Author: kannadanewsnow09

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ನಿಗಮ ಮಂಡಳಿ ನೇಮಕದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ನಿಗಮ ಮಂಡಳಿ ನೇಮಕದಲ್ಲಿ ಪಟ್ಟಿ ಬಿಡುಗಡೆಯಾಗಿಲ್ಲ ಎಂದು ಕೇಳಿದಾಗ, “ನಾನು ಪಟ್ಟಿ ತರಿಸಿಕೊಂಡಿದ್ದು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಆದ್ಯತೆ ನೀಡಬೇಕು ಎಂಬ ಉದ್ದೇಶ ನನ್ನದು. ಬ್ಲಾಕ್ ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರುಗಳಿಗೆ ಸ್ಥಾನಮಾನ ನೀಡಬೇಕು ಎಂದು ಎಲ್ಲಾ ಶಾಸಕರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಬಜೆಟ್ ತಯಾರಿಯಲ್ಲಿ ನಿರತರಾಗಿದ್ದು, ನನ್ನ ಹಾಗೂ ಸಣ್ಣ ನೀರಾವರಿ ಇಲಾಖೆ ಜತೆ ಸಭೆ ಮಾತ್ರ ಬಾಕಿ ಇದೆ. ನಮ್ಮ ಅಧಿಕಾರಿಗಳು ದೆಹಲಿಯಲ್ಲಿದ್ದ ಕಾರಣ ಸಭೆ ಮಾಡಲು ಆಗಿರಲಿಲ್ಲ ಎಂದು ತಿಳಿಸಿದರು. https://kannadanewsnow.com/kannada/big-news-cm-siddaramaiah-to-launch-3-day-hampi-utsav-from-feb-28/ https://kannadanewsnow.com/kannada/breaking-another-fire-breaks-out-in-mysuru-12-boilers-gutted-in-fire/

Read More

ಬೆಂಗಳೂರು: 2013ರಲ್ಲಿ ನಾನು ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದೆ ಕಳೆದ ಚುನಾವಣೆಯಲ್ಲಿ ಪಕ್ಷದ ಅದ್ಯಕ್ಷನಾಗಿದ್ದೆ. ಈಗ ಡಿಸಿಎಂ ಆಗಿದ್ದೇನೆ. ನನಗಿರುವ ಸಾಮರ್ಥ್ಯ, ಅನುಭವ ಬಳಸಿಕೊಳ್ಳಬೇಕು. ಸಿದ್ದರಾಮಯ್ಯ ಅವರು ಕೂಡ ಪಕ್ಷವನ್ನು ಮುನ್ನಡೆಸಲಿದ್ದಾರೆ. ಅವರು ಎರಡು ಅವಧಿಗೆ ವಿರೋಧ ಪಕ್ಷದ ನಾಯಕರಾಗಿ, ಎರಡು ಅವಧಿಗೆ ಸಿಎಂ ಆಗಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ನಾವು ಮುಂದೆ ಸಾಗುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ನಿಮ್ಮ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎಂಬ ಹೇಳಿಕೆ ನಂತರ ಚರ್ಚೆ ಹೆಚ್ಚಾಗಿದೆ ಎಂದು ಕೇಳಿದಾಗ, “ಪಕ್ಷ ನನ್ನನ್ನು 90ರ ದಶಕದಿಂದಲೇ ಮಂತ್ರಿ ಮಾಡಿ ಬೆಳೆಸಿದೆ. ಐದು ವರ್ಷ ನನ್ನನ್ನು ಪಕ್ಷ ಅಧ್ಯಕ್ಷನನ್ನಾಗಿ ಮಾಡಿ, ಈಗ ಡಿಸಿಎಂ ಹುದ್ದೆ ನೀಡಿದೆ. ಇಷ್ಟಾದ ಮೇಲೆ ನಾನು ನನ್ನ ಮುಖ ತೋರಿಸಿ ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡದಿದ್ದರೆ ನನ್ನ ನಾಯಕತ್ವ ನೀಡದಿದ್ದರೆ ಹೇಗೆ? ನಾನು ಮನೆಯಲ್ಲಿ ಕೂರಲು ಕಾಂಗ್ರೆಸ್ ಪಕ್ಷ ನನಗೆ ಇಷ್ಟು ಶಕ್ತಿ ನಿಡಿದೆಯೇ? ನಾನು ಯಾವುದೇ ಹುದ್ದೆಯಲ್ಲಿದ್ದರೂ ನಾನು ಪಕ್ಷ ಮುನ್ನಡೆಸಬೇಕು. ಕೇರಳ,…

Read More

ಬೆಂಗಳೂರು: ನೀವು ಮಹಾಕುಂಭಮೇಳದಲ್ಲಿ ಭಾಗವಹಿಸಿದ್ದು, ಈಗ ಇಶಾ ಫೌಂಡೇಶನ್ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದರಿಂದ ಇಂತಹ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ನಾನು ಜನ್ಮತಃ ಹಿಂದು. ಹಿಂದೂವಾಗಿಯೇ ಸಾಯುತ್ತೇನೆ. ನಾನು ಎಲ್ಲಾ ಧರ್ಮಗಳನ್ನು ಪ್ರೀತಿಸುತ್ತೇನೆ, ಗೌರವಿಸುತ್ತೇನೆ. ನಾನು ಜೈಲಲ್ಲಿ ಇದ್ದಾಗ ಸಿಖ್ ಧರ್ಮದ ಬಗ್ಗೆ ಕಲಿತೆ. ಜೈನರ ಮಠದ ಕಾರ್ಯಕ್ರಮಕ್ಕೆ ಹೋಗಿದ್ದೆ. ಎಲ್ಲಾ ಧರ್ಮದವರು ನನಗೆ ಆಶೀರ್ವಾದ ಮಾಡುತ್ತಾರೆ. ನಾನು ದರ್ಗಾ, ಚರ್ಚ್ ಗೆ ಹೋಗುತ್ತೇನೆ. ಎಲ್ಲಾ ಸಮುದಾಯಗಳು ನನ್ನನ್ನು ಪ್ರೀತಿಸುತ್ತವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಮಹಾಕುಂಭ ಮೇಳದಲ್ಲಿ ನಿಮ್ಮ ಅನುಭವ ಹೇಗಿತ್ತು ಎಂದು ಕೇಳಿದಾಗ, “ನನ್ನ ಅನುಭವ ಅತ್ಯುತ್ತಮವಾಗಿತ್ತು. ಮಹಾಕುಂಭಮೇಳದ ಆಯೋಜನೆಯನ್ನು ನಾನು ಸ್ವಾಗತಿಸುತ್ತೇನೆ. ಇದು ಸಾಮಾನ್ಯದ ಕೆಲಸವಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಜನರನ್ನು ನಿಭಾಯಿಸುವುದು ಸುಲಭವಲ್ಲ. ಒಂದೆರಡು ಸಣ್ಣಪುಟ್ಟ ತೊಂದರೆಗಳು ಆಗಿರಬಹುದು. ತಪ್ಪು ಹುಡುಕಲು ಹೋಗುವುದಿಲ್ಲ. ಧರ್ಮದಲ್ಲಿ ಭಕ್ತ ಹಾಗೂ ಭಗವಂತನ ನಡುವೆ ಸಂಬಂಧವಿರುತ್ತದೆ. ಕೆಲವರು ದೇವರ ಜತೆ ನೇರವಾಗಿ ವ್ಯವಹಾರ ನಡೆಸಿದರೆ ಮತ್ತೆ ಕೆಲವರು ಅರ್ಚಕರ ಮೂಲಕ ವ್ಯವಹಾರ ಮಾಡುತ್ತಾರೆ”…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಕ್ತಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಹೊಸದಾಗಿ 5,800 ಬಸ್ ಸೇರ್ಪಡೆಗೆ ಅನುಮೋದನೆ ನೀಡಲಾಗಿದೆ ಅಂತ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ ಎಂದಿದ್ದಾರೆ. ಹೊಸದಾಗಿ 5,800 ಬಸ್‌ಗಳ ಸೇರ್ಪಡೆಗೆ ಅನುಮೋದನೆ ನೀಡಲಾಗಿದ್ದು, ಈವರೆಗೆ 4,891 ಹೊಸ ಬಸ್‌ಗಳನ್ನು ಖರೀದಿಸಲಾಗಿದೆ. ಈ ಮೂಲಕ ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಖಕರ ಮತ್ತು ಆರಾಮದಾಯಕವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. https://twitter.com/KarnatakaVarthe/status/1894710165041271029 https://kannadanewsnow.com/kannada/it-is-difficult-to-impose-life-ban-on-convicted-mlas-centre-to-sc/ https://kannadanewsnow.com/kannada/breaking-another-fire-breaks-out-in-mysuru-12-boilers-gutted-in-fire/

Read More

ನವದೆಹಲಿ: ಶಿಕ್ಷೆಗೊಳಗಾದ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಆಜೀವ ನಿಷೇಧ ಹೇರುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ವಿರೋಧಿಸಿದ್ದು, ಜೈಲು ಶಿಕ್ಷೆ ಅನುಭವಿಸಿದ ನಂತರ ಪ್ರಸ್ತುತ ಆರು ವರ್ಷಗಳ ಅವಧಿಯನ್ನು ಮೀರಿ ವಿಸ್ತರಿಸುವ ಇಂತಹ ಅನರ್ಹತೆಯು ಅನಗತ್ಯವಾಗಿ ಕಠಿಣವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಮುಂದೆ ವಾದಿಸಿದೆ. 1951ರ ಜನ ಪ್ರಾತಿನಿಧ್ಯ ಕಾಯ್ದೆಯ ವಿವಾದಾತ್ಮಕ ನಿಬಂಧನೆಗಳು ಅನುಪಾತ ಮತ್ತು ತರ್ಕಬದ್ಧತೆಯ ತತ್ವಗಳನ್ನು ಆಧರಿಸಿವೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ ತಿಳಿಸಿದೆ. ಸಂಸತ್ತು ಏಕೈಕ ಕಾನೂನು ರೂಪಿಸುವ ಸಂಸ್ಥೆಯಾಗಿ, ಶಿಕ್ಷೆಗೊಳಗಾದ ಶಾಸಕರಿಗೆ ಅನರ್ಹತೆ ಅಥವಾ ದಂಡದ ಅವಧಿಯನ್ನು ನಿರ್ಧರಿಸುವ ವಿವೇಚನೆಯನ್ನು ಹೊಂದಿದೆ ಎಂದು ಅದು ಹೇಳಿದೆ. “ಆಜೀವ ನಿಷೇಧವು ಸೂಕ್ತವಾಗಿದೆಯೇ ಅಥವಾ ಇಲ್ಲವೇ ಎಂಬ ಪ್ರಶ್ನೆಯು ಸಂಸತ್ತಿನ ವ್ಯಾಪ್ತಿಯಲ್ಲಿದೆ” ಎಂದು ಅಫಿಡವಿಟ್ ಹೇಳಿದೆ. “ಸೂಕ್ತ ಸಮಯದವರೆಗೆ ದಂಡದ ಕಾರ್ಯಾಚರಣೆ, ಪ್ರತಿರೋಧವನ್ನು ಖಚಿತಪಡಿಸಲಾಯಿತು ಮತ್ತು ಅನಗತ್ಯ ಕಠಿಣತೆಯನ್ನು ತಪ್ಪಿಸಲಾಗಿದೆ ಎಂದಿದೆ. ದಂಡದ ಪರಿಣಾಮವನ್ನು ಕಾಲದಿಂದ ಮಿತಿಗೊಳಿಸುವುದರಲ್ಲಿ ಅಂತರ್ಗತವಾಗಿ ಅಸಂವಿಧಾನಿಕವಾದುದು ಏನೂ ಇಲ್ಲ. ದಂಡಗಳನ್ನು…

Read More

ನವದೆಹಲಿ: ಗೇನ್‌ಬಿಟ್‌ಕಾಯಿನ್ ಹಗರಣದಲ್ಲಿ ಸಿಬಿಐ 23.94 ಕೋಟಿ ರೂಪಾಯಿ ಮೌಲ್ಯದ ಕ್ರಿಪ್ಟೋಕರೆನ್ಸಿಗಳನ್ನು ವಶಕ್ಕೆ ಪಡಿಸಿಕೊಂಡಿದೆ. ಗೇನ್‌ಬಿಟ್‌ಕಾಯಿನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಫೆಬ್ರವರಿ 25 ಮತ್ತು 26, 2025 ರಂದು ದೇಶಾದ್ಯಂತ ನಡೆಸಿದ ಶೋಧಗಳ ನಂತರ, ಕೇಂದ್ರೀಯ ತನಿಖಾ ದಳ (ಸಿಬಿಐ), ಆಂತರಿಕ ಸಾಮರ್ಥ್ಯಗಳನ್ನು ಬಳಸಿಕೊಂಡು, ಗಮನಾರ್ಹವಾದ ಅಪರಾಧ ಸಾಕ್ಷ್ಯಗಳು ಮತ್ತು ವರ್ಚುವಲ್ ಡಿಜಿಟಲ್ ಸ್ವತ್ತುಗಳನ್ನು ವಶಪಡಿಸಿಕೊಂಡಿದೆ, ಇದು ಕ್ರಿಪ್ಟೋಕರೆನ್ಸಿ ವಂಚನೆಯ ವ್ಯಾಪ್ತಿಯನ್ನು ಮತ್ತಷ್ಟು ಬಹಿರಂಗಪಡಿಸಿದೆ. ಹಿನ್ನೆಲೆ: ಗೇನ್‌ಬಿಟ್‌ಕಾಯಿನ್ ಹಗರಣದ ತನಿಖೆಯ ಭಾಗವಾಗಿ ನಿನ್ನೆ, ಸಿಬಿಐ ದೆಹಲಿ, ಪುಣೆ, ನಾಂದೇಡ್, ಕೊಲ್ಹಾಪುರ, ಮುಂಬೈ, ಬೆಂಗಳೂರು, ಚಂಡೀಗಢ, ಮೊಹಾಲಿ, ಝಾನ್ಸಿ ಮತ್ತು ಹುಬ್ಬಳ್ಳಿ ಸೇರಿದಂತೆ ಪ್ರಮುಖ ನಗರಗಳಲ್ಲಿ 60 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿತು. ಅಮಿತ್ ಭಾರದ್ವಾಜ್ (ಮೃತ) ಮತ್ತು ಅಜಯ್ ಭಾರದ್ವಾಜ್ ಮತ್ತು ಇತರರು 2015 ರಲ್ಲಿ ಪ್ರಾರಂಭಿಸಿದ ಈ ವಂಚನೆಯ ಯೋಜನೆಯನ್ನು ಹೂಡಿಕೆದಾರರಿಗೆ 18 ತಿಂಗಳವರೆಗೆ ಬಿಟ್‌ಕಾಯಿನ್ ಹೂಡಿಕೆಗಳ ಮೇಲೆ 10% ಮಾಸಿಕ ಲಾಭವನ್ನು ನೀಡುವ ಭರವಸೆ ನೀಡಿದ್ದರು. ಈ ಯೋಜನೆಯು…

Read More

ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದಂತ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸದನದಲ್ಲಿ ವಿಷಯ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು. ಕಳೆದ ಮೂರು ದಿನಗಳಿಂದ ತಮ್ಮ ಹುದ್ದೆ ಖಾಯಂ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ಸೇವಾ ಭದ್ರತೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುತ್ತಿದೆ. ಇಂದಿಗೆ ಎನ್ ಹೆಚ್ ಎಂ ಗುತ್ತಿಗೆ ನೌಕರರ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದು ಪ್ರತಿಭಟನಾ ಸ್ಥಳಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಭೇಟಿ ನೀಡಿ, ನೌಕರರ ಸಮಸ್ಯೆ ಆಲಿಸಿದರು. ಅಲ್ಲದೇ ಮುಂಬರುವಂತೆ ವಿಧಾನಮಂಡಲದ ಅಧಿವೇಶನದಲ್ಲಿ ಗುತ್ತಿಗೆ ನೌಕರರ ಬೇಡಿಕೆ ಈಡೇರಿಕೆ ಕುರಿತಂತೆ ಚರ್ಚಿಸುವುದಾಗಿ ಭರವಸೆ ನೀಡಿದರು. https://kannadanewsnow.com/kannada/have-you-passed-ssp-apply-for-21413-posts-in-department-of-posts-last-date-for-march-3/ https://kannadanewsnow.com/kannada/big-news-cm-siddaramaiah-to-launch-3-day-hampi-utsav-from-feb-28/

Read More

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂಡಿಯಾ ಪೋಸ್ಟ್‌ನಲ್ಲಿ ಬೃಹತ್ ಉದ್ಯೋಗ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ದೇಶಾದ್ಯಂತ 21,413 ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳನ್ನು ಭರ್ತಿ ಮಾಡಲಾಗುವುದು. 10ನೇ ತರಗತಿ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವವರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸೈಕಲ್ ಅಥವಾ ಸ್ಕೂಟರ್ ಓಡಿಸುವ ಸಾಮರ್ಥ್ಯ ಹೊಂದಿರಬೇಕು. 10 ನೇ ತರಗತಿ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಮಾರ್ಚ್ 3 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಡಾಕ್ ಸೇವಕರ ಅಡಿಯಲ್ಲಿ ಶಾಖಾ ಪೋಸ್ಟ್ ಮಾಸ್ಟರ್, ಸಹಾಯಕ ಶಾಖಾ ಪೋಸ್ಟ್ ಮಾಸ್ಟರ್ ಮತ್ತು ಡಾಕ್ ಸೇವಕರನ್ನು ನೇಮಿಸಲಾಗುವುದು. ಅರ್ಜಿ ಶುಲ್ಕ ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ವರ್ಗಗಳಿಗೆ: ರೂ. 100 (100) SC/ST/PWD/ಮಹಿಳಾ ಅಭ್ಯರ್ಥಿಗಳು/ಟ್ರಾನ್ಸ್ ಮಹಿಳೆಯರು – ಯಾವುದೇ ಶುಲ್ಕವಿಲ್ಲ. ಪ್ರಮುಖ ದಿನಾಂಕಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10-02-2025 ಆನ್‌ಲೈನ್‌ನಲ್ಲಿ…

Read More

ನವದೆಹಲಿ: ಕಳೆದ 10 ವರ್ಷಗಳಲ್ಲಿ ನ್ಯಾಯಾಲಯ ಪ್ರಕರಣಗಳನ್ನು ಎದುರಿಸಲು ಸರ್ಕಾರ 400 ಕೋಟಿ ರೂ.ಗಿಂತ ಹೆಚ್ಚು ಖರ್ಚು ಮಾಡಿದೆ ಎಂದು ಅಧಿಕೃತ ಅಂಕಿ ಅಂಶಗಳು ತಿಳಿಸಿವೆ. 2023-24ರ ಹಣಕಾಸು ವರ್ಷದಲ್ಲಿ ದಾವೆಗಳಿಗಾಗಿ ಕೇಂದ್ರ ಸರ್ಕಾರ ಮಾಡಿದ 66 ಕೋಟಿ ರೂ.ಗಳ ವೆಚ್ಚವು ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ 9 ಕೋಟಿ ರೂ.ಗಿಂತ ಹೆಚ್ಚಾಗಿದೆ. ಕೋವಿಡ್ ಸಾಂಕ್ರಾಮಿಕ ರೋಗವು ಉತ್ತುಂಗದಲ್ಲಿದ್ದ ಎರಡು ಹಣಕಾಸು ವರ್ಷಗಳನ್ನು ಹೊರತುಪಡಿಸಿ, 2014-15 ರಿಂದ ದಾವೆಗಳಿಗೆ ಮಾಡಿದ ಮೊತ್ತವು ಹೆಚ್ಚಾಗಿದೆ ಎಂದು ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರವಾಗಿ ಸರ್ಕಾರ ಲೋಕಸಭೆಯಲ್ಲಿ ಹಂಚಿಕೊಂಡ ಅಂಕಿಅಂಶಗಳು ತಿಳಿಸಿವೆ. 2014-15ರಲ್ಲಿ ದಾವೆಗಳಿಗೆ 26.64 ಕೋಟಿ ರೂ., 2015-16ರಲ್ಲಿ 37.43 ಕೋಟಿ ರೂ. 2014-15 ಮತ್ತು 2023-24ರ ಹಣಕಾಸು ವರ್ಷಗಳ ನಡುವೆ ಸರ್ಕಾರವು ದಾವೆಗಳಿಗಾಗಿ 409 ಕೋಟಿ ರೂ.ಗಿಂತ ಹೆಚ್ಚು ಖರ್ಚು ಮಾಡಿದೆ. ಬಾಕಿ ಇರುವ ಪ್ರಕರಣಗಳ ಪರಿಹಾರವನ್ನು ತ್ವರಿತಗೊಳಿಸಲು ಪ್ರಯತ್ನಿಸುವ ರಾಷ್ಟ್ರೀಯ ದಾವೆ ನೀತಿಯನ್ನು ಸರ್ಕಾರ ರೂಪಿಸುತ್ತಿದೆ. ಪ್ರಸ್ತಾವಿತ ನೀತಿಯ…

Read More

ಕಲಬುರ್ಗಿ: ಮಹಾ ಶಿವರಾತ್ರಿಯ ದಿನವಾದಂತ ಇಂದೇ ಕಲಬುರ್ಗಿಯ ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಕೋರ್ಟ್ ಅನುಮತಿ ನೀಡಿತ್ತು. ಅದರಂತೆ ಶಿವರಾತ್ರಿಯ ದಿನವಾದಂತ ಇಂದು ಅಳಂದದ ಲಾಡ್ಲೇ ಮಶಾಕ್ ದರ್ಗಾದಲ್ಲಿರುವಂತ ಶಿವಲಿಂಗಕ್ಕೆ ಪೂಜೆಯನ್ನು ಸಲ್ಲಿಸಲಾಯಿತು. ಕಲಬುರ್ಗಿಯ ಅಳಂದ ಪಟ್ಟಣದಲ್ಲಿರುವಂತ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿರುವಂತ ಶಿವಲಿಂಗಕ್ಕೆ ಪೂಜೆ ಸಲ್ಲಿಕೆಗೆ ಹೈಕೋರ್ಟ್ ಅನುಮತಿ ನೀಡಿತ್ತು. ರಾಘವ ಚೈತನ್ಯ ಅವರಿಂದ ಪೂಜೆ ನೆರವೇರಿಸುವುದಕ್ಕೆ ಅನುಮತಿ ನೀಡಿತ್ತು. ಅದರಂತೆ ಇಂದು ರಾಘವ ಚೈತನ್ಯ ಅವರು ಲಾಡ್ಲೆ ಮಶಾಕ್ ದರ್ಗಾದಲ್ಲಿರುವಂತ ಶಿವಲಿಂಗಕ್ಕೆ ಪೂಜೆ ಸಲ್ಲಿಸಿದರು. ಅಂದಹಾಗೇ ಅಳಂದದಲ್ಲಿರುವಂತ ಲಾಡ್ಲೆ ಮಶಾಕ್ ದರ್ಗಾದಲ್ಲಿ ಸುಮಾರು 400 ವರ್ಷಗಳ ಪೂರಾತನ ಶಿವಲಿಂಗ ಇರುವುದು ತಿಳಿದು ಬಂದಿತ್ತು. ಈ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಕೋರ್ಟ್ ಮೆಟ್ಟಿಲೇರಲಾಗಿತ್ತು. ನಿನ್ನೆ ಕೋರ್ಟ್ ಅನುಮತಿ ನೀಡಿದ್ದರಿಂದ ಇಂದು ಪೂಜೆ ಸಲ್ಲಿಸಲಾಗಿದೆ. https://kannadanewsnow.com/kannada/son-in-law-sets-mother-in-law-on-fire-and-burns-himself-to-death/ https://kannadanewsnow.com/kannada/big-news-cm-siddaramaiah-to-launch-3-day-hampi-utsav-from-feb-28/

Read More