Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಾರ್ಚ್ 2026ರಿಂದ ರಾಜ್ಯದಲ್ಲಿನ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಮಾಡಲಾಗುತ್ತದೆ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ರಾಜ್ಯದ ಎಲ್ಲ ಗರ್ಭಿಣಿಯರಿಗೂ 2026ರ ಮಾರ್ಚ್ನಿಂದ ಜಿಲ್ಲಾವಾರು ಸಾಮೂಹಿಕ ಸೀಮಂತ ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಲಿದೆ. ಗರ್ಭಿಣಿ ಆರೋಗ್ಯವಂತರಾಗಿದ್ದರೆ ಆರೋಗ್ಯವಂತ ಮಕ್ಕಳು ಜನಿಸುತ್ತವೆ. ಆಗ ಆರೋಗ್ಯವಂತ ದೇಶ ನಿರ್ಮಾಣವಾಗುತ್ತದೆ. ಸಾಮೂಹಿಕ ಸೀಮಂತದಂತಹ ಕಾರ್ಯಕ್ರಮಗಳ ಮೂಲಕ ಗರ್ಭಿಣಿಯರು ಹಾಗೂ ಅವರ ಕಂದಮ್ಮಗಳ ಆರೋಗ್ಯದ ಬಗ್ಗೆಯೂ ಸರ್ಕಾರ ಕಾಳಜಿ ತೋರಲು ಮುಂದಾಗಿದೆ ಎಂದು ಹೇಳಿದ್ದಾರೆ. https://twitter.com/KarnatakaVarthe/status/1904477342870995437 ಗರ್ಭಿಣಿಯರಿಗೆ ಸೀಮಂತ ಮಾಡುವುದೆಂದರೆ ಅದು ನಮ್ಮ ಭಾರತೀಯ ಸಂಸ್ಕೃತಿಯ ಭಾಗವಾಗಿದೆ. ಭಾರತೀಯ ಸಂಸ್ಕೃತಿ ಮಹಿಳೆಗೆ ಅತ್ಯಂತ ಉನ್ನತ ಸ್ಥಾನವನ್ನು ಕೊಟ್ಟಿದೆ ಎಂದರು. ಮಾತೃತ್ವ ಎನ್ನುವುದು ಅತ್ಯಂತ ಶ್ರೇಷ್ಟವಾದ ಮೌಲ್ಯ. ಹಿಂದಿನಿಂದಲೂ ಮಾತೃದೇವೋಭವ ಎನ್ನುತ್ತೇವೆ, ಜನನಿ ತಾನೆ ಮೊದಲ ಗುರುವು ಎನ್ನುತ್ತೇವೆ. ಅದು ಸೀಮಂತ ದಿಂದ ಆರಂಭವಾಗಿ ಮಗು ಬೆಳವಣಿಗೆ ಹೊಂದಿದಂತೆ ಮುಂದುವರಿಯುತ್ತ ಹೋಗುತ್ತದೆ. ಒಂದು ಮಗುವಿನ ಬೆಳವಣಿಗೆ ಎಂದರೆ…
ಬೆಂಗಳೂರು : ಹನಿಟ್ರ್ಯಾಪ್ಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಸದಾಶಿವನಗರದ ಗೃಹಕಚೇರಿಯಲ್ಲಿ ಮಂಗಳವಾರ ಸಂಜೆ ಭೇಟಿ ಮಾಡಿ ಮನವಿ ನೀಡಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಹನಿಟ್ರ್ಯಾಪ್ಗೆ ಯತ್ನ ಆಗಿದೆ ಎಂಬ ವಿಷಯ ಸದನದಲ್ಲಿ ಚರ್ಚೆಗೆ ಬಂದಾಗ, ನನ್ನ ಮೇಲೆ ಪ್ರಯತ್ನ ಆಗಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಹೇಳಿದ್ದರು. ಗೃಹ ಸಚಿವರಿಗೆ ಮನವಿ ಕೊಡುತ್ತೇನೆ, ಕ್ರಮ ತೆಗೆದುಕೊಳ್ಳಬೇಕು ಎಂದಿದ್ದರು. ಈ ದಿನ ಮನವಿ ನೀಡಿದ್ದಾರೆ. ಮನವಿ ಸ್ವೀಕರಿಸಿದ್ದು, ಮುಂದೆ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸುತ್ತೇನೆ. ಯಾವ ಹಂತದಲ್ಲಿ, ಯಾರಿಂದ ತನಿಖೆಯಾಗಬೇಕು ಎಂಬುದನ್ನು ಸಿಎಂ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ಸದನದಲ್ಲಿ ಚರ್ಚೆಯಾಗಿರುವ ಹಿನ್ನೆಲೆಯಲ್ಲಿ ಮನವಿ ನೀಡಿದ್ದಾರೆ. ಇದರ ಆಧಾರದ ಮೇಲೆ ಮುಂದೆ ಏನು…
ಬೆಂಗಳೂರು: ಎಲ್ಲಾ ಪಕ್ಷದವರಿಗೂ ಹನಿಟ್ರ್ಯಾಪ್ ಆಗಿದೆ. ಕೆಲವರು ಕೋರ್ಟ್ ಗೆ ಹೋಗಿ ಸ್ಟೇ ತಂದಿದ್ದಾರೆ. ನನ್ನ ವಿಷಯ ಸದನದಲ್ಲಿ ಪ್ರಸ್ತಾಪವಾಗಿ ಹೊರ ಬಂದಿದೆ ಎಂಬುದಾಗಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿ ಹನಿಟ್ರ್ಯಾಪ್ ಯತ್ನ ಆರೋಪದ ಸಂಬಂಧ ತನಿಖೆ ನಡೆಸುವಂತೆ ಮನವಿ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜಡ್ಜ್ ಗಳಿಗೆ ಹನಿಟ್ರ್ಯಾಪ್ ಆಗಿದೆ ಎಂದು ನಾನು ಹೇಳಿಲ್ಲ. ನಮ್ಮ ಪಾರ್ಟಿ, ಬೇರೆ ಪಾರ್ಟಿಯಯಲ್ಲೂ ಹನಿಟ್ರ್ಯಾಪ್ ಮಾಡಿದವರು ಇದ್ದಾರೆ. ಎಲ್ಲಾ ಪಕ್ಷದವರಿಗೂ ಹನಿಟ್ರ್ಯಾಪ್ ಆಗಿದೆ. ಕೆಲವರು ಸ್ಟೇ ತಂದಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಈ ಚಾಳಿ ಮುಂದುವರೆಯಬಾರದು ಎಂದರು. ಮಾಧ್ಯಮಗಳಲ್ಲಿ ತುಮಕೂರಿನ ಪ್ರಭಲ ಸಚಿವರು ಅಂತ ತೋರಿಸಿದ್ರು. ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ವಿಚಾರವನ್ನು ಸುನೀಲ್ ಪ್ರಸ್ತಾಪ ಮಾಡಿದರು. ಮಾರನೇ ದಿನ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ಹೆಸರು ಹೇಳಿದ್ರು. ಹೀಗಾಗಿ ಸದನದಲ್ಲೇ ಈ ವಿಚಾರ ಬಹಿರಂಗಪಡಿಸಬೇಕಾಯಿತು ಎಂದರು. https://kannadanewsnow.com/kannada/jammu-and-kashmir-police-chief-takes-part-in-combing-operation-in-kathua-with-ak-47/ https://kannadanewsnow.com/kannada/big-shock-to-bank-customers-rbi-approves-increase-in-atm-interchange-charges/
ಜಮ್ಮು-ಕಾಶ್ಮೀರ: ಕಥುವಾದಲ್ಲಿ ಭಾನುವಾರ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿಯಲ್ಲಿ ತೊಡಗಿದ್ದ ಉಗ್ರರ ಹುಡುಕಾಟವನ್ನು ಭದ್ರತಾ ಸಿಬ್ಬಂದಿ ಚುರುಕುಗೊಳಿಸಿದ್ದಾರೆ. ಸೋಮವಾರ ದಟ್ಟ ಅರಣ್ಯದಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತ್ ಸೇರಿದಂತೆ ಉನ್ನತ ಅಧಿಕಾರಿಗಳು ಸೇರಿಕೊಂಡರು. ಪೊಲೀಸ್ ಮುಖ್ಯಸ್ಥರು ಇಂತಹ ಕಾರ್ಯಾಚರಣೆಯಲ್ಲಿ ಭಾಗವಹಿಸುವುದು ಅಪರೂಪ ಮತ್ತು 30 ವರ್ಷಗಳಿಗೂ ಹೆಚ್ಚು ಕಾಲ ಜಮ್ಮು ಮತ್ತು ಕಾಶ್ಮೀರದ ಉನ್ನತ ಪೊಲೀಸ್ ಅಧಿಕಾರಿ ಹೀಗೆ ಮಾಡಿರುವುದು ಇದೇ ಮೊದಲು ಎಂದು ನಂಬಲಾಗಿದೆ. ಕೈಯಲ್ಲಿ ಎಕೆ 47 ಹಿಡಿದು ಶೋಧ ಕಾರ್ಯಕ್ಕೆ ಹೊರಟ ಪ್ರಭಾತ್ ಜೊತೆಗೆ, ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಜಮ್ಮು ವಲಯ) ಭೀಮ್ ಸೇನ್ ಟುಟಿ, ಡಿಐಜಿ (ಜಮ್ಮು-ಸಾಂಬಾ-ಕಥುವಾ ರೇಂಜ್) ಶಿವ ಕುಮಾರ್ ಶರ್ಮಾ, ಕಥುವಾ ಎಸ್ಎಸ್ಪಿ ಶೋಭಿತ್ ಸಕ್ಸೇನಾ ಮತ್ತು ಎಸ್ಪಿ (ಕಾರ್ಯಾಚರಣೆ) ನಾಸಿರ್ ಖಾನ್ ಕೂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು. ಹಿರಾನಗರ ವಲಯದ ಸನಿಯಾಲ್ ಗ್ರಾಮಕ್ಕೆ ಗಡಿ ದಾಟಿದ್ದಾರೆಂದು ನಂಬಲಾದ ಉಗ್ರರು ಸ್ಥಳೀಯ ನಿವಾಸಿಗಳೊಂದಿಗೆ ಸಂಪರ್ಕಕ್ಕೆ…
ನವದೆಹಲಿ: ಹತ್ತನೆ ತರಗತಿ ಗಣಿತ ಪರೀಕ್ಷೆಯಲ್ಲಿ ಸಮಸ್ಯಾತ್ಮಕ ಪ್ರಶ್ನೆಗೆ ಉತ್ತರಿಸಬೇಕಿದ್ದಂತ ವಿದ್ಯಾರ್ಥಿಯೊಬ್ಬ ಬರೆದಿತ್ತು ಮಾತ್ರ ಕವನದ ರೀತಿಯ ಉತ್ತರ. ಈ ಉತ್ತರ ಕಂಡ ಶಿಕ್ಷಕಿ ಮಾತ್ರ ಅಷ್ಟೇ ನಾಜೂಕಿನ ಪ್ರತಿಕ್ರಿಯೆ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಪ್ರತಿಯೊಂದು ಶಾಲೆ ಅಥವಾ ಕಾಲೇಜಿನಲ್ಲಿ, ಎರಡು ರೀತಿಯ ವಿದ್ಯಾರ್ಥಿಗಳು ಹೊರಹೊಮ್ಮುತ್ತಾರೆ. ಶ್ರದ್ಧೆಯಿಂದ ಉಪನ್ಯಾಸಗಳಿಗೆ ಹಾಜರಾಗುವವರು ಮತ್ತು ಅಧ್ಯಯನದಲ್ಲಿ ಶ್ರೇಷ್ಠರು, ಮತ್ತು ಶೈಕ್ಷಣಿಕ ಅನ್ವೇಷಣೆಗಳ ಕಡೆಗೆ ಕಡಿಮೆ ಒಲವು ತೋರುವವರು. ಆದಾಗ್ಯೂ, ಪರೀಕ್ಷೆಗಳ ಸಮಯದಲ್ಲಿ ಸೃಜನಶೀಲತೆ ಮತ್ತು ಪ್ರತಿಭೆ ಹೊಳೆಯುವ ಎರಡನೆಯ ಗುಂಪಿನವರೇ ಹೆಚ್ಚಾಗಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಾರೆ. ಸಮರ್ಪಿತ ವಿದ್ಯಾರ್ಥಿಗಳ ಚೆನ್ನಾಗಿ ಸಿದ್ಧಪಡಿಸಿದ ಉತ್ತರಗಳನ್ನು ನಿರ್ಣಯಿಸುವಲ್ಲಿ ಶಿಕ್ಷಕರು ಸಂತೋಷವನ್ನು ಕಂಡುಕೊಳ್ಳುತ್ತಾರೆ. ಆದರೆ ಅವರು ಸಾಂದರ್ಭಿಕವಾಗಿ ಆಶ್ಚರ್ಯ ಮತ್ತು ಮನೋರಂಜನೆಯನ್ನು ಉಂಟುಮಾಡುವ ಪ್ರತಿಕ್ರಿಯೆಗಳನ್ನು ಎದುರಿಸುತ್ತಾರೆ. ಇತ್ತೀಚಿನ ಘಟನೆಯೊಂದರಲ್ಲಿ, ಉತ್ತರ ಪತ್ರಿಕೆಯನ್ನು ಶ್ರೇಣೀಕರಿಸುವಾಗ ಗಣಿತ ಶಿಕ್ಷಕರೊಬ್ಬರು ಅಂತಹ ಕ್ಷಣವನ್ನು ಅನುಭವಿಸಿದರು. ವಿದ್ಯಾರ್ಥಿಯ ಪ್ರತಿಕ್ರಿಯೆ ಅನಿರೀಕ್ಷಿತ ಮಾತ್ರವಲ್ಲದೆ ನಿರಾಕರಿಸಲಾಗದಷ್ಟು ಹಾಸ್ಯಮಯವೂ ಆಗಿತ್ತು. ಅಂದಿನಿಂದ ವೈರಲ್ ಆಗಿರುವ…
ಬೆಂಗಳೂರು: ಹನಿಟ್ರ್ಯಾಪ್ ಯತ್ನ ಆರೋಪದಡಿ ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿಯಾದಂತ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು, ದಾಖಲೆ ಸಹಿತ ದೂರು ನೀಡಿದ್ದಾರೆ. ಈ ದೂರಿನ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಡಾ.ಜಿ ಪರಮೇಶ್ವರ್, ಉನ್ನತ ಮಟ್ಟದ ತನಿಖೆ ಮಾಡುಸ್ತೇತವೆ ಸಿಎಂ, ನಾನು ಹೇಳಿದ್ದೆವು. ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ ಬಳಿಕ ರಾಜಣ್ಣ ಬ್ಯುಸಿಯಿದ್ದರು. ಈಗ ಬಂದು ಹನಿಟ್ರ್ಯಾಪ್ ಯತ್ನ ಕೇಸ್ ಸಂಬಂಧ ಮನವಿ ಸಲ್ಲಿಸಿದ್ದಾರೆ ಎಂದರು. ಸಚಿವ ರಾಜಣ್ಣ ಅವರಿಂದ ಮನವಿಯನ್ನು ಪಡೆಯಲಾಗಿದೆ. ಸಿಎಂ ಜೊತೆಗೆ ಚರ್ಚಿಸಿ ಏನು ಕ್ರಮ ಕೈಗೊಳ್ಳಬೇಕೆಂದು ನಿರ್ಧರಿಸುತ್ತೇವೆ. ನನಗೆ ದೂರು ಕೊಡಲು ಆಗಲ್ಲ. ಕೇವಲ ಮನವಿ ಮಾತ್ರ ಸಲ್ಲಿಸುವುದಾಗಿ ಮನವಿಯನ್ನು ಸಲ್ಲಿಸಿದ್ದಾರೆ ಎಂದರು. ಅಂದಹಾಗೇ ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಯತ್ನದ ಬಗ್ಗೆ ವಿಚಾರ ಪ್ರಸ್ತಾಪವಾಗಿತ್ತು. ಈ ವೇಳೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ತಮಗೂ ಹನಿಟ್ರ್ಯಾಪ್ ಯತ್ನದ ಆರೋಪವನ್ನು ಮಾಡಿದ್ದರು. ತಮ್ಮ ಪುತ್ರನಿಗೂ ಮಾಡಲು ಯತ್ನ ನಡೆಸಿದ್ದನ್ನು ಬಹಿರಂಗ ಪಡಿಸಿದ್ದರು. ಈ ಬೆನ್ನಲ್ಲೇ…
ಬೆಂಗಳೂರು: ಕರ್ನಾಟಕ ರಾಜ್ಯವನ್ನು ಕ್ಷಯ ರೋಗ ಮುಕ್ತ ರಾಜ್ಯವನ್ನಾಗಿ ರೂಪಿಸುವತ್ತ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿರುವ ಆರೋಗ್ಯ ಇಲಾಖೆ, ಇದೀಗ BCG ಲಸಿಕೆ ಹಾಕುವ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. https://twitter.com/KarnatakaVarthe/status/1904502494295945570 ವಿಶ್ವ ಕ್ಷಯರೋಗ ದಿನವಾದ ಇಂದು ಬಸಿಜಿ ಲಸಿಕಾ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ರಾಜ್ಯದಲ್ಲಿ 16 ಜಿಲ್ಲೆಗಳಲ್ಲಿ ಬಸಿಜಿ ಲಸಿಕೆ ಹಾಕುವ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿದ್ದು, ಕ್ಷಯ ರೋಗ ಬರದಂತೆ ತಡೆಯುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಲಿದೆ ಎಂದರು. ಈಗಾಗಲೇ ರಾಜ್ಯದಲ್ಲಿ 1060 ಗ್ರಾಮ ಪಂಚಾಯತಿಗಳನ್ನ ಕ್ಷಯ ರೋಗ ಮುಕ್ತ ಪಂಚಾಯತಿಗಳನ್ನಾಗಿ ರೂಪಿಸಲಾಗಿದೆ. ಅಲ್ಲದೇ ಕ್ಷಯ ನಿರ್ಮೂಲನಾ ಕಾರ್ಯಕ್ರಮದ ಅಡಿಯಲ್ಲಿ ಕ್ಷಯ ರೋಗಿಗಳಿಗೆ 98721 ಪೌಷ್ಠಿಕ ಆಹಾರದ ಕಿಟ್ ಗಳನ್ನ ವಿತರಿಸಲಾಗಿದೆ. ಸಾರ್ವಜನಿಕರು ಕ್ಷಯ ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಬಿಸಿಜಿ ಲಸಿಕಾ ಕಾರ್ಯಕ್ರಮದ ಲಾಭ ಪಡೆಯಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬಿಸಿಜಿ ಲಸಿಕೆ ಸುರಕ್ಷಿತ ಲಸಿಕೆಯಾಗಿದ್ದು,…
ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತಾ ನೀಡುವ ವಿನೂತನ ವ್ಯವಸ್ಥೆಯನ್ನು ಬೆಂಗಳೂರಿನಲ್ಲಿ ಜಾರಿಗೆ ತರಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಏಪ್ರಿಲ್ ನಿಂದ ಚಾಲನೆ ದೊರೆಯಲಿದೆ ಅಂತ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. https://twitter.com/KarnatakaVarthe/status/1904472866693009656 ಮನೆ ಬಾಗಿಲಿಗೆ ಉಚಿತವಾಗಿ ಖಾತೆ ವಿತರಣೆ, ಬೀದಿಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ, ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು ಎಂದು ತಿಳಿಸಿದರು. ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ. ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು. ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ ವಾರ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರ ವಾಗಿದೆ. ಜೊತೆಗೆ ಕಂದಾಯ ಬಡಾವಣೆಗಳಲ್ಲಿ ಇರುವ ಖಾಸಗಿ ರಸ್ತೆಗಳನ್ನೂ ಸಹ ಸರ್ಕಾರಿ ರಸ್ತೆಗಳು ಎಂದು…
ಶಿವಮೊಗ್ಗ: ಕೆಲ ದಿನಗಳ ಹಿಂದಷ್ಟೇ ಲೋಕಾಯುಕ್ತ ನ್ಯಾಯಮೂರ್ತಿಗಳಿಂದ ನಗರದಲ್ಲಿ ದೂರು ಸ್ವೀಕಾರ ಕಾರ್ಯಕ್ರಮ ನಡೆಸಲಾಗಿತ್ತು. ಈ ಬೆನ್ನಲ್ಲೇ ಇಂದು ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತ ವೇಳೆಯಲ್ಲೇ ಲೋಕಾಯುಕ್ತ ಪೊಲೀಸರಿಗೆ, ಡಿವೈಎಸ್ಪಿ ಒಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಶಿವಮೊಗ್ಗ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಕೃಷ್ಣಮೂರ್ತಿ ಎಂಬುವರೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಸಿಕ್ಕಿಬಿದ್ದಿರುವಂತ ಅಧಿಕಾರಿಯಾಗಿದ್ದಾರೆ. ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದಾರೆ. ಡಿಎಆರ್ ಡಿವೈಎಸ್ಪಿ ಕೃಷ್ಣಮೂರ್ತಿ ವಿರುದ್ಧ ಲೋಕಾಯುಕ್ತಕ್ಕೆ ಲಂಚದ ಹಣ ಕೇಳು ಸಂಬಂಧ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಇಂದು ಲಂಚದ ಹಣವನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ ನೇತೃತ್ವದ ಅಧಿಕಾರಿಗಳು, ಸಿಬ್ಬಂದಿಗಳ ತಂಡ ದಾಳಿ ನಡೆಸಿ ಹಿಡಿದಿದೆ. ಇದೀಗ ಲೋಕಾಯುಕ್ತ ಪೊಲೀಸರು ಡಿವೈಎಸ್ಪಿ ಕೃಷ್ಣಮೂರ್ತಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/actress-ranya-rao-admitted-to-buying-gold-using-hawala-money-dri-tells-court/ https://kannadanewsnow.com/kannada/big-news-important-step-taken-by-the-state-government-to-prevent-illegality-from-now-on-ai-technology-will-be-used-in-kea-recruitment-exams/
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟಿ ರಣ್ಯ ರಾವ್ ಅವರು ಚಿನ್ನ ಖರೀದಿಸಲು ಹವಾಲಾ ಮಾರ್ಗಗಳ ಮೂಲಕ ಹಣವನ್ನು ವರ್ಗಾಯಿಸಿದ್ದಾಗಿ ಒಪ್ಪಿಕೊಂಡಿದ್ದಾರೆ ಅಂತ ನ್ಯಾಯಾಲಯಕ್ಕೆ ಡಿಆರ್ ಐ ಮಾಹಿತಿ ನೀಡಿದೆ. ಇಂದು ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಯಿತು. ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ಐ) ವಕೀಲ ಮಧು ರಾವ್ ಅವರು ವಾದವನ್ನು ಮಂಡಿಸಿದರು. ಅವರು ಅನಧಿಕೃತ ವಿಧಾನಗಳ ಮೂಲಕ ಹಣಕಾಸು ವಹಿವಾಟು ನಡೆಸುತ್ತಿರುವುದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪ್ರತಿಪಾದಿಸಿದರು. ಈ ವಿಷಯದ ಬಗ್ಗೆ ನ್ಯಾಯಾಂಗ ತನಿಖೆಯನ್ನು ಪ್ರಾರಂಭಿಸಲು ಅಧಿಕಾರಿಗಳು ಸೆಕ್ಷನ್ 108ರ ಅಡಿಯಲ್ಲಿ ನೋಟಿಸ್ ನೀಡಿದ್ದಾರೆ. ವಿಚಾರಣೆಗಳು ನ್ಯಾಯಾಂಗ ತನಿಖೆಯ ಭಾಗವಾಗಿದೆ ಮತ್ತು ಪೊಲೀಸ್ ವಿಚಾರಣೆಯಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ತನಿಖೆಯು ಹಣಕಾಸಿನ ಅಕ್ರಮಗಳ ವ್ಯಾಪ್ತಿಯನ್ನು ಮತ್ತು ಕಾನೂನಿನ ಯಾವುದೇ ಸಂಭಾವ್ಯ ಉಲ್ಲಂಘನೆಗಳನ್ನು ನಿರ್ಧರಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ. ಈ ವಾದವನ್ನು ಆಲಿಸಿದಂತ ನ್ಯಾಯಾಲಯವು ನಟಿ…