Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 108 ಅಂಬ್ಯುಲೆನ್ಸ್ ಸಿಬ್ಬಂದಿಗಳು ತಮ್ಮ ಮುಷ್ಕರದಿಂದ ಹಿಂದೆ ಸರಿದಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಹಾಗೂ ಜಿವಿಕೆ ಇಎಂಆರ್ ಸಂಸ್ಥೆಯವರೊಂದಿಗೆ ಚರ್ಚೆ ನಡೆಸಿದ್ದಾರೆ. ಸರ್ಕಾರದಿಂದ ಯಾವುದೇ ವೇತನವನ್ನ ಬಾಕಿ ಉಳಿಸಿಕೊಂಡಿಲ್ಲ ಎಂದರು. ಸರ್ಕಾರದ ಬಳಿ ಹಣಕಾಸಿನ ಕೊರತೆಯಿಲ್ಲ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ನೀಡಬೇಕಾದ ವೇತನವನ್ನ ನಿಯಮನುಸಾರ ಪಾವತಿಸಲಾಗಿದೆ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಯೋಜನೆಯನ್ನ ನಿರ್ವಹಿಸುತ್ತಿರುವ ಸಂಸ್ಥೆ ಜಿವಿಕೆ ಇಎಂಆರ್ ನವರು ವೇತನ ನೀಡಬೇಕು. ಸಂಸ್ಥೆಯವರೊಂದಿಗೆ ಒಡಂಬಡಿಕೆಯ ಪ್ರಕಾರ ಸರ್ಕಾರದಿಂದ ಕೊಡಬೇಕಾದ ಅನುದಾನವನ್ನ ಪಾವತಿಸಲಾಗಿದೆ. ಅನಗತ್ಯವಾಗಿ ವಿಪಕ್ಷಗಳು ಸರ್ಕಾರದ ಮೇಲೆ ಬೊಟ್ಟು ಮಾಡಿ ತೋರಿಸುವುದು ಸರಿಯಲ್ಲ. ಏಜನ್ಸಿಯವರಿಂದ ಸಿಬ್ಬಂದಿಗಳಿಗೆ ವೇತನ ಪಾವತಿಯಲ್ಲಿ ವ್ಯತ್ಯಾಸಗಳಾಗಿದ್ದರೆ ಅದನ್ನು ಸರಿಪಡಿಸುವಂತೆ ಸಂಸ್ಥೆಯವರಿಗೆ ತಿಳಿಸಲಾಗಿದೆ. 108 ಸಿಬ್ಬಂದಿಗಳ ಇನ್ನತರ ಕೆಲವು ಬೇಡಿಕೆಗಳಿವೆ. ಅದನ್ನು ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಚರ್ಚಿಸೋಣ ಎಂದು ಮನವರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದರು. ಅಂಬ್ಯುಲೆನ್ಸ್ ಸಿಬ್ಬಂದಿಗಳ…
ಬೆಂಗಳೂರು: ಗ್ಯಾರಂಟಿಗಳಿಂದ ಪಾಪರ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ವರಿಷ್ಠರಿಗೆ ಕಪ್ಪ ನೀಡಲು ಮುಂದಾಗಿದೆ. ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವುದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಪಾಪರ್ ಆಗಿ ದಿವಾಳಿಯ ಪರಮಾವಧಿಗೆ ತಲುಪಿದೆ. ಕೇರಳ ಸರ್ಕಾರ ದಿವಾಳಿಯಾಗಿ ಸಾಲವೂ ಸಿಗುತ್ತಿಲ್ಲ. ಅದೇ ರೀತಿ ನಮ್ಮ ರಾಜ್ಯವೂ ಆರ್ಥಿಕತೆಯಲ್ಲಿ ಕೊನೆಯ ಸ್ಥಾನಕ್ಕೆ ಬರಲಿದೆ. ಸರ್ಕಾರದ ಆಸ್ತಿಗಳನ್ನು ಮಾರಾಟ ಮಾಡಿ ದುಡ್ಡು ಹೊಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈ ಹಿಂದೆ ಸರ್ಕಾರ ಪಾರ್ಕಿಂಗ್ ಕಾಂಪ್ಲೆಕ್ಸ್, ಹಾಕಿ ಸ್ಟೇಡಿಯಂನ ಕಟ್ಟಡವನ್ನು ಗುತ್ತಿಗೆಗೆ ನೀಡಿ ಮಾರಾಟ ಮಾಡಿತ್ತು. ಈಗ ಆರು ಬಿಡಿಎ ಕಾಂಪ್ಲೆಕ್ಸ್ಗಳನ್ನು ಸುಮಾರು ಐವತ್ತು ವರ್ಷಕ್ಕೆ ಗುತ್ತಿಗೆಗೆ ನೀಡಲಾಗುತ್ತಿದೆ. ಇದು ಮಾರಾಟದ ಮಾದರಿಯಲ್ಲೇ ಇದೆ. ಇಂದಿರಾನಗರ, ಎಚ್ಎಸ್ಆರ್ ಲೇಔಟ್, ಆಸ್ಟಿನ್ ಟೌನ್, ಕೋರಮಂಗಲ, ವಿಜಯನಗರ, ಆರ್.ಟಿ.ನಗರ, ಸದಾಶಿವನಗರ ಕಾಂಪ್ಲೆಕ್ಸ್ಗಳು ಬಿಡಿಎ…
ಜೀವನವು ಪ್ರತಿದಿನ ಹೋರಾಟವಾಗಿದೆ. ಯಾವುದೇ ಪ್ರಗತಿ ಕಾಣುತ್ತಿಲ್ಲ, ಯಾವುದೇ ಪ್ರಯೋಜನವಾಗುತ್ತಿಲ್ಲ, ಅಪಘಾತಗಳು ಸಂಭವಿಸುತ್ತಿವೆ ಮತ್ತು ಕಷ್ಟದ ಪರಿಸ್ಥಿತಿಗೆ ಸಿಲುಕುತ್ತಿದ್ದಾರೆ ಎಂದು ಹಲವರು ಹಲವು ರೀತಿಯಲ್ಲಿ ದುಃಖಿಸುತ್ತಾರೆ. ಅಂತಹವರು ತಮ್ಮ ಜಾತಕದಲ್ಲಿ ಶನಿ ಮತ್ತು ಮಂಗಳ ಗ್ರಹಗಳ ಸಂಯೋಗ ಹೇಗಿದೆ ಎಂಬುದನ್ನು ಒಮ್ಮೆ ಜ್ಯೋತಿಷಿಯನ್ನು ಸಂಪರ್ಕಿಸಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ…
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಎಸ್ ಐಟಿ ವಿಚಾರಣೆಗೆ ಕರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದರು. ಮಾಧ್ಯಮಗೋಷ್ಠಿಯಲ್ಲಿ ಪ್ರಮುಖವಾಗಿ ಈ ವಿಷಯ ಪ್ರಸ್ತಾಪ ಮಾಡಿದ ಅವರು; ರಾಹುಲ್ ಗಾಂಧಿ ಅವರು ಅಂಕಿ ಅಂಶಗಳ ಸಮೇತ ಈ ವಿಷಯ ಹೇಳಿದ್ದಾರೆ. ಎಲ್ಲರಿಗಿಂತ ಮೊದಲೇ ಈ ಮಾಹಿತಿ ಅವರಿಗೆ ಸಿಕ್ಕಿರಬೇಕು. ಪೆನ್ ಡ್ರೈವ್ ನಲ್ಲಿದ್ದ ವಿಡಿಯೋಗಳನ್ನು ಅವರು ನೋಡಿರಬೇಕು. ಹೀಗಾಗಿ ಅವರಿಂದ ತನಿಖಾ ತಂಡ ಮಾಹಿತಿ ಪಡೆಯಬೇಕು. ಕೂಡಲೇ ಅವರಿಗೆ ಸಮನ್ಸ್ ಜಾರಿ ಮಾಡಬೇಕು ಎಂದು ಅವರು ಆಗ್ರಹಪಡಿಸಿದರು. ರಾಹುಲ್ ಗಾಂಧಿ ಅವರು ಅತ್ಯಾಚಾರಕ್ಕೆ ಒಳಗಾದವರಲ್ಲಿ 16 ವರ್ಷದೊಳಗಿನ ಹೆಣ್ಣುಮಕ್ಕಳಿದ್ದಾರೆ ಎಂದು ಹೇಳಿದ್ದಾರೆ. ಅವರು ಯಾವ ಆಧಾರದಲ್ಲಿ ಈ ಹೇಳಿಕೆ ಕೊಟ್ಟರು? ಪೋಕ್ಸೋ ಪ್ರಕರಣದಲ್ಲಿ ಕೇಸ್ ಹಾಕಬೇಕೆಂದು ಅವರು ಒತ್ತಾಯ ಮಾಡಿದ್ದಾರೆ. “ಎಸ್ ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಅವರೇ. ಯಾಕಪ್ಪಾ.. ಇನ್ನೂ ರಾಹುಲ್ ಗಾಂಧಿಗೆ…
ಶಿವಮೊಗ್ಗ: ಇಂದು ಲೋಕಸಭಾ ಚುನಾವಣೆಗೆ 1ನೇ ಹಂತದಲ್ಲಿ ಜಿಲ್ಲೆಯಲ್ಲಿ ಮತದಾನ ನಡೆಯುತ್ತಿದೆ. ಮತಗಟ್ಟೆ ಒಳಗೆ ಚುನಾವಣಾ ಆಯೋಗವು ಮೊಬೈಲ್ ತೆಗೆದುಕೊಂಡು ಹೋಗೋದಕ್ಕೆ ನಿರ್ಬಂಧ ವಿಧಿಸಿತ್ತು. ಮತದಾನದ ವೀಡಿಯೋ, ಪೋಟೋ ತೆಗೆದು, ಸೋಷಿಯಲ್ ಮೀಡಿಯಾದಲ್ಲಿ ಹಂಚಿದ್ರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿಯೂ ಎಚ್ಚರಿಕೆ ನೀಡಿತ್ತು. ಈ ನಿರ್ಬಂಧದ ನಡುವೆಯೂ ಶಿವಮೊಗ್ಗ ಜಿಲ್ಲೆಯಲ್ಲಿ ಕಿಡಿಗೇಡಿಯೊಬ್ಬ ಮತದಾನದ ವೀಡಿಯೋ ಮಾಡಿ, ಸೋಷಿಯಲ್ ಮೀಡಿಯಾದಲ್ಲಿ ಹಂಚಿದ್ದಾನೆ. ಆ ವೀಡಿಯೋ ವೈರಲ್ ಕೂಡ ಆಗಿದೆ. ಹೌದು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ನಡೆಯುತ್ತಿರುವಂತ ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನದ ವೇಳೆಯಲ್ಲಿ ಕಿಡಿಗೇಡಿಗಳು ಮತದಾನ ಮಾಡಿದಂತ ವೀಡಿಯೋ ಮಾಡಿ, ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿದ್ದಾರೆ. ಈಗ ಎರಡು ಮತದಾನ ಮಾಡಿದಂತ ವೀಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ವೈರಲ್ ಆಗಿರುವಂತ ಒಂದು ವೀಡಿಯೋ ಭದ್ರಾವತಿಯ ಮತಗಟ್ಟೆಯೊಂದರದ್ದು ಎನ್ನಲಾಗುತ್ತಿದೆ. ವಿವಿಪ್ಯಾಟ್ ನಲ್ಲಿ ಯಾರಿಗೆ ವೋಟು ಹಾಕಲಾಗಿದೆ ಎಂಬುದನ್ನು ವೀಡಿಯೋ ಮಾಡಿಕೊಳ್ಳಲಾಗಿದೆ. ಅಲ್ಲದೇ ಇವಿಎಂ ಮೆಷಿನ್ ನಲ್ಲಿ ಬಟನ್ ಒತ್ತಿ ಬಳಿಕ ರೆಡ್ ಲೈಟ್…
ಬೆಂಗಳೂರು: ಇಂದು ರಾಜ್ಯದ 14 ಜಿಲ್ಲೆಗಳಲ್ಲಿ ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಚುನಾವಣಾ ಆಯೋಗದ ಮಾಹಿತಿಯಂತೆ 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಜೆ.5 ಗಂಟೆಯವರೆಗೆ ಶೇ.66.05ರಷ್ಟು ಮತದಾನ ನಡೆದಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಸಂಜೆ ಐದು ಗಂಟೆಯವರೆಗೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ 2ನೇ ಹಂತದಲ್ಲಿ ಶೇ.66.05ರಷ್ಟು ಮತದಾನ ನಡೆದಿದೆ ಎಂಬುದಾಗಿ ತಿಳಿಸಿದೆ. ಹೀಗಿದೆ 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶೇಕಡವಾರು ಮತದಾನ ರಾಯಚೂರು ಶೇ.59.48 ಬೀದರ್ ಶೇ.60.17 ಕಲಬುರ್ಗಿ ಶೇ.57.20 ಚಿಕ್ಕೋಡಿ ಶೇ.72.75 ಕೊಪ್ಪಳ 66.05 ಬಳ್ಳಾರಿ ಶೇ.68.94 ವಿಜಯಪುರ ಶೇ.60.95 ಹಾವೇರಿ ಶೇ.71.90 ಬಾಗಲಕೋಟೆ ಶೇ.65.55 ಉತ್ತರ ಕನ್ನಡ ಶೇ.69. ದಾವಣಗೆರೆ ಶೇ.70.90 ಶಿವಮೊಗ್ಗ ಶೇ.72.07 ಧಾರವಾಡ ಶೇ.67.15 ಬೆಳಗಾವಿ ಶೇ.65.67 https://kannadanewsnow.com/kannada/bescom-launches-separate-whatsapp-sms-numbers-for-bengaluru-customers/ https://kannadanewsnow.com/kannada/yogesh-gowda-murder-case-hc-allows-mla-vinay-kulkarni-to-cast-his-vote/
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗಾಳಿ, ಮಳೆ ಬಂದ್ರೆ ಸಾಕು ಮರಗಳು ಧರೆಗುರುಳಿ ವಿದ್ಯುತ್ ಕಂಬಗಳು ಮುರಿದು ಬೀಳೋದು, ವೈಯರ್ ಕಟ್ಟಾಗೋದು ಕಾಮನ್ ಆಗಿಬಿಟ್ಟಿದೆ. ಕೆಲವೊಮ್ಮ ಬೆಸ್ಕಾಂನಿಂದ ತಕ್ಷಣವೇ ಸರಿ ಪಡಿಸೋ ಕೆಲಸವಾದ್ರೇ, ಮತ್ತೆ ಕೆಲವೊಮ್ಮೆ ಲೇಟ್ ಆಗುತ್ತಿತ್ತು. ಆದ್ರೇ ಈಗ ಈ ಸಮಸ್ಯೆ ಸರಿಪಡಿಸೋ ನಿಟ್ಟಿನಲ್ಲಿ ಬೆಂಗಳೂರು ವ್ಯಾಪ್ತಿಗೆ ಸೀಮಿತವಾಗಿ ಗ್ರಾಹಕರಿಗೆ ವಾಟ್ಸ್ ಆಪ್, ಎಸ್ಎಂಎಸ್ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ನೀಡಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್ ಕಂಬಗಳು ಮುರಿದು, ವಿದ್ಯುತ್ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದು ಹೇಳಿದೆ. ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಈ ಕೆಳಕಂಡ ಪಯಾರ್ಯ ವಾಟ್ಸ್ ಆಪ್ ಸಂಖ್ಯೆಗಳನ್ನು ನೀಡಲಾಗಿದೆ ಎಂದು ತಿಳಿಸಿದೆ. ವಾಟ್ಸ್ಪ್ ಸಂಖ್ಯೆಗಳಿಗೆ…
ನವದೆಹಲಿ: ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿಷಯದ ಬಗ್ಗೆ ದೃಢವಾದ ನಿಲುವನ್ನು ತೆಗೆದುಕೊಂಡ ಸುಪ್ರೀಂ ಕೋರ್ಟ್, ಸೆಲೆಬ್ರಿಟಿಗಳು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಶಾಲಿಗಳು ಅವರನ್ನು ಒಳಗೊಂಡಿರುವ ಉತ್ಪನ್ನ ಅಥವಾ ಸೇವೆಯ ಜಾಹೀರಾತು ಮೋಸಕರವೆಂದು ಕಂಡುಬಂದರೆ ಸಮಾನವಾಗಿ ಜವಾಬ್ದಾರರಾಗಿರುತ್ತಾರೆ ಎಂದು ಹೇಳಿದೆ. ಪತಂಜಲಿ ಆಯುರ್ವೇದ ದಾರಿತಪ್ಪಿಸುವ ಜಾಹೀರಾತುಗಳ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಯಾವುದೇ ಜಾಹೀರಾತುಗಳನ್ನು ಪ್ರಸಾರ ಮಾಡುವ ಮೊದಲು ಪ್ರಸಾರಕರು ಸ್ವಯಂ ಘೋಷಣೆ ಫಾರ್ಮ್ ಅನ್ನು ಸಲ್ಲಿಸಬೇಕಾಗುತ್ತದೆ ಎಂದು ಹೇಳಿದೆ. ಮಂಗಳವಾರ ಪ್ರಕರಣದ ವಿಚಾರಣೆಯನ್ನು ಮುಂದುವರಿಸಿದ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಎ ಅಮಾನುಲ್ಲಾ ಅವರ ನ್ಯಾಯಪೀಠವು ದಾರಿತಪ್ಪಿಸುವ ಜಾಹೀರಾತುಗಳ ತಡೆಗಟ್ಟುವಿಕೆ ಮತ್ತು ದಾರಿತಪ್ಪಿಸುವ ಜಾಹೀರಾತುಗಳಿಗಾಗಿ ಅನುಮೋದನೆಗಳ ಮಾರ್ಗಸೂಚಿಗಳು, 2022 ಅನ್ನು ಉಲ್ಲೇಖಿಸಿತು. ಈ ಮಾರ್ಗಸೂಚಿ 13 ರ ಪ್ರಕಾರ ಒಬ್ಬ ವ್ಯಕ್ತಿಯು ಅವನು ಅಥವಾ ಅವಳು ಅನುಮೋದಿಸುತ್ತಿರುವ ಉತ್ಪನ್ನ ಅಥವಾ ಸೇವೆಯೊಂದಿಗೆ ಸಾಕಷ್ಟು ಮಾಹಿತಿ ಅಥವಾ ಅನುಭವವನ್ನು ಹೊಂದಿರಬೇಕು. ಅದು ಮೋಸಗೊಳಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಗಮನಸೆಳೆದಿದೆ. “ಈ ನಿಬಂಧನೆಗಳು ಗ್ರಾಹಕರಿಗೆ ಸೇವೆ…
ಯಾದಗಿರಿ: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು, ಹಲವರು ಗಾಯಗೊಂಡಿರುವಂತ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಬಾದ್ಯಾಪುರ ಗ್ರಾಮದಲ್ಲಿ ಇಂದು ಸುರಪುರ ಕ್ಷೇತ್ರಕ್ಕೆ ಉಪ ಚುನಾವಣೆ ಹಾಗೂ ಯಾದಗಿರಿ ಜಿಲ್ಲೆಗೆ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಈ ವೇಳೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಎರಡು ಪಕ್ಷಗಳ ಕಾರ್ಯಕರ್ತರ ನಡುವಿನ ಗಲಾಟೆ ತಾರಕಕ್ಕೇರಿದ ವೇಳೆಯಲ್ಲಿ ದೊಣ್ಣೆ, ಕೋಲು, ಬಡಿಗೆ, ಕಲ್ಲುಗಳಿಂದ ಮಾರಾಮಾರಿಯಾಗಿದೆ. ಈ ಘಟನೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅನೇಕ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. https://kannadanewsnow.com/kannada/yogesh-gowda-murder-case-hc-allows-mla-vinay-kulkarni-to-cast-his-vote/ https://kannadanewsnow.com/kannada/tushar-girinath-asks-officials-to-ensure-that-bengaluru-is-not-affected-by-rain/
ಶಿವಮೊಗ್ಗ: ನಗರದಲ್ಲಿ ಇಂದು ಲೋಕಸಭಾ ಚುನಾವಣೆಗೆ 2ನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಬೆಳಿಗ್ಗೆಯಿಂದ ಹುಮ್ಮಸ್ಸಿನಿಂದಲೇ ಜಿಲ್ಲೆಯಲ್ಲಿ ಮತದಾರರು ಮತವನ್ನು ಚಲಾಯಿಸುತ್ತಿದ್ದಾರೆ. ಮಧ್ಯಾಹ್ನ 3 ಗಂಟೆಯವರೆಗೆ ದಾಖಲೆಯ ಶೇ.58.04% ಮತದಾನವಾಗಿದೆ. ಈ ಬಗ್ಗೆ ಜಿಲ್ಲಾ ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಅಡೆತಡೆಯಿಲ್ಲದೇ ಲೋಕಸಭಾ ಚುನಾವಣೆಗೆ 2ನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಕೆಲವೆಡೆ ಅಷ್ಟೇ ತಾಂತ್ರಿಕ ಸಮಸ್ಯಯಿಂದ ಇವಿಎಂ ಸ್ಥಗಿತಗೊಂಡಿತ್ತು. ಅದನ್ನು ಬದಲಾಯಿಸಿ, ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದಿದೆ. ಮಧ್ಯಾಹ್ನ 3:00 ಗಂಟೆ ವರೆಗೆ ಚಲಾವಣೆಯಾದ ಮತದಾನದ ಶೇಕಡವಾರು ವಿವರ ಶಿವಮೊಗ್ಗ ಲೋಕಸಭಾ ಕ್ಷೇತ್ರ: 58.04% ಒಟ್ಟು ಮತಗಳು: 1752885 ಚಲಾವಣೆ ಮತಗಳು:1014226 https://kannadanewsnow.com/kannada/patiraya-casts-his-vote-for-bjp-candidate-do-you-know-where/ https://kannadanewsnow.com/kannada/yogesh-gowda-murder-case-hc-allows-mla-vinay-kulkarni-to-cast-his-vote/