Author: kannadanewsnow09

ಬಳ್ಳಾರಿ : ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ಎಲ್ಲಾ ಖಾಯಂ, ಅರೆ ಖಾಯಂ, ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವಿಡೀಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ನ.01 ರಿಂದ 07 ರ ವರೆಗೆ ಒಂದು ವಾರಗಳ ಕಾಲ ಕನ್ನಡ ಚಲನಚಿತ್ರಗಳನ್ನು ಜಿಲ್ಲೆಯ ಎಲ್ಲಾ ಚಲನಚಿತ್ರ ಮಂದಿರಗಳ ಮಾಲೀಕರು ಪ್ರದರ್ಶಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ತಿಳಿಸಿದ್ದಾರೆ. ಒಂದು ವೇಳೆ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸದೇ ಇದ್ದಲ್ಲಿ ಚಲನಚಿತ್ರ ಮಂದಿರಗಳ ಪರವಾನಿಗೆಯನ್ನು ನವೀಕರಿಸುವುದಿಲ್ಲ. ಅ.31 ಮತ್ತು ನ.01 ರಂದು ಚಿತ್ರಮಂದಿರಗಳ ಮೇಲೆ ಕಡ್ಡಾಯವಾಗಿ ದೀಪಾಂಲಕಾರ ಮಾಡಬೇಕು ಎಂದು ಅವರು ತಿಳಿಸಿದ್ದಾರೆ. https://kannadanewsnow.com/kannada/business-license-mandatory-for-residential-pg-businesses-in-bengaluru-gba-order/ https://kannadanewsnow.com/kannada/shivananda-tagadur-re-elected-as-the-state-president-of-karnataka-working-journalists-association-kuwj/

Read More

ಬೆಂಗಳೂರು : ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಅನಧಿಕೃತ ಪೇಯಿಂಗ್ ಗೆಸ್ಟ್(PG)/ ವಸತಿ ಗೃಹಗಳ ಉದ್ದಿಮೆದಾರರಿಗೆ ಅಂತಿಮ ಎಚ್ಚರಿಕೆಯಾಗಿದೆ. ಬೆಂಗಳೂರು ಪೂರ್ವ ನಗರಪಾಲಿಕೆಯ ವ್ಯಾಪ್ತಿಯಲ್ಲಿ ಅನೇಕ PG ಗಳು ಉದ್ದಿಮೆ ಪರವಾನಗಿ ಪಡೆಯದೆ ಹಾಗೂ ಸ್ಥಾಪಿತ ಮಾನದಂಡಗಳನ್ನು ಉಲ್ಲಂಘಿಸಿ ವಾಹಿವಾಟು ಮಾಡುತ್ತಿರುವ ದೂರು ಬಂದಿರುತ್ತದೆ. ಪ್ರದೇಶದ ಪ್ರಮುಖ ಉಲ್ಲಂಘನೆಗಳಲ್ಲಿ:- * ವಸತಿ ವಲಯಗಳಲ್ಲಿ ಅನುಮತಿಯಿಲ್ಲದೆ ವಾಹಿವಾಟು ಮಾಡುತ್ತಿರುವುದು. * ಮೂಲಭೂತ ಸುರಕ್ಷತೆ ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸದೇ ಇರುವುದು. * ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದು * ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಾಪಿಸದಿರುವುದು, ಇತ್ಯಾದಿ. ಈ ಅನಧಿಕೃತ ಪೇಯಿಂಗ್ ಗೆಸ್ಟ್(PG)/ ವಸತಿ ಗೃಹಗಳು ಅಗತ್ಯ ಸುರಕ್ಷತಾ ಕ್ರಮಗಳನ್ನು ಹೊಂದಿಲ್ಲದೇ ಸಾರ್ವಜನಿಕ ಆರೋಗ್ಯಕ್ಕೆ, ರಕ್ಷಣೆಗಳಿಗೆ ಅಪಾಯಕ್ಕೆ ಕಾರಣವಾಗುವ ಹಿನ್ನಲೆಯಲ್ಲಿ ಬೆಂಗಳೂರು ಪೂರ್ವ ನಗರ ಪಾಲಿಕೆ (ಬಿಇಸಿಸಿ) ವ್ಯಾಪ್ತಿಯಲ್ಲಿ ಅಂತಹ ಅನಧಿಕೃತ PG ವಸತಿಗೃಹಗಳನ್ನು ನಿಯಂತ್ರಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಾರ್ವಜನಿಕ ಪ್ರಕಟಣೆ ಹೊರಡಿಸಿದ 07 ದಿನಗಳಲ್ಲಿ ಬೆಂಗಳೂರು ಪೂರ್ವ ನಗರ ಪಾಲಿಕೆ…

Read More

ಬೆಂಗಳೂರು: ಕಾರ್ಯದರ್ಶಿಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಬೆಂಗಳೂರು ನಗರ ಜಿಲ್ಲೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಜಯನಗರ ಬೆಂಗಳೂರು (ದಕ್ಷಿಣ), ಕೆಎ-05 ಕಛೇರಿಯು ಸರ್ವೇ ನಂ. 64/1, ಅಂಜನಾಪುರ, ಉತ್ತರಹಳ್ಳಿ, ಹೋಬಳಿಯ, ಜೆ.ಪಿ.ನಗರ, 9ನೇ ಹಂತ, ಬೆಂಗಳೂರು-560108 ಇಲ್ಲಿ ನಿರ್ಮಿಸಲಾಗಿರುವ ನೂತನ ಕಟ್ಟಡದ ವಿಳಾಸಕ್ಕೆ ಸ್ಥಳಾಂತರಗೊಂಡಿದ್ದು, ಸಾರ್ವಜನಿಕರು ಇಲಾಖೆಗೆ ಸಂಬಂಧಪಟ್ಟ ಕೆಲಸ ಕಾರ್ಯಗಳಿಗೆ ಭೇಟಿ ನೀಡಬಹುದು ಎಂದು ಬೆಂಗಳೂರು (ದಕ್ಷಿಣ) ಜಯನಗರ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಅಧಿಕಾರಿಗಳು ತಿಳಿಸಿದ್ದಾರೆ. ಅಂಜನಾಪುರ ಪ್ರಾದೇಶಿಕ ಕಚೇರಿ ಯಿಂದ ಬಸ್ ಬಿಡುವ ಸಮಯ ವೇಳಾ ಪಟ್ಟಿ ಬೆಳಿಗ್ಗೆ 09 :10, 09: 35, 10: 20,11: 00,11: 35 ಗಂಟೆಗೆ. ಮಧ್ಯಾಹ್ನ 12: 05, 01:05, 2:00, 3:00, 3:25, 04: 05, 04:30. ಮತ್ತು ಸಂಜೆ 05:10, 06: 15 ಗಂಟೆಗೆಳಿಗೆ. ಕೆ.ಆರ್.ಮಾರ್ಕೆಟ್ ಬಸ್ ನಿಲ್ದಾಣದಿಂದ ಬಿಡುವ ಸಮಯ ವೇಳಾ ಪಟ್ಟಿ ಬೆಳಿಗ್ಗೆ 08: 05, 08:30, 09: 00, 10:00,10:30,…

Read More

ನವದೆಹಲಿ: ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT) 2025-26ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ (ITR) ಮತ್ತು ಆಡಿಟ್ ವರದಿಗಳನ್ನು ಸಲ್ಲಿಸಲು ಗಡುವನ್ನು ವಿಸ್ತರಿಸಿದೆ. ತೆರಿಗೆದಾರರು ಈಗ ನವೆಂಬರ್ 10 ರವರೆಗೆ ಆಡಿಟ್ ವರದಿಗಳನ್ನು ಸಲ್ಲಿಸಲು ಮತ್ತು ಡಿಸೆಂಬರ್ 10 ರವರೆಗೆ ITR ಗಳನ್ನು ಸಲ್ಲಿಸಲು ಅವಕಾಶವಿದೆ. ಈ ನಿರ್ಧಾರವು ಮೂಲ ಗಡುವನ್ನು ಪೂರೈಸಲು ಹೆಣಗಾಡುತ್ತಿರುವ ತೆರಿಗೆದಾರರು ಮತ್ತು ವೃತ್ತಿಪರರಿಗೆ ಪರಿಹಾರವನ್ನು ನೀಡುತ್ತದೆ. ಆಡಿಟ್ ವರದಿಗಳಿಗೆ ಪರಿಷ್ಕೃತ ಗಡುವುಗಳು ಆರಂಭದಲ್ಲಿ, ತೆರಿಗೆ ಆಡಿಟ್ ವರದಿಗಳನ್ನು ಸಲ್ಲಿಸುವ ಗಡುವನ್ನು ಸೆಪ್ಟೆಂಬರ್ 30 ಕ್ಕೆ ನಿಗದಿಪಡಿಸಲಾಗಿತ್ತು, ಆದರೆ ಅದನ್ನು ಅಕ್ಟೋಬರ್ 31, 2025 ರವರೆಗೆ ವಿಸ್ತರಿಸಲಾಯಿತು. ವಿವಿಧ ಹೈಕೋರ್ಟ್‌ಗಳ ಆದೇಶಗಳ ನಂತರ CBDT ಈ ಗಡುವನ್ನು ನವೆಂಬರ್ 10 ಕ್ಕೆ ವಿಸ್ತರಿಸಿತು. ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ಹರಿಯಾಣ ಮತ್ತು ಗುಜರಾತ್ ಹೈಕೋರ್ಟ್‌ಗಳ ನಿರ್ಧಾರಗಳಿಂದ ಈ ವಿಸ್ತರಣೆಗಳು ಪ್ರಭಾವಿತವಾಗಿವೆ. ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆಗಳು ಸೇರಿದಂತೆ ವೃತ್ತಿಪರ ಸಂಘಗಳಿಂದ ಹಲವಾರು ವಿನಂತಿಗಳ ನಂತರ ಈ…

Read More

ಮಂಡ್ಯ : ಶೋಷಣೆಗೆ ಒಳಗಾದವರು ಯಾರೇ ಆಗಿರಲಿ ಆಯೋಗಕ್ಕೆ ಬಂದು ಪ್ರಕರಣ ದಾಖಲಿಸಬಹುದು ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಅಯೋಗ ಸದಾ ನಿಮ್ಮೊಂದಿಗೆ ಇರುತ್ತದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಅಯೋಗ ಅಧ್ಯಕ್ಷರಾದ ಡಾ. ಎಲ್ ಮೂರ್ತಿ ಅವರು ಹೇಳಿದರು. ಜಿಲ್ಲಾ ಪಂಚಾಯತಿ ಕಾವೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ 20 ದಿನಗಳ ಹಿಂದೆ ನಾನು ಆಯೋಗಕ್ಕೆ ನೂತನ ಅಧ್ಯಕ್ಷನಾಗಿ ನೇಮಕ ಕೊಂಡಿದ್ದೇನೆ, ಆಯೋಗದಲ್ಲಿ ಒಟ್ಟಾರೆ 1503 ಪ್ರಕರಣಗಳು ಹಾಗೂ 4943 ಪತ್ರ ವ್ಯವಹಾರದ ಕಡತಗಳು ಬಾಕಿ ಇವೆ ಎಲ್ಲವನ್ನೂ ಶೀಘ್ರವಾಗಿ ವಿಲೇವಾರಿ ಮಾಡಲು ಶ್ರಮಿಸುತ್ತೇನೆ ಎಂದು ಹೇಳಿದರು. ಆಯೋಗದ ಅಧ್ಯಕ್ಷನಾದ ನಂತರ ಮೊದಲು ನಾನು ಮಂಡ್ಯ ಜಿಲ್ಲೆಯಲ್ಲಿ ಸಭೆ ನಡೆಸುತಿದ್ದೇನೆ, ಮಂಡ್ಯ ಜಿಲ್ಲೆಯ ಸ್ಥಿತಿ ಗತಿಗಳ ಕುರಿತು ಹತ್ತಿರದಿಂದ ನಾನು ಬಲ್ಲೆ ಏಕೆಂದರೆ ನಾನು…

Read More

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (Karnataka Union Of Working Journalist-KUWJ) ರಾಜ್ಯ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಪುನಾರಾಯ್ಕೆಯಾಗಿದ್ದಾರೆ. 2025-28ನೇ ಸಾಲಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಬಂದಿದ್ದರಿಂದ ಅವಿರೋಧ ಆಯ್ಕೆಯಾದಂತಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕುಗ್ರಾಮ ತಗಡೂರು ಗ್ರಾಮದ ರೈತ ಕುಟುಂಬದ ಶ್ರೀಮತಿ ಕಮಲಮ್ಮ ಮತ್ತು ವೀರೇಗೌಡ ದಂಪತಿಗಳ ಪುತ್ರನಾಗಿ ಜನಿಸಿದ ಟಿ.ವಿ.ಶಿವಾನಂದ (ಆನಂದ) ಅವರು ತೊಂಬತ್ತರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದವರು. ಬಾಗೂರು-ನವಿಲೆ ಸುರಂಗ ಸಂತ್ರಸ್ತರ ಪರವಾಗಿ ಹೋರಾಟ ಸಂಘಟಿಸಿದ್ದ ಅವರು, ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟ, ರೈತ ಹಿತ ರಕ್ಷಣಾ ಸಮಿತಿ, ಹಾಸನ ಜಿಲ್ಲಾ ಸಾಕ್ಷರತಾ ಆಂದೋಲನ ಸಮಿತಿ ಸಂಚಾಲಕರಾಗಿ ದುಡಿದವರು. ಹಲವು ಜನಪರ ಚಳವಳಿಯಲ್ಲಿ ಮುಂದಾಳಾಗಿ ಗುರುತಿಸಿಕೊಳ್ಳುತ್ತಲೇ ಪತ್ರಕರ್ತರಾಗಿ ಮಾಗಿದವರು. 2004ರಲ್ಲಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷರಾಗಿದ್ದಾಗ ಸುಸಜ್ಜಿತ ಪತ್ರಕರ್ತರ ಭವನವನ್ನು ನಿರ್ಮಾಣ…

Read More

ಬೆಂಗಳೂರು: ಎಂ.ಎಸ್ಸಿ. (ನರ್ಸಿಂಗ್). ಎಂಪಿಟಿ, ಎಂ.ಎಸ್ಸಿ. ಎ.ಎಚ್.ಎಸ್., ಪಿಬಿ ಬಿ.ಎಸ್ಸಿ. (ನರ್ಸಿಂಗ್). ಬಿ.ಎಸ್ಸಿ. ಎ.ಎಚ್.ಎಸ್. (ಲ್ಯಾಟರಲ್ ಎಂಟ್ರಿ) ಕೋರ್ಸುಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅ.30ರ ಮಧ್ಯಾಹ್ನ 3ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ತಾತ್ಕಾಲಿಕ ಸೀಟು ಹಂಚಿಕೆಯ ಫಲಿತಾಂಶವನ್ನು ಅ.30ರ ರಾತ್ರಿ 8ರ ನಂತರ ಹಾಗೂ ಅಂತಿಮ ಸೀಟು ಹಂಚಿಕೆಯ ಫಲಿತಾಂಶವನ್ನು ಅ.31ರ ಬೆಳಿಗ್ಗೆ 11 ನಂತರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಶುಲ್ಕ ಪಾವತಿ ಹಾಗೂ ಸೀಟು ಖಾತರಿ ಚೀಟಿ ಡೌನ್ ಲೋಡ್ ಮಾಡಿಕೊಳ್ಳಲು ನ.1ರಿಂದ ನ.5ರ ಸಂಜೆ 4ರವರೆಗೆ ಅವಕಾಶವಿರುತ್ತದೆ. ಹಿಂದಿನ ಸುತ್ತಿನಲ್ಲಿ ಶುಲ್ಕ ಪಾವತಿಸಿದ್ದರೆ ಈ ಸುತ್ತಿನಲ್ಲಿ ಹಂಚಿಕೆಯಾದ ಸೀಟಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತದೆ. ಸೀಟು ಹಂಚಿಕೆಯಾದವರು ನ.5ರ ಸಂಜೆ 6ರೊಳಗೆ ಆಯಾ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕು ಎಂದು ವಿವರಿಸಿದ್ದಾರೆ. ಈ ಸುತ್ತಿನಲ್ಲಿ ಸೀಟು ಹಂಚಿಕೆಯಾದಲ್ಲಿ ಅಥವಾ ಮೊದಲ ಸುತ್ತಿನಲ್ಲಿ ಹಂಚಿಕೆಯಾಗಿರುವ ಸೀಟು ದೃಢಪಟ್ಟಲ್ಲಿ…

Read More

ಮೈಸೂರು: ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಮತ್ತು ನಾಗನಹಳ್ಳಿ ನಡುವೆ ರಸ್ತೆ ಕೆಳಸೇತುವೆ ಕಾಮಗಾರಿಗಾಗಿ ಲೈನ್ ಬ್ಲಾಕ್ ಲಭ್ಯವಿಲ್ಲದ ಕಾರಣ, ಈ ಹಿಂದೆ ಮರುನಿಗದಿಪಡಿಸಲಾದ, ನಿಯಂತ್ರಿಸಲಾದ ಹಾಗೂ ಭಾಗಶಃ ರದ್ದುಗೊಳಿಸಲಾದ ಕೆಳಗಿನ ರೈಲು ಸೇವೆಗಳು ಎಂದಿನಂತೆ ಅದೇ ಮಾರ್ಗ ಮತ್ತು ಸಮಯದಲ್ಲಿ ಪುನರಾರಂಭ ಆಗಲಿವೆ. ರೈಲು ಸಂಖ್ಯೆ. 66579 ಕೆ.ಎಸ್.ಆರ್. ಬೆಂಗಳೂರು – ಅಶೋಕಪುರಂ ಮೆಮೂ ಮತ್ತು ರೈಲು ಸಂಖ್ಯೆ. 66554 ಅಶೋಕಪುರಂ – ಕೆ.ಎಸ್.ಆರ್. ಬೆಂಗಳೂರು ಮೆಮೂ, ದಿನಾಂಕ 29, 31 ಅಕ್ಟೋಬರ್, 19, 21, 26, 28 ನವೆಂಬರ್ ಮತ್ತು 17, 19 ಡಿಸೆಂಬರ್ 2025 ರಂದು ಈ ಹಿಂದೆ ಭಾಗಶಃ ರದ್ದುಗೊಳಿಸಲಾಗಿತ್ತು, ಈಗ ಅದೇ ಮಾರ್ಗದಲ್ಲಿ ಮತ್ತು ವೇಳಾಪಟ್ಟಿಯ ಪ್ರಕಾರ ಸಂಚರಿಸಲಿವೆ. ರೈಲು ಸಂಖ್ಯೆ. 16552 ಅಶೋಕಪುರಂ – ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಎಕ್ಸಪ್ರೆಸ್, ಈ ಹಿಂದೆ ದಿನಾಂಕ 29, 31 ಅಕ್ಟೋಬರ್, 19, 21, 26, 28 ನವೆಂಬರ್ ಮತ್ತು 17, 19 ಡಿಸೆಂಬರ್ 2025 ರಂದು…

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ರಾಜ್ಯ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಪುನಾರಾಯ್ಕೆಯಾಗಿದ್ದಾರೆ. ಈ ಮೂಲಕ ಸತತ ಮೂರನೇ ಅವಧಿಗೆ ಕೆಯುಡಬ್ಲೂಜೆ ಸಂಘದ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಆಯ್ಕೆಯಾಗಿದ್ದಾರೆ. 2025-28ನೇ ಸಾಲಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಬಂದಿದ್ದರಿಂದ ಅವಿರೋಧ ಆಯ್ಕೆಯಾದಂತಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕುಗ್ರಾಮ ತಗಡೂರು ಗ್ರಾಮದ ರೈತ ಕುಟುಂಬದ ಕಮಲಮ್ಮ ಮತ್ತು ವೀರೇಗೌಡ ದಂಪತಿಗಳ ಪುತ್ರನಾಗಿ ಜನಿಸಿದ ಟಿ.ವಿ.ಶಿವಾನಂದ (ಆನಂದ) ಅವರು ತೊಂಬತ್ತರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದವರು. ಬಾಗೂರು-ನವಿಲೆ ಸುರಂಗ ಸಂತ್ರಸ್ತರ ಪರವಾಗಿ ಹೋರಾಟ ಸಂಘಟಿಸಿದ್ದ ಅವರು, ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟ, ರೈತ ಹಿತ ರಕ್ಷಣಾ ಸಮಿತಿ, ಹಾಸನ ಜಿಲ್ಲಾ ಸಾಕ್ಷರತಾ ಆಂದೋಲನ ಸಮಿತಿ ಸಂಚಾಲಕರಾಗಿ ದುಡಿದವರು. ಹಲವು ಜನಪರ ಚಳವಳಿಯಲ್ಲಿ ಮುಂದಾಳಾಗಿ ಗುರುತಿಸಿಕೊಳ್ಳುತ್ತಲೇ ಪತ್ರಕರ್ತರಾಗಿ ಮಾಗಿದವರಾಗಿದ್ದಾರೆ. 2004ರಲ್ಲಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷರಾಗಿದ್ದಾಗ…

Read More

ಬೆಂಗಳೂರು: ಸಾಗರ ತಾಲ್ಲೂಕಿನ ಶರಾವತಿ ಕಣಿವೆಯಲ್ಲಿ ನಿರ್ಮಿಸಲು ಹೊರಟಿರುವಂತ ಸರ್ಕಾರದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದಾಗಿ ಪರಿಸರ, ಜೀವ ವೈವಿಧ್ಯತೆ ನಾಶವಾಗಲಿದೆ ಎಂಬುದಾಗಿ ರೈತ ಮುಖಂಡ ದಿನೇಶ್ ಶಿರವಾಳ ತಿಳಿಸಿದ್ದಾರೆ. ಇಂದು ಬೆಂಗಳೂರಿನ ಗಾಂಧಿ ಭವನದಲ್ಲಿ, ಪಶ್ಚಿಮ ಘಟ್ಟಗಳ ಉಳಿವಿಗಾಗಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಲ್ಲಿಸಬೇಕೆಂದು ಪರಿಸರಾಸಕ್ತರೂ, ರೈತರ ದುಂಡುಮೇಜಿನ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದಂತ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಕೇವಲ 300 ರಿಂದ 400 ಎಕ್ರೆ ಜಮೀನು ಮಾತ್ರ ಉಪಯೋಗಿಸುತ್ತೇವೆಂದು ಹೇಳುತ್ತಾರೆ. ಆದರೆ ಸುಮಾರು ಸಾವಿರದಿಂದ 1000 ಎಕರೆ ಅರಣ್ಯ ಪ್ರದೇಶ ಬಳಸಿಕೊಳ್ಳಲಾಗುತ್ತಿದೆ. ಇದರಲ್ಲಿ ಲಕ್ಷಾಂತರ ಮರಗಳು ಧರೆಗೆ ಉರುಳುತ್ತಿವೆ. ಅರಣ್ಯ ಇಲಾಖೆ ಹಾಗೂ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಿ, ಕೇಂದ್ರ ಸರ್ಕಾರದಿಂದ ಅನುಮತಿಯನ್ನು ಪಡೆಯದೆ, ರಾಜ್ಯ ಸರ್ಕಾರವು ಯೋಜನೆಗೆ ಹಣವನ್ನು ಬಿಡುಗಡೆಗೊಳಿಸಿದೆ ಎಂಬುದಾಗಿ ಕಿಡಿಕಾರಿದರು. 1 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲು ನಾಲ್ಕರಿಂದ ಐದು ರೂಪಾಯಿ…

Read More