Author: kannadanewsnow09

ನವದೆಹಲಿ: ಭಾರತ ಮತ್ತು ಯುರೋಪಿಯನ್ ಮುಕ್ತ ವ್ಯಾಪಾರ ಸಂಘ (EFTA) ವ್ಯಾಪಾರ ಮತ್ತು ಆರ್ಥಿಕ ಪಾಲುದಾರಿಕೆ ಒಪ್ಪಂದಕ್ಕೆ (TEPA) ಸಹಿ ಹಾಕಿವೆ. ಈ ವ್ಯಾಪಾರ ಒಪ್ಪಂದವು ಅಕ್ಟೋಬರ್ 1, 2025 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಶನಿವಾರ ಘೋಷಿಸಿದರು. ಮಾರ್ಚ್ 10, 2024 ರಂದು ಸಹಿ ಹಾಕಲಾದ ಈ ಒಪ್ಪಂದವು EFTA ಸದಸ್ಯ ರಾಷ್ಟ್ರಗಳಾದ ಐಸ್ಲ್ಯಾಂಡ್, ಲಿಚ್ಟೆನ್‌ಸ್ಟೈನ್, ನಾರ್ವೆ ಮತ್ತು ಸ್ವಿಟ್ಜರ್‌ಲ್ಯಾಂಡ್ ಅನ್ನು ಒಳಗೊಂಡಿದೆ ಮತ್ತು ವಿದೇಶಿ ಹೂಡಿಕೆ ಮತ್ತು ದ್ವಿಪಕ್ಷೀಯ ವ್ಯಾಪಾರದ ಪ್ರಮುಖ ಚಾಲಕವಾಗುವ ನಿರೀಕ್ಷೆಯಿದೆ ಎಂದು ಪಿಟಿಐ ವರದಿ ಮಾಡಿದೆ. ಒಪ್ಪಂದದ ಮಹತ್ವವನ್ನು ಎತ್ತಿ ತೋರಿಸುತ್ತಾ, ಸುಗಮವಾದ ಹೊರಹೊಮ್ಮುವಿಕೆ ಮತ್ತು ಪರಿಣಾಮಕಾರಿ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ಮೀಸಲಾದ ಭಾರತ-EFTA ಡೆಸ್ಕ್ ಅನ್ನು ಈಗ ಸ್ಥಾಪಿಸಲಾಗಿದೆ ಎಂದು ಸಚಿವ ಗೋಯಲ್ ಗಮನಿಸಿದರು. EFTA-ಆಧಾರಿತ ಹೂಡಿಕೆದಾರರು ಭಾರತೀಯ ಮಾರುಕಟ್ಟೆಗಳೊಂದಿಗೆ ತೊಡಗಿಸಿಕೊಳ್ಳಲು ಸುಲಭವಾಗುವಂತೆ ಮಾಡುವ ಗುರಿಯನ್ನು ಹೊಂದಿರುವ ಸಾರ್ವಜನಿಕ ಮತ್ತು ಖಾಸಗಿ ವಲಯದ ಪಾಲುದಾರರಿಗೆ ಏಕ-ವಿಂಡೋ ಸೌಲಭ್ಯ…

Read More

ಪ್ರಾಮಾಣಿಕವಾಗಿ ತನ್ನ ವೃತ್ತಿ ಅಥವಾ ವ್ಯಾಪಾರ ಮಾಡುತ್ತಾ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಹತ್ತಿ ಮೇಲೆ ಬರುತ್ತಾ ಯಶಸ್ಸು ಕಂಡು ಜೀವನದಲ್ಲಿ ಇನ್ನೇನು ಸುಖವನ್ನು ಕಾಣಬೇಕು, ಹಣ ಸಂಪಾದಿಸಬೇಕು ಅಥವಾಕೀರ್ತಿಯನ್ನು ಪಡೆಯಬೇಕು ಎನ್ನುವಾಗ ಮನುಷ್ಯನಿಗೆ ಬಡಿದೆಬ್ಬಿಸಿ ನೆಲಕ್ಕುರುಳಿಸುವ ಅಪಾಯವೇ ವಾಮಾಚಾರ. ಹೆಸರೇ ಸೂಚಿಸುವಂತೆ ಇದು ವಾಮಮಾರ್ಗ, ನಮ್ಮ ಮುಂದೆ ಬಂದು ನ್ಯಾಯಮಾರ್ಗದಲ್ಲಿ ನಮ್ಮನ್ನೆದುರಿಸಿ ಸಾಧಿಸಲಾಗದವರು ನಮಗೆ ತಿಳಿಯದಂತೆ ಕೆಟ್ಟ ಹಾಗೂ ದುಷ್ಟ ಶಕ್ತಿಗಳನ್ನು ನಮ್ಮ ಮೇಲೆ ಪ್ರಯೋಗಿಸಿ ನಮ್ಮ ಪತನಕ್ಕಾಗಿ ಕಾದು ಕೂರುತ್ತಾರೆ. ಇಲ್ಲಿ ಗಮನಿಸಬೇಕಾದ ವಿಷಯವೆಂದರೆ ಈ ತರಹದ ವಾಮಾಚಾರವನ್ನು ನಾವುನಂಬದೇ ಇರುವುದು ಹಾಗೂ ಈ ವಿಚಾರದಲ್ಲಿ ನಾವು ತೋರಿಸುವ ಅತೀ ಹುಂಬ ಧೈರ್ಯವೇ ಅವರ ಪಾಲಿಗೆ ವರವಾಗಿ ವಾಮಾಚಾರ ಮಾಡುವವರಿಗೆ ಕಾರ್ಯ ಸುಲಭ ಸಾಧ್ಯವಾಗುತ್ತದೆ. ದೇವರನ್ನು ನಂಬುವ ನಾವು ಕೃತ್ರಿಯ ಮಾಟ ಮಂತ್ರಗಳನ್ನು ನಂಬುವುದಿಲ್ಲ ಎಂದರೆ ನಾವು ಬೆಳಕನ್ನು ಮಾತ್ರ ನಂಬುತ್ತೇವೆ, ಕತ್ತಲನ್ನು ನಂಬುವುದಿಲ್ಲ.  ಕತ್ತಲಅಸ್ತಿತ್ವ ಸುಳ್ಳು ಎಂಬಷ್ಟೇ ಹಾಸ್ಯಾಸ್ಪದವಾಗುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್…

Read More

ಮೈಸೂರು: ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸದಾ ಬದ್ಧವಾಗಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಕರ್ತವ್ಯನಿರತ ವೇಳೆ ಪ್ರಾಣ ಕಳೆದುಕೊಂಡ ಕಿರಿಯ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರದ ಚೆಕ್ ವಿತರಿಸಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಸರ್ಕಾರದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶುಂಕುಸ್ಥಾಪನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಕೆ.ಜಾರ್ಜ್ ಅವರು ಇತ್ತೀಚೆಗೆ ಕರ್ತವ್ಯನಿರತದ ವೇಳೆ ಪ್ರಾಣಕಳೆದುಕೊಂಡು ಸೆಸ್ಕ್ ವ್ಯಾಪ್ತಿಯ ಪಾಂಡವಪುರ ಉಪ ವಿಭಾಗದ ಕಿರಿಯ ಪವರ್ ಮ್ಯಾನ್ ಮಹೇಶ್ (27 ವರ್ಷ) ಅವರ ಕುಟುಂಬಕ್ಕೆ 1.06 ಕೋಟಿ ರೂ.ಗಳ ಪರಿಹಾರದ ಚೆಕ್ ವಿತರಿಸಿದರು. ಮೃತ ಪವರ್ ಮ್ಯಾನ್ ಮಹೇಶ್ ಅವರ ತಂದೆ ಬೋರೇಗೌಡ ಅವರು ಪರಿಹಾರದ ಚೆಕ್ ಸ್ವೀಕರಿಸಿದರು. ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರೂ ಆಗಿರುವ ರಾಜ್ಯಸಭೆಯ ಪ್ರತಿಪಕ್ಷ‌ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ…

Read More

ಬೆಂಗಳೂರು: ರಾಜ್ ಸರ್ಕಾರವು ಗ್ರೇಟರ್ ಬೆಂಗಳೂರು ಐದು ವಿಭಾಗಗಳಾಗಿ ವಿಂಗಡಣೆ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಅಡಿಯಲ್ಲಿ ಐದು ನಗರ ಪಾಲಿಕೆ ಮಾಡಿ ಆದೇಶಿಸಿದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ, 2024ರ(2025ರ ಕರ್ನಾಟಕ ಕಾಯ್ದೆ ಸಂಖ್ಯೆ 36) ಪ್ರಕರಣ 5ರ ಉಪ ಪ್ರಕರಣ(1) ಮತ್ತು ಪ್ರಕರಣ 7ರ ಉಪ ಪ್ರಕರಣ(1) ರಡಿಯಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಜನಸಂಖ್ಯೆ ವಿಸ್ತೀರ್ಣ, ಜನಸಂಖ್ಯಾ ಸಾಂದ್ರತೆ, ಉತ್ಪತ್ತಿಯಾಗುವ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗದ ಶೇಕಡಾವಾರು, ಆರ್ಥಿಕ ಪ್ರಾಮುಖ್ಯತೆ, ಪ್ರದೇಶದಲ್ಲಿ ಲಭ್ಯವಿರುವ ಮೂಲಸೌಕರ್ಯ ಸೌಲಭ್ಯಗಳು ಮತ್ತು ಸದರಿ ಅಧಿನಿಯಮದ ಪ್ರಕರಣ 5ರ ಉಪ ಪ್ರಕರಣ(1)ರ ಎರಡನೇ ಪರಂತುಕದಲ್ಲಿ ನಿಗದಿಪಡಿಸಲಾದ ಷರತ್ತುಗಳನ್ನು ಪೂರೈಸಿದ ಅನ್ವಯ, ಕರ್ನಾಟಕ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ 5 ಸಂಖ್ಯೆಯ ನಗರ ಪಾಲಿಕೆಗಳನ್ನು ಸ್ಥಾಪಿಸಲು ಪ್ರಸ್ತಾಪಿಸಿದೆ. ನಿರ್ದಿಷ್ಟಪಡಿಸಿದ ಗಡಿಗಳ ವಿವರಗಳನ್ನು ಅನುಸೂಚಿ-01 ರಲ್ಲಿ ಪ್ರಕಟಿಸಿದೆ. 5 ನಗರ ಪಾಲಿಕೆಗಳ ಹೆಸರು: 1. ಬೆಂಗಳೂರು ಪಶ್ಚಿಮ ನಗರ ಪಾಲಿಕೆ…

Read More

ಬೆಂಗಳೂರು : ಭೂ ಸ್ವಾಧೀನ ಪ್ರಕ್ರಿಯೆ ವಿಚಾರದಲ್ಲಿ ಕೆಲ ಅಧಿಕಾರಿಗಳ ಬೇಜವ್ದಾರಿ ತನ ಹಾಗೂ ಅವೈಜ್ಞಾನಿಕ ನೀತಿಯಿಂದ ಸರ್ಕಾರದ ಬೊಕ್ಕಸಕ್ಕೆ ಅಪಾರ ನಷ್ಟ ಉಂಟಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬೇಸರ ವ್ಯಕ್ತಪಡಿಸಿದರು. ನಗರದ ಸೆಂಟ್ರಲ್ ಕಾಲೇಜು ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿ ಗಳಿಗೆ ಶನಿವಾರ ಏರ್ಪಡಿಸಿದ್ದ “ಭೂ ಸ್ವಾಧೀನ ಹಾಗೂ ನ್ಯಾಯಾಲಯ ಪ್ರಕರಣಗಳ ವ್ಯವಹರಣೆ” ಕುರಿತ ವಿಶೇಷ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. “ಭೂ ಸ್ವಾಧೀನ ಹಾಗೂ ಜಮೀನು ಮಾಲೀಕರಿಗೆ ಪರಿಹಾರ ನೀಡುವ ವಿಚಾರದಲ್ಲಿ ರಾಜ್ಯದಲ್ಲಿ ಬಹಳ ಹಿಂದಿನಿಂದಲೂ ಭಾರೀ ತಪ್ಪುಗಳು ನಡೆಯುತ್ತಲೇ ಇವೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ನಷ್ಟ ಉಂಟಾಗುತ್ತಿದೆ” ಎಂದು ವಿಷಾದಿಸಿದರು. “ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಜಮೀನು ಮಾಲೀಕರಿಗೆ 2017ರ ಪರಿಷ್ಕೃತ ದರದ ಪರಿಹಾರ ನೀಡಬೇಕಾದ ಪ್ರಕರಣದಲ್ಲಿ ಕೆಲ ಅಧಿಕಾರಿಗಳು 2023ರ ಪರಿಷ್ಕೃತ ದರ ನೀಡಿದ್ದಾರೆ. ಎಲ್ಲಾ ಸರ್ವೇ ನಂಬರ್ಗಳ ನೀರಾವರಿ ಮತ್ತು ಖುಷ್ಕಿ ಜಮೀನುಗಳಿಗೆ ನಿಯಮ ಮೀರಿ ಒಂದೇ ದರ ನಿಗದಿ ಮಾಡಲಾಗಿದೆ.…

Read More

ಬೆಂಗಳೂರು: ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಹತ್ಯೆ ಪ್ರಕರಣದಲ್ಲಿ ನನ್ನದು ಯಾವುದೇ ಪಾತ್ರವಿಲ್ಲ. ಪೊಲೀಸರು ಕೇಳಿದಂತ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿರುವುದಾಗಿ ಶಾಸಕ ಭೈರತಿ ಬಸವರಾಜ್ ಮೊದಲ ಬಾರಿಗೆ ಸ್ಪಷ್ಟ ಪಡಿಸಿದ್ದಾರೆ. ಇಂದು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೀಡಿದ್ದಂತ ನೋಟಿಸ್ ಹಿನ್ನಲೆಯಲ್ಲಿ ವಿಚಾರಣೆಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಎಸಿಪಿ ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನನ್ನದು ಯಾವುದೇ ಪಾತ್ರವಿಲ್ಲ ಎಂದರು. ನಾನು ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ತನಿಖೆಗೆ ಕರೆದಿದ್ದಕ್ಕೆ ಬಂದಿದ್ದೆ. ನನ್ನ ಪಾತ್ರ ಇಲ್ಲವೆಂದು ಹೇಳಿರುವೆ. ಜುಲೈ.23ಕ್ಕೆ ಮತ್ತೆ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ. ಬರುತ್ತೆನೆ. ನನಗೆ ಯಾವ ಜಗದೀಶ್ ಪರಿಚಯ ಇಲ್ಲ. ಗೊತ್ತಿಲ್ಲ ಎಂಬುದಾಗಿ ಭಾರತೀ ನಗರ ಪೊಲೀಸ್ ಠಾಣೆಯ ಬಳಿಯಲ್ಲಿ ವಿಚಾರಣೆ ಬಳಿಕ ಶಾಸಕ ಭೈರತಿ ಬಸವರಾಜ್ ಸ್ಪಷ್ಟ ಪಡಿಸಿದರು. https://kannadanewsnow.com/kannada/shock-for-those-collecting-waste-in-vacant-plots-in-bangalore-bbmp-fines-the-owners/ https://kannadanewsnow.com/kannada/payment-failed-in-gpay-phonepe-paytm-money-was-deducted-follow-these-steps-the-account-will-be-credited-back/

Read More

ಬೆಂಗಳೂರು: ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದಲ್ಲಿ ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೂರ್ವ ವಲಯ ಆಯುಕ್ತರ ಕಛೇರಿಯಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆಯ ಅಹವಾಲಿನ ಕಾರ್ಯಕ್ರಮದಲ್ಲಿ ಇಂದು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ ಹೆಚ್.ಆರ್.ಬಿ.ಆರ್ ಲೇಔಟ್ ನ ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಹಾಗೂ ಕಟ್ಟಡ ಭಗ್ನಾವಶೇಷಗಳ ಸಂಗ್ರಹದಿಂದಾಗಿ ನೆರೆಹೊರೆಯವರಿಗೆ ತೊಂದರೆಯಾಗುತ್ತಿರುವುದರ ಕುರಿತು ಅಹವಾಲು ಸಲ್ಲಿಸಿದರು. ಅಹವಾಲಿಗೆ ಪ್ರತಿಕ್ರಿಯಿಸಿದ ವಲಯ ಆಯುಕ್ತರು ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಹಾಗೂ ಕಟ್ಟಡ ಭಗ್ನಾವಶೇಷ ಸಂಗ್ರಹವಾದಲ್ಲಿ ನಾಗರಿಕರಿಗೆ ತೊಂದರೆಯಾದಂತಹ ಸಂದರ್ಭದಲ್ಲಿ ಅಂತಹ ಖಾಲಿ ನಿವೇಶನಗಳ ಮಾಲೀಕರಿಗೆ ನೋಟಿಸ್ ನೀಡಿ, ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಮಶಾನ ಭೂಮಿಯ ದುರಸ್ತಿಗೆ ಸೂಚನೆ: ಕೆ.ಎಸ್.ಎಫ್.ಸಿ ಲೇ ಔಟ್ ನ ಸ್ಮಶಾನ ಭೂಮಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು, ಸದರಿ ಸ್ಥಳದ ದುರಸ್ತಿ ಕಾರ್ಯ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಸ್ವಚ್ಛತಾ ಅಭಿಯಾನ ಕೈಗೊಳ್ಳಲು…

Read More

ಬೆಂಗಳೂರು: ಗ್ರೇಟರ್ ಬೆಂಗಳೂರು ಕಾಯ್ದೆ ಅಡಿ 5 ನಗರ ಪಾಲಿಕೆಗಳ ಸ್ಥಾಪನೆ ಮಾಡಲಾಗಿದೆ. ಅಲ್ಲದೇ ನಾಗರಿಕರಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳ ಆಹ್ವಾನವನ್ನು ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿ ಕೋರಿದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ, 2024ರ(2025ರ ಕರ್ನಾಟಕ ಕಾಯ್ದೆ ಸಂಖ್ಯೆ 36) ಪ್ರಕರಣ 5ರ ಉಪ ಪ್ರಕರಣ(1) ಮತ್ತು ಪ್ರಕರಣ 7ರ ಉಪ ಪ್ರಕರಣ(1) ರಡಿಯಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಜನಸಂಖ್ಯೆ ವಿಸ್ತೀರ್ಣ, ಜನಸಂಖ್ಯಾ ಸಾಂದ್ರತೆ, ಉತ್ಪತ್ತಿಯಾಗುವ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗದ ಶೇಕಡಾವಾರು, ಆರ್ಥಿಕ ಪ್ರಾಮುಖ್ಯತೆ, ಪ್ರದೇಶದಲ್ಲಿ ಲಭ್ಯವಿರುವ ಮೂಲಸೌಕರ್ಯ ಸೌಲಭ್ಯಗಳು ಮತ್ತು ಸದರಿ ಅಧಿನಿಯಮದ ಪ್ರಕರಣ 5ರ ಉಪ ಪ್ರಕರಣ(1)ರ ಎರಡನೇ ಪರಂತುಕದಲ್ಲಿ ನಿಗದಿಪಡಿಸಲಾದ ಷರತ್ತುಗಳನ್ನು ಪೂರೈಸಿದ ಅನ್ವಯ, ಕರ್ನಾಟಕ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ 5 ಸಂಖ್ಯೆಯ ನಗರ ಪಾಲಿಕೆಗಳನ್ನು ಸ್ಥಾಪಿಸಲು ಪ್ರಸ್ತಾಪಿಸಿದೆ. ನಿರ್ದಿಷ್ಟಪಡಿಸಿದ ಗಡಿಗಳ ವಿವರಗಳನ್ನು ಅನುಸೂಚಿ-01 ರಲ್ಲಿ ಪ್ರಕಟಿಸಿದೆ. 5 ನಗರ ಪಾಲಿಕೆಗಳ ಹೆಸರು: 1. ಬೆಂಗಳೂರು ಪಶ್ಚಿಮ ನಗರ ಪಾಲಿಕೆ 2. ಬೆಂಗಳೂರು…

Read More

ಮೈಸೂರು: ರಾಜ್ಯ ಸರ್ಕಾರಿ ನೌಕರರು ಜಾತಿ-ಧರ್ಮ‌ ಮಾಡೋಕೆ ಹೋಗಬಾರದು. ಪ್ರತಿಭೆ ಯಾರ ಸೊತ್ತೂ ಅಲ್ಲ. ಅವಕಾಶ ಸಿಕ್ಕರೆ ಪ್ರತಿಭೆ ಹೊರಗೆ ಬರತ್ತದೆ. ಸರ್ಕಾರಿ ನೌಕರರಿಗೆ OPS ಜಾರಿ ಬಗ್ಗೆ ಸಮಿತಿ ವರದಿ ಬಂದ ಬಳಿಕ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ಒಪಿಎಸ್ ಜಾರಿ ನಿರೀಕ್ಷೆಯಲ್ಲಿದ್ದಂತ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳದಿದ್ದರೆ ಯಾರನ್ನೂ ದೂರಲು ಸಾಧ್ಯವಿಲ್ಲ ಎಂದರು. ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ನಿಮ್ಮ ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ. ಅಪ್ಪ ಅಮ್ಮ ಖರ್ಚು ಮಾಡಿದ ಹಣದಲ್ಲಿ ನೀವೆಲ್ಲಾ ಸರ್ಕಾರಿ ನೌಕರರಾಗಲು ಸಾಧ್ಯವಿಲ್ಲ. ನಾವು ಶಾಸಕರಾಗಲು,…

Read More

ಚಾಮರಾಜನಗರ: ಜಿಲ್ಲೆಯಲ್ಲಿ ಹೆತ್ತ ಮಗುವನ್ನೇ ಕಲ್ಲು ಹೃದಯದ ತಾಯಿಯೊಬ್ಬಳು ಬೇಲಿಗೆ ಪಂಚೆಯಲ್ಲಿ ಸುತ್ತಿ ಎಸೆದಿರುವಂತ ಘಟನೆ ನಡೆದಿದೆ. ಹೆಣ್ಣು ಮಗುವನ್ನು ಕಂಡು ಪೊಲೀಸರಿದೆ ಜನರು ಮಾಹಿತಿ ನೀಡಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಸಾಗಡೆ ಮತ್ತು ತಮ್ಮಡಹಳ್ಳಿ ಮಾರ್ಗ ಮಧ್ಯದ ರಸ್ತೆ ಬದಿಯಲ್ಲಿ 10 ರಿಂದ 15 ದಿನದ ನವಜಾತ ಹೆಣ್ಣು ಶಿಶುವೊಂದನ್ನು ಪಂಚೆಯಲ್ಲಿ ಸುತ್ತಿಟ್ಟು ಹೋಗಿರುವಂತ ಘಟನೆ ನಡೆದಿದೆ. ಈ ಬಗ್ಗೆ ಸ್ಥಳೀಯರಾದಂತ ಪರಮೇಶ್ ಎಂಬುವರು ದಾರಿಯ ಪಕ್ಕದ ಮಗು ಕಂಡು ಕೂಡಲೇ ಸಾಗಡೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಅಂಗನವಾಡಿ ಕಾರ್ಯಕರ್ತೆ ಭೇಟಿ ನೀಡಿ, ಚಾಮರಾಜನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿದೆ. ಸದ್ಯ ಮಗುವನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನವಜಾತ ಶಿಶುವನ್ನು ರಸ್ತೆಯಲ್ಲಿ ಬಿಸಾಡಿ ಹೋದ ಘಟನೆ ತಿಳಿದು ಆಸ್ಪತ್ರೆಗೆ ಹತ್ತಾರು ಜನರು ಭೇಟಿ ನೀಡಿ ಮರುಕ ವ್ಯಕ್ತ ಪಡಿಸಿದ್ದಾರೆ. https://kannadanewsnow.com/kannada/a-person-caught-fire-due-to-a-burnt-piece-of-cigarette-that-he-himself-had-thrown-leading-to-a-live-cremation/ https://kannadanewsnow.com/kannada/payment-failed-in-gpay-phonepe-paytm-money-was-deducted-follow-these-steps-the-account-will-be-credited-back/

Read More