Author: kannadanewsnow09

ಕೆಎನ್ಎನ್ ಡಿಜಿಟಲ್ ಡೆಸ್ಕ್: ಪ್ರಯಾಣಿಕರಿಗೆ ಕಡಿಮೆ ವೆಚ್ಚದ ಅನುಭವ ನೀಡುವ, ಭಾರತೀಯ ರೂಪಾಯಿಗೆ ಹೆಚ್ಚಿನ ಮೌಲ್ಯವನ್ನು ನೀಡುವ ವಿದೇಶಿ ಸ್ಥಳಗಳ ಬಗ್ಗೆ ಮುಂದೆ ಓದಿ. ಅಂತರರಾಷ್ಟ್ರೀಯ ಪ್ರಯಾಣಕ್ಕೆ ನಿಖರವಾದ ಬಜೆಟ್ ಅಗತ್ಯವಿದೆ. ವಿಮಾನ ದರ ಮತ್ತು ಆಹಾರದಿಂದ ವಸತಿ ಮತ್ತು ಶಾಪಿಂಗ್‌ವರೆಗೆ ಎಲ್ಲವನ್ನೂ ಎಚ್ಚರಿಕೆಯಿಂದ ಪರಿಗಣಿಸಬೇಕು. ಕೆಲವು ದೇಶಗಳು ದುಬಾರಿಯಾಗಿರಬಹುದು, ನಮಗೆ ಹೆಚ್ಚಿನ ಉಳಿತಾಯದ ಅಗತ್ಯವಿರುತ್ತದೆ, ಆದರೆ ಪ್ರಯಾಣಿಕರಿಗೆ ಕಡಿಮೆ ವೆಚ್ಚದ ಅನುಭವ ನೀಡುವ ವಿದೇಶಿ ಸ್ಥಳಗಳಿವೆ, ಇದು ಪ್ರಯಾಣಿಕರಿಗೆ ಭಾರತೀಯ ರೂಪಾಯಿಗೆ ಹೆಚ್ಚಿನ ಮೌಲ್ಯವನ್ನು ನೀಡುತ್ತದೆ. ಸ್ಥಳೀಯ ಕರೆನ್ಸಿಗಿಂತ ಭಾರತೀಯ ರೂಪಾಯಿಯ ಮೌಲ್ಯ ಹೆಚ್ಚಿರುವ 5 ದೇಶಗಳನ್ನು ನೋಡೋಣ, ಇದು ಬಜೆಟ್ ಸ್ನೇಹಿ ಅಂತರರಾಷ್ಟ್ರೀಯ ವಿಹಾರಕ್ಕೆ ಸೂಕ್ತ ಸ್ಥಳಗಳಾಗಿವೆ: ವಿಯೆಟ್ನಾಂ ವಿಯೆಟ್ನಾಂ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ, ಸುಮಾರು 300 ವಿಯೆಟ್ನಾಮೀಸ್ ಡಾಂಗ್ (VND) ಗೆ ಸಮಾನವಾದ 1 INR. ಅಂದರೆ ಬೀದಿ ಆಹಾರದಿಂದ ಹಿಡಿದು ದೃಶ್ಯ ಪ್ರವಾಸಗಳವರೆಗೆ ಎಲ್ಲವೂ ಭಾರತೀಯ ಪ್ರಯಾಣಿಕರಿಗೆ ನಂಬಲಾಗದಷ್ಟು ಕೈಗೆಟುಕುವಂತಿದೆ. ನೀವು ಹಾ ಲಾಂಗ್ ಕೊಲ್ಲಿಯನ್ನು ಅನ್ವೇಷಿಸುತ್ತಿರಲಿ,…

Read More

ಇಂದಿನ ಡಿಜಿಟಲ್ ಯುಗದಲ್ಲಿ, ಆಟಗಳು, ಸಾಮಾಜಿಕ ಮಾಧ್ಯಮ, ಬ್ಯಾಂಕಿಂಗ್, ಶಾಪಿಂಗ್ ಮತ್ತು ಆರೋಗ್ಯ ಟ್ರ್ಯಾಕಿಂಗ್‌ಗಾಗಿ ಪ್ರತಿಯೊಬ್ಬರೂ ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ನೂರಾರು ಅಪ್ಲಿಕೇಶನ್‌ಗಳನ್ನು ಹಾಕಿಕೊಂಡಿರುತ್ತಾರೆ. ಹಾಗಾದ್ರೇ ನಿಮ್ಮ ಮೊಬೈಲ್ ನಲ್ಲಿ ಇನ್ಟಾಲ್ ಮಾಡಿಕೊಂಡಿರುವ ಅಪ್ಲಿಕೇಶನ್ ಸುರಕ್ಷಿತವೇ ಎನ್ನುವ ಬಗ್ಗೆ ಮುಂದೆ ಓದಿ. ಸ್ಮಾರ್ಟ್‌ಫೋನ್ ಅಪ್ಲಿಕೇಶನ್: ಇಂದಿನ ಡಿಜಿಟಲ್ ಯುಗದಲ್ಲಿ, ಪ್ರತಿಯೊಬ್ಬರೂ ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಆಟಗಳು, ಸಾಮಾಜಿಕ ಮಾಧ್ಯಮ, ಬ್ಯಾಂಕಿಂಗ್, ಶಾಪಿಂಗ್ ಮತ್ತು ಆರೋಗ್ಯ ಟ್ರ್ಯಾಕಿಂಗ್‌ಗಾಗಿ ನೂರಾರು ಅಪ್ಲಿಕೇಶನ್‌ಗಳನ್ನು ಸ್ಥಾಪಿಸಿರುತ್ತಾರೆ. ಆದರೆ ಈ ಎಲ್ಲಾ ಅಪ್ಲಿಕೇಶನ್‌ಗಳು ಸುರಕ್ಷಿತವೇ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಆಗಾಗ್ಗೆ, ನಾವು ಅಪ್ಲಿಕೇಶನ್‌ಗಳನ್ನು ಸಂಪೂರ್ಣವಾಗಿ ಪರಿಶೀಲಿಸದೆ ಡೌನ್‌ಲೋಡ್ ಮಾಡುತ್ತೇವೆ, ಇದು ನಮ್ಮ ಡೇಟಾ ಮತ್ತು ಗೌಪ್ಯತೆಗೆ ಅಪಾಯವನ್ನುಂಟುಮಾಡಬಹುದು. ಆದ್ದರಿಂದ, ನಿಮ್ಮ ಫೋನ್‌ನಲ್ಲಿರುವ ಅಪ್ಲಿಕೇಶನ್‌ಗಳ ಸುರಕ್ಷತೆಯನ್ನು ಹೇಗೆ ಪರಿಶೀಲಿಸುವುದು ಎಂದು ಕಲಿಯೋಣ. ಅಪರಿಚಿತ ಅಪ್ಲಿಕೇಶನ್‌ಗಳ ಬಗ್ಗೆ ಎಚ್ಚರದಿಂದಿರಿ ಆಗಾಗ್ಗೆ, ನಾವು Google Play Store ಅಥವಾ Apple App Store ನಲ್ಲಿ ಲಭ್ಯವಿಲ್ಲದ ವೆಬ್‌ಸೈಟ್‌ಗಳು ಅಥವಾ ಲಿಂಕ್‌ಗಳಿಂದ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡುತ್ತೇವೆ.…

Read More

ಬೆಂಗಳೂರು: ನವೆಂಬರ್ 2ರಂದು ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ಅಂತಿಮ ಕೀ ಉತ್ತರಗಳ ಜತೆಗೆ ತಾತ್ಕಾಲಿಕ ಫಲಿತಾಂಶವನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ. ಪರೀಕ್ಷೆ ನಡೆದು ದಾಖಲೆಯ ಕೇವಲ 13 ದಿನಗಳಲ್ಲಿ ಕೀ ಉತ್ತರಗಳ ಜತೆಗೆ ಫಲಿತಾಂಶ ಪ್ರಕಟಿಸಲಾಗಿದೆ. ಫಲಿತಾಂಶ ಸಂಬಂಧ ಆಕ್ಷೇಪಣೆಗಳು ಇದ್ದಲ್ಲಿ ನ.17ರಂದು ಮಧ್ಯಾಹ್ನ‌ 12ಗಂಟೆಯೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೀ ಉತ್ತರಗಳಿಗೆ ಸಂಬಂಧಿಸಿದ ಅಥವಾ ಪೂರಕ ದಾಖಲೆಗಳಿಲ್ಲದೆ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ಫಲಿತಾಂಶ ಈ ರೀತಿ ಚೆಕ್ ಮಾಡಿ ಕೆಸೆಟ್ ಪರೀಕ್ಷೆ ಬರೆದಂತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ cetonline.karnataka.gov.in/kea/ಜಾಲತಾಣಕ್ಕೆ ಭೇಟಿ ನೀಡಿ. ಅಲ್ಲಿ ಕೇಳುವಂತ ನಿಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ನಿಮ್ಮ ಕೆಸೆಟ್ ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://twitter.com/KEA_karnataka/status/1989645221005562053 https://kannadanewsnow.com/kannada/vaidyanath-appointed-as-district-president-of-shivamogga-kuwj-sangha-here-is-the-list-of-the-new-district-executive-committee/

Read More

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನವಾಗಿದೆ. ಯೋಜನೆಗಳು: ಉದ್ಯೋಗಿನಿ ಯೋಜನೆ: ವಯೋಮಿತಿ 18 ರಿಂದ 55 ವರ್ಷಗಳೊಳಗಿರುವ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕ್ ಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಆದಾಯ ಮಿತಿ ರೂ.02 ಲಕ್ಷ ಹೊಂದಿರಬೇಕು. ಘಟಕ ವೆಚ್ಚ ಕನಿಷ್ಠ ರೂ.01 ಲಕ್ಷದಿಂದ ಗರಿಷ್ಟ ರೂ.03 ಲಕ್ಷ, ಶೇ.50 ರಷ್ಟು ಸಹಾಯಧನ ನೀಡಲಾಗುವುದು. ಸಾಮಾನ್ಯ ವರ್ಗದವರಿಗೆ ಆದಾಯ ಮಿತಿ ರೂ.1.50 ಲಕ್ಷ ಹೊಂದಿರಬೇಕು. ಘಟಕ ವೆಚ್ಚ ಗರಿಷ್ಟ ರೂ.03 ಲಕ್ಷ, ಶೇ.30 ರಷ್ಟು ಸಹಾಯಧನ ನೀಡಲಾಗುವುದು. ಚೇತನ ಯೋಜನೆ: ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ (ವಯೋಮಿತಿ 18…

Read More

ಬಳ್ಳಾರಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಬೆಳೆದ ಕಿರು ಸಿರಿಧಾನ್ಯಗಳಾದ ಸಾಮೆ/ನವಣೆ, ರಾಗಿ, ಜೋಳ ಉತ್ಪನ್ನಗಳನ್ನು ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿ ಆದ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಸರ್ಕಾರದ ಆದೇಶದಂತೆ ಬೆಂಬಲ ಬೆಲೆ ಯೋಜನೆಯಡಿ ಕಿರು ಸಿರಿಧಾನ್ಯ ಸಾಮೆ/ನವಣೆ, ರಾಗಿ, ಜೋಳ ಉತ್ಪನ್ನಗಳನ್ನು ಮಾರಾಟ ಮಾಡಲು ರೈತರು ಮೊದಲು ಕೃಷಿ ಇಲಾಖೆಯಲ್ಲಿ ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನಂತರ ಆಯಾ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ, ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಕೇಂದ್ರ ಕಚೇರಿಗಳಲ್ಲಿ ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ ಜೋಳ ಮಾರಾಟ ಮಾಡಲು ನೋಂದಾಯಿಸಿಕೊಳ್ಳಬೇಕು. ಬೆಲೆ(ಕ್ವಿಂಟಲ್ ಗೆ): ಬಿಳಿಜೋಳ-ಹೈಬ್ರೀಡ್: ರೂ.3699 ಬಿಳಿಜೋಳ- ಮಾಲ್ದಂಡಿ: ರೂ.3749 ರಾಗಿ: ರೂ.4886 ಕಿರು ಸಿರಿಧಾನ್ಯ (ಸಾಮೆ ಮತ್ತು ನವಣೆ):…

Read More

ಧಾರವಾಡ: 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನ ಬಿಳಿ ಜೋಳಕ್ಕೆ ಬೆಂಬಲ ಬೆಲೆ ಘೋಷಿಸಿದ್ದು, ಜಿಲ್ಲೆಯಲ್ಲಿ ಬಿಳಿ ಜೋಳ ಖರೀದಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಖರೀದಿ ಏಜೆನ್ಸಿಯಾಗಿ ನೇಮಕವಾಗಿದೆ. ಜಿಲ್ಲೆಯಲ್ಲಿ ಐದು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಬಿಳಿ ಜೋಳ (ಹೈಬ್ರಿಡ್) ಪ್ರತಿ ಕ್ವೀಂಟಲ್‍ಗೆ ರೂ.3,699 ಹಾಗೂ ಬಿಳಿ ಜೋಳ ಮಾಲ್ದಂಡಿ ಪ್ರತಿ ಕ್ವೀಂಟಲ್‍ಗೆ ರೂ.3,749 ರಂತೆ ದರ ನಿಗದಿ ಪಡಿಸಲಾಗಿದೆ. ಧಾರವಾಡ ಜಿಲ್ಲೆಯ ಧಾರವಾಡ, ಹುಬ್ಬಳ್ಳಿ, ನವಲಗುಂದ, ಕುಂದಗೋಳ ಮತ್ತು ಕಲಘಟಗಿ ತಾಲೂಕುಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ. ಪ್ರತಿ ರೈತರಿಂದ ಹಿಡುವಳಿಯನ್ನು ಆಧರಿಸಿ ಪ್ರತಿ ಎಕರೆಗೆ 15 ಕ್ವೀಂಟಲ್ ನಂತೆ ಗರಿಷ್ಟ 150 ಕ್ವೀಂಟಲ್ ಬಿಳಿ ಜೋಳವನ್ನು ಖರೀದಿಸಲಾಗುವುದು. ಆಸಕ್ತ ರೈತರು ಬಯೋಮೆಟ್ರಿಕ್ ಮೂಲಕ ನವೆಂಬರ್ 15, 2025 ರಿಂದ ಮಾರ್ಚ 30, 2026 ರವರೆಗೆ ನೊಂದಣಿ ಮಾಡಬೇಕು. ಮುಂಗಾರು ಋತುವಿನ ಬಿಳಿ ಜೋಳವನ್ನು ನವೆಂಬರ್ 1, 2025 ರಿಂದ ಜನೆವರಿ 31, 2026…

Read More

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ‌ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಅಧಿವೇಶನದ ತಯಾರಿ ಬಗ್ಗೆ ನಡೆದ ಸಭೆ ಬಳಿಕ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದರಿಂದ ಆ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತದೆ. ಆದರೆ ಸರ್ಕಾರ ಕೇವಲ ಉತ್ತರ ನೀಡಿದರೆ ಸಾಲದು, ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ‌. ಸಮಗ್ರವಾಗಿ ಚರ್ಚೆಯಾಗಿ, ಸಲಹೆ ಸೂಚನೆಗಳು ದೊರೆಯಬೇಕು ಎಂದರು. ಸರ್ಕಾರಿ ಶಾಲೆಗಳಲ್ಲಿ ಕೊಠಡಿಗಳು ದುರಸ್ತಿಯಾಗಿಲ್ಲ. ಶೂ ಸಾಕ್ಸ್ ವಿತರಣೆಯಾಗಿಲ್ಲ. ಈ ಬಗ್ಗೆ ಸ್ಪೀಕರ್ ಗೆ ಪತ್ರ ಬರೆಯಲಿದ್ದೇನೆ. ಈ ಕುರಿತು ಕೂಡ ಸುದೀರ್ಘವಾಗಿ ಚರ್ಚೆಯಾಗಬೇಕಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕರಿಗೆ ವಿಶೇಷ ಸವಲತ್ತು, ಶಿಕ್ಷಣ ಸಂಸ್ಥೆಗಳಲ್ಲಿ ಮಾದಕ ದ್ರವ್ಯಗಳ ಬಳಕೆ, ಬೆಂಗಳೂರಿನಲ್ಲಿ ರಸ್ತೆ ಗುಂಡಿ ಸಮಸ್ಯೆ, ಮಳೆ ಹಾನಿ ಪರಿಹಾರದ ಬಗ್ಗೆ, ಕಾನೂನು ಸುವ್ಯವಸ್ಥೆ ಹಾಳಾಗಿರುವುದರ ಬಗ್ಗೆ ಚರ್ಚಿಸಲಿದ್ದೇವೆ ಎಂದರು. ಜೆಡಿಎಸ್ ಜೊತೆ ಸಮನ್ವಯ ಸಭೆ ನಡೆಸಿ, ಹೋರಾಟದ ಬಗ್ಗೆ…

Read More

ಬೆಂಗಳೂರು: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 06 ಕೊನೆಯ ದಿನವಾಗಿದೆ. ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 55 ವರ್ಷಗಳನ್ನು ಮೀರಿರತಕ್ಕದ್ದಲ್ಲ. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸತಕ್ಕದ್ದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ.98 ಸಾವಿರ ಹಾಗೂ ನಗರ ಪ್ರದೇಶದಲ್ಲಿ ರೂ.1.20…

Read More

ಮಂಡ್ಯ : ಮೂರ್ನಾಲ್ಕು ತಿಂಗಳಿಗೊಮ್ಮೆ ನಡೆಯುವ ಕೆಡಿಪಿ ಸಭೆಗೂ 10 ಕ್ಕೂ ಹೆಚ್ಚು ಇಲಾಖಾ ಅಧಿಕಾರಿಗಳು ಯಾವುದೇ ಕಾರಣ ನೀಡದೇ ಗೈರಾಗಿದ್ದಾರೆ. ಅಂತಹ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿ ಎಂದು ತಾ‌.ಪಂ ಇಓ ರಾಮಲಿಂಗಯ್ಯ ಅವರಿಗೆ ಶಾಸಕ ಕೆ.ಎಂ.ಉದಯ್ ಸೂಚನೆ ನೀಡಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ನಾಲ್ಕೈದು ಬಾರಿ ಕೆಡಿಪಿ ಸಭೆ ನಡೆಸಿ ಸಾರ್ವಜನಿಕ ಕೆಲಸ ಕಾರ್ಯಗಳನ್ನು ಸರಿಯಾದ ಸಮಯಕ್ಕೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸಾಕಷ್ಟು ಸೂಚನೆ ನೀಡಿದ್ದರು ಸಹ ಅಧಿಕಾರಿಗಳು ತಮ್ಮ ಛಾಳಿಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಿರಿ. ಈ ಹಿಂದೆ ನಿಮ್ಮಿಷ್ಟದ ರೀತಿ ಕೆಲಸ ಮಾಡ್ತಿದ್ರಿ ಆದರೆ ಅದಕ್ಕೆಲ್ಲ ನಾನು ಆಸ್ಪದ ಕೊಡಲ್ಲ. ಇದೇ ರೀತಿ ನಿಮ್ಮ ನಡತೆ ಮುಂದುವರೆದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಚ್ಚರಿಕೆ ನೀಡಿದರು. ಮದ್ದೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದ್ದು, ಅಂತವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಿ…

Read More

ಹಾಸನ: ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಮಾಹಿತಿ ನೀಡುವಂತೆ ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಾಸನ ಜಿಲ್ಲೆಯ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲ ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಅಧಿನಿಯಮ ಕುರಿತು ಜಾಗೃತಿ, ಸಂವಾದ, ಸಾರ್ವಜನಿಕರೊಂದಿಗೆ ಕಾಯ್ದೆಯ ಸದ್ಬಳಕೆ ಕುರಿತು ಚರ್ಚಿಸುವ ಸಂಬಂಧ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದು ಕಳೆದ ಅಕ್ಟೋಬರ್ 12 ಕ್ಕೆ 20 ವರ್ಷಗಳು ಪೂರ್ಣಗೊಂಡಿದ್ದು, ಅನೇಕ ಬದಲಾವಣೆಗಳು ಕೂಡ ಆಗಿದೆ. ಸಾರ್ವಜನಿಕರು ಹಾಗೂ ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು. ಆಡಳಿತದಲ್ಲಿ ಪಾರದರ್ಶಕತೆ ತರಲು ಹಾಗೂ ಸಾರ್ವಜನಿಕರಿಗೆ ಮಾಹಿತಿ ಕಲ್ಪಿಸುವುದರ ಜತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಸಹಕಾರಿಯಾಗಿದೆ ಎಂದು ಹೇಳಿದರು. ಕಾರ್ಯಗಾರದ ಮೂಲ ಉದ್ದೇಶ ಬದಲಾವಣೆ, ಆಯೋಗ…

Read More