Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ 2000 ಪಡೆಯುತ್ತಿದ್ದಂತ 1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ ಹಿಡಿಯಲಾಗಿದೆ. ಈ ಮೂಲಕ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಲಾಗಿದೆ. ಗೃಹ ಲಕ್ಷ್ಮೀ ಯೋಜನೆಯ ನಿಯಮಾನುಸಾರ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯಡಿ ಪ್ರಯೋಜನ ಸಿಗುವುದಿಲ್ಲ. ಆದರೂ ಯೋಜನೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೂ 1.78 ಲಕ್ಷ ಮಹಿಳೆಯರು ನೋಂದಾಯಿಸಿಕೊಂಡು, 2000 ಪಡೆಯುತ್ತಿದ್ದಂತ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ತನಿಖೆ ಕೈಗೊಂಡು, ಪರಿಶೀಲನೆ ನಡೆಸಿದ ಕಾರಣ, ಆದಾಯ ತೆರಿಗೆ ಪಾವತಿ ಮಾಡುತ್ತಿದ್ದಂತ ಮಹಿಳೆಯರಿಗೆ ಹಣ ಪಾವತಿ ನಿಲ್ಲಿಸಲಾಗಿದೆ. ಅಲ್ಲದೇ ದಾಖಲೆ ಪರಿಶೀಲನೆಗೆ ಚಾಲನೆ ನೀಡಲಾಗಿದೆ. ಇ-ಗವರ್ನೆನ್ಸ್ ಇಲಾಖೆಗೆ ತನಿಖೆ ನಡೆಸಲು ಮಹಿಳಾ ಇಲಾಖೆ ಸೂಚಿಸಿದೆ. ಈ ಕಾರಣದಿಂದಾಗಿ ರಾಜ್ಯದಲ್ಲಿ ತೆರಿಗೆ ಪಾವತಿದಾರರಾದ ಕಾರಣ 1.78 ಲಕ್ಷ ಮಹಿಳೆಯರ ಗೃಹಲಕ್ಷ್ಮೀ ಹಣಕ್ಕೆ…

Read More

ತುಮಕೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಶೀಘ್ರವೇ ನಂದಿನಿ ಹಾಲಿನ ಪ್ರತಿ ಲೀಟರ್ ದರದಲ್ಲಿ ರೂ.5 ಹೆಚ್ಚಳ ಮಾಡಲಾಗುತ್ತಿದೆ ಎಂಬುದಾಗಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಶೀಘ್ರದಲ್ಲೇ ಪ್ರತಿ ಲೀಟರ್ ಹಾಲಿನ ಮಾರಾಟ ದರವನ್ನು 5 ರೂ ಹೆಚ್ಚಳ ಮಾಡಲಾಗುತ್ತಿದೆ. ಏರಿಕೆಯ ಸಂಪೂರ್ಣ ಲಾಭವನ್ನು ರೈತರಿಗೆ ದೊರೆಕಿಸಿಕೊಡುವುದಾಗಿ ತಿಳಿಸಿದರು. ಹಾಲಿನ ಮಾರಾಟ ದರ ಹೆಚ್ಚಳದಿಂದ ರೈತರಿಗೆ ಅನುಕೂಲವಾಗಲಿದೆ. ಅಲ್ಲದೇ ಹಾಲಿನ ದರ ಏರಿಕೆ ಅನಿವಾರ್ಯವಾಗಿದೆ. ಹಾಲಿನ ದರ ಏರಿಕೆಯಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಲಾಭವಾಗಲಿದೆಯೇ ಹೊರತು, ರಾಜ್ಯ ಸರ್ಕಾರಕಕ್ಕೆ ಅಲ್ಲ ಎಂದರು. ಇಡೀ ದೇಶದಲ್ಲಿ ರೈತರಿಂದ ಹೆಚ್ಚು ಬೆಲೆಗೆ ಹಾಲು ಖರೀದಿಸಿ, ಕಡಿಮೆ ಬೆಲೆಗೆ ಗ್ರಾಹಕರಿಗೆ ನೀಡುತ್ತಿರುವುದು ಕರ್ನಾಟಕದಲ್ಲಿ ಮಾತ್ರವೇ ಆಗಿದೆ. ಈ ಹಿನ್ನಲೆಯಲ್ಲಿ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಲಾಗುತ್ತಿದೆ. ಈ ಸಂಬಂಧ ಹಾಲು ಒಕ್ಕೂಟಗಳ ಸಭೆ ನಡೆಸಿ ಚರ್ಚಿಸಲಾಗುವುದು ಎಂದರು. https://kannadanewsnow.com/kannada/miscreants-pelt-stones-at-mosque-in-mangaluru-tension-prevails-at-the-site/

Read More

ದಕ್ಷಣಿ ಕನ್ನಡ: ಜಿಲ್ಲೆಯ ಮಂಗಳೂರಿನ ಕಾಟಿಪಳ್ಳದಲ್ಲಿರುವಂತ ಮಸೀದಿಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣದಿಂದ ಕೂಡಿರುವುದಾಗಿ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯಲ್ಲಿರುವಂತ ಕಾಟಿಪಳ್ಳದ 3ನೇ ಬ್ಲಾಕ್ ನಲ್ಲಿರುವಂತ ಬದ್ರಿಯಾ ಮಸೀದಿಯ ಮೇಲೆ ಕಿಡಿಗೇಡಿಗಳು ನಿನ್ನೆ ರಾತ್ರಿ 10.30ರ ಸುಮಾರಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಕಿಡಿಗೇಡಿಗಳ ಕಲ್ಲೆಸೆತದಿಂದ ಬದ್ರಿಯಾ ಮಸೀದಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದಾವೆ. ಈ ಕೃತ್ಯವನ್ನು ಎರಡು ಬೈಕ್ ನಲ್ಲಿ ಬಂದಂತ ನಾಲ್ವರು ಕಿಡಿಗೇಡಿಗಳು ಎಸಗಿದ್ದಾರೆ. ಈ ಎಲ್ಲಾ ದೃಶ್ಯಾವಳಿ ಮಸೀದಿ ಬಳಿಯಲ್ಲಿದ್ದಂತ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಸೀದಿಯ ಮೇಲೆ ಕಲ್ಲು ತೂರಾಟ ನಡೆಸಿದಂತ ಕಿಡಿಗೇಡಿಗಳನ್ನು ಬಂಧಿಸುವಂತೆ ಮುಸ್ಲೀಂ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದಂತ ಪೊಲೀಸರು, ಪರಿಶೀಲಿಸಿ ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮಸೀದಿ ಬಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Read More

ನವದೆಹಲಿ: ಇಂದಿನಿಂದ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (National Payments Corporation of India – NPCI) ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (Unified Payments Interface -UPI) ವಹಿವಾಟು ಮಿತಿಗಳಲ್ಲಿ ಭಾರಿ ಬದಲಾವಣೆಯಾಗಲಿದೆ. ಯುವಿಐ ಬಳಕೆದಾರರು 5 ಲಕ್ಷ ರೂ.ವರೆಗೆ ಹಣ ಪಾವತಿಗೆ ಅವಕಾಶ ನೀಡಲಾಗುತ್ತಿದೆ. ಹೌದು. ಸೆಪ್ಟೆಂಬರ್ 16, 2024ರ ಇಂದಿನಿಂದ ಜಾರಿಗೆ ಬರುವಂತೆ, ದೇಶಾದ್ಯಂತದ ತೆರಿಗೆದಾರರು 5 ಲಕ್ಷ ರೂ.ವರೆಗಿನ ವಹಿವಾಟುಗಳಿಗೆ UPI ಅನ್ನು ಬಳಸಲು ಅಧಿಕಾರ ನೀಡಲಾಗುವುದು. ಇದು ಹಿಂದಿನ ಮಿತಿ 1 ಲಕ್ಷ ರೂ.ಗಳಿಂದ ಗಣನೀಯ ಹೆಚ್ಚಳವಾಗಿದೆ. ಈ ಪ್ರಮುಖ ಹೊಂದಾಣಿಕೆಯನ್ನು ಆಗಸ್ಟ್ 24, 2024 ರ ಸುತ್ತೋಲೆಯಲ್ಲಿ ಬಹಿರಂಗಪಡಿಸಲಾಗಿದೆ, ಇದು ತೆರಿಗೆ ಪಾವತಿಗಳನ್ನು ಸುವ್ಯವಸ್ಥಿತಗೊಳಿಸುವಲ್ಲಿ ಮತ್ತು ಹೆಚ್ಚು ಅಂತರ್ಗತ ಡಿಜಿಟಲ್ ಆರ್ಥಿಕತೆಯನ್ನು ಬೆಳೆಸುವಲ್ಲಿ ಪರಿವರ್ತಕ ಹೆಜ್ಜೆಯನ್ನು ಸೂಚಿಸುತ್ತದೆ. ಪ್ರತಿ ವಹಿವಾಟು ಮಿತಿಯನ್ನು ಗಮನಾರ್ಹವಾಗಿ ವರ್ಧಿಸುವ ಮೂಲಕ, ಎನ್ಪಿಸಿಐ ತೆರಿಗೆ ಪಾವತಿ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಹೆಚ್ಚಿನ ಮೌಲ್ಯದ ವಹಿವಾಟುಗಳಿಗೆ ಯುಪಿಐ ಅನ್ನು ವ್ಯಾಪಕವಾಗಿ ಅಳವಡಿಸಿಕೊಳ್ಳಲು…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಕೇಟ್ ವಿನ್ಸ್ಲೆಟ್ ತನ್ನ “ಲೈಂಗಿಕ ಡ್ರೈವ್” ಹೆಚ್ಚಿಸಲು ಹಾರ್ಮೋನ್ ಚಿಕಿತ್ಸೆಗೆ ಒಳಗಾಗುವ ಬಗ್ಗೆ ತೆರೆದಿಟ್ಟಿದ್ದಾರೆ. ನಟಿ ತಮ್ಮ 40 ಮತ್ತು 50ರ ವಯಸ್ಸಿನ ಅನೇಕ ಮಹಿಳೆಯರು ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಯ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಆದರೆ ಚರ್ಚಿಸುವುದಿಲ್ಲ. ಹೌ ಟು ಫೇಲ್ ಪಾಡ್ಕಾಸ್ಟ್ನಲ್ಲಿ ನಡೆದ ನೇರ ಸಂಭಾಷಣೆಯಲ್ಲಿ, ಕೇಟ್ ತನ್ನ ಕಾಮಾಸಕ್ತಿಯಲ್ಲಿನ ಕುಸಿತವನ್ನು ಪರಿಹರಿಸಲು 48 ನೇ ವಯಸ್ಸಿನಲ್ಲಿ ಟೆಸ್ಟೋಸ್ಟೆರಾನ್ ಬದಲಿ ಚಿಕಿತ್ಸೆಗೆ ಒಳಗಾಗಿದ್ದೇನೆ ಎಂದು ಬಹಿರಂಗಪಡಿಸಿದರು. ಕೆಲವೊಮ್ಮೆ ಮಹಿಳೆಯರು ಕಾಮಾಸಕ್ತಿಯಲ್ಲಿ ನಿಜವಾದ ಕುಸಿತವನ್ನು ಹೊಂದಿರುತ್ತಾರೆ. ಏಕೆಂದರೆ ಅವರ ಥೈರಾಯ್ಡ್ನಲ್ಲಿ ವಿಷಯಗಳು ನಡೆಯಬಹುದು ಎಂದು ವಿನ್ಸ್ಲೆಟ್ ಶುಕ್ರವಾರದ ಸಂಚಿಕೆಯಲ್ಲಿ ಹೇಳಿದರು. ನಿಮ್ಮ ಟೆಸ್ಟೋಸ್ಟೆರಾನ್ ಮಟ್ಟದೊಂದಿಗೆ ವಿಷಯಗಳು ಸಹ ನಡೆಯಬಹುದು ಎಂದಿದ್ದಾರೆ. ಬಹಳಷ್ಟು ಜನರಿಗೆ ಇದು ತಿಳಿದಿಲ್ಲ. ಆದರೆ ಮಹಿಳೆಯರ ದೇಹದಲ್ಲಿ ಟೆಸ್ಟೋಸ್ಟೆರಾನ್ ಇದೆ. ಅದು ಮುಗಿದಾಗ, ಮೊಟ್ಟೆಗಳಂತೆ, ಅದು ಹೋಗುತ್ತದೆ. ಅದು ಹೋದ ನಂತರ ನೀವು ಅದನ್ನು ಬದಲಾಯಿಸಬೇಕು. ಅದು ಮಾಡಬಹುದಾದ ವಿಷಯವಾಗಿದೆ ಮತ್ತು ನೀವು ಮತ್ತೆ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಮರಸ ಗ್ರಾಮದಲ್ಲಿ ಅಂಗಡಿಯೊಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಆಧರಿಸಿ, ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಬಕಾರಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಮರಸ ಗ್ರಾಮದ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಂತ ಮಾಹಿತಿ ಆಧರಿಸಿ ಅಬಕಾರಿ ಇನ್ಸ್ ಪೆಕ್ಟರ್ ಸಂದೀಪ್ ಕುಮಾರ್ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ. ಈ ದಾಳಿಯ ವೇಳೆಯಲ್ಲಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡಲು ಇರಿಸಲಾಗಿದ್ದಂತ 22 ಟೆಟ್ರಾ ಪ್ಯಾಕೇಟ್ ಅಂದರೆ 1.8 ಲೀಟರ್ ಮದ್ಯವನ್ನು ಸೀಜ್ ಮಾಡಿದ್ದಾರೆ. ಈ ಸಂಬಂಧ ಅಂಗಡಿಯ ಮಾಲೀಕರನ್ನು ವಶಕ್ಕೆ ಪಡೆದು, ಆ ಬಳಿಕ ವಿಚಾರಣೆ ನಡೆಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಮರಸ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರಿಗೆ ಬಿಗ್ ಶಾಕ್ ಅನ್ನು ಸಾಗರ ತಾಲ್ಲೂಕಿನ ಅಬಕಾರಿ ಇನ್ಸ್ ಪೆಕ್ಟರ್ ಸಂದೀಪ್ ಕುಮಾರ್ ನೀಡಿದ್ದಾರೆ. ಇಂದು ನಡೆದಂತ ಈ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ನವೆಂಬರ್.16, 2024ರಂದು ಮತದಾನ ನಡೆಯಲಿದೆ. ಅಂದೇ ಮತಏಣಿಕೆ ನಡೆದು, ಫಲಿತಾಂಶ ಪ್ರಕಟಿಸುವುದಾಗಿ ಚುನಾವಣಾಧಿಕಾರಿ ತಿಳಿಸಿದ್ದಾರೆ. ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಚುನಾವಣಾಧಿಕಾರಿ ಎ.ಹನುಮರಸಯ್ಯ ಅವರು ಚುನಾವಣಾ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ಎಲ್ಲಾ ಹಂತದ ಚುನಾವಣೆ ಪ್ರಕ್ರಿಯೆಗಳು ಚಾಲ್ತಿಯಲ್ಲಿದೆ. ಸಂಘದ ತಾಲ್ಲೂಕು ಶಾಖೆ, ಯೋಜನಾ ಶಾಖೆ, ಜಿಲ್ಲಾ ಶಾಖೆಗಳ ನಿರ್ದೇಶಕರು ಮತ್ತು ಪದಾಧಿಕಾರಿಗಳ ಚುನಾವಣೆ ಹಾಗೂ ಬೆಂಗಳೂರು ನಗರ ಜಿಲ್ಲೆಯ ರಾಜ್ಯ ಪರಿಷತ್ ಸದಸ್ಯರ ಮತ್ತು ರಾಜ್ಯ ಸಂಘದ ಪದಾಧಿಕಾರಿಗಳ ಚುನಾವಣೆಗಳನ್ನು ಈ ಕೆಳಕಂಡಂತೆ ಚುನಾವಣಾ ವೇಳಾಪಟ್ಟಿಯಂತೆ ನಡೆಸುವುದಾಗಿ ತಿಳಿಸಿದ್ದಾರೆ. ಹೀಗಿದೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣಾ ವೇಳಾಪಟ್ಟಿ ತಾಲ್ಲೂಕು ಶಾಖೆ ಹಾಗೂ ಯೋಜನಾ ಶಾಖೆಗಳ ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನಗಳಿಗೆ ದಿನಾಂಕ 09-10-2024ರಿಂದ ದಿನಾಂಕ 28-10-2024ರವರೆಗೆ ಚುನಾವಣೆ ನಡೆಯಲಿದೆ.…

Read More

ನವದೆಹಲಿ: ತರಬೇತಿ ವೇಳೆ ಕೈಗೆ ಗಾಯವಾಗಿದ್ದರೂ ಡೈಮಂಡ್ ಲೀಗ್ ಫೈನಲ್ನಲ್ಲಿ ಸ್ಪರ್ಧಿಸಿದ್ದಾಗಿ ನೀರಜ್ ಚೋಪ್ರಾ ರವಿವಾರ (ಸೆ.15) ಬಹಿರಂಗಪಡಿಸಿದ್ದಾರೆ. ಶನಿವಾರ ಬ್ರಸೆಲ್ಸ್ನಲ್ಲಿ ನಡೆದ ಡೈಮಂಡ್ ಲೀಗ್ ಪ್ರಶಸ್ತಿಯನ್ನು ಗೆಲ್ಲುವ ಸಮೀಪಕ್ಕೆ ಬಂದ ಚೋಪ್ರಾ 87.86 ಮೀಟರ್ ಎಸೆಯುವ ಮೂಲಕ ಸತತ ಎರಡನೇ ವರ್ಷ ರನ್ನರ್ ಅಪ್ ಸ್ಥಾನ ಪಡೆದರು. “ಸೋಮವಾರ, ಅಭ್ಯಾಸದ ಸಮಯದಲ್ಲಿ ನಾನು ಗಾಯಗೊಂಡಿದ್ದೇನೆ ಮತ್ತು ಎಕ್ಸ್-ರೇಗಳು ನನ್ನ ಎಡಗೈಯಲ್ಲಿ ನಾಲ್ಕನೇ ಮೆಟಾಕಾರ್ಪಲ್ ಮುರಿದಿದೆ ಎಂದು ತೋರಿಸಿದೆ. ಇದು ನನಗೆ ಮತ್ತೊಂದು ನೋವಿನ ಸವಾಲಾಗಿತ್ತು. ಆದರೆ ನನ್ನ ತಂಡದ ಸಹಾಯದಿಂದ ನಾನು ಬ್ರಸೆಲ್ಸ್ನಲ್ಲಿ ಭಾಗವಹಿಸಲು ಸಾಧ್ಯವಾಯಿತು, “ಎಂದು 26 ವರ್ಷದ ಆಟಗಾರ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ಹೇಳಿದರು. https://twitter.com/Neeraj_chopra1/status/1835263954349941036 ಇದು ವರ್ಷದ ಕೊನೆಯ ಸ್ಪರ್ಧೆಯಾಗಿತ್ತು.  ನನ್ನ ಋತುವನ್ನು ಟ್ರ್ಯಾಕ್ನಲ್ಲಿ ಕೊನೆಗೊಳಿಸಲು ನಾನು ಬಯಸಿದ್ದೆ. ನನ್ನ ಸ್ವಂತ ನಿರೀಕ್ಷೆಗಳನ್ನು ಪೂರೈಸಲು ನನಗೆ ಸಾಧ್ಯವಾಗದಿದ್ದರೂ, ಇದು ನಾನು ಬಹಳಷ್ಟು ಕಲಿತ ಋತು ಎಂದು ನಾನು ಭಾವಿಸುತ್ತೇನೆ. ನಾನು ಈಗ ಮರಳಲು ನಿರ್ಧರಿಸಿದ್ದೇನೆ,…

Read More

ಶಿವಮೊಗ್ಗ: ಮಾನವೀಯ ಮೌಲ್ಯಗಳ ನಿಧಿಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಮಾನವರೆಲ್ಲರೂ ಒಂದೇ ಎಂಬುದನ್ನು ಸಾರುತ್ತದೆ. ಸರ್ವರೂ ಸಮಾನರು ಎಂಬ ಅರಿವೇ ಪ್ರಜಾಪ್ರಭುತ್ವದ ತಳಹದಿ. ಪ್ರಜಾಪ್ರಭುತ್ವವನ್ನು ವಿಶ್ವಸಂಸ್ಥೆ ಅತ್ಯಂತ ಶ್ರೇಷ್ಠ ಮೌಲ್ಯವೆಂದು ಪರಿಗಣಿಸಿದೆ. ಪ್ರಜಾಪ್ರಭುತ್ವ ಆದರ್ಶವಾದ ಸಾರ್ವತ್ರಿಕ ಮೌಲ್ಯವೆಂದು ಕುಲಪತಿಗಳಾದ ಪ್ರೊ. ಶರತ್ ಅನಂತಮೂರ್ತಿ ಅವರು ಅಭಿಪ್ರಾಯಪಟ್ಟರು. ಅವರು ಕುವೆಂಪು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಏರ್ಪಡಿಸಿದ್ದ ‘ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಬೇಡ್ಕರ್ ಬಹುದೊಡ್ಡ ತತ್ವಜ್ಞಾನಿ. ಅವರು ಇಲ್ಲದಿದ್ದರೆ ಈ ದೇಶ ಉಳಿಯುತ್ತಿರಲಿಲ್ಲ. ಅವರಿಂದ ರಚನೆಯಾದ ಸಂವಿಧಾನವೇ ಒಂದು ಕ್ರಾಂತಿಕಾರಕ ದಾಖಲೆ. ಆಧುನಿಕತೆಯನ್ನು ತಂದುಕೊಟ್ಟ ಮಹಾವ್ಯಕ್ತಿ. ಅಂಬೇಡ್ಕರ್ ಅವರ ‘ಜಾತಿವಿನಾಶ’ ಕೃತಿಯನ್ನು ಎಲ್ಲರೂ ಕಡ್ಡಾಯವಾಗಿ ಓದಬೇಕೆಂದು ತಿಳಿಸಿದರು. ತದನಂತರ ಭಾರತ ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದವರಿಗೆಲ್ಲ ನೆನಪಿನ ಕಾಣಿಕೆಯಾಗಿ ‘ಪೆನ್ನು’ಗಳನ್ನು ವಿತರಿಸಿದರು. ಶಿಕ್ಷಣ ನಿಕಾಯದ ಡೀನರು, ಶಿಕ್ಷಣ ವಿಭಾಗದ ಮುಖ್ಯಸ್ಥರು ಅದ ಪ್ರೊ. ಜಗನ್ನಾಥ್ ಕೆ. ಡಾಂಗೆ, ಅವರು ಉಪಸ್ಥಿತರಿದ್ದರು. ಡಾ. ಬಿ.ಅರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ…

Read More

ಬೆಂಗಳೂರು: ನಗರದಲ್ಲಿ ಬೈಕ್-ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ಚಿಕ್ಕಜಾಲ ಮೇಲ್ಸೇತುವೆ ಬಳಿಯ ಏರ್ ಪೋರ್ಟ್ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿನ ಏರ್ ಪೋರ್ಟ್ ರಸ್ತೆಯ ಚಿಕ್ಕಜಾಲ ಮೇಲ್ಸೇತುವೆಯ ಬಳಿಯಲ್ಲಿ ತಡರಾತ್ರಿ 1.30ರ ವೇಳೆಯಲ್ಲಿ ಮೂವರು ಸ್ನೇಹಿತರು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಹಿಂಬದಿಯಿಂದ ಬಂದಂತ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಧಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಂತ ಮೂವರು ಸ್ನೇಹಿತರು ಸಾವನ್ನಪ್ಪಿದ್ದಾರೆ. ಮೃತ ಪಟ್ಟವರನ್ನು ಬಿಎಸ್ಸಿ ಓದುತ್ತಿದ್ದಂತ ವಿದ್ಯಾರ್ಥಿಗಳಾದಂತ ಸುಚಿತ್ (22), ಹರ್ಷವರ್ಧನ್ (21) ಹಾಗೂ ರೋಹಿತ್ (21) ಎಂಬುದಾಗಿ ಗುರುತಿಸಲಾಗಿದೆ. ಇವರೆಲ್ಲರು ಜಿಕೆವಿಕೆಯಲ್ಲಿ ತೋಟಗಾರಿಕೆ ಪದವಿಯ ಅಂತಿಮ ವರ್ಷದ ಬಿಎಸ್ಸಿ ಅಗ್ರಿ ಓದುತ್ತಿದ್ದರು. ತಮ್ಮ ಸ್ನೇಹಿತರೊಬ್ಬರ ಹುಟ್ಟು ಹಬ್ಬದ ಪಾರ್ಟಿ ಮುಗಿಸಿ ವಾಪಾಸ್ ಆಗುತ್ತಿದ್ದಂತ ವೇಳೆಯಲ್ಲಿ ಈ ಅಪಘಾತ ಸಂಭವಿಸಿದೆ. https://kannadanewsnow.com/kannada/indias-first-vande-metro-train-to-run-on-bhuj-ahmedabad-route-heres-the-fare-schedule/ https://kannadanewsnow.com/kannada/teacher-arrested-for-touching-private-parts-of-girl-students-suspended-from-service/

Read More