Author: kannadanewsnow09

ಹನುಮನನ್ನು ನೆನೆಯುವುದರಿಂದ ಜೀವನದಲ್ಲಿ ಬರುವ ಎಲ್ಲ ಸಂಕಷ್ಟಗಳು ನಿವಾರಣೆಯಾಗುತ್ತವೆ. ಸ್ವಲ್ಪ ಪೂಜೆ ಮತ್ತು ಪ್ರಾರ್ಥನೆಗೆ ಪ್ರಸನ್ನನಾಗುವ ದೇವರೆಂದರೆ ಹನುಮ ಎಂದು ನಂಬಲಾಗಿದೆ. ಮಂಗಳವಾರ ಮತ್ತು ಶನಿವಾರ ಇವರ ಪೂಜೆಗಾಗಿ ಶ್ರೇಷ್ಠವಾದ ದಿನಗಳಾಗಿವೆ. ಹನುಮನ 108 ಪವಿತ್ರ ಹೆಸರುಗಳು. 1. ಆಂಜನೇಯ : ಅಂಜನಾದೇವಿಯ ಪುತ್ರ 2. ಮಹಾವೀರ : ಎಲ್ಲಕ್ಕಿಂತ ಬಹದ್ದೂರ್. 3. ಹನುಮತ್ : ಅವನ ಕೆನ್ನೆಗಳು ಉಬ್ಬಿವೆ. 4. ಮಾರುತಾತ್ಮಜ : ಪವನ ದೇವನಿಗಾಗಿ ರತ್ನದಷ್ಟು ಪ್ರಿಯ. 5. ತತ್ವ ಜ್ಞಾನ ಪ್ರದ : ಬುದ್ಧಿ ಕೊಡುವಂಥವನು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ…

Read More

ಶಿವಮೊಗ್ಗ: ಸೊರಬ – ಹಾನಗಲ್ ನೂತನ ಮಾರ್ಗದ ಬಸ್ ಸಂಚಾರಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು. ಈ ಮೂಲಕ ಗ್ರಾಮೀಣ ಜನತೆಗೆ ಸಾರಿಗೆ ಬಸ್ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಇಂದು ಸೊರಬಾ ವಿಧಾನ ಸಭಾ ಕ್ಷೇತ್ರದ ಸೊರಬದಲ್ಲಿ ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ಅಶ್ವಮೇಧ ಬಸ್ ಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಬಸ್ ಸಾಗರ – ಸೊರಬ – ಜಡೆ ಮಾರ್ಗವಾಗಿ ಹಾನಗಲ್ ತಲುಪಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದ್ದಾರೆ. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಇಂದು ಹೊಳೆಹೊನ್ನೂರು ಗ್ರಾಮದ ಸಮುದಾಯ ಭವನದಲ್ಲಿ ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಭಾಗವಹಿಸಿ “ಪಕ್ಷ ಸಂಘಟನೆ ಹಾಗೂ ರಾಜಕೀಯ ವಿದ್ಯಮಾನಗಳ” ಕುರಿತು ಮಾತನಾಡಿದರು. ಈಡೀ ದೇಶದಲ್ಲಿಯೇ ನುಡಿದಂತೆ ನಡೆದಿರುವ ಪಕ್ಷ… ನಮ್ಮ ಕಾಂಗ್ರೆಸ್ ಪಕ್ಷ… ಇದು ಬಡವರ ಪಕ್ಷ… ಚುನಾವಣೆಯಲ್ಲಿ ಹೇಳಿದಂತೆ ಐದೂ ಗ್ಯಾರಂಟಿಗಳನ್ನು…

Read More

ಬಳ್ಳಾರಿ: ನೈಋತ್ಯ ರೈಲ್ವೆ (SWR) ಯ ಜನರಲ್ ಮ್ಯಾನೇಜರ್ ಮುಕುಲ್ ಸರನ್ ಮಾಥುರ್ ಅವರು ಇಂದು ಹುಬ್ಬಳ್ಳಿ ಮತ್ತು ಹೊಸಪೇಟೆ ವಿಭಾಗದ ನಡುವೆ ಸಮಗ್ರ ವಿಂಡೋ ಟ್ರೇಲಿಂಗ್ ತಪಾಸಣೆ ನಡೆಸಿ, ಸುಗಮ ಮತ್ತು ಪರಿಣಾಮಕಾರಿ ರೈಲು ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ವಿವಿಧ ಕಾರ್ಯಾಚರಣೆ ಮತ್ತು ಸುರಕ್ಷತಾ ನಿಯತಾಂಕಗಳನ್ನು ಪರಿಶೀಲಿಸಿದರು. ಹೊಸಪೇಟೆ ರೈಲು ನಿಲ್ದಾಣಕ್ಕೆ ಆಗಮಿಸಿದ ಮುಕುಲ್ ಸರನ್ ಮಾಥುರ್ ಅವರು ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದರು ಮತ್ತು ನವೀಕರಿಸಿದ ಪ್ರಯಾಣಿಕರ ಸೌಲಭ್ಯಗಳನ್ನು ಪರಿಶೀಲಿಸಿದರು. ಪ್ರಯಾಣಿಕರ ಅನುಕೂಲತೆ ಮತ್ತು ಸೌಕರ್ಯವನ್ನು ಹೆಚ್ಚಿಸಲು ನಿಲ್ದಾಣ ಅಭಿವೃದ್ಧಿ ಯೋಜನೆಗಳನ್ನು ಸಕಾಲಿಕವಾಗಿ ಕಾರ್ಯಗತಗೊಳಿಸುವ ಮಹತ್ವವನ್ನು ಅವರು ಒತ್ತಿ ಹೇಳಿದರು. ಜನರಲ್ ಮ್ಯಾನೇಜರ್ ಹೊಸಪೇಟೆ ನಿಲ್ದಾಣದ ಅಂಗಳವನ್ನು ಸಹ ವಿವರವಾಗಿ ಪರಿಶೀಲಿಸಿದರು. ಅಲ್ಲಿ ಅವರು ಸಿಬ್ಬಂದಿ ಅನುಸರಿಸುತ್ತಿರುವ ಸುರಕ್ಷತಾ ಕಾರ್ಯವಿಧಾನಗಳನ್ನು ವೀಕ್ಷಿಸಿದರು. ಸುರಕ್ಷಿತ ರೈಲ್ವೆ ಕಾರ್ಯಾಚರಣೆಗಳನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸುವ ಬಗ್ಗೆ ಅವರು ರೈಲ್ವೆ ಸಿಬ್ಬಂದಿಗೆ ಅಗತ್ಯ ಮಾರ್ಗದರ್ಶನ ಮತ್ತು ಸಲಹೆ ನೀಡಿದರು. ಇದಲ್ಲದೆ ಮುಕುಲ್ ಸರನ್…

Read More

ಬೆಂಗಳೂರು : ನೀರು ಕುಡಿದ ಬಳಿಕ ಪ್ಲಾಸ್ಟಿಕ್ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವುದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅಲ್ಲದೇ ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ನೀರಿನ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಸುವಂತೆ ನಿಯಮ ರೂಪಿಸಲು ಸೂಚನೆ ನೀಡಿದ್ದಾರೆ. ತತ್ಸಂಬಂಧ ನಿಯಮ ರೂಪಿಸಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಅವರು, ಬಾಟಲಿಗಳ ಮೂಲಕ ಕುಡಿಯುವ ನೀರನ್ನು ಮಾರಾಟ ಮಾಡುವ ಕಂಪನಿಗಳಿಗೆ ಆ ಪ್ಲಾಸ್ಟಿಕ್ ಬಾಟಲಿಯ ವೈಜ್ಞಾನಿಕ ವಿಲೇವಾರಿಯ ಜವಾಬ್ದಾರಿಯೂ ಇರುತ್ತದೆ. ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ಕನಿಷ್ಠ ದರ ನೀಡಿ ಮರಳಿ ಖರೀದಿಸುವಂತೆ ನಿಯಮ ರೂಪಿಸಿದಲ್ಲಿ ಪ್ಲಾಸ್ಟಿಕ್ ಬಾಟಲಿಯ ಹಾವಳಿ ತಡೆಯಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮಣ್ಣಲ್ಲಿ ಮಣ್ಣಾಗದ, ನೀರಿನಲ್ಲಿ ಕರಗದ, ಸುಟ್ಟರೆ ಪ್ರಾಣವಾಯುವಿಗೆ ವಿಷಕಾರಿ ಅಂಶಗಳನ್ನು ಸೇರ್ಪಡೆ ಮಾಡುವ ಪ್ಲಾಸ್ಟಿಕ್ ಪ್ರಕೃತಿ ಪರಿಸರಕ್ಕೆ ಅಷ್ಟೇ ಅಲ್ಲದೆ ಜನ, ಜಾನುವಾರಗಳ ಆರೋಗ್ಯಕ್ಕೂ ಮಾರಕವಾಗಿದೆ.…

Read More

ಬೆಂಗಳೂರು: ನಾಳೆ ಬಿಡದಿ ಹಾಫ್ ಮ್ಯಾರಥಾನ್ 2025 ನಡೆಯಲಿದೆ. ಈ ಪ್ರಯುಕ್ತ ನಮ್ಮ ಮೆಟ್ರೋ ರೈಲು ಸಂಚಾರ ಮುಂಜಾನೆ 4 ಗಂಟೆಯಿಂದಲೇ ಆರಂಭಗೊಳ್ಳಲಿದೆ. ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮಾರ್ಚ್ 23, 2025ರ ಭಾನುವಾರದ ನಾಳೆ ನಡೆಯಲಿರುವ ಬಿಡದಿ ಹಾಫ್ ಮ್ಯಾರಥಾನ್ ಪುಯುಕ್ತ ಎಲ್ಲಾ ನಾಲ್ಕು, ಟರ್ಮಿನಲ್‌ಗಳಿಂದ 7.00 ಗಂಟೆಗೆ ಬದಲಾಗಿ ಮುಂಜಾನೆ 5.00 ಗಂಟೆಗೆ ಮೆಟ್ರೋ ರೈಲು ಸೇವೆ ಪ್ರಾರಂಭವಾಗಲಿವೆ ಎಂದು ತಿಳಿಸಿದೆ. ಆದಾಗ್ಯೂ, ಸಾರ್ವಜನಿಕರು ಮ್ಯಾರಥಾನ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ, ಮೆಟ್ರೋ ರೈಲು ಸೇವೆ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮಜೆಸ್ಟಿಕ್ ನಿಂದ ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಕಡೆಗೆ ಮುಂಜಾನೆ 4.00 ಗಂಟೆಯಿಂದ ಲಭ್ಯವಿರುತ್ತದೆ ಎಂದಿದೆ. https://twitter.com/officialbmrcl/status/1903047898264215940?s=46 https://kannadanewsnow.com/kannada/in-a-shocking-incident-a-woman-was-seen-walking-in-the-middle-of-the-road-in-hassan/ https://kannadanewsnow.com/kannada/nagpur-violence-14-more-held-number-of-arrests-reaches-105-3-fresh-firs-registered/

Read More

ಹಾಸನ: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಹಾಸನದಲ್ಲಿ ಮಹಿಳೆಯೊಬ್ಬರು ನಡು ರಸ್ತೆಯಲ್ಲೇ ಲಾಂಗ್ ಹಿಡಿದು ಓಡಾಡಿದಂತ ಘಟನೆಯ ವೀಡಿಯೋ ವೈರಲ್ ಆಗಿದೆ. ಹಾಸನ ನಗರ ಬಸ್ ನಿಲ್ದಾಣದಲ್ಲಿ ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಎರಡು ಕುಟುಂಬಗಳ ನಡುವೆ ಘರ್ಷಣೆ ಉಂಟಾಗಿತ್ತು. ಈ ವೇಳೆ ಮಹಿಳೆ ಲಾಂಗ್ ಹಿಡಿದು ಓಡಾಡಿದಂತ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗಿದೆ. ಇದಷ್ಟೇ ಅಲ್ಲದೇ ಅವಾಚ್ಯ ಶಬ್ದಗಳಿಂದಲೂ ನಿಂದಿಸುತ್ತಾ ಗಂಡನನ್ನು ಲಾಂಗ್ ಹಿಡಿದಿದ್ದಂತ ಮಹಿಳೆ ಓಡಾಡಿರುವುದು ವೈರಲ್ ಆಗಿರುವಂತ ವೀಡಿಯೋ ದೃಶ್ಯಾವಳಿಯಲ್ಲಿದೆ. ಮಹಿಳೆ ಲಾಂಗ್ ಹಿಡಿದು ಗಂಡನನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವಂತ ಘಟನೆಯನ್ನು ಸಾರ್ವಜನಿಕರು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ. https://kannadanewsnow.com/kannada/heavy-rain-accompanied-by-hailstorm-in-bengaluru/ https://kannadanewsnow.com/kannada/nagpur-violence-14-more-held-number-of-arrests-reaches-105-3-fresh-firs-registered/

Read More

ಬೆಂಗಳೂರು: ನಗರದಲ್ಲಿ ಇಂದು ಬಿಸಿಲ ಬೇಗೆಯಿಂದ ತತ್ತರಿಸಿದ್ದಂತ ಜನರಿಗೆ ತಂಪು ಎನ್ನುವಂತೆ ಆಲಿಕಲ್ಲು ಸಹಿತ ಭಾರೀ ಮಳೆ ಹಲವೆಡೆಯಾಗುತ್ತಿದೆ. ಹೀಗಾಗಿ ಅಲ್ಲಲ್ಲಿ ಸಂಚಾರ ದಟ್ಟಣೆ ಕೂಡ ಉಂಟಾಗಿದೆ. ಬೆಂಗಳೂರಿನ ಸಂಜಯನಗರ, ಭೂಪಸಂದ್ರ, ಹೆಬ್ಬಾಳ, ಮೇಖ್ರಿ ಸರ್ಕಲ್ ಸೇರಿದಂತೆ ಹಲವೆಡೆ ದಿಢೀರ್ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದಾಗಿ ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಮೆಜೆಸ್ಟಿಕ್, ಶಾಂತಿನಗರ, ಕೆ ಆರ್ ಮಾರ್ಕೆಟ್, ಹಲಸೂರು, ಜಯನಗರ ಸೇರಿದಂತೆ ವಿವಿಧೆಡೆ ಮಳೆಯಾಗಿತ್ತು. ಭಾರೀ ಮಳೆಯಿಂದಾಗಿ ಬೆಂಗಳೂರು ಜನತೆ ಬಿಸಿಲಿನ ಝಳಕ್ಕೆ ತಂಪನ್ನು ಎರೆಯಲಾಗಿತ್ತು. ಇದೀಗ ಇಂದು ಬೆಂಗಳೂರಲ್ಲಿ ದಿಢೀರ್ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗುತ್ತಿದೆ. https://kannadanewsnow.com/kannada/drunk-man-calls-108-ambulance-do-you-know-what-happened-next/ https://kannadanewsnow.com/kannada/pvr-inox-partners-with-bcci-to-screen-ipl-2025-live-across-india/

Read More

ಶೃಂಗೇರಿ: ಕುಡಿದ ಮತ್ತಿನಲ್ಲಿ ಕುಡುಕನೊಬ್ಬ 108 ಆಂಬುಲೆನ್ಸ್ ಗೆ ಕರೆ ಮಾಡಿದ್ದಾನೆ. ಬಸ್ ನಿಲ್ದಾಣದಲ್ಲಿ ಗಲಾಟೆಯಾಗಿ ಹಲವರಿಗೆ ಗಾಯವಾಗಿದೆ. ಬೇಗ ಬನ್ನಿ ಅಂತ ಕೋರಿದ್ದಾನೆ. ಆನಂತ್ರ ಮುಂದೇನಾಯ್ತು ಗೊತ್ತಾ.? ಶೃಂಗೇರಿಯಲ್ಲಿ ವ್ಯಕ್ತಿಯೊಬ್ಬ ಕುಡಿತ ಮತ್ತಿನಲ್ಲಿ 108 ಆಂಬುಲೆನ್ಸ್ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಶೃಂಗೇರಿಯ ಬಸ್ ನಿಲ್ದಾಣದಲ್ಲಿ ದೊಡ್ಡ ಗಲಾಟೆಯಾಗಿದೆ. ಹೊಡೆದಾಟದಲ್ಲಿ ಹಲವರಿಗೆ ಗಾಯವಾಗಿದೆ. ಬೇಗ ಸ್ಥಳಕ್ಕೆ ಬನ್ನಿ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಬೇಕು ಅಂತ ತಿಳಿಸಿದ್ದಾನೆ. ಶೃಂಗೇರಿ ಹಾಗೂ ಕೊಪ್ಪದ 108 ಅಂಬುಲೆನ್ಸ್ 45 ಕಿಲೋಮೀಟರ್ ದೂರದಲ್ಲಿ ಇದ್ದ ಕಾರಣ, ಸಮೀಪದಲ್ಲೇ ಇದ್ದಂತ ಬಾಳೆಹೊನ್ನೂರಿನ 108 ಆಂಬುಲೆನ್ಸ್ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಆದರೇ ಅಲ್ಲಿ ನೋಡಿದ್ರೇ ಯಾವುದೇ ಗಲಾಟೆಯೂ ಆಗಿಲ್ಲ. ಯಾರಿಗೂ ಗಾಯವೂ ಆಗಿಲ್ಲ. ಈ ವಿಚಾರದ ನಂತ್ರ 112ಗೂ ದೂರು ನೀಡಲಾಗಿದೆ. ಸ್ಥಳಕ್ಕೆ ಬಂದಂತ ಪೊಲೀಸರು ಪರಿಶೀಲಿಸಿ ಯಾವುದೇ ಆ ರೀತಿಯ ಗಲಾಟೆ ಆಗಿರದೇ ಇದ್ದದ್ದನ್ನು ಕಂಡು, ಪೋನ್ ಮಾಡಿದಾತನ ಹುಡುಕಾಟಕ್ಕೆ ನಿಂತಿದ್ದಾರೆ. ಅದೇ ಪೋನ್ ನಂಬರ್ ಗೆ ಪೋನ್ ಮಾಡಿದಾಗ, ಅತ್ತ…

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿ ಶನಿವಾರ ಮಿನಿ ಬಸ್ ಅಪಘಾತಕ್ಕೀಡಾದ ಪರಿಣಾಮ ಕನಿಷ್ಠ 14 ಜನರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಅವರು ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಘಟನೆಗೆ ತಕ್ಷಣ ಸ್ಪಂದಿಸಿದವು. ಜಮ್ಮು ಪ್ರದೇಶದಲ್ಲಿ ಒಂದು ವಾರದಲ್ಲಿ ಎರಡನೇ ಅಪಘಾತ ಮಹೋರ್ನ ಗಂಗೋಟ್ ಬಳಿ ಮಿನಿ ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಮತ್ತು 10 ಜನರು ಗಾಯಗೊಂಡ ಮತ್ತೊಂದು ದುರಂತ ರಸ್ತೆ ಅಪಘಾತದ ಒಂದು ವಾರದ ನಂತರ ಈ ಅಪಘಾತ ಸಂಭವಿಸಿದೆ. ಎಎನ್ಐ ವರದಿಯ ಪ್ರಕಾರ, ಮಹೋರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ವಿಶೇಷ ಚಿಕಿತ್ಸೆಗಾಗಿ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ (ಜಿಎಂಸಿ) ಕಳುಹಿಸಲಾಗಿದೆ ಎಂದು ರಿಯಾಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಪರಮ್ವೀರ್ ಸಿಂಗ್ ಹೇಳಿದ್ದಾರೆ. ಎರಡೂ ಘಟನೆಗಳಲ್ಲಿ, ಸ್ಥಳೀಯ ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲು ತ್ವರಿತವಾಗಿ ಸ್ಥಳಕ್ಕೆ ಬಂದರು. ಜಿಲ್ಲಾಡಳಿತವು…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ, ಜಾಮೀನಿನ ಮೇಲೆ ನಟ ದರ್ಶನ್ ಹೊರ ಬಂದಿದ್ದಾರೆ. ಅವರು ಕೇರಳದ ಪ್ರಸಿದ್ಧ ದೇವಾಲಯದಲ್ಲಿ ಶತ್ರು ಸಂಹಾರ ಪೂಜೆಯನ್ನು ಮಾಡಿಸಿದ್ದಾಗಿ ಹೇಳಲಾಗುತ್ತಿದೆ. ಕೇರಳದ ಕಣ್ಣೂರಿನಲ್ಲಿ ಇರುವಂತ ಶ್ರೀ ಭಗವತೀ ದೇವಸ್ಥಾನ ಶತ್ರು ಸಂಹಾರ ಪೂಜೆಗೆ ಹೆಸರುವಾಸಿಯಾಗಿರುವಂತ ದೇವಾಲಯವಾಗಿದೆ. ಈ ದೇವಾಲಯಕ್ಕೆ ರಾಜ್ಯ, ರಾಷ್ಟ್ರ, ಹೊರ ದೇಶಗಳಿಂದಲೂ ರಾಜಕಾರಣಗಳು ಸೇರಿದಂತೆ ವಿವಿಧ ವರ್ಗದವರು ಶತ್ರು ಸಂಹಾರ ಪೂಜೆ ಮಾಡಿಸುತ್ತಾರೆ. ಈ ದೇವಾಲಯದ್ಲಿ ನಟ ದರ್ಶನ್ ಅವರು ಕುಟುಂಬ ಸಮೇತರಾಗಿ ಪ್ರತ್ಯಕ್ಷರಾಗಿರೋದು ಇಂತಹದ್ದೊಂದು ಕುತೂಹಲಕ್ಕೆ ಕಾರಣವಾಗಿದೆ. ಕೇರಳದ ಕಣ್ಣೂರಿನ ಶ್ರೀ ಭಗವತೀ ದೇವಸ್ಥಾನದಲ್ಲಿ ನಟ ದರ್ಶನ್ ಕುಟುಂಬ ಸಹಿತ ಶತ್ರು ಸಂಹಾರ ಪೂಜೆ ಮಾಡಿಸಿದ್ದಾಗಿ ಹೇಳಲಾಗುತ್ತಿದೆ. ನಟ ದರ್ಶನ್, ಪತ್ನಿ ವಿಜಯಲಕ್ಷ್ಮೀ, ಪುತ್ರ ಧನ್ವೀರ್ ಜೊತೆಗೂಡಿ ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಆದರೇ ಅದು ನಿಜವೋ, ಸುಳ್ಳೋ ಎಂಬುದನ್ನು ನಟ ದರ್ಶನ್ ಖಚಿತ ಪಡಿಸಿದಾಗಲೇ ತಿಳಿಯಲಿದೆ. ಅಂದಹಾಗೇ ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ…

Read More