Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರಕಾರವು ಚುನಾವಣೆ ಎದುರಿಸುವುದನ್ನು ತಪ್ಪಿಸಿಕೊಳ್ಳಲು ಮಸೂದೆಗಳನ್ನು ತರುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಒಂದು ಪ್ರಾಧಿಕಾರದ ಕೆಳಗೆ ಕೆಲಸ ಮಾಡಬೇಕೆಂದರೆ ಜನಪ್ರತಿನಿಧಿಗಳಾಗಿ ಒಂದು ಅಥಾರಿಟಿ ಕೆಳಗೆ ಹೇಗೆ ಕೆಲಸ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು. ಈ ಸರಕಾರ ಜನರ ರಕ್ತ ಹೀರುವ ಕೆಲಸ ಮಾಡುತ್ತಿದೆ. ಹಾಲಿನ ದರ ಏರಿಸುವ ವಿಷಯ ಕ್ಯಾಬಿನೆಟ್ ಮುಂದಿದೆ. ಹಾಲಿನ ದರ ಸಬ್ಸಿಡಿ ರೈತರಿಗೆ ಕೊಡಿ; ಆದರೆ ಜನರ ಮೇಲೆ ಯಾಕೆ ಹೊರೆ ಹಾಕುತ್ತೀರಿ? ನಿಮಗೆ ಯೋಗ್ಯತೆ ಇಲ್ಲದಿದ್ದರೆ ಬಿಟ್ಟು ಹೋಗಿ ಎಂದು ಒತ್ತಾಯಿಸಿದರು. ಗ್ಯಾರಂಟಿಗಳನ್ನು ಘೋಷಿಸಿದ್ದೀರಿ; ಎಲ್ಲದರ ಬೆಲೆಗಳನ್ನೂ ಹೆಚ್ಚಿಸಿದ್ದೀರಿ. ಕಾನೂನು, ಸಂವಿಧಾನದಲ್ಲಿ ಇಲ್ಲದ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡುವ ಮಸೂದೆ ಮಂಜೂರು ಮಾಡಿಕೊಂಡಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅದು ಊರ್ಜಿತ ಆಗುವುದಿಲ್ಲ ಎಂಬುದು ಅವರಿಗೂ ಗೊತ್ತಿದೆ.…
ಬೆಂಗಳೂರು: ನಗರದಲ್ಲಿ ಪತ್ನಿಯನ್ನು ಕೊಂದಿರುವಂತ ಪಾಪಿ ಪತಿಯೊಬ್ಬ, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸೂಕ್ ಕೇಸ್ ನಲ್ಲಿ ತುಂಬಿಟ್ಟಿರೋದಾಗಿ ತಿಳಿದು ಬಂದಿದೆ. ಮಹಾರಾಷ್ಟ್ರ ಮೂಲದ ವ್ಯಕ್ತಿಯೊಬ್ಬ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕನ್ನಹಳ್ಳಿಯಲ್ಲಿ ವಾಸವಿದ್ದನು. ಇಂತಹ ವ್ಯಕ್ತಿ ತನ್ನ ಪತ್ನಿಯನ್ನು ಕೊಂದು, ದೇಹವನ್ನು ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿಟ್ಟಿದ್ದಾಗೆ ಪತ್ನಿಯ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ವಿಷಯವನ್ನು ಮಹಾರಾಷ್ಟ್ರದಲ್ಲಿದ್ದಂತ ಪೋಷಕರು, ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಮಹಾರಾಷ್ಟ್ರದ ಪೊಲೀಸರು ಹುಳಿಮಾವು ಠಾಣೆಯ ಪೊಲೀಸರಿಗೆ ದೊಡ್ಡಕನ್ನಹಳ್ಳಿಗೆ ತೆರಳಿ ಶೋಧಿಸುವಂತೆ ಕೋರಿದ್ದಾರೆ. ಮಹಾರಾಷ್ಟ್ರ ಪೊಲೀಸರ ಕೋರಿಕೆಯ ಮೇರೆಗೆ ಬೆಂಗಳೂರಿನ ಹುಳಿಮಾವು ಠಾಣೆಯ ಪೊಲೀಸರು ದೊಡ್ಡಕನ್ನಹಳ್ಳಿಯ ಆರೋಪಿ ಮನೆಗೆ ತೆರಳಿ ಶೋಧಕಾರ್ಯ ನಡೆಸುತ್ತಿದ್ದಾರೆ. ಆರೋಪಿ ಪತ್ನಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ತುಂಬಿದ್ದಾನೋ ಅಥವಾ ಬೇರೆ ಏನಾದರೂ ಮಾಡಿದ್ದಾನೋ ಎಂಬುದಾಗಿ ತಿಳಿದು ಬರಬೇಕಿದೆ. https://kannadanewsnow.com/kannada/shimoga-dcc-bank-scam-court-dismisses-r-m-manjunatha-gowdas-plea-challenging-ed-summons/ https://kannadanewsnow.com/kannada/hpv-vaccine-to-prevent-cervical-cancer-in-women-minister-dinesh-gundu-rao/
ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಸಮನ್ಸ್ ಪ್ರಶ್ನಿಸಿ ಆರ್.ಎಂ ಮಂಜುನಾಥಗೌಡ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಆರ್.ಎಂ ಮಂಜುನಾಥಗೌಡಗೆ ಬಿಗ್ ಶಾಕ್ ನೀಡಿದೆ. ನಕಲಿ ಚಿನ್ನ ಅಡವಿಟ್ಟು ಸಾಲ ನೀಡಿದ ಆರೋಪದಡಿ 2014ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಸಂಬಂಧ ಪ್ರಕರಣ ದಾಖಲಾಗಿತ್ತು. 2021ರಲ್ಲಿ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಇಡಿ ಎಂಟ್ರಿಯಾಗಿತ್ತು. ಇಡಿಯಿಂದ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿನ 63 ಕೋಟಿ ಹಗರಣ ಸಂಬಂಧ ಆರ್.ಎಂ ಮಂಜುನಾಥಗೌಡಗೆ ಸಮನ್ಸ್ ಜಾರಿಗೊಳಿಸಿತ್ತು. ಇಡಿ ಜಾರಿಗೊಳಿಸಿದ್ದಂತ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಗೆ ಆರ್.ಎಂ ಮಂಜುನಾಥಗೌಡ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ವಿಭಾಗಿಯ ಪೀಠವು ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. https://kannadanewsnow.com/kannada/two-terrorists-killed-five-jawans-injured-in-encounter-in-jammu-and-kashmir/ https://kannadanewsnow.com/kannada/hpv-vaccine-to-prevent-cervical-cancer-in-women-minister-dinesh-gundu-rao/
ಬೆಂಗಳೂರು: ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ʼಎಚ್ಪಿವಿʼ ಲಸಿಕೆ ಸಹಕಾರಿಯಾಗಿದೆ. ಪ್ರಥಮ ಹಂತದಲ್ಲಿ ಗಣಿಬಾಧಿತ ಪ್ರದೇಶ ಮತ್ತು ಕಲ್ಯಾಣ ಕರ್ನಾಟಕ ಭಾಗದ 14 ವರ್ಷದ ಹೆಣ್ಣು ಮಕ್ಕಳಿಗೆ ಈ ಲಸಿಕೆ ವಿತರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ಆರೋಗ್ಯ ಸೇವೆಗಳನ್ನ ಬಡ ವರ್ಗದ ಜನರ ಬಳಿಗೆ ತರುವಲ್ಲಿ ಉಚಿತ ಆರೋಗ್ಯ ತಪಾಸಣಾ ಮೇಳಗಳು ಯಶಸ್ವಿಯಾಗುತ್ತಿವೆ. ದೊಡ್ಡ ಮಟ್ಟದ ಆರೋಗ್ಯ ಮೇಳಗಳನ್ನು ಗ್ರಾಮೀಣ ಪ್ತದೇಶದ ಜನರಿಗೆ ಅನುಕೂಲಪಡಿಸಲು ತಾಲೂಕುಗಳಲ್ಲಿ ನಡೆಸಲಾಗುತ್ತಿದೆ. ಕೊಳ್ಳೆಗಾಲ, ಮಾನ್ವಿ ಬಳಿಕ ಇದೀಗ ಸವದತ್ತಿಯಲ್ಲೂ ಆರೋಗ್ಯ ಮೇಳ ಯಶಸ್ವಿಯಾಗಿದೆ ಎಂದರು. ರಾಜ್ಯ ಸರ್ಕಾರ ಗ್ಯಾರಂಟಿಗಳನ್ನ ನೀಡುವುದರ ಜೊತೆಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ವಿಶೇಷವಾಗಿ ಆರೋಗ್ಯ ಕ್ಷೇತ್ರದಲ್ಲಿ ಈ ಬಾರಿಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಒದಗಿಸಿದ್ದಾರೆ. ಅಥಣಿಗೆ 50 ಹಾಸಿಗೆಯ ತಾಯಿ ಮಕ್ಕಳ ಆಸ್ಪತ್ರೆ ನೀಡಿದ್ದೇವೆ. ಆರೋಗ್ಯ ಸೇವೆಗಳಲ್ಲಿ ಸಾಕಷ್ಟು…
ಕಥುವಾ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರೊಂದಿಗೆ ಭೀಕರ ಗುಂಡಿನ ಚಕಮಕಿ ನಡೆಸುತ್ತಿದ್ದು, ಇದರ ಪರಿಣಾಮವಾಗಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಮತ್ತು 5 ಸೈನಿಕರು ಗಾಯಗೊಂಡಿದ್ದಾರೆ. ಐದನೇ ದಿನಕ್ಕೆ ಕಾಲಿಟ್ಟ ಈ ಎನ್ಕೌಂಟರ್ ನಲ್ಲಿ ಜುಥಾನಾ ಪ್ರದೇಶದಲ್ಲಿ ಎರಡೂ ಕಡೆಯ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ವರದಿಗಳ ಪ್ರಕಾರ ಗಾಯಗೊಂಡ 5 ಸೈನಿಕರಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರಿಗೆ ಸಹಾಯ ಮಾಡಿದ್ದಾರೆಂದು ನಂಬಲಾದ ಏಳು ಶಂಕಿತರನ್ನು ಬಂಧಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಹಿರಾನಗರ ವಲಯದಲ್ಲಿ ಭಯೋತ್ಪಾದಕರು ಇದ್ದಾರೆ ಎಂಬ ಗುಪ್ತಚರ ಮಾಹಿತಿಯ ನಂತರ ಭಾನುವಾರ ಸಂಜೆ ಕಥುವಾ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ನಳಿನ್ ಪ್ರಭಾತ್ ಅವರ ನೇತೃತ್ವದಲ್ಲಿ ಭಯೋತ್ಪಾದಕರನ್ನು ನಿಗ್ರಹಿಸಲು ಹೆಚ್ಚುವರಿ ಕಮಾಂಡೋಗಳು, ಡ್ರೋನ್ಗಳು ಮತ್ತು ಸ್ನಿಫರ್ ನಾಯಿಗಳನ್ನು ನಿಯೋಜಿಸಲಾಗಿದೆ. ಈ ಕಾರ್ಯಾಚರಣೆ ಸಂಕೀರ್ಣವಾಗಿದ್ದು, ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ದಟ್ಟ ಕಾಡುಗಳು ಮತ್ತು ನರ್ಸರಿಗಳ ಮೂಲಕ ಸಂಚರಿಸಬೇಕಾಯಿತು.…
ಶಿವಮೊಗ್ಗ: ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲಾ ಪದಾಧಿಕಾರಿಗಳ ಸ್ಥಾನವನ್ನು ವಜಾ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಎಂ.ಜಿ ಚಂದ್ರು ಹೇಳಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ(ಶಿವರಾಮೇಗೌಡ ಬಣ)ದ ಪದಾಧಿಕಾರಿಗಳ ಕಾರ್ಯ ಚಟುವಟಿಕೆಗಳು ನಿಷ್ಕ್ರಿಯವಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಕರವೇ ರಾಜ್ಯಾಧ್ಯಕ್ಷರಾದ ಹೆಚ್.ಶಿವರಾಮೇಗೌಡ ಅವರ ಸೂಚನೆಯ ಮೇರೆಗೆ ಶಿವಮೊಗ್ಗ ಜಿಲ್ಲಾ ಘಟಕ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ಘಟಕದ ಅಧ್ಯಕ್ಷ ಸ್ಥಾನ ಹಾಗೂ ಪದಾಧಿಕಾರಿಗಳ ಸ್ಥಾನದಿಂದ ಇಂದಿನಿಂದ ವಜಾ ಮಾಡಲಾಗಿದೆ ಎಂದಿದ್ದಾರೆ. ಇನ್ನೂ ಅತಿ ಶೀಘ್ರದಲ್ಲೇ ಶಿವಮೊಗ್ಗ ಜಿಲ್ಲಾ ಘಟಕ ಹಾಗೂ ತಾಲ್ಲೂಕು ಘಟಕಕ್ಕೆ ಅಧ್ಯಕ್ಷ ಸ್ಥಾನ ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಶಿವಮೊಗ್ಗ ಕರವೇ ಜಿಲ್ಲಾ ಉಸ್ತುವಾರಿ ಎಂ.ಜಿ ಚಂದ್ರು ತಿಳಿಸಿದ್ದಾರೆ. https://kannadanewsnow.com/kannada/partial-cancellation-of-miraj-castle-rock-miraj-trains-extended/ https://kannadanewsnow.com/kannada/bbmp-budget-2025-26-to-be-presented-on-march-29/
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಬಜೆಟ್ ಅನ್ನು ಮಾರ್ಚ್.29, 2025ರಂದು ಮಂಡಿಸಲಾಗುತ್ತಿದೆ. ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್ ಮಾರ್ಚ್ 29, ಶನಿವಾರ ಬೆಳಗ್ಗೆ 11ಕ್ಕೆ ಮಂಡನೆಯಾಗಲಿದೆ. ಪಾಲಿಕೆಯ ಆಡಳಿತಗಾರ ಎಸ್.ಆರ್. ಉಮಾಶಂಕರ್ ಅಧ್ಯಕ್ಷತೆ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಉಪಸ್ಥಿತಿಯಲ್ಲಿ ಬಜೆಟ್ ಕಾರ್ಯಕ್ರಮ ನಡೆಯಲಿದ್ದು, ಹಲವು ಗಣ್ಯರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ.ಕೆ ಹರೀಶ್ಕುಮಾರ್ ಆಯವ್ಯಯ ಪ್ರಸ್ತುತಪಡಿಸಲಿದ್ದಾರೆ. ಬಜೆಟ್ ಪ್ರಸ್ತುತಿಯು ಯೂಟ್ಯೂಬ್ನಲ್ಲಿ ಲೈವ್ ಬರಲಿದ್ದು, https://youtube.com/live/eydr2vyROL8… ಲಿಂಕ್ ಮೂಲಕ ವೀಕ್ಷಿಸಬಹುದಾಗಿದೆ ಎಂದು ಪಾಲಿಕೆ ತಿಳಿಸಿದೆ. https://twitter.com/KarnatakaVarthe/status/1905186730459988238 https://kannadanewsnow.com/kannada/partial-cancellation-of-miraj-castle-rock-miraj-trains-extended/ https://kannadanewsnow.com/kannada/lok-sabha-passes-immigration-and-foreigners-bill-2025/
ಹುಬ್ಬಳ್ಳಿ: ಹುಬ್ಬಳ್ಳಿ ರೈಲ್ವೆ ವಿಭಾಗದ ಕ್ಯಾಸಲ್ ರಾಕ್-ಲೋಂಡಾ ಮಾರ್ಗದಲ್ಲಿ ರೈಲ್ವೆ ವಿದ್ಯುದ್ದೀಕರಣ ಮತ್ತು ಇತರೆ ಎಂಜಿನಿಯರಿಂಗ್ ಕಾಮಗಾರಿಗಳು ನಡೆಯುತ್ತಿರುವುದರಿಂದ, ಮಿರಜ್-ಕ್ಯಾಸಲ್ ರಾಕ್-ಮಿರಜ್ ನಡುವಿನ ನಿತ್ಯದ ಕಾಯ್ದಿರಿಸದ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 17333/17334) ರೈಲುಗಳ ಭಾಗಶಃ ರದ್ದತಿಯನ್ನು ಏಪ್ರಿಲ್ 1, 2025 ರಿಂದ ಜೂನ್ 30, 2025 ರವರೆಗೆ ವಿಸ್ತರಿಸಲಾಗಿದೆ. ರೈಲು ಸಂಖ್ಯೆ 17333 ಮಿರಜ್-ಕ್ಯಾಸಲ್ ರಾಕ್ ಡೈಲಿ ಕಾಯ್ದಿರಿಸದ ಎಕ್ಸ್ ಪ್ರೆಸ್ ರೈಲು ಜೂನ್ 30, 2025 ರವರೆಗೆ ಲೋಂಡಾ-ಕ್ಯಾಸಲ್ ರಾಕ್ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿರುತ್ತದೆ. ಈ ರೈಲು ಲೋಂಡಾ ನಿಲ್ದಾಣದಲ್ಲಿ ತನ್ನ ಪ್ರಯಾಣವನ್ನು ಅಂತ್ಯಗೊಳಿಸಲಿದೆ. ರೈಲು ಸಂಖ್ಯೆ 17334 ಕ್ಯಾಸಲ್ ರಾಕ್-ಮಿರಜ್ ಡೈಲಿ ಕಾಯ್ದಿರಿಸದ ಎಕ್ಸ್ ಪ್ರೆಸ್ ರೈಲು ಜೂನ್ 30, 2025 ರವರೆಗೆ ಕ್ಯಾಸಲ್ ರಾಕ್-ಲೋಂಡಾ ನಡುವೆ ಭಾಗಶಃ ರದ್ದಾಗಿರುತ್ತದೆ ಈ ರೈಲು ಕ್ಯಾಸಲ್ ರಾಕ್ ಬದಲಿಗೆ ಲೋಂಡಾ ನಿಲ್ದಾಣದಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಲಿದೆ. ಮೊದಲು, ಈ ರೈಲುಗಳನ್ನು ಭಾಗಶಃ ರದ್ದತಿಯನ್ನು ಮಾರ್ಚ್ 31, 2025…
ನವದೆಹಲಿ: ಲೋಕಸಭೆಯಲ್ಲಿ ಇಂದು ವಲಸೆ ಮತ್ತು ವಿದೇಶಿಯರ ಮಸೂದೆ 2025 ಮಂಡನೆಯ ನಂತ್ರ ಸರ್ವಾನುಮತದಿಂದ ಅಂಗೀಕಾರಗೊಂಡಿದೆ. ಇದಕ್ಕೂ ಮೊದಲು ಲೋಕಸಭೆಯಲ್ಲಿ ವಲಸೆ ಮತ್ತು ವಿದೇಶಿಯರ ಮಸೂದೆ 2025 ರ ಮೇಲಿನ ಚರ್ಚೆಗೆ ಗೃಹ ಸಚಿವ ಅಮಿತ್ ಶಾ ಉತ್ತರಿಸಿದರು. ವಲಸೆ ಮತ್ತು ವಿದೇಶಿಯರ ಮಸೂಧೆ 2025 ಭಾರತದ ಬೆಳವಣಿಗೆಯನ್ನು ವ್ಯಾಖ್ಯಾನಿಸಲು ವಲಸೆ ಮಸೂದೆ, ಭಾರತದಲ್ಲಿ ಅಲ್ಪಸಂಖ್ಯಾತರು ಸುರಕ್ಷಿತರಾಗಿದ್ದಾರೆ ಎಂಬುದಾಗಿ ಅಮಿತ್ ಶಾ ತಿಳಿಸಿದರು. https://twitter.com/ANI/status/1905245953164029958 ಬಾಂಗ್ಲಾದೇಶದ ನುಸುಳುಕೋರರು ಅಥವಾ ರೋಹಿಂಗ್ಯಾಗಳು ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅಸ್ಸಾಂ ಮೂಲಕ ಭಾರತಕ್ಕೆ ಪ್ರವೇಶಿಸುತ್ತಿದ್ದರು. ಈಗ ಅವರು ಟಿಎಂಸಿ ಅಧಿಕಾರದಲ್ಲಿರುವ ಪಶ್ಚಿಮ ಬಂಗಾಳದ ಮೂಲಕ ಭಾರತವನ್ನು ಪ್ರವೇಶಿಸುತ್ತಾರೆ. ಅವರಿಗೆ ಆಧಾರ್ ಕಾರ್ಡ್, ಪೌರತ್ವ ನೀಡುವವರು ಯಾರು?… ಸಿಕ್ಕಿಬಿದ್ದ ಎಲ್ಲಾ ಬಾಂಗ್ಲಾದೇಶಿಗಳು 24 ಪರಗಣ ಜಿಲ್ಲೆಯ ಆಧಾರ್ ಕಾರ್ಡ್ಗಳನ್ನು ಹೊಂದಿದ್ದಾರೆ. ನೀವು (ಟಿಎಂಸಿ) ಆಧಾರ್ ಕಾರ್ಡ್ಗಳನ್ನು ನೀಡುತ್ತೀರಿ ಮತ್ತು ಅವರು ಮತದಾರರ ಕಾರ್ಡ್ಗಳೊಂದಿಗೆ ದೆಹಲಿಗೆ ಬರುತ್ತಾರೆ… 2026 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಮತ್ತು…
ಬೆಂಗಳೂರು: ಮಾರ್ಚ್.28ರ ನಾಳೆಯಿಂದ 30ರವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್.31ರಂದು ವಿವಿಧೆಡೆಯಿಂದ ಬೆಂಗಳೂರಿಗೆ 2000 ವಿಶೇಷ ಸಾರಿಗೆ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ 2,000 ಬಸ್ಗಳನ್ನು ರಸ್ತೆಗಿಳಿಸಲಿವೆ. ಮಾರ್ಚ್ 28 ರಿಂದ 30ರ ವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್ 31 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ಹೊರರಾಜ್ಯಗಳ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ತಿರುಪತಿ, ವಿಜಯವಾಡ ಸಹಿತ ವಿವಿಧೆಡೆ ವಿಶೇಷ ಬಸ್ಗಳು ಸಂಚರಿಸಲಿವೆ. https://ksrtc.in ವೆಬ್ಸೈಟ್ ಮೂಲಕ ಇ-ಟಿಕೆಟ್ ಬುಕ್ಕಿಂಗ್ ಮಾಡಬಹುದು. ನಾಲ್ಕು ಅಥವಾ ಹೆಚ್ಚು…