Subscribe to Updates
Get the latest creative news from FooBar about art, design and business.
Author: kannadanewsnow09
ಕಲಬುರಗಿ : ಕಲಬುರಗಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 46 ವಿಷಯಗಳಿಗೆ ಒಟ್ಟು 11770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರಪಾಲಿಕೆಯಾಗಿ ಮಾಡುವ ಹಾಗೂ ಬೀದರ್ ಮತ್ತು ಕಲಬುರಗಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಯನ್ನು 7200 ಕೋಟಿ ರೂಗಳ ಯೋಜನೆಗೆ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಇಂದು ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಭಾಗಕ್ಕೆ 56 ವಿಷಯಗಳನ್ನು ಚರ್ಚಿಸಲಾಗಿದೆ. ಇವುಗಳಲ್ಲಿ 46 ವಿಷಯಗಳು ಕಲ್ಯಾಣ ಕರ್ನಾಟಕದ ಭಾಗಕ್ಕೆ ಸಂಬಂಧಪಟ್ಟ ವಿಷಯಗಳಾಗಿತ್ತು. ಸಭೆಯಲ್ಲಿ ಮಂಡಿಸಲಾಗಿದ್ದ 56 ವಿಷಯಗಳ 12692 ಕೋಟಿ ರೂ.ಗಳ ಯೋಜನೆಗಳ ಪ್ರಸ್ತಾವನೆ ಮಾಡಲಾಯಿತು. ನಾರಾಯಣಪುರ ಡ್ಯಾಂ ನಿಂದ ನೀರು ತರುವ ಯೋಜನೆ ಕೇಂದ್ರ ಸರ್ಕಾರದ ಪಾಲುದಾರಿಕೆ ಯೋಜನೆಯಿದಾಗಿದ್ದು, 7200 ಕೋಟಿ ರೂ.ಗಳಲ್ಲಿ ಅರ್ಧ ಭಾಗದ…
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ಲೋಕಸೇವಾ ಆಯೋಗ ಕರೆದಿರುವಂತ ಪಿಡಿಓ ಸೇರಿದಂತೆ ವಿವಿಧ ಹುದ್ದೆಗಳಿಗೆ ವಯೋಮಿತಿಯನ್ನು 3 ವರ್ಷ ಸಡಿಲಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಕೆಪಿಎಸ್ಸಿಯ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದು, ಆಯೋಗವು 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ “ಪಂಚಾಯತಿ ಅಭಿವೃದ್ಧಿ ಅಧಿಕಾರಿ” ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದದ-97 ಹಾಗೂ ಹಾಗೂ ಉಳಿಕೆ ಮೂಲ ವೃಂದದ-150 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯ ಕ್ರಮ ಸಂಖ್ಯೆ:13ರಲ್ಲಿ ಗರಿಷ್ಠ ವಯೋಮಿತಿಯನ್ನು “ಸಾಮಾನ್ಯ ಅರ್ಹತ- 35 ವರ್ಷಗಳು, ಪವರ್ಗ 2ಎ, 2ಬಿ, 3ಎ ಮತ್ತು 3ಬಿ- 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- 40 ವರ್ಷಗಳು” ಎಂದು ನಿಗದಿಪಡಿಸಲಾಗಿತ್ತು ಎಂದಿದ್ದಾರೆ. ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನೆನಿ 2024, ದಿನಾಂಕ:10.09.2024ರಲ್ಲಿ ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿರುತ್ತದೆ. “ರಾಜ್ಯ…
ಕಲಬುರ್ಗಿ: 10 ವರ್ಷಗಳ ಬಳಿಕ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಎಲ್ಲಾ ಪ್ರಮುಖ ಮುಖ್ಯಾಂಶಗಳನ್ನು ಮುಂದಿದೆ ಓದಿ. ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರ ಪಾಲಿಕೆಯನ್ನಾಗಿ ಮಾಡುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ. ಬೀದರ್ ಮತ್ತು ಗುಲಬರ್ಗಾದಲ್ಲಿ ಬರುವಂತ ಎಲ್ಲಾ ಜನವಸತಿಗಳಿಗೆ ಕುಡಿಯುವ ನೀರು ಒದಗಿಸಲು 7200 ಕೋಟಿ ರೂಪಾಯಿಗಳನ್ನು ಅನುದಾನ ನೀಡಲಾಗಿದೆ. ನಾರಾಯಣಪುರದಿಂದ ನೀರು ತಂದು, ಕುಡಿಯುವ ನೀರು ಒದಗಿಸಿ ಕೊಡುವಂತ ಯೋಜನೆಯಾಗಿದೆ. ರಾಜ್ಯ ಸರ್ಕಾರ ಅರ್ಧ, ಕೇಂದ್ರ ಸರ್ಕಾರ ಅರ್ಧ ಹಣವನ್ನು ಭರಿಸಲಿದೆ. 7200 ಕೋಟಿಯಲ್ಲಿ ಬೀದರ್, ಗುಲಬರ್ಗ ಜಿಲ್ಲೆಯ ಪ್ರತಿ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವಂತ ಕಾರ್ಯ ಮಾಡಲಾಗುತ್ತದೆ ಎಂದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಂದು ಸಚಿವಾಲಯ ಮಾಡಬೇಕು ಎನ್ನುವಂತ ಒತ್ತಾಯವಿತ್ತು. ಇದಕ್ಕೆ ಸಂಪುಟ ಒಪ್ಪಿಗೆ ನೀಡಲಾಗಿದೆ. ಪ್ರತ್ಯೇಕ ಸಚಿವಾಲಯ ನಿರ್ಮಾಣಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ…
ಕಲಬುರ್ಗಿ: ಕಲಬುರ್ಗಿ ಸೇರಿದಂತೆ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಇರುವಂತ ಮಿನಿ ವಿಧಾನಸೌಧಗಳ ಹೆಸರನ್ನು ಪ್ರಜಾ ಸೌಧ ಎಂಬುದಾಗಿ ಮರುನಾಮಕರಣ ಮಾಡಲಾಗುತ್ತಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದರು. ಇಂದು ಕಲಬುರ್ಗಿಯಲ್ಲಿ ನಡೆದಂತ ಕಲ್ಯಾಣ ಕರ್ನಾಟಕ ಭಾಗದಲ್ಲಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಸರಿ ಮಾಡಿದಂತ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಗುತ್ತದೆ. ಕೂಡಲಸಂಗಮದಿಂದ ಎಲ್ಲಾ ಪ್ರವಾಸಿ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದರು. ರಾಜ್ಯದ ತಾಲ್ಲೂಕು ಕೇಂದ್ರಗಳಲ್ಲಿ ಮಿನಿ ವಿಧಾನಸೌಧಗಳನ್ನು ನಿರ್ಮಿಸಲಾಗಿದೆ. ಇನ್ನೂ ಕೆಲವು ತಾಲ್ಲೂಕುಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಇನ್ನೂ ಕೆಲವು ಕಡೆ ಮಾಡಲಿದ್ದೇವೆ. ಇವುಗಳ ಹೆಸರನ್ನು ಮಿನಿ ವಿಧಾನಸೌಧ ಎನ್ನುವ ಬದಲಾಗಿ ಪ್ರಜಾ ಸೌಧ ಎಂಬುದಾಗಿ ಮರು ನಾಮಕರಣ ಮಾಡುವಂತ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಘೋಷಿಸಿದರು. https://kannadanewsnow.com/kannada/rs-2-crore-allocated-for-shivpura-memorial-renovation-mla-dinesh-gooligowda-congratulates-cm-for-ordering-his-release/ https://kannadanewsnow.com/kannada/breaking-sc-stays-bulldozer-operation-across-the-country/
ಹಣದ ಅಧಿಪತಿಯಾಗಬಲ್ಲ ಮಾತೆ ಮಹಾಲಕ್ಷ್ಮಿಯು ನಮ್ಮ ಮನೆಯಲ್ಲಿ ಶಾಶ್ವತವಾಗಿ ನೆಲೆಸುವಂತೆ ನಾವು ಅನೇಕ ಪರಿಹಾರಗಳನ್ನು ಮತ್ತು ಅನೇಕ ಪೂಜೆಗಳನ್ನು ಮಾಡುತ್ತಿದ್ದೇವೆ. ತಾಯಿ ಮಹಾಲಕ್ಷ್ಮಿ ನಮ್ಮ ಮನೆಯಲ್ಲಿ ಖಾಯಂ ಆಗಿ ನೆಲೆಸಿದರೆ ಆದಾಯ ಹೆಚ್ಚುತ್ತದೆ, ಸಾಲದ ಬಾಧೆಯಿಂದ ಪಾರಾಗುತ್ತದೆ, ದುಂದು ವೆಚ್ಚ ತಡೆಯುತ್ತದೆ ಎಂದು ಹೇಳಲಾಗುತ್ತದೆ. ಶುಕ್ರವಾರದಂದು ಉಪ್ಪನ್ನು ಖರೀದಿಸುವುದು ನಾವು ಮಾಡುವ ಪರಿಹಾರಗಳಲ್ಲಿ ಒಂದಾಗಿದೆ. ನೀವು ಈ ರೀತಿ ಉಪ್ಪನ್ನು ಖರೀದಿಸಿದರೆ, ಆಧ್ಯಾತ್ಮಿಕತೆಯ ಬಗ್ಗೆ ನಾವು ಈ ಪೋಸ್ಟ್ನಲ್ಲಿ ನೋಡಲಿದ್ದೇವೆ , ಆ ಉಪ್ಪಿನೊಂದಿಗೆ ನೀವು ಖರೀದಿಸುವ ಮೂರು ವಸ್ತುಗಳು ನಿಮಗೆ ಅನಿರೀಕ್ಷಿತ ಅದೃಷ್ಟವನ್ನು ತರುತ್ತವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು…
ಶಿವಮೊಗ್ಗ: ಸಮಾಜಕ್ಕೆ ಮಾದರಿಯಾಗಬಲ್ಲ ಪಾತ್ರಗಳ ಕೊರತೆಯೇ ಆಧುನಿಕ ಸಿನಿಮಾಗಳ ಪ್ರಮುಖ ಸಮಸ್ಯೆಯಾಗಿದೆ ಎಂದು ಕುವೆಂಪು ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ ಎಸ್.ಎಂ.ಗೋಪಿನಾಥ್ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು 15ನೇ ಸಹ್ಯಾದ್ರಿ ಚಲನಚಿತ್ರೋತ್ಸವವನ್ನು “ನಿರಾಶ್ರಿತರ ಬಿಕ್ಕಟ್ಟು” ವಿಷಯ ಕುರಿತು ಸೆಪ್ಟೆಂಬರ್ 17-21ರ ವರೆಗೆ ವಿವಿಯ ಬಸವ ಸಭಾ ಭವನದಲ್ಲಿ ಆಯೋಜಿಸಿದ್ದು, ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಯಕನೇ ಖಳನಾಯಕ ಆಗಿರುವ, ಅತೀ ಹಿಂಸೆ, ಕೊಳ್ಳೆ ಹೊಡೆಯುವಿಕೆ ಅಂತಹ ಪಾತ್ರಗಳನ್ನು, ಸಿನಿಮಾಗಳನ್ನು ನಾವಿಂದು ಕಾಣುತ್ತಿದ್ದೇವೆ. ಪ್ಯಾನ್ ಇಂಡಿಯಾ ಸಿನಿಮಾಗಳು ಎಂದು ಹೇಳಿಕೊಂಡು ಬರುತ್ತಿರುವ ಎಲ್ಲವುಗಳಲ್ಲಿಯೂ ಇದೆ ಕಥಾನಕವಿದೆ. ಯುವಜನರು ಇವುಗಳನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕೆ, ಮಾದರಿ ಎಂದುಕೊಳ್ಳಬೇಕೆ ಎಂದು ಕಳವಳ ವ್ಯಕ್ತಪಡಿಸಿದರು. ಶಿವಮೊಗ್ಗ ಚಿತ್ರ ಸಮಾಜ ಸಿನಿಮೊಗೆಯ ಸಂಚಾಲಕ ಮತ್ತು ಪತ್ರಕರ್ತ ವೈದ್ಯನಾಥ ಹೆಚ್ ಯು ಅವರು ಚಿತ್ರೋತ್ಸವಉದ್ಘಾಟಿಸಿ ಮಾತನಾಡುತ್ತ, ಇಂದಿನ ಸಿನಿಮಾಗಳಲ್ಲಿ ನಾಯಕ – ನಾಯಕಿಯರ ವಿಜೃಂಭಣೆ ಅಧಿಕಗೊಂಡು ಕಥೆ ಗೌಣವಾಗುತ್ತಿದೆ. ಉತ್ತಮ ಬದುಕಿಗೆ ಬೇಕಾದ…
ಬೆಂಗಳೂರು: ಕೇಂದ್ರ ಪುರಸ್ಕೃತ ಪ್ರಾಯೋಜಕತ್ವ ಯೋಜನೆಯು ಎಲ್ಲಾ ತಂದೆ ಇಲ್ಲದ ಮಕ್ಕಳಿಗೆ ಸ್ಕಾಲರ್ಶಿಪ್ ಅನ್ವಯವಾಗುವುದಿಲ್ಲ. ಈ ಯೋಜನೆಯಲ್ಲಿ ಫಲಾನುಭವಿಯಾಗಲು ನಿರ್ದಿಷ್ಟ ಮಾನದಂಡಗಳ ಮೂಲಕ ಮಾತ್ರ ಸಾಧ್ಯವಾಗುತ್ತದೆ. ಹಾಗಾದ್ರೆ ಯಾರಿಗೆಲ್ಲ ಸಿಗಲಿದೆ? ಮಾನದಂಡಗಳೇನು ಎನ್ನುವ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24000/- ಸ್ಕಾಲರ್ಶಿಪ್ ಸೌಲಭ್ಯವಿದ್ದು, ಜನಸಾಮಾನ್ಯರಿಗೆ ಈ ವಿಚಾರ ತಿಳಿದೆ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಕ್ಕಳಿದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಎಂದು ಅಧಿಕೃತ ಸಹಿ ಇಲ್ಲದ ಅರ್ಜಿಯು ಸಾಮಾಜಿಕ ಜಾಲತಾಣಗಳ ಮುಖಾಂತರ ಹರಿದಾಡುತ್ತಿದ್ದು, ಈ ಸುದ್ದಿಯು “ಸುಳ್ಳುಸುದ್ದಿ”ಯಾಗಿದೆ. ಈ ಯೋಜನೆಯಲ್ಲಿ ನಿರ್ದಿಷ್ಟ ಮಾನದಂಡಗಳು ಅನ್ವಯವಾಗುವ ಮಕ್ಕಳಿಗೆ ಮಾತ್ರ ಸ್ಕಾಲರ್ಶಿಪ್ ಲಭಿಸುತ್ತದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಈ ಯೋಜನೆಯಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳಿಂದ (ಬಾಲಕರ/ಬಾಲಕಿಯರ ಬಾಲಮಂದಿರ ಮತ್ತು ವೀಕ್ಷಣಾಲಯ) ಹೊರಹೋಗಿ ವಿದ್ಯಾಭ್ಯಾಸ ಮುಂದುವರೆಸುತ್ತಿರುವ ಮಕ್ಕಳು, ಇಬ್ಬರೂ ಪೋಷಕರನ್ನು ಕಳೆದುಕೊಂಡ…
ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ನಾಳೆ, ನಾಡಿದ್ದು ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 18-09-2024ರಂದು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದೆ. ಸೆ.18ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಗಬ್ಬಲಾಳ, ಉತ್ತರಹಳ್ಳಿ, ಇಸ್ಟೋ ಲೇಔಟ್ ಕೈಗಾರಿಕಾ ಪ್ರದೇಶ, ಆದರ್ಶ ಅಪಾರ್ಟಮೆಂಟ್ 1 ಮತ್ತು 2. ಮಂತ್ರಿ ಟ್ರಾನ್ಕ್ವಿಲ್ ಅಪಾರ್ಟ್ ಮೆಂಟ್, ಮಾರುತಿ ಲೇಔಟ್, ಭಾರತ್ ಲೇಔಟ್, ದೊಡ್ಡಕಲ್ಲಸಂದ್ರ ಕೈಗಾರಿಕಾ ಪ್ರದೇಶ, ವಿಟಲಾ ನಗರ, ಯಾವಳಾಂ ನಗರ, ಮಾರುತಿ ನಗರ ಹಾಗೂ ಸುತ್ತಮತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ದಿನಾಂಕ 19.09.2024(ಗುರುವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ “220/66/11ಕೆ.ವಿ ಎನ್.ಆರ್.ಎಸ್” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ…
ಮಂಡ್ಯ: ಜಿಲ್ಲೆಯ ಮದ್ದೂರಿನ ಶಿವಪುರದ ಧ್ವಜ ಸತ್ಯಾಗ್ರಹ ಸ್ಮಾರಕ ಸೌಧ ಪುನರುಜ್ಜೀವನ ಮಾಡಲು 2 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆರ್ಥಿಕ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ. ತಾವು ಸಲ್ಲಿಸಿದ ಮನವಿಗೆ ಸಿಎಂ ಸ್ಪಂದಿಸಿ, ಸ್ಮಾರಕದ ನವೀಕರಣಕ್ಕೆ ಕ್ರಮ ವಹಿಸಿದ್ದು, ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು ಎಂದು ಮಂಡ್ಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಶಾಸಕ ದಿನೇಶ ಗೂಳಿಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 1937 ರಲ್ಲಿ ಶಿವಪುರದಲ್ಲಿ ಹೋರಾಟಗಾರರಾದ ಎನ್.ವೀರಣ್ಣ ಗೌಡ, ಕೊಪ್ಪದ ಜೋಗಿ ಗೌಡ, ಸಾಹುಕಾರ ಚೆನ್ನಯ್ಯ ನೇತೃತ್ವದಲ್ಲಿ ನಡೆದಿದ್ದ ಹೋರಾಟದ ನೆನಪಿಗೆ ಅಲ್ಲಿ ಸೌಧ ನಿರ್ಮಾಣ ಮಾಡಲಾಗಿತ್ತು. ಆದರೆ, ಸೌಧ ನಿರ್ವಹಣೆ ಇಲ್ಲದೇ ಹಾಳು ಬಿದ್ದಿವೆ. ಸ್ಮಾರಕದ ಒಳಗಡೆ ಇರುವ ಚಿತ್ರಪಟಗಳು ಹಾಳಾಗಿವೆ. ಉದ್ಯಾನವನ ನಿರ್ವಹಣೆ ಇಲ್ಲದೇ ಸೊರಗಿದೆ. ಸಂಗೀತ ಕಾರಂಜಿ ನೃತ್ಯ ನಿಲ್ಲಿಸಿ ತುಕ್ಕು ಹಿಡಿದಿದೆ. ಸ್ಮಾರಕ ಭವನದ ಒಳಗೆ ಧೂಳು ತುಂಬಿಕೊಂಡಿದೆ. ಭವನದ ಬಾಗಿಲು ಸದಾ ಹಾಕಿಕೊಂಡಿರುವುದರಿಂದ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಮೊಕಿ ಟ್ರೈನಿಂಗ್ ಬೇಸ್ನಲ್ಲಿ ಮಂಗಳವಾರ (ಸೆಪ್ಟೆಂಬರ್ 17) ನಡೆದ ಫೈನಲ್ನಲ್ಲಿ ಚೀನಾವನ್ನು 1-0 ಅಂತರದಿಂದ ಸೋಲಿಸಿ 2024 ರ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದ ನಂತರ ಭಾರತೀಯ ಹಾಕಿ ತಂಡ ಇತಿಹಾಸ ನಿರ್ಮಿಸಿದೆ. ನಾಲ್ಕನೇ ಕ್ವಾರ್ಟರ್ನಲ್ಲಿ ನಾಯಕ ಹರ್ಮನ್ಪ್ರೀತ್ ಸಿಂಗ್ ಏಕೈಕ ಗೋಲ್ ಬಾರಿಸಿ ತಂಡದ ಗೆಲುವಿಗೆ ಕಾರಣರಾದರು. ಈ ಹಿಂದೆ 2011, 2016 ಮತ್ತು 2023ರಲ್ಲಿ ಟ್ರೋಫಿ ಎತ್ತಿ ಹಿಡಿದಿದ್ದ ಭಾರತ, ಇತಿಹಾಸದಲ್ಲಿ ಐದನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಟೂರ್ನಿಯಲ್ಲಿ ಎರಡನೇ ಅತ್ಯಂತ ಯಶಸ್ವಿ ತಂಡವೆಂದರೆ ಪಾಕಿಸ್ತಾನ, ಅದು ಮೂರು ಬಾರಿ ಟ್ರೋಫಿಯನ್ನು ಎತ್ತಿಹಿಡಿದಿದೆ. ದಕ್ಷಿಣ ಕೊರಿಯಾ 2021 ರಲ್ಲಿ ಪ್ರಶಸ್ತಿಯನ್ನು ಗೆದ್ದಿತು. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚೀನಾ ಫೈನಲ್ ತಲುಪಿದ್ದು, ಪಂದ್ಯಾವಳಿಯ ಇತಿಹಾಸದಲ್ಲಿ ಅವರ ಅತ್ಯುತ್ತಮ ಅಂತ್ಯವನ್ನು ಸೂಚಿಸುತ್ತದೆ. https://kannadanewsnow.com/kannada/ramanagara-five-members-of-a-family-killed-as-car-rams-into-tree-in-ramanagara/ https://kannadanewsnow.com/kannada/kea-announces-revised-schedule-for-various-exams-including-psi-kset-here-is-the-new-exam-date/