Author: kannadanewsnow09

ಬೆಂಗಳೂರು: ಬಿಜೆಪಿ ಸರ್ಕಾರದ ( BJP Government ) ಅವಧಿಯಲ್ಲಿ ನಡೆದಿರುವ ಎಲ್ಲಾ ಹಗರಣಗಳ ತನಿಖೆ ನಡೆಸುವುದು ನಿಶ್ಚಿತ. ಇನ್ಮುಂದೆ ದಿನಕ್ಕೊಂದು ಬಿಜೆಪಿ ಹಗರಣಗಳ ಕಥಾ ಸರಣಿ ಬರಲಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಪಕ್ಷವು ( Karnataka Congress Party ) ಎಕ್ಸ್ ನಲ್ಲಿ ಪೋಸ್ಟ್ ಮಾಡಿ ತಿಳಿಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲಾ ಹಗರಣಗಳ ತನಿಖೆ ನಡೆಸುವುದು ನಿಶ್ಚಿತ. ಹಗರಣದ ಆರೋಪಗಳ ಬಗ್ಗೆ ಕೂಲಂಕುಶವಾಗಿ ಪರಿಶೀಲನೆ ನಡೆಸಿ ತನಿಖೆಗೆ ವಹಿಸಲು ಸಚಿವರ ಸಮಿತಿ ರಚನೆಯಾಗಿದೆ ಎಂದು ಹೇಳಿದೆ. ಕೊಳ್ಳೆ ಹೊಡೆಯಲಾಗಿರುವ ಜನರ ಹಣಕ್ಕೆ ನ್ಯಾಯ ಒದಗಿಸುವುದಕ್ಕೆ ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ. ದಿನಕ್ಕೊಂದು ಚಂದಮಾಮನ ಕತೆಯಂತೆ ಇನ್ಮುಂದೆ ದಿನಕ್ಕೊಂದು ಬಿಜೆಪಿ ಹಗರಣಗಳ ಕಥಾ ಸರಣಿ ಬರಲಿದೆ ಎಂಬುದಾಗಿ ತಿಳಿಸಿದೆ. https://twitter.com/INCKarnataka/status/1833839561480261762 https://kannadanewsnow.com/kannada/kpsc-recruitment-exam-slated-to-be-held-on-september-14-15-prohibitory-orders-under-section-144-imposed-around-exam-centre-in-bengaluru/ https://kannadanewsnow.com/kannada/bescom-launches-ev-mitra-app-electric-vehicle-charging-station-payments-and-other-services-available/ https://kannadanewsnow.com/kannada/loan-facility-up-to-rs-5-lakh-from-central-government-if-you-have-these-documents-apply-immediately/

Read More

ಬೆಂಗಳೂರು: ಸೆಪ್ಟೆಂಬರ್.14 ಹಾಗೂ 15ರಂದು ಕೆಪಿಎಸ್ಸಿಯ ಗ್ರೂಪ್-ಬಿ ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಾ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ. ಇಂದು ಆದೇಶ ಹೊರಡಿಸಿರುವಂತ ಅವರು, ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ಪರೀಕ್ಷೆಗಳನ್ನು ಮೊದಲ ಹಂತದಲ್ಲಿ ದಿನಾಂಕ: 14-09-2024 ಮತ್ತು 15-09-2024 ರಂದು ಹಾಗೂ ದಿನಾಂಕ: 18- 09-2024 ಮತ್ತು 19-09-2024 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಮತ್ತು ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಹತ್ತಿರದಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ನಮೂದಿತ ಉಲ್ಲೇಖದಲ್ಲಿ ಕೋರಲಾಗಿರುತ್ತದೆ ಎಂದಿದ್ದಾರೆ. ಈ ಸಂಬಂಧ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಹಾಗೂ ಗುಪ್ತವಾರ್ತಾ ಮಾಹಿತಿಯಿಂದ ಮೇಲ್ಕಂಡ ಪರೀಕ್ಷೆಗಳನ್ನು…

Read More

ಬೆಂಗಳೂರು: ಬೆಸ್ಕಾಂ ಮತ್ತಷ್ಟು ಗ್ರಾಹಕ ಸ್ನೇಹಿಯಾಗಿದೆ. ಎಲೆಕ್ಟ್ರಿಕ್ ವಾಹನ ಸವಾರರ ಅನುಕೂಲಕ್ಕಾಗಿ ಇವಿ ಮಿತ್ರ ಆಪ್ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆದಾರರಿಗೆ ಚಾರ್ಜಿಂಗ್ ಕೇಂದ್ರಗಳ ಮಾಹಿತಿ, ಹಣ ಪಾವತಿ ಸೇರಿದಂತೆ ಹಲವು ಸೇವೆಗಳು ಲಭ್ಯವಾಗಲಿವೆ. ಎಲೆಕ್ಟ್ರಿಕ್‌ ವಾಹನ (ಇವಿ) ಬಳಕೆದಾರರಿಗೆ ಚಾರ್ಜಿಂಗ್‌ ಕೇಂದ್ರಗಳ ಮಾಹಿತಿ, ಹಣ ಪಾವತಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿರುವ ಬೆಸ್ಕಾಂನ ʼಇವಿ ಮಿತ್ರʼ ಆ್ಯಪ್‌ ಈಗ ಹೊಸ ರೂಪದಲ್ಲಿ ಗ್ರಾಹಕರಿಗೆ ಲಭ್ಯವಾಗುತ್ತಿದೆ. ಆಂಡ್ರಾಯ್ಡ್‌ ಮತ್ತು ಐಒಎಸ್‌ ಎರಡು ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ ಹೊಸ ʼಇವಿ ಮಿತ್ರʼ ಆ್ಯಪ್‌, ಬಳಕೆದಾರರ ಪ್ರೊಫೈಲ್‌ ನಿರ್ವಹಣೆ, ಚಾರ್ಜಿಂಗ್‌ ಸ್ಟೇಷನ್‌ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾರ್ಜಿಂಗ್‌ ಪ್ರಕ್ರಿಯೆ, ಬುಕ್ಕಿಂಗ್‌ ವಿವರ, ಚಾರ್ಜಿಂಗ್‌ ಸ್ಟೇಷನ್‌ಗಳಲ್ಲಿರುವ ಸೌಕರ್ಯಗಳು ಮತ್ತು ಚಾರ್ಜಿಂಗ್‌ ಕಾಯ್ದಿರಿಸುವ ಸೌಲಭ್ಯ ಹೊಂದಿದೆ. ಗ್ರಾಹಕರು ಹಳೆಯ ʼಇವಿ ಮಿತ್ರʼ ಆ್ಯಪ್‌ ಡಿಲೀಟ್‌ ಮಾಡಿ https://play.google.com/store/apps/details?id=com.bescom.evmithra… ಲಿಂಕ್‌ ಮೂಲಕ ಹೊಸ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಬೇಕು. ವ್ಯಾಲೆಟ್‌ನಲ್ಲಿ ಹಣ ಉಳಿದಿದ್ದರೂ ಚಿಂತಿಸಬೇಕಿಲ್ಲ. ಹೊಸ ಆ್ಯಪ್‌ಗೆ ಆ ಹಣ…

Read More

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇಂದಿನ ಯುಗದಲ್ಲಿ ವೈವಾಹಿಕ ಜೀವನ ಮತ್ತು ಪತಿಯೊಂದಿಗೆ ಬದುಕುವುದು ಕೆಲವರಿಗೆ ನರಕವಾಗಿದೆ. ಜೀವನ ಎಂದರೆ ಸುಖವಾಗಿ ಬಾಳುವುದು. ಈ ಜೀವನ ಒಂದೇ ಒಂದು ಬಾರಿ. 24 ಗಂಟೆಗಳಲ್ಲಿ ಅರ್ಧದಷ್ಟು ಸಮಯವನ್ನು ನಿದ್ರೆಯಲ್ಲಿ ಕಳೆಯಲಾಗುತ್ತದೆ. ಇನ್ನುಳಿದ ಮುಕ್ಕಾಲು ಪಾಲು ದುಡಿಮೆಯೇ. ಉಳಿದ ಕಾಲದಲ್ಲಾದರೂ ನಮ್ಮ ಬದುಕನ್ನು ಸುಖವಾಗಿಡಬೇಕಲ್ಲವೇ? ನಿಮ್ಮ ಮನೆಯಲ್ಲಿ ನಿಮ್ಮ ಗಂಡ ಮತ್ತು ಹೆಂಡತಿ ಪರಸ್ಪರರ ಮುಖವನ್ನು ನೋಡಲು ಇಷ್ಟಪಡದಿದ್ದರೆ, ಈ ಸರಳ ಆಧ್ಯಾತ್ಮಿಕ ಪರಿಹಾರವು ನಿಮಗಾಗಿ ಆಗಿದೆ. ಇದರೊಂದಿಗೆ ಮಹಿಳೆಯರು ತಮ್ಮ ಮಾಂಗಲ್ಯದಲ್ಲಿ ಮಾಡಬಾರದ ಸಣ್ಣ ಪುಟ್ಟ ಆಧ್ಯಾತ್ಮಿಕ ತಪ್ಪುಗಳನ್ನೂ ನೋಡೋಣ . ದಾಂಪತ್ಯ ಏಕತೆಯ ಪರಿಹಾರ ಪತಿ-ಪತ್ನಿಯರು ಒಂದಾದರೆ ಮೊದಲು ಆಗುವುದು ಮದುವೆಯ ಮಾಂಗಲ್ಯ ಧಾರಣೆ ತಿರುಮಾಂಗಲ್ಯಂ. ತಾಳಿ ಕಟ್ಟಿದ ನಂತರವೇ ಈ ಸಂಬಂಧ ಆರಂಭವಾಗುತ್ತದೆ. ಈ ತಾಳಿ ದಾರ ಹಗ್ಗವನ್ನು ಬದಲಾಯಿಸುವಾಗ ಮಹಿಳೆಯರು ಮಾಡುವ ಒಂದು ಪ್ರಮುಖ ತಪ್ಪು…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ನೈರುತ್ಯ ರೈಲ್ವೆಯಿಂದ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದರೇ, ಮತ್ತೆ ಕೆಲ ರೈಲುಗಳ ಸಂಚಾರವನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಾಣೇಶ್ ಕೆ.ಎನ್ ಅವರು ಮಾಹಿತಿ ನೀಡಿದ್ದಾರೆ. ಈ ರೈಲುಗಳ ಮಾರ್ಗ ಬದಲಾವಣೆ /ಭಾಗಶಃ ರದ್ದು ಗುಂಟೂರು-ನಂದ್ಯಾಲ ವಿಭಾಗದಲ್ಲಿ ಗಿದ್ದಲೂರು-ದಿಗುವಮೆಟ್ಟ ಜೋಡಿಮಾರ್ಗ ಕಾಮಗಾರಿ ನಡೆಯುವ ಕಾರಣ ದಕ್ಷಿಣ ಮಧ್ಯ ರೈಲ್ವೆಯು ಈ ಕೆಳಗಿನ ರೈಲುಗಳ ಮಾರ್ಗ ಬದಲಾವಣೆ /ಭಾಗಶಃ ರದ್ದತಿಗೆ ಸೂಚನೆ ನೀಡಿದೆ: ದಿನಾಂಕ 18.09.2024 ರಂದು ಹೊರಡುವ ರೈಲು ಸಂಖ್ಯೆ 22831 ಹೌರಾ – ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ  ರೈಲು ಸೇವೆಯನ್ನು ಧರ್ಮಾವರಂ ಮತ್ತು  ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು,  ಈ ರೈಲು ಕೃಷ್ಣ ಕೆನಾಲ್, ಗೂಡೂರ್, ರೇಣಿಗುಂಟ, ತಿರುಪತಿ, ಪಾಕಾಲ ಮತ್ತು ಧರ್ಮಾವರಂ ಮಾರ್ಗದ ಮೂಲಕ ಸಂಚರಿಸಲಿರುವುದರಿಂದ ಗುಂಟೂರು,…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧಿಕಾರಾವಧಿ ಮುಕ್ತಾಯಗೊಂಡರೂ, ಚುನಾವಣೆ ನಡೆದಿಲ್ಲ. ಚುನಾವಣೆಗೆ ಆಡಳಿತ ಅಧಿಕಾರಿಗಯನ್ನು ನೇಮಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲು ಕ್ರಮ ವಹಿಸುವಂತೆ ಸೂಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಪತ್ರ ಬರೆದು ಮನವಿ ಮಾಡಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿಯ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು, ಕರ್ನಾಟಕ ರಾಜ್ಯ ಸರ್ಕಾರಿ  ನೌಕರರ ಸಂಘದ 2024  ರಿಂದ 2029ನೇ ಸಾಲಿನವರೆಗೆ ಆಡಳಿತ ಮಂಡಳಿಯ ಚುನಾವಣೆಯು ಬಾಕಿ ಇರುತ್ತದೆ. ಪ್ರಸ್ತುತ ಇರುವ ಸಂಘದ ಆಡಳಿತ ಮಂಡಳಿಯ ಅವಧಿಯು ಮುಕ್ತಾಯಗೊಂಡಿದ್ದು, ಸಂಘ ಸಂಸ್ಥೆಗಳ ಕಾಯಿದೆ ಮತ್ತು ನಿಯಮಾವಳಿಗಳ ಅನ್ವಯ ರಾಜ್ಯ ಸರ್ಕಾರಿ ನೌಕರರ ಸಂಘದ ಆಡಳಿತ ಮಂಡಳಿಯ ಚುನಾವಣೆಯು ನಿಗದಿತ ಸಮಯದಲ್ಲಿ ನಡೆದಿರುವುದಿಲ್ಲ ಎಂದಿದ್ದಾರೆ. ಸಂಘದ ಬೈಲಾ ಅನ್ವಯ ಈಗಿನ ಆಡಳಿತ ಮಂಡಳಿಯು ನಿಗದಿತ ಸಮಯದ ಒಳಗೆ…

Read More

ಬೆಳಗಾವಿ : ಮುಖ್ಯಮಂತ್ರಿ ಸ್ಥಾನದ ವಿಚಾರ ಗಲ್ಲಿ, ಬೀದಿಗಳಲ್ಲಿ ಮಾತನಾಡುವಂತದ್ದಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಗಟ್ಟಿಯಾಗಿದ್ದಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಎನ್ನುವುದು ಇದೆ. ಶಿಸ್ತು ಎನ್ನುವುದೂ ಇದೆ. ನಾನು ಕೂಡ ಪಕ್ಷದ ಶಿಸ್ತಿನ ಸಿಪಾಯಿ, ಇಂಥ ವಿಚಾರಗಳನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ನಮ್ಮ ಪಕ್ಷದ 135 ಶಾಸಕರು ತೀರ್ಮಾನಿಸುತ್ತಾರೆ ಎಂದು ಸಚಿವರು ಹೇಳಿದರು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವವರೆಗೆ, ಆಯ್ಕೆಯಾದ ಶಾಸಕರು ತೀರ್ಮಾನ ತೆಗೆದುಕೊಳ್ಳುವವರೆಗೆ ಸಿಎಂ ಸ್ಥಾನದ ಬದಲಾವಣೆಯ ಪ್ರಶ್ನೆ ಬರುವುದಿಲ್ಲ. ಇಂಥ ವಿಚಾರಗಳನ್ನ ಬೀದಿಯಲ್ಲಿ, ಗಲ್ಲಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದರು. ಮುಂದಿನ ಸಿಎಂ ಲಕ್ಷ್ಮೀ ಹೆಬ್ಬಾಳಕರ್ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಪ್ರಶ್ನಿಸಿದಾಗ, ಅದಕ್ಕೆಲ್ಲಾ ಯಾವುದೇ ಬೆಲೆಯಿಲ್ಲ ಎಂದು ಪ್ರತಿಕ್ರಿಯಿಸಿದರು. https://kannadanewsnow.com/kannada/congress-will-focus-on-development-of-minorities-only-when-it-is-in-power-minister-zameer-ahmed-khan/ https://kannadanewsnow.com/kannada/actor-darshan-withdraws-his-application-for-home-cooked-meals/ https://kannadanewsnow.com/kannada/loan-facility-up-to-rs-5-lakh-from-central-government-if-you-have-these-documents-apply-immediately/

Read More

ಬೆಂಗಳೂರು: ನನಗೆ ಜೈಲೂಟ ಬೇಡ. ಮನೆ ಊಟ ಬೇಕು ಎಂಬುದಾಗಿ ಜೈಲು ಅಧಿಕಾರಿಗಳಿಗೆ ಸಲ್ಲಿಸಿದ್ದಂತ ಅರ್ಜಿಯನ್ನು ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ವಾಪಾಸ್ ಪಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿನಲ್ಲಿ ರಾಜಾತಿಥ್ಯದ ಪೋಟೋ ವೈರಲ್ ಆಗುತ್ತಿದ್ದಂತೆ, ಕೆಲ ಜೈಲು ಅಧಿಕಾರಿಗಳ ತಲೆದಂಡವಾಗಿತ್ತು. ಅಲ್ಲದೇ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರನ್ನು ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ ಕಾರಣ, ನಟ ದರ್ಶನ್ ಪರ ವಕೀಲರು ಮನೆ ಊಟಕ್ಕಾಗಿ ಜೈಲು ಅಧಿಕಾರಿಗಳಿಗೆ ಸಲ್ಲಿಸಿದ್ದಂತ ಅರ್ಜಿಯನ್ನು ವಾಪಾಸ್ ಪಡೆದಿದ್ದಾರೆ. ಕಾರಣ ಅವರು ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವುದರಿಂದ ಆಗಿದೆ. ಅಂದಹಾಗೇ ಜೈಲು ಊಟ ಬೇಡ, ಮನೆ ಊಟ ಬೇಕು ಎಂಬುದಾಗಿ ಕೊಲೆ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಅವರು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ…

Read More

ಕಲಬುರಗಿ : ಮೀಸಲಾತಿ ರದ್ದುಪಡಿಸುವುದಾಗಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಅಮೆರಿಕದಲ್ಲಿ ತಮ್ಮ ಮನದಾಳದ ಮಾತನ್ನು ಹೇಳಿದ್ದಾರೆ. ಇದನ್ನು ಖಂಡಿಸಿ ಇವತ್ತಿನಿಂದ ಎರಡು ದಿನಗಳ ಕಾಲ ರಾಹುಲ್ ಗಾಂಧಿಯವರ ಪ್ರತಿಕೃತಿ ದಹನ ಮಾಡಲಿದ್ದೇವೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಎಸ್ಸಿ, ಎಸ್ಟಿಗಳಿಗೆ ಗೌರವ ಕೊಡಬೇಕು; ಅವರಿಗೆ ರಕ್ಷಣೆ ಕೊಡಬೇಕೆಂಬ ದೃಷ್ಟಿಯಿಂದ ನಾವು ರಾಜ್ಯಾದ್ಯಂತ ನಾಳೆ, ನಾಡಿದ್ದು ರಾಹುಲ್ ಗಾಂಧಿಯವರ ಪ್ರತಿಕೃತಿ ದಹನ ಮಾಡುತ್ತೇವೆ ರಾಹುಲ್ ಗಾಂಧಿಯವರು ಮೀಸಲಾತಿ ನಿಲ್ಲಿಸುವುದಾಗಿ ಹೇಳಿದ್ದಾರೆ. ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಎರಡು ಸಾರಿ ಚುನಾವಣೆಯಲ್ಲಿ ಸೋಲಿಸಿದ ಪಕ್ಷ ಕಾಂಗ್ರೆಸ್. ಸಂವಿಧಾನವನ್ನು ಬರೆದ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಅವತ್ತು ಅಪಮಾನ ಮಾಡಲಾಗಿತ್ತು. ಈಗ ಮೀಸಲಾತಿ ರದ್ದುಪಡಿಸುವುದಾಗಿ ಹೇಳಿ ಅವರ ವಿಚಾರಕ್ಕೇ ತಿಲಾಂಜಲಿ ನೀಡಲು ಹೊರಟಿದ್ದಾರೆ ಎಂದು ಟೀಕಿಸಿದರು. ದಲಿತರ ಬದುಕಿಗೆ, ಎಸ್ಸಿ, ಎಸ್ಟಿಗಳ ಮೀಸಲಾತಿಗೆ ಕೊಡಲಿಪೆಟ್ಟು ಹಾಕುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಇದೇನಾ ನೀವು…

Read More

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿ ಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಹಜ್ ಭವನದಲ್ಲಿ ಆಯೋಜಿಸಲಾಗಿದ್ದ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ನೀಡುತ್ತಿದ್ದ ಅನುದಾನ ಕಡಿತ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ನಂತರ 3200 ಕೋಟಿ ರೂ. ಒದಗಿಸಲಾಯಿತು. ಈ ಪೈಕಿ 1480 ಕೋಟಿ ರೂ. ಶಿಕ್ಷಣ ಕ್ಕೆ ವೆಚ್ಚ ಮಾಡಲಾಗುತ್ತಿದೆ. ಇದರಿಂದ ಸಮುದಾಯದ ಲಕ್ಷಾಂತರ ಮಕ್ಕಳು ವೈದ್ಯಕೀಯ, ಎಂಜಿನಿಯರರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಪಡೆಯಲು ಸಹಕಾರಿ ಆಗಿದೆ. ವಿದೇಶದಲ್ಲಿ ವ್ಯಾಸಂಗಕ್ಕೆ ಹೋಗುವಂತಾಗಿದೆ. ಐ ಎಸ್ -ಐಪಿಎಸ್ ತರಬೇತಿ ಪಡೆಯುವಂತಾಗಿದೆ. ಕಾಂಗ್ರೆಸ್ ಅಧಿಕಾರ ದಲ್ಲಿದ್ದಾಗ ಮಾತ್ರ ಇದು ಸಾಧ್ಯವಾಗಿದೆ . ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಬೇಕು…

Read More