Author: kannadanewsnow09

ಬೆಂಗಳೂರು: “ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಹೇಳಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ದೆಹಲಿ ಪ್ರವಾಸದ ಬಗ್ಗೆ ಮಾಧ್ಯಮಗಳು ಕೇಳಿದಾಗ, “ದೆಹಲಿ ಪ್ರವಾಸದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಸಂಬಂಧ ಅಧಿಸೂಚನೆ ಹೊರಡಿಸುವುದು, ಮೆಕೆದಾಟು ಯೋಜನೆ ಅಪ್ರೈಸಲ್ ವರದಿ ಬಗ್ಗೆ ಚರ್ಚಿಸಲಾಗಿದೆ. ಅರಣ್ಯ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಕಳಸಾ ಬಂಡೂರಿ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಈ ವಿಚಾರವಾಗಿ ಪ್ರಹ್ಲಾದ್ ಜೋಷಿ ಅವರ ಜತೆಗೂ ಮಾತನಾಡಿದ್ದೇನೆ. ಎರಡು ರಾಜ್ಯಗಳ ನಡುವೆ ರಾಜಿಗೆ ಸಲಹೆ ನೀಡಿದ್ದಾರೆ. ನಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ವಿಚಾರದಲ್ಲಿ ಕೆಲವು ತಾಂತ್ರಿಕ ಅಂಶಗಳಿವೆ. ಗೋವಾ ದವರು ನಮಗೆ ಶೋಕಾಸ್ ನೋಟೀಸ್ ನೀಡಿರುವುದು…

Read More

ಬೆಂಗಳೂರು: ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ (ಎಎಂ/ಎನ್ಎಸ್ ಇಂಡಿಯಾ) ಇಂದು ಕರ್ನಾಟಕದಲ್ಲಿ ತನ್ನ ಪ್ರೀಮಿಯಂ ಬಣ್ಣ-ಲೇಪಿತ ಉಕ್ಕಿನ ಪೋರ್ಟ್‌ಫೋಲಿಯೊ ಆಪ್ಟಿಗಲ್® ನಲ್ಲಿ ಎರಡು ವಿಶ್ವ ದರ್ಜೆಯ, ಉನ್ನತ-ಕಾರ್ಯಕ್ಷಮತೆಯ ಉತ್ಪನ್ನಗಳಾದ ಆಪ್ಟಿಗಲ್® ಪ್ರೈಮ್ ಮತ್ತು ಆಪ್ಟಿಗಲ್® ಪಿನ್ನಾಕಲ್‌ ಗಳು ಮಾರುಕಟ್ಟೆಗೆ ಪ್ರವೇಶಿಸಿವೆ. ಕರ್ನಾಟಕದ ಭೌಗೋಳಿಕತೆ ವಿಶಿಷ್ಟವಾಗಿದೆ. ಮಂಗಳೂರಿನಂತಹ ತೇವಾಂಶ ಹೆಚ್ಚಿರುವ ಕರಾವಳಿ ಪ್ರದೇಶಗಳಿವೆ ಬೆಂಗಳೂರು ಮತ್ತು ಬಳ್ಳಾರಿಯಂತಹ ಕೈಗಾರಿಕಾ ಶಕ್ತಿ ಕೇಂದ್ರಗಳಿವೆ. ಇಲ್ಲಿನ ಹವಾಮಾನ ಗುಣಗಳಿಂದ ಮೂಲಸೌಕರ್ಯಕ್ಕೆ ಬೇಗ ತುಕ್ಕು ಹಿಡಿಯುತ್ತದೆ. ಹಾಗಾಗಿ ಇಲ್ಲಿ ಪರಿಸರದ ಕಾಠಿಣ್ಯವನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾದ C4 ಮಟ್ಟದ ಸುಧಾರಿತ ಉಕ್ಕಿನ ಪರಿಹಾರಗಳಿಗೆ ಬಹಳ ಬೇಡಿಕೆ ಇದೆ. ಕರ್ನಾಟಕ ರಾಜ್ಯ: ವಿಮಾನ ನಿಲ್ದಾಣಗಳು, ಬಂದರುಗಳು ಮತ್ತು ಲಾಜಿಸ್ಟಿಕ್ಸ್ ಪಾರ್ಕ್‌ಗಳಲ್ಲಿ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸುತ್ತಿರುವುದರಿಂದ; ದೀರ್ಘಾವಧಿ ಕಾರ್ಯಕ್ಷಮತೆ ಮತ್ತು ಕಡಿಮೆ ನಿರ್ವಹಣಾ ವೆಚ್ಚ ಸಾಧಿಸಲು ಬಾಳಿಕೆ ಬರುವ, ತುಕ್ಕು-ನಿರೋಧಕ ನಿರ್ಮಾಣ ಸಾಮಗ್ರಿಗಳ ಬಳಕೆ ಅತ್ಯಗತ್ಯ. ಇದಕ್ಕೆ ಪರಿಹಾರ ಸೃಷ್ಟಿಸಿರುವ ಎಎಂ/ಎನ್ಎಸ್ ಇಂಡಿಯಾ, ಕರ್ನಾಟಕದಲ್ಲಿ ಆಪ್ಟಿಗಲ್® ಪ್ರೈಮ್ ಮತ್ತು ಪಿನ್ನಾಕಲ್…

Read More

ಬೆಂಗಳೂರು: NHM ಸಿಬ್ಬಂದಿಗಳ ಗುತ್ತಿಗೆ ಅವಧಿಯನ್ನು ಒಂದೊಂದೇ ತಿಂಗಳು ಮುಂದುವರೆಸುತ್ತಿದ್ದು ಇದರಿಂದ ಆತಂಕದಲ್ಲಿ ಸಿಬ್ಬಂದಿಗಳಿಗೂ ಸಹ ಹೃದಯಾಘಾತ ಆಗುವ ಮುನ್ನ ಎಲ್ಲಾ ಸಿಬ್ಬಂದಿಗಳನ್ನು ಮುಂದುವರೆಸಿದ ಆದೇಶ ನೀಡುವಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ-ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಶ್ರೀಕಾಂತ್ ಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದ್ದು ಇದರಲ್ಲಿ ಯುವಕ ಯುವತಿಯರು ಹಾಗೂ ಮದ್ಯ ವಯಸ್ಕರರ ಸಂಖ್ಯೆ ಜಾಸ್ತಿ ಇದೆ. ಈ ಸಮಯದಲ್ಲಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವುದು ಆರೋಗ್ಯ ಇಲಾಖೆಯ ಜವಾಬ್ದಾರಿ ಆಗಿರುತ್ತದೆ. ಆದರೇ ಸಾರ್ವಜನಿಕರ ಮಧ್ಯದಲ್ಲಿ ಇದ್ದು ಕೆಲಸ ಮಾಡುವ ನಮಗೂ ಆತಂಕವಿದೆ ಅದೇನೆಂದರೆ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಸುಮಾರು 30000 ನೌಕರರು ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದು, ಇವರನ್ನು ಹಿಂದಿನ…

Read More

ಬೆಂಗಳೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‍ಸಿ ಪರೀಕ್ಷೆಯ ಫಲಿತಾಂಶವನ್ನು ವೃದ್ಧಿಸುವುದು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಕ್ರಮ ವಹಿಸಿದೆ. ಇದನ್ನು ಸಾಧಿಸುವ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳಲ್ಲಿ ಅನುಸರಿಸಬೇಕಾದ ವಿವಿಧ ಕ್ರಮಗಳ ಬಗ್ಗೆ ಸುತ್ತೋಲೆ ಹೊರಡಿಸಿದೆ. ಈ ಕ್ರಮಗಳನ್ನು ಶಾಲೆಗಳು ಕಡ್ಡಾಯವಾಗಿ ಪಾಲಿಸುವಂತೆಯೂ ಸೂಚಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ವೃದ್ಧಿಗಾಗಿ ರಾಜ್ಯ ಹಾಗು ಜಿಲ್ಲೆಯಲ್ಲಿನ ವಿವಿಧ ಹಂತದ ಅಧಿಕಾರಿಗಳು ಈ ಮುಂದಿನಂತೆ ಕಾರ್ಯನಿರ್ವಹಿಸುವುದು. 1. ಡಿಸೆಂಬರ್-2025 ರ ಅಂತ್ಯದೊಳಗೆ ಪಠ್ಯಕ್ರಮ ಪೂರ್ಣಗೊಳಿಸುವಿಕೆ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಪಠ್ಯವಸ್ತುವನ್ನು ಶೈಕ್ಷಣಿಕ ವಾರ್ಷಿಕ ಮಾರ್ಗಸೂಚಿಯಂತೆ ಡಿಸೆಂಬರ್-2025 ರ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮವಹಿಸುವುದು. 2. ಶಾಲೆಯಲ್ಲಿಯೇ ಪರಿಹಾರ ಬೋಧನೆ: ಶಾಲಾ ವರ್ಷದ ಆರಂಭದಿಂದಲೇ ವಿದ್ಯಾರ್ಥಿಗಳ ಮೂಲಭೂತ ಸಾಮರ್ಥ್ಯಗಳ ಮೌಲ್ಯಮಾಪನ ಮತ್ತು ಸೇತುಬಂಧ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಪರಿಹಾರ ಒದಗಿಸಲು ವಿವಿಧ ಅಭ್ಯಾಸಗಳನ್ನು ಈ ವರ್ಷ ಅಳವಡಿಸಿಕೊಳ್ಳಲಾಗಿದೆ. DSERTಯು 2025ರ ಜೂನ್‌ನಲ್ಲಿ ಎಲ್ಲಾ ಸರ್ಕಾರಿ…

Read More

ಬೆಂಗಳೂರು: ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವೀಡಿಯೋಗಳು ಅಥವಾ ಸಾಮಾಜಿಕ ಖಾತೆಗಳಲ್ಲಿ ಶೇರ್ ಮಾಡುವುದು ಅಪರಾಧ. ಒಂದು ವೇಳೆ ಹೀಗೆ ಮಾಡಿದರೇ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ, ಅಂತವರ ವಿರುದ್ಧ ಕಾನೂನು ಕ್ರಮವಾಗಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವಿಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್‌ ಮಾಡಿ ಅವರ ಮಾನಹಾನಿ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಲ್ಲಿ ತಕ್ಷಣವೇ 1930ಕ್ಕೆ ಕರೆಮಾಡಿ ಅಥವಾ http://cybercrime.gov.in ಇಲ್ಲಿ ದೂರು ದಾಖಲಿಸಿ. https://twitter.com/KarnatakaVarthe/status/1943298237722722717 https://kannadanewsnow.com/kannada/there-will-be-no-increase-in-nursing-course-fees-this-year-minister-dr-sharanprakash-patil/ https://kannadanewsnow.com/kannada/told-to-get-haircut-two-students-stab-school-principal-to-death-in-haryana/

Read More

ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ 2025-26ನೇ ಸಾಲಿನ ಎರಡನೇ ತ್ರೈಮಾಸಿಕ ಕಂತಿನ ಗೌರವಧನವನ್ನು ಪಾವತಿಸಲು ಅನುಧಾನವನ್ನು ಬಿಡುಗಡೆ ಮಾಡಿ ಮಾಡಿ ಸರ್ಕಾರ ಆದೇಶಿಸಿದೆ. ಈ ಮೂಲಕ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿಯನ್ನು ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಸಿ ಆದೇಶಿಸಿದ್ದು, ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪತ್ರದಲ್ಲಿ ಆಶಾ ಕಾರ್ಯಕರ್ತೆಯರಿಗೆ 2025-26ನೇ ಸಾಲಿನ ಆಯವ್ಯಯದಲ್ಲಿ ಲೆಕ್ಕಶೀರ್ಷಿಕೆ: 2211-00-103-0-11-324 ರಡಿಯಲ್ಲಿ ರೂ. 27100.00 ಲಕ್ಷಗಳ ಅನುದಾನವನ್ನು ನಿಗದಿಪಡಿಸಲಾಗಿದ್ದು, ಸದರಿ ಅನುದಾನದಲ್ಲಿ ಮೊದಲನೇ ತ್ರೈಮಾಸಿಕ ಗೌರವಧನ ಅನುದಾನ ಬಿಡುಗಡೆ ಮಾಡುವಂತೆ ಕೋರಲಾಗಿದೆ ಎಂದಿದ್ದಾರೆ. ಆರ್ಥಿಕ ಇಲಾಖೆಯ ಹಿಂಬರಹದಲ್ಲಿ 41000 ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ ಪತಿ ಮಾಹೆಗೆ ರೂ.5000/- ರಂತೆ ಒಟ್ಟು ರೂ. 24600.00 ಲಕ್ಷಗಳ ಅನುದಾನ ನಿಗದಿಪಡಿಸಲಾಗಿದೆ ಎಂದು ಹೇಳಿದೆ. ಆದೇಶ ಸಂಖ್ಯೆ:ಎಫ್.ಡಿ. 01 ಟಿ.ಎಫ್.ಪಿ. 2025, ದಿನಾಂಕ: 02.04.2025 ರಲ್ಲಿ 2025-26ನೇ ಸಾಲಿನಲ್ಲಿ ಇಲಾಖೆಗಳಿಗೆ ಒದಗಿಸಲಾದ ಅನುದಾನದಲ್ಲಿ ಮೊದಲನೇ…

Read More

ಬೆಂಗಳೂರು: ರಾಜ್ಯದ ಕಾಫಿ, ಟೀ ಅಂಗಡಿ, ಬೀಡಾ ಶಾಪ್, ಬೇಕರಿ ಮಾಲೀಕರು ಗೂಗಲ್ ಪೇ, ಪೋನ್ ಪೇ ಮೂಲಕ ವ್ಯವಹಾರ ನಡೆಸುತ್ತಿದ್ದರೇ ಈಗ ಎಚ್ಚರಿಕೆ ವಹಿಸೋದು ಮುಖ್ಯವಾಗಿದೆ. ಯುಪಿಐ ಮೂಲಕ ಹಣ ಸ್ವೀಕರಿಸಿದಂತ ಮಾಲೀಕರಿಗೆ ಬಿಗ್ ಶಾಕ್ ಎನ್ನುವಂತೆ ಕಮರ್ಷಿಯಲ್ ಟ್ಯಾಕ್ಸ್ ನೋಟಿಸ್ ನೀಡಲಾಗಿದೆ. ಹೌದು 2021ರಿಂದ ಟ್ಯಾಕ್ಸ್ ಕಟ್ಟಿಲ್ಲವೆಂದು ಕಾಫಿ, ಟೀ ಅಂಗಡಿ, ಬೀಡಾ ಶಾಪ್, ಬೇಕರಿ, ಕಾಂಡಿಮೆಂಟ್ಸ್ ಅಂಗಡಿಯ ಮಾಲೀಕರಿಗೆ ವಾಣಿಜ್ಯ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. ನೋಟೀಸ್ ನಲ್ಲಿ ಲಕ್ಷಾಂತರ ರೂಪಾಯಿ ತೆರಿಗೆ ಕಟ್ಟುವಂತೆ ಮಾಲೀಕರಿಗೆ ಸೂಚಿಸಲಾಗಿದೆ. ವಾಣಿಜ್ಯ ಆದಾಯ ತೆರಿಗೆ ಇಲಾಖೆಯಿಂದ ಸಣ್ಣ ಸಣ್ಣ ಅಂಗಡಿ ಮಾಲೀಕರಿಗೆ ನೀಡಿರುವಂತ ನೋಟಿಸ್ ನಲ್ಲಿ 54 ಲಕ್ಷ, 37 ಲಕ್ಷ, 32 ಲಕ್ಷ ಕಟ್ಟುವಂತೆ ತಿಳಿಸಲಾಗಿದೆ. ರಾಜ್ಯದ ಸಾವಿರಾರು ಅಂಗಡಿ ಮಾಲೀಕರಿಗೆ ವಾಣಿಜ್ಯ ತೆರಿಗೆ ಇಲಾಖೆಯಿಂದ ಜಾರಿಗೊಳಿಸಲಾಗಿರುವಂತ ನೋಟಿಸ್ ನಿಂದಾಗಿ ಕಂಗಾಲಾಗಿದ್ದಾರೆ. ಒಟ್ಟಾರೆಯಾಗಿ ಸಾರ್ವಜನಿಕರು ಯುಪಿಐ ಮೂಲಕ ಹಣ ಪಾವತಿ ಮಾಡುತ್ತಾರೆ ಎಂಬುದಾಗಿ ಸಣ್ಣ ಪುಟ್ಟ ಅಂಗಡಿಯ…

Read More

ಬೆಂಗಳೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‍ಸಿ ಪರೀಕ್ಷೆಯ ಫಲಿತಾಂಶವನ್ನು ವೃದ್ಧಿಸುವುದು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಕ್ರಮ ವಹಿಸಿದೆ. ಇದನ್ನು ಸಾಧಿಸುವ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳಲ್ಲಿ ಅನುಸರಿಸಬೇಕಾದ ವಿವಿಧ ಕ್ರಮಗಳ ಬಗ್ಗೆ ಸುತ್ತೋಲೆ ಹೊರಡಿಸಿದೆ. ಈ ಕ್ರಮಗಳನ್ನು ಶಾಲೆಗಳು ಕಡ್ಡಾಯವಾಗಿ ಪಾಲಿಸುವಂತೆಯೂ ಸೂಚಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ವೃದ್ಧಿಗಾಗಿ ರಾಜ್ಯ ಹಾಗು ಜಿಲ್ಲೆಯಲ್ಲಿನ ವಿವಿಧ ಹಂತದ ಅಧಿಕಾರಿಗಳು ಈ ಮುಂದಿನಂತೆ ಕಾರ್ಯನಿರ್ವಹಿಸುವುದು. 1. ಡಿಸೆಂಬರ್-2025 ರ ಅಂತ್ಯದೊಳಗೆ ಪಠ್ಯಕ್ರಮ ಪೂರ್ಣಗೊಳಿಸುವಿಕೆ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಪಠ್ಯವಸ್ತುವನ್ನು ಶೈಕ್ಷಣಿಕ ವಾರ್ಷಿಕ ಮಾರ್ಗಸೂಚಿಯಂತೆ ಡಿಸೆಂಬರ್-2025 ರ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮವಹಿಸುವುದು. 2. ಶಾಲೆಯಲ್ಲಿಯೇ ಪರಿಹಾರ ಬೋಧನೆ: ಶಾಲಾ ವರ್ಷದ ಆರಂಭದಿಂದಲೇ ವಿದ್ಯಾರ್ಥಿಗಳ ಮೂಲಭೂತ ಸಾಮರ್ಥ್ಯಗಳ ಮೌಲ್ಯಮಾಪನ ಮತ್ತು ಸೇತುಬಂಧ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಪರಿಹಾರ ಒದಗಿಸಲು ವಿವಿಧ ಅಭ್ಯಾಸಗಳನ್ನು ಈ ವರ್ಷ ಅಳವಡಿಸಿಕೊಳ್ಳಲಾಗಿದೆ. DSERTಯು 2025ರ ಜೂನ್‌ನಲ್ಲಿ ಎಲ್ಲಾ ಸರ್ಕಾರಿ…

Read More

ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪೋಷಕರ ಮೇಲಿನ ಹೊರೆಯನ್ನು ತಪ್ಪಿಸುವ ಸಲುವಾಗಿ ನರ್ಸಿಂಗ್‌ ಕೋರ್ಸ್‌ ಶುಲ್ಕವನ್ನು ಈ ವರ್ಷ ಹೆಚ್ಚಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಗುರುವಾರ ನಡೆದ ನರ್ಸಿಂಗ್ ಕಾಲೇಜುಗಳ ಸಂಘದೊಂದಿಗಿನ ಸಭೆಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ ಸಚಿವರು, ಆರ್ಥಿಕವಾಗಿ ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಪೂರಕವಾಗುವಂತೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ ಎಂದರು. ಈ ಮೂಲಕ ಖಾಸಗಿ ನರ್ಸಿಂಗ್ ಕಾಲೇಜುಗಳಿಗೆ ಸಂದೇಶ ನೀಡಿರುವ ಸಚಿವರು, ಈ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ತಿಳಿಸಿದರು. ಗ್ರಾಮೀಣ, ಆರ್ಥಿಕವಾಗಿ ಹಿಂದುಳಿದವರಿಗೆ ಅನುಕೂಲ ಹೆಚ್ಚಿನ ನರ್ಸಿಂಗ್ ವಿದ್ಯಾರ್ಥಿಗಳು ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯಿಂದ ಬಂದವರು. ಹೆಚ್ಚುವರಿ ಶುಲ್ಕ ವಿಧಿಸುವುದು ಅನ್ಯಾಯ ಮತ್ತು ಸ್ವೀಕಾರಾರ್ಹವಾಗುವುದಿಲ್ಲ ಎಂದು ತಿಳಿಸಿದರು. ಸರ್ಕಾರಿ ಕೋಟಾದಡಿಯಲ್ಲಿ 10,000 ರೂ., ಇತರೆ ಕೋಟಾದಡಿಯಲ್ಲಿ 1 ಲಕ್ಷ ರೂ. ಮತ್ತು ಕರ್ನಾಟಕೇತರ…

Read More

ಬೆಂಗಳೂರು: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಪ್ರತಿನಿಧಿಸುವ ಮಾಧ್ಯಮ ಸಂಸ್ಥೆಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರಬೇಕು. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆಯ ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು. ಅರ್ಹತೆ, ಅಗತ್ಯವಿರುವ ದಾಖಲೆಗಳು: ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸುವವರು ತಮ್ಮ ಸ್ವಯಂ ಘೋಷಣಾ ಪತ್ರ ಹಾಗೂ ಪೂರ್ಣಾವಧಿ, ಅರೇಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ, ನೇಮಕಾತಿ ಪತ್ರ ಮತ್ತು ಸಂಪಾದಕರ ಅಥವಾ ಮುಖ್ಯಸ್ಥರ ಶೀಫಾರಸ್ಸು ಪತ್ರವನ್ನು…

Read More