Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಮ್ಯಾನ್ ಹೋಲ್ ಸ್ವಚ್ಛಗೊಳಿಸೋದಕ್ಕೆ ಇಳಿದಿದ್ದಂತ ಓರ್ವ ಕಾರ್ಮಿಕ ಉಸಿರುಗಟ್ಟಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಆಶ್ರಯನಗರದ ನಿವಾಸಿ ಪುಟ್ಟಸ್ವಾಮಿ ಸಾವನ್ನಪ್ಪಿದ್ದಾರೆ. ಹಣದ ಆಮಿಷ ತೋರಿಸಿ ಪುಟ್ಟಸ್ವಾಮಿಯನ್ನು ಮ್ಯಾನ್ ಹೋಲ್ ಕ್ಲೀನ್ ಮಾಡಿಸೋದಕ್ಕೆ ಇಳಿಸಿರುವಂತ ಶಂಕೆ ವ್ಯಕ್ತವಾಗಿದೆ. ಆಂಥೋನಿ ಜೊತೆಗೆ ಮ್ಯಾನ್ ಹೋಲ್ ಸ್ವಚ್ಛಗೊಳಿಸೋದಕ್ಕೆ ಪುಟ್ಟಸ್ವಾಮಿ ಇಳಿದಿದ್ದರು. ಒಳಚರಂಡಿಗೆ ಇಳಿದು ಸುಮಾರು ಒಂದು ಗಂಟೆ ಕೆಲಸ ಮಾಡಿದ್ದರು. ಈ ವೇಳೆ ಉಸಿರುಗಟ್ಟಿದಂತೆ ಆಗಿ ಆಂಥೋನಿ, ಪುಟ್ಟಸ್ವಾಮಿ ಮೇಲೆ ಬಂದಿದ್ದರು. ಆಸ್ಪತ್ರೆಗೆ ದಾಖಲಾಗೆ ದಾಖಲಾಗದೇ ಮನೆಗೆ ತೆರಳಿದ್ದಂತ ಪುಟ್ಟಸ್ವಾಮಿ ಸಾವನ್ನಪ್ಪಿದ್ದಾರೆ. ಅಸ್ವಸ್ಥಗೊಂಡಿರುವಂತ ಆಂಥೋನಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಯಶವಂತಪುರದ ಆರ್ ಎಂ ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಂಗ್ಲಾದೇಶ: ಇಲ್ಲಿನ ಡಾಕಾದಲ್ಲಿ ಶಾಲೆಯ ಮೇಲೆ ತರಬೇತಿ ವಿಮಾನವೊಂದು ಪತನಗೊಂಡಿದೆ. ವಿಮಾನ ಪತನದ ಶಬ್ದ ಕೇಳಿ ಶಾಲೆಯಲ್ಲಿದ್ದಂತ ವಿದ್ಯಾರ್ಥಿಗಳು ಧಿಕ್ಕೆಟ್ಟು ಓಡಿದ್ದಾರೆ. ಬಾಂಗ್ಲಾದೇಶದ ಡಾಕಾದಲ್ಲಿ ತರಬೇತಿ ವಿಮಾನವಾಗಿರುವಂತ ಎಫ್-7 ಜೆಟ್ ವಿಮಾನ ಪತನವಾಗಿದೆ. ಶಾಲೆಯ ಮೇಲೆ ಬಿದ್ದು ಪತನಗೊಂಡ ದುರಂತದಲ್ಲಿ ಈ ಕ್ಷಣಕ್ಕೆ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://twitter.com/ANI/status/1947217710884257800 ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನವೊಂದು ರಾಜಧಾನಿ ಢಾಕಾದಲ್ಲಿರುವ ಕಾಲೇಜು ಆವರಣದಲ್ಲಿ ಇಂದು ಪತನಗೊಂಡು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಅಗ್ನಿಶಾಮಕ ಸೇವೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಒಂದೆಡೆ ಉಪ ಮುಖ್ಯಮಂತ್ರಿ ಸಾಗರ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ಅನುದಾನವನ್ನು ಮಂಜೂರು ಮಾಡಿದ್ದರೇ, ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ 50 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಪತ್ರಬರೆದು ತಿಳಿಸಿದ್ದಾರೆ. ಸಿಎಂ ಬರೆದಿರುವಂತ ಪತ್ರದಲ್ಲಿ 2025-26ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಘೋಷಿಸಲಾದ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ತಮ್ಮ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿಗಳ ವಿಶೇಷ ಅನುದಾನ ಹಂಚಿಕೆ ಮಾಡಲಾಗುವುದು ಎಂದಿದ್ದಾರೆ. ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಹಂಚಿಕೆ ಮಾಡಿದಂತ ಅನುದಾನದಲ್ಲಿ ಈ ಕೆಳಕಂಡಂತೆ ಕಾಮಗಾರಿಗಳಿಗೆ ಅನುದಾನದ ಪ್ರಮಾಣವನ್ನು ನಿಗದಿ ಪಡಿಸಿದ್ದಾರೆ. ಲೋಕೋಪಯೋಗಿ ಇಲಾಖೆ, ರಸ್ತೆ ಮತ್ತು ಸೇತುವೆ ಕಾಮಗಾರಿಗಳು, ಗ್ರಾಮೀಣ ರಸ್ತೆ ಮತ್ತು ಸೇತುವೆ ಹಾಗೂ ನಗರ ಪ್ರದೇಶದ ಕಾಮಗಾರಿಗಳಿಗೆ ರೂ.37.50 ಕೋಟಿ ಅನುದಾನ ಬಳಸಲು…
ಬೆಂಗಳೂರು: ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಇಚ್ಛೆ/ಆಯ್ಕೆಗಳನ್ನು (Options) ದಾಖಲಿಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಜುಲೈ 22ರಂದು ಸಂಜೆ 6ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಸೀಟ್ ಮ್ಯಾಟ್ರಿಕ್ಸ್ ಬಂದ ನಂತರ ಅದನ್ನು ಪರಿಶೀಲಿಸಿ, ಅಪ್ ಲೋಡ್ ಮಾಡಿದ್ದು ಎಚ್ಚರಿಕೆಯಿಂದ ಆಪ್ಷನ್ಸ್ ದಾಖಲಿಸಲು ಪ್ರಸನ್ನ ಅವರು ಅಭ್ಯರ್ಥಿಗಳಿಗೆ ಸಲಹೆ ನೀಡಿದ್ದಾರೆ. ಪ್ರಸಕ್ತ ಸಾಲಿನ ಶುಲ್ಕದ ವಿವರಗಳು ಇನ್ನೂ ಪ್ರಾಧಿಕಾರಕ್ಕೆ ಬಂದಿರದ ಕಾರಣ 2024-25ನೇ ಸಾಲಿನ ಶುಲ್ಕದ ವಿವರಗಳನ್ನೇ ಸದ್ಯಕ್ಕೆ ವೆಬ್ ಸೈಟ್ ನಲ್ಲಿ ನೀಡಲಾಗಿದೆ. ಸರ್ಕಾರದಿಂದ ಪರಿಷ್ಕೃತ ಶುಲ್ಕ ಮಾಹಿತಿ ಬಂದ ನಂತರ ಅದನ್ನು ಅಪ್ ಡೇಟ್ ಮಾಡಲಾಗುವುದು ಎಂದು ಅವರು ವಿವರಿಸಿದ್ದಾರೆ. ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ, ಯೋಗಾ ಮತ್ತು ನ್ಯಾಚುರೋಪತಿ ಕೋರ್ಸ್ ಗಳ ಸೀಟ್ ಮ್ಯಾಟ್ರಿಕ್ಸ್ ಇನ್ನೂ ಸರ್ಕಾರದಿಂದ ಬಂದಿಲ್ಲ. ಬಂದ ನಂತರ ಆ ಕೋರ್ಸ್ ಗಳಿಗೆ ಆಪ್ಷನ್ ಎಂಟ್ರಿಗೆ ಬಿಡಲಾಗುವುದು ಎಂದು ಹೇಳಿದರು.…
ನವದೆಹಲಿ: ಮಾರುಕಟ್ಟೆ ಬಂಡವಾಳೀಕರಣ (ಎಂ-ಕ್ಯಾಪ್) ದಲ್ಲಿ ಭಾರತದ ಎರಡನೇ ಅತ್ಯಂತ ಮೌಲ್ಯಯುತ ಕಂಪನಿಯಾದ HDFC ಬ್ಯಾಂಕ್ ಶನಿವಾರ 1:1 ಅನುಪಾತದಲ್ಲಿ ತನ್ನ ಮೊದಲ ಬೋನಸ್ ವಿತರಣೆಯನ್ನು ಪ್ರಕಟಿಸಿದೆ. ಬೋನಸ್ ಷೇರುಗಳ ಜೊತೆಗೆ, ಖಾಸಗಿ ಸಾಲದಾತ ಸಂಸ್ಥೆಯು ವಿಶೇಷ ಮಧ್ಯಂತರ ಲಾಭಾಂಶವನ್ನು ಸಹ ಘೋಷಿಸಿದೆ. “ಬ್ಯಾಂಕ್ 1:1 ಅನುಪಾತದಲ್ಲಿ ಬೋನಸ್ ಈಕ್ವಿಟಿ ಷೇರುಗಳನ್ನು ವಿತರಿಸಲು ಅನುಮೋದಿಸಿದೆ. ಅಂದರೆ, ದಾಖಲೆ ದಿನಾಂಕದಂದು ಬ್ಯಾಂಕಿನ ಸದಸ್ಯರು ಹೊಂದಿರುವ ಪ್ರತಿ 1 (ಒಂದು) ಸಂಪೂರ್ಣವಾಗಿ ಪಾವತಿಸಿದ ಪ್ರತಿ 1 (ಒಂದು) ಈಕ್ವಿಟಿ ಷೇರಿಗೆ ತಲಾ 1 (ಒಂದು) ಈಕ್ವಿಟಿ ಪಾಲು, ಶಾಸನಬದ್ಧ ಮತ್ತು ನಿಯಂತ್ರಕ ಅನುಮೋದನೆಗಳು ಮತ್ತು ಅಂಚೆ ಮತದಾನದ ಮೂಲಕ ಸದಸ್ಯರ ಅನುಮೋದನೆಗೆ ಒಳಪಟ್ಟಿರುತ್ತದೆ,” ಎಂದು ಸಾಲದಾತ ಸಂಸ್ಥೆಯು BSE ಫೈಲಿಂಗ್ನಲ್ಲಿ ತಿಳಿಸಿದೆ. ಬೋನಸ್ ಈಕ್ವಿಟಿ ಷೇರುಗಳಿಗೆ ಸದಸ್ಯರ ಅರ್ಹತೆಯನ್ನು ನಿರ್ಧರಿಸಲು ದಾಖಲೆ ದಿನಾಂಕವನ್ನು ಬುಧವಾರ, ಆಗಸ್ಟ್ 27, 2025 ಎಂದು ನಿಗದಿಪಡಿಸಲಾಗಿದೆ. ಇದಲ್ಲದೆ, HDFC ಬ್ಯಾಂಕ್ 2025-26 (FY26) ಹಣಕಾಸು ವರ್ಷಕ್ಕೆ ಪ್ರತಿ ಈಕ್ವಿಟಿ…
ಚಿತ್ರದುರ್ಗ: ತನಗೆ ಹೆಣ್ಣು ಸಿಗುತ್ತಿಲ್ಲ ಎಂಬುದಾಗಿ ಮನನೊಂದು ಹೋಂಗಾರ್ಡ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಜೆಬಿ ಹಳ್ಳಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಜೆ.ಬಿ ಹಳ್ಳಿಯಲ್ಲಿ ಹೋಂಗಾರ್ಡ್ ತಿರುಮಲ(31) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ನೇಣಿಗೆ ಹೋಂಗಾರ್ಡ್ ತಿರುಮಲ ಶರಣಾಗಿದ್ದಾರೆ. ಇತ್ತೀಚೆಗೆ ಮೂರು ಕಡೆಯಲ್ಲಿ ತಿರುಮಲ ಹೆಣ್ಣು ನೋಡಿಕೊಂಡು ಬಂದಿದ್ದರು. ಅವರಲ್ಲಿ ಯಾರೂ ಒಪ್ಪದ ಹಿನ್ನಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. https://kannadanewsnow.com/kannada/horrific-accident-between-cars-in-hassan-two-dead-on-the-spot-four-seriously-injured/ https://kannadanewsnow.com/kannada/power-outage-in-these-areas-of-bangalore-on-july-21-and-22/
ಹಾಸನ: ಜಿಲ್ಲೆಯಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಹಲವರು ಗಾಯಗೊಂಡಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೀನಾಕ್ಷಿ, ಪ್ರತಾಪ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ಜಖಂ ಆಗಿದ್ದಾವೆ. ಈ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚನ್ನಪಟ್ಟಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/india-efta-trade-deal-to-take-effect-on-oct-1-to-generate-1-million-jobs-piyush-goyal/ https://kannadanewsnow.com/kannada/power-outage-in-these-areas-of-bangalore-on-july-21-and-22/
ಆಫ್ರಿಕಾ: ನೈಜರ್ ನಲ್ಲಿ ಬಂದೂಕುಧಾರಿಗಳು ಇಬ್ಬರು ಭಾರತೀಯರನ್ನು ಗುಂಡಿಟ್ಟು ಕೊಂದು, ಓರ್ವ ವ್ಯಕ್ತಿಯನ್ನು ಅಪಹರಿಸಿರುವಂತ ಘಟನೆಯು ನೈಜೀರಿಯಾದ ನೈಋತ್ಯ ಡೋನೊ ಪ್ರದೇಶದಲ್ಲಿ ನಡೆದಿದೆ. ನೈಜರ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಶುಕ್ರವಾರ X ನಲ್ಲಿ ನೀಡಿದ ಹೇಳಿಕೆಯಲ್ಲಿ ಮಂಗಳವಾರ ದಾಳಿ ನಡೆದಿದೆ ಮತ್ತು ಸಾವನ್ನಪ್ಪಿದವರ ಮೃತದೇಹಗಳನ್ನು ಸ್ವದೇಶಕ್ಕೆ ಕಳುಹಿಸಲು ಮತ್ತು ಅಪಹರಿಸಲ್ಪಟ್ಟ ವ್ಯಕ್ತಿಯ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ತಿಳಿಸಿದೆ. https://twitter.com/IndiainNiger/status/1946189382152556790 ನೈಜರ್ನ ಎಲ್ಲಾ ಭಾರತೀಯರು ಜಾಗರೂಕರಾಗಿರಲು ರಾಯಭಾರ ಕಚೇರಿ ಸಲಹೆ ನೀಡಿದೆ. X ನಲ್ಲಿ ಪೋಸ್ಟ್ನಲ್ಲಿ, “ಜುಲೈ 15 ರಂದು ನೈಜರ್ನ ಡೋಸೊ ಪ್ರದೇಶದಲ್ಲಿ ನಡೆದ ಘೋರ ಭಯೋತ್ಪಾದಕ ದಾಳಿಯಲ್ಲಿ, ಇಬ್ಬರು ಭಾರತೀಯ ಪ್ರಜೆಗಳು ದುರಂತವಾಗಿ ಪ್ರಾಣ ಕಳೆದುಕೊಂಡರು ಮತ್ತು ಒಬ್ಬರನ್ನು ಅಪಹರಿಸಲಾಗಿದೆ. ಮೃತ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪಗಳು. ನಿಯಾಮಿಯಲ್ಲಿರುವ ಮಿಷನ್, ಮೃತದೇಹಗಳನ್ನು ಸ್ವದೇಶಕ್ಕೆ ತರಲು ಮತ್ತು ಅಪಹರಿಸಲ್ಪಟ್ಟ ಭಾರತೀಯನ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ನೈಜರ್ನ ಎಲ್ಲಾ ಭಾರತೀಯರು ಜಾಗರೂಕರಾಗಿರಲು ಸೂಚಿಸಲಾಗಿದೆ…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಸಹಕಾರನಗರ” ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 21.07.2025 (ಸೋಮವಾರ) ರಿಂದ 22.07.2025 (ಮಂಗಳವಾರ) ರಂದು ಬೆಳಗ್ಗೆ10:00 ಯಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್ಎಸ್ ಲೇಔಟ್, ಸೂರ್ಯೋದಯ ನಗರ. 2, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್…
ಮುಂಬೈ : ಅಲಯಂಜ್ ಸಮೂಹ (Allianz)ದ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಅಲಯಂಜ್ ಯುರೋಪ್ ಬಿ.ವಿ., ಹಾಗೂ ಜಿಯೋ ಫೈನಾನ್ಷಿಯಲ್ ಸರ್ವೀಸಸ್ ಲಿಮಿಟೆಡ್ (ಜೆಎಫ್ಎಸ್ಎಲ್) ಭಾರತೀಯ ವಿಮಾ ಮಾರುಕಟ್ಟೆಯನ್ನು ಪ್ರವೇಶಿಸಲು 50:50 ದೇಶೀಯ ಮರುವಿಮಾ ಜಂಟಿ ಉದ್ಯಮವನ್ನು ರಚನೆ ಮಾಡುವುದಾಗಿ ಘೋಷಿಸಿವೆ. ಇದಕ್ಕಾಗಿ ಎರಡೂ ಕಂಪನಿಗಳು ಬದ್ಧತೆಯ ಒಪ್ಪಂದವನ್ನು ಮಾಡಿಕೊಂಡಿವೆ. ಜೆಎಫ್ಎಸ್ಎಲ್ ತುಂಬ ಗಟ್ಟಿಯಾಗಿ ಸ್ಥಳೀಯ ತಿಳಿವಳಿಕೆ ಮತ್ತು ಬಲವಾದ ಡಿಜಿಟಲ್ ಉಪಸ್ಥಿತಿಯನ್ನು ಹೊಂದಿದ್ದರೆ, ಅಲಯಂಜ್ ಬಲವಾದ ಅಂಡರ್ರೈಟಿಂಗ್ ಹಾಗೂ ಜಾಗತಿಕ ಮರುವಿಮಾ ಸಾಮರ್ಥ್ಯಗಳನ್ನು ತರುತ್ತದೆ. ಈ ಜಂಟಿ ಉದ್ಯಮವು ಭಾರತದಲ್ಲಿ ಅಲಯಂಜ್ ನ ಅಸ್ತಿತ್ವದಲ್ಲಿರುವ ಅಲಯಂಜ್- ಮರು ವಿಮೆ ಮತ್ತು ಅಲಯಂಜ್ ವಾಣಿಜ್ಯ ಪೋರ್ಟ್ಫೋಲಿಯೊಗಳನ್ನು ಸಹ ಬಳಸಿಕೊಳ್ಳುತ್ತದೆ. ಜಿಯೋ ಫೈನಾನ್ಷಿಯಲ್ ಸರ್ವೀಸಸ್ ಲಿಮಿಟೆಡ್ನ ಕಾರ್ಯನಿರ್ವಾಹಕೇತರ ನಿರ್ದೇಶಕಿ ಆದ ಇಶಾ ಅಂಬಾನಿ ಅವರು ಮಾತನಾಡಿ, “ಭಾರತವು ಹೆಚ್ಚುತ್ತಿರುವ ಸಮೃದ್ಧತೆ, ಬೆಳೆಯುತ್ತಿರುವ ಆರ್ಥಿಕ ಅರಿವು ಹಾಗೂ ವ್ಯಾಪಕ ಆಗುತ್ತಿರುವ ಡಿಜಿಟಲ್ ಪರಿಸರದಿಂದ ವಿಮಾ ಬೇಡಿಕೆಯಲ್ಲಿ ಏರಿಕೆಯನ್ನು ಕಾಣುತ್ತಿದೆ. ಈ ಪಾಲುದಾರಿಕೆಯು ಅಲಯಂಜ್ ನ ಜಾಗತಿಕ…