Author: kannadanewsnow09

ಶಿವಮೊಗ್ಗ: ಮಹಿಳೆ ಅಪಹರಣ ಪ್ರಕರಣದಲ್ಲಿ ಶಾಸಕ ಹೆಚ್.ಡಿ ರೇವಣ್ಣ ಬಂಧನವಾಗಿದೆ. ಈ ಬಂಧನದ ಬಗ್ಗೆ ಕಾಂಗ್ರೆಸ್ ಶಾಸಕ ರವಿ ಗಣಿಗ ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಶಾಸಕ ರವಿ ಗಣಿಗ ಅವರು, ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಬಂಧನದ ಹಿಂದೆ ಬಿಜೆಪಿಯ ಷಡ್ಯಂತ್ರವಿದೆ ಎಂಬುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ಜನಾರ್ಧನರೆಡ್ಡಿಯನ್ನು ನಿಯಂತ್ರಿಸೋ ಹುನ್ನಾರ ನಡೆಸಿದ್ದರು. ಅದರಂತೆ ಸಣ್ಣಪುಟ್ಟ ಪಕ್ಷಗಳನ್ನು ಮುಗಿಸೋದಕ್ಕೆ ಬಿಜೆಪಿ ಪಕ್ಷದವರು ಹೊರಟಿದ್ದಾರೆ ಎಂದರು. ಇದೇ ವೇಳೆಯಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಅವರ ಬಗ್ಗೆ ಮಾತನಾಡಿದಂತ ಅವರು, ಹಳೇ ಮೈಸೂರು ಭಾಗದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ನೆಲೆಯಿಲ್ಲ. ಹೀಗಾಗಿ ಜೆಡಿಎಸ್ ಮೂಲಕ ಕಾಂಗ್ರೆಸ್ ಅನ್ನು ಟಾರ್ಗೆಟ್ ಮಾಡಿಕೊಂಡಿದೆ. ಈ ಹಿಂದೆ ಜನಾರ್ಧನರೆಡ್ಡಿ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರನ್ನು ಬೈಯ್ಯಿಸಿದ್ದರು. ಈಗ ದೇವರಾಜೇಗೌಡ ಮೂಲಕ ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪಿಸಲಾಗುತ್ತಿದೆ ಎಂದು ಕಿಡಿಕಾರಿದರು.…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಆ ಬಳಿಕ ಅವರು ವಿದೇಶಕ್ಕೆ ಪರಾರಿಯಾಗಿದ್ದರು. ಇಂತಹ ಅವರು ಇಂದು ಸಂಜೆ 6.30ಕ್ಕೆ ದುಬೈನಿಂದ ಬೆಂಗಳೂರಿಗೆ ಬರಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದರು. ಬೆಂಗಳೂರಿನಿಂದ ದುಬೈಗೆ ತೆರಳಿದ್ದರು. ಅವರು ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ವಜಾಗೊಂಡ ನಂತ್ರ, ಅವರಿಗೆ ಸಂಕಷ್ಟ ಎದುರಾಗಿತ್ತು. ಅಲ್ಲದೇ ಕುಟುಂಬಸ್ಥರು ಬೇಲ್ ಸಿಗೋದು ಬಿಡೋದು ನೋಡೋಣ, ಮೊದಲು ನೀನು ಬೆಂಗಳೂರಿಗೆ ಬಾ ಎಂಬುದಾಗಿ ಸೂಚಿಸಿದ್ದರು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ದುಬೈನಿಂದ ಬೆಂಗಳೂರಿಗೆ ಸಂಜೆ 6.30ಕ್ಕೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಅವರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ, ಅವರನ್ನು ಬಂಧಿಸೋದಕ್ಕೆ ಪೊಲೀಸರು ಕಾಯುತ್ತಿದ್ದಾರೆ. ಪೊಲೀಸರು ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದ ನಂತ್ರ, ಎಸ್ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.…

Read More

ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ತನ್ನ ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಶನ್ (ಐಸಿಎಸ್ಇ ಅಥವಾ 10 ನೇ ತರಗತಿ) ಮತ್ತು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ (ಐಎಸ್ಸಿ ಅಥವಾ 12 ನೇ ತರಗತಿ) ಅಂತಿಮ ಪರೀಕ್ಷೆಗಳ ಫಲಿತಾಂಶಗಳನ್ನು ಮೇ 6 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಭಾನುವಾರ ತಿಳಿಸಿದೆ. ವಿದ್ಯಾರ್ಥಿಗಳು ಐಸಿಎಸ್ಇ ಮತ್ತು ಐಎಸ್ಸಿ ವರ್ಷ 2024 ಪರೀಕ್ಷೆಯ ಫಲಿತಾಂಶಗಳನ್ನು ಕೌನ್ಸಿಲ್ನ ವೆಬ್ಸೈಟ್ಗಳು, cisce.org ಮತ್ತು results.cisce.org ಈ ಕೆಳಗಿನ ಮಾಹಿತಿಯನ್ನು ಒದಗಿಸುವ ಮೂಲಕ ಪರಿಶೀಲಿಸಬಹುದು: ಯೂನಿಕ್ಯೂ ID ಇಂಡೆಕ್ಸ್ ನಂಬರ್ ಕ್ಯಾಪ್ಚಾ (ಪರದೆಯ ಮೇಲೆ ತೋರಿಸಿರುವಂತೆ). ಮಂಡಳಿಯ ವೆಬ್ಸೈಟ್ಗಳ ಜೊತೆಗೆ, ಐಸಿಎಸ್ಇ ಮತ್ತು ಐಎಸ್ಸಿಯ ಫಲಿತಾಂಶಗಳು ಡಿಜಿಲಾಕರ್ ಅಪ್ಲಿಕೇಶನ್ ಮತ್ತು ವೆಬ್ಸೈಟ್ನಲ್ಲಿ ಲಭ್ಯವಿರುತ್ತವೆ ಎಂದು ಕೌನ್ಸಿಲ್ ತಿಳಿಸಿದೆ. https://kannadanewsnow.com/kannada/us-warns-uk-of-covid-19-leak-from-wuhan-lab/ https://kannadanewsnow.com/kannada/dk-shivakumar-slaps-congress-worker-for-keeping-hand-on-his-shoulder/

Read More

ಹಾವೇರಿ: ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕರೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಡಿ.ಕೆ.ಶಿವಕುಮಾರ್ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ‘ಡಿಕೆಶಿ, ಡಿಕೆಶಿ ‘ ಎಂದು ಘೋಷಣೆ ಕೂಗಿದರೆ, ಕಾರ್ಯಕರ್ತರೊಬ್ಬರು ಅವರ ಭುಜದ ಮೇಲೆ ಕೈ ಇಟ್ಟಾಗ ಶಿವಕುಮಾರ್ ಕೋಪಗೊಂಡು ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿ.ಕೆ.ಶಿವಕುಮಾರ್ ಅವರು ಶನಿವಾರ ಸಂಜೆ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಪ್ರಚಾರ ನಡೆಸಿದರು. ಡಿ.ಕೆ.ಶಿವಕುಮಾರ್ ಪ್ರಚಾರಕ್ಕೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ‘ಡಿ.ಕೆ.ಶಿವಕುಮಾರ್’ ಎಂದು ಘೋಷಣೆ ಕೂಗುತ್ತಿದ್ದರು. ಅವರು ಕಾರಿನಿಂದ ಇಳಿಯುತ್ತಿದ್ದಂತೆ, ಕಾರ್ಯಕರ್ತರೊಬ್ಬರು ಡಿ.ಕೆ.ಶಿವಕುಮಾರ್ ಅವರ ಭುಜದ ಮೇಲೆ ಕೈ ಹಾಕಿದರು. ಹಠಾತ್ ಅನುಚಿತ ವರ್ತನೆಯಿಂದ ಕೋಪಗೊಂಡ ಶಿವಕುಮಾರ್ ಕಾರ್ಮಿಕನಿಗೆ ಕಪಾಳಮೋಕ್ಷ ಮಾಡಿದ್ದಾನೆ. ಕಪಾಳಮೋಕ್ಷಕ್ಕೆ ಒಳಗಾದವರನ್ನು ಪುರಸಭೆ ಸದಸ್ಯ ಅಲ್ಲಾವುದ್ದೀನ್ ಮನಿಯಾರ್ ಎಂದು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ,…

Read More

ಬೆಂಗಳೂರು: ಸಂವಿಧಾನಕ್ಕೆ ಅಪಚಾರ ಎಸಗಿದ್ದೇ ಕಾಂಗ್ರೆಸ್ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಆರೋಪಿಸಿದರು. ದಾವಣಗೆರೆಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇವರನ್ನು ನೋಡುವಾಗÀ ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿತ್ತು ಎಂಬ ಕಥೆ ನೆನಪಾಗುತ್ತದೆ. ತಾನು ಮಾಡಿದ ಅಪಚಾರವನ್ನೆಲ್ಲ ಬಿಜೆಪಿಯ ತಲೆಗೆ ಕಟ್ಟುವ ವಿಫಲ ಯತ್ನ ಕಾಂಗ್ರೆಸ್ಸಿನದು ಎಂದು ತಿಳಿಸಿದರು. ದೇಶವನ್ನು ಆರ್ಥಿಕ ದುಸ್ಥಿತಿಯಿಂದ ಸುಸ್ಥಿತಿಗೆ ತಂದು ರಾಷ್ಟ್ರವನ್ನು ಸಂಕಷ್ಟದಿಂದ ಪಾರು ಮಾಡಿದ ನಾಯಕ, ಪ್ರಧಾನಿ ನರೇಂದ್ರ ಮೋದಿಯವರು ಎಂದು ಅವರು ಹೇಳಿದರು. ಕೋವಿಡ್ ಸಂಕಷ್ಟ, ರಷ್ಯಾ- ಉಕ್ರೇನ್ ಯುದ್ಧದ ಸಂಕಷ್ಟ, ಈ ಎಲ್ಲ ಸಂಕಷ್ಟಗಳಿಂದ ಪಾರು ಮಾಡಿ ಭಾರತಕ್ಕೆ ಜಾಗತಿಕ ಗೌರವ ತಂದುಕೊಟ್ಟಿದ್ದಾರೆ. ಭಾರತದ ಒಳಗೆ ಸಾಂಸ್ಕøತಿಕ ಪುನರುತ್ಥಾನಕ್ಕೆ ಮನ್ನಣೆ ಸಿಗುವಂತೆ ಮಾಡಿದ್ದಾರೆ ಎಂದು ತಿಳಿಸಿದರು. ಮೋದಿ ಗ್ಯಾರಂಟಿ ಬದುಕನ್ನು ಬದಲಾಯಿಸಿದೆ. ಬೇಡುವ ಸ್ಥಿತಿಯಿಂದ ನೀಡುವ ಸ್ಥಿತಿಗೆ ಒಯ್ಯುವುದೇ ಮೋದಿ ಗ್ಯಾರಂಟಿ. ನಾವು ಸುಧಾರಣೆ, ಸಂರಕ್ಷಣೆ, ಸಮೃದ್ಧಿ…

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ವೀಡಿಯೋ ಪೋಸ್ಟ್ ಮಾಡಿದ ಕಾರಣ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಕೆಪಿಸಿಸಿ ಮಾಧ್ಯಮ ವಿಭಾಗ ಮುಖ್ಯಸ್ಥರಾದಂತ ರಮೇಶ್ ಬಾಬು ಅವರು ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಸಿಎಂ ಸಿದ್ಧರಾಮಯ್ಯ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾದಂತ ವೀಡಿಯೋವನ್ನು ಕರ್ನಾಟಕ ಬಿಜೆಪಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ವೀಡಿಯೋದಲ್ಲಿ ಬಿಜೆಪಿ ಸಿದ್ಧರಾಮಯ್ಯ ಅವರು ವಿವಿಧ ಅನುದಾನವನ್ನು ಮುಸ್ಲೀಂ ಸಮುದಾಯದವರಿಗೆ ಹಂಚುತ್ತಿದ್ದಾರೆ ಎಂಬುದಾಗಿ ಬಿಂಬಿಸಲಾಗಿದೆ. ಇದು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದಂತೆ ಆಗಿದೆ ಎಂದಿದ್ದರು. ಈ ದೂರಿನ ಹಿನ್ನಲೆಯಲ್ಲಿ ಎ.1 ಆರೋಪಿಯಾಗಿ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ಎ.2 ಆರೋಪಿಯಾಗಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ…

Read More

ಬೆಳಗಾವಿ : “ನಾವು ಕೊಟ್ಟ ಭರವಸೆ ಈಡೇರಿಸಿದ್ದೇವೆ. ಬಿಜೆಪಿ 10 ವರ್ಷಗಳಿಂದ ಕೇವಲ ಬುರುಡೆ ಬಿಟ್ಟಿದೆ. ಹೀಗಾಗಿ ಈ ಚುನಾವಣೆ ಕಾಂಗ್ರೆಸ್ ಭರವಸೆ ಮತ್ತು ಬಿಜೆಪಿ ಬುರುಡೆ ನಡುವಣ ಹೋರಾಟ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯಲ್ಲಿ ಶುಕ್ರವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಕಳೆದ 10 ವರ್ಷಗಳಲ್ಲಿ ಬಿಜೆಪಿ ತಾನು ಕೊಟ್ಟ ಯಾವ ಮಾತನ್ನು ಈಡೇರಿಸಿದೆ? ಬಿಜೆಪಿ ಭಾವನೆ ಮೇಲೆ ಮಾತನಾಡುತ್ತಿದ್ದಾರೆ ಹೊರತು ಜನರ ಬದುಕಿನ ಬಗ್ಗೆ ಮಾತಾಡುತ್ತಿಲ್ಲ. ನಮ್ಮ ಗ್ಯಾರಂಟಿಗಳನ್ನು ಟೀಕೆ ಮಾಡಿದವರು ಇಂದು ಮೋದಿ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ. ಬಿಜೆಪಿ ಹೆಸರೂ ಹಾಕದೇ, ಕೇವಲ ಮೋದಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ ಅಲೆ ಇದೆ. ನಮ್ಮದು 1 ಮತಕ್ಕೆ 10 ಗ್ಯಾರಂಟಿ. ಈ ದೇಶದ ಜನರ ಬದುಕಿನಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಇಂತಹ ಐತಿಹಾಸಿಕ ತೀರ್ಮಾನ ಮಾಡಿದೆ. ನಾನು ಸಿದ್ದರಾಮಯ್ಯ ಅವರು ಗ್ಯಾರಂಟಿಗೆ ಸಹಿ ಹಾಕಿದಂತೆ ನಮ್ಮ ನಾಯಕರಾದ ಮಲ್ಲಿಕಾರ್ಜುನ…

Read More

ಹುಬ್ಬಳ್ಳಿ: ಕೇಂದ್ರದಲ್ಲಿ ಕರ್ನಾಟಕದ ಪರ ಕೆಲಸ ಮಾಡುವಂತಹ ಸಂಸದರು ನಮ್ಮ ರಾಜ್ಯಕ್ಕೆ ಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದಿಂದ ಆಯ್ಕೆಯಾಗಿದ್ದ ಬಹುತೇಕ ಬಿಜೆಪಿ ಸಂಸದರು ಕರ್ನಾಟಕವನ್ನ ಮರೆತಿದ್ದಾರೆ. ಅದರಲ್ಲೂ ಪ್ರಲ್ಹಾದ್ ಜೋಶಿಯವರು ಕೇಂದ್ರದಲ್ಲಿ ಸಚಿವರಾದ ಮೇಲೆ ಸಂಪೂರ್ಣವಾಗಿ ಕರ್ನಾಟಕವನ್ನ ಮರೆತಿದ್ದಾರೆ. ರಾಜ್ಯದ ಪರ ಕೇಂದ್ರ ಸರ್ಕಾರದಲ್ಲಿ ಧ್ವನಿ ಎತ್ತಿ ಕರ್ನಾಟಕಕ್ಕೆ ನ್ಯಾಯ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು. ಇವರಿಗೆ ರಾಜಕೀಯ ಅಧಿಕಾರಕ್ಕೆ ಮಾತ್ರ ಕರ್ನಾಟಕ ಬೇಕು. ಗೆದ್ದಮೇಲೆ ಕೇಂದ್ರದಲ್ಲಿ ಮನಬಂದಂತೆ ವರ್ತಿಸುವ ಅಹಂ ನಲ್ಲಿ ಪ್ರಲ್ಹಾದ್ ಜೋಶಿಯವರಿದ್ದಾರೆ. ಕರ್ನಾಟಕಕ್ಕೆ ಜೋಶಿಯವರ ಕೊಡುಗೆ ಏನು. ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಒಂದು ಬಾರಿಯಾದರು ಕೇಂದ್ರ ಸರ್ಕಾರದಲ್ಲಿ ಧ್ವನಿ ಎತ್ತಿದ್ದಾರೆಯೇ ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು‌. ಕೇಂದ್ರಕ್ಕೆ ಹೋದಮೇಲೆ ಅಹಂಕಾರದಲ್ಲಿ ಮೇರೆಯುವ ಬಿಜೆಪಿ ಸಂಸದರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನ ತಕ್ಕ ಪಾಠ ಕಲಿಸಲು ನಿಶ್ಚಯಿಸಿದ್ದಾರೆ…

Read More

ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಅವರು ಇಂದು ಬೆಳಗಾವಿಯಲ್ಲಿ ಆಯೋಜಿಸಿರುವ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಂಬೇಡ್ಕರ್ ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ, ಸಮಸಮಾಜ ನೀಡುತ್ತದೆ. ಇದಕ್ಕೆ ವಿರುದ್ದವಾಗಿ ಬಿಜೆಪಿಯವರು ನಡೆಯುತ್ತಿದ್ದಾರೆ. ಅಂಬೇಡ್ಕರ್ ಅವರು ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಕಾಗುವುದಿಲ್ಲ. ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆಯುವಂತಾಗಬೇಕು ಎಂದಿದ್ದಾರೆ. ಈ ಶಕ್ತಿಯನ್ನು ದುರ್ಬಲರಿಗೆ ತುಂಬವ ಸಲುವಾಗಿಯೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ ಎಂದರು. 8 ತಿಂಗಳಲ್ಲಿ 5 ಗ್ಯಾರಂಟಿಳನ್ನು ಜಾರಿ ಮಾಡಿದ ಕಾಂಗ್ರೆಸ್ ನ ಮೇಲೆ ಜನರಿಗೆ ವಿಶ್ವಾಸವಿದೆ ರಾಜ್ಯದ ಬಡ ಜನರ ತುತ್ತಿನ ಚೀಲ ತುಂಬಿಸುವ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ಪೂರೈಸಲು…

Read More

ಬೆಂಗಳೂರು: ಬರಗಾಲದ ಪರಿಹಾರದ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ಇನ್ನೂ ಕುಂಭಕರ್ಣ ನಿದ್ರೆಯಲ್ಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಬಂದು ಕ್ಷಣದಲ್ಲಿ ರೈತರಿಗೆ ನೀಡುವುದಾಗಿ ಹೇಳಿದ್ದರು. ಕ್ಷಣಗಳು ಹೋಗಿ ಗಂಟೆಗಳಾಗಿ, ಈಗ ದಿನಗಳೇ ಕಳೆದಿವೆ. ರೈತರು ಈ ಬಿಸಿಲಿನ ಬೇಗೆಯಿಂದ ಹಾಹಾಕಾರ ಪಡುತ್ತಿದ್ದಾರೆ. ರಾಜ್ಯ ಸರಕಾರವು ಬೇರೆ ರಾಜಕಾರಣ ಮಾಡುತ್ತಿದೆ. ರೈತರ ಕಷ್ಟಕ್ಕೆ ಸ್ಪಂದಿಸದ ಕಟುಕ- ಕರುಣೆ ಇಲ್ಲದ ರಾಜ್ಯ ಸರಕಾರ ಇದು ಎಂದು ಆರೋಪಿಸಿದರು. ಮೇವು ಇಲ್ಲದೆ ದನಕರುಗಳನ್ನು ಕಟುಕರಿಗೆ ಮಾರಾಟ ಮಾಡುವ ಸ್ಥಿತಿಗೆ ರೈತರು ಬರುತ್ತಿರುವುದು ಬೇಸರದ ಸಂಗತಿ. ಈ ಸರಕಾರ ಒಂಥರ ಬೂಟಾಟಿಕೆ ಮಾಡುತ್ತಿದೆ. ಜಾಹೀರಾತುಗಳನ್ನು ಕೊಡುತ್ತಿದೆ. ಆದರೆ, ರೈತರ ಸಂಕಷ್ಟಕ್ಕೆ ಸ್ಪಂದಿಸುವ ಗಂಭೀರತೆ ಎಲ್ಲೂ ಕಾಣಿಸುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕಳೆದ ಮುಂಗಾರು, ಹಿಂಗಾರು ಮಳೆ ಕೈಕೊಟ್ಟಿತ್ತು. ಇಂಥ ಸಂದರ್ಭದಲ್ಲಿ ಉರಿಯುವ ಮನೆಯಲ್ಲಿ ಗಳ…

Read More