Author: kannadanewsnow09

ಬೆಂಗಳೂರು: ಪೊಲೀಸ್ ಮತ್ತು ಸೇನಾ‌ ಕ್ಯಾಂಟೀನ್ ಮಾದರಿಯಲ್ಲೇ ರಾಜ್ಯ ಸರಕಾರಿ ನೌಕರರಿಗೆ ದಿನನಿತ್ಯದ ಬದುಕಿಗೆ ಅಗತ್ಯವಿರುವ ಪ್ರತಿಯೊಂದು ವಸ್ತುವೂ ರಿಯಾಯಿತಿ ದರದಲ್ಲಿ ಸಿಗಬೇಕೆಂಬ ಉದ್ದೇಶದೊಂದಿಗೆ ಸರಕಾರಿ ಸ್ವಾಮ್ಯದ ಎಂಎಸ್‌ಐಎಲ್‌ ವತಿಯಿಂದ ಸೂಪರ್‌ ಮಾರ್ಕೆಟ್‌ ಆರಂಭಿಸುವ ಚಿಂತನೆ ಇದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಈ ಸಂಬಂಧ ಅವರು ಖನಿಜ ಭವನದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ ಕುಮಾರ ಸೇರಿದಂತೆ ಇತರ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಪ್ರಾಥಮಿಕ ಸುತ್ತಿನ ಸಭೆ ನಡೆಸಿದರು. ಬಳಿಕ ಮಾಹಿತಿ ನೀಡಿದ ಅವರು, ರಾಜ್ಯದ ಪೊಲೀಸ್, ಅರೆ ಸೇನಾ ಪಡೆಗಳ ನೌಕರರಿಗೆ ಈ ರೀತಿಯ ಕ್ಯಾಂಟೀನ್‌ ಸೌಲಭ್ಯವಿದೆ. ರಾಜ್ಯದಲ್ಲಿ 6 ಲಕ್ಷ ಸರಕಾರಿ ನೌಕರರಿದ್ದಾರೆ. ಅವರ ಕುಟುಂಬಗಳ ಹಿತದೃಷ್ಟಿಯಿಂದ ಇಂಥದ್ದೊಂದು ಉಪಕ್ರಮ ಆರಂಭಿಸುವುದು ನಮ್ಮ ಚಿಂತನೆಯಾಗಿದೆ. ಇದಕ್ಕೆ ಸಬ್ಸಿಡಿ ಅಥವಾ ತೆರಿಗೆ ವಿನಾಯಿತಿ ಪಡೆದುಕೊಳ್ಳುವುದು ಹೇಗೆಂದು ಆರ್ಥಿಕ ಇಲಾಖೆಯ ಜತೆ ಚರ್ಚಿಸಲಾಗುವುದು. ಒಟ್ಟಿನಲ್ಲಿ…

Read More

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತ 2032 ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶಿಸಿದೆ ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಲಾಗಿದೆ.  ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ಕೆ.ಎಸ್.ಆರ್.ಪಿ. ಸ್ಪೆ.ಆರ್‌ಪಿಸಿ (ಪುರುಷ ಮತ್ತು ಮಹಿಳೆ) 1,500 ಹುದ್ದೆಗಳನ್ನು ಹಾಗೂ (ಸ್ಥಳೀಯ ವೃಂದದ) 336 ಹುದ್ದೆಗಳನ್ನು ಮತ್ತು ಐ.ಆರ್.ಬಿ., ಮುನಿರಾಬಾದ್ ಘಟಕದ 166 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ತಮ್ಮ ಕಛೇರಿಯಿಂದ ಕಳುಹಿಸಲಾದ ನೇರ ಮತ್ತು ಸಮತಳ ವರ್ಗೀಕರಣದ ವಿವರವನ್ನು ನೀಡಲಾಗಿದೆ ಎಂದಿದೆ. ಪೊಲೀಸ್‌ ಪ್ರಧಾನ ಕಛೇರಿಯ ಪತ್ರ ಸಂಖ್ಯೆ: 195/ಸಿಬ್ಬಂದಿ-1/2020-21 ದಿನಾಂಕ 13-10-2025ನ್ನು ಉಲ್ಲೇಖಿಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್ಸ್‌ ಟೇಬಲ್ ವೃಂದಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಕುರಿತು ಕೆಲವು ಅಂಶಗಳಿಗೆ ಸರ್ಕಾರದಿಂದ ಸ್ವೀಕೃತಗೊಂಡಿರುವ ಸ್ಪಷ್ಟಿಕರಣ ಹಾಗೂ ಆದೇಶಗಳಲ್ಲಿನ ನಿರ್ದೇಶನಗಳನ್ವಯ ಸಂಬಂಧಪಟ್ಟ ಘಟಕಗಳಿಂದ ವರ್ಗೀಕರಣವನ್ನು ಪಡೆದು ಪ್ರಸ್ತಾಪಿತ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮಕ್ಕಾಗಿ ಕೋರಲಾಗಿರುತ್ತದೆ ಎಂದಿದೆ. ಆದ್ದರಿಂದ,…

Read More

ಬೆಂಗಳೂರು: ರಾಜ್ಯದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪಡೆಯಬೇಕಿರುವಂತ ಉತ್ತೀರ್ಣತಾ ಅಂಕಗಳಲ್ಲಿ ಬದಲಾವಣೆ ಮಾಡಲಾಗಿದೆ. ಇನ್ಮುಂದೆ ಶೇ.33ರಷ್ಟು ಅಂಕಗಳನ್ನು ಆಯಾ ವಿಷಯ ಹಾಗೂ ಆಂತರೀಕ ಮೌಲ್ಯಮಾಪನ ಸೇರಿ ಪಡೆದರೂ ಉತ್ತೀರ್ಣರಾಗಲಿದ್ದಾರೆ. SSLCಯಲ್ಲಿ ಇಷ್ಟು ಅಂಕ ಬಂದ್ರೆ ಪಾಸ್ ರಾಜ್ಯದ SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಆಂತರೀಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡೂ ಸೇರಿ ಒಟ್ಟಾರೆ ಶೇ.33% ಅಂಕಗಳನ್ನು ಪಡೆದರೇ ಪಾಸ್ ಮಾಡಲಿದೆ. ಅಂದರೇ ಆಂತರೀಕ ಮೌಲ್ಯ ಮಾಪನದಲ್ಲಿ 20 ಅಂಕದಲ್ಲಿ 20 ಪಡೆದು, ವಾರ್ಷಿಕ ಪರೀಕ್ಷೆಯಲ್ಲಿ 13 ಅಂಕವನ್ನು ಪಡೆದರೂ ಒಟ್ಟು 33 ಅಂಕ ತಗೆದೆರೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಆಯಾ ವಿಷಯದಲ್ಲಿ ಪಾಸ್ ಆಗಲಿದ್ದಾರೆ. ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಾಯ್ದೆ, 1966 (1966ರ ಕರ್ನಾಟಕ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲೇ ನಿಮಗಾಗಿ ಎಂ ಎಸ್ ಐ ಎಲ್ ಮೂಲಕ ರಿಯಾಯಿತಿ ದರದ ಸೂಪರ್ ಮಾರ್ಕೆಟ್ ಅನ್ನು ಸರ್ಕಾರವು ಆರಂಭಿಸಲು ಚಿಂತನೆ ನಡೆಸಿದೆ. ಪೊಲೀಸ್ ಮತ್ತು ಸೇನಾ‌ ಕ್ಯಾಂಟೀನ್ ಮಾದರಿಯಲ್ಲೇ ರಾಜ್ಯ ಸರಕಾರಿ ನೌಕರರಿಗೆ ದಿನನಿತ್ಯದ ಬದುಕಿಗೆ ಅಗತ್ಯವಿರುವ ಪ್ರತಿಯೊಂದು ವಸ್ತುವೂ ರಿಯಾಯಿತಿ ದರದಲ್ಲಿ ಸಿಗಬೇಕೆಂಬ ಉದ್ದೇಶದೊಂದಿಗೆ ಸರಕಾರಿ ಸ್ವಾಮ್ಯದ ಎಂಎಸ್‌ಐಎಲ್‌ ವತಿಯಿಂದ ಸೂಪರ್‌ ಮಾರ್ಕೆಟ್‌ ಆರಂಭಿಸುವ ಚಿಂತನೆ ಇದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಈ ಸಂಬಂಧ ಅವರು ಖನಿಜ ಭವನದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ ಕುಮಾರ ಸೇರಿದಂತೆ ಇತರ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಪ್ರಾಥಮಿಕ ಸುತ್ತಿನ ಸಭೆ ನಡೆಸಿದರು. ಬಳಿಕ ಮಾಹಿತಿ ನೀಡಿದ ಅವರು, ರಾಜ್ಯದ ಪೊಲೀಸ್, ಅರೆ ಸೇನಾ ಪಡೆಗಳ ನೌಕರರಿಗೆ ಈ ರೀತಿಯ ಕ್ಯಾಂಟೀನ್‌ ಸೌಲಭ್ಯವಿದೆ. ರಾಜ್ಯದಲ್ಲಿ…

Read More

ಹಾಸನ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವಂತ ಹಾಸನಾಂಬೆಯ ಭಾಗಿಲು ವರ್ಷದಲ್ಲಿ ಒಮ್ಮೆ ಮಾತ್ರ ತೆರೆಯೋದು. ಇದೀಗ ಭಾಗಿಲು ತೆಗೆದಿದ್ದು, ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನೀವು ಹಾಸನಾಂಬೆ ತಾಯಿಯ ದರ್ಶನಕ್ಕೆ ತೆರಳುತ್ತಿದ್ದರೇ ದರ್ಶನದ ಸಮಯವನ್ನು ಈ ಕೆಳಕಂಡಂತೆ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಹಾಸನ ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 16-10-2025, ದಿನಾಂಕ 18-10-2025 ಮತ್ತು ದಿನಾಂಕ 21-10-2025ರಂದು ಮೂರು ದಿನಗಳ ಕಾಲ ರಾತ್ರಿ 12 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ತಾಯಿ ಹಾಸನಾಂಬ ದೇವಿಯ ಅಲಂಕಾರ ಬದಲಾವಣೆ, ಧಾರ್ಮಿಕ ವಿಧಿ ವಿಧಾನ ಕಾರ್ಯ ಪ್ರಯುಕ್ತ ದೇವಿಯ ದರ್ಶನದ ಸಮಯ ಬದಲಾವಣೆ ಮಾಡಿರುವುದಾಗಿ ತಿಳಿಸಿದ್ದಾರೆ. ಈ 5 ಗಂಟೆಗಳ ದೀರ್ಘ ಕಾಲಾವಧಿಯಲ್ಲಿ ದೇವಾಲಯದ ಪ್ರವೇಶ ಬಾಗಿಲು ಮುಚ್ಚಲಾಗುವ ಬಗ್ಗೆ ಭಕ್ತಾದಿಗಳು ದರ್ಶನಕ್ಕೆ ಬರುವ ಸಮಯ ಯೋಜನೆ ರೂಪಿಸಿಕೊಳ್ಳಲು ಮಾಹಿತಿಯನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ವಿಶೇಷ ಸೂಚನೆಯಲ್ಲಿ ಈ ಮೂರು ದಿನಗಳಲ್ಲಿ 2 ಗಂಟೆ ಮುಂಚಿತವಾಗಿ ರಾತ್ರಿ 10…

Read More

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಎನ್ನುವಂತೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣರಾಗಲು ನಿಗದಿ ಪಡಿಸಿರುವಂತ ಉತ್ತೀರ್ಣತಾ ಅಂಕಗಳಲ್ಲಿ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. 1.ಪ್ರಪ್ರಥಮ ಬಾರಿಗೆ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (KPS) ಉನ್ನತೀಕರಣ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ ಒಟ್ಟು 800 ಸರ್ಕಾರಿ ಶಾಲೆಗಳನ್ನು ಒಂದೇ ಬಾರಿಗೆ ಉನ್ನತೀಕರಿಸಿ, ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (Karnataka Public Schools) ಪರಿವರ್ತಿಸಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ, ಪ್ರತಿ ಶಾಲೆಯನ್ನು ₹4.00ಕೋಟಿ ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಸದರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೆ ಒಂದೇ ಸೂರಿನಡಿ ವಿದ್ಯಾಬ್ಯಾಸಕ್ಕೆ ಅನುಕೂಲ ಕಲ್ಪಿಸಲಾಗುವುದು. ಮೊದಲ ಹಂತದಲ್ಲಿ, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ಸಹಯೋಗದೊಂದಿಗೆ ರಾಜ್ಯ ಸರ್ಕಾರದ…

Read More

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ನಂದಿನಿ ಉತ್ಪನ್ನ ಪ್ರಿಯರಿಗೆ ಸಂತಸದ ಸುದ್ದಿ ಎನ್ನುವಂತೆ ನೂತನ ನಂದಿನಿ ಸಿಹಿ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಕುರಿತು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಹಾಲು ಮಹಾಮಂಡಳಿಯು ಕಳೆದ 5 ದಶಕಗಳಿಂದ “ನಂದಿನಿ” ಬ್ಯಾಂಡ್‌ನಲ್ಲಿ ರಾಜ್ಯ ಮತ್ತು ಹೊರ ರಾಜ್ಯದ ಗ್ರಾಹಕರಿಗೆ ಕೈಗೆಟುಕುವ ಬೆಲೆಗಳಲ್ಲಿ ಪರಿಶುದ್ಧ ಮತ್ತು ರುಚಿಕರವಾದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಒದಗಿಸುವ ಮೂಲಕ ಗ್ರಾಹಕರ ನೆಚ್ಚಿನ ಬ್ರಾಂಡ್ ಆಗಿದೆ. ನಂದಿನಿ ಬ್ರಾಂಡ್‌ನಲ್ಲಿ 175 ಕ್ಕೂ ಅಧಿಕ ಮಾದರಿಯ ಹಾಲಿನ ಉತ್ಪನ್ನಗಳನ್ನು ಉತ್ಪಾದಿಸಿ ಮಾರಾಟ ಮಾಡಲಾಗುತ್ತಿದೆ ಎಂದಿದ್ದಾರೆ. 2025 ರ ದಸರಾ ಹಬ್ಬದ ಸಂದರ್ಭದಲ್ಲಿ ನಂದಿನಿ ಸಿಹಿಗಳ ಮಾರಾಟವು 750 ಮೆ.ಟನ್‌ಗಳನ್ನು ದಾಟಿದ್ದು ಈ ಯಶಸ್ಸು ನಂದಿನಿ ಬ್ಯಾಂಡ್ ಶುದ್ಧತೆ, ಗುಣಮಟ್ಟ ಮತ್ತು ವಿಶ್ವಾಸದ ಪ್ರತೀಕವಾಗಿದ್ದು, ಗ್ರಾಹಕರ ನಂಬಿಕೆಯ ಪ್ರತಿಫಲವಾಗಿದೆ ಎಂದು ಹೇಳಿದ್ದಾರೆ. ಇಂದಿನ ಆರೋಗ್ಯ ಜಾಗೃತ ಯುಗದಲ್ಲಿ ಗ್ರಾಹಕರು…

Read More

ಶಿವಮೊಗ್ಗ: ರಾಜ್ಯ ಸರ್ಕಾರವು ಸೊರಬ ತಾಲ್ಲೂಕಿನ ಉಳವಿಯಲ್ಲಿರುವಂತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢ ಶಾಲೆಯನ್ನು ಸೇರಿಸಿ ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಉನ್ನತೀಕರಿಸಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಕರ್ನಾಟಕದಲ್ಲಿ ಸುಮಾರು 47,493 ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿವೆ. ಇವುಗಳಲ್ಲಿ 19,603 ಪ್ರಾಥಮಿಕ ಶಾಲೆಗಳು, 21,676 ಹಿರಿಯ ಪ್ರಾಥಮಿಕ ಶಾಲೆಗಳು, 4,895 ಪ್ರೌಢ ಶಾಲೆಗಳು ಮತ್ತು 1,319 ಪದವಿ ಪೂರ್ವ ಶಾಲೆಗಳಿರುತ್ತವೆ ಎಂದು ತಿಳಿಸಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳು ಗುಣಮಟ್ಟದ ಸಾರ್ವಜನಿಕ ಶಿಕ್ಷಣಕ್ಕಾಗಿ ಒಂದು ಅಭೂತಪೂರ್ವ ಬದಲಾವಣೆಯ ಚೌಕಟ್ಟನ್ನು ಒದಗಿಸುತ್ತವೆ. ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಗುಣಮಟ್ಟದ ಕಲಿಕೆ ಮತ್ತು ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಆರಂಭಿಸಿದ ಒಂದು ಸುಧಾರಣಾತ್ಮಕ ಕಾರ್ಯತಂತ್ರವೇ ಕೆಪಿಎಸ್ ಆಗಿದೆ ಎಂದು ಹೇಳಿದ್ದಾರೆ. ಕೆಪಿಎಸ್ ಮಾದರಿಯ ಶಾಲೆಗಳು ಒಂದೇ ಸೂರಿನಡಿಯಲ್ಲಿ ಶಾಲಾ ಪೂರ್ವ ತರಗತಿಗಳಿಂದ ಅಂದರೇ LKGಯಿಂದ 12ನೇ ತರಗತಿಯವರೆಗೆ ಅಂದರೆ ದ್ವಿತೀಯ ಪಿಯುಸಿವರೆಗೆ ಶಿಕ್ಷಣವನ್ನು ಒದಗಿಸುತ್ತದೆ. ಇದು ಕಲಿಕೆಯ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾಗರದ ಶ್ರೀಗಂಧದ ಕಲಾ ಸಂಕೀರ್ಣದ ಶಿಲ್ಪಗುರುಕುಲದ ಶಿಕ್ಷಣ ಕೊಠಡಿಗಳು, ವಸತಿ ಗೃಹಗಳು ಹಾಗೂ ಉಪಹಾರ ಗೃಹದ ದುರಸ್ತಿ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಕಾರ್ಯಾದೇಶವನ್ನು ಮಾಡಿ ಶಿವಮೊಗ್ಗದ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಿಗೆ ಪತ್ರದಲ್ಲಿ ಸೂಚಿಸಿದ್ದಾರೆ. ಸಾಗರದ ಶ್ರೀಗಂಧದ ಕಲಾ ಸಂಕೀರ್ಣದ ಶಿಲ್ಪಗುರುಕುಲದ ಉಪಹಾರ ಕೊಠಡಿಯ ದುರಸ್ಥಿಗಾಗಿ 8.60 ಲಕ್ಷ ಬಿಡುಗಡೆ ಮಾಡಿದ್ದರೇ, ಕ್ಲಾಸ್ ರೂಮ್, ರೂಮ್ ಪಾರ್ಟೀಷನ್ ಗಾಗಿ ರೂ.34.80 ಲಕ್ಷವನ್ನು, ಗೆಸ್ಟ್ ಹಾಸ್ಟೆಲ್ ಬ್ಲಾಕ್-1 ದುರಸ್ಥಿಗೆ 7.80 ಲಕ್ಷ, ಗೆಸ್ಟ್ ಹಾಸ್ಟೆಲ್ ಬ್ಲಾಕ್-2 ದುರಸ್ಥಿಗೆ 7.80 ಲಕ್ಷ ಹಾಗೂ ಗೆಸ್ಟ್ ಹಾಸ್ಟೆಲ್ ಬ್ಲಾಕ್-3 ದುರಸ್ಥಿಗೆ 6.80 ಲಕ್ಷ ಸೇರಿದಂತೆ ಒಟ್ಟು 65.80 ಲಕ್ಷ ಹಣವನ್ನು ಮಂಜೂರು ಮಾಡಲಾಗಿದೆ. ಈ ಕಾಮಗಾರಿಯನ್ನು ಶಿವಮೊಗ್ಗದ ನಿರ್ಮಿತಿ ಕೇಂದ್ರದವರಿಗೆ ರೂ.65.80 ಲಕ್ಷಗಳಿಗೆ ವಹಿಸಲು ತಿಳಿಸಲಾಗಿದೆ. ಸದರಿ ಕಾರ್ಯಾದೇಶದ ಅನ್ವಯ ಅಂದಾಜು ಪಟ್ಟಿಯನ್ನು ನಿಗಮದಿಂದ…

Read More

ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…

Read More