Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ವೈವಿಧ್ಯಮಯ ಭಾರತದೊಳಗೊಂದು ಅಸ್ಪೃಶ್ಯಭಾರತವಿದೆ. ಇದು ನಮಗೆ ಕಾಣಬೇಕಾದರೆ ನಾವು ಅಂಬೇಡ್ಕರ್ ಕಣ್ಣುಗಳಿಂದ ನೋಡಿದಾಗ ಮಾತ್ರ ಕಾಣುತ್ತದೆ ಎಂದು ಪತ್ರಕರ್ತ, ಚಿಂತಕ ಎನ್. ರವಿಕುಮಾರ್ ಹೇಳಿದರು. ಬಹುಮುಖಿ ಆಯೋಜಿಸಿದ್ದ ’ದಲಿತ-ಒಂದು ಅವಲೋಕನ’ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತಿದ್ದ ಅವರು, ದಲಿತರು, ದಲಿತತ್ವ ಎಂಬುದರ ಕುರಿತು ಮಾತನಾಡುವುದು ಎಂದರೆ ಅಂತಿಮವಾಗಿ ಭಾರತದ ಮೂಲನಿವಾಸಿಗಳ ಅಸ್ತಿತ್ವ , ಅಸ್ಮಿತೆ ಮತ್ತು ಅವರು ಎದುರಿಸುತ್ತಿರುವ ಬಿಕ್ಕಟ್ಟು ಮತ್ತು ಸವಾಲುಗಳ ಕುರಿತು ಮಾತನಾಡುವುದೇ ಆಗಿದೆ. ದಿನ ನಿತ್ಯ ಭಾರತದಲ್ಲಿ ಜಾತಿ ಆಧಾರಿತ ಕ್ರೌರ್ಯ ನಡೆಯುತ್ತಿದ್ದು ಸ್ವಾತಂತ್ರ್ಯ ಬಂದ ನಂತರದಲ್ಲೂ ಮುಂದುವರೆದಿರುವುದು ವಿಪರ್ಯಾಸ ಎಂದರು. ನಾವು ಇವತ್ತಿನ ವಿಶ್ವಗುರು ಭಾರತವನ್ನು ಅರ್ಥ ಮಾಡಿಕೊಳ್ಳಬೇಕಾದರೆ ಈ ದೇಶದ ಸಾಮಾಜಿಕ ಸಂರಚನೆಯನ್ನು ಆರ್ಥಮಾಡಿಕೊಳ್ಳಬೇಕು. ಅಸಲಿಗೆ ಭಾರದಲ್ಲಿರುವುದು ಧರ್ಮವಲ್ಲ, ಜಾತಿ ಮಾತ್ರವೇ ಆಗಿದೆ ಎನ್ನುವುದಕ್ಕೆ ಜಾತಿ ಹೆಸರಿನಲ್ಲಿ ದಿನನಿತ್ಯ ನಡೆಯುತ್ತಿರುವ ವಿದ್ಯಮಾನಗಳೇ ಸಾಕ್ಷಿ. ಇಂದು ಜಾತೀಯತೆ ರೂಪಾಂತರವಾಗಿದೆಯೇ ವಿನಃ ಅದು ನಾಶವಾಗಿಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಬರೆಯದೆ ಹೋಗಿದ್ದರೆ ಭಾರತದ ದಲಿತರ ಪಾಡು…
ನಾಗಮಂಗಲ: ಅಂಗಡಿಗಳಿಗೆ ಬೆಂಕಿ ಹಾಕಿದವರನ್ನು ಎಳೆದುಕೊಂಡು ಬಂದು ಅವರ ಮನೆ ಹರಾಜು ಹಾಕಿ ನಷ್ಟ ತುಂಬಿಸಿಕೊಡಿ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ನಾಗಮಂಗಲದ ಶ್ರೀ ಗಣೇಶೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಗಲಭೆ ನಡೆದ ಸ್ಥಳಕ್ಕೆ ಇಂದು ಭೇಟಿ ನೀಡಿದ ಅವರು, ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಯಾವನು ಬೆಂಕಿ ಹಾಕಿದ್ದಾನೋ ಅವನನ್ನು ಮೊದಲು ಎಳೆದುಕೊಂಡು ಬನ್ನಿ. ಅವನ ಮನೆಯನ್ನು ಹರಾಜಿಗೆ ಹಾಕಿ ಎಂದು ಅವರು ಮತ್ತೊಮ್ಮೆ ಒತ್ತಾಯಿಸಿದರು. ಜನರ ತೆರಿಗೆ ದುಡ್ಡಿನಲ್ಲಿ ನಾವು ಪುಂಡತನಕ್ಕೆ ಪರಿಹಾರ ಕೊಡಬೇಕಾಗಿಲ್ಲ. ಪುಂಡತನ ಮಾಡಿದವರನ್ನು ಎಳೆದು ತನ್ನಿ ಎಂದು ಸಲಹೆ ನೀಡಿದರು. ಈ ಗಲಭೆ ಪೂರ್ವನಿಯೋಜಿತ ಎಂಬಂತೆ ಕಾಣುತ್ತಿದೆ. ಕೆಲವರ ಅಂಗಡಿಗಳನ್ನು ಗುರಿ ಮಾಡಿ ಬೆಂಕಿ ಹಾಕಿದ್ದಾರೆ ಎಂದು ಆಕ್ಷೇಪಿಸಿದರು. ಅಂಗಡಿ, ವಾಹನಗಳನ್ನು ಟಾರ್ಗೆಟ್ ಮಾಡುವ ಉದ್ದೇಶ ಏನು ಎಂದು ಪ್ರಶ್ನಿಸಿದರು. ಕಳೆದ ವರ್ಷವೂ ಕೂಡ ಇಲ್ಲಿಯೇ ಇಂಥ ಸಣ್ಣ ಅಹಿತಕರ ಘಟನೆ ಸಂಭವಿಸಿದ್ದು ಎಲ್ಲರಿಗೂ ಗೊತ್ತಿದೆ. ಸರಕಾರ ಈ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ವಿಶ್ವ ಆರೋಗ್ಯ ಸಂಸ್ಥೆ (World Health Organisation – WHO) ಶುಕ್ರವಾರ ಎಂವಿಎ-ಬಿಎನ್ ಲಸಿಕೆಯನ್ನು ( MVA-BN vaccine ) ತನ್ನ ಪೂರ್ವ ಅರ್ಹತಾ ಪಟ್ಟಿಗೆ ಸೇರಿಸಲಾದ ಎಂಪಿಒಎಕ್ಸ್ ವಿರುದ್ಧದ ಮೊದಲ ಲಸಿಕೆ ಎಂದು ಘೋಷಿಸಿದೆ, ಇದು ಲಸಿಕೆಯ ಪ್ರವೇಶವನ್ನು ಸುಧಾರಿಸುವ ನಿರೀಕ್ಷೆಯಿದೆ. ವಿಶೇಷವಾಗಿ ತುರ್ತಾಗಿ ಅಗತ್ಯವಿರುವ ಸಮುದಾಯಗಳಲ್ಲಿ. ತಯಾರಕ ಬವೇರಿಯನ್ ನಾರ್ಡಿಕ್ ಎ / ಎಸ್ ಸಲ್ಲಿಸಿದ ಮಾಹಿತಿ ಮತ್ತು ಯುರೋಪಿಯನ್ ಮೆಡಿಸಿನ್ಸ್ ಏಜೆನ್ಸಿಯ ಪರಿಶೀಲನೆಯ ಆಧಾರದ ಮೇಲೆ ಪೂರ್ವ ಅರ್ಹತಾ ಪ್ರಕ್ರಿಯೆಯು ಲಸಿಕೆಯ ತ್ವರಿತ ಸಂಗ್ರಹಣೆ ಮತ್ತು ವಿತರಣೆಯನ್ನು ಸುಲಭಗೊಳಿಸುವ ಉದ್ದೇಶವನ್ನು ಹೊಂದಿದೆ. ಡಬ್ಲ್ಯುಎಚ್ಒ ಮಹಾನಿರ್ದೇಶಕ ಡಾ.ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಪ್ರಸ್ತುತ ಎಂಪಾಕ್ಸ್ ಏಕಾಏಕಿ, ವಿಶೇಷವಾಗಿ ಆಫ್ರಿಕಾದಲ್ಲಿ ನಿರ್ಣಾಯಕ ಹೆಜ್ಜೆಯ ಮಹತ್ವವನ್ನು ಒತ್ತಿ ಹೇಳಿದರು. “ಎಂಪಾಕ್ಸ್ ವಿರುದ್ಧದ ಲಸಿಕೆಯ ಈ ಮೊದಲ ಪೂರ್ವ ಅರ್ಹತೆಯು ಆಫ್ರಿಕಾದಲ್ಲಿ ಪ್ರಸ್ತುತ ಏಕಾಏಕಿ ಮತ್ತು ಭವಿಷ್ಯದಲ್ಲಿ ರೋಗದ ವಿರುದ್ಧದ ನಮ್ಮ ಹೋರಾಟದಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ” ಎಂದು…
ಶಿವಮೊಗ್ಗ: ದಿ: 18-09-2024 ರ ಎಂಆರ್ಎಸ್ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-1, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-14, ಎಂಸಿಎಫ್-17, ಎಂಸಿಎಫ್-18, ಎಂಸಿಎಫ್-20 ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 9.30 ಗಂಟೆಯಿAದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿ ಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್ಆರ್ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರೆಕೊಪ್ಪ ಹಾಘೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಮೆಸ್ಕಾಂನೊAದಿಗೆ ಸಹಕರಿಸಬೇಕಾಗಿ ಪ್ರಕಟಣೆ ತಿಳಿಸಿದೆ. https://kannadanewsnow.com/kannada/note-extension-of-time-to-apply-for-anganwadi-worker-helper-recruitment/ https://kannadanewsnow.com/kannada/elections-to-the-post-of-mayor-and-deputy-mayor-of-davanagere-municipal-corporation-will-be-held-on-september-27/ https://kannadanewsnow.com/kannada/big-news-sc-granted-bail-to-kejriwal-a-travesty-to-centre-siddaramaiah/
ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆ ಮಹಾಪೌರ, ಉಪಮಹಾಪೌರ ಸ್ಥಾನದ ಆಯ್ಕೆಗೆ ಸೆಪ್ಟೆಂಬರ್.27 ರಂದು ಮಹಾನಗರಪಾಲಿಕೆ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ. ಸೆ.27 ರ ಬೆಳಿಗ್ಗೆ 12 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ನಾಮಪತ್ರಗಳ ಸ್ವೀಕಾರ, ಮಧ್ಯಾಹ್ನ 3 ಗಂಟೆ ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ಸದಸ್ಯರ ಸಹಿ ದಾಖಲಿಸುವುದು, ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ. https://kannadanewsnow.com/kannada/note-extension-of-time-to-apply-for-anganwadi-worker-helper-recruitment/ https://kannadanewsnow.com/kannada/good-news-for-mcc-employees-state-govt-orders-7th-pay-hike/ https://kannadanewsnow.com/kannada/big-news-sc-granted-bail-to-kejriwal-a-travesty-to-centre-siddaramaiah/
ದಾವಣಗೆರೆ ; ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗೆ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಆಭ್ಯರ್ಥಿಗಳಿಂದ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 9 ವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ. ಸೆ.27ರಂದು ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ದಾವಣಗೆರೆ ಸೆ.13 (ಕರ್ನಾಟಕ ವಾರ್ತೆ) ದಾವಣಗೆರೆ ಮಹಾನಗರಪಾಲಿಕೆ ಮಹಾಪೌರ, ಉಪಮಹಾಪೌರ ಸ್ಥಾನದ ಆಯ್ಕೆಗೆ ಸೆಪ್ಟೆಂಬರ್.27 ರಂದು ಮಹಾನಗರಪಾಲಿಕೆ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ. ಸೆ.27 ರ ಬೆಳಿಗ್ಗೆ 12 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ನಾಮಪತ್ರಗಳ ಸ್ವೀಕಾರ, ಮಧ್ಯಾಹ್ನ 3 ಗಂಟೆ ನಂತರ ನಾಮಪತ್ರಗಳ…
ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳ ಖಾಯಂ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಪರಿಷ್ಕೃತ ವೇತನ ಶ್ರೇಣಿಯ ಸೌಲಭ್ಯವನ್ನು ಜಾರಿಗೊಳಿಸಿ, ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಮಹಾನಗರ ಪಾಲಿಕೆಯ ನೌಕರರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 09.07.2018ರ ಆದೇಶದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಯನ್ನು ಪರಿಷ್ಕರಿಸಿದ ಸರ್ಕಾರದ ಆದೇಶ ಸಂಖ್ಯೆ: ಎಫ್ಡಿ 06 ಎಸ್ಆರ್ಪಿ 2018, ದಿನಾಂಕ: 01.03.2018 ಮತ್ತು ಸರ್ಕಾರದ ಆದೇಶ ಸಂಖ್ಯೆ: ಎಫ್ಡಿ 06 ಎಸ್ಆರ್ಪಿ 2018, ದಿನಾಂಕ: 19.04.2018 ರಲ್ಲಿನ ನಿರ್ದೇಶನದಂತೆ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ / ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿ ಸೌಲಭ್ಯವನ್ನು ದಿನಾಂಕ: 01.07.2017 ರಿಂದ ಜಾರಿಗೆ ಬರುವಂತೆ ಮಂಜೂರು ಮಾಡಲಾಗಿದೆ. ಆದರೆ, ವೇತನ ಪರಿಷ್ಕರಣೆಯ ಆರ್ಥಿಕ ಸೌಲಭ್ಯವು ದಿನಾಂಕ: 01.04.2018 ರಿಂದ ಜಾರಿಗೆ…
ಬೆಂಗಳೂರು : ಕರ್ನಾಟಕದಾದ್ಯಂತ ಮಹಿಳಾ ಆರೋಗ್ಯ ಸಿಬ್ಬಂದಿಗೆ ಹೆಚ್ಚಿನ ಭದ್ರತೆ ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಉನ್ನತಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಹಾಸ್ಟೆಲ್ಗಳಲ್ಲಿ ಭದ್ರತೆಯನ್ನು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಿದರು. ಪ್ರಸ್ತುತ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಮತ್ತು ಇತರೆ ಕ್ರಮಗಳನ್ನು ಪ್ರಸ್ತಾಪಿಸುವ ಕುರಿತು ಈ ಹಿಂದೆ ಸಚಿವರ ನೇತೃತ್ವದಲ್ಲಿ ಸಭೆ ನಡೆದಿತ್ತು. ಅದರ ಮುಂದಿನ ಭಾಗ ಇದಾಗಿದೆ. ಮಹಿಳಾ ಆರೋಗ್ಯ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರ ಪ್ರತಿಕ್ರಿಯೆಯನ್ನು ಪಡೆಯುವ ಬಗ್ಗೆ ಡಾ.ಪಾಟೀಲ್ ಸೂಚನೆ ನೀಡಿದರು. “ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಬರವಣಿಗೆಯಲ್ಲಿ ಪ್ರತಿಕ್ರಿಯೆಯನ್ನು ಸಂಗ್ರಹಿಸಬೇಕು ಮತ್ತು ಅಗತ್ಯ ಕ್ರಮಗಳನ್ನು ಜಾರಿಗೆ ತರಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸುರಕ್ಷತಾ ಶಿಷ್ಟಾಚಾರ ಕ್ರಮಗಳನ್ನು ಪರಿಶೀಲಿಸಲು ಮಾಸಿಕ ಸಭೆ ನಡೆಸಬೇಕು. ಭದ್ರತಾ ಲೆಕ್ಕಪರಿಶೋಧನಾ ಸಮಿತಿಯನ್ನು ರಚಿಸಬೇಕು.…
ಬೆಂಗಳೂರು: ಕೊನೇಯ ಕ್ಷಣದಲ್ಲಿ ಬದಲಾವಣೆ ಎನ್ನುವಂತೆ ಕೆಪಿಎಸ್ಸಿಯಿಂದ ನಾಳೆ, ನಾಡಿದ್ದು ಗ್ರೂಪ್-ಬಿ ಹುದ್ದೆಗಳಿಗೆ ಸಂಬಂಧಿಸಿದಂತ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಕೆಪಿಎಸ್ಸಿಯ ಕಾರ್ಯದರ್ಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಆಯೋಗದ ಅಧಿಸೂಚನೆ ಸಂಖ್ಯೆ : ಪಿಎಸ್ ಸಿ 1 ಆರ್ ಟಿ ಬಿ 1/2023, ದಿ:13-03-2024ರನ್ವಯ ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ – ಬಿ ಹುದ್ದೆಗಳಿಗೆ ದಿನಾಂಕ:14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು ಎಂದು ಹೇಳಿದ್ದಾರೆ. ಈ ಮಧ್ಯೆ ದಿನಾಂಕ: 10-09-2024ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ ಈ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ…
ನವದೆಹಲಿ: ರೂಸ್ ಅವೆನ್ಯೂ ನ್ಯಾಯಾಲಯವು ಜಾಮೀನು ಬಾಂಡ್ಗಳನ್ನು ಸ್ವೀಕರಿಸಿ ಬಿಡುಗಡೆ ವಾರಂಟ್ ಹೊರಡಿಸಿದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ತಿಹಾರ್ ಜೈಲಿನಿಂದ ಹೊರಬಂದರು. ಅವರನ್ನು ಎಎಪಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಅವರ ಶೀಘ್ರ ಬಿಡುಗಡೆಗಾಗಿ, ವಿಶೇಷ ದೂತನ ಮೂಲಕ ಬಿಡುಗಡೆ ವಾರಂಟ್ ಕಳುಹಿಸುವ ಮನವಿಯನ್ನು ನ್ಯಾಯಾಲಯ ಸ್ವೀಕರಿಸಿತ್ತು. ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿದ ನಂತರ ಈ ಬೆಳವಣಿಗೆ ಸಂಭವಿಸಿದೆ. ಸಿಬಿಐ ದಾಖಲಿಸಿದ್ದ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲಾಗಿದೆ. ಇಡಿ ಸಲ್ಲಿಸಿದ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅವರು ಈಗಾಗಲೇ ಮಧ್ಯಂತರ ಜಾಮೀನು ಪಡೆದಿದ್ದರು. ಆದಾಗ್ಯೂ, ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡುವಾಗ, ಪ್ರಕರಣದ ಅರ್ಹತೆಯ ಬಗ್ಗೆ ಯಾವುದೇ ಸಾರ್ವಜನಿಕ ಹೇಳಿಕೆ ನೀಡದಂತೆ ನಿರ್ದೇಶನ ನೀಡಿತು. ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್, “ತನಿಖೆಯ ಉದ್ದೇಶಗಳಿಗಾಗಿ ಈಗಾಗಲೇ ಮತ್ತೊಂದು ಪ್ರಕರಣದಲ್ಲಿ…