Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ + ಐಟಿಐ, ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ (COPA), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಆಂಡ್ ಡೈಮೇಕರ್, ಸಿಎನ್ಸಿ ಪ್ರೋಗ್ರಾಮರ್ ಕಂ ಆಪರೇಟರ್ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ತಮ್ಮ ಎಸ್ಎಸ್ಎಲ್ಸಿ+ ಐಟಿಐ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್, ಪೋರ್ಟಲ್ ರಿಜಿಸ್ಟ್ರೇಷನ್ ಸಂಖ್ಯೆ, ಎಂಪ್ಲಾಯ್ಮೆಂಟ್ ಕಾರ್ಡ್, ಪಾಸ್ಪೋರ್ಟ್ ಸೈಜಿನ 4 ಫೋಟೋಗಳು ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ಗುತ್ಯಪ್ಪ ಕಾಲೋನಿ, ಪಂಪಾ ನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ದಿ:05/10/2024 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಆಯಾ…
ಬೆಂಗಳೂರು : ಇವಿ ಬಳಕೆದಾರರಿಗೆ ಸುಗಮ ಚಾರ್ಜಿಂಗ್ ಸೌಲಭ್ಯ ಒದಗಿಸುತ್ತಿರುವ ಬೆಸ್ಕಾಂನ ‘ಇವಿ ಮಿತ್ರ’ ಆ್ಯಪ್ ಈಗ ಹೊಸ ರೂಪ ಪಡೆದುಕೊಂಡಿದೆ. ಆ್ಯಂಡ್ರಾಯ್ಡ್ ಮತ್ತು ಐಓಎಸ್ ಎರಡು ಮೊಬೈಲ್ ಅಪ್ಲಿಕೇಶನ್ಗಳಲ್ಲಿ ಲಭ್ಯವಿರುವ ಹೊಸ ‘ಇವಿ ಮಿತ್ರ’ ಆ್ಯಪ್- ಬಳಕೆದಾರರ ಪ್ರೊಫೈಲ್ ನಿರ್ವಹಣೆ, ಚಾರ್ಚಿಂಗ್ ಸ್ಟೇಷನ್ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾರ್ಜಿಂಗ್ ಪ್ರಕ್ರಿಯೆ, ಬುಕ್ಕಿಂಗ್ ವಿವರ, ಚಾರ್ಚಿಂಗ್ ಸ್ಟೇಷನ್ಗಳಲ್ಲಿರುವ ಸೌಕರ್ಯಗಳು ಮತ್ತು ಚಾರ್ಜಿಂಗ್ ಕಾಯ್ದಿರಿಸುವ ಸೌಲಭ್ಯ ಹೊಂದಿದೆ. ಹಳೆಯ ‘ಇವಿ ಮಿತ್ರ’ ಆ್ಯಪ್ ಡಿಲೀಟ್ ಮಾಡಿ https://onelink.to/evmithra ಮೂಲಕ ಹೊಸ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ. ವ್ಯಾಲೆಟ್ನಲ್ಲಿ ಹಣ ಉಳಿದಿದ್ದರೂ ಚಿಂತಿಸಬೇಕಿಲ್ಲ. ಹೊಸ ಆ್ಯಪ್ಗೆ ಹಣ ವರ್ಗಾವಣೆಯಾಗುತ್ತದೆ. ಕನ್ನಡ, ಹಿಂದಿ, ಇಂಗ್ಲಿಷ್ ಹಾಗೂ ಪ್ರಾದೇಶಿಕ ಭಾಷೆಗಳು ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ಇವಿ ಚಾರ್ಚಿಂಗ್ ಮಾಹಿತಿ ಲಭ್ಯವಿದ್ದು, ಹಣ ಪಾವತಿಗೆ ಹಲವು ಆಯ್ಕೆಗಳನ್ನು ಒಳಗೊಂಡಿದೆ. ರಿಟೇಲ್ ಬಳಕೆದಾರರ ಶುಲ್ಕದ ವಿವರ, ಬಿಲ್ಲಿಂಗ್, ಪ್ರೊಫೈಲ್ ಇರಲಿದೆ. ಬಳಕೆದಾರರ ಸ್ನೇಹಿಯಾಗಿರುವ ಆ್ಯಪನ್ನು ಈಗಾಗಲೇ 15,000ಕ್ಕೂ ಹೆಚ್ಚು ಬಳಕೆದಾರರು ಡೌನ್ಲೋಡ್…
ಬೆಂಗಳೂರು: 2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವಂತೆ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300/- ಕೋಟಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಇಂದಿಲ್ಲಿ ಒತ್ತಾಯಿಸಿದರು. ಕೇಂದ್ರ ಸರ್ಕಾರವು ದಿನಾಂಕ: 20.03.2023 ರಂದು ರಾಜ್ಯಸಭೆಯ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ: 2167ಕ್ಕೆ ಉತ್ತರ ನೀಡಿ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬAಧಪಟ್ಟ ಎಲ್ಲಾ ಹಂತದ ಮಂಜೂರಾತಿಗಳು ದೊರೆತಿದ್ದು, ಇದು ರಾಷ್ಟ್ರೀಯ ಯೋಜನೆಗಾಗಿ ಘೋಷಣೆ ಮಾಡಲು ಎಲ್ಲಾ ಅರ್ಹತೆ ಪಡೆದಿದೆ ಎಂದು ತಿಳಿಸಿರುತ್ತಾರೆ ಎಂದು ವಿವರಿಸಿದರು. ದಿನಾಂಕ: 01.02.2023 ರಂದು ಕೇಂದ್ರ ಸರ್ಕಾರದ 2023-24ನೇ ಮುಂಗಡ ಪತ್ರದ ಭಾಷಣದಲ್ಲಿ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರು ಬಜೆಟ್ ಭಾಷಣದ ಪುಟ ಸಂಖ್ಯೆ (10) ಪ್ಯಾರಾ (39) ರಲ್ಲಿ ಈ ಕೆಳಕಂಡಂತೆ ಘೋಷಿಸಿರುತ್ತಾರೆ. Water for Drought Prone…
ಶಿವಮೊಗ್ಗ : ಮಕ್ಕಳ ದಿನಾಚರಣೆ-2024 ರ ಪ್ರಯುಕ್ತ, ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಾಹಸ ಪ್ರಕರಣವು ದಿ: 01-08-2023 ರಿಂದ 31-07-2024 ರೊಳಗೆ ನಡೆದಿರಬೇಕು. ದಿ: 01-08-2006 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು. ಅರ್ಜಿ ಸಲ್ಲಿಸುವವರು ವ್ಯಕ್ತಿ/ಸಂಸ್ಥೆಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ಬಗ್ಗೆ…
ಬೆಂಗಳೂರು: ಸೆ.22ರಂದು ನಡೆಸಲು ನಿಗದಿ ಪಡಿಸಿರುವಂತ ಪಿಎಸ್ಐ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮುಂದೂಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವಂತ ಅವರು, ಸೆಪ್ಟೆಂಬರ್ 22 ರಂದು ಯುಪಿಎಸ್ಸಿ ನಾಗರಿಕ ಸೇವೆಗಳ ಮುಖ್ಯ ಮತ್ತು ಎಸ್ಎಸ್ಸಿ ಸಿಜಿಎಲ್ ಶ್ರೇಣಿ 1 ರಂತಹ ಪ್ರಮುಖ ರಾಷ್ಟ್ರೀಯ ಪರೀಕ್ಷೆಗಳೊಂದಿಗೆ ಸ್ಪಷ್ಟ ವೇಳಾಪಟ್ಟಿಯ ಘರ್ಷಣೆಗಳ ಹೊರತಾಗಿಯೂ ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಲು ನಿರಾಕರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ವರ್ತನೆಯನ್ನು ಪ್ರದರ್ಶಿಸುತ್ತಿದೆ. ಯುಪಿಎಸ್ಸಿ ಪರೀಕ್ಷೆಗೂ ಮುನ್ನವೇ ಪಿಎಸ್ಐ ಪರೀಕ್ಷೆ ನಿಗದಿಯಾಗಿದೆ ಎಂಬ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆ ಶುದ್ಧ ಸುಳ್ಳು ಎಂದಿದ್ದಾರೆ. ಯುಪಿಎಸ್ಸಿ ಪರೀಕ್ಷೆಯ ಕ್ಯಾಲೆಂಡರ್ ಅನ್ನು ಮೇ 10, 2023 ರಂದು ಮುಂಚಿತವಾಗಿ ಬಿಡುಗಡೆ ಮಾಡಲಾಯಿತು. ಏತನ್ಮಧ್ಯೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆರಂಭದಲ್ಲಿ ಪಿಎಸ್ಐ ಪರೀಕ್ಷೆಯನ್ನು ಮಾರ್ಚ್ 8, 2024 ರಂದು ನಿಗದಿಪಡಿಸಿತ್ತು. ಆದರೆ ಅದನ್ನು ಮಾರ್ಚ್ 21, 2024 ರಂದು ಮುಂದೂಡಲಾಯಿತು. ಇದಲ್ಲದೆ,…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪಟ್ಟಣ ಪಂಚಾಯ್ತಿ, ಪುರಸಭೆ ಮತ್ತು ನಗರಸಭೆ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಖಾಯಂ ನೌಕರರಿಗೆ 7ನೇ ರಾಜ್ಯವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿ ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 09.07.2018ರ ಆದೇಶದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಯನ್ನು ಪರಿಷ್ಕರಿಸಿದ ಸರ್ಕಾರದ ಆದೇಶ ಸಂಖ್ಯೆ: ಎಫ್ಡಿ 06 ಎಸ್ಆರ್ಪಿ 2018, ದಿನಾಂಕ: 01.03.2018 ಮತ್ತು ಸರ್ಕಾರದ ಆದೇಶ ಸಂಖ್ಯೆ: ಎಫ್ಡಿ 06 ಎಸ್ಆರ್ಪಿ 2018, ದಿನಾಂಕ: 19.04.2018 ರಲ್ಲಿನ ನಿರ್ದೇಶನದಂತೆ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ / ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿ ಸೌಲಭ್ಯವನ್ನು ದಿನಾಂಕ: 01.07.2017 ರಿಂದ ಜಾರಿಗೆ ಬರುವಂತೆ ಮಂಜೂರು ಮಾಡಲಾಗಿದೆ. ಆದರೆ, ವೇತನ ಪರಿಷ್ಕರಣೆಯ ಆರ್ಥಿಕ ಸೌಲಭ್ಯವು ದಿನಾಂಕ: 01.04.2018 ರಿಂದ ಜಾರಿಗೆ ಬರುವಂತೆ ಯಥಾವತ್ತಾಗಿ…
ಬೆಂಗಳೂರು: ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್ ಸರ್ಕಾರ ವಿಶೇಷ ಟಾಸ್ಕ್ ಫೋರ್ಸ್ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು. ಇದಕ್ಕೆ ಪೂರಕವಾಗಿ ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯರೊಬ್ಬರು, ಬಾಂಗ್ಲಾ ಮಾದರಿ ಹಲ್ಲೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು. ಬಾಂಗ್ಲಾದೇಶದಿಂದಲೂ ಹಲವರು ಆಧಾರ್ ಕಾರ್ಡ್ ಪಡೆದು ಬೆಂಗಳೂರಿಗೆ ಬರುತ್ತಿದ್ದಾರೆ. ಇದರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿದೆ. ರಾಜ್ಯ ಗೃಹ ಇಲಾಖೆ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ವಿಶೇಷ ಟಾಸ್ಕ್ ಫೋರ್ಸ್ ರಚಿಸಬೇಕು ಎಂದು ಆಗ್ರಹಿಸಿದರು. ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಇಲ್ಲವಾದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಸ್ಥಿತಿಯೇ…
ನವದೆಹಲಿ: ಭಾರತೀಯ ಸಶಸ್ತ್ರ ಪಡೆಗಳ ಲಾಜಿಸ್ಟಿಕ್ಸ್ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯೊಂದಿಗೆ, ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆ ವಡೋದರಾದ ಗತಿ ಶಕ್ತಿ ವಿಶ್ವವಿದ್ಯಾಲಯದೊಂದಿಗೆ ತಿಳುವಳಿಕಾ ಒಡಂಬಡಿಕೆಗೆ ಸಹಿ ಹಾಕಿದರು. ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಐಟಿ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಭಾಗವಹಿಸಿದ್ದರು. ಈ ತಿಳಿವಳಿಕೆ ಒಪ್ಪಂದವು ಭಾರತದ ಮಿಲಿಟರಿ ಕಾರ್ಯಾಚರಣೆಗಳ ವ್ಯವಸ್ಥಾಪನಾ ಬೆನ್ನೆಲುಬನ್ನು ಬಲಪಡಿಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಪಿಎಂ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ 2021 ಮತ್ತು ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿ 2022 ಸೇರಿದಂತೆ ಸರ್ಕಾರದ ರಾಷ್ಟ್ರೀಯ ಅಭಿವೃದ್ಧಿ ಯೋಜನೆಗಳೊಂದಿಗೆ ಹೊಂದಿಕೆಯಾಗುವ ಮೂಲಕ ಎರಡೂ ಸೇವೆಗಳ ಸಿಬ್ಬಂದಿಯ ಲಾಜಿಸ್ಟಿಕ್ಸ್ ಪರಿಣತಿಯನ್ನು ಹೆಚ್ಚಿಸಲು ಇದನ್ನು ವಿನ್ಯಾಸಗೊಳಿಸಲಾಗಿದೆ. ಸುಧಾರಿತ ಲಾಜಿಸ್ಟಿಕ್ಸ್, ಶಿಕ್ಷಣ ಮತ್ತು ಸಂಶೋಧನೆಯೊಂದಿಗೆ ಸಶಸ್ತ್ರ ಪಡೆಗಳನ್ನು ಸಬಲೀಕರಣಗೊಳಿಸುವಲ್ಲಿ ವಿಶ್ವವಿದ್ಯಾಲಯದ ಪಾತ್ರದ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವಿಶ್ವಾಸ ವ್ಯಕ್ತಪಡಿಸಿದರು. ಸೈದ್ಧಾಂತಿಕ ಜ್ಞಾನ ಮತ್ತು ನೈಜ-ಪ್ರಪಂಚದ ಅನ್ವಯದ…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಯ ವೈದ್ಯರು ಕನ್ನಡದಲ್ಲೇ ರೋಗಿಗಳಿಗೆ ಔಷಧಿ ಚೀಟಿಯನ್ನು ಬರೆಯುವಂತೆ ಆದೇಶಿಸಿ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದಿರುವಂತ ಅವರು, ಆಧುನಿಕ ಕಾಲಘಟ್ಟದಲ್ಲಿ ಭಾಷಾಭಿಮಾನ ಎನ್ನುವುದು ನೇಪಥ್ಯಕ್ಕೆ ಸರಿಯುತ್ತಿರುವುದು ಸಾಮಾಜಿಕ ಸ್ವಾಸ್ಥ್ಯದ ದೃಷ್ಠಿಯಿಂದ ಆರೋಗ್ಯಕರ ಬೆಳವಣಿಗೆ ಆಗಿರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ಸಾಂಸ್ಥಿಕ ಪ್ರಯತ್ನಗಳು ಮಾತ್ರ ನಿರೀಕ್ಷಿತ ಪರಿಣಾಮವನ್ನು ದೊರಕಿಸಿ ಕೊಡುವುದಲ್ಲದೇ ರಾಜ್ಯಭಾಷೆಯ ಉಳಿವಿಗೆ ಮಹತ್ವದ ಕೊಡುಗೆಯನ್ನು ನೀಡುತ್ತವೆ. ಇತ್ತೀಚಿಗೆ ನಾನು ರಾಯಚೂರಿಗೆ ಕಾರ್ಯನಿಮಿತ್ತ ತೆರಳದ ಸಂದರ್ಭದಲ್ಲಿ ಜಿಲ್ಲೆಯ ವೈದ್ಯರು ತಮ್ಮ ಔಷಧಿ ಚೀಟಿಗಳನ್ನು ಕನ್ನಡದಲ್ಲಿ ಬರೆಯಬೇಕೆಂದು ಪ್ರೇರೇಪಿಸಿ ಅಲ್ಲಿನ ಜಿಲ್ಲಾಧಿಕಾರಿಯವರಿಗೆ ಈ ಕುರಿತಂತೆ ಅಗತ್ಯ ಸೂಚನೆಗಳನ್ನು ಹೊರಡಿಸಲು ನಿರ್ದೇಶನವನ್ನು ನೀಡಿದ್ದೆ ಎಂದಿದ್ದಾರೆ. ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ಗಮನಿಸಿ ನೂರಾರು ವೈದ್ಯರು ಸ್ವಯಂಪ್ರೇರಿತರಾಗಿ ತಾವು ಕನ್ನಡ ಭಾಷೆಯನ್ನು ಉಳಿಸಲು ಔಷಧಿ ಚೀಟಿಗಳನ್ನು ಕನ್ನಡದಲ್ಲಿ…
ಬೆಂಗಳೂರು: ಪತ್ರಕರ್ತರಿಗೆ ರೈಲ್ವೆ ಪಾಸ್ ನೀಡು ಯೋಜನೆಯನ್ನು ಪುನರಾರಂಭಿಸುವಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದಂತ ಶಿವಾನಂದ ತಗಡೂರು ಮನವಿ ಮಾಡಿದ್ದಾರೆ. ಈ ಕುರಿತಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿರುವಂತ ಅವರು, ಭಾರತ ಸರ್ಕಾರದ ರೈಲ್ವೆ ಮಂತ್ರಾಲಯದಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ರೈಲ್ವೆ ಪಾಸ್ ನೀಡುವ ಯೋಜನೆ ಈ ಮೊದಲು ಜಾರಿಯಲ್ಲಿದ್ದು. ಇದರಿಂದಾಗಿ ಶೇ.50ರಷ್ಟು ರಿಯಾಯಿತಿ ದರದಲ್ಲಿ ರೈಲು ಪ್ರಯಾಣ ಮಾಡುವ ಸೌಲಭ್ಯವನ್ನು ಪತ್ರಕರ್ತರಿಗೆ ಕಲ್ಪಿಸಲಾಗಿತ್ತು ಎಂದಿದ್ದಾರೆ. ಕೋವಿಡ್ ನಂತ್ರ ಪತ್ರಕರ್ತರ ರೈಲ್ವೆ ಪಾಸ್ ಸೌಲಭ್ಯವನ್ನು ರದ್ದು ಮಾಡಲಾಗಿದೆ. ಇದರಿಂದಾಗಿ ಕೇಂದ್ರ ಸರ್ಕಾರದಿಂದ ಪತ್ರಕರ್ತರಿಗೆ ಲಭ್ಯವಿದ್ದ ಯೋಜನೆಯು ಇಲ್ಲದಂತಾಗಿದೆ. ಆದುದರಿಂದ ತಾವುಗಳು ಈ ಬಗ್ಗೆ ಮರುಚಿಂತನೆ ಮಾಡಿ, ಮಾನ್ಯತೆ ಪಡೆದ ಪತ್ರಕರ್ತರಿಗೆ ಈ ಮೊದಲು ಇದ್ದಂತೆ ರೈಲ್ವೆ ಪಾಸ್ ಸೌಲಭ್ಯವನ್ನು ಕೂಡಲೇ ಪುನರಾರಂಭಿಸುವಂತೆ ವಿನಂತಿಸಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/orr-business-corridor-to-be-implemented-in-bengaluru-at-a-cost-of-rs-25000-crore-h-k-patil/ https://kannadanewsnow.com/kannada/there-is-no-competition-for-cms-post-in-karnataka-there-is-a-fight-going-on-bommai/