Author: kannadanewsnow09

ಬೆಂಗಳೂರು: 16ನೇ ವಿಧಾನಸಭೆಗೆ ಆಯ್ಕೆಯಾಗಿರುವಂತ ರಾಜ್ಯದ ಶಾಸಕರು ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ಜೂನ್.30ರೊಳಗೆ ಸಲ್ಲಿಸುವಂತೆ ಲೋಕಾಯುಕ್ತ ಡೆಡ್ ಲೈನ್ ನೀಡಿದೆ. ಈ ಸಂಬಂಧ ವಿಧಾನಸಭೆ ಸದಸ್ಯರಿಗೆ ಪತ್ರ ಬರೆದಿರುವಂತ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರು, ಕರ್ನಾಟಕ ಲೋಕಾಯುಕ್ತ ಅಧಿನಿಯಮ 1984ರ ಕಲಂ 7 ರ ಉಪ ಕಲಂ (1)ರಡಿ ಉಲ್ಲೇಖಿಸಿರುವಂತೆ ಪ್ರತಿಯೊಬ್ಬ ವಿಧಾನಸಭೆಯ ಸದಸ್ಯರು, ಆಯಾ ವರ್ಷದ ಜೂನ್ 30ರೊಳಗಾಗಿ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ನಿಗದಿಪಡಿಸಲಾದ ನಮೂನೆಯಲ್ಲಿ ಮಾನ್ಯ ಲೋಕಾಯುಕ್ತರಿಗೆ ಸಲ್ಲಿಸತಕ್ಕದೆಂದು ಕರ್ನಾಟಕ ಲೋಕಾಯುಕ್ತ ಕಾಯಿದೆ, 1984ರ ಕಲಂ 22ರಲ್ಲಿ ಅಧ್ಯಾದೇಶಿಸಲಾಗಿದ್ದು, ಅದರಂತೆ ಪಟ್ಟಿಯನ್ನು ಸಲ್ಲಿಸಲು ಮಾನ್ಯ ಸದಸ್ಯರುಗಳಿಗೆ ತಿಳಿಸುವಂತೆ ದಿನಾಂಕ:21.03.2025ರಂದು ಲೋಕಾಯುಕ್ತ ನಿಬಂಧಕರು ಬರೆದಿರುವ ಪತ್ರದಲ್ಲಿ ತಿಳಿಸಿರುತ್ತಾರೆ ಎಂದಿದ್ದಾರೆ. ಆದುದರಿಂದ, 16ನೇ ವಿಧಾನಸಭೆಗೆ ಆಯ್ಕೆಯಾಗಿರುವ ಮಾನ್ಯ ಸದಸ್ಯರು 2024-25ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲಗತ್ತಿಸಿರುವ…

Read More

ಬೆಂಗಳೂರು: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಕಾಯ್ದೆ ಜಾರಿಗೆ ತಂದಿತ್ತು. ಆ ಬಳಿಕ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕಾರ ಪಡೆದಿತ್ತು. ಈಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಕಿರು(Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧಿನಿಯಮ 2025ಕ್ಕೆ ಅಂಕಿತ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಅಕ್ರಮ ಮೈಕ್ರೋ ಫೈನಾನ್ಸ್ ದಂಧೆಗೆ ಕಡಿವಾಣ ಬಿದ್ದಂತೆ ಆಗಿದೆ. ಅಲ್ಲದೇ ಕಿರುಕುಳ ನೀಡಿದ್ರೇ ಜೈಲು, ದಂಡ ಫಿಕ್ಸ್ ಆದಂತೆ ಆಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು,  ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ, 2025 ಇದಕ್ಕೆ 2025 ರ ಮಾರ್ಚ್ ತಿಂಗಳ 24ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧಿನಿಯಮ ಸಂಖ್ಯೆ:15 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV)…

Read More

ಮೈಸೂರು: ಉದಯಗಿರಿ ಠಾಣೆಯಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಗಲಭೆ ಪ್ರಕರಣದಲ್ಲಿ ಒರ್ವ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸರು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ. ಮೂವರು ಪೊಲೀಸ್ ಅಧಿಕಾರಿ, ಸಿಬ್ಬಂದಿಗಳನ್ನು ಕರ್ತವ್ಯ ಲೋಪದ ಮೇಲೆ ಸಿಬ್ಬಂದಿ ಅಮಾನತುಗೊಳಿಸಿದ ನಗರ ಪೊಲೀಸ್ ಆಯುಕ್ತರು ಆದೇಸಿದ್ದಾರೆ. ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಫೋಸ್ಟರ್ ಗಲಭೆಗೆ ಮೂಲಕ ಗಲಭೆ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ವಿಫಲವಾದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. https://kannadanewsnow.com/kannada/governor-gives-assent-to-microfinance-harassment-control-bill-in-the-state-gazette-notification-issued/ https://kannadanewsnow.com/kannada/disciplinary-committee-issues-notice-to-five-bjp-leaders-in-the-state/

Read More

ವಿಶ್ವಾವಸು ಸಂವತ್ಸರ ಈ ಸಂವತ್ಸರದಲ್ಲಿ ಗುರು ಅಸ್ತ (ಮೌಢ್ಯ) 15-06-2025* ರಿಂದ 07-07-2025 ತನಕ* ವಿಶ್ವಾವಸು ಸಂವತ್ಸರದಲ್ಲಿ ಗುರುವು ಜ್ಯೇಷ್ಠ ಕೃಷ್ಣ ಚತುರ್ಥಿ ಭಾನುವಾರ 2025 ಜೂನ್ 15 ಪಶ್ಚಿಮದಲ್ಲಿ ಅಸ್ತನಾಗಿ ಆಷಾಢ ಶುಕ್ಲ ದ್ವಾದಶಿ ಯು ಸೋಮವಾರ 2025 ಜುಲೈ 7ನೇ ತಾರೀಕು ಪೂರ್ವ ದಿಕ್ಕಿನಲ್ಲಿ ಉದಯಿಸುವನು ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಶುಕ್ರ ಅಸ್ತ(ಮೌಢ್ಯ) 16-12-2025 ರಿಂದ. 02-02-2026 ತನಕ ವಿಶ್ವಾವಸು ಸಂವತ್ಸರದಲ್ಲಿ ಶುಕ್ರನು ಮಾರ್ಗಶಿರ ಕೃಷ್ಣ ದ್ವಾದಶಿ ಮಂಗಳವಾರ ಡಿಸೆಂಬರ್ 16ಕ್ಕೆ ಪೂರ್ವ ದಿಕ್ಕಿನಲ್ಲಿ ಅಸ್ತನಾಗಿ ಮಾಘ ಕೃಷ್ಣ ಪಾಡ್ಯ ಸೋಮವಾರ 2026 ಫೆಬ್ರವರಿ 2 ಪಶ್ಚಿಮ ದಿಕ್ಕಿನಲ್ಲಿ ಉದಯಿಸುತ್ತಾನೆ ಈ ಗುರು ಮತ್ತು ಶುಕ್ರ ಗ್ರಹಗಳ ಅಸ್ತಂಗತ ಕಾಲವು ಮದುವೆ…

Read More

ಬೆಂಗಳೂರು: ರಾಜ್ಯದ ಐವರು ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. 72 ಗಂಟೆಯಲ್ಲಿ ಉತ್ತರಿಸುವಂತೆ ಐವರು ಬಿಜೆಪಿ ನಾಯಕರಿಗೆ ಶೋಕಾಸ್ ನೋಟಿಸ್ ನೀಡಿದೆ. ಈ ಸಂಬಂಧ ಬಿಜೆಪಿಯ ಶಿಸ್ತು ಪಾಲನಾ ಸಮಿತಿಯಿಂದ ಕರ್ನಾಟಕದ ಐವರು ಬಿಜೆಪಿ ನಾಯಕರಿಗೆ ನೋಟಿಸ್ ನೀಡಲಾಗಿದೆ. ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು,  ಬಿ.ಪಿ ಹರೀಶ್, ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಗೆ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿದೆ. ಬಿಜೆಪಿ ಶಿಸ್ತು ಪಾಲನಾ ಸಮಿತಿಯಿಂದ ನೀಡಿರುವಂತ ನೋಟಿಸ್ ನಲ್ಲಿ 72 ಗಂಟೆಯಲ್ಲಿ ಉತ್ತರಿಸುವಂತೆ ತಿಳಿಸಲಾಗಿದೆ. ಈ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆನ್ನಲ್ಲೇ ಐವರು ಬಿಜೆಪಿ ನಾಯಕರಿಗೂ ಬಿಜೆಪಿ ಹೈಕಮಾಂಟ್ ನೋಟಿಸ್ ನೀಡಿ ಶಾಕ್ ನೀಡಲಾಗಿದೆ. https://kannadanewsnow.com/kannada/governor-gives-assent-to-microfinance-harassment-control-bill-in-the-state-gazette-notification-issued/ https://kannadanewsnow.com/kannada/state-govt-orders-transfer-of-sagar-sub-divisional-officer-yathish-r/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಸಾಗರದ ಉಪ ವಿಭಾಗಾಧಿಕಾರಿ ಯತೀಶ್ ಆರ್ ಸೇರಿದಂತೆ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಬೆಂಗಳೂರಿನ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ಭೂಮಿ ಮತ್ತು ಯುಪಿಒಆರ್) ಸರ್ಕಾರದ ಪ್ರಧಾನ ಕಾರ್ಯದರ್ಶಿ  ವಿ.ರಶ್ಮಿ ಮಹೇಶ್, ಐಎಎಸ್ (ಕೆಎನ್: 1996) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಬೆಂಗಳೂರಿನ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ಭೂಮಿ ಮತ್ತು ಯುಪಿಒಆರ್) ಸರ್ಕಾರದ ಪ್ರಧಾನ ಕಾರ್ಯದರ್ಶಿ ಹುದ್ದೆಯ ಸಹವರ್ತಿ ಪ್ರಭಾರದಲ್ಲಿ ವಿ. ರಶ್ಮಿ ಮಹೇಶ್, ಐಎಎಸ್ (ಕೆಎನ್: 1996) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ. ಬೆಂಗಳೂರಿನ ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಸೊಸೈಟಿಯ ಯೋಜನಾ ನಿರ್ದೇಶಕರಾದ ನಾಗರಾಜ ಎನ್. ಎಂ.,…

Read More

ಚೆನ್ನೈ: ಖ್ಯಾತ ತಮಿಳು ನಟ ಮತ್ತು ನಿರ್ದೇಶಕ ಮನೋಜ್ ಭಾರತಿರಾಜ ಅವರು ಕೇವಲ 48 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮನೋಜ್ ಪ್ರಸಿದ್ಧ ನಿರ್ದೇಶಕ ಭಾರತಿರಾಜ ಅವರ ಪುತ್ರ. ಈ ಸುದ್ದಿ ಇಡೀ ಚಿತ್ರರಂಗವನ್ನು ಮತ್ತು ಅಭಿಮಾನಿಗಳನ್ನು ಆಘಾತಕ್ಕೀಡು ಮಾಡಿದೆ. ವರದಿಗಳ ಪ್ರಕಾರ, ಅವರು ಇಂದು ಸಂಜೆ ಚೆನ್ನೈನಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅವರು ಭಾರತಿರಾಜ ಅವರ ತಾಜ್ ಮಹಲ್ ಮೂಲಕ ನಾಯಕ ನಟನಾಗಿ ಪಾದಾರ್ಪಣೆ ಮಾಡಿದರು. ಅಲ್ಲಿ ಅರ್ಜುನ, ಸಮುಧಿರಾಮ್, ಈಶ್ವರನ್, ವಿರುಮನ್ ಮತ್ತು ಇತರ ಚಿತ್ರಗಳಲ್ಲಿ ನಟಿಸಿದರು. ಅವರ ತಂದೆಯ ನಂತರ, ಅವರು ಮಾರ್ಗಜಿ ತಿಂಗಲ್ ಎಂಬ ಚಿತ್ರವನ್ನು ಸಹ ನಿರ್ದೇಶಿಸಿದರು. https://kannadanewsnow.com/kannada/rbi-cancels-bank-holiday-on-march-31/ https://kannadanewsnow.com/kannada/governor-gives-assent-to-microfinance-regulation-bill-imposes-jail-term-penalty-for-harassment/

Read More

ನವದೆಹಲಿ: ಮೆಟಾದ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಾದ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಮಂಗಳವಾರ ಭಾರತ ಸೇರಿದಂತೆ ವಿಶ್ವದಾದ್ಯಂತ ವ್ಯಾಪಕ ಸ್ಥಗಿತವನ್ನು ಅನುಭವಿಸುತ್ತಿವೆ. ಪ್ರಪಂಚದಾದ್ಯಂತದ ಬಳಕೆದಾರರು ಅಪ್ಲಿಕೇಶನ್ಗಳು ಮತ್ತು ವೆಬ್ಸೈಟ್ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಮತ್ತು ವಿಷಯವನ್ನು ತಳ್ಳಲು ಸಾಧ್ಯವಾಗುತ್ತಿಲ್ಲ ಎಂದು ವರದಿ ಮಾಡಿದ್ದಾರೆ. ಡೌನ್ಡೆಟೆಕ್ಟರ್ನಲ್ಲಿ ನೂರಾರು ದೂರುಗಳು ಬಂದಿವೆ. ಇದು ತನ್ನ ಪ್ಲಾಟ್ಫಾರ್ಮ್ನಲ್ಲಿ ಬಳಕೆದಾರರು ಸಲ್ಲಿಸಿದ ದೋಷಗಳು ಸೇರಿದಂತೆ ಹಲವಾರು ಮೂಲಗಳಿಂದ ಸ್ಥಿತಿ ವರದಿಗಳನ್ನು ಒಟ್ಟುಗೂಡಿಸುವ ಮೂಲಕ ಸ್ಥಗಿತಗಳನ್ನು ಪತ್ತೆಹಚ್ಚುತ್ತದೆ. ಹೆಚ್ಚಿನ ಸಮಸ್ಯೆಗಳು ಇನ್ಸ್ಟಾಗ್ರಾಮ್ ಕಾಮೆಂಟ್ಗಳು ಲೋಡ್ ಆಗದಿರುವುದು ಮತ್ತು ಬಳಕೆದಾರರು ಪೋಸ್ಟ್ ಮಾಡಲು ಸಾಧ್ಯವಾಗದಿರುವುದು ಕಂಡು ಬಂದಿದೆ. ಸ್ಥಗಿತ ಟ್ರ್ಯಾಕಿಂಗ್ ವೆಬ್ಸೈಟ್ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಯುನೈಟೆಡ್ ಕಿಂಗ್ಡಮ್ನಲ್ಲಿ (ಭಾರತೀಯ ಕಾಲಮಾನ ಸಂಜೆ 6:30) ವರದಿಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅನೇಕ ಫೇಸ್ಬುಕ್ ಬಳಕೆದಾರರು ಅದೇ ಸಮಯದಲ್ಲಿ ಪ್ಲಾಟ್ಫಾರ್ಮ್ನೊಂದಿಗೆ ಸಮಸ್ಯೆಗಳನ್ನು ವರದಿ ಮಾಡಲು ಪ್ರಾರಂಭಿಸಿದರು. ಇನ್ಸ್ಟಾಗ್ರಾಮ್ ಬಳಕೆದಾರರು ಈ ವಿಷಯವು ಮುಖ್ಯವಾಗಿ ತಮ್ಮ ಪೋಸ್ಟ್ಗಳ ಕಾಮೆಂಟ್ಗಳ ವಿಭಾಗದ ಮೇಲೆ ಪರಿಣಾಮ…

Read More

ಬೆಂಗಳೂರು: ಮುಂಬರುವಂತ ಏಪ್ರಿಲ್ 5ರಂದು ಚಿತ್ರಸಾಹಿತಿ ಕವಿರಾಜ್ ಅವರ ಸುಮಾರು 25 ವರ್ಷಗಳ ಸಿನಿ ಜೀನವದ 28 ರಸಮಯ ಘಟನೆಗಳ ಗುಚ್ಚವನ್ನು ಒಳಗೊಂಡಂತ ಕವಿರಾಜ್ ಮಾರ್ಗದಲ್ಲಿ ಕೃತಿ ಲೋಕಾರ್ಪಣೆಯಾಗಲಿದೆ. ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಬರೆದುಕೊಂಡಿರುವಂತ ಅವರು, ನಿನ್ನೆ ಮೊನ್ನೆಯಷ್ಟೇ ಮೊದಲ ಹಾಡು ಬರೆದಂತಿದೆ. ಆದರೇ ಇದೀಗ ಬೆಳ್ಳಿಹಬ್ಬದ ಹೊಸ್ತಿಲಲ್ಲಿ ನಿಂತಿದ್ದೇನೆ. 1000ಕ್ಕೂ ಹೆಚ್ಚು ಸಿನಿಮಾಗಳು, 2250ಕ್ಕೂ ಹೆಚ್ಚು ಹಾಡುಗಳು, ಸುಮಾರು 25 ವರ್ಷಗಳ ಸುಂದರ ಪಯಣ ನನ್ನದು ಎಂದಿದ್ದಾರೆ. ನನ್ನ ಈ ಸಂಭ್ರಮದ ಕುರುಹಾಗಿ 28 ರಸಮಯ ಘಟನೆಗಳ ಗುಚ್ಚವನ್ನು ಪುಸ್ತಕ ರೂಪದಲ್ಲಿ ನಿಮ್ಮ ಕೈಗಿಡಲಿದ್ದೇನೆ. ಅದಕ್ಕಿಟ್ಟ ಹೆಸರು ಕವಿರಾಜ್ ಮಾರ್ಗದಲ್ಲಿ ಎಂದು ಹೇಳಿದ್ದಾರೆ. ಏಪ್ರಿಲ್.5ರಂದು ಸಂಜೆ 5 ಗಂಟೆಯಿಂದ ಹರಿವು ಪ್ರಕಾಶನದ ಸಹಯೋಗದಲ್ಲಿ ಚಾಮರಾಜಪೇಟೆಯಲ್ಲಿರುವ ಕಲಾವಿದರ ಭವನದ ಸಭಾಂಗಣದಲ್ಲಿ ಈ ಪುಸ್ತಕ ಬಿಡುಗಡೆಯ ಸಮಾರಂಭವನ್ನು ಹಮ್ಮಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಅಂದು ನನ್ನ ಸಿನಿಮಾ ಸ್ನೇಹಿತರು, ಬಂಧು-ಮಿತ್ರರರು, ಆಪ್ತರು ನನ್ನೊಂದಿಗೆ ಇರಲಿದ್ದಾರೆ. ನನ್ನ ಓರಗೆಯ ಸಿನಿಮಾ ಹಾಡುಗಾರರು ನನ್ನದೇ…

Read More

ಹುಬ್ಬಳ್ಳಿ: ನೈರುತ್ಯ ರೈಲ್ವೆಯ ಐವರು ಉದ್ಯೋಗಿಗಳಿಗೆ ಜಿಎಂ ಮುಕುಲ್ ಸರನ್ ಮಾಥುರ್ ಅವರು ಸುರಕ್ಷತಾ ಪ್ರಶಸ್ತಿ ನೀಡಿ ಗೌರವಿಸಿದರು. ಇಂದು ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಾದ ಮುಕುಲ್ ಸರನ್ ಮಾಥುರ್ ಅವರು ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ರೈಲು ಸೌಧದ ಜಿಎಂ ಕಾನ್ಫರೆನ್ಸ್ ಹಾಲ್‌ನಲ್ಲಿ ವಿವಿಧ ಇಲಾಖೆಗಳ ಪ್ರಧಾನ ಮುಖ್ಯಸ್ಥರೊಂದಿಗೆ ಇಂದು ಸುರಕ್ಷತಾ ಸಭೆ ನಡೆಸಿದರು. ಈ ಸಭೆಯ ನಂತರ, ರೈಲ್ವೆ ಸುರಕ್ಷತೆಯನ್ನು ಹೆಚ್ಚಿಸುವಲ್ಲಿ ತಮ್ಮ ಕರ್ತವ್ಯದ ಸಮಯದಲ್ಲಿ ತೋರಿದ ಜಾಗರೂಕತೆ, ಅಹಿತಕರ ಘಟನೆಗಳನ್ನು ತಪ್ಪಿಸುವಲ್ಲಿ ಮತ್ತು ರೈಲು ಕಾರ್ಯಾಚರಣೆಯಲ್ಲಿ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿನ ಕೊಡುಗೆಯನ್ನು ಗುರುತಿಸಿ 05 ಉದ್ಯೋಗಿಗಳಿಗೆ ಸುರಕ್ಷತಾ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಹುಬ್ಬಳ್ಳಿ ವಿಭಾಗದ ಶಿವಾಜಿ ಎಲ್. ಪವಾರ್, ಬೆಂಗಳೂರು ವಿಭಾಗದ ಕೈಲಾಶ್ ಪ್ರಸಾದ್ ಮೀನಾ ಮತ್ತು ಎಚ್. ಎಸ್. ಮಹೇಶ್, ಹಾಗೂ ಮೈಸೂರು ವಿಭಾಗದ ಜೆ.ಬಿ. ಲೋಹಿತ್ ಮತ್ತು ಅಬು ಸಾಲಿಯಾ ಅವರಿಗೆ ಪ್ರಶಸ್ತಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಕುಲ್ ಸರನ್ ಮಾಥುರ್ ಅವರು, ಸಿಬ್ಬಂದಿಗಳ ತ್ವರಿತ…

Read More