಮಗಳು, 1967ನ್ನು ಈ ಮುಂದಿನಂತೆ ತಿದ್ದುಪಡಿ ಮಾಡಲು ಕರ್ನಾಟಕ ನಾಗರಿಕ ಸೇವೆಗಳು ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14) ರ ಕಲಂ 3 ಉಪ ಕಲಂ (1) ರೊಂದಿಗೆ ಓದಿಕೊಂಡ ಕಲಂ 8 ರಂತೆ…














