Subscribe to Updates
Get the latest creative news from FooBar about art, design and business.
Author: kannadanewsnow09
ಕಲಬುರ್ಗಿ: ಜಿಲ್ಲೆಯಲ್ಲಿ ಇಂದು ಯುವಕನೊಬ್ಬನನ್ನು ಹಾಡ ಹಗಲೇ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ಪ್ರೀತಿಯ ವಿಚಾರಕ್ಕೆ ರಮಜಾನ್ ಮಹೆಬೂಬ್ ತಾರಾ(24) ಎಂಬಾತನನ್ನು ಹಾಡ ಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಅಫಜಲಪುರ ಸಿಪಿಐ ಹಾಗೂ ಪಿಎಸ್ಐ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/bjp-announces-list-of-candidates-for-karnataka-legislative-council-elections/ https://kannadanewsnow.com/kannada/england-pacer-james-anderson-announces-retirement-from-test-cricket/
ಬೆಂಗಳೂರು: ಕರ್ನಾಟ ವಿಧಾನ ಪರಿಷತ್ತಿನ ಮೂರು ಪದವೀಧರರ ಕ್ಷೇತ್ರ ಹಾಗೂ ಎರಡು ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಇಂದು ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ನಾರ್ಥ್ ಈಸ್ಟ್ ಪದವೀಧರ ಕ್ಷೇತ್ರಕ್ಕೆ ಅಮರನಾಥ ಪಾಟೀಲ್ ಗೆ ಟಿಕೆಟ್ ನೀಡಲಾಗಿದೆ. ಸೌತ್ ವೆಸ್ಟ್ ಪದವೀಧರರ ಕ್ಷೇತ್ರಕ್ಕೆ ಡಾ.ದನಂಜಯ ಸರ್ಜಿಗೆ ಟಿಕೆಟ್ ನೀಡಲಾಗಿದೆ. ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಎ ದೇವೇಗೌಡ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇನ್ನೂ ಸೌತ್ ಈಸ್ಟ್ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ವೈ ಎ ನಾರಾಯಣಸ್ವಾಮಿ, ಸೌತ್ ಶಿಕ್ಷಕರ ಕ್ಷೇತ್ರಕ್ಕೆ ಇಸಿ ನಿಂಗರಾಜುಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗಿದೆ. https://kannadanewsnow.com/kannada/former-cm-sm-krishnas-health-condition-stable-manipal-hospital-doctors/
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯ ಚಿಂತಾಜನಕವಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ. ಇನ್ನೇನು ಇನ್ನಿಲ್ಲ ಎಂದೆಲ್ಲ ಹೇಳಲಾಗುತ್ತಿತ್ತು. ಆದ್ರೇ ಮಾಜಿ ಸಿಎಂ ಎಸ್ ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ಮಣಿಪಾಲ್ ಆಸ್ಪತ್ರೆಯ ವೈದ್ಯರು ಸ್ಪಷ್ಟ ಪಡಿಸಿದ್ದಾರೆ. ಇಂದು ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಆರೋಗ್ಯದ ಬಗ್ಗೆ ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಗಂಭೀರ ಸ್ಥಿತಿಯನ್ನು ತಲುಪಿಲ್ಲ ಎಂಬುದಾಗಿ ತಿಳಿಸಿದೆ. ಮಣಿಪಾಲ್ ಆಸ್ಪತ್ರೆಯ ಡಾ.ಸತ್ಯನಾರಾಯಣ, ಡಾ.ಸುನೀಲ್ ಕಾರಂತ್ ಅವರ ನೇೃತ್ವದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಬಗ್ಗೆಯೂ ನಿಗಾ ವಹಿಸಲಾಗಿದೆ. ಅವರು ಆರೋಗ್ಯ ಸ್ಥಿತಿಯಲ್ಲಿ ಗಂಭೀರವಾಗಿ ಎಂಬುದು ಸುಳ್ಳು. ಅವರು ಇನ್ನಿಲ್ಲ ಎಂಬುದು ಸತ್ಯಕ್ಕೆ ದೂರವಾದದ್ದು ಆಗಿದೆ. ಆ ಬಗ್ಗೆ ಯಾರು ಆತಂಕಕ್ಕೆ ಒಳಗಾಗಬಾರದು ಎಂಬುದಾಗಿ ಸ್ಪಷ್ಟ ಪಡಿಸಿದೆ. https://kannadanewsnow.com/kannada/tree-felling-team-formed-in-bengaluru-to-work-actively-during-monsoon/ https://kannadanewsnow.com/kannada/england-pacer-james-anderson-announces-retirement-from-test-cricket/
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದ ವೇಳೆ ಧರೆಗುರುಳುವ ಮರ, ಮರದ ರೆಂಬೆ/ಕೊಂಬೆಗಳನ್ನು ತೆರವುಗೊಳಿಸುವ ಸಲುವಾಗಿ “ಮರ ಕಟಾವು ತಂಡಗಳು” ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಧರಗುರುಳಿದ ಮರಗಳನ್ನು ಕಾಲಮಿತಿಯೊಳಗಾಗಿ ತೆರವುಗೊಳಿಸಲಾಗುತ್ತಿದೆ ಎಂಬುದಾಗಿ ಬಿಬಿಎಂಪಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಗರಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮಳೆಯಾಗುವ ವೇಳೆ ಮರಗಳು, ಮರದ ರೆಂಬೆ/ಕೊಂಬೆಗಳು ಧರೆಗುರುಳಲಿವೆ. ಇದರಿಂದ ನಾಗರೀಕರಿಗೆ ಹಾಗೂ ವಾಹನ ಸವಾರರಿಗೆ ಸಾಕಷ್ಟು ಸಮಸ್ಯೆಯಾಗಲಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಅರಣ್ಯ ವಿಭಾಗವು ಮರ ಕಟಾವು ತಂಡಗಳನ್ನು ನಿಯೋಜಿಸಿದೆ ಎಂದಿದೆ. ಪಾಲಿಕೆಯ ನಿಯಂತ್ರಣ ಕೊಠಡಿಗಳಿಗೆ ಮರ, ಮರದ ರೆಂಬೆ/ಕೊಂಬೆಗಳು ಬಿದ್ದಂತಹ ದೂರುಗಳು ಬಂದ ಕೂಡಲೆ, ಆ ದೂರುಗಳನ್ನು ಆಯಾ ವಲಯದ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಿದ್ದಾರೆ. ಅನಂತರ ಅಧಿಕಾರಿಗಳು ಮರ, ಮರದ ರೆಂಬೆ/ಕೊಂಬೆ ಬಿದ್ದಿರುವ ಸ್ಥಳಕ್ಕೆ ಮರ ಕಟಾವು ತಂಡಗಳನ್ನು ಕಳುಹಿಸಿ ಧರೆಗುರುಳಿದ ಮರಗಳನ್ನು ಕಟಾವು ಮಾಡಿ ನಾಗರೀಕರು/ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದ್ದಾರೆ ಎಂದು ತಿಳಿಸಿದೆ. 39 ಮರ ಕಟಾವು ತಂಡಗಳ ನಿಯೋಜನೆ ಪಾಲಿಕೆ ವ್ಯಾಪ್ತಿಯಲ್ಲಿ 28…
ಕುಟುಂಬದಲ್ಲಿ ಎಷ್ಟೇ ದೊಡ್ಡ ಆರ್ಥಿಕ ಸಮಸ್ಯೆ ಇದ್ದರೂ ಅದನ್ನು ಸರಿಪಡಿಸಲು ಕುಟುಂಬಸ್ಥರು ಹರಸಾಹಸ ಮಾಡಿ ಹೇಗಾದರೂ ಸಮಸ್ಯೆಯಿಂದ ಹೊರಬರುತ್ತಾರೆ. ಆದರೆ ಕೆಲವು ಕುಟುಂಬದ ಸದಸ್ಯರು ದೈಹಿಕವಾಗಿ ಗಾಯಗೊಂಡಿದ್ದಾರೆ. ವಾಸಿಯಾಗದ ಕಾಯಿಲೆ ಬಂದಿದೆ. ಅವನು ಚೆನ್ನಾಗಿಲ್ಲದಿದ್ದರೆ, ಕುಟುಂಬವು ಕಳೆದುಕೊಳ್ಳುತ್ತದೆ. ಅವರು ಏನು ಮಾಡಬೇಕೆಂದು ತಿಳಿಯದೆ ಒದ್ದಾಡುತ್ತಾರೆ. ನಮ್ಮಲ್ಲಿ ಅನೇಕರಿಗೆ ಈ ಅನುಭವವಿದೆ. ಇಂದಿಗೂ ನಮ್ಮ ಮನೆಯಿಂದ ಬರುವ ಆದಾಯ ವೈದ್ಯಕೀಯ ವೆಚ್ಚಕ್ಕೆ ವ್ಯರ್ಥವಾಗುವ ಪರಿಸ್ಥಿತಿ ಇದೆ. ಅಂತಹವರೆಲ್ಲರೂ ಅನುಸರಿಸಬಹುದಾದ ಈ ಸರಳ ಆಧ್ಯಾತ್ಮಿಕ ಪರಿಹಾರಗಳನ್ನು ಅನುಸರಿಸಿ . ದೀರ್ಘಕಾಲದ ಕಾಯಿಲೆಯನ್ನು ಗುಣಪಡಿಸುವಲ್ಲಿ ಈ ಪರಿಹಾರಗಳು ಖಂಡಿತವಾಗಿಯೂ ಕೆಲವು ಒಳ್ಳೆಯದನ್ನು ಮಾಡುತ್ತವೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ…
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ( M Chinnaswamy Stadium in Bengaluru ) ಭಾನುವಾರದ ನಾಳೆ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore -RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (Delhi Capitals -DC) ನಡುವಿನ ಪಂದ್ಯಕ್ಕೆ ಮುಂಚಿತವಾಗಿ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಹೊಸ ಸಂಚಾರ ಸಲಹೆಯನ್ನು ನೀಡಿದೆ. ಮಧ್ಯಾಹ್ನ 3 ರಿಂದ ರಾತ್ರಿ 11 ರವರೆಗೆ ನಿಗದಿಯಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League -IPL) ಕ್ರಿಕೆಟ್ ಪಂದ್ಯದ ಸಮಯದಲ್ಲಿ ಸುಗಮ ಸಂಚಾರ ಹರಿವನ್ನು ಸುಗಮಗೊಳಿಸಲು ಮತ್ತು ದಟ್ಟಣೆಯನ್ನು ತಡೆಗಟ್ಟಲು ಪರ್ಯಾಯ ಪಾರ್ಕಿಂಗ್ ಸ್ಥಳಗಳನ್ನು ಸಲಹೆ ಮಾಡಲಾಗಿದೆ. ಈ ಕ್ರೀಡಾಂಗಣವು ಕರ್ನಾಟಕ ರಾಜಧಾನಿಯ ಕಬ್ಬನ್ ಪಾರ್ಕ್ ಬಳಿ ಎಂಜಿ ರಸ್ತೆಯಲ್ಲಿದೆ. ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಸ್ಥಳಗಳಲ್ಲಿ ಪಾರ್ಕಿಂಗ್ ನಿರ್ಬಂಧಗಳು ಈ ಕೆಳಗಿನ ಸ್ಥಳಗಳು ಮತ್ತು ಬೀದಿಗಳಲ್ಲಿ ಯಾವುದೇ ಪಾರ್ಕಿಂಗ್…
ಗದಗ: ನಗರದಲ್ಲಿನ ಮನೆಯೊಂದಕ್ಕೆ ಹಾಡಹಗಲೇ ನುಗ್ಗಿರುವಂತ ಐವರು ದುಷ್ಕರ್ಮಿಗಳು ಮನೆಯಲ್ಲಿರುವಂತ ಟಿವಿ, ಫ್ರಿಜ್ಡ್ ಧ್ವಂಸಗೊಳಿಸಿದ್ರೇ, ಮನೆ ಮುಂದೆ ನಿಂತಿದ್ದಂತ ಜೀಪಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮರೆದಿದ್ದಾರೆ. ಗದಗ ನಗರದ ಪಂಚಾಕ್ಷರಿ ನಗರದಲ್ಲಿ ಹಾಡು ಹಗಲೇ ಮನೆಗೆ ನುಗ್ಗಿರುವಂತ ಐವರು ದುಷ್ಕರ್ಮಿಗಳು ಮನೆಯಲ್ಲಿದ್ದಂತ ಟಿವಿ, ಫ್ರಿಡ್ಜ್ ಧ್ವಂಸಗೊಳಿಸಿದ್ದಾರೆ. ಇದನ್ನು ಪ್ರಶ್ನಿಸಿದಂತ ಮನೆಯಲ್ಲಿನ ಮಹಿಳೆಯೊಬ್ಬರ ಸೀರೆಯನ್ನು ಹಿಡಿದು ಎಳೆದಾಡಿರೋದಾಗಿ ಅಸಭ್ಯವಾಗಿಯೂ ವರ್ತಿಸಿರೋದಾಗಿ ತಿಳಿದು ಬಂದಿದೆ. ಇನ್ನೂ ಮನೆಯ ಮುಂದೆ ನಿಂತಿದ್ದಂತ ಜೀಪಿಗೂ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಜೀವು ಧಗಧಗಿಸಿ ಹೊತ್ತಿ ಉರಿದಿದೆ. ಪ್ರಕಾಶ್ ನಿಡಗುಂದಿ ಎಂಬುವರಿಗೆ ಸೇರಿದ ಮನೆಯಲ್ಲೇ ಹೀಗೆ ಐವರು ದುಷ್ಕರ್ಮಿಗಳು ಅಟ್ಟಹಾಸವನ್ನು ಮರೆದಿರೋದಾಗಿದೆ. ಈ ಘಟನೆಯ ಹಿಂದೆ ಹುಯಿಲಗೋಳ ಗ್ರಾಮ ಪಂಚಾಯ್ತಿ ಸದಸ್ಯರಾದಂತ ಮಿಲಿಂದರ್ ಕಾಳೆ, ನಾಗರಾಜ್ ಕಾಳೆ ವಿರುದ್ಧ ಮನೆಯವರು ಆರೋಪ ಮಾಡಿದ್ದಾರೆ. ಇವರ ಕುಮ್ಮಕ್ಕಿನಿಂದಲೇ ಐವರು ದುಷ್ಕರ್ಮಿಗಳು ನಮ್ಮ ಮನೆಗೆ ನುಗ್ಗಿ ಅಟ್ಟಹಾಸ ಮರೆದಿದ್ದಾರೆ. ನಮ್ಮ ಜೀವನಕ್ಕೆ ಏನಾದ್ರೂ ಆದ್ರೇ ಇವರೇ ಹೊಣೆಗಾರರು ಎಂಬುದಾಗಿ ಹೇಳಿದ್ದಾರೆ. ಸದಸ್ಯ ಗದಗ…
ಕೆಎನ್ಎನ್ ಸ್ಪೋರ್ಟ್ಸ್: ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ 20 ವರ್ಷಗಳ ಸುದೀರ್ಘ ವೃತ್ತಿಜೀವನದ ನಂತರ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಆಂಡರ್ಸನ್, ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ, ಇಂಗ್ಲಿಷ್ ಬೇಸಿಗೆಯ ಆರಂಭದಲ್ಲಿ ಲಾರ್ಡ್ಸ್ನಲ್ಲಿ ತಮ್ಮ ಕೊನೆಯ ಟೆಸ್ಟ್ ಆಡುವುದಾಗಿ ಘೋಷಿಸಿದರು. ಆಂಡರ್ಸನ್ ಅವರ ಕೊನೆಯ ಟೆಸ್ಟ್ ಜುಲೈ 10-14 ರಿಂದ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿದೆ. ಈ ಸುದ್ದಿಯನ್ನು ಹಂಚಿಕೊಂಡ ಆಂಡರ್ಸನ್ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ಹೀಗೆ ಬರೆದಿದ್ದಾರೆ: “ಎಲ್ಲರಿಗೂ ನಮಸ್ಕಾರ. ಲಾರ್ಡ್ಸ್ನಲ್ಲಿ ಬೇಸಿಗೆಯ ಮೊದಲ ಟೆಸ್ಟ್ ನನ್ನ ಕೊನೆಯ ಟೆಸ್ಟ್ ಎಂದು ಹೇಳಲು ಒಂದು ಟಿಪ್ಪಣಿ. ನನ್ನ ದೇಶವನ್ನು ಪ್ರತಿನಿಧಿಸುವುದು ನಂಬಲಾಗದ 20 ವರ್ಷಗಳು, ನಾನು ಬಾಲ್ಯದಿಂದಲೂ ಪ್ರೀತಿಸುವ ಆಟವನ್ನು ಆಡುತ್ತಿದ್ದೇನೆ. ನಾನು ಇಂಗ್ಲೆಂಡ್ ಗೆ ಹೊರನಡೆಯುವುದನ್ನು ತುಂಬಾ ಮಿಸ್ ಮಾಡಿಕೊಳ್ಳಲಿದ್ದೇನೆ. ಆದರೆ ನನ್ನಿಂದ ದೂರ ಸರಿಯಲು ಮತ್ತು ಇತರರು ತಮ್ಮ ಕನಸುಗಳನ್ನು ನನಸಾಗಿಸಲು ಸರಿಯಾದ ಸಮಯ ಎಂದು ನನಗೆ ತಿಳಿದಿದೆ, ಏಕೆಂದರೆ ಅದಕ್ಕಿಂತ ಹೆಚ್ಚಿನ ಭಾವನೆ ಇನ್ನೊಂದಿಲ್ಲ ಎಂದಿದ್ದಾರೆ. “ಡೇನಿಯೆಲಾ,…
ಮೈಸೂರು : ಬೇರೆ ಪಕ್ಷಗಳಲ್ಲಿದ್ದರೂ ನನ್ನ ಹಾಗೂ ಶ್ರೀನಿವಾಸ್ ಪ್ರಸಾದ್ ರ ನಡುವೆ ಉತ್ತಮ ಸ್ನೇಹ ಬಾಂಧವ್ಯ ಹಾಗೂ ಒಡನಾಡವಿದ್ದು, ಪರಸ್ಪರ ರಾಜಕೀಯ ವೈರುಧ್ಯಗಳಿದ್ದರೂ ತಮ್ಮ ಸ್ನೇಹಕ್ಕೆ ಎಂದೂ ಧಕ್ಕೆ ಬಂದಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ರವರೊಂದಿಗಿನ ತಮ್ಮ ಒಡನಾಟದ ನೆನಪುಗಳನ್ನು ಹಂಚಿಕೊಂಡರು. ಅವರು ಇಂದು ಮೈರೂರಿನಲ್ಲಿ ನಡೆದ ರಾಜಕೀತಯ ಮುತ್ಸದ್ದಿ ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮೊದಲು ಜನತಾ ದಳ ಪಕ್ಷದಿಂದ ಶ್ರೀನಿವಾಸ್ ಪ್ರಸಾದ್ ರವರು ಲೋಕಸಭೆ ಹಾಗೂ ನಂತರ ವಿಧಾನಸಭಾ ಚುನಾವಣೆಯಲ್ಲಿ ಪಾಲ್ಗೊಂಡು ಗೆಲುವು ಸಾಧಿಸಿದರು. ಇದಾದ ಬಳಿಕ ಕಾಂಗ್ರೆಸ್ ಪಕ್ಷವನ್ನು ಸೇರಿದ ಶ್ರೀನಿವಾಸ್ ಪ್ರಸಾದ್ ಹಾಗೂ ನಾನು ಬೇರೆ ಪಕ್ಷಗಳಲ್ಲಿದ್ದರೂ , ನಮ್ಮಲ್ಲಿ ಪರಸ್ಪರ ಸ್ನೇಹ ಹಾಗೂ ಗೌರವಗಳಿದ್ದವು. ಅವರು ವಿವಿಧ ಪಕ್ಷಗಳಲ್ಲಿ ಹಲವು ನಾಯಕರೊಂದಿಗೆ ಸ್ನೇಹ ಹಾಗೂ ಒಡನಾಟವನ್ನು ಹೊಂದಿದ್ದರು. ಮನುಷ್ಯತ್ವದಿಂದ ಕೂಡಿದ ಸಜ್ಜನರು. ಅವರು ಯಾವುದೇ ಪಕ್ಷದಲ್ಲಿದ್ದರೂ, ಡಾ. ಅಂಬೇಡ್ಕರ್ ರವರ ವಿಚಾರಧಾರೆಗಳ…
ಕಲಬುರಗಿ: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮೂವರನ್ನು ಹಣಕ್ಕಾಗಿ ಕಿಡ್ನ್ಯಾಪ್ ಮಾಡಿ, ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿ ಮತ್ತು ಆತನ ಸ್ನೇಹಿತನ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು ಟಾರ್ಚರ್ ನೀಡಿ, ಹಣ ಲಪಟಾಯಿಸಿರುವಂತ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರು ಗ್ರಾಮದ ನಿವಾಸಿಯಾಗಿದ್ದಂತ ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿ ಅರ್ಜುನ್ ಮಡಿವಾಳ ಹಾಗೂ ಆತನ ಸ್ನೇಹಿತನನ್ನು ಕಿಡ್ನ್ಯಾಪ್ ಮಾಡಿದಂತ ಘಟನೆ ನಡೆದಿತ್ತು. ಅರ್ಜುನ್ ಬೆಂಗಳೂರಿನಿಂದ ಸೆಕೆಂಡ್ ಹ್ಯಾಂಡ್ ಕಾರು ತಂದು, ಅವುಗಳನ್ನು ಕಲಬುರ್ಗಿಯಲ್ಲಿ ಮಾರಾಟ ಮಾಡುತ್ತಿದ್ದರು. ಮೇ.5ರಂದು ಪರಿಚಯಸ್ಥನಾಗಿದ್ದಂತ ರಮೇಶ್ ಎಂಬಾತನಿಗೆ ಸೆಕೆಂಡ್ ಹ್ಯಾಂಡ್ ಕಾರು ತೋರಿಸೋದಕ್ಕೆ ಅರ್ಜುನ್ ಸ್ನೇಹಿತರಾದಂತ ಎಂ.ಡಿ ಸಮೀರುದ್ದೀನ್, ಅಬ್ದುಲ್ ರಹೇಮಾನ್ ಜೊತೆಗೆ ತೆರಳಿದ್ದನು. ಪರಿಚಿತನಾಗಿದ್ದಂತ ರಮೇಶ್ ಕಾರಿನ ಟೆಸ್ಟ್ ಡ್ರೈವ್ ಮಾಡಿ, ಕಾರು ಕೊಳ್ಳೋದಕ್ಕೆ ಹಣವನ್ನು ಕಲಬುರ್ಗಿ ನಗರದ ಹಾಗರಗಾ ಕ್ರಾಸ್ ಬಳಿಯಲ್ಲಿ ಒಬ್ಬರು ಇದ್ದಾರೆ. ಬನ್ನಿ ಅಲ್ಲಿ ಕೊಡಿಸುತ್ತೇನೆ ಅಂತ ಅರ್ಜುನ್ ಸೇರಿದಂತೆ ಮೂವರನ್ನು ಕರೆದೊಯ್ದಿದ್ದಾನೆ. ರಮೇಶ್ ಕರೆದೊಯ್ದ…