Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕ ರಾಜ್ಯವನ್ನು ಕ್ಷಯ ರೋಗ ಮುಕ್ತ ರಾಜ್ಯವನ್ನಾಗಿ ರೂಪಿಸುವತ್ತ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿರುವ ಆರೋಗ್ಯ ಇಲಾಖೆ, ಇದೀಗ BCG ಲಸಿಕೆ ಹಾಕುವ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ವಿಶ್ವ ಕ್ಷಯರೋಗ ದಿನವಾದ ಇಂದು ಬಸಿಜಿ ಲಸಿಕಾ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ರಾಜ್ಯದಲ್ಲಿ 16 ಜಿಲ್ಲೆಗಳಲ್ಲಿ ಬಸಿಜಿ ಲಸಿಕೆ ಹಾಕುವ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿದ್ದು, ಕ್ಷಯ ರೋಗ ಬರದಂತೆ ತಡೆಯುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಲಿದೆ ಎಂದರು. ಈಗಾಗಲೇ ರಾಜ್ಯದಲ್ಲಿ 1060 ಗ್ರಾಮ ಪಂಚಾಯತಿಗಳನ್ನ ಕ್ಷಯ ರೋಗ ಮುಕ್ತ ಪಂಚಾಯತಿಗಳನ್ನಾಗಿ ರೂಪಿಸಲಾಗಿದೆ. ಅಲ್ಲದೇ ಕ್ಷಯ ನಿರ್ಮೂಲನಾ ಕಾರ್ಯಕ್ರಮದ ಅಡಿಯಲ್ಲಿ ಕ್ಷಯ ರೋಗಿಗಳಿಗೆ 98721 ಪೌಷ್ಠಿಕ ಆಹಾರದ ಕಿಟ್ ಗಳನ್ನ ವಿತರಿಸಲಾಗಿದೆ. ಸಾರ್ವಜನಿಕರು ಕ್ಷಯ ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಬಿಸಿಜಿ ಲಸಿಕಾ ಕಾರ್ಯಕ್ರಮದ ಲಾಭ ಪಡೆಯಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬಿಸಿಜಿ ಲಸಿಕೆ ಸುರಕ್ಷಿತ ಲಸಿಕೆಯಾಗಿದ್ದು, ಸಾರ್ವಜನಿಕರು…
ಬೆಂಗಳೂರು: ನಗರದ ಬೀದಿ ಬದಿಯ ವ್ಯಾಪಾರಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಡಿ.ಕೆ ಶಿವಕುಮಾರ್ ಅವರು ವಿವಿಧ ಯೋಜನೆಯಡಿ ನೋಂದಣಿಗೆ ಏಪ್ರಿಲ್ ವರೆಗೆ ವಿಸ್ತರಣೆ ಮಾಡುವುದಾಗಿ ಘೋಷಿಸಿದ್ದಾರೆ. 2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರ ಜತೆ ಸಭೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಬೀದಿ ಬದಿ ವ್ಯಾಪಾರಿಗಳಿಗೆ ರಸ್ತೆಬದಿ ಮಳಿಗೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಅವಕಾಶವಿಲ್ಲ. ಈ ಬಗ್ಗೆ ನ್ಯಾಯಲಯದ ನಿರ್ದೇಶನವೂ ಇದೆ. ಈಗ ಸುಮಾರು 3,778 ಜನ ತಳ್ಳುವ ಗಾಡಿ ನೀಡಿ ಎಂದು ಅರ್ಜಿ ಹಾಕಿದ್ದಾರೆ. ನಾವು ಈ ವರ್ಷ ಪಾಲಿಕೆಯಿಂದ ಸುಮಾರು 10 ಸಾವಿರ ತಳ್ಳುವ ಗಾಡಿಗಳನ್ನು ನೀಡಲು ತಯಾರಿದ್ದೇವೆ. ಗಾಡಿ ಬೇಕಾದವರು ನೋಂದಣಿ ಮಾಡಿಕೊಳ್ಳಬೇಕು. ಗಾಡಿಯನ್ನು ಸುಮ್ಮನೆ ನಿಲ್ಲಿಸಿಕೊಳ್ಳುವಂತಿಲ್ಲ. ಪ್ರತಿದಿನ ಎಲ್ಲಿ, ಯಾವ ಜಾಗದಲ್ಲಿ ವಹಿವಾಟು ನಡೆಸಲಾಯಿತು ಎನ್ನುವ ಮಾಹಿತಿ ತಿಳಿದುಕೊಳ್ಳುವ ವ್ಯವಸ್ಥೆ ಜಾರಿಗೆ ತರಲಿದ್ದೇವೆ. ಗಾಡಿಯನ್ನು ಮನೆಯಲ್ಲಿ ನಿಲ್ಲಿಸಿಕೊಳ್ಳುವುದು, ಮತ್ತೊಬ್ಬರಿಗೆ ಮಾರುವುದಕ್ಕೆ ಅವಕಾಶವಿಲ್ಲ ಎಂದರು.…
ಬೆಂಗಳೂರು: ರಾಜ್ಯ ಸರ್ಕಾರದಿಂದ ಅಕ್ರಮ ಕಟ್ಟಡ ನಿರ್ಮಾಣ ತಡೆಗೆ ಮಹತ್ವದ ಕ್ರಮ ವಹಿಸಲಾಗುತ್ತಿದೆ. ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಉತ್ತಮ ತೆರಿಗೆ ಸಂಗ್ರಹವಾಗಬೇಕು. ನೀರು, ರಸ್ತೆ ಸೇರಿದಂತೆ ಅನೇಕ ಮೂಲಸೌಕರ್ಯಗಳನ್ನು ನೀಡಿದ್ದೇವೆ. ಆದರೆ ಅನೇಕರು ಇದಕ್ಕೆ ತಕ್ಕಂತೆ ತೆರಿಗೆ ಪಾವತಿ ಮಾಡುತ್ತಿಲ್ಲ. ಅನುಮತಿ ನೀಡಿದ್ದಕ್ಕಿಂತ ಹೆಚ್ಚು ವಿಸ್ತೀರ್ಣದ ಹಾಗೂ ಮಹಡಿಗಳನ್ನು ಅಕ್ರಮವಾಗಿ ಕಟ್ಟಿಕೊಂಡಿದ್ದಾರೆ. ಇಂತಹ ಅಕ್ರಮಗಳನ್ನು ʼಎಐʼ ತಂತ್ರಜ್ಞಾನದ ಮೂಲಕ ಪತ್ತೆ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುವುದು. ಇದರಿಂದ ಕಟ್ಟಡವನ್ನು ಎಷ್ಟು ವಿಸ್ತೀರ್ಣ, ಎತ್ತರ ಕಟ್ಟಿದ್ದಾರೆ ಎಂಬುದು ತಿಳಿಯುತ್ತದೆ. ಜತೆಗೆ ಪ್ರತಿಯೊಂದು ಮನೆಯ ದಾಖಲೆಯೂ ಸಿಗುತ್ತದೆ ಎಂದು ವಿವರಿಸಿದರು. ಅಧಿಕಾರಿಗಳ ಅಕ್ರಮ; ಗಮನಕ್ಕೆ ತರದೆಯೂ ಅಮಾನತು ಮಾಡಿ “ಮನೆ, ನಿವೇಶನ ಮಾಲೀಕರ ಜೊತೆ ಒಳ ಒಪ್ಪಂದ ಮಾಡಿಕೊಂಡು ಕಂದಾಯ ಬಡಾವಣೆ ಅಕ್ರಮಗಳಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರೆ ಅಂತಹವರನ್ನು ನನ್ನ ಗಮನಕ್ಕೆ ತರದೆಯೂ ಕೂಡಲೇ ಅಮಾನತು ಮಾಡಿ ಎಂದು ಉನ್ನತ ಅಧಿಕಾರಿಗಳಿಗೆ…
ಬೆಂಗಳೂರು : “ಮನೆ ಬಾಗಿಲಿಗೆ ಉಚಿತವಾಗಿ ಖಾತೆ ವಿತರಣೆ, ಬೀದಿಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ, ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. 2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರ ಜತೆ ಸಭೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. “ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ. ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು. ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ ವಾರ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರ ವಾಗಿದೆ. ಜೊತೆಗೆ ಕಂದಾಯ ಬಡಾವಣೆಗಳಲ್ಲಿ ಇರುವ ಖಾಸಗಿ ರಸ್ತೆಗಳನ್ನೂ ಸಹ ಸರ್ಕಾರಿ ರಸ್ತೆಗಳು ಎಂದು ಘೋಷಣೆ ಮಾಡಲಾಗುವುದು”…
ಬೆಂಗಳೂರು: ರಾಜ್ಯದ ನಾಲ್ಕು ವಿಭಾಗಗಳಲ್ಲಿ ಹೈಟೆಕ್ ಪಂಚಕರ್ಮ ಚಿಕಿತ್ಸೆ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಆಯುರ್ವೇದಿಕ್ ಕಾಲೇಜಿನಲ್ಲಿ ನೂತನ ಹೈಟೆಕ್ ಪಂಚಕರ್ಮ ಕೊಠಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. ಆಯುರ್ವೇದ ಪದ್ದತಿ ಅನುಸರಿಸುವುದರಿಂದ ಕಾಯಿಲೆಗಳು ಬರದಂತೆ ಮುಂಚಿತವಾಗಿಯೇ ಮುನ್ನೆಚ್ಚರಿಕೆ ವಹಿಸಬಹುದು. ಆಯುರ್ವೇದವನ್ನ ನಮ್ಮ ಆಹಾರ ಪದ್ದತಿಯಲ್ಲಿ ಅಳವಡಿಸಿಕೊಳ್ಳುವುದು ಬಹುಮುಖ್ಯ. ಇದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು. ಈ ನಿಟ್ಟಿನಲ್ಲಿ ಆಯುರ್ವೇದ ಜಿಕಿತ್ಸಾ ಪದ್ದತಿಗಳನ್ನ ಜನರಿಗೆ ಸುಲಲಿತವಾಗಿ ಒದಗಿಸುವ ನಿಟ್ಟಿನಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ 5 ಬೆಡ್ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಆಯುರ್ವೇದಿಕ್ ಚಿಕಿತ್ಸಾ ಪದ್ದತಿಗಳನ್ನ ಅಳವಡಿಸಲು ಯೋಜನೆ ರೂಪಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನೂತನ ಪುರುಷ ವಸತಿಗೃಹ ಮತ್ತು ಹೈಟೆಕ್ ಪಂಚಕರ್ಮ ಕೊಠಡಿಗಳ ಲೋಕಾರ್ಪಣೆಗೊಳಿಸಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ, ನಿಮ್ಮ ಉಳಿತಾಯ ಖಾತೆಯನ್ನು ವೇತನ ಖಾತೆಯಾಗಿ ಬದಲಾವಣೆ ಮಾಡಲು ಕೆಲ ದಾಖಲೆಗಳು ಕಡ್ಡಾಯಗೊಳಿಸಲಾಗಿದೆ. ಅವು ಏನು ಅಂತ ಮುಂದೆ ಓದಿ. ಈ ಸಂಬಂಧ ಬ್ಯಾಂಕ್ ನಿಂದ ಮಾಹಿತಿ ನೀಡಲಾಗಿದ್ದು, ಇದಕ್ಕಾಗಿ ಸರ್ಕಾರಿ ನೌಕರರು ಬ್ಯಾಂಕಿಗೆ ಒಂದು ಅರ್ಜಿಯನ್ನು ಸಲ್ಲಿಸಬೇಕಿದೆ. ಅದರಲ್ಲಿ ಹೆಸರು, ಹುದ್ದೆ, ಶಾಖೆಯ ಹೆಸರು, ಬ್ಯಾಂಕ್ ಖಾತೆಯ ವಿವರವನ್ನು ನಮೂದಿಸಬೇಕು. ಇದಲ್ಲದೇ ನಾನು ಉಳಿತಾಯ ಖಾತೆಯನ್ನು ಈ ಬ್ಯಾಂಕ್ ನಲ್ಲಿ ಹೊಂದಿದ್ದೇನೆ. ಈ ಖಾತೆಯನ್ನು ವೇತನ ಖಾತೆಯಾಗಿ ಬದಲಾಯಿಸೋದಕ್ಕೆ, ತಮ್ಮ ಬ್ಯಾಂಕಿನ ಮೂಲಕ ಸಿಗುವ ವಿವಿಧ ಪ್ರಯೋಜನ ಪಡೆಯಲು ಇಚ್ಚಿಸುತ್ತೇನೆ ಎಂಬುದಾಗಿಯೂ ತಿಳಿಸಬೇಕು. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರೆಲ್ಲರೂ ತಮ್ಮ ಉಳಿತಾಯ ಖಾತೆಯನ್ನು ವೇತನ ಖಾತೆಯಾಗಿ ಬದಲಾಯಿಸಿಕೊಂಡು, ಸಂಬಂಳ ಪ್ಯಾಕೇಜ್ ಗಳ ಅಡಿಯಲ್ಲಿನ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರ ಆದೇಶಿಸಿರುತ್ತದೆ. ಹೀಗಾಗಿ ನನ್ನ ವೇತನ ಖಾತೆಯಾಗಿ ಬದಲಾಯಿಸೋದಕ್ಕೆ ಮನವಿಯನ್ನು ಮಾಡಬೇಕು. ಉಳಿತಾಯ ಖಾತೆ, ವೇತನ ಖಾತೆಯಾಗಿ ಬದಲಾಯಿಸಲು ಈ ದಾಖಲೆ…
ನವದೆಹಲಿ: ವಿಮಾನ ಪ್ರಯಾಣಿಕರಿಗೆ ಒಳ್ಳೆಯ ಸುದ್ದಿ ಇದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಸೋಮವಾರ ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರ ಪ್ರಕಾರ, ಈಗ ನೀವು ವಿಮಾನ ಟಿಕೆಟ್ ಬುಕ್ ಮಾಡುವಾಗಲೆಲ್ಲಾ, ನಿಮ್ಮ ಹಕ್ಕುಗಳು ಮತ್ತು ಸೌಲಭ್ಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು SMS ಅಥವಾ WhatsApp ಮೂಲಕ ನೀಡಲಾಗುವುದು. ಡಿಜಿಸಿಎ ಈ ಕ್ರಮ ಕೈಗೊಂಡಿದೆ ಡಿಜಿಸಿಎ ನಿರ್ದೇಶನದ ಪ್ರಕಾರ, ಎಲ್ಲಾ ವಿಮಾನಯಾನ ಸಂಸ್ಥೆಗಳು ಟಿಕೆಟ್ ಬುಕ್ ಮಾಡಿದ ತಕ್ಷಣ, ನಾಗರಿಕ ವಿಮಾನಯಾನ ಸಚಿವಾಲಯದ ವೆಬ್ಸೈಟ್ನಲ್ಲಿ ಲಭ್ಯವಿರುವ ಪ್ರಯಾಣಿಕರ ಚಾರ್ಟರ್ನ ಆನ್ಲೈನ್ ಲಿಂಕ್ ಅನ್ನು ಎಸ್ಎಂಎಸ್ ಅಥವಾ ವಾಟ್ಸಾಪ್ ಮೂಲಕ ಕಳುಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಲಿಂಕ್ ಪ್ರಯಾಣಿಕರ ಹಕ್ಕುಗಳು, ನಿಯಮಗಳು ಮತ್ತು ದೂರು ಪರಿಹಾರಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಒಳಗೊಂಡಿರುತ್ತದೆ. ಪ್ರಯಾಣಿಕರ ಹಕ್ಕುಗಳಿಗೆ ಸಂಬಂಧಿಸಿದ ಈ ಮಾಹಿತಿಯನ್ನು ವಿಮಾನಯಾನ ಸಂಸ್ಥೆಯ ವೆಬ್ಸೈಟ್ ಮತ್ತು ಟಿಕೆಟ್ನಲ್ಲಿಯೂ ಪ್ರಮುಖವಾಗಿ ಉಲ್ಲೇಖಿಸಬೇಕು ಎಂದು ಡಿಜಿಸಿಎ ಹೇಳಿದೆ. ವಿಮಾನ ವಿಳಂಬ ಅಥವಾ ರದ್ದತಿಯ…
ನವದೆಹಲಿ: ಮಾರ್ಚ್.19ರ ಬುಧವಾರದಂದು 10 ಗ್ರಾಂ ಚಿನ್ನದ ಬೆಲೆ ರೂ.91,950ಕ್ಕೆ ತಲುಪಿತ್ತು. ಅದೇ ಬೆಲೆ ಮಾರ್ಚ್.24ರ ಇಂದು ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಕೊಂಚ ಇಳಿಕೆ ಕಂಡಿದೆ. ಆಭರಣದ ಬೆಲೆಯಲ್ಲಿ ರೂ.1,400 ಇಳಿಕೆ ಕಂಡಿದೆ. ಅಖಿಲ ಭಾರತ ಸರಾಫಾ ಸಂಘದ ಪ್ರಕಾರ, ಸೋಮವಾರ ರಾಜಧಾನಿ ದೆಹಲಿಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 700 ರೂ.ಗಳಷ್ಟು ಇಳಿದು 90,550 ರೂ.ಗಳಿಗೆ ತಲುಪಿದೆ. ಈ ಅವಧಿಯಲ್ಲಿ ಬೆಳ್ಳಿಯ ಬೆಲೆ 200 ರೂ.ಗಳಷ್ಟು ಏರಿಕೆಯಾಗಿದ್ದು, ಇದರಿಂದಾಗಿ ಬೆಳ್ಳಿಯ ಬೆಲೆ ಕೆಜಿಗೆ 1,00,500 ರೂ.ಗಳಾಗಿದ್ದು, ಶುಕ್ರವಾರ ಇದು ಕೆಜಿಗೆ 1,00,300 ರೂ.ಗಳಷ್ಟಿತ್ತು. ಸರಾಫಾ ಅಸೋಸಿಯೇಷನ್ ಪ್ರಕಾರ, ಚಿನ್ನದ ಬೆಲೆಯಲ್ಲಿನ ದುರ್ಬಲತೆಗೆ ಆಭರಣ ವ್ಯಾಪಾರಿಗಳು, ಸ್ಟಾಕಿಸ್ಟ್ಗಳು ಮತ್ತು ಉನ್ನತ ಮಟ್ಟದ ವ್ಯಾಪಾರಿಗಳು ಮಾಡಿದ ಲಾಭದ ಬುಕಿಂಗ್ ಕಾರಣ ಎನ್ನಲಾಗುತ್ತಿದೆ. ಪಿಟಿಐ ವರದಿಯ ಪ್ರಕಾರ, ಜಾಗತಿಕ ಮಟ್ಟದಲ್ಲಿ ಚಿನ್ನದ ಮೇಲಿನ ಮಟ್ಟದಲ್ಲಿ ನಡೆಯುತ್ತಿರುವ ಲಾಭದ ಬುಕಿಂಗ್ ಕುಸಿತಕ್ಕೆ ಮತ್ತೊಂದು ಪ್ರಮುಖ ಕಾರಣವಾಗಿದೆ. ಕಳೆದ ವಾರ, ಸೋಮವಾರದಿಂದ ಬುಧವಾರದವರೆಗೆ, ಚಿನ್ನದ…
ಗೃಹಶೋಭಿತ ಮಹಿಳೆಯರಿಗೆ ಕಿವಿ ಮಾತು: *ಸಂಜೆ ದೀಪ ಹೊತ್ತಿಸಿದ ಮೇಲೆ ಗೃಹದ ಕಸ ಗುಡಿಸ ಬೇಡಿ. * ರಾತ್ರಿ ಮಲಗುವ ಮುಂಚೆ ಕಸ ಗುಡಿಸಿದ್ದರೆ ಹೊರ ಹಾಕ ಬೇಡಿ. ಬೆಳಗಿನ ಜಾವ ಹೊರ ಹಾಕಿ. *ಬಾಗಿಲ ಹೊಸ್ತಿಲ ಮೇಲೆ ನಿಲ್ಲ ಬೇಡಿ ಮತ್ತು ಕುಳಿತು ಕೊಳ್ಳ ಬೇಡಿ. *ಸಂಜೆ ದೀಪವನ್ನು ಹೊತ್ತಿಸುವ ವೇಳೆ ಮುಂಬಾಗಿಲನ್ನು ತೆರೆದಿರಿಸಿ. ಹಿಂಬಾಗಿಲಿನ ಕದ ಮುಚ್ಚಿರಲಿ. *ಪೊರಕೆಯ ತುದಿ ಭಾಗವನ್ನು ಮೇಲೆ ಮಾಡಿ ನಿಲ್ಲಿಸ ಬೇಡಿ. ಮೊರ, ಪೊರಕೆಯನ್ನು ಕಾಲಿನಿಂದ ಒದೆಯ ಬೇಡಿ. *ಹೊರ ಬಾಗಿಲ ಹೊಸ್ತಿಲಲ್ಲಿಯೇ ಮತ್ತು ಅದರ ಬಳಿ ಪಾದರಕ್ಷೆಗಳನ್ನು ಬಿಡ ಬೇಡಿ. *ರಂಗೋಲಿ ಹಾಕದೆ ಬರೇ ಬಾಗಿಲ ಮುಂಭಾಗವನ್ನು ಸಾರಿಸಿ ಇಡುವುದು ಅಶುಭ ಸೂಚಕ. *ಗೃಹದ ಗೋಡೆ, ದೇವರ ಮನೆ ಇತ್ಯಾದಿ ಸ್ಥಳಗಳ ಮೇಲೆ ಶಾಯಿ (ಇಂಕ್) ಕರಿ ಬಣ್ಣ ಇತ್ಯಾದಿಗಳಿಂದ ವಿಕಾರ ಆಕೃತಿ ಬರೆಯ ಬೇಡಿ. *ಮಹಿಳೆಯರು ನಡೆಯುವಾಗ ಕಾಲಿನ ಶಬ್ಧ ಸಾಧ್ಯವಾದಷ್ಟು ಕಡಿಮೆಯಾಗಿರಲಿ. * ಮಂಗಳ, ಶುಕ್ರವಾರಗಳಂದು ಅವ್ಯಾಚ ಶಬ್ಧಗಳಿಂದ…
ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) ಯಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದೆ. ಏಪ್ರಿಲ್ ತಿಂಗಳಲ್ಲಿ 18,500 ಮೆಗಾವ್ಯಾಟ್ ತಲುಪುವ ಸಾಧ್ಯತೆ ಇದೆ. ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಮತ್ತು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, “ಕಳೆದ ಫೆಬ್ರವರಿಯಲ್ಲಿ ವಿದ್ಯುತ್ ಬೇಡಿಕೆ ಗರಿಷ್ಠ ಬೇಡಿಕೆ ಅವಧಿಯಲ್ಲಿ 18,350 ಮೆಗಾ ವ್ಯಾಟ್ ತಲುಪಿದ್ದರೆ, ಮಾರ್ಚ್ ತಿಂಗಳಲ್ಲಿ 18,395 ಮೆಗಾ ವ್ಯಾಟ್ ಗೆ ಏರಿಕೆಯಾಗಿದೆ. ಮಾ. 7ರಂದು ಗರಿಷ್ಠ ವಿದ್ಯುತ್ ಬೇಡಿಕೆ 18,395 ಮೆಗಾ ವ್ಯಾಟ್ ತಲುಪಿತ್ತು ಎಂದು ಹೇಳಿದರು. ಕೋವಿಡ್ ಬಳಿಕ ವಿದ್ಯುತ್ ಬೇಡಿಕೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಗರಿಷ್ಠ ವಿದ್ಯುತ್ ಬೇಡಿಕೆ 2020-21ನೇ ಸಾಲಿನಲ್ಲಿ 14,367 ಮೆಗಾವ್ಯಾಟ್ ಇದ್ದರೆ, 2021-22ರಲ್ಲಿ 14,818 ಮೆ.ವ್ಯಾ., 2022-23ರಲ್ಲಿ 15,828 ಮ.ವ್ಯಾ. ಇದ್ದರೆ,…